Connect with us

LATEST NEWS

ಅಬ್‌ ಕೀ ಬಾರ್‌ 500 ಪಾರ್… ! ಪ್ರಚಾರ ಕಣಕ್ಕಿಳಿದ ಗ್ರೇಟ್ ಕಲಿ..!

Published

on

ಶ್ರೀನಗರ : ಅಬ್‌ ಕೀ ಬಾರ್ 500 ಪಾರ್ ಅಂತ ಭಾರತದ ಡಬ್ಲ್ಯು ಡಬ್ಲ್ಯು ಎಫ್‌ ನ ಗ್ರೇಟ್‌ ಕಲಿ ಘೋಷಣೆ ಕೂಗಿದ್ದಾರೆ. ಬಿಜೆಪಿ ಪರ ಚುನಾವಣೆಯ ಪ್ರಚಾರ ಆರಂಭಿಸಿರುವ ಗ್ರೇಟ್ ಕಲಿ ಇಂತ ಒಂದು ಘೋಷಣೆ ಕೂಗಿದ್ದಾರೆ. ಮಾರ್ಚ್ 21 ರಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರ ನಾಮಪತ್ರ ಸಲ್ಲಿಕೆಯ ಬಳಿಕ ನಡೆದ ಸಭೆಯಲ್ಲಿ ಈ ಘೋಷಣೆ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯನ್ನು ಹಾಡಿ ಹೊಗಳಿದ ಕಲಿ ಸದ್ಯ ಜಮ್ಮು ಕಾಶ್ಮೀರದಲ್ಲಿ ಚುನಾವಣಾ ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ. ಎಪ್ರಿಲ್ 19 ರಂದು ಮೊದಲ ಹಂತದ ಚುನಾವಣೆ ನಡೆಯಲಿದ್ದು, ಜಮ್ಮು ಮತ್ತು ಕಾಶ್ಮೀರದಲ್ಲಿ ಮೊದಲ ಹಂತದಲ್ಲಿ ಮತದಾನ ಆಗಲಿದೆ.

ಹೀಗಾಗಿ ಮಾರ್ಚ್ 21 ರಂದು ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಉಧಂಪುರ – ಕಥುವಾ ಲೋಕಸಭಾ ಕ್ಷೇತ್ರದಿಂದ ನಾಮ ಪತ್ರ ಸಲ್ಲಿಸಿದ್ದಾರೆ. ಅವರ ಪತ್ನಿ ಹಾಗೂ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರೊಂದಿಗೆ ಕಥುವಾ ಪಟ್ಟಣದ ಚುನಾವಣಾಧಿಕಾರಿ ಕಚೇರಿಯಲ್ಲಿ ಸಿಂಗ್ ತಮ್ಮ ಪತ್ರಗಳನ್ನು ಸಲ್ಲಿಸಿದರು. ಸಚಿವ ಜಿತೇಂದ್ರ ಸಿಂಗ್‌ ಸೇರಿದಂತೆ ಜಮ್ಮು ಕಾಶ್ಮೀರದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಗ್ರೇಟ್ ಕಲಿ ಪ್ರಚಾರ ನಡೆಸುತ್ತಿದ್ದಾರೆ.

ಒಂದು ಕಾಲದಲ್ಲಿ ಕಾಂಗ್ರೆಸ್‌ನ ಭದ್ರಕೋಟೆಯಾಗಿದ್ದ ಈ ಕ್ಷೇತ್ರವು 2014 ರಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಮತ್ತು 2019 ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿಕ್ರಮ್ ಆದಿತ್ಯ ಸಿಂಗ್ ಅವರನ್ನು ಗಮನಾರ್ಹ ಅಂತರದಿಂದ ಸೋಲಿಸಿದರು. 16.20 ಲಕ್ಷಕ್ಕೂ ಹೆಚ್ಚು ನೋಂದಾಯಿತ ಮತದಾರರನ್ನು ಹೊಂದಿರುವ ಜಮ್ಮು ಮತ್ತು ಕಾಶ್ಮೀರದಲ್ಲಿ ಲೋಕಸಭೆ ಚುನಾವಣೆಯನ್ನು ಐದು ಹಂತಗಳಲ್ಲಿ ನಡೆಯಲಿದೆ.

ಐದು ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 19 (ಉಧಂಪುರ), ಏಪ್ರಿಲ್ 26 (ಜಮ್ಮು), ಮೇ 7 (ಅನಂತನಾಗ್), ಮೇ 13 (ಶ್ರೀನಗರ) ಮತ್ತು ಮೇ 20 (ಬಾರಾಮುಲ್ಲಾ) ರಂದು ಮತದಾನ ನಡೆಯಲಿದೆ.

ಕಾರ್ಗಿಲ್ ಮತ್ತು ಲೇಹ್ ಜಿಲ್ಲೆಗಳಲ್ಲಿ ಹರಡಿರುವ ಲಡಾಖ್ ಲೋಕಸಭಾ ಕ್ಷೇತ್ರಕ್ಕೆ ಐದನೇ ಹಂತದ ಮತದಾನದಲ್ಲಿ ಮತದಾನ ನಡೆಯಲಿದೆ.

 

1 Comment

1 Comment

  1. CHANNAKESHAVAIAH. MC

    23/03/2024 at 11:34 AM

    I think he is mental, admit to good mental hospital,

Leave a Reply

Your email address will not be published. Required fields are marked *

DAKSHINA KANNADA

ಕಡೆ ಕ್ಷಣ ವರನಿಂದ ತಾಳಿ ಕಟ್ಟಲು ನಿರಾಕರಿಸಿದ ವಧು; ಮುರಿದು ಬಿದ್ದ ಮದುವೆ

Published

on

ಉಪ್ಪಿನಂಗಡಿ: ಇತ್ತೀಚಿನ ದಿನಗಳಲ್ಲಿ ಕಡೆ ಕ್ಷಣದಲ್ಲಿ ಅದೆಷ್ಟೋ ಮದುವೆಗಳು ಮುರಿದು ಬಿದ್ದ ಘಟನೆ ನಡೆದಿದೆ. ಹಾಗೆಯೇ ಇಲ್ಲೊಂದು ಮದುವೆ ಮಂಟಪದಲ್ಲಿ ಕೊನೆಯ ಕ್ಷಣ ವರನಿಂದ ತಾಳಿ ಕಟ್ಟಲು ವಧು ನಿರಾಕರಸಿದ ಕಾರಣ ಮದುಮೆ ಮುರಿದು ಬಿದ್ದ ಘಟನೆ ಕಡಬ ತಾಲೂಕಿನ ಕೊಣಾಲು ಗ್ರಾಮದಲ್ಲಿ ನಡೆದಿದೆ.

ಕೊಣಾಲು ಗ್ರಾಮದ ಕೋಲ್ಪೆ ದಿ। ಬಾಬು ಗೌಡ ಅವರ ಪುತ್ರ ಉಮೇಶ ಅವರ ಮದುವೆಯು ಬಂಟ್ವಾಳ ತಾಲೂಕು ಕುಳ ಗ್ರಾಮದ ಕಂಟ್ರಮಜಲು ದಿ। ಕೊರಗಪ್ಪ ಗೌಡ ಅವರ ಪುತ್ರಿ ಸರಸ್ವತಿ ಅವರೊಂದಿಗೆ ನಿಗದಿಯಾಗಿತ್ತು. ಎ.26 ರಂದು ಬೆಳಗ್ಗೆ 11.35ರ ಮೂಹೂರ್ತದಲ್ಲಿ ಕಾಂಚನ ಪೆರ್ಲದ ಶ್ರೀ ಷಣ್ಮುಖ ದೇವಸ್ಥಾನದಲ್ಲಿ ಮದುವೆ ನಿಗದಿಯಾಗಿತ್ತು. ಅದರಂತೆ ವರ ಹಾಗೂ ವಧುವಿನ ಕಡೆಯವರು ಮದುವೆಯ ದಿಬ್ಬಣದಲ್ಲಿ ಬಂದಿದ್ದರು. ವಧು ದಾರೆ ಸೀರೆ ಹಾಕಿ ಪರಸ್ಪರ ಹೂಮಾಲೆ ಕೂಡ ಹಾಕಿದ್ದರು. ಆದರೆ ತಾಳಿ ಕಟ್ಟಲು ಮುಂದಾದಗ ನನಗೆ ಈ ಮದುವೆ ಇಷ್ಟ ವಿಲ್ಲ ಎಂದು ವಧು ಹೇಳಿದ್ದಾಳೆ.

ಇದರಿಂದ ಎರಡೂ ಕಡೆಯವರು ಕಂಗಾಲಾಗಿ ವಧುವಿನ ಮನವೊಲಿಕೆಗೆ ಮುಂದಾದರು. ಆದರೆ ವಧು ಒಪ್ಪಲಿಲ್ಲ. ಬಳಿಕ ಎರಡೂ ಕಡೆ ಅವರು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ತೆರಳಿದರು.

ಔತಣ ಕೂಟಕ್ಕೆ ಸಿದ್ಧತೆ:

ವರನ ಮನೆಯಲ್ಲಿ ಮಧ್ಯಾಹ್ನದ ಔತಣ ಕೂಟಕ್ಕೆ ಸುಮಾರು 500 ಜನರಿಗೆ ಮಾಂಸಾಹಾರಿ ಊಟ ತಯಾರಾಗಿತ್ತು. 1 ಸಾವಿರದಷ್ಟು ಐಸ್‌ಕ್ರೀಮ್ ವ್ಯವಸ್ಥೆಯನ್ನು ಮಾಡಲಾಗಿತ್ತು. ಮದುವೆ ಮುರಿದು ಬಿದ್ದ ಕಾರಣ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.

ಮತ್ತೆ ಮದುವೆಯಾಗಲು ಒಪ್ಪಿದ ವಧು:

ಪೊಲೀಸ್ ಠಾಣೆಯಲ್ಲಿ ನಡೆದ ಮಾತುಕತೆ ವೇಳೆ ವಧು ಸರಸ್ವತಿ ಮತ್ತೆ ಮದುವೆ ಆಗಲು ಒಪ್ಪಿದ್ದರು. ಆದರೆ ಆಗ ವರ ಉಮೇಶ್ ಅವರು ಮದುವೆ ಆಗಲು ನಿರಾಕರಿಸಿದರು. ಇದರಿಂದಾಗಿ ಎರಡೂ ಕಡೆಯವರು ಪೊಲೀಸ್ ಠಾಣೆಯಲ್ಲಿ ಮುಚ್ಚಳಿಕೆ ಬರೆಯಿಸಿಕೊಂಡು ತಮ್ಮ ತಮ್ಮ ಮನೆಗಳಿಗೆ ತೆರಳಿದರು.

Continue Reading

BANTWAL

ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!

Published

on

ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.

Continue Reading

LATEST NEWS

ವಧು ಕೇಳಿದ ಆ ಒಂದು ಪ್ರಶ್ನೆ; ತಬ್ಬಿಬ್ಬಾದ ವರ..ಮದುವೆ ಕ್ಯಾನ್ಸಲ್!

Published

on

ಮಂಗಳೂರು : ಇತ್ತೀಚಿನ ದಿನಗಳಲ್ಲಿ ಮದುವೆ ಎಂಬುದರ ಸಂಭ್ರಮ ಹೇಳತೀರದು. ಅದ್ದೂರಿತನವೇ ಮೇಲುಗೈ ಸಾಧಿಸುತ್ತೆ. ಈ ನಡುವೆ ಮದುವೆ ಮುರಿದು ಬೀಳುವ ಘಟನೆಯೂ ಹೆಚ್ಚುತ್ತಲಿದೆ. ಕ್ಷುಲ್ಲಕ ಕಾರಣ ಇರಬಹುದು ಅಥವಾ ಇನ್ಯಾವುದೇ ಕಾರಣ ಇರಬಹುದು ಮದುವೆ ಮುರಿದು ಬೀಳುತ್ತಿದೆ.


ಸಾವಿರ ಸುಳ್ಳು ಹೇಳಿ ಒಂದು ಮದುವೆ ಮಾಡು ಅನ್ನೋ ಗಾದೆ ಮಾತಿದೆ. ಅಂತೆಯೇ ಇಲ್ಲಿ ವರ ಸುಳ್ಳು ಹೇಳಿದ್ದಾನೆ. ಹಾಗಂತ ಮದುವೆ ಆಗಿಲ್ಲ. ಬದಲಿಗೆ ಸಿಕ್ಕಿ ಬಿದ್ದಿದ್ದಾನೆ. ವಧು ಕೇಳಿದ ಆ ಒಂದು ಪ್ರಶ್ನೆಯಿಂದ ಮದುವೆ ಮುರಿದು ಬಿದ್ದಿದೆ.

ಸುಳ್ಳು ಹೇಳಿ ತಗ್ಲಾಕ್ಕೊಂಡ!

ಸುಳ್ಳು ಹೇಳಿ ಮದುವೆಯಾಗಲು ಹೊರಟಿದ್ದ ವರನ ಅಸಲಿ ವಿಚಾರ ಗೊತ್ತಾಗಿದೆ. ಹೀಗಾಗಿ ಯುವತಿ ಮದುವೆ ನಿರಾಕರಿಸಿದ್ದಾಳೆ. ಅಂದಹಾಗೆ ಈ ಘಟನೆ ನಡೆದಿರೋದು ಉತ್ತರ ಪ್ರದೇಶದ ಪನ್ವಾರಿನಲ್ಲಿ. ಓದು, ಬರಹ ಏನೊಂದು ಬರದ ಅನಕ್ಷರಸ್ಥನೊಬ್ಬ ತಾನು ದೊಡ್ಡ ಸರ್ಕಾರಿ ಅಧಿಕಾರಿ ಎಂದು ಮದುವೆಯಾಗಲು ಹೊರಟಿದ್ದ.

ಆದರೆ, ಈ ಸತ್ಯ ಮದುವೆ ಮನೆಯಲ್ಲೇ ಬಯಲಾಗಿದೆ. ಸಂಶಯಗೊಂಡ ವಧು ವರನ ಬಳಿ, ಎರಡರ ಮಗ್ಗಿ ಹೇಳಲು ತಿಳಿಸಿದ್ದಾಳೆ. ಆಗ ಆತ ತಡವರಿಸಿದ್ದಾರೆ. ಹಾಗಾಗಿ, ಯುವತಿಗೆ ಸತ್ಯಾಂಶ ಗೊತ್ತಾಗಿದೆ. ಎರಡರ ಮಗ್ಗಿ ಬೇಸಿಕ್ ಗಣಿತವೂ ಗೊತ್ತಿಲ್ಲ, ನೀನು ಅಧಿಕಾರಿಯಾಗಲು ಹೇಗೆ ಸಾಧ್ಯ? ಎಂದು ಮದುವೆ ಮುರಿದುಕೊಂಡಿದ್ದಾಳೆ.

ಇದನ್ನೂ ಓದಿ : ಮತ್ತೆ ಬಾಯ್‌ ಫ್ರೆಂಡ್ ಬದಲಾಯಿಸಿದ ಶೃತಿ ಹಾಸನ್..!

ಇಷ್ಟಾದರೂ ಬಿಡದ ಕುಟುಂಬದವರು ವಧುವಿನ ಮನವೊಲಿಸುವ ಯತ್ನ ಮಾಡಿದ್ದಾರೆ. ಆದರೆ, ವಧು ಮಾತ್ರ ಇದಕ್ಕೆ ಒಪ್ಪಿಲ್ಲ. ಹೀಗಾಗಿ ವರದಕ್ಷಿಣೆಯನ್ನು ಹಿಂದಿರುಗಿಸಿದ್ದಾರೆ. ಪರಸ್ಪರ ನೀಡಿದ ಉಡುಗೊರೆ, ಆಭರಣಗಳನ್ನು ಹಿಂದಿರುಗಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

 

Continue Reading

LATEST NEWS

Trending