Connect with us

ಅನುತ್ತೀರ್ಣಗೊಂಡ ವಿದ್ಯಾರ್ಥಿಗಳ ಮೊಗದಲ್ಲಿ ಮಂದಹಾಸ ಮೂಡಿಸುತ್ತಿರುವ ‘ಪ್ರಗತಿ ಸ್ಟಡಿ ಸೆಂಟರ್’..

Published

on

ಅನುತ್ತೀರ್ಣಗೊಂಡ ವಿದ್ಯಾರ್ಥಿಗಳ ಮೊಗದಲ್ಲಿ ಮಂದಹಾಸ ಮೂಡಿಸುತ್ತಿರುವ ‘ಪ್ರಗತಿ ಸ್ಟಡಿ ಸೆಂಟರ್’..

ಪುತ್ತೂರು: ಜೀವನದಲ್ಲಿ ಸೋಲೆಂಬುದು ಹಲವಾರು ಕಾರಣಗಳಿಂದ ಬರಬಹುದು. ಆದರೆ ಅದನ್ನು ಗುರುತಿಸಿ ಸರಿಪಡಿಸಿ, ಮುನ್ನಡೆಸುವವರು ನಮ್ಮೊಂದಿಗೆ ಇದ್ದರೆ ಯಶಸ್ಸು ಕಟ್ಟಿಟ್ಟ ಬುತ್ತಿ.

ಈ ರೀತಿ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಹೆಗಲಿಗೆ ಹೆಗಲು ಕೊಟ್ಟು ಮುನ್ನಡೆಸಿ ಅವರ ಭವಿಷ್ಯಕ್ಕೆ ಬೆಳಕು ಬೀರುತ್ತಿರುವ ಸಂಸ್ಥೆ ಅಂದ್ರೆ ಅದು ಕರ್ನಾಟಕದಲ್ಲಿ ಮನೆ ಮಾತಾಗಿರುವ ಪುತ್ತೂರಿನ ‘ಪ್ರಗತಿ ಸ್ಟಡಿ ಸೆಂಟರ್’.

9ನೇ ತರಗತಿಯಿಂದ 10ನೇ ತರಗತಿಗೆ ತೇರ್ಗಡೆ ಹೊಂದಿರುವ ವಿದ್ಯಾರ್ಥಿಗಳಿಗೆ ಮೇ 10, 2020 ಆದಿತ್ಯವಾರದಿಂದ ಸೇತುಬಂಧ (ಬ್ರಿಡ್ಚ್ ಕೋರ್ಸ್) ತರಗತಿಗಳು ಆನ್‍ಲೈನ್ ಮೂಲಕ ಆರಂಭಗೊಳ್ಳಲಿರುವುದು.

ನುರಿತ ಶಿಕ್ಷಕರಿಂದ 4 ವಿಷಯಗಳ ಪಠ್ಯವನ್ನು ನಡೆಸಲಾಗುವುದು.

ಆಸಕ್ತ ವಿದ್ಯಾರ್ಥಿಗಳು ಈ ಉತ್ತಮ ಅವಕಾಶವನ್ನು ಬಳಸಿಕೊಳ್ಳಬಹುದು ಹಾಗೆಯೇ ಶೈಕ್ಷಣಿಕ ವರ್ಷ 2020ರಲ್ಲಿ ಪರೀಕ್ಷೆ ಬರೆಯುವ,

ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಕಳೆದ 21 ದಿನಗಳಿಂದ ಸುಮಾರು 563 ವಿದ್ಯಾರ್ಥಿಗಳಿಗೆ ಆನ್‍ ಲೈನ್ ಮೂಲಕ ಉಚಿತವಾಗಿ ತರಗತಿಗಳನ್ನು ರಾಜ್ಯದಲ್ಲಿ ಪ್ರಪ್ರಥಮವಾಗಿ ನಡೆಸಿದ ಹೆಗ್ಗಳಿಕೆ ಪ್ರಗತಿ ಸ್ಟಡಿ ಸೆಂಟರ್‍ಗೆ ಸಲ್ಲುತ್ತದೆ.

ಎಸ್.ಎಸ್.ಎಲ್.ಸಿ ಬೋರ್ಡ್ ಮುಂದೆ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸಿದ ಮರು ದಿನದಿಂದಲೇ ಆನ್‍ಲೈನ್ ಮೂಲಕವೇ ಉಚಿತವಾಗಿ ಪುನರ್ ಮನನ ತರಗತಿಗಳನ್ನು ನಡೆಸಲಿರುವುದು.

ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೂ ಆನ್‍ಲೈನ್ ತರಗತಿ:

ಪ್ರಥಮ ಪಿಯುಸಿ ಫಲಿತಾಂಶ ಈಗಾಗಲೇ ಪ್ರಕಟಗೊಂಡಿದ್ದು, ಪ್ರಥಮ ಪಿಯುಸಿ, ವಿಜ್ಞಾನ , ವಾಣಿಜ್ಯ ಹಾಗೂ ಕಲಾ ವಿಭಾಗದಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ,

ಪೂರಕ ಪರೀಕ್ಷೆಗೆ ತಯಾರಾಗಲೂ ಆನ್‍ಲೈನ್ ಮೂಲಕ ಮೇ 15, 2020 ಶುಕ್ರವಾರದಿಂದ ತರಗತಿಗಳು ಆರಂಭಗೊಳ್ಳಲಿದೆ.

ಅಂತೆಯೇ ಉತ್ತೀರ್ಣಗೊಂಡ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೂ ಮುಂದಿನ ದ್ವಿತೀಯ ಪಿಯುಸಿಯ ಪಠ್ಯವನ್ನು ಸೇತುಬಂಧ ತರಗತಿಗಳನ್ನು ಆನ್‍ಲೈನ್ ಮೂಲಕವೇ ಮೇ 15, 2020 ಶುಕ್ರವಾರದಿಂದ ನಡೆಸಲಾಗುವುದು.

ಬೆಳಗ್ಗೆ 9:30ರಿಂದ ಸಂಜೆ 3:30ರ ವರೆಗೆ ತರಗತಿಗಳು ನಡೆಯಲಿರುವುದು. ಈ ಆನ್‍ಲೈನ್ ತರಗತಿಗಳನ್ನು ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗದ ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳಬಹುದು.

ವಿದ್ಯಾರ್ಥಿಗಳು ಪ್ರಗತಿಯತ್ತ ಸಾಗಲು ಸೌಕರ್ಯಗಳು:

ಪ್ರಗತಿ ವಿದ್ಯಾ ಸಂಸ್ಥೆಯು ಪುತ್ತೂರಿನ ಧರ್ಮಸ್ಥಳ ಬಿಲ್ಡಿಂಗ್ ಮತ್ತು ಮಾಣಿ-ಮೈಸೂರು ಹೆದ್ದಾರಿಯಲ್ಲಿರುವ ಪೋಳ್ಯ ವೆಂಕಟರಮಣ ದೇವಸ್ಥಾನದ ಎದುರು,

2 ಎಕರೆ ವಿಸ್ತೀರ್ಣದಲ್ಲಿ ವಿಶಾಲವಾದ ಕ್ಯಾಂಪಸ್ ಮತ್ತು ಸುಸಜ್ಜಿತ 4 ಅಂತಸ್ತಿನ ‘ತತ್ವಮಸಿ’ ತರಗತಿ ಕೊಠಡಿಗಳನ್ನು ಹೊಂದಿರುತ್ತದೆ.

ಹಚ್ಚ ಹಸುರಿನ ವಾತಾವರಣ ಹೊಂದಿರುವ ಈ ಪರಿಸರದಲ್ಲಿ ಹೊರ ಊರಿನ ಸುಮಾರು 200 ವಿದ್ಯಾರ್ಥಿಗಳಿಗೆ ನೂತನ ಹಾಗೂ ಎಲ್ಲಾ ಸೌಕರ್ಯಗಳನ್ನು ಹೊಂದಿರುವಂತಹ ‘ಕೌಸ್ತುಭಂ’ ವಿದ್ಯಾರ್ಥಿ ನಿಲಯದ ವ್ಯವಸ್ಥೆಯನ್ನು ಕಲ್ಪಿಸಿಕೊಡಲಾಗುವುದು.

ಇಲ್ಲಿ ದಿನದ 24 ಗಂಟೆಗಳಲ್ಲಿಯೂ ಲಭ್ಯವಿರುವ ಬೋಧಕ-ಬೋಧಕೇತರ ವೃಂದ, ಮಕ್ಕಳ ಭದ್ರತಾ ದೃಷ್ಟಿಯಿಂದ ಸಿಸಿ ಕ್ಯಾಮರಾ ಅಳವಡಿಕೆ, ಕಂಪ್ಯೂಟರ್ ಲ್ಯಾಬ್,

ವಿಶಾಲವಾದ ಅಡುಗೆ ಕೋಣೆ, ಅನ್ನಪೂರ್ಣ ಉಪಹಾರ ಗೃಹ, ಜನರೇಟರ್ ಸೇವೆ, ಲೈಬ್ರೇರಿ, ಸ್ಟೇಷನರಿ, ಆಟದ ಮೈದಾನ, ಪ್ರತ್ಯೇಕ ವೈದ್ಯರ ಭೇಟಿ ಕೊಠಡಿ,

ಪ್ರಾಯೋಗಿಕ ಕಲಿಕಾ ಕೊಠಡಿಗಳು ಜೊತೆಗೆ ಜೀವನ ಹಾಗೂ ಮಾನವೀಯ ಮೌಲ್ಯ ಮತ್ತು ಶಿಸ್ತನ್ನು ಕಲಿಯಲು ಸಂಸ್ಥೆಯು ತರಬೇತಿ ಒದಗಿಸುತ್ತಿದೆ.

ಇಡೀ ಪ್ರಪಂಚವೇ ಎದುರಿಸುತ್ತಿರುವ ಕೊರೊನಾ ವೈರಸನ್ನು ದೂರವಿಡಲು ಸಂಸ್ಥೆಯು ವಿದ್ಯಾರ್ಥಿಗಳಿಗೆ ರಕ್ಷಣಾ ಕ್ರಮಗಳ ಮಾಹಿತಿಯನ್ನು ನೀಡಲಿರುವುದು. ವಿದ್ಯಾರ್ಥಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದೆ.

“ಸೋತೆನೆಂದು ದಿಕ್ಕು ತೋಚದೇ ಕುಳಿತ ಸಂದರ್ಭದಲ್ಲಿ ನಿಮ್ಮೊಂದಿಗೆ ನಾವಿದ್ದೇವೆ ಎಂದು ಕೈ ಹಿಡಿದು ನಡೆಸಿದ ಗುರು ಪ್ರಗತಿ ಸ್ಟಡಿ ಸೆಂಟರ್”, ಎಂಬುದು ಇಲ್ಲಿ ಕಲಿತ ಹಲವು ವಿದ್ಯಾರ್ಥಿಗಳ ಹಾಗು ಅವರ ಪೋಷಕರ ಕೃತಜ್ಞತೆಯ ನುಡಿಗಳು.

ಹೇಗೆ ನದಿಯೊಂದರ ಹುಟ್ಟು ಚಿಕ್ಕದಾಗಿರುತ್ತದೆಯೋ ಅದೇ ರೀತಿ ಪುಟ್ಟದಾಗಿ ಪ್ರಾರಂಭಗೊಂಡು ಬೆಳೆಯುತ್ತಾ,

ಚಿಕ್ಕದೊಂದು ಮೈಲಿಗಲ್ಲನ್ನು ಸಾಧಿಸಿ ಪ್ರಗತಿಯ ಪಥದಲ್ಲಿ ಸಾಗುತ್ತಿರುವ ಸಂಸ್ಥೆ 12 ವರುಷ ಪೂರ್ಣಗೊಳಿಸಿ, ಇದೀಗ 13ನೇ ವರುಷಕ್ಕೆ ಕಾಲಿಟ್ಟಿದೆ.

ಗ್ರಾಮೀಣ ಹಾಗೂ ಪಟ್ಟಣ ಪ್ರದೇಶದ ವಿದ್ಯಾರ್ಥಿಗಳ ಜೀವನದ ಆಶಾಕಿರಣ ಈ ಪ್ರಗತಿ ಸ್ಟಡಿ ಸೆಂಟರ್.

ಪ್ರಗತಿಯೊಂದಿಗೆ ಕೈಜೋಡಿಸಿ, ಪ್ರಗತಿಯ ಪಥದಲ್ಲಿ ಸಾಗಿ, ಜೀವನದಲ್ಲಿ ಪ್ರಗತಿಯನ್ನು ಸಾಧಿಸಿ ಎಂಬುವುದೇ ನಮ್ಮ ಸಂಸ್ಥೆಯ ಮುಖ್ಯ ಧ್ಯೇಯವಾಗಿದೆ.

Click to comment

Leave a Reply

Your email address will not be published. Required fields are marked *

BANTWAL

ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!

Published

on

ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.

Continue Reading

LATEST NEWS

ವಧು ಕೇಳಿದ ಆ ಒಂದು ಪ್ರಶ್ನೆ; ತಬ್ಬಿಬ್ಬಾದ ವರ..ಮದುವೆ ಕ್ಯಾನ್ಸಲ್!

Published

on

ಮಂಗಳೂರು : ಇತ್ತೀಚಿನ ದಿನಗಳಲ್ಲಿ ಮದುವೆ ಎಂಬುದರ ಸಂಭ್ರಮ ಹೇಳತೀರದು. ಅದ್ದೂರಿತನವೇ ಮೇಲುಗೈ ಸಾಧಿಸುತ್ತೆ. ಈ ನಡುವೆ ಮದುವೆ ಮುರಿದು ಬೀಳುವ ಘಟನೆಯೂ ಹೆಚ್ಚುತ್ತಲಿದೆ. ಕ್ಷುಲ್ಲಕ ಕಾರಣ ಇರಬಹುದು ಅಥವಾ ಇನ್ಯಾವುದೇ ಕಾರಣ ಇರಬಹುದು ಮದುವೆ ಮುರಿದು ಬೀಳುತ್ತಿದೆ.


ಸಾವಿರ ಸುಳ್ಳು ಹೇಳಿ ಒಂದು ಮದುವೆ ಮಾಡು ಅನ್ನೋ ಗಾದೆ ಮಾತಿದೆ. ಅಂತೆಯೇ ಇಲ್ಲಿ ವರ ಸುಳ್ಳು ಹೇಳಿದ್ದಾನೆ. ಹಾಗಂತ ಮದುವೆ ಆಗಿಲ್ಲ. ಬದಲಿಗೆ ಸಿಕ್ಕಿ ಬಿದ್ದಿದ್ದಾನೆ. ವಧು ಕೇಳಿದ ಆ ಒಂದು ಪ್ರಶ್ನೆಯಿಂದ ಮದುವೆ ಮುರಿದು ಬಿದ್ದಿದೆ.

ಸುಳ್ಳು ಹೇಳಿ ತಗ್ಲಾಕ್ಕೊಂಡ!

ಸುಳ್ಳು ಹೇಳಿ ಮದುವೆಯಾಗಲು ಹೊರಟಿದ್ದ ವರನ ಅಸಲಿ ವಿಚಾರ ಗೊತ್ತಾಗಿದೆ. ಹೀಗಾಗಿ ಯುವತಿ ಮದುವೆ ನಿರಾಕರಿಸಿದ್ದಾಳೆ. ಅಂದಹಾಗೆ ಈ ಘಟನೆ ನಡೆದಿರೋದು ಉತ್ತರ ಪ್ರದೇಶದ ಪನ್ವಾರಿನಲ್ಲಿ. ಓದು, ಬರಹ ಏನೊಂದು ಬರದ ಅನಕ್ಷರಸ್ಥನೊಬ್ಬ ತಾನು ದೊಡ್ಡ ಸರ್ಕಾರಿ ಅಧಿಕಾರಿ ಎಂದು ಮದುವೆಯಾಗಲು ಹೊರಟಿದ್ದ.

ಆದರೆ, ಈ ಸತ್ಯ ಮದುವೆ ಮನೆಯಲ್ಲೇ ಬಯಲಾಗಿದೆ. ಸಂಶಯಗೊಂಡ ವಧು ವರನ ಬಳಿ, ಎರಡರ ಮಗ್ಗಿ ಹೇಳಲು ತಿಳಿಸಿದ್ದಾಳೆ. ಆಗ ಆತ ತಡವರಿಸಿದ್ದಾರೆ. ಹಾಗಾಗಿ, ಯುವತಿಗೆ ಸತ್ಯಾಂಶ ಗೊತ್ತಾಗಿದೆ. ಎರಡರ ಮಗ್ಗಿ ಬೇಸಿಕ್ ಗಣಿತವೂ ಗೊತ್ತಿಲ್ಲ, ನೀನು ಅಧಿಕಾರಿಯಾಗಲು ಹೇಗೆ ಸಾಧ್ಯ? ಎಂದು ಮದುವೆ ಮುರಿದುಕೊಂಡಿದ್ದಾಳೆ.

ಇದನ್ನೂ ಓದಿ : ಮತ್ತೆ ಬಾಯ್‌ ಫ್ರೆಂಡ್ ಬದಲಾಯಿಸಿದ ಶೃತಿ ಹಾಸನ್..!

ಇಷ್ಟಾದರೂ ಬಿಡದ ಕುಟುಂಬದವರು ವಧುವಿನ ಮನವೊಲಿಸುವ ಯತ್ನ ಮಾಡಿದ್ದಾರೆ. ಆದರೆ, ವಧು ಮಾತ್ರ ಇದಕ್ಕೆ ಒಪ್ಪಿಲ್ಲ. ಹೀಗಾಗಿ ವರದಕ್ಷಿಣೆಯನ್ನು ಹಿಂದಿರುಗಿಸಿದ್ದಾರೆ. ಪರಸ್ಪರ ನೀಡಿದ ಉಡುಗೊರೆ, ಆಭರಣಗಳನ್ನು ಹಿಂದಿರುಗಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

 

Continue Reading

LATEST NEWS

ಮತಗಟ್ಟೆಯನ್ನೇ ಧ್ವಂಸ ಮಾಡಿದ ಗ್ರಾಮಸ್ಥರು!

Published

on

ಚಾಮರಾಜನಗರ : ಲೋಕಸಭಾ ಚುನಾವಣೆಗೆ ನಡೆಯುತ್ತಿರುವ ಮತದಾನ ರಾಜ್ಯದೆಲ್ಲಡೆ ಸುಸೂತ್ರವಾಗಿಯೇ ನಡೆದಿದೆ. ಆದರೆ ಚಾಮರಾಜನಗರದಲ್ಲಿ ಮಾತ್ರ ಜನರು ಮತಗಟ್ಟೆಯನ್ನೇ ಪುಡಿ ಮಾಡಿ ಚುನಾವಣೆಯನ್ನು ಬಹಿಷ್ಕಾರ ಮಾಡಿದ್ದಾರೆ. ಚಾಮರಾಜನಗರದ ಲೋಕಸಭಾ ಕ್ಷೇತ್ರದ ಮಹದೇಶ್ವರ ಬೆಟ್ಟ ವ್ಯಾಪ್ತಿಯ ಐದು ಗ್ರಾಮಗಳಲ್ಲಿ ಮತದಾನ ಬಹಿಷ್ಕಾರ ಮಾಡಲಾಗಿತ್ತು. ಈ ವೇಳೆ ಇಂಡಿಗನತ್ತ ಎಂಬ ಗ್ರಾಮದಲ್ಲಿ ಮತಗಟ್ಟೆಯನ್ನು ಗ್ರಾಮಸ್ಥರು ಧ್ವಂಸ ಮಾಡಿದ್ದಾರೆ.


ಚುನಾವಣೆ ಬಹಿಷ್ಕಾರಿಸಿದ್ದ 5 ಗ್ರಾಮ :

ಮೂಲ ಸೌಕರ್ಯದಿಂದ ವಂಚಿತರಾಗಿದ್ದ ಈ ಗ್ರಾಮದ ಜನರು ತಮ್ಮ ಹಕ್ಕಿಗಾಗಿ ಹಲವು ಹೋರಾಟ ನಡೆಸಿದ್ದರು. ಆದರೆ, ಚುನಾವಣೆಯಲ್ಲಿ ಆಶ್ವಾಸನೆ ನೀಡಿ ಹೋಗುವ ಜನ ಪ್ರತಿನಿಧಿಗಳು ಬಳಿಕ ಇತ್ತ ಸುಳಿಯುತ್ತಿರಲಿಲ್ಲ. ಹೀಗಾಗಿ ಐದು ಗ್ರಾಮಗಳ ಜನರು ಈ ಬಾರಿ ಮತ ಕೇಳಲು ಬರಬೇಡಿ, ನಾವು ಮತದಾನ ಮಾಡೋದಿಲ್ಲ ಎಂದಿದ್ದರು.

ಚುನಾವಣೆ ಬಹಿಷ್ಕಾರ ಮಾಡಿದ್ದರೂ ಕಾನೂನು ರೀತಿಯಲ್ಲಿ ಗ್ರಾಮದಲ್ಲಿ ಮತಗಟ್ಟೆಯನ್ನು ತೆರೆಯಲಾಗಿತ್ತು. ಇಂಡಿಗನತ್ತ, ತೇಕಣೆ, ಮೆಂದಾರೆ ಈ ಗ್ರಾಮದಲ್ಲಿ ಯಾವೊಬ್ಬ ಗ್ರಾಮಸ್ಥರೂ ಮತದಾನ ಮಾಡಿಲ್ಲ. ಇನ್ನು ಪಡಸಲನತ್ತ ಗ್ರಾಮದಲ್ಲಿ 85 ಮತದಾರು ಇದ್ದು ಇಬ್ಬರು ಮತದಾನ ಮಾಡಿದ್ದಾಗಿ ಮಾಹಿತಿ ಲಭ್ಯವಾಗಿದೆ.

ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆ ತೆರೆಯುವುದಕ್ಕೆ ಗ್ರಾಮಸ್ಥರು ಸಾಕಷ್ಟು ವಿರೋಧ ವ್ಯಕ್ತಪಡಿಸಿದ್ದರು. ಆದಾಗ್ಯೂ, ಚುನಾವಣಾ ಆಯೋಗ ಇಲ್ಲಿ ಮತಗಟ್ಟೆ ತೆರೆದು ‘ಮತದಾನ ಮಾಡಲು ಬನ್ನಿ’ ಎಂದು ಜನರನ್ನು ಕರೆದಿದ್ದರು. ಆದ್ರೆ ರೊಚ್ಚಿಗೆದ್ದ ಜನರು ಮತದಾನ ಕೇಂದ್ರದ ಒಳಗೆ ನುಗ್ಗಿ ಇವಿಎಂ ಮೆಷಿನ್ ಸಹಿತ ಮೇಜು ಕುರ್ಚಿ ಎಲ್ಲವನ್ನೂ ಧ್ವಂಸ ಮಾಡಿದ್ದಾರೆ.

ಕನಿಷ್ಠ ಮೂಲಭೂತ ಸೌಕರ್ಯವಾದ ಕುಡಿಯುವ ನೀರು, ರಸ್ತೆ, ವಿದ್ಯುತ್, ಆರೋಗ್ಯ, ಶಿಕ್ಷಣ ಯಾವುದೂ ಇಲ್ಲದ ನಮ್ಮ ಗ್ರಾಮದ ಮತ ಯಾಕೆ ಬೇಕು? ಎಂದು ಜನ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ : ಸುಡುಬಿಸಿಲಿನಲ್ಲೂ ಮತದಾನ; ಇಹಲೋಕ ತ್ಯಜಿಸಿದ 6 ಮಂದಿ

ಪೊಲೀಸ್ ಲಾಠಿ ಚಾರ್ಜ್…ಕೆರಳಿದ ಗ್ರಾಮಸ್ಥರು!

ಜನರು ಮತಗಟ್ಟೆ ಧ್ವಂಸಕ್ಕೆ ಮುಂದಾಗುತ್ತಿದ್ದಂತೆ ಭದ್ರತೆಯಲ್ಲಿದ್ದ ಪೊಲೀಸರು ಲಾಠಿ ಚಾರ್ಚ್ ನಡೆಸಿದ್ದಾರೆ. ಈ ವೇಳೆ ಅಧಿಕಾರಿಗಳಿಗೆ ಹಾಗೂ ಪೊಲೀಸರಿಗೆ ಹಲ್ಲೆ ಮಾಡಿದ ಜನರು ಬಳಿಕ ಕಲ್ಲು ತೂರಾಟ ನಡೆಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಸಾರ್ವಜನಿಕರು ಹಾಗೂ ಅಧಿಕಾರಿಗಳಿಗೆ ಗಾಯಗಳಾಗಿದೆ.

ಪೊಲೀಸರು ಮಹಿಳೆಯರು ಪುರುಷರು ಎಂದು ನೋಡದೆ ಎಲ್ಲರ ಮೇಲೂ ಲಾಠಿ ಚಾರ್ಚ್ ಮಾಡಿರುವುದು ಗ್ರಾಮಸ್ಥರನ್ನು ಕೆರಳಿಸಿದೆ. ಸದ್ಯಕ್ಕೆ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಮತದಾನ ಕೇಂದ್ರವನ್ನು ಬಂದ್ ಮಾಡಲಾಗಿದೆ.

Continue Reading

LATEST NEWS

Trending