ಮಂಗಳೂರು : ರಾಷ್ಟ್ರೀಯ ಹೆದ್ದಾರಿ 66 ಕೊಲ್ನಾಡು ಗುಂಡಾಲು ಗುತ್ತು ಬಳಿ ಮಂಗಳೂರಿನಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಕಾರಿನ ಜೊತೆ ಅಪಘಾತ ತಪ್ಪಿಸಲು ಯತ್ನಿಸಿ, ಟಿಪ್ಪರ್ ಹೆದ್ದಾರಿ ಬದಿಯ ಮೈಲಿ ಗಲ್ಲಿಗೆ ಡಿಕ್ಕಿ ಹೊಡೆದು ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದಿದೆ.
ಅಪಘಾತದ ರಭಸಕ್ಕೆ ಟಿಪ್ಪರ್ ಸಂಪೂರ್ಣ ಹಾನಿಯಾಗಿದ್ದು ಚಾಲಕ ರಾಜಣ್ಣ ಅಲ್ಪ ಸ್ವಲ್ಪ ಗಾಯಗಳೊಂದಿಗೆ ಪವಾಡ ಸದೃಶ ಪಾರಾಗಿದ್ದಾರೆ.
ಅಪಘಾತದಿಂದ ಕೆಲ ಹೊತ್ತು ಕಾರಿನ ಚಾಲಕ ಜೋಸೆಫ್ ನಡುವೆ ಸ್ಥಳೀಯರು ಮಾತಿನ ಚಕಮಕಿ ನಡೆದಿದ್ದು ಬಳಿಕ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.
ಬಳಿಕ ಕ್ರೇನ್ ಮೂಲಕ ಟಿಪ್ಪರ್ ನ್ನು ತೆರವುಗೊಳಿಸಲಾಯಿತು