BANTWAL
ನಾಪತ್ತೆಯಾಗಿದ್ದ ಅತ್ಯಾಚಾರ ಆರೋಪಿಯ ಕಾರು ಢಿಕ್ಕಿ: ಆಸ್ಪತ್ರೆಗೆ ದಾಖಲು
ಬಂಟ್ವಾಳ: ಅತ್ಯಾಚಾರ ಆರೋಪ ಎದುರಿಸುತ್ತಿರುವ, ಪೋಲಿಸರಿಗೆ ಮೋಸ್ಟ್ ವಾಂಟೆಡ್ ಆರೋಪಿಯಾಗಿದ್ದ ವ್ಯಕ್ತಿಯೋರ್ವನಿಗೆ ಶುಕ್ರವಾರ ಬೆಳಿಗ್ಗೆ ಅಪಘಾತವಾಗಿ ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮದ ಆಲಾಡಿ ನಿವಾಸಿ ಪುರುಷೋತ್ತಮ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿ. ಕಳೆದ ವಾರ ಕಾಮುಕ ಚಿಕ್ಕಪ್ಪನಿಂದಲೇ ನಿರಂತರ ಅತ್ಯಾಚಾರ ಆರೋಪದ ಹಿನ್ನೆಲೆಯಲ್ಲಿ ಸಂತ್ರಸ್ತ ಯುವತಿಯಿಂದ ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ಆರೋಪಿಯ ಮೇಲೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ ದೂರು ನೀಡಿ ಒಂದು ವಾರವಾದರೂ ಆರೋಪಿಯ ಬಂಧನವಾಗಿರಲಿಲ್ಲ. ಆರೋಪಿ ಪುರುಷೋತ್ತಮ ಶುಕ್ರವಾರ ಪೋಲೀಸರ ಕಣ್ಣು ತಪ್ಪಿಸಿ ಬೆಂಗಳೂರು ಕಡೆಗೆ ಕಾರಿನಲ್ಲಿ ಸ್ವತಃ ಡ್ರೈವ್ ಮಾಡಿಕೊಂಡು ಹೋಗುವಾಗ ಕಡಬ ಎಂಬಲ್ಲಿ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ.
ಡಿಕ್ಕಿಯಲ್ಲಿ ಅತ್ಯಾಚಾರ ಆರೋಪಿ ಪುರುಷೋತ್ತಮನಿಗೆ ಗಾಯಗಳಾಗಿದ್ದು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಸ್ತುತ ಪೋಲೀಸ್ ಕಾವಲಿನಲ್ಲಿ ಆರೋಪಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮದ ಆಲಾಡಿ ನಿವಾಸಿ ಪುರುಷೋತ್ತಮ ಎಂಬಾತ ಆತನ ಪತ್ನಿಯ ಅಕ್ಕನ ಮಗಳ ಮೇಲೆಯೇ ನಿರಂತರವಾಗಿ ಬೆದರಿಕೆ ಹಾಕಿ ಬಲಾತ್ಕಾರ ಮಾಡಿ ಅತ್ಯಾಚಾರ ಮಾಡಿದ್ದಾನೆ ಎಂದು ಕಾಲೇಜು ವಿದ್ಯಾರ್ಥಿನಿ ದೂರು ನೀಡಿದ್ದಳು. ಸದ್ಯ ಅತ್ಯಾಚಾರ ಅರೋಪದಲ್ಲಿ ತಲೆಮರೆಸಿಕೊಂಡು ಪರಾರಿಯಾಗಲು ಯತ್ನಿಸಿದ್ದ ಆರೋಪಿ ಪ್ರಸ್ತುತ ಆಸ್ಪತ್ರೆಯಲ್ಲಿ ಮಲಗಿದ್ದು ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಪೋಲಿಸರು ವಶಕ್ಕೆ ಪಡೆಯುವ ಸಾಧ್ಯತೆ ಇದೆ.
BANTWAL
ಪುತ್ತೂರು ಜಾತ್ರೆಯಿಂದ ಹಿಂದಿರುಗುವ ವೇಳೆ ಜವರಾಯನ ಅಟ್ಟಹಾಸ; ಜೀಪ್ ಡಿಕ್ಕಿ; ಬೈಕ್ ಸವಾರ ಸಾ*ವು
ಪುತ್ತೂರು : ಜೀಪೊಂದು ಬೈಕ್ ಗೆ ಡಿ*ಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃ*ತಪಟ್ಟು, ಅವರ ಇಬ್ಬರು ಮಕ್ಕಳು ಗಂಭೀ*ರ ಗಾ*ಯಗೊಂಡ ಘಟನೆ ಬುಧವಾರ ರಾತ್ರಿ ಪುತ್ತೂರು ಸುಬ್ರಹ್ಮಣ್ಯ ರಸ್ತೆಯಲ್ಲಿನ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ ಪ್ರಸ್ತುತ ಮಂಗಳೂರಿನಲ್ಲಿ ಲಾರಿ ಚಾಲಕರಾಗಿರುವ ಲೋಕೇಶ್ (48) ಮೃ*ತಪಟ್ಟವರು. ಅವರ ಇಬ್ಬರು ಮಕ್ಕಳು ಗಂಭೀ*ರ ಗಾಯಗೊಂಡಿದ್ದು, ಗಾ*ಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಲೋಕೇಶ್ ಅವರು ಮಕ್ಕಳೊಂದಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆಯುತ್ತಿರುವ ಜಾತ್ರೆಗೆ ಆಗಮಿಸಿ ಹಿಂದಿರುಗುತ್ತಿದ್ದ ವೇಳೆಯಲ್ಲಿ ಮುಂಭಾಗದಿಂದ ಆಗಮಿಸಿದ ಜೀಪು ಅವರು ಚಲಾಯಿಸುತ್ತಿದ್ದ ಬೈಕ್ ಗೆ ಡಿ*ಕ್ಕಿಯಾಗಿತ್ತು.
ಇದನ್ನೂ ಓದಿ : ಕರಡಿಗೂ ಕ್ಯಾಪ್ಟನ್ ಗೂ ಫೈಟ್; ಮನೆಯಂಗಳದಲ್ಲೇ ಕಾದಾಟ! ವೀಡಿಯೋ ವೈರಲ್
ಡಿ*ಕ್ಕಿಯ ರಭಸಕ್ಕೆ ಬೈಕ್ ಎರಡು ತುಂಡಾಗಿದೆ. ಸುಮಾರು 50 ಮೀಟರ್ ದೂರದ ತನಕ ಬೈಕನ್ನು ಜೀಪ್ ಎಳೆದುಕೊಂಡು ಹೋಗಿದೆ. ಈ ಸಂದರ್ಭದಲ್ಲಿ ರಸ್ತೆಗೆ ಎಸೆಯಲ್ಪಟ್ಟ ಲೋಕೇಶ್ ಅವರು ಸ್ಥಳದಲ್ಲಿಯೇ ಸಾ*ವನ್ನಪ್ಪಿದ್ದಾರೆ. ಪುತ್ತೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BANTWAL
ಗಂಡ ಹೆಂಡತಿಗೆ ನಾಲ್ವರಿಂದ ಹಲ್ಲೆ..!!
ಬಂಟ್ವಾಳ; ಅಪಘಾತದ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ ಮಾಡಿರುವ ಘಟನೆ ಕಲ್ಲಡ್ಕದ ಕರಿಂಗಾನ ಕ್ರಾಸ್ ಎಂಬಲ್ಲಿ ಎ.15ರಂದು ಸಂಜೆ ವೇಳೆ ನಡೆದಿದೆ. ಪುತ್ತೂರು ಏರ್ಮುಂಜ ಪಲ್ಲ ನಿವಾಸಿಗಳಾದ ಮಂಜುನಾಥ್ ಮತ್ತು ಅವರ ಪತ್ನಿ ಪೂರ್ಣಿಮಾ ಹಲ್ಲೆಗೊಳಗಾದವರು. ಹಲ್ಲೆಗೊಳಗಾದವರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಮಂಜುನಾಥ್ ಅವರು ಮಂಗಳೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ವೇಳೆ ಕಲ್ಲಡ್ಕ ಸಮೀಪದ ನರಹರಿ ಎಂಬಲ್ಲಿ ಇವರ ಕಾರಿಗೆ ಹರಿಯಾಣ ಮೂಲದ ಕಾರೊಂದ ಓವರ್ ಟೇಕ್ ಮಾಡುವ ಭರದಲ್ಲಿ ಡಿಕ್ಕಿಯಾಗಿದೆ. ಈ ಸಂದರ್ಭದಲ್ಲಿ ಕೈ ಸನ್ನೆಯ ಮೂಲಕ ಪ್ರಶ್ನಿಸಿದಕ್ಕೆ ಅಪಘಾತ ಎಸಗಿದ ಕಾರು ಮುಂದೆ ಹೋಗಿ ಕರಿಂಗಾಣ ಕ್ರಾಸ್ ಎಂಬಲ್ಲಿ ಅಡ್ಡವಾಗಿ ಇರಿಸಿ ಮಂಜುನಾಥ್ ಹಾಗೂ ಅವರ ಪತ್ನಿ ಪೂರ್ಣಿಮಾ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.
ಇದೇ ಸಂದರ್ಭದಲ್ಲಿ ಪೂರ್ಣಿಮಾ ಅವರ ಕುತ್ತಿಗೆಯಲ್ಲಿದ್ದ ಬಂಗಾರದ ಚೈನ್ ನಾಪತ್ತೆಯಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.ಹಲ್ಲೆಯಿಂದ ಮಂಜುನಾಥ್ ಅವರ ಕಣ್ಣಿಗೆ ಏಟಾಗಿದ್ದು, ಅವರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ. ಘಟನೆ ನಡೆದ ಕೂಡಲೇ ಸಂಚಾರ ಪೊಲೀಸರು ಭೇಟಿ ನೀಡಿ ವಾಹನವನ್ನು ಹಾಗೂ ಸ್ಥಳದಲ್ಲಿದ್ದವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಟ್ವಾಳ ನಗರ ಪೊಲೀಸ್ ಇನ್ಸ್ ಪೆಕ್ಟರ್ ಅನಂತ ಪದ್ಮನಾಭ ಅವರು ವಿಚಾರಣೆ ನಡೆಸುತ್ತಿದ್ದಾರೆ. ಘಟನೆಗೆ ಭಜರಂಗದಳ, ವಿಶ್ವಹಿಂದೂಪರಿಷತ್ ಕಲ್ಲಡ್ಕ ಪ್ರಖಂಡ ಖಂಡನೆ ವ್ಯಕ್ತಪಡಿಸಿದ್ದಾರೆ.
BANTWAL
ಹಿಂದೂ ಸಂಘಟನೆಯ ಮುಖಂಡನಿಗೆ ಸ್ನೇಹಿತನಿಂದಲೆ ಚೂ*ರಿ ಇರಿತ
ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತನೇ ಚೂ*ರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ಭಾನುವಾರ(ಎ.14) ರಾತ್ರಿ ನಡೆದಿದೆ.
ಹಿಂದೂ ಯುವಸೇನೆಯ ಮುಖಂಡ ಉದ್ಯಮಿಯಾಗಿರುವ ಪುಷ್ಪರಾಜ್ ಎಂಬವರಿಗೆ ಜಕ್ರಿಬೆಟ್ಟು ಎಂಬಲ್ಲಿ ಚೂ*ರಿ ಇರಿತವಾಗಿದೆ. ಇರಿತಕ್ಕೆ ಸ್ಪಷ್ಟವಾದ ಕಾರಣ ತಿಳಿದುಬಂದಿಲ್ಲ. ರಿಕ್ಷಾದಲ್ಲಿ ಜತೆಯಾಗಿ ತೆರಳುತ್ತಿದ್ದಾಗಲೇ ಸ್ನೇಹಿತ ರವಿ ಎಂಬಾತ ಚೂ*ರಿಯಿಂದ ಕುತ್ತಿಗೆಗೆ ಇರಿದಿದ್ದಾನೆ ಎಂದು ಹೇಳಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಪುಷ್ಪರಾಜ್ ರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಆರೋಪಿ ರವಿ ಚೂ*ರಿ ಇರಿದು ಪರಾರಿಯಾಗಿದ್ದಾನೆ. ಬಂಟ್ವಾಳ ನಗರ ಠಾಣಾ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.