ಮಂಗಳೂರು: 5 ವರ್ಷಗಳ ಹಿಂದೆ ನಡೆದಿದ್ದ ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಇದೀಗ ಬಜ್ಪೆ ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕಿನ ಸಜೀಪ ಮುನ್ನೂರು ಗ್ರಾಮದ ನಿವಾಸಿ ಜಾಕೀರ್ ಹುಸೈನ್ (29) ಬಂಧಿತ ಆರೋಪಿ.
ಈತನ ವಿರುದ್ಧ ಕೊಲೆ ಮತ್ತು ದರೋಡೆ ಸೇರಿ ಒಟ್ಟು 3 ಪ್ರಕರಣಗಳು ಮತ್ತು ಬಂದರು ಠಾಣೆಯಲ್ಲಿ 2 ಪ್ರಕರಣಗಳು ಹಾಗೆಯೇ ಪಾಂಡೇಶ್ವರ ಠಾಣೆಯಲ್ಲಿ 2 ಪ್ರಕರಣಗಳು ಮತ್ತು ಮೂಡುಬಿದ್ರೆ ಠಾಣೆಯಲ್ಲಿ 1 ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.
ಆರೋಪಿಯನ್ನು ವಶಕ್ಕೆ ಪಡೆಯುವಲ್ಲಿ ಬಜ್ಪೆ ಠಾಣೆ ಪಿಎಸ್ಐ ಗುರುಕಾಂತಿ, ಹೆಡ್ಕಾನ್ಸ್ಟೇಬಲ್ ರೋಹಿತ್ ಪಾವಂಜೆ ಮತ್ತು ಅಪರಾಧ ಪತ್ತೆ ವಿಭಾಗದ ಸಿಬ್ಬಂದಿ ಪಾಲ್ಗೊಂಡಿದ್ದಾರೆ.