Connect with us

ಕಾಲ್ನಡಿಗೆಯಲ್ಲಿ ಹೊರಟಿದ್ದವರು ಬಸ್ ನಲ್ಲಿ ಹೊರಟರು: ವಲಸೆ ಕಾರ್ಮಿಕರ ಪಾಲಿಗೆ ಬೆಳಕಾದ ಮಾರ್ಗದರ್ಶಕಿ

Published

on

ಕಾಲ್ನಡಿಗೆಯಲ್ಲಿ ಹೊರಟಿದ್ದವರು ಬಸ್ ನಲ್ಲಿ ಹೊರಟರು: ವಲಸೆ ಕಾರ್ಮಿಕರ ಪಾಲಿಗೆ ಬೆಳಕಾದ ಮಾರ್ಗದರ್ಶಕಿ

ಉಡುಪಿ: ಕೊರೊನಾ ಲಾಕ್ ‌ಡೌನ್‌ ಅವಧಿಯಲ್ಲಿ ಅತ್ತ ಊರಿಗೂ ತೆರಳಲಾಗದೇ, ಇತ್ತ ದುಡಿಯುವ ಸ್ಥಳದಲ್ಲೂ ನೆಲೆ ಇಲ್ಲದೆ ಸಂಕಷ್ಟ ಪಡುತ್ತಿದ್ದ ವಲಸೆ ಕಾರ್ಮಿಕರನ್ನು ಯುವತಿಯೊಬ್ಬಳು ರಕ್ಷಿಸಿ ತವರಿಗೆ ಕಳುಹಿಸಿದ ಮಾನವೀಯ ಕಥೆ ಇಲ್ಲಿದೆ.

ಸರಕಾರ ಇಂತಹ ವಲಸೆ ಕಾರ್ಮಿಕರ ಅನುಕೂಲಕ್ಕಾಗಿಯೇ ʼಸೇವಾ ಸಿಂಧುʼ ವೆಬ್‌ಸೈಟ್ ಮುಖಾಂತರ ಹೆಸರು ನೋಂದಾಯಿಸಿ ಅವರನ್ನ ತವರು ರಾಜ್ಯಕ್ಕೆ ಕಳುಹಿಸಲು ವ್ಯವಸ್ಥೆ ಮಾಡಿದೆ.

ಆದರೆ ಅಕ್ಷರ ಜ್ಞಾನವಿಲ್ಲದ ವಲಸೆ ಕಾರ್ಮಿಕರಿಗೆ ಇಂಟರ್‌ ನೆಟ್‌ ನಲ್ಲಿ ಹೋಗಿ ʼಸೇವಾ ಸಿಂಧುʼ ವೆಬ್‌ ಸೈಟ್‌ ತೆರಳಿ ಹೆಸರು ನೋಂದಾಯಿಸಲು ಸಾಧ್ಯವಿಲ್ಲ.

ಉಡುಪಿಯ ಇಂದ್ರಾಳಿ ರೈಲ್ವೇ ನಿಲ್ದಾಣದಲ್ಲಿ ತಂಗಿದ್ದ ತೆಲಂಗಾಣ ಮೂಲದ ವಲಸೆ ಕಾರ್ಮಿಕರು ಇಂತಹದ್ದೇ ಸಂದಿಗ್ಧ ಸ್ಥಿತಿಯಲ್ಲಿ ಕಳೆದ ಎರಡು ತಿಂಗಳುಗಳನ್ನ ಕಳೆದಿದ್ದರು.

ತೆಲಂಗಾಣ ಮೂಲದ 49 ವಲಸೆ ಕಾರ್ಮಿಕರು ಇದೀಗ ಉಡುಪಿ ಜಿಲ್ಲೆಯಿಂದ ತಮ್ಮ ತವರು ರಾಜ್ಯ ತೆಲಂಗಾಣಕ್ಕೆ ತೆರಳಲು ಸಿದ್ಧರಾಗಿದ್ದಾರೆ.

ಅಚ್ಚರಿ ಅಂದ್ರೆ, ಈ ರೀತಿ ತೆರಳುತ್ತಿರುವ ಕಾರ್ಮಿಕರಿಗೆ ಉಡುಪಿ ಜಿಲ್ಲಾಡಳಿತದಿಂದ ನಿರೀಕ್ಷಿತ ಸ್ಪಂದನೆ ಸಿಕ್ಕಿರಲಿಲ್ಲ.

ಬದಲಿಗೆ ಅವರೆಲ್ಲರಿಗೂ ಸ್ಪಂದಿಸಿ ಅವರನ್ನ ಊರಿಗೆ ತಲುಪಿಸಿಯೇ ತಲುಪಿಸ್ತೀನಿ ಅಂತಾ ಪಣ ತೊಟ್ಟ ಓರ್ವ ಹೆಣ್ಣು ಮಗಳ ಶ್ರಮ ಮಾತ್ರ ಇಲ್ಲಿ ಕೆಲಸ ಮಾಡಿದೆ.

ಆಕೆಗೆ ಮಣಿಪಾಲ ಪೊಲೀಸರು ಸಾಥ್‌ ನೀಡಿದ್ದು, ಕೆಲಸ ಇನ್ನಷ್ಟು ಸುಲಭವಾಗಿಸಿದೆ.

ಇವರು ಸಾಯಿಶ್ರೀ ಅಕೊಂಡಿ. ಮೂಲತಃ ಮುಂಬೈಯವರಾಗಿರುವ ಇವರು 2018 ರಲ್ಲಿ ಎಂಐಟಿಯಲ್ಲಿ ಬಿಟೆಕ್ ಮುಗಿಸಿಕೊಂಡವರು.

ಇತ್ತೀಚೆಗೆ ಮತ್ತೆ ಕೆಲಸ ನಿಮಿತ್ತ ಮಣಿಪಾಲಕ್ಕೆ ಆಗಮಿಸಿದ್ದ ಸಾಯಿಶ್ರೀ ಕೂಡಾ ಲಾಕ್‌ ಡೌನ್‌ ನಿಂದಾಗಿ ಮಣಿಪಾಲದಲ್ಲಿಯೇ ಉಳಿಯುವಂತಾಗಿದೆ.

ಕೆಲ ದಿನಗಳ ಹಿಂದೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಸಂದರ್ಭ ವಲಸೆ ಕಾರ್ಮಿಕರ ಸ್ಥಿತಿ ಕಂಡು ಮರುಗಿದ್ದಾರೆ.

ಮೊದಲೇ ಭಾಷಾ ಸಮಸ್ಯೆಯಿಂದ ತಮ್ಮ ಸಮಸ್ಯೆ ಹೇಳಿಕೊಳ್ಳಲು ಪರದಾಡುತ್ತಿದ್ದ ತೆಲಂಗಾಣದ ಕಾರ್ಮಿಕರಿಗೆ ತೆಲುಗು ಬಲ್ಲ ಸಾಯಿಶ್ರೀ ಸಹಾಯಹಸ್ತ ನೀಡಿದ್ದಾರೆ.

ಸ್ವತ: ತಾನೇ ಮೇ 12 ರಂದು ʼಸೇವಾ ಸಿಂಧುʼ ವೆಬ್‌ಸೈಟ್‌ ಗೆ ತೆರಳಿ ಕಾರ್ಮಿಕರ ಹೆಸರು ನೋಂದಾಯಿಸಿದ್ದಾರೆ.

ತನ್ನ ಟ್ವಿಟ್ಟರ್‌ ಖಾತೆಯ ಮೂಲಕ ತೆಲಂಗಾಣ ಸಿಎಂ, TRS ಪಕ್ಷದ ನಾಯಕಿ ಕವಿತಾ ಅವರಿಗೂ, ಕಾರ್ಮಿಕರ ಸಂಕಷ್ಟದ ಬಗ್ಗೆ ಬರೆದು ಟ್ಯಾಗ್‌ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.

ಟ್ವೀಟ್‌ಗೆ ತಕ್ಷಣವೇ ತೆಲಂಗಾಣ ಸಿಎಂ ಕಚೇರಿಯಿಂದ ಪ್ರತಿಕ್ರಿಯೆಯೂ ಬಂತು. ತಮ್ಮ ರಾಜ್ಯದ ಕಾರ್ಮಿಕರಿಗೆ ಸ್ಪಂದಿಸುವ ಭರವಸೆ ನೀಡಿದರು.

KSRTC ಬಸ್‌ ಸಂಪರ್ಕಿಸಿದಾಗ 2 ಬಸ್‌ಗಳನ್ನು ನೀಡಲು ಮುಂದಾಗಿದ್ದಾರೆ. ಆದರೆ 1,98,200 ರೂಪಾಯಿ ಬಸ್‌ ದರವನ್ನು ನಿಗದಿಪಡಿಸಿದರು.

ಸಾಯಿಶ್ರೀ ತಾನೇ  ಸಾರ್ವಜನಿಕರಿಂದ 50 ಸಾವಿರ ರೂಪಾಯಿ ಸಂಗ್ರಹಿಸಿದ್ದಾರೆ. ತೆಲಂಗಾಣ ಸರಕಾರವೇ ಉಳಿದ ಹಣವನ್ನ ನೀಡುವುದಾಗಿ ಹೇಳಿದೆ.

ಕಾರ್ಮಿಕರಲ್ಲಿ 20 ಮಂದಿ ಮಹಿಳೆಯರಾಗಿದ್ದು,  ಒಬ್ಬಾಕೆ ಗರ್ಭಿಣಿಯಾದರೆ, 10 ಮಕ್ಕಳಿದ್ದು ಅದರಲ್ಲಿ 5 ವರುಷದ ಕೆಳಗಿನವರು ಹಾಗೂ ಒಂದು ವರುಷದ ಎರಡು ಕಂದಮ್ಮಗಳಿದ್ದರು.

ಕಾಲ್ನಡಿಗೆಯಲ್ಲಿ ಊರಿಗೆ ಹೊರಟಿದ್ದ ಕಾರ್ಮಿಕರು ಕೊನೆಗೂ ಬಸ್ ನಲ್ಲಿ ತೆಲಂಗಾಣ ಕ್ಕೆ ತೆರಳಿದ್ದಾರೆ.

ಎರಡು KSRTC ಬಸ್‌ಗಳ ಮೂಲಕ ವಲಸೆ ಕಾರ್ಮಿಕರು ತಮ್ಮ ಊರಿಗೆ ವಾಪಾಸ್‌ ಆಗಿದ್ದಾರೆ. ಈ ವೇಳೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಯುವತಿಯ ಮಾನವೀಯತೆಯನ್ನು ಅಭಿನಂದಿಸಿದ್ದಾರೆ.

Click to comment

Leave a Reply

Your email address will not be published. Required fields are marked *

bangalore

ಮಹಿಳೆಯ ಅತಿಯಾದ ಕಾಮದಾಹ…! ದಾಹಕ್ಕೆ ಅಂತ್ಯ ಹಾಡಿದ ಯುವಕ..!

Published

on

ಆಕೆ 48 ವರ್ಷ ಪ್ರಾಯದ ಮಹಿಳೆಯಾಗಿದ್ದು, ತನ್ನಿಬ್ಬರು ಹೆಣ್ಣು ಮಕ್ಕಳಿಗೆ ಮದುವೆ ಮಾಡಿಸಿ ಗಂಡನ ಮನೆಗೆ ಕಳುಹಿಸಿ ಕೊಟ್ಟಿದ್ದಾಳೆ. ಬೆಂಗಳೂರಿನ ಕೊಡಿಗೆ ಹಳ್ಳಿಯಲ್ಲಿ ಮನೆ ಮಾಡಿಕೊಂಡು ಒಂಟಿಯಾಗಿದ್ದ ಆಕೆಯ ದೇಹ ನಗ್ನವಾಗಿ ಬೆಡ್‌ರೂಮಿನಲ್ಲಿ ಪತ್ತೆಯಾಗಿತ್ತು. ಎಪ್ರಿಲ್ 19 ರಂದು ನಡೆದಿದ್ದ ಈ ಘಟನೆಯನ್ನು ಭೇದಿಸಿದ ಪೊಲೀಸರಿಗೆ ಶಾಕ್ ಆಗುವಂತ ವಿಚಾರಗಳು ಗೊತ್ತಾಗಿದೆ.

ಕೊಡಿಗೆ ಹಳ್ಳಿಯ ಭದ್ರಪ್ಪ ಲೇಔಟ್‌ನಲ್ಲಿ ನಡೆದಿದ್ದ ಶೋಭಾ ಎಂಬ ಮಹಿಳೆಯ ಕೊ*ಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ ಕೊಲೆ ಆರೋಪಿಯಾಗಿರುವ ನವೀನ್ ಎಂಬ ಯುವಕನನ್ನು ಕೊಡಿಗೆ ಹಳ್ಳಿಯ ಪೊಲೀಸರು ಬಂದಿಸಿದ್ದಾರೆ. ವಿಚಾರಣೆ ವೇಳೆ ಬಾಯ್ಬಿಟ್ಟ ವಿಚಾರ ಕೇಳಿ ಪೊಲೀಸರೇ ಸುಸ್ತಾಗಿದ್ದಾರೆ. ಬಳಿಕ ಹೆಚ್ಚಿನ ತನಿಖೆ ನಡೆಸಿದ ಪೊಲೀಸರಿಗೆ ಶೋಭಾಳ ಕಾಮದಾಹ ಬೆಳಕಿಗೆ ಬಂದಿದೆ.

ಶೋಭಾಳಿಗೆ ಇನ್‌ಸ್ಟಾಗ್ರಾಂ ಮೂಲಕ ಪರಿಚಿತನಾಗಿದ್ದ ನವೀನ್ ಬಳಿಕ ಸ್ನೇಹಿತನಾಗಿ, ಅದು ಪ್ರೀತಿಗೆ ತಿರುಗಿ ಬಳಿಕ ಇಬ್ಬರ ನಡುವೆ ಅನೈತಿಕ ಸಂಬಂಧದವರೆಗೂ ಬಂದು ನಿಂತಿತ್ತು. ಮಗನ ವಯಸ್ಸಿನ ಹುಡುಗನ ಜೊತೆಯಲ್ಲಿ ನಿರಂತರ ಸೆಕ್ಸ್ ಮಾಡುತ್ತಿದ್ದ ಶೋಭಾಳ ಅತಿಯಾದ ಕಾಮಧಾಹದಿಂದ ಬೇಸತ್ತು ಆಕೆಯನ್ನು ಕೊಲೆ ಮಾಡಿದ್ದಾಗಿ ಹೇರೋಹಳ್ಳಿ ಮೂಲದ ಆರೋಪಿ ನವೀನ್ ಹೇಳಿಕೆ ನೀಡಿದ್ದಾನೆ.

ಕೊಲೆ ನಡೆದ ದಿನವೂ ಶೋಭಾ ಮನೆಗೆ ನವೀನ್ ಬಂದಿದ್ದ. ಏ.19ರಂದು ಇಬ್ಬರು ದೈಹಿಕ ಸಂರ್ಪಕವನ್ನು ಬೆಳೆಸಿದ್ದರು. ಆ ನಂತರ ಶೋಭಾ ಮತ್ತೆ ನವೀನ್‌ಗೆ ಸೆಕ್ಸ್‌ಗೆ ಒತ್ತಾಯಿಸಿದ್ದು ನಿರಾಕರಿಸಿದಾಗ ಬ್ಲ್ಯಾಕ್‌ಮೇಲ್ ಮಾಡಿದ್ದಾಳೆ. ಈಕೆ ಅತಿಯಾಗಿ ಸೆಕ್ಸ್‌ಗೆ ಒತ್ತಾಯಿಸಿದ್ದಕ್ಕೆ ಬೇಸರಗೊಂಡ ನವೀನ್‌ ಬೆಡ್‌ ರೂಮಿನಲ್ಲೇ ಆಕೆಯ ಕಥೆ ಮುಗಿಸಿದ್ದ.

48ರ ಮಹಿಳೆಗೆ ಯುವಕರ ಮೇಲೆ ಹುಚ್ಚು

48ರ ಶೋಭಾ ಕೇವಲ ನವೀನ್ ಮಾತ್ರವಲ್ಲದೇ ಅನೇಕ ಯುವಕರ ಸಹವಾಸ ಬೆಳೆಸಿದ್ದಳು. ಒಬ್ಬೊಬ್ಬ ಹುಡುಗರಿಗೂ ಒಂದೊಂದು ಹಣ್ಣಿನ ಹೆಸರಿಟ್ಟಿದ್ದು, ನವೀನ್‌ಗೆ ಆ್ಯಪಲ್ ಎಂದು ಹೆಸರಿಟ್ಟಿದ್ದಳಂತೆ. ಆ್ಯಪಲ್, ಆರೆಂಜ್, ಬನಾನ ಹೆಸರಿನಲ್ಲಿ ಹುಡುಗರ ಹೆಸರು ಸೇವ್ ಮಾಡಿಕೊಳ್ಳುತ್ತಿದ್ದಳು. ಆ್ಯಪ್‌ಗಳಲ್ಲಿಯೂ ಆ್ಯಕ್ಟಿವ್ ಆಗಿದ್ದ ಶೋಭಾ ಸುಮಾರು 20 ಕ್ಕೂ ಹೆಚ್ಚು ಹುಡುಗರನ್ನು ಖೆಡ್ಡಾಗೆ ಬೀಳಿಸಿಕೊಂಡಿದ್ದಳು. ಈಕೆ ಕರೆದಾಗ ಯುವಕರು ಏನಾದರೂ ಬಾರದೆ ಇದ್ದರೆ ಅವರ ಮನೆ ಬಳಿಯೇ ಹೋಗುತ್ತಿದ್ದಳು. ನಂತರ ಕಾರಿನ ಹಾರ್ನ್ ಜೋರಾಗಿ ಹಾಕುತ್ತಿದ್ದಳು. ಇಷ್ಟಕ್ಕೂ ಜಗ್ಗದೆ ಹೋದರೆ ಮನೆಯವರಿಗೆ ಖಾಸಗಿ ಫೋಟೊವನ್ನು ತೋರಿಸುವುದಾಗಿ ಬೆದರಿಕೆ ಹಾಕುತ್ತಿದ್ದಳು. ಅಷ್ಟೇ ಅಲ್ಲದೆ ಆ ಯುವಕರ ಮದುವೆಗೂ ಅಡ್ಡಿ ಪಡಿಸಿ ಮದುವೆ ನಿಲ್ಲಿಸಿದ್ದಳು.

ಕೊಲೆಯಾದ ದಿನವೂ ನವೀನ್‌ಗೆ ಬ್ಲಾಕ್ ಮೇಲ್ ಮಾಡಿ ಕರೆಸಿಕೊಂಡಿದ್ದಳು. ನವೀನ್‌ ಎಡಗೈಗೆ ಗಾಯವಾಗಿತ್ತು, ಗಾಯದ ಮೇಲೆ ಕೂತು ನೀನು‌ ಮದುವೆ ಆಗಬಾರದು, ಹೀಗೆ ನನ್ನ ಜತೆ ಇರಬೇಕು. ಮದುವೆ ಆದರೆ ಅಲ್ಲೆ ಬಂದು ಗಲಾಟೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಳು. ಇದರಿಂದ ಬೇಸತ್ತ ನವೀನ್‌, ಶೋಭಾಳ ಕತ್ತು ಹಿಸುಕಿ ಕೊ*ಲೆ‌ ಮಾಡಿದ್ದಾಗಿ ವಿಚಾರಣೆ ವೇಳೆ ಹೇಳಿದ್ದಾನೆ.

Continue Reading

LATEST NEWS

ನ್ಯೂಡಲ್ಸ್ ಪ್ಯಾಕೇಟ್ ನಲ್ಲಿ ಸಿಕ್ಕಿತು 6 ಕೋಟಿ ರೂ. ಮೌಲ್ಯದ ಡೈಮಂಡ್!

Published

on

ಮುಂಬೈ : ಹಣ, ಚಿನ್ನವನ್ನು ಖದೀಮರು ಎಲ್ಲೆಲ್ಲೋ ಅಡಗಿಸಿಟ್ಟುಕೊಂಡು ಸಾಗಿಸುವ ಸುದ್ದಿಗಳನ್ನು ಕೇಳುತ್ತಿರುತ್ತೇವೆ. ಆದರೆ, ಇಲ್ಲೊಬ್ಬ ನೂಡಲ್ಸ್ ಪ್ಯಾಕೇಟ್ ನಲ್ಲಿ ಡೈಮಂಡ್ಸ್ ಸಾಗಿಸಲು ಯತ್ನಿಸಿ ಸಿಕ್ಕಿ ಹಾಕಿಕೊಂಡಿದ್ದಾನೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಇಲಾಖೆ ಅಧಿಕಾರಿಗಳು ತಪಾಸಣೆ ನಡೆಸುವ ವೇಳೆ ನೂಡಲ್ಸ್ ಪ್ಯಾಕೆಟ್​ಗಳಲ್ಲಿ ಹುದುಗಿಸಿಟ್ಟಿದ್ದ ವಜ್ರಗಳ ಹರಳುಗಳು ಪತ್ತೆಯಾಗಿವೆ. 6.48 ಕೋಟಿ ರೂಪಾಯಿ ಎಂದು ಮೌಲ್ಯದ ಹರಳನ್ನು ವಶಕ್ಕೆ ಪಡೆಯಲಾಗಿದೆ.


ಮುಂಬೈನಿಂದ ಬ್ಯಾಂಕಾಕ್​​ ಪ್ರಯಾಣಿಸುತ್ತಿದ್ದ ಭಾರತೀಯ ಪ್ರಜೆಯನ್ನು ವಶಕ್ಕೆ ಪಡೆಯಲಾಯಿತು. ಈ ವೇಳೆ ಆತನ ಟ್ರಾಲಿ ಬ್ಯಾಗ್​ನಲ್ಲಿ ನೂಡಲ್ಸ್ ಪ್ಯಾಕೆಟ್​ಗಳಿದ್ದವು. ಅದರಲ್ಲಿ ಅಡಗಿಸಿಟ್ಟಿದ್ದ ವಜ್ರಗಳಿದ್ದು ಅವುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಹಲವರು ವಶಕ್ಕೆ

ಕೊಲಂಬೋದಿಂದ ಮುಂಬೈಗೆ ಪ್ರಯಾಣಿಸುತ್ತಿದ್ದ ವಿದೇಶಿ ಪ್ರಜೆಯೊಬ್ಬರು ಚಿನ್ನದ ಗಟ್ಟಿಗಳು ಮತ್ತು ಕತ್ತರಿಸಿದ ತುಂಡನ್ನು ಸಾಗಿಸುತ್ತಿರುವುದು ಕಂಡುಬಂದಿದೆ. 321 ಗ್ರಾಂ ತೂಕದ ಚಿನ್ನವನ್ನು ತನ್ನ ಒಳ ಉಡುಪುಗಳಲ್ಲಿ ಅಡಗಿಸಿಟ್ಟಿದ್ದ ಆತನನ್ನು ವಶಕ್ಕೆ ಪಡೆಯಲಾಗಿದೆ.

ದುಬೈ ಮತ್ತು ಅಬುಧಾಬಿಯಿಂದ ತಲಾ ಇಬ್ಬರು, ಬಹ್ರೇನ್, ದೋಹಾ, ರಿಯಾದ್, ಮಸ್ಕತ್, ಬ್ಯಾಂಕಾಕ್ ಮತ್ತು ಸಿಂಗಾಪುರದಿಂದ ತಲಾ ಒಬ್ಬರು ಸೇರಿದಂತೆ ಕನಿಷ್ಠ 10 ಭಾರತೀಯ ಪ್ರಜೆಗಳನ್ನು ತಡೆಹಿಡಿಯಲಾಯಿತು. ಈ ವೇಳೆ 4.04 ಕೋಟಿ ಮೌಲ್ಯದ 6.199 ಕೆ.ಜಿ ಚಿನ್ನ ಸಾಗಿಸುತ್ತಿರುವುದು ಕಂಡುಬಂದಿದೆ. ಅವರಲ್ಲಿ ಮೂವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ : ರಜೆಯಿದೆ ಎಂದು ಪ್ರವಾಸಕ್ಕೆ ಹೊರಟಿದ್ದೀರಾ? ಗಮನಿಸಿ, ಈ ಪ್ರವಾಸಿ ತಾಣಗಳಿಗಿದೆ ನಿರ್ಬಂಧ
ಮುಂಬೈ ವಿಮಾನ ನಿಲ್ದಾಣದಿಂದ ಕಳ್ಳಸಾಗಣೆ ಮಾಡಿದ ಚಿನ್ನವನ್ನು ಹೊರತರಲು ಸಹಾಯ ಮಾಡಿದ್ದ ಆರೋಪದ ಮೇಲೆ ಅಲ್ಲಿನ ಫಾಸ್ಟ್ ಫುಡ್ ರೆಸ್ಟೋರೆಂಟ್ 38 ವರ್ಷದ ಉದ್ಯೋಗಿಯನ್ನು ಮುಂಬೈ ಕಸ್ಟಮ್ಸ್​ನ ಏರ್ ಇಂಟೆಲಿಜೆನ್ಸ್ ಯುನಿಟ್ ಬಂಧಿಸಿದೆ. ಸುಮಾರು 1.86 ಕೋಟಿ ಮೌಲ್ಯದ 6 ಅಂಡಾಕಾರದ ಚಿನ್ನದ ಕ್ಯಾಪ್ಸೂಲ್ಸ್​ನಲ್ಲಿ ತನ್ನ ಬೆಲ್ಟ್​​ನಲ್ಲಿ ಅಡಗಿಸಿಟ್ಟಿದ್ದ ಬಗ್ಗೆ ವರದಿಯಾಗಿದೆ.

Continue Reading

BANTWAL

ಬಂಟ್ವಾಳ : ಬಾವಿಯೊಳಗೆ ರಿಂಗ್ ಅಳವಡಿಸಲು ಇಳಿದ ಇಬ್ಬರು ಸಾ*ವು

Published

on

ಬಂಟ್ವಾಳ : 30 ಅಡಿ ಇರುವ ಆಳದ ಬಾವಿಗೆ ರಿಂಗ್‌ ಅಳವಡಿಸಲು ಇಳಿದ ಇಬ್ಬರು ಕೂಲಿ ಕಾರ್ಮಿಕರು ಬಾವಿಯೊಳಗೆ ಆಕ್ಸಿಜನ್ ಸಿಗದೇ ಸಾ*ವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಪಡಿಬಾಗಿಲಿನಲ್ಲಿ ನಡೆದಿದೆ.


ಮೃ*ತರನ್ನು ಪರ್ತಿಪ್ಪಾಡಿ ನಿವಾಸಿ ಇಬ್ರಾಹಿಂ(40) ಹಾಗೂ ಮಲಾರ್ ನಿವಾಸಿ ಆಲಿ (24) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ : ಡಿವೈಡರ್ ಗೆ ಡಿ*ಕ್ಕಿ ಹೊಡೆದ ಬೈಕ್; ಸವಾರ ಸ್ಥಳದಲ್ಲೇ ಸಾ*ವು

ಮೃ*ತ ಇಬ್ರಾಹಿಂ ಎಂಬವರು ಸುಮಾರು 20 ವರ್ಷಗಳಿಂದ ಬಾವಿಗೆ ರಿಂಗ್ ಹಾಕುವಲ್ಲಿ ಪರಿಣಿತರಾಗಿದ್ದರು. ಮೃ*ತ ದೇಹವನ್ನು ಬಾವಿಯಿಂದ ಮೇಲಕ್ಕೆತ್ತಲಾಗಿದೆ.

Continue Reading

LATEST NEWS

Trending