ಹೀನಾಯ ಪರಿಸ್ಥಿತಿಯಲ್ಲೂ ಬಡರೋಗಿಯ ಪ್ರಾಣದೊಂದಿಗೆ ಚೆಲ್ಲಾಟವಾಡಿದ ಖಾಸಗಿ ಆಸ್ಪತ್ರೆ
ಹೀನಾಯ ಪರಿಸ್ಥಿತಿಯಲ್ಲೂ ಬಡರೋಗಿಯ ಪ್ರಾಣದೊಂದಿಗೆ ಚೆಲ್ಲಾಟವಾಡಿದ ಖಾಸಗಿ ಆಸ್ಪತ್ರೆ
ಮಂಗಳೂರು: ಸರ್ಕಾರಿ ಆಸ್ಪತ್ರೆಗೆ ದಾಖಲಿಸಬೇಕಾದವರು ಮಾಹಿತಿ ಕೊರತೆಯಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಇದೀಗ ಇತ್ತ ಹಣವೂ ಇಲ್ಲದೇ ಅತ್ತ ರೋಗಿಯ ಪ್ರಾಣವನ್ನು ಉಳಿಸಿಕೊಳ್ಳಲಾಗದೆ ಚಡಪಡಿಸಿದ ಹೃದಯವಿದ್ರಾವಕ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಮಾರ್ಚ್ 28 ರಂದು, ಮಂಗಳೂರಿನ ಕೆ.ಎಂ.ಸಿ ಅತ್ತಾವರ ಆಸ್ಪತ್ರೆಗೆ ಅನಾರೋಗ್ಯ ದಿಂದ ಬಳಲುತ್ತಿದ್ದ ಬಂಟ್ವಾಳದ ಲಕ್ಷ್ಮಣ ಭಂಡಾರಿ (48) ಎಂಬವರನ್ನು ಸಂಬಂಧಿಕರು ದಾಖಲು ಮಾಡಿರುತ್ತಾರೆ.
ದಾಖಲು ಮಾಡಲು ಬಂದವರಿಗೆ ವೆನ್ಲಾಕ್ ಆಸ್ಪತ್ರೆ ಕೋವಿಡ್ 19 ಆಸ್ಪತ್ರೆ ಎಂಬುದು ತಿಳಿದಿರಲಿಲ್ಲ. ಮಾಹಿತಿ ಕೊರತೆಯಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.
ದಾಖಲಾದ ಕೂಡಲೇ ಕೆ.ಎಂ.ಸಿ ಆಸ್ಪತ್ರೆ ಅವರಿಂದ ಮುಂಗಡ ಹಣ 80000/- ವನ್ನು ಕೂಡಲೇ ಪಾವತಿ ಮಾಡಲು ಒತ್ತಾಯಿಸಿರುವುದರಿಂದ, ರೋಗಿಯ ಸಂಬಂಧಿಕರು ತಮ್ಮಲ್ಲಿದ್ದ ಹಣ ಕೊಟ್ಟು, ಒಡವೆಗಳನ್ನು ಅಡವಿಟ್ಟು ಉಳಿದ ಹಣ ಕಟ್ಟಿರುತ್ತಾರೆ.
ಆದ್ರೆ ವಿಪರ್ಯಾಸ ಅಂದ್ರೆ ವೆನ್ ಲಾಕ್ ಆಸ್ಪತ್ರೆಗೆ ದಾಖಲಾಗಿ ಕೆ.ಎಂ.ಸಿ ಆಸ್ಪತ್ರೆಯವರಿಗೆ ರಶೀದಿ ತಂದರೆ,
ಅದ್ರಲ್ಲಿ ‘ಆಯುಷ್ಮಾನ್ ಯೋಜನೆ’ ಮಾಡಿ ಚಿಕಿತ್ಸಾ ವೆಚ್ಚದಲ್ಲಿ ಡಿಸ್ಕೌಂಟ್ ಮಾಡಬಹುದೆಂಬ ಕನಿಷ್ಟ ಮಾಹಿತಿಯನ್ನು ಆ ರೋಗಿಯ ಸಂಬಂಧಿಕರಿಗೆ ಖಾಸಗಿ ಆಸ್ಪತ್ರೆಯವರು ಒದಗಿಸಿರುವುದಿಲ್ಲ.
ಇದೀಗ ನಿನ್ನೆ (ಎಪ್ರಿಲ್ 9) ಆ ರೋಗಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುತ್ತಾರೆ.
ಈಗ ಅವರ ಮೃತದೇಹ ಪಡೆಯಲು ಬಾಕಿ ಉಳಿದಿರುವ 55000/- ರೂಪಾಯಿ ಹಣವನ್ನು ಕೂಡಲೇ ಕಟ್ಟಬೇಕೆಂದು ಸತಾಯಿಸುತ್ತಿದ್ದಾರೆ.
ಕೊರೊನಾದಂತಹ ಮಹಾಮಾರಿ ಬಂದು ಜನರನ್ನು ಸತಾಯಿಸುತ್ತಿರುವ ಇತ್ತೀಚಿನ ದಿನಗಳಲ್ಲಿ ಖಾಸಗಿ ಆಸ್ಪತ್ರೆಯವರು ದರ್ಪ ತೋರಿಸಿರುವುದು ಎಷ್ಟರಮಟ್ಟಿಗೆ ಸರಿ.
ಈ ಬಗ್ಗೆ ಜನನಾಯಕರು ಗಮನಹರಿಸಿ ಸರಿಯಾದ ಕ್ರಮ ಕೈಗೊಳ್ಳಬೇಕಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು ರೋಗಿಯ ಸಂಬಂಧಿಕರ ದೂರವಾಣಿಗೆ ಕರೆ ಮಾಡಬಹುದು.
ದೂರವಾಣಿ ಸಂಖ್ಯೆ: 7259634266
DAKSHINA KANNADA
ಶಾಲಾ ಮಕ್ಕಳಿಗೆ ದಸರಾ ರಜೆ ಘೋಷಿಸಿದ ಸರಕಾರ
ಬೆಂಗಳೂರು/ಮಂಗಳೂರು: ಇನ್ನೇನು ನಾಡಹಬ್ಬ ದಸರಾ ಸಮೀಪಿಸುತ್ತಿದೆ. ಈ ಬಾರಿ ದಸರಾವನ್ನು ಅದ್ಧೂರಿಯಾಗಿ ಆಚರಿಸಲು ಸರಕಾರ ಸಿದ್ಧತೆ ನಡೆಸುತ್ತಿದೆ. ಖ್ಯಾತ ಸಾಹಿತಿ ಹಂಪ ನಾಗರಾಜಯ್ಯನವರು ಈ ಬಾರಿಯ ದಸರಾವನ್ನು ಉದ್ಘಾಟಿಸಿಲಿದ್ದಾರೆಂದು ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಈಗಾಗಲೇ ಘೋಷಣೆ ಮಾಡಿದ್ದಾರೆ.
ಶಾಲಾ ಮಕ್ಕಳಿಗೆ ರಜೆ ಘೋಷಣೆ:
ದಸರಾ ಹಬ್ಬಕ್ಕೆ ಶಾಲಾ ಮಕ್ಕಳಿಗೆ ಸರಕಾರ ರಜೆ ಘೋಷಣೆ ಮಾಡಿದೆ. ಅ.3ರಿಂದ ಅ.20ರವರೆಗೆ ದಸರಾ ರಜೆ ಘೋಷಣೆ ಮಾಡಿದ್ದು, ಸರಕಾರಿ ಶಾಲೆಗಳು, ಅನುದಾನಿತ ಶಾಲೆಗಳು ಮತ್ತು ಖಾಸಗಿ ಶಾಲೆಗಳಿಗೆ ಈ ರಜೆ ಅನ್ವಯವಾಗಲಿದೆ. ಹೊರತಾಗಿ ಸಿಬಿಎಸ್ಸಿ ಹಾಗೂ ಐಎಸ್ಸಿಎಸ್ ಶಾಲೆಗಳಿಗೆ ದಸರಾ ರಜೆ ಅನ್ವಯವಾಗುವುದಿಲ್ಲ. ಯಾಕಂದ್ರೆ ಇವೆರಡು ಕೇಂದ್ರ ಪಠ್ಯಕ್ರಮದಡಿ ಕಾರ್ಯನಿರ್ವಹಿಸುತ್ತಿರುವುದರಿಂದ ಶಾಲಾ ರಜೆ ದಿನಾಂಕ ಹಾಗೂ ರಜಾ ಅವಧಿ ಬೇರೆಯಾಗಿರುತ್ತದೆ.
LATEST NEWS
ಶಿರೂರು ಗುಡ್ಡ ಕುಸಿತ; ಕೊನೆಗೂ ನಾಪತ್ತೆಯಾಗಿದ್ದ ಟ್ರಕ್ ಪತ್ತೆ
ಕಾರವಾರ: ಶಿರೂರು ಭೂ ಕುಸಿತದ ಬಳಿಕ ಗಂಗಾವಳಿ ನದಿಯಾಳದಲ್ಲಿ ಬಿದ್ದ ಟ್ರಕ್ ಕೊನೆಗೂ ಪತ್ತೆಯಾಗಿದೆ.
ಜುಲೈ 16 ರಂದು ಭೂ ಕುಸಿತ ಸಂಭವಿಸಿದ ಬಳಿಕ ಕೇರಳದ ಅರ್ಜುನ್ ಚಲಾಯಿಸುತ್ತಿದ್ದ ಟ್ರಕ್ ಗಂಗಾವಳಿ ನದಿಗೆ ಬಿದ್ದಿತ್ತು. ನದಿಯಲ್ಲಿ ನೀರಿನ ಪ್ರಮಾಣ ಜಾಸ್ತಿ ಇದ್ದ ಕಾರಣ ಟ್ರಕ್ ಪತ್ತೆ ಮಾಡಲು ಕಷ್ಟವಾಗಿತ್ತು. ಮುಳುಗು ತಜ್ಞ ಈಶ್ವರ ಮಲ್ಪೆ ಅವರು ಟ್ರಕ್ ಪತ್ತೆಗೆ ನಿರಂತರ ಪ್ರಯತ್ನ ನಡೆಸುತ್ತಿದ್ದರು.
ಈಗ ಟ್ರಕ್ ಗುಡ್ಡ ಕುಸಿತಗೊಂಡ ಜಾಗದ ಬಳಿಯೇ ಸಿಕ್ಕಿ ಬಿದ್ದಿದೆ. ಟ್ರಕ್ ಮೇಲೆ ಸಾಕಷ್ಟು ಕಲ್ಲು ಮತ್ತು ಮಣ್ಣುಗಳಿವೆ. ಹೀಗಾಗಿ ಮಣ್ಣು ಮತ್ತು ಕಲ್ಲುಗಳನ್ನು ತೆಗೆದು ಟ್ರಕ್ ಮೇಲಕ್ಕೆ ಎತ್ತಲು ಸಿದ್ಧತೆ ನಡೆಯುತ್ತಿದೆ.
ಜುಲೈ 16 ರಂದು ಭೂಕುಸಿತ ಸಂಭವಿಸಿದಾಗ ಅರ್ಜುನ್ ಮರ ತುಂಬಿಸಿಕೊಂಡು ಟ್ರಕ್ನಲ್ಲಿ ಕೋಝಿಕ್ಕೋಡ್ ಕಡೆಗೆ ಹೋಗುತ್ತಿದ್ದರು.
FILM
ಜಾನಿ ಮಾಸ್ಟರ್ ಪತ್ನಿಗೂ ಬಂತು ಕಂಟಕ..! ಅತ್ಯಾಚಾರ ಪ್ರಕರಣಕ್ಕೆ ಟ್ವಿಸ್ಟ್..!!
ಹೈದರಾಬಾದ್/ಮಂಗಳೂರು: ಜಾನಿ ಮಾಸ್ಟರ್ ಮೇಲಿರುವ ನೃತ್ಯ ನಿರ್ದೇಶಕಿಯ ಅತ್ಯಾಚಾರ ಆರೋಪಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಜಾನಿ ಮಾಸ್ಟರ್ ಪತ್ನಿ ಆಯಿಷಾ ಮೇಲೂ ಕ್ರಮಕೈಗೊಳ್ಳಲು ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ.
ಈಗಾಗಲೇ ಜಾನಿ ಮಾಸ್ಟರ್ ನನ್ನು ಡ್ಯಾನ್ಸ್ ನಿರ್ದೇಶಕಿ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪದಡಿಯಲ್ಲಿ ಗೋವಾ ಪೊಲೀಸರು ಬಂಧಿಸಿ ಹೈದರಾಬಾದ್ನ ಚಂಚಲ್ ಗುಡಾ ಜೈಲಿಗೆ ಕಳುಹಿಸಿದ್ದಾರೆ. ನೃತ್ಯ ಸಂಯೋಜಕಿಯೊಬ್ಬಳು ನನ್ನ ಮೇಲೆ ಜಾನಿ ಮಾಸ್ಟರ್ ಅತ್ಯಾಚಾರವೆಸಗಿದ್ದಾರೆ ಹಾಗೂ ಅವರ ಪತ್ನಿ ಆಯಿಷಾ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ನರಸಿಂಗ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಖ್ಯಾತ ಕೊರಿಯೋಗ್ರಾಫರ್ ಜಾನಿ ಮಾಸ್ಟರ್ ಅರೆಸ್ಟ್..!
ಪ್ರಕರಣದಲ್ಲಿ ಆಯೇಷಾರನ್ನು ಆರೋಪಿಯನ್ನಾಗಿಸಲು ಪೊಲೀಸರು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಮತ್ತೊಂದೆಡೆ ಶನಿವಾರ(ಸೆ.21) ನರಸಿಂಗಿ ಪೊಲೀಸರು, ಜಾನಿ ಮಾಸ್ಟರ್ ನನ್ನು ಕಸ್ಟಡಿಗೆ ನೀಡುವಂತೆ ಉಪ್ಪಾರಪಲ್ಲಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಿದ್ದಾರೆ. ಹತ್ತು ದಿನಗಳ ಕಾಲ ಕಸ್ಟಡಿಗೆ ಕೋರುವ ಸಾಧ್ಯತೆ ಇದೆ. ಫೋಕ್ಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿರುವುದರಿಂದ ಆತನನ್ನು ಸಂಪೂರ್ಣವಾಗಿ ಪ್ರಶ್ನಿಸಲು ಪೊಲೀಸರು ನ್ಯಾಯಾಲಯದ ಮೊರೆ ಹೋಗಲಿದ್ದಾರೆ. ಅಲ್ಲದೆ, ಆತನ ಪತ್ನಿ ವಿರುದ್ಧವೂ ಆರೋಪ ಕೇಳಿ ಬಂದಿರುವುದರಿಂದ ಬಂಧನವಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.