Connect with us

    LATEST NEWS

    ಕಣಗಿಲೆ ಹೂ ತಿಂದು ಇಹಲೋಕ ತ್ಯಜಿಸಿದ ಯುವತಿ!

    Published

    on

    ತಿರುವನಂತಪುರಂ : ಕಣಗಿಲೆ(Oleander flower) ಹೂವು ಹಾಗೂ ಅದರ ಎಲೆಯ ರಸವನ್ನು ಸೇವಿಸಿ ಯುವತಿಯೊಬ್ಬಳು ಮೃ*ತಪಟ್ಟ ಘಟನೆ ಕೇರಳದ ಹರಿಪಾಡ್ ಸಮೀಪದ ಪಲ್ಲಿಪ್ಪಾಡ್ ನಲ್ಲಿ ನಡೆದಿದೆ. ಪಲ್ಲಿಪ್ಪಾಡ್‌ನ ನೀಂದೂರ್‌ನ ಕೊಂಡುರೆತ್ತು ಮನೆಯ ಸುರೇಂದ್ರನ್‌ ಅವರ ಪುತ್ರಿ ಸೂರ್ಯ ಸುರೇಂದ್ರನ್‌(24) ಮೃ*ತಪಟ್ಟವರು.


    ಯುಕೆಗೆ ಹೋಗಬೇಕಿದ್ದವಳು ಸಾ*ವಿನ ಕದ ತಟ್ಟಿದಳು :

    ಸೂರ್ಯ ಸುರೇಂದ್ರನ್‌ ಅವರ ಭಾನುವಾರ ನರ್ಸಿಂಗ್‌ ಕೆಲಸಕ್ಕೆ ಸೇರಲು ಯುಕೆಗೆ ತೆರಳುತ್ತಿದ್ದರು. ಕೆಲಸಕ್ಕಾಗಿ ವಿಮಾನ ನಿಲ್ದಾಣಕ್ಕೆ ಬಂದಾಗ ನೆಡುಂಬಶ್ಶೇರಿ ವಿಮಾನ ನಿಲ್ದಾಣದಲ್ಲಿ ಕುಸಿದು ಬಿದ್ದಿದ್ದಾರೆ. ನಂತರ ಆಕೆಯನ್ನು ಅಂಗಮಾಲಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ತಿರುವಲ್ಲಾ ಬಳಿಯ ಪರುಮಳದ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ, ಸೋಮವಾರ ಮೃ*ತಪಟ್ಟಿದ್ದಾಳೆ.

    ಫೋನ್ ನಲ್ಲಿ ಮಾತನಾಡುತ್ತಾ ಹೂ ತಿಂದ ಯುವತಿ :

    ಸೂರ್ಯ ಸುರೇಂದ್ರನ್‌ ಅವರ ಭಾನುವಾರ ನರ್ಸಿಂಗ್‌ ಕೆಲಸಕ್ಕೆ ಸೇರಲು ಯುಕೆಗೆ ತೆರಳುವ ತಯಾರಿಯಲ್ಲಿದ್ದರು. ಭಾನುವಾರ ಬೆಳಗ್ಗೆ ಮನೆಯಿಂದ ಫೋನ್ ಮೂಲಕ ಸಂಬಂಧಿಕರು ಮತ್ತು ಸ್ನೇಹಿತರಿಗೆ ತನ್ನ ಪ್ರಯಾಣದ ವಿಷಯವನ್ನು ತಿಳಿಸಿದ್ದಾಳೆ.

    ಮೊಬೈಲ್ ಫೋನ್‌ನಲ್ಲಿ ಮಾತನಾಡುತ್ತಾ ಓಡಾಡುವಾಗ, ಗೊತ್ತಿಲ್ಲದೆ ಎಲೆ ಮತ್ತು ಹೂವನ್ನು ಕಚ್ಚಿದ್ದಾರೆ. ತಕ್ಷಣವೇ ಅದನ್ನು ಉಗುಳಿದ್ದಾರೆ. ಆದರೂ, ಎಲೆ ಮತ್ತು ಹೂವಿನ ರಸದ ಕೆಲವು ಹನಿಗಳು ದೇಹಕ್ಕೆ ಸೇರಿಕೊಂಡಿದ್ದವು ಎಂದು ಮೃ*ತ ಯುವತಿ ಸೂರ್ಯ ಸುರೇಂದ್ರನ್‌ ತನ್ನ ಪೋಷಕರು ಮತ್ತು ವೈದ್ಯರಿಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ ಎಂದು ವರದಿಯಾಗಿದೆ.

    ಇದನ್ನೂ ಓದಿ : ಶವರ್ಮಾ ತಿಂದು ಪ್ರಾಣಬಿಟ್ಟ 19 ವರ್ಷದ ಯುವಕ

    ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ಆಕೆಯ ರಕ್ತದಲ್ಲಿ ವಿಷಕಾರಿ ಅಂಶ ಕಂಡುಬಂದಿದೆ ಎಂದು ಬಹಿರಂಗಪಡಿಸಿದ್ದಾರೆ. ಆದರೆ, ಆಕೆಯ ಹೊಟ್ಟೆಯಲ್ಲಿ ಹೂವು ಅಥವಾ ಎಲೆಯ ಅವಶೇಷಗಳು ಕಂಡುಬಂದಿಲ್ಲ. ಆಕೆಯ ಸಾ*ವಿಗೆ ನಿಜವಾಗಿಯೂ ಕಣಗಿಲೆ ಹೂ ಕಾರಣವಾಯ್ತ ಅನ್ನೋದು ತನಿಖೆಯಿಂದ ತಿಳಿಯಬೇಕಿದೆ.

    DAKSHINA KANNADA

    ಪಡೀಲ್‌ ಕಣ್ಣೂರು ಬಳಿ ಭೀಕರ ವಾಹನ ಅಪಘಾ*ತ; ಕೇಬಲ್ ಟೆಕ್ನಿಷಿಯನ್ ವಿಧಿವ*ಶ

    Published

    on

    ಮಂಗಳೂರು : ಪಡೀಲ್‌ ಕಣ್ಣೂರು ಬಳಿ ನಡೆದ ರಸ್ತೆ ಅಪಘಾ*ತದಲ್ಲಿ ನಮ್ಮ ಕುಡ್ಲ ವಾಹಿನಿಯ ಸಹಸಂಸ್ಥೆ ವಿಝಾರ್ಡ್‌ ಕೇಬಲ್‌ ನೆಟ್ ವರ್ಕ್‌ನ ಸಿಬಂದಿ ಹರೀಶ್ (45) ವಿಧಿವ*ಶರಾಗಿದ್ದಾರೆ. ಕರ್ತವ್ಯ ನಿಮಿತ್ತ ಫರಂಗಿಪೇಟೆಗೆ ತೆರಳಿದ್ದ ಹರೀಶ್ ಪಡೀಲ್‌ ಕಣ್ಣೂರು ಬಳಿ ಬೈಕ್ ನಿಲ್ಲಿಸಿದ್ದ ವೇಳೆ ವೇಗವಾಗಿ ಬಂದ ಡಸ್ಟರ್‌ ಕಾರೊಂದು ಬೈಕ್‌ಗೆ ಡಿ*ಕ್ಕಿ ಹೊಡೆದಿದೆ.


    ಮಹಿಳೆಯೊಬ್ಬರು ಕಾರು ಚಲಾಯಿಸುತ್ತಿದ್ದು, ಬೈಕ್‌ಗೆ ಡಿ*ಕ್ಕಿ ಹೊಡೆದ ಬಳಿಕ ಅಲ್ಪ ದೂರ ಚಲಿಸಿದ ಕಾರಣ ಬೈಕ್ ಸಹಿತ ಹರೀಶ್ ಕಾರಿನ ಅಡಿಗೆ ಸಿಲುಕಿಕೊಂಡಿದ್ದರು. ಈ ಭೀಕರ ಅಪಘಾ*ತದಲ್ಲಿ ಗಂಭೀರ ಗಾಯಗೊಂಡಿದ್ದ ಹರೀಶ್ ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದರೆ, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ.

    ಹರೀಶ್ ಕಲ್ಲಾಪು ಅವರು ಹಲವಾರು ವರ್ಷಗಳಿಂದ ವಿಝಾರ್ಡ್‌ ಕೆಬಲ್ ನೆಟ್‌ವರ್ಕ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

    ಇದನ್ನೂ ಓದಿ : ಕಾರ್ಕಳ : ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿ*ಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾ*ವು

    ಅಗಲಿದ ಸಿಬ್ಬಂದಿಗೆ ನಮ್ಮ ಕುಡ್ಲ ವಾಹಿನಿಯ ನಿರ್ದೇಶಕರು ಹಾಗೂ ಸಿಬಂದಿ ಸಂತಾಪ ಸೂಚಿಸಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಮೃ*ತ ಹರೀಶ್‌ ಅವರು ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.

    Continue Reading

    LATEST NEWS

    ಕಾರ್ಕಳ : ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿ*ಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾ*ವು

    Published

    on

    ಕಾರ್ಕಳ : ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿ*ಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃ*ತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ. ಸೋಮವಾರ ಬೆಳ್ಳಂಬೆಳಗ್ಗೆ ಪಳ್ಳಿ ಗರಡಿ ಸಮೀಪ ಈ ಭೀಕರ ಅಪಘಾತ ಸಂಭವಿಸಿದೆ.

    ಕ್ರಶರ್ ನಿಂದ ಬರುತ್ತಿದ್ದ ಟಿಪ್ಪರ್ ಚಾಲಕನ ಅತೀವೇಗವೇ ಈ ದುರ್ಘಟನೆಗೆ ಕಾರಣ ಎನ್ನಲಾಗಿದೆ. ನೇಪಾಳ ಮೂಲದ ಕಮಲ್ ಇಹಲೋಕ ತ್ಯಜಿಸಿದ ಬೈಕ್ ಸವಾರ. ಗಾಯಾಳುಗಳನ್ನು ನೇಪಾಳ ಮೂಲದ ಪ್ರಸನ್ನ (26) ಹಾಗೂ ಬಚ್ಚನ್ ಡಿಸೋಜ(26) ಎಂದು ಗುರುತಿಸಲಾಗಿದೆ.

    ಇದನ್ನೂ ಓದಿ : ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರಿಂದ ದಾಳಿ; ಡ್ರ*ಗ್ಸ್ ಪತ್ತೆ! ಪಾರ್ಟಿಯಲ್ಲಿದ್ದರು ನಟ – ನಟಿಯರು,.!

    ಮೃ*ತದೇಹವನ್ನು ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಕಾರ್ಕಳ ನಗರ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Continue Reading

    FILM

    ‘ಅಣ್ಣಾವ್ರ’ ಹಾಡು ಹಾಡಿದ ‘ಮೋಹನ್ ಲಾಲ್’; ವೀಡಿಯೋ ವೈರಲ್

    Published

    on

    ಬೆಂಗಳೂರು: ಮಲಯಾಳಂ ಸೂಪರ್ ಸ್ಟಾರ್ ನಟ ಮೋಹನ್‌ ಲಾಲ್ ರವರು ಡಾ. ರಾಜ್‌ಕುಮಾರ್ ಜೊತೆ ಅವಿನಾಭಾವ ಸಂಬಂಧವಿತ್ತು. ಇಬ್ಬರ ನಡುವೆ ಒಂದೊಳ್ಳೆ ಬಾಂಧವ್ಯವಿತ್ತು. ಇದಕ್ಕೆ ಸಾಕ್ಷಿ ಅನ್ನುವಂತೆ ಹೊಸ ವೀಡಿಯೋ ಒಂದು ವೈರಲ್ ಆಗಿದೆ. ಈ ವೀಡಿಯೋದಲ್ಲಿ ರಾಜ್‌ಕುಮಾರ್‌ ನಟನೆಯ ‘ಎರಡು ಕನಸು’ ಸಿನೆಮಾದ ‘ಎಂದೆಂದೂ ನಿನ್ನನು ಮರೆತು ನಾನಿರಲಾರೆ..’ ಎಂಬ ಹಾಡನ್ನು ಹಾಡಲು ಪ್ರಯತ್ನಿಸಿದ್ದಾರೆ. ಇನ್ನು ಡಾ. ರಾಜ್‌ಕುಮಾರ್ ಅವರಿಗೆ ಟಾಲಿವುಡ್, ಬಾಲಿವುಡ್ ಸೇರಿದಂತೆ ಎಲ್ಲಾ ಕಡೆ ಅಭಿಮಾನಿಗಳು ಇರುವುದು ವಿಶೇಷ.

    mohan lal

    Read More..; ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರಿಂದ ದಾಳಿ; ಡ್ರ*ಗ್ಸ್ ಪತ್ತೆ! ಪಾರ್ಟಿಯಲ್ಲಿದ್ದರು ನಟ – ನಟಿಯರು,.!

    ಇನ್ನು ಮೋಹನ್‌ಲಾಲ್ ಕನ್ನಡ ಸಿನೆಮಾಗಳಲ್ಲೂ ಬಣ್ಣ ಹಚ್ಚಿದ್ದಾರೆ. ಕನ್ನಡ ಚಿತ್ರರಂಗದಲ್ಲೂ ಹಲವಾರು ಅಭಿಮಾನಿಗಳನ್ನು ಹೊಂದಿದ್ದಾರೆ. ಲಾಲೇಟ ಎಂದೇ ಎಲ್ಲರಿಗೂ ಪ್ರೀತಿಪಾತ್ರರಾಗಿರುವ ಮೋಹನ್‌ಲಾಲ್‌ರವರ ಮೇ.21ರಂದು ಹುಟ್ಟುಹಬ್ಬ.

    Continue Reading

    LATEST NEWS

    Trending