Connect with us

    LATEST NEWS

    WATCH : ಕಾರು ಚಲಾಯಿಸುವಾಗ ರೀಲ್ಸ್ ಮಾಡಲು ಹೋಗಿ ಪ್ರಾ*ಣ ಕಳೆದುಕೊಂಡ ಯುವತಿ

    Published

    on

    ಮಂಗಳೂರು/ ಮಹಾರಾಷ್ಟ್ರ : ಇದು ಸೋಶಿಯಲ್ ಮೀಡಿಯಾ ಯುಗ. ಇಲ್ಲಿ ಎಲ್ಲವನ್ನೂ ಪ್ರದರ್ಶನಕ್ಕಾಗಿ, ಶೋಕಿಗಾಗಿ ಹಂಚಿಕೊಳ್ಳುವ ಪರಿಪಾಠ ಹೆಚ್ಚಾಗಿದೆ. ರೀಲ್ಸ್ ಮಾಡೋದು ಕಾಮನ್ ಆಗೋಗಿದೆ. ವೀವ್ಸ್ ಗಿಟ್ಟಿಸಿಕೊಳ್ಳಲು ಸರ್ಕಸ್ ಮಾಡೋರ ಸಂಖ್ಯೆ ಹೆಚ್ಚಾಗಿದೆ. ಈ ರೀಲ್ಸ್ ಹುಚ್ಚು ಪ್ರಾಣಕ್ಕೆ ಕುತ್ತಾಗಿರೋ ಉದಾಹರಣೆಗಳಿಗೇನೂ ಕಮ್ಮಿಯಿಲ್ಲ ಬಿಡಿ. ಇದೀಗ ಯುವತಿಯೊಬ್ಬಳು ಕಾರು ಚಲಾಯಿಸುವ ರೀಲ್ಸ್ ಮಾಡಲು ಹೋಗಿ ಪ್ರಾ*ಣ ಕಳೆದುಕೊಂಡ ಘಟನೆ ನಡೆದಿದೆ.


    ಮಹಾರಾಷ್ಟ್ರದ ಛತ್ರಿಪತಿ ಸಂಭಾಜಿನಗರದ ಸುಲಿಭಂಜನ್ ಪ್ರದೇಶದಲ್ಲಿ ಈ ಅವಘಡ ಸಂಭವಿಸಿದೆ. ಕಾರು ಚಲಾಯಿಸುತ್ತಿದ್ದ ಯುವತಿ ರಿವರ್ಸ್​ ಗೇರ್ ​ನಲ್ಲಿದ್ದಾಗ ಏಕಾಏಕಿ ಎಕ್ಸಲೇಟರ್​​ ಒತ್ತಿದ್ದಾಳೆ. ಪರಿಣಾಮ ಕಾರು ಕಂದಕಕ್ಕೆ ಬಿದ್ದಿದೆ. ಪರಿಣಾಮ ಗಂಭೀ*ರವಾಗಿ ಗಾಯಗೊಂಡ ಯುವತಿ ಇಹಲೋಕ ತ್ಯಜಿಸಿದ್ದಾಳೆ.

    ಶ್ವೇತಾ ಸುರ್ವಾಸೆ(23) ಮೃತ ಯುವತಿ. ಯುವತಿ ಆಕಸ್ಮಿಕವಾಗಿ ರಿವರ್ಸ್​ ಗೇರ್​ನಲ್ಲಿ ಎಕ್ಸಲೇಟರ್ ಒತ್ತಿದ ಕಾರಣ ಕಾರು ಹಿಂಬದಿಯ ಕ್ರ್ಯಾಶ್​ ಬ್ಯಾರಿಯರ್​ ಅನ್ನು ಮುರಿದು ಕಂದಕಕ್ಕೆ ಬಿದ್ದ ಪರಿಣಾಮ ಸಾ*ವನ್ನಪ್ಪಿದ್ದಾಳೆ. ಕಾರು ರಿವರ್ಸ್ ಗೇರ್ ನಲ್ಲಿದ್ದಾಗ ಯುವತಿ ಕ್ಲಚ್ ಬದಲು ಎಕ್ಸಲೇಟರ್ ಒತ್ತಿದ ಪರಿಣಾಮ ಕಾರು ನೇರವಾಗಿ ಕಂದಕಕ್ಕೆ ಬಿದ್ದಿದೆ.

    ಸ್ನೇಹಿತ ಶಿವರಾಜ್ ಮುಳೆ ಕಾರಿನಲ್ಲಿ ಸಂಭಾಜಿನಗರದಿಂದ ದತ್ ಮಂದಿರ ಪ್ರದೇಶಕ್ಕೆ ಬಂದಿದ್ದರು. ಶಿವರಾಜ್ ಇತ್ತೀಚೆಗಷ್ಟೇ ಶ್ವೇತಾಳಿಗೆ ಕಾರು ಓಡಿಸಲು ಕಲಿಸಿದ್ದ. ಶ್ವೇತಾಗೆ ಕಾರು ಓಡಿಸುವಾಗ ರೀಲ್ಸ್ ತಯಾರಿಸುವ ಆಸೆ ಇತ್ತು. ಮೊಬೈಲನ್ನು ಶಿವರಾಜ್ ಗೆ ಕೊಟ್ಟು ತನ್ನ ರೀಲ್ಸ್​ ಮಾಡುವಂತೆ ಹೇಳಿದ್ದಳು. ಇದ್ದಕ್ಕಿದ್ದಂತೆ ಕಾರು ರಿವರ್ಸ್ ಗೇರ್‌ನಲ್ಲಿ ಚಲಿಸಲು ಪ್ರಾರಂಭಿಸಿತು. ಈ ವೇಳೆ ಶ್ವೇತಾ ಎಕ್ಸಲೇಟರ್ ಒತ್ತಿದ್ದಾಳೆ. ಥಟ್ಟನೆ ಶ್ವೇತಾಳ ಕಾರು ವೇಗವಾಗಿ ಹಿಂದಕ್ಕೆ ಚಲಿಸತೊಡಗಿತು.

    ಇದನ್ನೂ ಓದಿ : ಪತ್ನಿಯನ್ನು ಗುಂಡಿಕ್ಕಿ ಕೊಂ*ದು ಆತ್ಮಹ*ತ್ಯೆ ಮಾಡಿಕೊಂಡ ಪತಿ!

    ಶಿವರಾಜ್​ ಕ್ಲಚ್ ಕ್ಲಚ್​ ಎಂದು ಎಷ್ಟೇ ಕೂಗಿದರೂ ಆಕೆಗೆ ಕೇಳಿಸಲೇ ಇಲ್ಲ, ಅಷ್ಟರಲ್ಲಾಗಲೇ ಕಾರು ಕೆಳಗೆ ಬಿದ್ದಿದೆ. ಕಾರು ರಿವರ್ಸ್​ ಗೇರ್​ನಲ್ಲಿದ್ದಾಗ ಅಕಸ್ಮಾತ್​ ಆಗಿ ಎಕ್ಸಲರೇಟರ್ ಒತ್ತಿದ್ದರಿಂದ ಈ ಅವಘ*ಡ ಸಂಭವಿಸಿದೆ.

    ರಕ್ಷಣಾ ಸಿಬ್ಬಂದಿ ಆ ಪ್ರದೇಶವನ್ನು ತಲುಪಲು ಗಂಟೆಗಳ ಸಮಯವನ್ನು ತೆಗೆದುಕೊಂಡಿತು, ತಕ್ಷಣ ಯುವತಿಯನ್ನು ಆಸ್ಪತ್ರೆಗೆ ಕರೆದೊಯ್ದರೂ ಯಾವುದೇ ಪ್ರಯೋಜನವಾಗದೆ, ಯುವತಿ ಜೀವಾಂತ್ಯವಾಗಿದೆ. ಘಟನೆಯ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದ್ದು, ಸದ್ಯ ವೀಡಿಯೋ ವೈರಲ್ ಆಗಿದೆ.

    DAKSHINA KANNADA

    ಜಿಲ್ಲೆಯಲ್ಲಿ ರೆಡ್ ಅಲರ್ಟ್‌..! ಜೂನ್ 27 ಶಾಲೆಗೆ ರಜೆ ಘೋಷಣೆ..!

    Published

    on

    ಮಂಗಳೂರು :  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್ 27 ರ ಗುರುವಾರದಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸರ್ಕಾರಿ, ಖಾಸಗಿ, ಅನುದಾನಿತ ಶಾಲೆಗಳು, ಅಂಗನವಾಡಿ , ಹಾಗೂ ಪ್ರೌಡಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜೂನ್ 27 ರಂದು ವ್ಯಾಪಕ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಿದೆ.

    ಈ ಕುರಿತಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಯಿಲನ್ ಅವರು ಈ ಆದೇಶ ಹೊರಡಿಸಿದ್ದಾರೆ. ಇಷ್ಟೇ ಅಲ್ಲದೆ ತೀವೃ ಮಳೆಯ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಸೂಕ್ತ ಕ್ರಮಗಳ ಬಗ್ಗೆಯೂ ಎಚ್ಚರಿಕೆ ನೀಡಿದ್ದಾರೆ. ಮೀನುಗಾರು ಸಮುದ್ರಕ್ಕೆ ಇಳಿಯದಂತೆ ಆದೇಶದಲ್ಲಿ ಸೂಚಿಸಿದ್ದಾರೆ. ನೀರು ಇರುವ ತಗ್ಗು ಪ್ರದೇಶಗಳಿಗೆ ಜನರು ತೆರಳದೇ ಇರುವುದು, ಹಾಗೂ ಮಳೆ ನೀರಿನಿಂದ ನೆರೆಯ ಆತಂಕ ಇರುವ ಜನರು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳುವಂತೆಯೂ ಸೂಚನೆ ನೀಡಿದ್ದಾರೆ.

    ಯಾವುದೇ ತುರ್ತು ಪರಿಸ್ಥಿತಿಯ ಸಮಯದಲ್ಲಿ ಜಿಲ್ಲಾಡಳಿತದ 1077 ಅಥವಾ  0824-2442590 ನಂಬರ್ ಕರೆ ಮಾಡುವಂತೆ ಸೂಚಿನೆ ನೀಡಲಾಗಿದೆ.

    Continue Reading

    LATEST NEWS

    500 ನೌಕರರನ್ನು ಕೆಲಸದಿಂದ ವಜಾಗೊಳಿಸಿದ Yes ಬ್ಯಾಂಕ್‌..!

    Published

    on

    ಮಂಗಳೂರು ( ಮುಂಬೈ ) : ದೇಶದಲ್ಲಿ ಹೆಸರು ಮಾಡಿರುವ ಖಾಸಗಿ ಬ್ಯಾಂಕ್ ಆಗಿರುವ Yes ಬ್ಯಾಂಕ್ ತನ್ನ 500 ನೌಕರರಿಗೆ ಮೂರು ತಿಂಗಳ ಸಮಾನ ವೇತನ ನೀಡಿ ಹೊರ ಹಾಕಿದೆ. ಬ್ಯುಸಿನೆಸ್ ಟುಡೆ ವರದಿ ಪ್ರಕಾರ ಯೆಸ್ ಬ್ಯಾಂಕ್‌ ಇನ್ನೂ ಅನೇಕ ನೌಕರರ ಲಿಸ್ಟ್‌ ತಯಾರಿಸಿದ್ದು, ಮುಂದಿನ ದಿನದಲ್ಲಿ ಅವರನ್ನೂ ವಜಾಗೊಳಿಸುವ ಸಾದ್ಯತೆ ಇದೆ ಎಂದು ಹೇಳಿದೆ. ಬಹುತೇಕ ಎಲ್ಲಾ ವಿಭಾಗದ ನೌಕರರು ಈ ಪಟ್ಟಿಯಲ್ಲಿ ಒಳಗೊಂಡಿದ್ದು, ನೌಕರರು ಅತಂತ್ರ ಸ್ಥಿತಿಯನ್ನು ಎದುರಿಸುತ್ತಿದ್ದಾರೆ.

    ಡಿಜಿಟಲೀಕರಣದಿಂದ ಕಾಸ್ಟ್‌ ಕಟ್ಟಿಂಗ್‌ ..!

    Yes ಬ್ಯಾಂಕ್‌ ಡಿಜಿಟಲೀಕರಣದೊಂದಿಗೆ ಗ್ರಾಹಕರ ಜೊತೆ ನೇರ ಸಂಪರ್ಕ ಮಾಡುತ್ತಿದ್ದು, ನಡುವಿನಲ್ಲಿ ಅನಗತ್ಯ ನೌಕರರ ಅಗತ್ಯ ಇಲ್ಲ ಎಂದು ಈ ತೀರ್ಮಾನಕ್ಕೆ ಬಂದಿದೆ ಎಂದು ವರದಿ ಹೇಳಿದೆ. ಬ್ಯಾಂಕ್ ತೆಗೆದುಕೊಂಡಿರುವ ಈ ನಿರ್ಧಾರದಿಂದ ಬ್ಯಾಂಕ್‌ನ ನಿರ್ವಹಣಾ ವೆಚ್ಚವನ್ನು ಸರಿದೂಗಿಸಲು ಸಾಧ್ಯವಾಗಲಿದೆ. ಬ್ಯಾಂಕ್ ವೇಗವಾಗಿ ಡಿಜಿಟಲೀಕರಣವಾಗುತ್ತಿರುವುದರಿಂದ ನೌಕರರ ಅಗತ್ಯವೂ ಕಡಿಮೆಯಾಗುತ್ತಿರುವುದಾಗಿ ಬ್ಯಾಂಕ್ ಮೂಲಗಳು ತಿಳಿಸಿದೆ. 2023 -24 ರಲ್ಲಿ Yes ಬ್ಯಾಂಕ್ ನೌಕರರಿಗೆ ನೀಡಿದ ಸ್ಯಾಲರಿ ಹಾಗೂ ಭತ್ತೆಗಳು ರೂ.3363 ಕೋಟಿಯಿಂದ ರೂ.3774 ಕೋಟಿಗಳಿಗೆ ಏರಿಕೆಯಾಗಿದೆ. ಇದೀಗ ಅನಗತ್ಯ ನೌಕರರ ವಜಾದಿಂದ ಈ ಏರಿಕೆಯನ್ನು ತಡೆಯಲು ಬ್ಯಾಂಕ್ ಮುಂದಾಗಿದೆ.

    Yes ಬ್ಯಾಂಕ್‌ನ ಈ ನಿರ್ಧಾರ ಕೇವಲ ನೌಕರರ ಮೇಲೆ ಮಾತ್ರವಲ್ಲದೆ ಶೇರ್ ಮಾರುಕಟ್ಟೆಯಲ್ಲೂ ಪ್ರಭಾವ ಬೀರಿದ್ದು Yes ಬ್ಯಾಂಕ್ ಶೇರು ಬೆಲೆ ಕುಸಿತವಾಗಿದೆ. ಮಂಗಳವಾರ 24.02 ರೂಗಳಲ್ಲಿ ಅಂತ್ಯವಾಗಿದ್ದ Yes ಬ್ಯಾಂಕ್ ಶೇರ್ ಬುಧವಾರ ನೌಕರರನ್ನು ವಜಾಗೊಳಿಸಿದ ವಿಚಾರ ಬಹಿರಂಗವಾಗುತ್ತಿದ್ದಂತೆ 23.90 ರೂಪಾಯಿಗೆ ಕುಸಿತವಾಗಿದೆ.

    Continue Reading

    LATEST NEWS

    ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್; ಜಾಮೀನು ಅರ್ಜಿ ವಜಾಗೊಳಿಸಿದ ನ್ಯಾಯಾಲಯ

    Published

    on

    ಬೆಂಗಳೂರು : ಹಾಸನ ಜೆಡಿಎಸ್​​ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶಿಸಿದೆ. ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಲೈಂ*ಗಿಕ ದೌ*ರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಪ್ರಜ್ವಲ್ ರೇವಣ್ಣ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್  ಬುಧವಾರ (ಜೂನ್ 26) ಅರ್ಜಿ ವಿಚಾರಣೆ ನಡೆಸಿದ್ದು, ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಿದೆ.


    ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಮೊದಲನೇ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಪರ ವಕೀಲರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಜಾಮೀನು ಆದೇಶ ಕಾಯ್ದಿರಿಸಿತ್ತು. ಆದರೆ, ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಪ್ರಜ್ವಲ್ ಜಾಮೀನು ಅರ್ಜಿಯನ್ನು ವಜಾ ಮಾಡಿ ಆದೇಶ ಹೊರಡಿಸಿದ್ದಾರೆ. ಇನ್ನು ಜಾಮೀನಿಗಾಗಿ ಪ್ರಜ್ವಲ್​ ಹೈಕೋರ್ಟ್​ ಮೆಟ್ಟಿಲೇರಬೇಕಿದೆ.

    ಇದನ್ನೂ ಓದಿ : ಖ್ಯಾತ ನಟ ಜಯಂ ರವಿ – ಆರತಿ ದಾಂಪತ್ಯ ಜೀವನದಲ್ಲಿ ಬಿರುಕು!?

    ಲೈಂ*ಗಿಕ ದೌರ್ಜ*ನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 42ನೇ ಎಸಿಎಂಎಂ ನ್ಯಾಯಾಲಯವು ಮಾಜಿ ಸಂಸದ ಪ್ರಜ್ವಲ್​ ರೇವಣ್ಣ ಅವರನ್ನು ಜೂನ್ 29ರ ವರೆಗೂ ಎಸ್​ಐಟಿ ಕಸ್ಟಡಿಗೆ ನೀಡಿದೆ.

    Continue Reading

    LATEST NEWS

    Trending