Connect with us

    ಸುಕ್ಷಿತರ ನಾಡಿನಲ್ಲಿ ಇದೆಂಥ ಕಥೆ..!? ಮಧ್ಯರಾತ್ರಿ 3 ಗಂಟೆಗೂ ಶೌಚಕ್ಕಾಗಿ ಅಲೆದಾಟ..!

    Published

    on

    ಸುಕ್ಷಿತರ ನಾಡಿನಲ್ಲಿ ಇದೆಂಥ ಕಥೆ..!? ಮಧ್ಯರಾತ್ರಿ 3 ಗಂಟೆಗೂ ಶೌಚಕ್ಕಾಗಿ ಅಲೆದಾಟ..!

    ಉಡುಪಿ: ದೇಶ ಸ್ವತಂತ್ರವಾದಾಗ ರಾಷ್ಟ್ರಪಿತ ಮಹಾತ್ಮ ಗಾಂಧಿ ಸ್ವಚ್ಚ ಭಾರತ ಸ್ವಸ್ಥ ಭಾರತದ ಕನಸನ್ನು ಕಂಡಿದ್ದರು.

    ಪ್ರಧಾನಿ ನರೇಂದ್ರ ಮೋದಿ ಪ್ರಧಾನಿಯಾದ ಮೊದಲ ಹೆಜ್ಜೆಯಾಗಿ ಸ್ವಚ್ಚತೆಯ ಪಾಠ ದೇಶದ ಜನರಿಗೆ ಹೇಳಿಕೊಟ್ಟರು.

    ಸ್ವಚ್ಚ ಭಾರತ ನಿರ್ಮಾಣವಾಗಬೇಕಾದರೆ ದೇಶದಲ್ಲಿ ಬಯಲು ಮುಕ್ತ ಶೌಚಾಲಯ ನಿರ್ಮಾಣವಾಗಬೇಕು ಎಂದು ಮನಗಂಡು, ರಾಷ್ಟ್ರವ್ಯಾಪಿ ದೊಡ್ಡ ಆಂದೋಲನವನ್ನೇ ಹುಟ್ಟು ಹಾಕಿದರು.

    ಇದನ್ನು ನನಸು ಮಾಡಲು ಹತ್ತು ಹಲವು ಯೋಜನೆಗಳನ್ನು ತಂದರು. ಆದರೆ ನಿರೀಕ್ಷಿತ ಮಟ್ಟದಲ್ಲಿ ಇದು ಯಶ ಕಾಣಲಿಲ್ಲ ಎಂಬುವುದು ಅಷ್ಟೇ ಸತ್ಯ.

    ಇಂದಿಗೂ ಗ್ರಾಮೀಣ ಭಾಗಗಳಲ್ಲಿ ಅದೇ ಪರಿಸ್ಥಿತಿ ನಿರ್ಮಾಣವಾಗಿದೆ. ದೈನಂದಿನ ದೇಹ ಬಾಧೆ ತೀರಿಸಲು ಮೂಲಭೂತವಾಗಿ ಬೇಕಾಗಿದ್ದ ಶೌಚಾಲಯಗಳು ಇಲ್ಲದೆ ಹಲವಾರು ಕುಟುಂಬಗಳು ಇಂದಿಗೂ ಸಂಕಷ್ಟದಲ್ಲಿದೆ.

    ಇಂತಹದ್ದೇ ಒಂದು ಕುಟುಂಬ ಕರಾವಳಿ ಜಿಲ್ಲೆ ಉಡುಪಿಯಲ್ಲಿ ಬದುಕುತ್ತಿದೆ. ಇಲ್ಲಿನ ಶಿರ್ವ ಕಳತ್ತೂರು ಗ್ರಾಮದಲ್ಲಿ 22 ವರ್ಷಗಳಿಂದ ಶೌಚಾಲಯವಿಲ್ಲದೆ ಜೀವನವನ್ನು ಸಾಗಿಸುತ್ತಿದೆ ಈ ಕುಟುಂಬ..!.

    ಕೃಷ್ಣ ನಗರಿ ಉಡುಪಿಯನ್ನು ಬುದ್ದಿವಂತರ ಜಿಲ್ಲೆ – ಎಜ್ಯುಕೇಷನ್ ಹಬ್ ಎಂದೆಲ್ಲಾ ಕರೆಯುತ್ತಾರೆ.

    ಆದರೆ ಇದೆ ಬುದ್ಧಿವಂತರ, ಸುಕ್ಷಿತರ ಜಿಲ್ಲೆಯಲ್ಲಿ ಮೂಲಭೂತವಾಗಿ ಅಗತ್ಯವಾಗಿ ಬೇಕಾಗಿದ್ದ ಶೌಚಾಲಯ ಇಲ್ಲದೇ ಒಂದು ಕುಟುಂಬ ಬದುಕುತ್ತಿದೆ.

    ಹೌದು… ಇವರ ಹೆಸರು ಹರೀಶ್ ಆಚಾರ್ಯ ಮತ್ತು ಶಶಿಕಲಾ. ಈ ದಂಪತಿಗೆ ಎರಡು ಮಕ್ಕಳು ಪ್ರಜ್ವಲ್ ಮತ್ತು ಪ್ರಜ್ಞ.

    ಆಗಲೋ ಈಗಲೋ ಬೀಳುವ ಹಂತದಲ್ಲಿರುವ ಹರಕು- ಮುರುಕು ಪುಟ್ಟ ಮನೆಯಲ್ಲಿ ಇವರ ವಾಸ.

    ಪ್ರಜ್ವಲ್ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದರೆ, ಪ್ರಜ್ಞ 9ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಪ್ರಜ್ಞ ಓದಿನಲ್ಲಿ ಬಹಳ ಮುಂದು.

    ತನ್ನ ಮುರುಕಲು ಮನೆಯ ದೀಪದಲ್ಲಿ ಓದಿ ದಿನಾ ಬೆಳಿಗ್ಗೆ ಶಾಲೆಗೆ ಹೋಗುತ್ತಿದ್ದಾಳೆ.

    ಹರೆಯಕ್ಕೆ ಬರುವ ಈ ಹೆಣ್ಮಗಳಿಗೆ ಮನೆಯಲ್ಲಿ ಶೌಚಾಲಯ ಇಲ್ಲದ ಕಾರಣ ರಾತ್ರಿ ಮೂರು ಗಂಟೆಗೆ ಎದ್ದು ಶೌಚ ಮುಗಿಸಿ ಮತ್ತೆ ಮಲಗಿ ಬೆಳಿಗ್ಗೆ ಎದ್ದು ಶಾಲೆಗೆ ಹೋಗಬೇಕಾದ ಅನಿವಾರ್ಯತೆ.

    ಒಂದು ಕಡೆ ಹರಕು- ಮುರುಕು ಗುಡಿಸಲಿನಲ್ಲಿ ಬದುಕು ಮತ್ತೊಂದೆಡೆ ಹೆಣ್ಮಕ್ಕಳಿರುವ ಈ ಮನೆಯಲ್ಲೇ ಬಹಿರ್ದೆಸೆಗಾಗಿ ಶೌಚಲಯವಿಲ್ಲದೆ ದಿನ ಕಳೆಯುತ್ತಿದೆ ಈ ಪುಟ್ಟ ಸಂಸಾರ..

    ಅನಾರೋಗ್ಯದ ಹಿನ್ನಲೆ ಗಂಡ ಹರೀಶ್ ಆಚಾರ್ಯರಿಗೆ ದುಡಿಯಲು ಆಗುತ್ತಿಲ್ಲ. ಆದ್ದರಿಂದ ಸಂಸಾರ ನಡೆಸುವ ಮತ್ತು ಮಕ್ಕಳ ವಿದ್ಯಾಭ್ಯಾಸ ಇದೆಲ್ಲದರ ಜವಾಬ್ದಾರಿ ಶಶಿಕಲಾ ಮೇಲೆ ಬಿದ್ದಿದೆ.

    ಇದಕ್ಕಾಗಿ ಶಶಿಕಲಾ ಬೀಡಿ ಕಟ್ಟಿ ಜೀವನದ ರಥವನ್ನು ಎಳೆದುಕೊಂಡು ಹೋಗುವ ಪ್ರಯತ್ನ ಮಾಡುತ್ತಿದ್ದಾರೆ.

    ಕಲಿಕೆಯಲ್ಲಿ ಸದಾ ಮುಂದಿರುವ ಮಗಳು ಪ್ರಜ್ಞಾ ಕಿತ್ತು ತಿನ್ನುವ ಬಡತನದ ನಡುವೆಯೂ ಜೀವನದಲ್ಲಿ ಏನಾದರೂ ಸಾಧಿಸಬೇಕೆಂಬ ಕನಸಿನೊಂದಿಗೆ, ಅದಮ್ಯ ಛಲವನ್ನೂ ಹೊಂದಿದ್ದಾಳೆ.

    ಮುಂದಿನ ದಿನಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರವನ್ನು ಬರೆಯಬೇಕೆಂಬ ಆಸೆಯನ್ನಿಟ್ಟುಕೊಂಡಿದ್ದಾರೆ.

    ಶೌಚಾಲಯ ಇಲ್ಲದೇ ಅನುಭವಿಸಿದ ನೋವನ್ನು ಅವರೊಂದಿಗೆ ಹಂಚಿಕೊಳ್ಳಬೇಕೆಂಬ ಬಯಕೆ ಈ ಪುಟ್ಟ ಬಾಲಕಿಯದ್ದು..

    ಪುಟ್ಟ ಮನೆಯಾದರೂ ಮನೆಗೆ ಡೋರ್ ನಂಬರ್, ರೇಷನ್ ಕಾರ್ಡ್ ಎಲ್ಲವೂ ಇದೆ.

    ಹಲವು ಬಾರಿ ಮೂಲ ಸೌಕರ್ಯಗಳ ಸಹಾಯಕ್ಕಾಗಿ ಸ್ಥಳಿಯ ಪಂಚಾಯತ್, ಜನಪ್ರತಿನಿಧಿಗಳ ಮನೆ, ಕಚೇರಿ ಬಾಗಿಲುಗಳನ್ನು ತಟ್ಟಿದರೂ ಯಾವುದೇ ಪ್ರಯೋಜನವಾಗಿಲ್ಲ.

    ಸುಮಾರು 15 ವರ್ಷ ಕಾಲ ಮನೆ ತೆರಿಗೆ ಕಟ್ಟಿದರು. ಈವರೆಗೆ ಸ್ಥಳೀಯ ಗ್ರಾಮ ಪಂಚಾಯತ್ ಮಾತ್ರ ಇವರಿಗೆ ಶೌಚಾಲಯ ನಿರ್ಮಾಣ ಮಾಡಿಕೊಟ್ಟಿಲ್ಲ.

    ಉಡುಪಿ ಜಿಲ್ಲೆಯಲ್ಲಿ ಬಿಜೆಪಿ ಪ್ರಾಬಲ್ಯ ಹೊಂದಿದ್ದರು, ನರೇಂದ್ರ ಮೋದಿಯ ಕನಸನ್ನು ನನಸು ಮಾಡಲು ಈವರೆಗೆ ಬಿಜೆಪಿಯ ಜನಪ್ರತಿನಿಧಿಗಳಿಗೆ ಆಗಿಲ್ಲವೆಂಬುದೂ ಅಷ್ಟೇ ಬೇಸರದ ಸಂಗತಿಯಾಗಿದೆ.

    ಇತ್ತೀಚೆಗೆ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಯಾರೋ ದಾನಿಗಳು ಸೋಲಾರ್ ಲೈಟ್ ಅನ್ನು ಅಳವಡಿಸಿಕೊಟ್ಟಿದ್ದಾರೆ.

    ಮಕ್ಕಳಿಗೆ ಅಮ್ಮನ ಕಣ್ಣೀರು ಒರೆಸಬೇಕೆಂಬ ಆತುರ ಒಂದು ಕಡೆಯಾದ್ರೆ, ತಾಯಿಗೆ ಮಕ್ಕಳಿಗೆ ವಿದ್ಯಾಭ್ಯಾಸ ನೀಡಿ ಸ್ವಾವಲಂಬಿಯಾಗಿ ಬದುಕಬೇಕು ಆಸೆ ಇನ್ನೊಂದೆಡೆ.

    ಎಲ್ಲಾ ತಾಯಂದಿರು ಕಂಡಂತಹ ಕನಸು ಇವರದಾಗಿದೆ. ಮಕ್ಕಳು ಅಮ್ಮನಿಗಾಗಿ ಅಮ್ಮ ಮಕ್ಕಳಿಗಾಗಿ ಬದುಕುತ್ತಿದ್ದಾರೆ ಈ ಪುಟ್ಟ ಗುಡಿಸಲಿನಲ್ಲಿ.

    ಮುಂದೆ ಪುಟ್ಟ ಸುಂದರವಾದ ಮನೆ ನಿರ್ಮಾಣ ಮಾಡಿ ಬದುಕು ಸಾಧಿಸಬೇಕೆಂಬುದು ಕನಸು ಇವರದ್ದು. ಆದರೆ ಇದನ್ನು ನನಸು ಮಾಡುವ ದಾನಿಗಳ ನಿರೀಕ್ಷೆಯಲ್ಲಿದೆ ಈ ಪುಟ್ಟ ಕುಟುಂಬ…

    ಸಹಾಯ ಮಾಡಲಿಚ್ಛಿಸುವವರು ಈ ಫೋನ್ ನಂಬರ್ ಗೆ ಸಂಪರ್ಕಿಸಬಹುದು:

    ಶಶಿಕಲಾ ಆಚಾರ್ಯ

    ಉಡುಪಿ ಜಿಲ್ಲೆ ಶಿರ್ವ ಕಳತ್ತೂರು ಗ್ರಾಮ

    ಮೊಬೈಲ್: 9844055609.

    ಬರಹ: ಪ್ರಮೋದ್ ಸುವರ್ಣ ಕಟಪಾಡಿ, ಉಡುಪಿ

     

    Click to comment

    Leave a Reply

    Your email address will not be published. Required fields are marked *

    LATEST NEWS

    ಅಣ್ಣನ ಪ್ರೀತಿಗೆ ತಮ್ಮ ಬ*ಲಿ; ತಾಯಿಯ ಮುಂದೆಯೇ ಮಗನ ಕೊ*ಲೆ

    Published

    on

    ಮಂಗಳೂರು/ಕಲಬುರಗಿ: ಯುವ ಸಮಾಜದ ಪ್ರೀತಿಗೆ ಮನೆಯಲ್ಲಿ ವಿರೋಧ ಬರುವುದು ಸಹಜ. ಅದರಲ್ಲೂ ಹುಡುಗಿಯ ವಿಚಾರದಲ್ಲಿ ಇದು ಹೆಚ್ಚಾಗಿಯೇ ಕಾಣಬಹುದು. ವಿಪರ್ಯಾಸವೆಂದರೆ ಅಣ್ಣನ ಪ್ರೇಮದ ವಿಚಾರದಲ್ಲಿ ತಮ್ಮ ಬಲಿ*ಯಾದ ಘಟನೆ ನಡೆದಿದೆ.


    ಕಲಬುರಗಿ ನಗರದ ಹೊರವಲಯದಲ್ಲಿರುವ ನಾಗನಹಳ್ಳಿ ಗ್ರಾಮದಲ್ಲಿ ಸುಮಿತ್‌ ಮಲ್ಲಾಬಾದ್ ಎಂಬ 19 ವರ್ಷದ ಯುವಕನನ್ನು ಭೀಕ*ರವಾಗಿ ಕೊ*ಲೆ ಮಾಡಲಾಗಿದೆ. ತಂದೆ-ತಾಯಿಯೊಂದಿಗೆ ಮುಂಬೈನಲ್ಲಿ ವಾಸವಾಗಿದ್ದ ಸುಮಿತ್‌, ಮುಂಬೈನಲ್ಲಿ ಪದವಿ ವಿದ್ಯಾಭ್ಯಾಸ ಮಾಡುತ್ತಿದ್ದ. ಕಳೆದ ವಾರವಷ್ಟೇ ತಾಯಿಯೊಂದಿಗೆ ಕಲಬುರಗಿಗೆ ಆಗಮಿಸಿದ್ದ. ಊರಲ್ಲಿ ಸುಮಿತ್ ಸಹೋದರ ಸಚಿನ್ ಮನೆಯಲ್ಲಿ ವಾಸವಾಗಿದ್ದ. ಸಚಿನ್ ನಾಗನಹಳ್ಳಿ ಗ್ರಾಮದ ತನ್ನದೆ ಏರಿಯಾದ ಯುವತಿಯನ್ನು ಪ್ರೀತಿಸುತ್ತಿದ್ದನಂತೆ. ಈ ವಿಚಾರ ಯುವತಿಯ ಮನೆಯವರಿಗೆ ಗೊತ್ತಾಗಿ ಸಾಕಷ್ಟು ಭಾರಿ ನ್ಯಾಯ ಪಂಚಾಯಿತಿ ಮಾಡಿದ್ದರಂತೆ‌. ಆದರೆ ಅದು ಬಗೆಹರೆದಿರಲಿಲ್ಲ. ನಿನ್ನೆ ಸಂಜೆ (ಸೆ.21) ಸಚಿನ್ ಮನೆಗೆ ಯುವತಿಯ ಸಹೋದರ ಮತ್ತು ಆತನ ಕೆಲ ಸ್ನೇಹಿತರು ಬಂದಿದ್ದಾಗ ಸಚಿನ್ ಮನೆಯಲ್ಲಿರದ ಕಾರಣ ಆತನ ತಾಯಿ ಮತ್ತು ಸಹೋದರನ ಜೊತೆ ಗಲಾಟೆ ತೆಗೆದಿದ್ದಾರೆ. ಬಳಿಕ ಗಲಾಟೆ ವಿಕೋಪಕ್ಕೆ ತೆರಳಿ ಸುಮಿತ್​​ನನ್ನ ಚಾ*ಕುವಿನಿಂದ ಚು*ಚ್ಚಿ ಎಸ್ಕೇಪ್ ಆಗಿದ್ದಾರೆ.
    ಇತ್ತ ಸುಮಿತ್‌ಗೆ ಚಾ*ಕು ಚುಚ್ಚಿ*ದ್ದನ್ನು ಕಂಡ ತಾಯಿ, ಮಗನನ್ನ ಉಳಿಸಿಕೊಳ್ಳಲು ಕಲಬುರಗಿ ನಗರದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹನ್ನೆರೆಡು ಗಂಟೆಗಳ ಕಾಲ ನಡೆದ ಚಿಕಿತ್ಸೆ ಫಲಕಾರಿಯಾಗಿದೆ ಇಂದು ಬೆಳಗ್ಗೆ (ಸೆ.22) ಸಾವನ್ನ*ಪ್ಪಿದ್ದಾನೆ.
    ಈ ಸಂಬಂಧ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಅದೇನೆ ಆಗಲಿ ಯುವತಿಯ ವಿಚಾರದಲ್ಲಿ ಏನು ಮಾಡದ ಅಮಾಯಕ ಯುವಕ ಬಲಿಯಾಗಿರೋದು ನಿಜಕ್ಕೂ ದುರಂತವೆ ಸರಿ.

    Continue Reading

    LATEST NEWS

    ತಿರುಪತಿಯಿಂದ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ತುಪ್ಪ ಸಾಗಿಸುವ ಟ್ಯಾಂಕರ್‌ಗಳಿಗೆ ಜಿಪಿಎಸ್‌ ಅಳವಡಿಕೆ

    Published

    on

    ಆಂಧ್ರಪ್ರದೇಶ/ಮಂಗಳೂರು: ತಿರುಪತಿ ತಿರುಮಲದಲ್ಲಿ ಲಡ್ಡು ವಿವಾದ ಉಂಟಾದ ಬಳಿಕ ಸರಕಾರ ನಂದಿನಿ ತುಪ್ಪಕ್ಕೆ ಬೇಡಿಕೆ ಇಟ್ಟಿದೆ.  ಒಂದು ತಿಂಗಳ ಹಿಂದೆ ಟಿಟಿಡಿ ಕೆಎಂಎಫ್‌ಗೆ ಟೆಂಡರ್ ನೀಡಿದ ನಂತರ ನಂದಿನಿ ತುಪ್ಪ ಪೂರೈಕೆಯನ್ನು ಪುನಃ ಆರಂಭಿಸಲಾಗಿದೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಎಂ ಕೆ ಜಗದೀಶ್ ಹೇಳಿದ್ದಾರೆ.

    ತಿರುಪತಿ ಲಡ್ಡು ವಿವಾದದ ಬಳಿಕ ಕೆಎಮ್‌ಎಫ್‌ ಹೈ ಅಲರ್ಟ್‌:
    “ನಾವು ಒಂದು ತಿಂಗಳ ಹಿಂದೆ ತುಪ್ಪವನ್ನು(ಟಿಟಿಡಿಗೆ) ಸರಬರಾಜು ಮಾಡುತ್ತಿದ್ದೇವೆ. ನಾವು ವಾಹನಗಳಿಗೆ ಜಿಪಿಎಸ್ ಸಿಸ್ಟಮ್ ಮತ್ತು ಜಿಯೋ ಲೊಕೇಶನ್ ಸಾಧನಗಳನ್ನು ಅಳವಡಿಸಿದ್ದೇವೆ. ಇದರಿಂದ ವಾಹನ ಎಲ್ಲಿ ನಿಲ್ಲುತ್ತವೆ ಎಂಬುದನ್ನು ನಾವು ಕಂಡುಹಿಡಿಯಬಹುದು. ಇದು ಎಲ್ಲಿಯೂ ಕಲಬೆರಕೆ ಮಾಡದಂತೆ ನೋಡಿಕೊಳ್ಳಲು ಸಹಾಯಕವಾಗುತ್ತದೆ” ಎಂದು ಜಗದೀಶ್ ತಿಳಿಸಿದ್ದಾರೆ.

    ಕೆಎಂಎಫ್, ಟಿಟಿಡಿಗೆ 350 ಟನ್ ತುಪ್ಪ ಪೂರೈಸುವ ಗುತ್ತಿಗೆ ಪಡೆದುಕೊಂಡಿದೆ. ಅಗತ್ಯ ಬಿದ್ದಾಗ ತುಪ್ಪ ಪೂರೈಕೆ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ. ವಿಶ್ವವಿಖ್ಯಾತ ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿದೆ ಎಂದು ಸ್ವತಃ ಆಂಧ್ರ ಪ್ರದೇಶ ಮುಖ್ಯಮಂತ್ರಿ ಆರೋಪ ಮಾಡಿದ್ದರು. ಅಲ್ಲದೆ ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದು ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ.

    Continue Reading

    LATEST NEWS

    ಪಂಚೆ ಉಟ್ಟು ದೇಸೀ ಸ್ಟೈಲ್ ಅಡುಗೆ ಮಾಡಿದ ಬ್ರಿಟಿಷ್ ಬಾಣಸಿಗ..! ಫಿದಾ ಆದ ನೆಟ್ಟಿಗರು

    Published

    on

    ಹೆಲ್ಸ್ ಕಿಚನ್ ಹಾಗೂ ಮಾಸ್ಟರ್ ಚೆಫ್ ನಂತಹ ಜನಪ್ರಿಯ ಕಾರ್ಯಕ್ರಮಗಳ ನಿರೂಪಕ ಗಾರ್ಡನ್ ರಾಮ್ಸೆ ಇದೀಗ ತನ್ನ ವೇಷಭೂಷಣದ ಮೂಲಕ ಗಮನ ಸೆಳೆದಿದ್ದಾರೆ. ಬ್ರಿಟಿಷ್ ಸೆಲೆಬ್ರಿಟಿ ಬಾಣಸಿಗ ಗಾರ್ಡನ್ ಜೇಮ್ಸ್ ರಾಮ್ಸೆ ಅವರು ತಮ್ಮ ಡಿಫರೆಂಟ್ ಶೈಲಿಯ ಕುಕಿಂಗ್ ಗಳಿಗೆ ಹೆಸರುವಾಸಿಯಾಗಿದ್ದಾರೆ.

    ಇತ್ತೀಚಿನ ದಿನಗಳಲ್ಲಿ ಹೊಸ ಹೊಸ ಅವತಾರದಲ್ಲಿ ಅಡುಗೆ ಮಾಡುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೀಗ ಸ್ಟೈಲ್‌ಆಗಿ ಪಂಚೆ ತೊಟ್ಟು ದಕ್ಷಿಣ ಕನ್ನಡ ಭಾರತೀಯ ಶೈಲಿಯ ಅಡುಗೆಗಳನ್ನು ಮಾಡಿದ್ದು ಈ ಕುರಿತ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

    ಕಾಶ್ಮೀರದಿಂದ ಕರ್ನಾಟಕಕ್ಕೆ ಬರುತ್ತಿದ್ದ ಸೇನೆಯ ರೈಲನ್ನು ಸ್ಫೋಟಿಸಲು ಯತ್ನ

    ಈ ಕುರಿತ ವಿಡಿಯೋವನ್ನು historyinmemes(ಹಿಸ್ಟೋರಿ ಇನ್‌ ಮೀಮ್ಸ್) ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ಸ್ಥಳೀಯ ಭಾರತೀಯ ಉಡುಗೆ ತೊಟ್ಟು ಅಡುಗೆ ಮಾಡಿದ ಗಾರ್ಡನ್ ರಾಮ್ಸೆ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ಸೆ.20ರದು ಹಂಚಿಕೊಂಡಿದ್ದ ವೀಡಿಯೋ 12 ಮಿಲಿಯನ್ ವೀಕ್ಷಣೆಗಳನ್ನು ಪಡೆದುಕೊಂಡಿದೆ.

    Continue Reading

    LATEST NEWS

    Trending