Connect with us

    LATEST NEWS

    17,000 ಕೊಟ್ಟು ರೂಮ್​​​​ ಬುಕ್​​ ಮಾಡಿದ ಮಹಿಳೆಗೆ ತಿಗಣೆ ಕಾಟ

    Published

    on

    ಯುನೈಟೆಡ್ ಕಿಂಗ್‌ಡಂ: ದೂರ ಪ್ರಯಾಣ ಮಾಡುವಾಗ ಉಳಿದುಕೊಳ್ಳಲು ಒಂದು ಒಳ್ಳೆ ರೂಮ್​​​ ಬೇಕು, ಜಾಗ ಬದಲಾದರೂ ಕೂಡ ನಿದ್ದೆ ಚೆನ್ನಾಗಿ ಬರಬೇಕು ಎಂಬುದು ಪ್ರಯಾಣ ಬೆಳೆಸುವ ಮುನ್ನವೇ ಯೋಚನೆ ಮಾಡುವುದು ಸಹಜ. ಅದರಂತೆಯೇ ಎಂದೆರಡು ದಿನಕ್ಕೆ ಬಾಡಿಗೆ ಜಾಸ್ತಿ ಕೇಳಿದರೂ ಕೂಡ ಯೋಚನೆ ಮಾಡದೇ ಹಣ ಪಾವತಿ ಮಾಡಿ ಬಿಡುತ್ತೇವೆ.

    ಐಷಾರಾಮಿ ಹೋಟೆಲ್​ ಎಂದರೆ ಸೌಲಭ್ಯಗಳಿಗೆ ಏನೂ ಕೊರತೆ ಇರಲ್ಲ ಬಿಡಿ. ಅಂದರಂತೆಯೇ ಇಲ್ಲೊಬ್ಬರು ಮಹಿಳೆ ಹೋಟೆಲ್‌ ರೂಮ್​​ ಒಂದರಲ್ಲಿ ಎರಡು ದಿನಗಳ ಕಾಲ ವಾಸ್ತವ್ಯ ಹೂಡಲು ಬರೋಬ್ಬರಿ 17000 ರೂ. ಪಾವತಿ ಮಾಡಿದ್ದಾರೆ. ಆದರೆ ಒಂದೇ ರಾತ್ರಿಯಲ್ಲಿ ಭಯಾನಕ ಅನುಭವವಾಗಿದ್ದು, ದುಡ್ಡಿಗಿಂತಲೂ ಆರೋಗ್ಯ ಮುಖ್ಯ ಎಂದು ಅಲ್ಲಿಂದ ಜಾಗ ಖಾಲಿ ಮಾಡಿದ್ದಾರೆ. ಅಷ್ಟಕ್ಕೂ ಆ ಮಹಿಳೆಗೆ ಯಾವುದೋ ದೈವ, ಭೂತ ಅಥವಾ ಮನುಷ್ಯರ ಕಾಟವಲ್ಲ, ಇದಕ್ಕಿಂತಲೂ ಮಿಗಿಲಾಗಿ ಒಂದೇ ರಾತ್ರಿಯಲ್ಲಿ 200ರಕ್ಕೂ ಹೆಚ್ಚು ತಿಗಣೆಗಳು ಮಹಿಳೆಯ ರಕ್ತ ಹೀರಿದೆ.

    ಯುನೈಟೆಡ್ ಕಿಂಗ್‌ಡಂನ ಬ್ಲ್ಯಾಕ್‌ಪೂಲ್‌ನಲ್ಲಿರುವ ಕ್ಯಾಲಿಪ್ಸೊ ಎಂಬ ಹೋಟೆಲ್​​​ನಲ್ಲಿ ಶರೋನ್ ಹಸ್ಲಾಮ್(65) ತನ್ನ ಸ್ನೇಹಿತೆ ಮರಿಯನ್ ಪಿಯರ್ಸನ್ ಅವರ ಬರ್ತ್​ ಡೇ ಪಾರ್ಟಿಯ ಸಲುವಾಗಿ ಹೋಟೆಲ್‌ನಲ್ಲಿ ಕೊಠಡಿಯನ್ನು ಎರಡು ದಿನಕ್ಕೆ 17,000 ರೂ ಕೊಟ್ಟು ಕಾಯ್ದಿರಿಸಿದ್ದರು. ಕೋಣೆಗೆ ಪ್ರವೇಶಿಸಿದಾಗ ಹಾಸಿಗೆಯು ಸ್ವಚ್ಛವಾಗಿತ್ತು ಮತ್ತು ಎಲ್ಲಾ ಸೌಲಭ್ಯಗಳು ಚೆನ್ನಾಗಿಯೇ ಇತ್ತು ಎಂದು ಹಸ್ಲಾಮ್ ಹೇಳಿದ್ದಾರೆ.

    ಹಸ್ಲಾಮ್ಗೆ ಪಾರ್ಟಿ ಮಾಡಿ ಸಾಕಷ್ಟು ಸುಸ್ತಾಗಿದ್ದರಿಂದ ಒಳ್ಳೆ ನಿದ್ದೆ ಬಂದಿದೆ. ಆದರೆ ಬೆಳಗ್ಗೆ ಏಳುವ ಹೊತ್ತಿಗೆ ಮೈಯೆಲ್ಲಾ ತುರಿಕೆ ಮತ್ತು ದದ್ದು ಕಾಣಿಸಿಕೊಂಡಿದೆ. ಇದಲ್ಲದೇ ಹಾಸಿಗೆಯ ಮೇಲೆ ಅಲ್ಲಲ್ಲಿ ರಕ್ತದ ಕಲೆಗಳು ಕಾಣಿಸಿಕೊಂಡಿದೆ. ಆದರೆ ಏನಾಗಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಲು ಹಸ್ಲಾಮ್ ಹತ್ತು ನಿಮಿಷ ತೆಗೆದುಕೊಂಡಿದ್ದಾರೆ.

    ತೆವಳುತ್ತಿರುವ ಜೀವಂತ ತಿಗಣೆಯನ್ನು ಹಾಸಿಗೆ ಮೇಲೆ ನೋಡಿದ್ದಾರೆ. ಬಳಿಕ ಹೋಟೆಲ್​​ ಅವರ ನಿರ್ಲಕ್ಷ್ಯದ ವಿರುದ್ದ ದೂರು ನೀಡಿದ್ದು, ಸಂಪೂರ್ಣ ಹಣವನ್ನು ಹೋಟೆಲ್​​​​​ ಮರುಪಾವತಿ ಮಾಡುವುದರ ಜೊತೆಗೆ 8,787 ರೂ ಹಣವನ್ನು ಪರಿಹಾರದ ರೂಪದಲ್ಲಿ ನೀಡಿದೆ ಎಂದು ವೇಲ್ಸನ್‌ಲೈನ್ ವರದಿಯಿಂದ ತಿಳಿದುಬಂದಿದೆ.

    DAKSHINA KANNADA

    ಬೆಂ*ಕಿಗೆ ಆಹುತಿಯಾದ ಹಡಗಿನಿಂದ ಅಪಾಯವಿಲ್ಲ, ಆತಂಕ ಬೇಡ : ಜಿಲ್ಲಾಧಿಕಾರಿ ಮುಲೈ ಮುಗಿಲನ್ ಸ್ಪಷ್ಟನೆ

    Published

    on

    ಮಂಗಳೂರು : ಮಂಗಳೂರು ಕರಾವಳಿಯ ಸಮುದ್ರದಲ್ಲಿ ಬೆಂ*ಕಿಗೆ ಆಹುತಿಯಾದ ವಿದೇಶಿ ಹಡಗಿನಿಂದ ಮಂಗಳೂರು ಕರಾವಳಿಗೆ ಯಾವುದೇ ಆತಂಕ ಇಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟ ಪಡಿಸಿದ್ದಾರೆ.

    ಜುಲೈ 19 ರಂದು ಗುಜರಾತ್‌ನಿಂದ ಕೊಲೊಂಬೋಕ್ಕೆ ತೆರಳುತ್ತಿದ್ದ ಸರಕು ಸಾಗಟದ ಹಡುಗು ಬೆಂ*ಕಿಗೆ ಆಹುತಿಯಾಗಿತ್ತು. ತಕ್ಷಣ ಕೋಸ್ಟ್‌ಗಾರ್ಡ್ ತಂಡ ನಿರಂತರ ನಲುವತ್ತು ಗಂಟೆ ಪ್ರಯತ್ನ ನಡೆಸಿ ಬೆಂಕಿ ನಂದಿಸುವ ಕೆಲಸವಾಗಿತ್ತು. ಬಳಿಕ ಹಡಗನ್ನು ಮಂಗಳೂರು ಕರಾವಳಿಯ 30 ನಾಟಿಕಲ್ ದೂರದಲ್ಲಿ ನಿಲ್ಲಿಸಲಾಗಿತ್ತು. ಇದರಿಂದ ತೈಲ ಸೋರಿಕೆ ಆಗುವ ಆತಂಕವನ್ನು ಹಲವರು ವ್ಯಕ್ತಪಡಿಸಿದ್ದರು.

    ಇದನ್ನೂ ಓದಿ : 5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್‌..!

    ಹಡಗು ಮುಳುಗಡೆಯಾಗುವ ಭೀತಿ ಇದ್ದು ಹಾಗಾದಲ್ಲಿ ಹಡಗಿನಲ್ಲಿರುವ ತೈಲ ಸೋರಿಕೆ ಆಗಬಹುದು ಎಂದು ಸುದ್ದಿಯಾಗಿತ್ತು. ಆದ್ರೆ, ಈ ವಿಚಾರವಾಗಿ ಸ್ಪಷ್ಟನೆ ನೀಡಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು, ಅಂತಹ ಯಾವುದೇ ಅಪಾಯ ಇಲ್ಲ ಎಂದು ಹೇಳಿದ್ದಾರೆ. ಅಂತಹ ಅವ*ಘಡ ನಡೆದಲ್ಲಿ ಅದನ್ನು ಎದುರಿಸಲು ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಜಿಲ್ಲಾಡಳಿತ ಹಾಗೂ ಕೋಸ್ಟ್‌ಗಾರ್ಡ್‌ ಮತ್ತು ಕರಾವಳಿ ಕಾವಲು ಪಡೆ ಸನ್ನದ್ಧವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

    Continue Reading

    kerala

    5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್‌..!

    Published

    on

    ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್‌ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.

    ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್‌ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.

    ಆನ್‌ ಲೈನ್ ಗೇಮಿಂಗ್‌ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?

    ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
    ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್‌ಲೈನ್ ಗೇಮಿಂಗ್‌ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.

    Continue Reading

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    LATEST NEWS

    Trending