DAKSHINA KANNADA
ಉಳ್ಳಾಲದ ಯುವಕನನ್ನು ಅಪಹರಿಸಿ ಚಾರ್ಮಾಡಿ ಘಾಟ್ನಲ್ಲಿ ಕೊಲೆ ಯತ್ನ
ಉಳ್ಳಾಲ: ಐವರ ತಂಡ ಚಾರ್ಮಾಡಿ ಘಾಟಿಯಲ್ಲಿ ಯುವಕನನ್ನು ಕಾರಿನಲ್ಲಿ ಅಪಹರಣ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ನಿನ್ನೆ ತಡರಾತ್ರಿ ವೇಳೆ ನಡೆದಿದೆ.
ಉಳ್ಳಾಲ ದರ್ಗಾ ಬಳಿಯ ಕಬೀರ್ (26) ಕೊಲೆ ಯತ್ನಕ್ಕೆ ಅಪಹರಣಕ್ಕೊಳಗಾದ ಯುವಕ.
ಉಳ್ಳಾಲದ ತಂಡದಿಂದ ತಪ್ಪಿಸಿಕೊಂಡ ಯುವಕ ರಿಕ್ಷಾ ಮೂಲಕ ಉಳ್ಳಾಲ ತಲುಪಿ ತೊಕ್ಕೊಟ್ಟು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆ ವಿವರ: ಮೇ.25 ರ ರಾತ್ರಿ 9ರ ಸುಮಾರಿಗೆ ಕೋಟೆಪುರ ಸಮೀಪ ಸಹೋದರನನ್ನು ಬಿಟ್ಟು, ಉಳ್ಳಾಲ ದರ್ಗಾ ಬಳಿಯ ತನ್ನ ಮನೆಯತ್ತ ಹಿಂತಿರುಗುತ್ತಿದ್ದ ಕಬೀರ್ ಬೈಕಿಗೆ ಅಬ್ಬಕ್ಕ ವೃತ್ತದ ಬಳಿ ಕಾರೊಂದು ಢಿಕ್ಕಿ ಹೊಡೆದಿದೆ.
ನೆಲಕ್ಕುರುಳಿದ ಕಬೀರ್ ನನ್ನು ಕಾರಿನಿಂದ ಇಳಿದ ತಂಡ ಹಿಡಿಯಲು ಯತ್ನಿಸಿದಾಗ, ಕಬೀರ್ ಓಡಲು ಯತ್ನಿಸಿದ್ದಾರೆ. ಆದರೆ ಅವರ ಕಾಲಿಗೆ ರಾಡ್ ಎಸೆದು ಓಡದಂತೆ ತಡೆದು, ತಲವಾರಿನ ಹಿಂಭಾಗದಿಂದ ತಲೆಯ ಹಿಂಭಾಗಕ್ಕೆ ಬಡಿದು ಬಳಿಕ ಕಾರೊಳಗಡೆ ಹಾಕಿ ಅಪಹರಿಸಿದ್ದಾರೆ.
ಕಾರಿನ ಒಳಗಡೆ ಇದ್ದ ಐವರ ತಂಡದಲ್ಲಿ ಇಬ್ಬರು ಡ್ರಾಗರ್ ಅನ್ನು ಕಬೀರ್ ಕುತ್ತಿಗೆಗೆ ಹಿಡಿದಿದ್ದರು.
ದೂರದ ಚಾರ್ಮಾಡಿ ಘಾಟ್ ಸಮೀಪ ಕಾರು ನಿಲ್ಲಿಸಿದ ತಂಡ ಡ್ರಾಗರ್ ಮೂಲಕ ಕುತ್ತಿಗೆಗೆ ಇರಿಯಲು ಯತ್ನಿಸುತ್ತಿದ್ದಂತೆ, ಆತನ ಕುತ್ತಿಗೆ ಹಿಡಿದ ಕಬೀರ್ ಕಾರಿನಿಂದ ಹೊರಗಿಳಿದು ತಪ್ಪಿಸಿಕೊಂಡಿದ್ದಾರೆ.
ತಪ್ಪಿಸುವ ಧಾವಂತದಲ್ಲಿ ಹೊಂಡವೊಂದಕ್ಕೆ ಉರುಳಿ ಗಾಯವಾಗಿದೆ. ಅಲ್ಲಿಂದ ಕಾಡಿನ ದಾರಿಯಲ್ಲಿ ಓಡಿದ ಕಬೀರ್ ಅವರಿಗೆ ದೂರದಲ್ಲಿ ಮನೆಯೊಂದು ಗೋಚರಿಸಿ , ಅಲ್ಲಿ ತೆರಳಿ ವಿಚಾರ ತಿಳಿಸಿದರು. ಮನೆಮಂದಿ ಟೀಶರ್ಟ್, ಚಪ್ಪಲಿಯನ್ನು ಒದಗಿಸಿ ಬಳಿಕ ರಿಕ್ಷಾವೊಂದಕ್ಕೆ ಕರೆ ಮಾಡಿ ಮಂಗಳೂರಿಗೆ ಬಿಡುವಂತೆ ತಿಳಿಸಿದ್ದಾರೆ.
ಕಾರಿನಲ್ಲಿದ್ದ ಐವರು ಅಪಹರಣಕಾರರು ಟ್ಯಾಬ್ಲೆಟ್ ಸ್ಟಿಪ್ ಹಿಡಿದುಕೊಂಡು ಸಂಪೂರ್ಣ ನಶೆಯಲ್ಲಿದ್ದರು. ದಾರಿಯುದ್ದಕ್ಕೂ ಟ್ಯಾಬ್ಲೆಟ್ ಸೇವಿಸುತ್ತಿದ್ದ ಐವರು ಕಬೀರ್ ಗೆ ನಿರಂತರವಾಗಿ ಹಲ್ಲೆ ಮುಂದುವರಿಸಿದ್ದರು.
ಅವರ ಮೊಬೈಲಿಗೆ ಬಂದ ಕರೆಯಲ್ಲಿ ` ಕಬೀರ್ ನನ್ನು ಹತ್ಯೆ ನಡೆಸಿ ಘಾಟಿ ಭಾಗದಲ್ಲಿ ಯಾರಿಗೂ ಹೆಣ ಸಿಗದಂತೆ ಬಿಸಾಡಿರಿ’ ಅನ್ನುವ ಸೂಚನೆಯನ್ನು ನೀಡುತ್ತಲೇ ಇದ್ದರು.
ಸದಕತ್ತುಲ್ಲಾ ಯಾನೆ ಪೊಪ್ಪ, ಉಗ್ರಾಣಿ ಮುನ್ನ, ಇಮ್ಮಿ ಯಾನೆ ಇರ್ಷಾದಿ ಹಾಗೂ ತಾಹೀಬ್, ಅಸ್ಗರ್, ಇಬ್ಬಿ ಎಂಬವರು ಕೃತ್ಯದಲ್ಲಿ ಭಾಗಿಯಾಗಿದ್ದರು ಎನ್ನುತ್ತಾರೆ ಕಬೀರ್ .
ಫಿಶ್ ಮಿಲ್ ನಿಂದ ೪೮ ಲಕ್ಷ ರೂ :
ಕೋಟೆಪುರದ ಫಿಶ್ ಆಯಿಲ್ ಮಿಲ್ನಲ್ಲಿ ಕಪ್ಪು ಹೊಗೆ ಹೊರಗೆ ಬಿಡುತ್ತಿರುವುದರಿಂದ ಸ್ಥಳೀಯರಿಗೆ, ಮಕ್ಕಳಿಗೆ, ವೃದ್ಧರಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ಕೋಟೆಪುರ ನಿವಾಸಿಗಳು ಸಾರ್ವಜನಿಕವಾಗಿ ಜಿಲ್ಲಾಡಳಿತಕ್ಕೆ ದೂರು ನೀಡಲಾಗಿತ್ತು.
ಇದರಿಂದಾಗಿ ಕಾರ್ಖಾನೆ ಕರ್ಯಾಚರಿಸದಂತೆ ತಡೆಯಾಜ್ಞೆ ಬಂದಿತ್ತು. ಒಗ್ಗಟ್ಟಿನಲ್ಲಿ ಎಲ್ಲರೂ ಹೋರಾಡಿದರೂ , ಕೊನೆಯಲ್ಲಿ ಹೋರಾಟದಲ್ಲಿ ಭಾಗವಹಿಸಿದ ಐದು ಮಂದಿ ರೂ. ೪೮ ಲಕ್ಷ ಹಣವನ್ನು ಫಿಶ್ ಮಿಲ್ ಮಾಲೀಕರಿಂದ ಪಡೆದುಕೊಂಡು ತಡೆಯಾಜ್ಞೆಯನ್ನು ಹಿಂಪಡೆಯುವಂತೆ ಮಾಡಿದ್ದರು.
ಇದನ್ನು ಕಬೀರ್ ಅವರ ತಂಡದಲ್ಲಿ ಪ್ರಶ್ನಿಸಿ ಸಾರ್ವಜನಿಕವಗಿ ಹಣ ಪಡೆದಿರುವುದನ್ನು ಹೇಳುತ್ತಲೇ ಬಂದಿದದ್ದರು. ಸತತ ನಾಲ್ಕು ತಿಂಗಳಿನಿಂದ ದ್ವೇಷ ಮುಂದುವರಿದು ಬುಧವಾರ ರಾತ್ರಿ ಹತ್ಯೆಗೆ ಸಂಚು ರೂಪಿಸಿದ್ದರು. ಆಸ್ಪತ್ರೆಗೆ ಉಳ್ಳಾಲ ಠಾಣಾಧಿಕಾರಿ ಸಂದೀಪ್ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ.
DAKSHINA KANNADA
ದೊಡ್ಡವರ ಜಗಳದಲ್ಲಿ ಇಹಲೋಕ ತಜ್ಯಿಸಿದ 3 ರ ಕಂದಮ್ಮ…
ಮಂಗಳೂರು (ಬೆಳಗಾವಿ): ಅದು ಎರಡು ಕುಟುಂಬಗಳ ನಡುವೆ ನಡೆದಿರೋ ಜಗಳ . ಆದ್ರೆ ಆ ಜಗಳಕ್ಕೆ ಏನೂ ಅರಿಯದ ಮೂರು ವರ್ಷದ ಪುಟ್ಟ ಮಗು ಬಲಿಯಾಗಿದೆ. ಪಾಪಿಯೊಬ್ಬ ಮಗುವಿನ ಎದೆಗೆ ಕಾಲಿಟ್ಟು ಮಗುವಿನ ಉಸಿರು ನಿಲ್ಲಿಸಿದ್ದಾನೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಎಂಬ ಗ್ರಾಮದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ. ದೊಡ್ಡವರ ಜಗಳದಲ್ಲಿ ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ ಎಂಬ ಮೂರು ವರ್ಷದ ಮಗು ಹತವಾಗಿದೆ. ಜೋತಿಭಾ ತುಕಾರಾಮ ಬಾಬಬರ ಎಂಬಾತ ಮಗುವಿನ ಜೀವಕ್ಕೆ ಕುತ್ತು ತಂದ ಆರೋಪಿಯಾಗಿದ್ದಾನೆ.
ಹಣಕಾಸಿನ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದಿತ್ತು. ಈ ವೇಳೆ ಜಗಳ ತಾರಕ್ಕೇರಿದಾಗ ಸಿಟ್ಟಿನಲ್ಲಿ ಜೋತಿಬಾ ತುಕಾರಾಮ ಬಾಬಾಬರ ಮಗುವಿನ ಎದೆ ಮೇಲೆ ಕಾಲಿಟ್ಟು ನಿಂತಿದ್ದಾನೆ. ಈ ವೇಳೆ ಮಗುವನ್ನು ಆತನ ಕಾಲಿನ ಅಡಿಯಿಂದ ತೆಗೆಯಲು ಮಗುವಿನ ತಾಯಿ ಯತ್ನಿಸಿದ್ದಾಳೆ . ಆ ವೇಳಗೆ ಇನ್ನಷ್ಟು ಗಟ್ಟಿಯಾಗಿ ಕಾಲಿನಿಂದ ಮಗುವಿನ ಎದೆಗೆ ಕಾಲಿನಿಂದ ಒತ್ತಿದ ಕಾರಣ ಮಗು ಉಸಿರು ನಿಲ್ಲಿಸಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗುವಿನ ದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಆರೋಪಿ ಸ್ಥಳದಿಂದ ಎಸ್ಕೇಪ್ ಆಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ.
DAKSHINA KANNADA
ಅಮೇರಿಕಾದಲ್ಲಿ ಕಾರು ಅಪಘಾತ…! ಮೂವರು ಭಾರತೀಯ ಮಹಿಳೆಯರ ಸಾ*ವು…!
ನ್ಯೂಯಾರ್ಕ್ : ಅಮೇರಿಕಾದಲ್ಲಿ ನಡೆದ ಕಾರು ಅಪಘಾತದಲ್ಲಿ ಭಾರತೀಯ ಮೂಲದ ಮೂವರು ಮಹಿಳೆಯರು ಇಹಲೋಕ ತ್ಯಜಿಸಿದ್ದಾರೆ. ಕೌಂಟಿಯ ಹೆದ್ದಾರಿಯ ಸೇತುವೆಯೊಂದರ ಮೇಲೆ ವೇಗವಾಗಿ ಕಾರು ಚಲಾಯಿಸಿದ ಕಾರಣ ಈ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ಉತ್ತರದ ಕಡೆಗೆ ಕಾರು ಪ್ರಯಾಣಿಸುತ್ತಿದ್ದು, ಎಲ್ಲಾ ಲೇನ್ಗಳನ್ನು ದಾಟಿ, ಹಂಪ್ ಮೇಲೆ ವೇಗವಾಗಿ ಏರಿತ್ತು. ಈ ಕಾರಣದಿಂದ ಕನಿಷ್ಟ 20 ಅಡಿಗಳಷ್ಟು ಮೇಲಕ್ಕೆ ಹಾರಿ ಸೇತುವೆಯ ಮುಂದೆ ಇದ್ದ ಮರಗಳಿಗೆ ಕಾರು ಅಪ್ಪಳಿಸಿದೆ. ಗುಜಾರಾತ್ ಮೂಲದ ಮೂವರು ಮಹಿಳೆಯರು ಈ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಗುಜರಾತ್ನ ಆನಂದ್ ಜಿಲ್ಲೆಯ ರೇಖಾಬೆನ್ ಪಟೇಲ್ , ಸಂಗೀತಾಬೆನ್ ಪಟೇಲ್ ಹಾಗೂ ಮನೀಶಾಬೆನ್ ಪಟೇಲ್ ಅವರು ಇಹಲೋಕ ತ್ಯಜಿಸಿದವರಾಗಿದ್ದಾರೆ.
ಕಾರು ನಿಗದಿಪಡಿಸಿದ ವೇಗದ ಮಿತಿಗಿಂತ ಹೆಚ್ಚು ವೇಗದಲ್ಲಿತ್ತು ಎಂದು ಅಲ್ಲಿನ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಅಪಘಾತದ ಪ್ರಮಾಣ ಎಷ್ಟಿತ್ತು ಮತ್ತು ಕಾರು ಎಷ್ಟು ಎತ್ತರಕ್ಕೆ ಹಾರಿತ್ತು ಅನ್ನೋದಿಕ್ಕೆ ಮರದ ಮೇಲಿರುವ ಕಾರಿನ ಅವಶೇಷಗಳು ಸಾಕ್ಷಿ ಎಂದು ಅವರು ಹೇಳಿದ್ದಾರೆ. ಮರದ ಮೇಲೆ ಬಿದ್ದ ಕಾರು ಛಿದ್ರಗೊಂಡು ಕಾರಿನ ಅವಶೇಷಗಳು ಚೆಲ್ಲಾಪಿಲ್ಲಿಯಾಗಿತ್ತು.
ದಕ್ಷಿಣ ಕೆರೊಲಿನಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತಕ್ಷಣ ಸ್ಥಳಕ್ಕೆ ರಕ್ಷಣಾ ತಂಡಗಳು, ಪೊಲೀಸರು ಆಗಮಿಸಿದ್ದಾರೆ. ಅಪಘಾತದಲ್ಲಿ ಓರ್ವ ಬದುಕಿ ಉಳಿದಿದ್ದು, ಆತನ ಸ್ಥಿತಿ ಗಂಭೀರವಾಗಿದ್ದು ಈಗಲೇ ಏನೂ ಹೇಳಲು ಆಗದ ಪರಿಸ್ಥಿತಿಯಲ್ಲಿದ್ದಾನೆ. ವಾಹನ ಅಪಘಾತವಾದ ತಕ್ಷಣ ಅದರಲ್ಲಿದ್ದ ತಾಂತ್ರಿಕ ವ್ಯವಸ್ಥೆಯ ಕಾರಣ ತಕ್ಷಣ ಕುಟುಂಬ ಸದಸ್ಯರಿಗೆ ಅಲರ್ಟ್ ಮೆಸೆಜ್ ರವಾನೆಯಾಗಿತ್ತು. ಹೀಗಾಗಿ ತಕ್ಷಣ ಕುಟುಂಬಸ್ಥರು ಕೂಡಾ ತಕ್ಷಣ ಸ್ಥಳಕ್ಕೆ ಆಗಮಿಸಿದ್ದಾರೆ.
DAKSHINA KANNADA
ದೆಹಲಿಯ ರಾಣಾ ಪ್ರತಾಪ್ ನಗರದ ಜಿನ ಬಸದಿ 24ತೀರ್ಥಂಕರ ಪಂಚ ಕಲ್ಯಾಣ; ಮೂಡುಬಿದಿರೆ ಸ್ವಾಮೀಜಿ ಭಾಗಿ
ನವದೆಹಲಿ : ದೆಹಲಿಯ ರಾಣಾ ಪ್ರತಾಪ್ ನಗರ ದ ಜಿನ ಬಸದಿ 24ತೀರ್ಥಂಕರ ಪಂಚ ಕಲ್ಯಾಣವು ರಾಷ್ಟ್ರ ಸಂತ 108 ಉಪಾಧ್ಯಾಯ ಗುಪ್ತಿ ಸಾಗರ ಮುನಿ ರಾಜ್ ಮಾರ್ಗದರ್ಶನ ಪಾವನ ಸಾನ್ನಿಧ್ಯ ಸ್ವಸ್ತಿಶ್ರೀ ಡಾ. ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಪಟ್ಟಾಚಾರ್ಯ ವರ್ಯ ಮಹಾ ಸ್ವಾಮೀಜಿ ಗೌರವ ಉಪಸ್ಥಿತಿಯಲ್ಲಿ ಧಾರ್ಮಿಕ ವಿಧಿವಿಧಾನಗಳು ಜರುಗಿತು.
3 ಅಡಿ ಎತ್ತರ ದ ಪಂಚಲೋಹದ ಇಪ್ಪತ್ತನಾಲ್ಕು ತೀರ್ಥಂಕರ ಹಾಗೂ ವಿವಿಧ ಜಿನ ಬಿಂಬಗಳ ಸ್ಥಾಪನೆ ಬೆಳಿಗ್ಗೆ 7.30 ರಿಂದ 9.00ರ ವರೆಗೆ ಮೋಕ್ಷ ಕಲ್ಯಾಣ ಪೂಜೆ, ದೆಹಲಿ ವಿಶ್ವವಿದ್ಯಾಲಯ ಸ್ಪೋರ್ಟ್ಸ್ ಕ್ಲಬ್ ಸಭಾಂಗಣ ಹಾಗೂ ಮೆರವಣಿಗೆ ಮೂಲಕ ಮೂರ್ತಿ 3 ಕಿ.ಮೀ ದೂರದ ಬಸದಿಗೆ ತೆರಳಿ ಬೆಳಿಗ್ಗೆ 11.00ರಿಂದ ಮಧ್ಯಾಹ್ನ 1 ಗಂಟೆ ವರೆಗೂ ಮೂರ್ತಿ ಸ್ಥಾಪನೆ ದೆಹಲಿ ರಾಣಾ ಪತ್ ನಗರ ಬಸದಿಯಲ್ಲಿ ಜರುಗಿತು.
ಬಳಿಕ ಧಾರ್ಮಿಕ ಸಭೆಯಲ್ಲಿ ಧರ್ಮೋಪದೇಶ ನೀಡಿದ ಮೂಡುಬಿದಿರೆ ಸ್ವಾಮೀಜಿ, ಜಿನ ಬಿಂಬ ಸ್ಥಾಪನೆಯಿಂದ ಆತ್ಮ ಕಲ್ಯಾಣ ಹಾಗೂ ಪರ ಕಲ್ಯಾಣವಾಗುವುದು ಜನ ಸಂಸ್ಕೃತಿ ಸಂಸ್ಕಾರ ಧರ್ಮದಿಂದ ಸಾಧ್ಯ ಎಂದು ನುಡಿದರು. ಈ ಸಂದರ್ಭ ಸುಂದರ ಜಿನಾಲಯ ಸ್ಥಾಪನೆಗೆ ಕಾರಣರಾದ ದಾನಿಗಳನ್ನು ಗೌರವಿಸಲಾಯಿತು.
ರಾಷ್ಟ್ರ ಸಂತ 108 ಗುಪ್ತಿ ಸಾಗರ ಮುನಿ ರಾಜ್ ಮೂಡು ಬಿದಿರೆ ಶ್ರೀಗಳವರಿಗೆ ಶಾಸ್ತ್ರ ಸ್ಮರಣಿಕೆ ನೀಡಿದರು. ಬಳಿಕ ದೆಹಲಿ ಗ್ರೀನ್ ಪಾರ್ಕ್ ಬಸದಿಯಲ್ಲಿ ಉಪಸ್ಥಿತರಿದ್ದ 108 ರಾಷ್ಟ್ರ ಸಂತ ಆಚಾರ್ಯ ಪ್ರಾಗ್ಯ ಸಾಗರ ಮುನಿಮಹಾರಾಜ್, ಮೂಡುಬಿದಿರೆ ಶ್ರೀಗಳಿಗೆ ಗೌರವಾನ್ವಿತ ಪ್ರಧಾನಮಂತ್ರಿಗಳಿಂದ ಭಗವಾನ್ ಮಹಾವೀರ ಜನ್ಮ ಕಲ್ಯಾಣದಂದು ನಿರ್ವಾಣ ವರ್ಷ 2550ರ ಅಂಗವಾಗಿ ಬಿಡುಗಡೆಗೊಳಿಸಿದ ರೂ. 100 ರ ನಾಣ್ಯ ಹಾಗೂ ಅಂಚೆ ಇಲಾಖೆ ಬಿಡುಗಡೆಗೊಳಿಸಿದ ಪಾವಪುರಿ ಸಿದ್ದ ಕ್ಷೇತ್ರ ಫಸ್ಟ್ ಡೇ ಕವರ್ ನೀಡಿ ಹರಸಿ ಆಶೀರ್ವಾದ ಮಾಡಿದರು.
ಇದನ್ನೂ ಓದಿ : ಖ್ಯಾತ ಕಿರುತೆರೆ ನಟ ಗುರುಚರಣ್ ಸಿಂಗ್ ನಾಪತ್ತೆ!
ಈ ಸಂದರ್ಭ ಮೂಡುಬಿದಿರೆ ಸ್ವಾಮೀಜಿ ಈ ವರ್ಷ ಪೂರ್ತಿ ಆಚಾರ್ಯ ಶಾಂತಿ ಸಾಗರ ಆಚಾರ್ಯ ಶತಾಬ್ದಿ ವರ್ಷ ಹಾಗೂ ಭಗವಾನ್ ಮಹಾವೀರ ಸ್ವಾಮಿ ನಿರ್ವಾಣ ಕಲ್ಯಾಣ ವಿವಿಧೆಡೆ ಆಚರಿಸಲು ಸಂಕಲ್ಪ ಮಾಡಿದರು.
- FILM6 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- FILM6 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು
- FILM7 days ago
ವಿಚ್ಛೇದನದ ಸುದ್ದಿಗೆ ಉತ್ತರ ಕೊಟ್ಟ ಐಶ್ – ಅಭಿ ಆ್ಯನಿವರ್ಸರಿ ಫೋಟೋ!
- chikkamagaluru6 days ago
ಎಟಿಎಂ ಮೆಷಿನ್ಗೆ ಬೆಂಕಿ ಅವಘಡ..! ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ..!!