LATEST NEWS
ನಾಲ್ವರ ಪ್ರಾಣ ಉಳಿಸಿ ಸಾವಿನಲ್ಲೂ ಸಾರ್ಥಕತೆ ಕಂಡ ಯುವಕನಿಗೆ ಸರ್ವರ ಸಲಾಂ..
ನಾಲ್ವರ ಪ್ರಾಣ ಉಳಿಸಿ ಸಾವಿನಲ್ಲೂ ಸಾರ್ಥಕತೆ ಕಂಡ ಯುವಕನಿಗೆ ಸರ್ವರ ಸಲಾಂ..!
ಮೈಸೂರು:ಅಪಘಾತಕ್ಕೀಡಾಗಿ ಆಸ್ಪತ್ರೆಗೆ ದಾಖಲಾದ ಚಂದನ್ ಎಂಬ ಯುವಕನ ಮೆದುಳು ನಿಷ್ಕ್ರಿಯಗೊಂಡ ಕಾರಣ ಆತನ ಸರ್ವ ಅಂಗಾಂಗಳನ್ನು ದಾನ ಮಾಡಿದ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿದೆ.
ಚಂದನ್ ಅಂಗಾಂಗಳನ್ನು ದಾನ ಮಾಡಲು ಒಪ್ಪಿದ ಆತನ ತಾಯಿಯ ನಿರ್ಧಾರದಿಂದ ನಾಲ್ಕು ಜನರ ಪ್ರಾಣ ಉಳಿದಿದೆ. ಈ ಮೂಲಕ ಚಂದನ್ ರವರ ಅಂತಿಮಯಾತ್ರೆ ಅರ್ಥಪೂರ್ಣವಾಗುವಂತೆ ಮಾಡಲಾಗಿದೆ.
ಈ ಬಗ್ಗೆ ಮಾಧ್ಯಮದ ಜೊತೆ ಚಂದನ್ ಕುಟುಂಬ ಮಾತನಾಡುವಾಗ ಚಂದನ್ ತಾಯಿ ಮಾತ್ರ ದುಃಖವನ್ನೆಲ್ಲಾ ಒಡಲಲ್ಲಿ ಇಟ್ಟುಕೊಂಡು ಒಂದೂ ಮಾತನಾಡದೇ ಧೃಡವಾಗಿ ಕೂತಿದ್ದು ಮನಕಲಕುವಂತಿತ್ತು.
ಚಂದನ್ ರವರ ಅಕಾಲಿಕ ನಿಧನಕ್ಕೆ ಸ್ನೇಹಿತರು ಸೇರಿದಂತೆ ಪ್ರತಿಯೊಬ್ಬರೂ ಸಹ ಕಂಬನಿ ಮಿಡಿದಿದ್ದಾರೆ. ಆದರೆ ಸ್ನೇಹಿತರು ಸಾವಿನಲ್ಲೂ ಸಾರ್ಥಕತೆ ಮೆರೆದ ಸ್ನೇಹಿತನ ಬಗ್ಗೆ ಹೆಮ್ಮೆ ಪಟ್ಟಿದ್ದಾರೆ.
ಇನ್ನು ತಾನು ಹೋದರೂ ನಾಲ್ಕು ಜನರ ಪ್ರಾಣ ಉಳಿಸಿದ ಚಂದನ್ ರವರ ಪಾರ್ಥೀವ ಶರೀರವನ್ನು ಆಸ್ಪತ್ರೆಯಿಂದ ಕರೆದೊಯ್ಯುವ ಸಮಯದಲ್ಲಿ ಅಲ್ಲಿನ ಪ್ರತಿಯೊಬ್ಬ ಸಿಬ್ಬಂದಿಯೂ ಹಾಜರಾಗಿ ಎದ್ದು ನಿಂತು ಸಲ್ಯೂಟ್ ಮಾಡುವ ಮೂಲಕ ಗೌರವ ಅರ್ಪಿಸಿದ್ದಾರೆ.
ದೊಡ್ಡ ವೈದ್ಯರಿಂದ ಹಿಡಿದು ಆಸ್ಪತ್ರೆಯ ಪ್ರತಿಯೊಬ್ಬ ಸಿಬ್ಬಂದಿಯೂ ಹಾಗೂ ಸಾರ್ವಜನಿಕರೂ ಸಹ ಸಾಲುಗಟ್ಟಿ ನಿಂತು ಗೌರವ ಅರ್ಪಿಸಿದ ದೃಶ್ಯ ನಿಜಕ್ಕೂ ಮನ ಕಲಕುವಂತಿತ್ತು.
ಚಂದನ್ ಗೆ ಸಂಬಂಧವಿಲ್ಲದ ಅದೆಷ್ಟೋ ಜನರು ನಿಂತು ಹಾರೈಸಿದ್ದು “ಮತ್ತೊಮ್ಮೆ ಹುಟ್ಟಿ ಬಾ ಗೆಳೆಯ ಎಂದರು. ಇನ್ನು ಮಗನ ಸಾವಿನ ನೋವಿನಲ್ಲೂ ಆತನ ಹೆತ್ತವರು ಆತನಿಗೆ ಸಿಕ್ಕ ಗೌರವ ನೋಡಿ ಆತನ ಬದುಕು ಸಾರ್ಥಕವಾಯ್ತು ಎಂದುಕೊಂಡಿದ್ದಂತೂ ಸುಳ್ಳಲ್ಲ.
LATEST NEWS
ಹಳೆಯಂಗಡಿ : ಯಕ್ಷ ಧ್ರುವ ಕೇಂದ್ರ ಮಹಿಳಾ ಘಟಕದ ವಾರ್ಷಿಕೋತ್ಸವ
ಹಳೆಯಂಗಡಿ : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಕೇಂದ್ರ ಮಹಿಳಾ ಘಟಕ ಇದರ ಸಪ್ತಮ ವಾರ್ಷಿಕೋತ್ಸವ ಹಳೆಯಂಗಡಿ ಸಮೀಪದ ಶ್ರೀ ಪಾವಂಜೆ ಕ್ಷೇತ್ರದಲ್ಲಿ ನಡೆಯಿತು.
ಸಮಾರಂಭದಲ್ಲಿ ಶ್ರೀಕುಮಾರ ಸಾಂಸ್ಕೃತಿಕ ಪ್ರತಿಷ್ಠಾನ (ರಿ) ಹಳುವಳ್ಳಿ ಇದರ ನಿರ್ದೇಶಕಿ ಜ್ಯೋತಿ ಟಿ ಎನ್ ಕಳಸ, ಧೀಶಕ್ತಿ ಮಹಿಳಾ ಯಕ್ಷ ಬಳಗ ಪುತ್ತೂರು ಇದರ ನಿರ್ದೇಶಕಿ ಪದ್ಮಾ ಕೆ ಆರ್ ಆಚಾರ್ಯ ಪುತ್ತೂರು, ಯಕ್ಷಗಾನ ತಾಳಮದ್ದಲೆ ಕಲಾವಿದೆ ರೇವತಿ ನವೀನ್ ಕುಳಾಯಿ ಇವರನ್ನು ಸನ್ಮಾನಿಸಲಾಯಿತು.
ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿಯವರ ಉಪಸ್ಥಿತಿಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ನ್ಯಾಯವಾದಿ ನಾರಾಯಣ ಪಾಟಾಳಿ, ಕಲಾ ಪೋಷಕರಾದ ಶಕುಂತಳಾ ರಮಾನಂದ ಭಟ್, ಸಂಧ್ಯಾ ಜಯದೇವ ಐತಾಳ್, ಪಟ್ಲ ಫೌಂಡೇಶನ್ ನ ಟ್ರಸ್ಟಿ ಸಹನಾ ರಾಜೇಶ್ ರೈ, ಜೆಸಿಐ ಸುರತ್ಕಲ್ ಘಟಕದ ಅಧ್ಯೆಕ್ಷೆ ಜ್ಯೋತಿ ಪ್ರವೀಣ್ ಶೆಟ್ಟಿ,ಪಟ್ಲ ಪೌಂಡೇಶನ್ ಟ್ರಸ್ಟ್ ನ ಕೋಶಾಧಿಕಾರಿ ಸುದೇಶ್ ಕುಮಾರ್ ರೈ ಉಪಸ್ಥಿತರಿದ್ದರು.
ಮಹಿಳಾ ಕೇಂದ್ರೀಯ ಘಟಕದ ಅಧ್ಯೆಕ್ಷೆ ಪೂರ್ಣಿಮಾ ಶೆಟ್ಟಿ ಸ್ವಾಗತಿಸಿದರು. ಗೌರವಾಧ್ಯಕ್ಷೆ ಆರತಿ ಆಳ್ವ ವಂದಿಸಿದರು. ಸಾಯಿಸುಮ ನಾವಡ ಕಾರ್ಯಕ್ರಮ ನಿರ್ವಹಿಸಿದರು. ಬಳಿಕ ಪಾವಂಜೆ ಮೇಳದಿಂದ ಧರ್ಮಸಿಂಹಾಸನ ಯಕ್ಷಗಾನ ಪ್ರದರ್ಶನಗೊಂಡಿತು.
DAKSHINA KANNADA
ಟಿಕೆಟ್ ಕೈ ತಪ್ಪಿದ್ರೂ ಕೈ ಬಿಡದ ಹೈಕಮಾಂಡ್..! ಕೇರಳದ ಸಹ ಉಸ್ತುವಾರಿಯಾದ ನಳಿನ್ ಕುಮಾರ್ ಕಟೀಲ್
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೈ ತಪ್ಪಿದ್ದ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಬಿಜೆಪಿ ಹೈಕಮಾಂಡ್ ಮಹತ್ವದ ಜವಾಬ್ದಾರಿ ವಹಿಸಿದೆ. ನಳಿನ್ ಕುಮಾರ್ ಕಟೀಲ್ ಅವರನ್ನು ಕೇರಳದ ಚುನಾವಣಾ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಮೂರು ಬಾರಿ ಸಂಸದರಾಗಿ ಆಯ್ಕೆ ಆಗಿದ್ದ ನಳಿನ್ ಕುಮಾರ್ ಕಟೀಲ್ ಅವರಿಗೆ ಈ ಬಾರಿ ಟಿಕೆಟ್ ಕೈತಪ್ಪಿದ್ದು ಬಾರಿ ನಿರಾಸೆ ತಂದಿತ್ತು. ಕ್ಯಾಪ್ಟನ್ ಬ್ರಿಜೇಶ್ ಚೌಟರ ಮೂಲಕ ಹೊಸ ಮುಖವನ್ನು ಪಕ್ಷ ಕಣಕ್ಕೆ ಇಳಿಸಿದೆ. ಇದು ನಳಿನ್ ಕುಮಾರ್ ಕಟೀಲ್ ಅವರಿಗೆ ಬೇಸರ ತಂದಿದ್ದರೂ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದು ಹೇಳಿದ್ದರು. ಮಾಧ್ಯಮಗಳಿಗೆ ಹೇಳಿಕೆ ನೀಡುವಾಗ ಬಹಳಷ್ಟು ಭಾವುಕರಾಗಿದ್ದ ನಳಿನ್ ಕುಮಾರ್ ಕಟೀಲ್ ಪಕ್ಷ ನಿಂತ ನೀರಾಗಬಾರದು, ಹೊಸ ಮುಖಗಳು ಬರುತ್ತಿರಬೇಕು, ನಾನು ಪಕ್ಷ ಗುಡಿಸಿ ಒರೆಸು ಅಂತ ಹೇಳಿದ್ರೂ ಮಾಡ್ತೇನೆ ಅಂತ ಹೇಳಿದ್ದರು. ಆದ್ರೆ ಇದೀಗ ಪಕ್ಷ ಅವರಿಗೆ ಕೇರಳದ ಚುನಾವಣೆಯ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಿ ಪಕ್ಷದಲ್ಲಿ ದೊಡ್ಡ ಜವಾಬ್ದಾರಿಯನ್ನೇ ನೀಡಿದೆ.
LATEST NEWS
ಪ್ರತಾಪ್ ಸಿಂಹ ಬದಲು ಒಡೆಯರ್ ಯಾಕೆ..!? ರಾಜ್ಯಾಧ್ಯಕ್ಷರು ಹೇಳಿದ್ದೇನು?
ಮೈಸೂರು: ಲೋಕಸಭಾ ಚುನಾವಣೆಗೆ ಮೈಸೂರಿನಿಂದ ಯದುವೀರ್ ಕೃಷ್ಣದತ್ತ ಒಡೆಯರ್ಗೆ ಟಿಕಿಟ್ ನೀಡಿ, ಪ್ರತಾಪ್ ಸಿಂಹರಿಗೆ ಕೋಕ್ ನೀಡಲಾಗಿದೆ. ಈ ಕುರಿತು ಸಾರ್ವಜನಿಕ ವಲಯದಲ್ಲಿ ಮಿಶ್ರ ಪ್ರತಿಕ್ರಿಯೆ ಉಂಟಾಗಿದ್ದು, ಬಿಜೆಪಿ ಕಾರ್ಯಕರ್ತರಲ್ಲಿ ಗೊಂದಲವನ್ನು ಸೃಷ್ಠಿಮಾಡಿತ್ತು ಎಂದರೆ ತಪ್ಪಾಗಲ್ಲ.
ಈ ಕುರಿತು ನಗರದಲ್ಲಿ ಆಯೋಜಿಸಲಾಗಿದ್ದ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಸಮ್ಮಿಲನ ಸಮಾವೇಶದಲ್ಲಿ ಮಾತಾಡಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಮೈಸೂರು-ಕೊಡಗು ಮತ್ತು ಚಾಮರಾಜನಗರ ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ದಾಖಲೆಯ ಅಂತರದಿಂದ ಗೆಲುವು ಸಾಧಿಸುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು.
ಹಿಂದಿನ ಒಡೆಯರ್ ಅರಸೊತ್ತಿಗೆಯ ಪ್ರತಿನಿಧಿಯಾಗಿರುವ ಯದುವೀರ್ ಒಬ್ಬ ಸಾಮಾನ್ಯ ವ್ಯಕ್ತಿಯ ಹಾಗೆ ಜನರಿಗಾಗಿ ಕೆಲಸ ಮಾಡುತ್ತಾ ಹಿಂದಿನ ಹತ್ತು ವರ್ಷಗಳ ಕಾಲ ಈ ಭಾಗದ ಕ್ರಿಯಾಶೀಲ ಸಂಸದರಾಗಿ ಪ್ರತಾಪ್ ಸಿಂಹ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸಿಕೊಂಡು ಹೋಗಲು ಸಿದ್ಧರಾಗಿದ್ದಾರೆ ಎಂದು ಹೇಳಿದರು.
ಪ್ರತಾಪ್ ಸಿಂಹರಿಗೆ ಟಿಕೆಟ್ ಸಿಗದೆ ಯದುವೀರ್ ಅವರಿಗೆ ಟಿಕೆಟ್ ನೀಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ರಾಷ್ಟ್ರೀಯ ನಾಯಕರು ಪ್ರತಾಪ್ ಸಿಂಹ ಅವರ ಬಗ್ಗೆ ಬೇರೆ ಏನಾದರೂ ಯೋಚನೆ ಮಾಡಿರುತ್ತಾರೆ. ಪ್ರತಾಪ್ ಸಿಂಹ ಅವರಿಗೆ ರಾಜಕೀಯದಲ್ಲಿ ಉಜ್ವಲ ಭವಿಷ್ಯವಿದೆ ಎಂದು ವಿಜಯೇಂದ್ರ ಹೇಳಿದರು.