ದಕ್ಷಿಣ ಕನ್ನಡ ಜಿಲ್ಲೆಯಿಂದ ಒಟ್ಟು16 ರೈಲುಗಳಲ್ಲಿ ತಮ್ಮೂರಿಗೆ ತೆರಳಿದ 21888 ವಲಸೆ ಕಾರ್ಮಿಕರು
Published
5 years agoon
By
Adminದಕ್ಷಿಣ ಕನ್ನಡ ಜಿಲ್ಲೆಯಿಂದ ಒಟ್ಟು16 ರೈಲುಗಳಲ್ಲಿ ತಮ್ಮೂರಿಗೆ ತೆರಳಿದ 21888 ವಲಸೆ ಕಾರ್ಮಿಕರು
ಮಂಗಳೂರು: ಲಾಕ್ ಡೌನ್ ಅವಧಿಯಲ್ಲಿ ತಮ್ಮ ಸ್ವಂತ ರಾಜ್ಯಗಳಿಗೆ ತೆರಳಲು ಬಯಸಿದ ಹೊರರಾಜ್ಯದ ವಲಸೆ ಕಾರ್ಮಿಕರಿಗೆ ರೈಲ್ವೇ ಪ್ರಯಾಣದ ವ್ಯವಸ್ಥೆ ಮಾಡಲಾಗಿದ್ದು, ಇದುವರೆಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ 16 ರೈಲುಗಳ ಮೂಲಕ 21888 ಮಂದಿ ತೆರಳಿದ್ದಾರೆ.
ಬಿಹಾರ, ಉತ್ತರ ಪ್ರದೇಶ, ಜಾರ್ಖಂಡ್ ರಾಜ್ಯಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ವಲಸೆ ಕಾರ್ಮಿಕರು ತೆರಳಿದ್ದಾರೆ.
ಈ ಪೈಕಿ ಬಿಹಾರ – 5, ಜಾರ್ಖಂಡ್ -5, ಉತ್ತರ ಪ್ರದೇಶ -5 ಹಾಗೂ ರಾಜಸ್ಥಾನಕ್ಕೆ 1 ರೈಲು ಜಿಲ್ಲೆಯಿಂದ ತೆರಳಿದೆ.
ಪ್ರತೀ ರೈಲಿನಲ್ಲಿ ಸರಾಸರಿ 1400 ರಷ್ಟು ಪ್ರಯಾಣಿಕರು ಸಂಚರಿಸಿದ್ದಾರೆ. ಮಂಗಳೂರು ಜಂಕ್ಷನ್ ಹಾಗೂ ಪುತ್ತೂರು ರೈಲ್ವೇ ನಿಲ್ದಾಣಗಳಿಂದ ರೈಲು ಹೊರಟಿರುತ್ತದೆ.
ಪ್ರಯಾಣಿಕರಿಂದ ರೈಲ್ವೇ ಇಲಾಖೆ ನಿಗದಿಪಡಿಸಿದ ದರ ವಸೂಲಿ:
ಮೇ 9ರಿಂದ ರೈಲು ಸಂಚಾರ ಆರಂಭವಾಗಿದೆ. ವಲಸೆ ಕಾರ್ಮಿಕರನ್ನು ನಿಗದಿತ ಸ್ಥಳಗಳಿಂದ ರೈಲು ನಿಲ್ದಾಣಕ್ಕೆ ಕರೆದುಕೊಂಡು ಬರಲು ಜಿಲ್ಲಾಡಳಿತ ವತಿಯಿಂದ ಕೆ.ಎಸ್.ಆರ್.ಟಿ.ಸಿ ಬಸ್ ವ್ಯವಸ್ಥೆ ಮಾಡಲಾಗಿತ್ತು.
ಪ್ರತೀ ಬಸ್ಸಿಗೆ ಓರ್ವ ಜಿಲ್ಲಾ ಮಟ್ಟದ ಅಧಿಕಾರಿಯನ್ನು ನೋಡಲ್ ಆಗಿ ನೇಮಿಸಿ, ಕಂದಾಯ ಇಲಾಖೆಯ ಓರ್ವ ಸಿಬ್ಬಂದಿ ಹಾಗೂ ಇಬ್ಬರು ಪೊಲೀಸರನ್ನು ಸಹಾಯಕರನ್ನಾಗಿ ನಿಯೋಜಿಸಲಾಗಿತ್ತು.
ವಲಸೆ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿರುವ ಸುರತ್ಕಲ್, ಬೈಕಂಪಾಡಿ, ಪಣಂಬೂರು, ಜೋಕಟ್ಟೆ, ಪಂಜಿಮೊಗರು, ಉಳ್ಳಾಲ, ಕಂಕನಾಡಿ,
ಬಂದರ್ ಮತ್ತಿತರ ಸ್ಥಳಗಳಿಗೆ ತೆರಳಿ, ಬಸ್ಸಿನಲ್ಲಿ ಕರೆದುಕೊಂಡು, ನೇರವಾಗಿ ರೈಲು ನಿಲ್ದಾಣಕ್ಕೆ ಬರಲು ವ್ಯವಸ್ಥೆ ಮಾಡಲಾಗಿತ್ತು.
ಬಸ್ಸಿಗೆ ಹತ್ತುವ ಮೊದಲೇ ಪ್ರಯಾಣಿಕರ ವಿಳಾಸ, ತಲುಪುವ ಸ್ಥಳ, ಆಧಾರ್ ಸಂಖ್ಯೆ ಸೇರಿದಂತೆ ಸಂಪೂರ್ಣ ವಿವರಗಳನ್ನು ಆಯಾ ಅಧಿಕಾರಿಗಳು, ದಾಖಲೆಗಳನು ಪರಿಶೀಲಿಸಿ ಚಾರ್ಟ್ನಲ್ಲಿ ನಮೂದಿಸುತ್ತಾರೆ.
ಆಯಾ ಅಧಿಕಾರಿಗಳು ಈ ಚಾರ್ಟನ್ನು ಕೂಡಲೇ ಜಿಲ್ಲಾಧಿಕಾರಿ ಕಚೇರಿಗೆ ಕಳುಹಿಸಿದ ನಂತರ ಅದನ್ನು ಕ್ರೋಢೀಕರಿಸಿ,
ಆಯಾ ರೈಲಿನಲ್ಲಿ ಹೋಗುವ ಸಂಪೂರ್ಣ ಪ್ರಯಾಣಿಕರ ವಿವರಗಳನ್ನು ಸಂಬಂಧಪಟ್ಟ ರಾಜ್ಯ ಸರಕಾರಕ್ಕೆ ಜಿಲ್ಲಾಧಿಕಾರಿ ಕಚೇರಿಯಿಂದ ಕಳುಹಿಸಬೇಕಾಗುತ್ತದೆ.
ಈ ಚಾರ್ಟ್ ಬಂದ ನಂತರವೇ ಅಲ್ಲಿನ ರಾಜ್ಯ ಸರಕಾರಗಳು ಇಲ್ಲಿಂದ ಹೋದ ಪ್ರಯಾಣಿಕರನ್ನು ಸ್ವೀಕರಿಸಲು ವ್ಯವಸ್ಥೆ ಮಾಡುತ್ತದೆ.
ಬಸ್ಸಿಗೆ ಹತ್ತುವ ಮೊದಲೇ ಆರೋಗ್ಯ ಇಲಾಖೆಯ ತಂಡವು, ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಿ, ನಂತರ ರೈಲು ನಿಲ್ದಾಣಕ್ಕೆ ಕರೆದುಕೊಂಡು ಬಂದು,
ರೈಲಿನಲ್ಲಿ ನಿಗದಿತ ಬೋಗಿಯಲ್ಲಿ ಪ್ರಯಾಣಿಕರು ಆಸೀನರಾಗುವವರೆಗೆ ನೋಡಲ್ ಅಧಿಕಾರಿಗಳು ಉಸ್ತುವಾರಿ ನೋಡಿಕೊಳ್ಳುತ್ತಾರೆ.
ರೈಲು ನಿಲ್ದಾಣದಲ್ಲಿ ವಲಸೆ ಕಾರ್ಮಿಕರಿಗೆ ಉಚಿತ ಊಟದ ಪೊಟ್ಟಣ ಹಾಗೂ ನೀರಿನ ಬಾಟಲ್ ಗಳನ್ನು ವಿತರಿಸಲಾಗಿದೆ.
ಪ್ರಯಾಣಿಕರು ರೈಲಿನಲ್ಲಿ ತಮ್ಮ ನಿಗದಿತ ಸ್ಥಳ ತಲುಪಲು 2-3 ದಿನ ತಗಲುವುದರಿಂದ ಪ್ರಯಾಣ ಹಾದಿಯ ಪ್ರಮುಖ ಜಂಕ್ಷನ್ಗಳಲ್ಲಿ ಊಟೋಪಚಾರ ವ್ಯವಸ್ಥೆಯನ್ನು ಮಾಡಲಾಗಿದೆ.
ಸದ್ಯ ಜಿಲ್ಲೆಯಲ್ಲಿ ಪಶ್ಚಿಮ ಬಂಗಾಲ ಹಾಗೂ ಒರಿಸ್ಸಾ ರಾಜ್ಯಗಳ ವಲಸೆ ಕಾರ್ಮಿಕರು ಮಾತ್ರ ತೆರಳಲು ಬಾಕಿ ಇದ್ದು, ಶೀಘ್ರದಲ್ಲಿಯೇ ಅವರಿಗೂ ರೈಲಿನ ವ್ಯವಸ್ಥೆಯಾಗಲಿದೆ.
ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಈ ಕಾರ್ಯದಲ್ಲಿ ಕಾರ್ಮಿಕ ಇಲಾಖೆಯ ಅಧಿಕಾರಿಗಳಾದ ನಾಗರಾಜ್,
ವಿಲ್ಮಾ, ಇಲಾಖೆಯ ಸಿಬ್ಬಂದಿಗಳು, ಪೊಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
ಮೂಡಾ ಆಯುಕ್ತ ದಿನೇಶ್ ಕುಮಾರ್, ಈ ಎಲ್ಲಾ ಪ್ರಕ್ರಿಯೆಗಳ ನೋಡಲ್ ಅಧಿಕಾರಿಯಾಗಿದ್ದರು.
You may like
BIG BOSS
ಮಿಡ್ ವೀಕ್ ಎಲಿಮಿನೇಷನ್ ನಿಂದ ಬಚಾವ್ ಆಗುವವರು ಯಾರು ?
Published
14 hours agoon
14/01/2025By
NEWS DESK3ಬಿಗ್ ಬಾಸ್ ಫಿನಾಲೆಗೆ ಇನ್ನೊಂದು ವಾರವಷ್ಟೇ ಬಾಕಿ ಉಳಿದಿದೆ. ಬಿಗ್ ಬಾಸ್ ಮನೆಯಲೀಗ ಮಿಡ್ ವೀಕ್ ಎಲಿಮಿನೇಷನ್ ಟೆನ್ಶನ್ ಶುರುವಾಗಿದೆ.
ಇದೇ ಹೊತ್ತಲ್ಲಿ ಬಿಗ್ ಬಾಸ್ ಮನೆಯಿಂದ ಆಚೆ ಹೋಗಲು 7 ಮಂದಿ ನಾಮಿನೇಟ್ ಆಗಿದ್ದಾರೆ. ಹೀಗಾಗಿ 7 ಸ್ಪರ್ಧಿಗಳ ಎದೆಯಲ್ಲಿ ನಡುಕ ಶುರುವಾಗಿದೆ. ನಾಮಿನೇಷನ್ ನಿಂದ ಪಾರಾಗಲು ಬಿಗ್ ಬಾಸ್ ಸ್ಪರ್ಧಿಗಳಿಗೆ ಕಾಲ ಕಾಲಕ್ಕೆ ಟಾಸ್ಕ್ ನೀಡಲಿದ್ದಾರೆ.
ಇದನ್ನೂ ಓದಿ: ಚೈತ್ರಾ ಕುಂದಾಪುರ ಪ್ರಕಾರ ಈ ಸಲ ಬಿಗ್ ಬಾಸ್ ವಿನ್ನರ್ ಇವರೇ ?
ಬಿಗ್ ಬಾಸ್ ಕೊಟ್ಟ ಟಾಸ್ಕ್ ಯಾರು ಗೆಲ್ಲುತ್ತಾರೋ ಅವರು ಈ ವಾರದ ನಾಮಿನೇಷನ್ ನಿಂದ ಪಾರಾಗಲಿದ್ದಾರೆ.
ಬಿಗ್ ಬಾಸ್ ಮನೆಯಲ್ಲಿ ಒಟ್ಟು 8 ಸ್ಪರ್ಧಿಗಳು ಉಳಿದುಕೊಂಡಿದ್ದು, ಈ ಪೈಕಿ ಒಬ್ಬರು ಮಿಡ್ ವೀಕ್ ಎಲಿಮಿನೇಟ್ ಆಗಲಿದ್ದಾರೆ. ಇನ್ನು ಇಬ್ಬರು ವಾರಾಂತ್ಯಕ್ಕೆ ಬಿಗ್ ಬಾಸ್ ಮನೆಯಿಂದ ಹೊರ ಬರಲಿದ್ದಾರೆ. ಕೊನೆಗೆ ವಾರಾಂತ್ಯದಲ್ಲಿ ಮೂರು ಜನ ಬಿಗ್ ಬಾಸ್ ಮನೆಯಿಂದ ಹೊರಬರಲಿದ್ದಾರೆ.
ಹೀಗಾಗಿ ಎಲ್ಲಾ ಸ್ಪರ್ಧಿಗಳು ಬಿಗ್ ಬಾಸ್ ಕೊಟ್ಟ ಟಾಸ್ಕ್ ಗಳನ್ನು ಕಷ್ಟಪಟ್ಟು ಆಡುತ್ತಿದ್ದಾರೆ. ಅದರಲ್ಲೂ ರಿಲೀಸ್ ಆದ ಪ್ರೋಮೋದಲ್ಲಿ, ಇದು ಮಿಡ್ ವೀಕ್ ಎಲಿಮಿನೇಷನ್ ನಿಂದ ತಮ್ಮನ್ನು ತಾವು ಉಳಿಸಿಕೊಳ್ಳಲು ಇರುವ ಕೊನೆಯ ಟಾಸ್ಕ್ ಎಂದು ಭಯ ಹುಟ್ಟಿಸಿದ್ದಾರೆ.
LATEST NEWS
ಮ*ರಣದ ನಂತರ ಏನು ಎಂದು ಹುಡುಕಿದಾತ ಸಾ*ವಿಗೆ ಶರಣಾದ!
Published
14 hours agoon
14/01/2025By
NEWS DESK4ಮಂಗಳೂರು/ಲಖನೌ: ಇತ್ತೀಚಿನ ದಿನಗಳಲ್ಲಿ ಆ*ತ್ಮಹ*ತ್ಯೆ ಪ್ರಕರಣಗಳು ಹೆಚ್ಚುತ್ತಿದ್ದು, ಅದರಲ್ಲೂ ಮಕ್ಕಳು ಸಾ*ವಿಗೆ ಶರಣಾಗುತ್ತಿರೋದು ವಿಪರ್ಯಾಸ. ಸಣ್ಣ ಪುಟ್ಟ ವಿಚಾರಗಳಿಗೆ ಸಾ*ವಿನ ದಾರಿ ಹಿಡಿಯುತ್ತಿರೋರು ಅಧಿಕ. ಉತ್ತರಪ್ರದೇಶದ ಮೀರತ್ನಲ್ಲಿ ಬಾಲಕನೋರ್ವ ಆ*ತ್ಮಹ*ತ್ಯೆ ಮಾಡಿಕೊಂಡಿದ್ದಾನೆ. ಆತ ಗೂಗಲ್ ಹಾಗೂ ಯೂಟ್ಯೂಬ್ನಲ್ಲಿ ಹುಡುಕಾಡಿರುವ ವಿಚಾರ ಶಾ*ಕ್ ಕೊಟ್ಟಿದೆ.
9ನೇ ತರಗತಿಯಲ್ಲಿ ಓದುತ್ತಿದ್ದ ಯುವರಾಜ್ ಮೃ*ತ ಬಾಲಕ. ಈತ ಪಿಸ್ತೂಲ್ನಿಂದ ಗುಂ*ಡು ಹಾ*ರಿಸಿಕೊಂಡು ಆ*ತ್ಮಹ*ತ್ಯೆ ಮಾಡಿಕೊಂಡಿದ್ದಾನೆ. ಇದಕ್ಕೂ ಮುಂಚೆ ಆತ ‘ಗರುಡ ಪುರಾಣ’ದ ಬಗ್ಗೆ ಹುಡುಕಾಟ ನಡೆಸಿದ್ದಾನೆ ಎನ್ನಲಾಗಿದೆ. ಯೂಟ್ಯೂಬ್, ಗೂಗಲ್ಗಳಲ್ಲಿ ಗರುಡ ಪುರಾಣದ ಬಗ್ಗೆ ಹುಡುಕಿದ್ದಾನಂತೆ. ಸಾ*ವಿನ ರೀತಿ, ಸಾ*ವಿನ ನಂತರ ಆತ್ಮ ಎಲ್ಲಿಗೆ ಹೋಗುತ್ತದೆ ಎಂಬ ಬಗ್ಗೆ ಕುತೂಹಲ ಹೊಂದಿದ್ದ ಎಂಬುದು ಆತನ ಸರ್ಚ್ ಇಂಜಿನ್ನಿಂದ ತಿಳಿದುಬಂದಿದೆ. ಆದರೆ, ಯಾವುದೇ ಡೆ*ತ್ ನೋಟ್ ಪತ್ತೆಯಾಗಿಲ್ಲ.
ಇದನ್ನೂ ಓದಿ : ಚೈತ್ರಾ ಕುಂದಾಪುರ ಪ್ರಕಾರ ಈ ಸಲ ಬಿಗ್ ಬಾಸ್ ವಿನ್ನರ್ ಇವರೇ ?
ಬುದ್ದಿ ಮಾತು…ಬೈಕ್ ಮಾರಾಟ :
ಓದಿನತ್ತ ಬಾಲಕ ಗಮನ ಕೊಡುತ್ತಿರಲಿಲ್ಲ. ಹೀಗಾಗಿ ಆತನ ತಾಯಿ ಗದರಿದ್ದರಂತೆ. ಅಲ್ಲದೇ, ಆತ ತನ್ನ ಬಳಿಯಿದ್ದ ದ್ವಿಚಕ್ರವಾಹನದ ಬಗ್ಗೆ ಅತಿಯಾದ ವ್ಯಾಮೋಹ ಹೊಂದಿದ್ದನಂತೆ. ಇದು ವಿದ್ಯಾಭ್ಯಾಸದ ಮೇಲೆ ಪರಿಣಾಮ ಬೀರುತ್ತಿದೆ ಎಂದರಿತು ಪೋಷಕರು ಆ ದ್ವಿಚಕ್ರ ವಾಹನವನ್ನು ಮಾರಾಟ ಮಾಡಿದ್ದರು. ಇದೂ ಕೂಡ ಬಾಲಕ ಆ*ತ್ಮಹ*ತ್ಯೆಯ ನಿರ್ಧಾರ ತಳೆಯಲು ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಸದ್ಯ ಮ*ರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಪ್ರಕರಣದ ಕುರಿತು ತನಿಖೆ ನಡೆಯುತ್ತಿದೆ.
BIG BOSS
ಚೈತ್ರಾ ಕುಂದಾಪುರ ಪ್ರಕಾರ ಈ ಸಲ ಬಿಗ್ ಬಾಸ್ ವಿನ್ನರ್ ಇವರೇ ?
Published
15 hours agoon
14/01/2025By
NEWS DESK3‘ಬಿಗ್ ಬಾಸ್ ಕನ್ನಡ ಸೀಸನ್ 11’ ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಆದ್ರೆ ಕಳೆದ ವಾರ ಅಚ್ಚರಿ ಎಂಬಂತೆ ಬಿಗ್ ಬಾಸ್ ಮನೆಯಿಂದ ಚೈತ್ರಾ ಕುಂದಾಪುರ ಆಚೆ ಬಂದಿದ್ದಾರೆ. ಅವರು ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದು, ಯಾರು ಗೆಲ್ಲುವ ಸಾಧ್ಯತೆ ಹೆಚ್ಚು ಎಂದು ಹೇಳಿದ್ದಾರೆ.
ಚೈತ್ರಾ ಕುಂದಾಪುರ ಅವರ ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಫಿನಾಲೆಗೂ ಮೊದಲೇ ಔಟ್ ಆಗಿದ್ದಾರೆ. 105ಕ್ಕೂ ಹೆಚ್ಚು ದಿನಗಳ ಕಾಲ ದೊಡ್ಮನೆಯಲ್ಲಿ ಇದ್ದ ಅವರು ಈಗ ಆಟದಿಂದ ಹೊರ ಹೋಗಿದ್ದಾರೆ. ಅವರು ಆಟವನ್ನು ಹತ್ತಿರದಿಂದ ನೋಡಿದವರು. ಯಾರು ದೊಡ್ಮನೆಯಿಂದ ಹೊರ ಹೋಗುತ್ತಾರೆ ಹಾಗೂ ಯಾರೂ ಗೆಲ್ಲಬಹುದು ಎಂದು ಹೇಳಿದ್ದಾರೆ.
ಇದನ್ನೂ ಓದಿ: ಬಿಗ್ ಬಾಸ್ ನಿಂದ ಹೊರ ಬಂದ ಚೈತ್ರಾ ಕುಂದಾಪುರ ಪಡೆದ ಸಂಭಾವನೆ ಎಷ್ಟು ಗೊತ್ತೇ?
ಬಿಗ್ ಬಾಸ್ ಕನ್ನಡ ಸೀಸನ್ 11ರ, ಟಾಪ್ 5 ಫೈನಲಿಸ್ಟ್ ಜಾಗದಲ್ಲಿ ತ್ರಿವಿಕ್ರಮ್, ಹನುಮಂತ, ರಜತ್, ಭವ್ಯಾ ಗೌಡ ಹಾಗೂ ಉಗ್ರಂ ಮಂಜು ಇರಲಿದ್ದಾರೆ ಎಂದು ಹೇಳಿದ್ದಾರೆ. ಮುಂದಿನ ವಾರ ಮೋಕ್ಷಿತಾ ಅಥವಾ ಧನರಾಜ್ ಅವರು ಆಚೆ ಬರಬಹುದು ಎಂದು ಹೇಳಿದ್ದಾರೆ.
ಅಲ್ಲದೇ ಬಿಗ್ ಬಾಸ್ ಸೀಸನ್ 11 ಫಿನಾಲೆ ಟ್ರೋಫಿ ಗೆಲ್ಲೋದು ಯಾರು ಅಂತ ಕೂಡ ಹೇಳಿದ್ದಾರೆ. ಹನುಮಂತ ತುಂಬಾ ಚೆನ್ನಾಗಿ ಆಟ ಆಡುತ್ತಿದ್ದಾರೆ. ಹನುಮಂತ ಟಾಪ್ 2ನಲ್ಲಿ ಇರುತ್ತಾರೆ ಅಥವಾ ಗೆಲ್ಲಲುಬಹುದು. ಆದ್ರೆ ನನಗೆ ತ್ರಿವಿಕ್ರಮ್ ಅವರು ಗೆಲ್ಲಬೇಕು. ಅವ್ರು ಜೀವನದಲ್ಲಿ ತುಂಬಾ ಕಷ್ಟಗಳನ್ನು ಅನುಭವಿಸಿದ್ದಾರೆ. ಈ ಬಿಗ್ ಬಾಸ್ ಗೆಲುವು ಅವರಿಗೆ ತುಂಬಾನೇ ಮುಖ್ಯ ಎಂದು ಹೇಳಿದ್ದಾರೆ.
LATEST NEWS
ಅಧಿಕಪ್ರಸಂಗದ ಪ್ರಶ್ನೆ ಕೇಳಿದ ಯೂಟ್ಯೂಬರನ್ನು ಹೊಡೆದ ನಾಗಾಸಾಧು
ತುಳು ಸಿನೆಮಾಗೆ ‘ಜೈ’ ಅಂದ ಸುನೀಲ್ ಶೆಟ್ಟಿ; ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ
ಮಕರ ಜ್ಯೋತಿ ಯಾವ ಹೊತ್ತಲ್ಲಿ ಕಾಣುತ್ತದೆ ಗೊತ್ತಾ ?
ನಟ ದರ್ಶನ್ ಸಂಕ್ರಾಂತಿ ಆಚರಣೆ…ಪತ್ನಿ ಮಾಡಿರುವ ಪೋಸ್ಟ್ ವೈರಲ್!
ಟೀಮ್ ಇಂಡಿಯಾ ಆಟಗಾರರಿಗೆ ಬಿಗ್ ಶಾಕ್; ಕಟ್ಟುನಿಟ್ಟಿನ ಕ್ರಮಕೈಗೊಂಡ ಬಿಸಿಸಿಐ
ಟ್ಯಾಂಕರ್ಗಳಿಂದ ಡಿಸೇಲ್ ಕಳ್ಳತನ; ಆರೋಪಿಗಳು ಅರೆಸ್ಟ್
Trending
- BIG BOSS4 days ago
BBK11: ಐವರು ನಾಮಿನೇಟ್, ಕಿಚ್ಚನ ಪಂಚಾಯ್ತಿಯಲ್ಲಿ ಗೇಟ್ಪಾಸ್ ಯಾರಿಗೆ..?
- LATEST NEWS5 days ago
ಹಲ್ಲು ಹುಳುಕಾಗಿದ್ಯಾ.? ಈ ಮನೆಮದ್ದು ಪ್ರಯತ್ನಿಸಿ, ತಕ್ಷಣ ಎಲ್ಲಾ ಹಲ್ಲಲ್ಲಿರುವ ಹುಳುಗಳು ಹೊರ ಬರುತ್ತವೆ.!
- FILM7 days ago
ಗೋವಾದಲ್ಲಿ ಕೇಕ್ ಕತ್ತರಿಸಿ ಯಶ್ ಬರ್ತ್ಡೇ ಸಂಭ್ರಮ
- BIG BOSS2 days ago
ಕಣ್ಣೀರು ಒರೆಸಿದ ಸುದೀಪ್.. ಕಿಚ್ಚನ ಈ ದೊಡ್ಡ ಗುಣಕ್ಕೆ ಸೆಲ್ಯೂಟ್ ಹೊಡೆದ ಫ್ಯಾನ್ಸ್..!