LATEST NEWS
ಇಳಕಲ್ ನಲ್ಲಿ ನಡೆಯಿತು ಅಚ್ಚರಿ ಘಟನೆ; ಅಂ*ತ್ಯಸಂಸ್ಕಾರದ ವೇಳೆ ಕೆಮ್ಮಿದ ಮಗು!
ಮಂಗಳೂರು/ಬಾಗಲಕೋಟೆ : ಪ್ರಪಂಚದಲ್ಲಿ ವಿಚಿತ್ರ ವಿದ್ಯಮಾನಗಳು ನಡೆಯುತ್ತಿರುತ್ತದೆ. ಇದೀಗ ಬಾಗಲಕೋಟೆಯಲ್ಲಿ ವಿಸ್ಮಯಕಾರಿ ಘಟನೆ ನಡೆದಿದೆ. ಹೌದು, ಅವರೆಲ್ಲ ಮಗುವನ್ನು ಕಳೆದುಕೊಂಡ ದುಃಖದಲ್ಲಿದ್ದರು. ಮಗು ಮೃ*ತಪಟ್ಟಿದೆ ಎಂದು ಭಾವಿಸಿದ ಪೋಷಕರು ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಸಿದ್ದರು. ಅಷ್ಟರಲ್ಲಿ ಮಗು ಕೆಮ್ಮಿದೆ. ಈ ವಿಚಿತ್ರ ಘಟನೆ ನಡೆದಿರೋದು ಬಾಗಲಕೋಟೆ ಜಿಲ್ಲೆಯ ಇಳಕಲ್ನಲ್ಲಿ.
ಬಸವರಾಜ ಭಜಂತ್ರಿ ಹಾಗೂ ನೀಲಮ್ಮ ಎಂಬ ದಂಪತಿಯ ದ್ಯಾಮಣ್ಣ ಭಜಂತ್ರಿ ಎಂಬ 13 ತಿಂಗಳ ಹಸುಗೂಸು ಉಸಿರಾಟ ತೊಂದರೆ, ಹೃದಯ ಸಂಬಂಧಿ ಖಾಯಿಲೆ ಸೇರಿದಂತೆ ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿತ್ತು. ಹುಟ್ಟಿದಾಗಿನಿಂದ ಮಗು ಸಮಸ್ಯೆ ಅನಾರೋಗ್ಯ ಪೀಡಿತವಾಗಿತ್ತು. ಕಳೆದ ನಾಲ್ಕು ದಿನಗಳಿಂದ ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಮಗು ಬದುಕುವುದು ಕಷ್ಟ ಎಂದು ಹೇಳಿದ್ದರು. ಹೀಗಾಗಿ ಮಗುವನ್ನು ಪೋಷಕರು ಆಸ್ಪತ್ರೆಯಿಂದ ವಾಪಸ್ ಕರೆದೊಯ್ದಿದ್ದಾರೆ. ಅಷ್ಟರಲ್ಲಿ ಮಗು ಪ್ರಜ್ಞೆ ತಪ್ಪಿತ್ತು.
ಇದನ್ನೂ ಓದಿ : ಮದುವೆ ಗೌನ್ ನಲ್ಲಿ ಮಿಂಚಬೇಕಿದ್ದ ಯುವತಿ ಗ್ಯಾಸ್ಟ್ರಿಕ್ ಬಲೂನ್ ಸರ್ಜರಿಯಿಂದ ಸಾ*ವು!
ಮಗು ಮೃತಪಟ್ಟಿದೆ ಎಂದು ಭಾವಿಸಿದ ಪೋಷಕರು ಸಂಬಂಧಿಕರಿಗೆ ಸಾ*ವಿನ ಬಗ್ಗೆ ವಿಚಾರ ಮುಟ್ಟಿಸಿದ್ದಾರೆ. ಹಾಗಾಗಿ ಸಂಬಂಧಿಕರೆಲ್ಲ ಮನೆಗೆ ಆಗಮಿಸಿ ಅಂ*ತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಸುತ್ತಿದ್ದರು. ಅಷ್ಟರಲ್ಲಿ ಮಗು ಕೆಮ್ಮಿದೆ. ಇಹಲೋಕ ತ್ಯಜಿಸಿದ್ದ ಮಗು ಪುನಃ ಬದುಕಿದೆ. ಸದ್ಯ ಇಳಕಲ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.
LATEST NEWS
ಉಪಮುಖ್ಯಮಂತ್ರಿ ಕಚೇರಿ ಎದುರು ಆತ್ಮಹ*ತ್ಯೆಗೆ ಯತ್ನಿಸಿದ ಮಹಿಳೆ
ಮಂಗಳೂರು/ಶ್ರೀಕಾಕುಳಂ : ಮಹಿಳೆಯೊಬ್ಬರು ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಕಚೇರಿ ಎದುರು ಆತ್ಮಹ*ತ್ಯೆಗೆ ಯತ್ನಿಸಿರುವ ಘಟನೆ ವರದಿಯಾಗಿದೆ. ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರ ಕ್ಯಾಂಪ್ ಕಚೇರಿ ಬಳಿ ಮಹಿಳೆಯೊಬ್ಬರು ಜೀವಾಂತ್ಯಗೊಳಿಸಲು ನಿರ್ಧರಿಸಿದ್ದರು. ಈ ಸಂದರ್ಭ ಪೊಲೀಸರು ತಕ್ಷಣ ಮಧ್ಯಪ್ರವೇಶಿಸಿ ಅವರನ್ನು ರಕ್ಷಿಸಿದ್ದಾರೆ.
ಶ್ರೀಕಾಕುಳಂ ಜಿಲ್ಲೆಯ ನಿವಾಸಿ, ದುರ್ಗಾದೇವಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ಆಕೆ ಕ್ಯಾಂಪ್ ಆಫೀಸ್ ಬಳಿಯಿರುವ ಕಟ್ಟಡವನ್ನು ಏರಿ ಅಲ್ಲಿಂದ ಹಾರಿ ಪ್ರಾ*ಣ ಕಳೆದುಕೊಳ್ಳಲು ಯತ್ನಿಸಿದ್ದಳು.
ಕಾರಣ ಏನು ?
ಶ್ರೀಕಾಕುಳಂನಲ್ಲಿ ವೈಎಸ್ಆರ್ಸಿಪಿ ಪಕ್ಷದ ನಾಯಕರ ಒತ್ತುವರಿಯಿಂದ ತನ್ನ ಭೂಮಿಯನ್ನು ಕಳೆದುಕೊಂಡಿದ್ದೇನೆ ಎಂದು ಅವರು ಮಹಿಳೆ ಆರೋಪಿಸಿದ್ದಾರೆ. ಪದೇ ಪದೇ ಮನವಿ ಮಾಡಿದರೂ ಪಕ್ಷದ ಮುಖಂಡರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹೇಳಿದ್ದಾರೆ.
ವೈಎಸ್ಆರ್ಸಿಪಿ ನಾಯಕರ ವಿರುದ್ಧ ಭೂಕಬಳಿಕೆ ಪ್ರಕರಣಗಳ ಆರೋಪಗಳ ಕುರಿತ ಸುದ್ದಿ ಎಲ್ಲೆಡೆ ಹರಿದಾಡುತ್ತಿದ್ದಂತೆ ಇದೀಗ ಈ ಘಟನೆ ನಡೆದಿದೆ.
ಇದನ್ನೂ ಓದಿ : ರಾಜ್ಯದಲ್ಲಿ ಐದು ದಿನಗಳ ಕಾಲ ಭರ್ಜರಿ ಮಳೆಯ ಎಚ್ಚರಿಕೆ
ಇತ್ತೀಚೆಗೆ, ಗುಂಟೂರು ಜಿಲ್ಲೆಯಲ್ಲಿ ವೈಎಸ್ಆರ್ಸಿಪಿ ಪಕ್ಷದ ಕಚೇರಿಯನ್ನು ಕೆಡವಲಾಗಿತ್ತು. ವಿಶಾಖಪಟ್ಟಣಂನಲ್ಲಿ ಇನ್ನೂ ಎರಡು ಪಕ್ಷದ ಕಚೇರಿಗಳಿಗೆ ನೋಟಿಸ್ ನೀಡಲಾಗಿತ್ತು.
LATEST NEWS
ಲೋಕಸಭಾ ಸ್ಪೀಕರ್ ಆಗಿ ಓಂ ಬಿರ್ಲಾ ಮರು ಆಯ್ಕೆ
ನವದೆಹಲಿ: ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಲೋಕಸಭೆಯ ಸ್ಪೀಕರ್ ಸ್ಥಾನಕ್ಕೆ ಚುನಾವಣೆ ನಡೆದು ಓಂ ಬಿರ್ಲಾ ಅವರನ್ನು ಸ್ಪೀಕರ್ ಆಗಿ ಮರು ಆಯ್ಕೆಯಾಗಿದ್ದಾರೆ.
ಡೆಪ್ಯುಟಿ ಸ್ಪೀಕರ್ ಸ್ಥಾನವನ್ನು ವಿರೋಧ ಪಕ್ಷಗಳಿಗೆ ಬಿಟ್ಟು ಕೊಡಲು ಆಡಳಿತ ಪಕ್ಷ ಹಿಂದೇಟು ಹಾಕಿದ ಕಾರಣ ವಿರೋಧ ಪಕ್ಷ ಸ್ಪೀಕರ್ ಸ್ಥಾನಕ್ಕೆ ಕಾಂಗ್ರೆಸ್ ನಾಯಕ ಕೆ. ಸುರೇಶ್ ಅವರನ್ನು ಕಣಕ್ಕೆ ಇಳಿಸಿತ್ತು. ಸ್ಪೀಕರ್ ಗೆಲುವಿಗೆ ಬೇಕಾದ ಸಂಖ್ಯಾ ಬಲ ಇದ್ದರೂ ಕೂಡಾ ಸರ್ಕಾರದ ವಿರುದ್ಧ ತಮ್ಮ ಅಸಮಾಧಾನ ವ್ಯಕ್ತಪಡಿಸಿ ವಿರೋಧ ಪಕ್ಷ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿತ್ತು.
ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಸಧನದಲ್ಲಿ ಸ್ಪೀಕರ್ ಹುದ್ದೆಗಾಗಿ ಓಂ ಬಿರ್ಲಾ ಅವರನ್ನು ಸೂಚಿಸಿದ್ದರು ಹಾಗೂ . ಹಂಗಾಮಿ ಸ್ಪೀಕರ್ ಭರ್ತೃಹರಿ ಅವರು ಚುನಾವಣಾ ಪ್ರಕ್ರಿಯೆ ನಡೆಸಿ ಓಂ ಬಿರ್ಲಾ ಅವರನ್ನು ಸ್ಪೀಕರ್ ಆಗಿ ಘೋಷಣೆ ಮಾಡಿದ್ದಾರೆ. ನೂತನ ಸ್ಪೀಕರ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ, ವಿರೋಧಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜ್ ವಿಶೇಷ ಗೌರವ ಸಲ್ಲಿಸಿದ್ದಾರೆ.
DAKSHINA KANNADA
ರಾಜ್ಯದಲ್ಲಿ ಐದು ದಿನಗಳ ಕಾಲ ಭರ್ಜರಿ ಮಳೆಯ ಎಚ್ಚರಿಕೆ
ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಭಾಗಗಳಲ್ಲೂ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮುಂದಿನ ಐದು ದಿನಗಳ ಕಾಲ ನಿರಂತರ ಮಳೆಯಾಗಲಿದ್ದು, ಎಚ್ಚರದಿಂದ ಇರುವಂತೆ ಸೂಚಿಸಿದೆ.
ಕರಾವಳಿ ಹಾಗೂ ದಕ್ಷಿಣ ಒಳನಾಡು ಪ್ರದೇಶಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಉತ್ತರ ಒಳನಾಡು ಪ್ರದೇಶಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.
ಎಲ್ಲೆಲ್ಲಿ ಆರೆಂಜ್ ಅಲರ್ಟ್?
ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಮಂಡ್ಯ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಬೆಂಗಳೂರು ಗ್ರಾಮಾಂತರ
ಎಲ್ಲೆಲ್ಲಿ ಯೆಲ್ಲೋ ಅಲರ್ಟ್?
ಬಾಗಲಕೋಟೆ, ಗದಗ, ಬೀದರ್, ರಾಯಚೂರು, ಬಳ್ಳಾರಿ, ಯಾದಗಿರಿ