DAKSHINA KANNADA
ಮೋದಿ ವಿರುದ್ಧ ತೃತೀಯ ಲಿಂಗಿ ಸ್ಪರ್ಧೆ… ಯಾರು ಈ ಹಿಮಾಂಗಿ ಸಖಿ..!
ವಾರಣಾಸಿ : ಈ ಬಾರಿಯ ಲೋಕಸಭಾ ಚುನಾವಣೆ ಸಾಕಷ್ಟು ಕುತೂಹಲ ಕೆರಳಿಸಿದ್ದು, ಮೋದಿ ಮತ್ತೊಮ್ಮೆ ಪ್ರಧಾನಿ ಆಗ್ತಾರ ಇಲ್ವಾ ಅನ್ನೋ ಲೆಕ್ಕಾಚಾರ ಜೋರಾಗಿ ನಡಿತಾ ಇದೆ. ಇದರ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರ ಎದರು ಕಣಕ್ಕೆ ಇಳಿದಿರುವ ಹಿಂದೂ ಮಹಾಸಭಾದ ಅಭ್ಯರ್ಥಿ ಕೂಡಾ ಗಮನ ಸೆಳೆದಿದ್ದಾರೆ. ಮಹಾ ಕೃಷ್ಣ ಭಕ್ತೆಯಾಗಿರುವ ಈಕೆ ಐದು ಭಾಷೆಯಲ್ಲಿ ಭಗವತ್ ಗೀತೆಯ ಕಥೆ ಹೇಳುವ ಜಗತ್ತಿನ ಏಕೈಕ ತೃತೀಯ ಲಿಂಗಿಯಾಗಿದ್ದಾರೆ ಅನ್ನೋದು ವಿಶೇಷ.
![himangi sakhi](https://nammakudlanews.com/wp-content/uploads/2024/04/trans-300x169.jpg)
ಪ್ರಧಾನಿ ಮೋದಿ ವಿರುದ್ಧ ಕಣಕ್ಕಿಳಿದಿರುವ ಹಿಮಾಂಗಿ ಸಖಿ
ಜೂನ್ 1 ರಂದು ವಾರಣಾಸಿಯಲ್ಲಿ ಮತದಾನ ನಡೆಯಲಿದ್ದು, ಪ್ರಧಾನಿ ಮೋದಿ ಅವರ ಚುನಾವಣ ಕ್ಷೇತ್ರವಾಗಿದೆ. ಇಲ್ಲಿ ಕಾಂಗ್ರೆಸ್ನಿಂದ ಅಜಯ್ ರೈ ಅವರು ಸ್ಪರ್ಧೆ ಮಾಡ್ತಾ ಇದ್ರೆ , ಹಿಂದೂ ಮಹಾಸಭಾ ಕೂಡಾ ಮೋದಿ ವಿರುದ್ಧ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಹಿಂದೂ ಮಹಾಸಭಾ ಘೋಷಣೆ ಮಾಡಿರುವ ಅಭ್ಯರ್ಥಿ ಹಿಮಾಂಗಿ ಸಖಿ (Himangi Sakhi) ಈಗ ಸಾಕಷ್ಟು ಚರ್ಚೆಯಲ್ಲಿದ್ದಾರೆ. ಹಿಮಾಂಗಿ ಸಖಿ 5 ಭಾಷೆಗಳಲ್ಲಿ ಭಗವದ್ಗೀತೆಯ ಕಥೆ ಹೇಳುವ ಜಗತ್ತಿನ ಏಕೈಕ ತೃತೀಯ ಲಿಂಗಿಯಾಗಿದ್ದಾರೆ.
![bhavni nath](https://nammakudlanews.com/wp-content/uploads/2024/04/prayag-raj-300x290.jpg)
ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಭವಾನಿ ನಾಥ್ ವಾಲ್ಮೀಕಿ
ಈ ಹಿಂದೆ 2019 ರಲ್ಲಿ ಆಮ್ ಆದ್ಮಿ ಪಕ್ಷದಿಂದ ಭವಾನಿ ನಾಥ್ ವಾಲ್ಮೀಕಿ ಲೋಕಸಭಾ ಚುನಾವಣೆಗೆ ಪಕ್ಷದಿಂದ ಸ್ಪರ್ಧಿಸಿದ ಮೊದಲ ತೃತೀಯ ಲಿಂಗಿ ಅಭ್ಯರ್ಥಿಯಾಗಿದ್ದಾರೆ. ಇನ್ನು ಇದೇ ಚುನಾವಣೆಯಲ್ಲಿ ತಮಿಳುನಾಡಿನ ಟಿ ನಗರದಿಂದ 53 ವರ್ಷದ ರಾಧ ಎಂಬ ತೃತೀಯ ಲಿಂಗಿ ಪಕ್ಷೇತರರಾಗಿ ಸ್ಪರ್ಧೆ ಮಾಡಿದ್ದರು.
![](https://nammakudlanews.com/wp-content/uploads/2024/04/transs-300x169.jpg)
ತಮಿಳು ನಾಡಿನಲ್ಲಿ ಪಕ್ಷೇತರರಾಗಿ ಸ್ಪರ್ಧೆ ಮಾಡಿದ್ದ ರಾಧ
ಇದೀಗ ಪ್ರಧಾನಿ ಮೋದಿಯ ಎದುರು ಹಿಂದೂ ಮಹಾಸಭಾ ತನ್ನ ಅಭ್ಯರ್ಥಿಯನ್ನಾಗಿ ಹಿಮಾಂಗಿ ಸಖಿ ಅವರನ್ನು ಕಣಕ್ಕೆ ಇಳಿಸಿದೆ. ಉತ್ತರ ಪ್ರದೇಶದ 20 ಕ್ಷೇತ್ರಗಳಲ್ಲಿ ಹಿಂದೂ ಮಹಾಸಭಾ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಬಿಜೆಪಿಗೆ ಸಡ್ಡು ಹೊಡೆಯಲು ಪ್ರಯತ್ನ ನಡೆಸಿದೆ. ಆದರೆ ವಿಶೇಷವಾಗಿ ಪ್ರಧಾನಿ ಮೋದಿಯ ವಾರಣಾಸಿ ಕ್ಷೇತ್ರದಲ್ಲಿ ತೃತೀಯ ಲಿಂಗಿಯನ್ನು ನಿಲ್ಲಿಸುವ ಮೂಲಕ ಪ್ರಧಾನಿ ಮೋದಿಯವರ ಬಗ್ಗೆ ಬೇರೆಯೇ ಸಂದೇಶ ನೀಡಲು ಹೊರಟಿದೆ.
ಚುನಾವಣೆಯಲ್ಲಿ ಗೆದ್ದರೆ ತೃತೀಯ ಲಿಂಗಿಗಳಿಗೆ ಅವರ ಹಕ್ಕು ಮತ್ತು ಗೌರವ ಸಿಗುವ ಕೆಲಸ ಮಾಡುವುದಾಗಿ ಹಿಮಾಂಗಿ ಸಖಿ ಹೇಳಿದ್ದಾರೆ. ಪ್ರಧಾನಿ ಮೋದಿ ಅವರ ಬೇಟಿ ಬಚಾವೋ – ಬೇಟಿ ಪಢಾವೋ ಘೋಷಣೆ ಚೆನ್ನಾಗಿದೆ ಅದನ್ನು ಕಿನ್ನರ್ ಭಚಾವೋ – ಕಿನ್ನರ್ ಪಢಾವೋ ಮಾಡಬೇಕಾಗಿದೆ. ತೃತೀಯ ಲಿಂಗಿಗಳ ಬಗ್ಗೆ ಮೋದಿ ನಿಕೃಷ್ಟ ಭಾವನೆ ಹೊಂದಿದ್ದಾರೆ ಎಂದು ಹಿಮಾಂಗಿ ಸಖಿ ಹೇಳಿದ್ದಾರೆ. ಹಿಮಾಂಗಿ ಸಖಿ ಹಿಂದಿ, ಇಂಗ್ಲಿಷ್, ಪಂಜಾಬಿ, ಗುಜರಾತಿ, ಮರಾಠಿ ಭಾಷೆಗಳಲ್ಲಿ ಭಗವತ್ ಕಥಾವನ್ನು ಹೇಳುತ್ತಾರೆ. ಅವರ ತಂದೆ ಗುಜರಾತಿ. ತಾಯಿ ಪಂಜಾಬಿ ಕುಟುಂಬದಿಂದ ಬಂದವರು.
DAKSHINA KANNADA
ಬೆಂ*ಕಿಗೆ ಆಹುತಿಯಾದ ಹಡಗಿನಿಂದ ಅಪಾಯವಿಲ್ಲ, ಆತಂಕ ಬೇಡ : ಜಿಲ್ಲಾಧಿಕಾರಿ ಮುಲೈ ಮುಗಿಲನ್ ಸ್ಪಷ್ಟನೆ
ಮಂಗಳೂರು : ಮಂಗಳೂರು ಕರಾವಳಿಯ ಸಮುದ್ರದಲ್ಲಿ ಬೆಂ*ಕಿಗೆ ಆಹುತಿಯಾದ ವಿದೇಶಿ ಹಡಗಿನಿಂದ ಮಂಗಳೂರು ಕರಾವಳಿಗೆ ಯಾವುದೇ ಆತಂಕ ಇಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟ ಪಡಿಸಿದ್ದಾರೆ.
ಜುಲೈ 19 ರಂದು ಗುಜರಾತ್ನಿಂದ ಕೊಲೊಂಬೋಕ್ಕೆ ತೆರಳುತ್ತಿದ್ದ ಸರಕು ಸಾಗಟದ ಹಡುಗು ಬೆಂ*ಕಿಗೆ ಆಹುತಿಯಾಗಿತ್ತು. ತಕ್ಷಣ ಕೋಸ್ಟ್ಗಾರ್ಡ್ ತಂಡ ನಿರಂತರ ನಲುವತ್ತು ಗಂಟೆ ಪ್ರಯತ್ನ ನಡೆಸಿ ಬೆಂಕಿ ನಂದಿಸುವ ಕೆಲಸವಾಗಿತ್ತು. ಬಳಿಕ ಹಡಗನ್ನು ಮಂಗಳೂರು ಕರಾವಳಿಯ 30 ನಾಟಿಕಲ್ ದೂರದಲ್ಲಿ ನಿಲ್ಲಿಸಲಾಗಿತ್ತು. ಇದರಿಂದ ತೈಲ ಸೋರಿಕೆ ಆಗುವ ಆತಂಕವನ್ನು ಹಲವರು ವ್ಯಕ್ತಪಡಿಸಿದ್ದರು.
ಇದನ್ನೂ ಓದಿ : 5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್..!
ಹಡಗು ಮುಳುಗಡೆಯಾಗುವ ಭೀತಿ ಇದ್ದು ಹಾಗಾದಲ್ಲಿ ಹಡಗಿನಲ್ಲಿರುವ ತೈಲ ಸೋರಿಕೆ ಆಗಬಹುದು ಎಂದು ಸುದ್ದಿಯಾಗಿತ್ತು. ಆದ್ರೆ, ಈ ವಿಚಾರವಾಗಿ ಸ್ಪಷ್ಟನೆ ನೀಡಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು, ಅಂತಹ ಯಾವುದೇ ಅಪಾಯ ಇಲ್ಲ ಎಂದು ಹೇಳಿದ್ದಾರೆ. ಅಂತಹ ಅವ*ಘಡ ನಡೆದಲ್ಲಿ ಅದನ್ನು ಎದುರಿಸಲು ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಜಿಲ್ಲಾಡಳಿತ ಹಾಗೂ ಕೋಸ್ಟ್ಗಾರ್ಡ್ ಮತ್ತು ಕರಾವಳಿ ಕಾವಲು ಪಡೆ ಸನ್ನದ್ಧವಾಗಿದೆ ಎಂದು ಮಾಹಿತಿ ನೀಡಿದ್ದಾರೆ.
DAKSHINA KANNADA
ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ
ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.
ಉತ್ತರದ ಬ್ರೇಕ್ ವಾಟರ್ 831 ಮೀಟರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.
ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.
DAKSHINA KANNADA
ವಿದೇಶಿ ಹಡಗಿನಲ್ಲಿ ಬೆಂಕಿ ಅವಘಡ; ಕರ್ನಾಟಕ ಕರಾವಳಿಯಲ್ಲಿ ಲಂಗರು ಹಾಕಿದ ಕಾರ್ಗೋ ಹಡಗು
ಮಂಗಳೂರು: ಗುಜರಾತ್ನಿಂದ ಕೊಲಂಬೋಕ್ಕೆ ವಿವಿಧ ಸರಕುಗಳನ್ನು ಸಾಗಾಟ ಮಾಡುತ್ತಿದ್ದ ವಿದೇಶಿ ಮೂಲದ ಸರಕು ಸಾಗಾಟ ಹಡಗಿನಲ್ಲಿ ಅಗ್ನಿ ಆಕಸ್ಮಿಕ ನಡೆದ ಘಟನೆ ಬೆಳಕಿಗೆ ಬಂದಿದೆ.
ಜುಲೈ 19 ರಂದು ಕರ್ನಾಟಕ ಕರಾವಳಿಯ ಸಮುದ್ರದಲ್ಲಿ ಈ ದುರ್ಘಟನೆ ನಡೆದಿದ್ದು, ಕೋಸ್ಟ್ ಗಾರ್ಡ್ ತಂಡ ಹೆಲಿಕಾಪ್ಟರ್ ಹಾಗೂ ರಕ್ಷಣಾ ಹಡಗಿನ ಮೂಲಕ ಸತತ ನಲುವತ್ತು ಘಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಹಡಗಿನಲ್ಲಿ ಒಟ್ಟು 21 ಸಿಬ್ಬಂದಿ ಇದ್ದು ಒಬ್ಬ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಹಡಗಿನ ಬೆಂಕಿ ನಂದಿಸಿ ಸಿಬ್ಬಂದಿಗಳ ರಕ್ಷಣೆ ಮಾಡಿದ ಬಳಿಕ ಹಡಗನ್ನು ಕರ್ನಾಟಕ ಕರಾವಳಿ ಭಾಗಕ್ಕೆ ತೆಗೆದುಕೊಂಡು ಬರಲಾಗಿದೆ. ಸದ್ಯ ಸುರತ್ಕಲ್ ಕಡಲ ಕಿನಾರೆಯಿಂದ ಸುಮಾರು 33 ನಾಟಿಕಲ್ ಮೈಲ್ ದೂರದಲ್ಲಿ ಹಡಗು ಲಂಗರು ಹಾಕಲಾಗಿದೆ. ಗುಜಾರಾತ್ನ ಮುಂದ್ರಾ ಬಂದರಿನಿಂದ ಹೊರಟಿದ್ದ ಈ ಹಡಗು ಪನಾಮ ದೇಶಕ್ಕೆ ಸೇರಿದ್ದಾಗಿ ಮಾಹಿತಿ ಲಭ್ಯವಾಗಿದೆ.
ಬೆಂಕಿ ಅವಘಡದಿಂದ ಸಂಪೂರ್ಣ ಹಾನಿಯಾಗಿರುವ ಹಡಗು ಅಪಾಯಕಾರಿ ಪರಿಸ್ಥಿತಿಯಲ್ಲಿದ್ದು, ಕೋಸ್ಟ್ ಗಾರ್ಡ್ ಸಿಬ್ಬಂದಿ ಹಡಗಿನ ಮೇಲೆ ನಿಗಾ ಇರಿಸಿದ್ದಾರೆ. ಹಡಗು ಮುಳುಗಡೆಯಾಗುವ ಸಾದ್ಯತೆಯ ಜೊತೆಗೆ ಹಡಗಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಳ್ಳುವ ಸಂಭವ ಕೂಡಾ ಇದೆ. ಹೀಗಾಗಿ ಹಡಗು ಮುಳುಗಡೆಯಾದಲ್ಲಿ ಸಮುದ್ರಕ್ಕೆ ತೈಲ ಸೋರಿಕೆಯ ಆತಂಕ ಕೂಡಾ ಎದುರಾಗಿದೆ. ಹೀಗಾಗಿ ಹಡಗಿನ ಮೇಲೆ ನಿಗಾ ವಹಿಸಿರುವ ಕೋಸ್ಟ್ ಗಾರ್ಡ್ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.
- LATEST NEWS5 days ago
ಗೀಸರ್ನಿಂದ ವಿಷಾನಿಲ ಸೋರಿಕೆ; ಇಹಲೋಕ ತ್ಯಜಿಸಿದ ತಾಯಿ, ಮಗ
- LATEST NEWS5 days ago
ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ಲಕ್ಷಾಂತರ ರೂ. ಬೆಲೆ ಬಾಳುವ ವಜ್ರದ ನೆಕ್ಲೇಸ್
- LATEST NEWS7 days ago
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಕ್ರಿಕೆಟಿಗ
- DAKSHINA KANNADA2 days ago
ವಿಟ್ಲದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ; ಸಾರ್ವಜನಿಕರನ್ನು ನೋಡಿ ಕಾಲ್ಕಿತ್ತ ಜೋಡಿ