BANTWAL
ಪುಂಜಾಲಕಟ್ಟೆ ದೇಗುಲ ಹಾಗೂ ದೇವಾಲಯದ ಅಧ್ಯಕ್ಷನ ಕುರಿತು ನಿಂದನೆಯ ಪೋಸ್ಟ್-ಆಡಳಿತ ಮಂಡಳಿಯಿಂದ ಠಾಣೆಗೆ ದೂರು..!
ಬಂಟ್ವಾಳ: ಬಂಟ್ವಾಳದ ಪುಂಜಾಲಕಟ್ಟೆ ಬಸವೇಶ್ವರ ದೇವಾಲಯ ಹಾಗೂ ದೇವಾಲಯದ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ ಅವರ ವಿರುದ್ಧ ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಬರೆದು ಪೋಸ್ಟ್ ಹಾಕಿದ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಹೇಮಂತ್
ಬೆಳ್ತಂಗಡಿ ತಾಲೂಕಿನ ಕುಕ್ಕಳ, ಕೊಯಕ್ಕರಿ ನಿವಾಸಿ ಹೇಮಂತ ಎಂಬವರು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಬರೆದು ಪೋಸ್ಟ್ ಹಾಕಿದ ವ್ಯಕ್ತಿಯಾಗಿದ್ದಾರೆ.
ಈ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ದೇವಾಲಯದ ಆಡಳಿತ ಮಂಡಳಿ ವ್ಯವಸ್ಥಾಪನ ಸಮಿತಿ ಕಾರ್ಯದರ್ಶಿ ದರ್ಣಪ್ಪ ಗೌಡ, ಆಡಳಿತ ಮಂಡಳಿಯ ಸದಸ್ಯರು, ಪದಾಧಿಕಾರಿಗಳು ಜೊತೆಯಾಗಿ ಠಾಣೆಗೆ ದೂರು ನೀಡಿದ್ದಾರೆ.
ದೂರಿನಲ್ಲಿ ಪುಂಜಾಲಕಟ್ಟೆ ಬಸವೇಶ್ವರ ದೇವಾಲಯದ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ ಅವರ ಬಗ್ಗೆ ಹೇಮಂತ್ ಎಂಬವರು ಅವರ ಫೇಸ್ ಬುಕ್ ಪೇಜ್ ನಲ್ಲಿ ಅವಹೇಳನಕಾರಿ ಸಂದೇಶ ಹಾಕಿ ಗೌರವಕ್ಕೆ ಧಕ್ಕೆ ತಂದಿದ್ದಾರೆ.
ಜೊತೆಗೆ ದೇವಾಲಯದ ಹೆಸರನ್ನು ಕೆಡಿಸುವ ಹುನ್ನಾರವನ್ನು ಮಾಡಿದ್ದಾರೆ. ಡಿಸೆಂಬರ್ 25 ರಂದು ಪುಂಜಾಲಕಟ್ಟೆಯ ಬಸವೇಶ್ವರ ದೇವಸ್ಥಾನದ ಅಧ್ಯಕ್ಷನಾಗಿ ಪ್ರಶಾಂತ್ ಅವರು ಆಯ್ಕೆಯಾದ ಬೆನ್ನಲ್ಲೆ ಈ ಪೋಸ್ಟ್ ಹಾಕಿದ್ದು, ವೈಯಕ್ತಿಕವಾಗಿ ತೇಜೋವದೆಗೆ ಪ್ರಯತ್ನಿಸುತ್ತಿದ್ದಾನೆ.
ಇದರ ಜೊತೆಗೆ ಹತ್ತಾರು ವರ್ಷಗಳ ಇತಿಹಾಸವಿರುವ ಪ್ರಸಿದ್ದ ದೇವಸ್ಥಾನವಾದ ಬಸವೇಶ್ವರ ದೇವಸ್ಥಾನದ ಗೌರವವನ್ನು ಹಾಳುಮಾಡಲು ಪ್ರಯತ್ನ ಮಾಡಿದ್ದಾನೆ.
ಈ ಬಗ್ಗೆ ಪುಂಜಾಲಕಟ್ಟೆ ಠಾಣಾಧಿಕಾರಿಯವರು ತನಿಖೆ ನಡೆಸಿ, ಈತನ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಮನವಿ ಮಾಡಿದ್ದಾರೆ.
ಈ ಸಂದರ್ಭ ಬಸವೇಶ್ವರ ದೇವಾಲಯದ ಆಡಳಿತ ಮಂಡಳಿಯ ಸರ್ವ, ಸದಸ್ಯರು ಉಪಸ್ಥಿತರಿದ್ದರು.
BANTWAL
Bnatwala: ಡಿ.3ರಂದು ಅಕ್ಷಯ ಪಾತ್ರ ಪ್ರತಿಷ್ಠಾನದ ಕೇಂದ್ರೀಕೃತ ಅಡುಗೆ ಮನೆ ಉದ್ಘಾಟನೆ
ಬಂಟ್ವಾಳ: ಅಕ್ಷಯ ಪಾತ್ರ ಫೌಂಡೇಶನ್ ಇದರ ಅಡುಗೆ ಮನೆಯ ಉದ್ಘಾಟನಾ ಸಮಾರಂಭವು ಡಿ. 3 ರಂದು ಬೆಂಜನಪದವು ಕೆನರಾ ಇಂಜಿನಿಯರಿಂಗ್ ಕಾಲೇಜು ಸಮೀಪ ನಡೆಯಲಿದೆ.
ಅಕ್ಷಯ ಫೌಂಡೇಶನ್ ಮಕ್ಕಳ ಹಸಿವನ್ನು ಹೋಗಲಾಡಿಸುವ ತನ್ನ ಅಚಲವಾದ ಕಾರ್ಯಕ್ಕೆ ಹೆಸರುವಾಸಿಯಾಗಿದ್ದು, ಮಂಗಳೂರಿನಲ್ಲಿ ತನ್ನ ಕೇಂದ್ರೀಕೃತ ಅಡುಗೆ ಮನೆಯ ಉದ್ಘಾಟನೆಯೊಂದಿಗೆ ಮಹತ್ವದ ಮೈಲಿಗಲ್ಲು ತಲುಪಿದೆ. ದಾನಿಗಳಾದ ಜಿಟಿ ಫೌಂಡೇಶನ್ ಮತ್ತು ದಿಯಾ ಸಿಸ್ಟಮ್ಸ್ (ಮಂಗಳೂರು) ಪ್ರೈ.ಲಿ. ಲಿಮಿಟೆಡ್ನ ವಿಜಯ್ ಮತ್ತು ಶಾಮ ಕೇಡಿಯಾ, ದಿವಂಗತ ಡಾ. ವಿ ರವಿಚಂದ್ರನ್ ಅವರ ನಿರಂತರ ಬೆಂಬಲ ಮತ್ತು ದೂರದೃಷ್ಟಿ ಕೊಡುಗೆಯೇ ಈ ಅಡುಗೆ ಮನೆಯಾಗಿದೆ. ಈ ಸಮಾರಂಭವು ಉಡುಪಿಯ ಪುತ್ತಿಗೆ ಮಠದ ಜಗದ್ಗುರು ಶ್ರೀ ಮಧ್ವಾಚಾರ್ಯ ಮೂಲ ಮಹಾ ಸಂಸ್ಥಾನದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ನಡೆಯಲಿದೆ.
ಈ ಉದ್ಘಾಟನಾ ಸಮಾರಂಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಕರ್ನಾಟಕ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್, ಬೆಂಗಳೂರಿನ ಸೆಂಚುರಿ ರಿಯಲ್ ಎಸ್ಟೇಟ್ ಗ್ರೂಪ್ನ ಅಧ್ಯಕ್ಷ ಡಾ. ಪಿ ದಯಾನಂದ ಪೈ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಂ.ಪಿ.ಮುಲ್ಲೈ ಮುಹಿಲನ್, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಿಇಒ ಡಾ. ಆನಂದ ಕೆ, ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಅಕ್ಷಯ ಪಾತ್ರ ಪ್ರತಿಷ್ಠಾನದ ಅಧ್ಯಕ್ಷ ಮಧು ಪಂಡಿತ್ ದಾಸ ಮತ್ತು ಅಕ್ಷಯ ಪಾತ್ರ ಫೌಂಡೇಶನ್ನ ಉಪಾಧ್ಯಕ್ಷ ಚಂಚಲಪತಿ ದಾಸ ಅವರು ಉಪಸ್ಥಿತರಿರುವರು.
124 ಸರ್ಕಾರಿ ಮತ್ತು 41 ಸರ್ಕಾರಿ ಅನುದಾನಿತ ಸಂಸ್ಥೆಗಳು ಸೇರಿದಂತೆ 165 ಕ್ಕೂ ಹೆಚ್ಚು ಶಾಲೆಗಗಳಿಗೆ ಅಗತ್ಯ ಪೌಷ್ಟಿಕಯುತವಾದ 25,000 ಊಟವನ್ನು ಉತ್ಪಾದಿಸುವ ಸಾಮರ್ಥ್ಯದೊಂದಿಗೆ ಈ ಅಡುಗೆಕೋಣೆ ರೂಪುಗೊಂಡಿದೆ. ಅಡುಗೆಮನೆಯ ವೈವಿಧ್ಯಮಯ ಮೆನುವು ಸಮತೋಲಿತ ಪೋಷಣೆಯನ್ನು ಖಾತ್ರಿಗೊಳಿಸುತ್ತದೆ. ಸೌರಶಕ್ತಿ ಮತ್ತು ಸ್ವಚ್ಛ ಎಲ್ಪಿಜಿ ಯೊಂದಿಗೆ ಪರಿಸರಸ್ನೇಹಿ ಅಡುಗೆಮನೆ ಇದಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
BANTWAL
Bantwala: ಅಕ್ಕಪಕ್ಕ ಮನೆಯ ಯುವಕ-ಯುವತಿ ಒಂದೇ ದಿನ ನಾಪತ್ತೆ..!
ಬಂಟ್ವಾಳ: ಅಕ್ಕ ಪಕ್ಕದ ಮನೆಯ ಯುವಕ ಮತ್ತು ಯುವತಿ ಒಂದೇ ದಿನ ನಾಪತ್ತೆ ಯಾದ ಘಟನೆ ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮದಲ್ಲಿ ನಡೆದಿದ್ದು, ಈ ಕುರಿತಂತೆ ಎರಡೂ ಮನೆಯವರು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಸಜೀಪಮುನ್ನೂರು ಗ್ರಾಮದ ಉದ್ದೊಟ್ಟು ನಿವಾಸಿ ಆಯಿಷತ್ ರಸ್ಮಾ (18) ಮತ್ತು ಮಹಮ್ಮದ್ ಸಿನಾನ್ (23) ನಾಪತ್ತೆಯಾದವರು. ರಸ್ಮಾ ನಡುಪದವು ಖಾಸಗಿ ಕಾಲೇಜಿನಲ್ಲಿ ಫಾರ್ಮಸಿ ವಿದ್ಯಾರ್ಥಿನಿಯಾಗಿದ್ದಾರೆ. ಅವರು ನ. 23ರ ರಾತ್ರಿ ಊಟ ಮುಗಿಸಿ ಮನೆಯಲ್ಲಿ ಮಲಗಿದ್ದು, ಮರುದಿನ ಬೆಳಗ್ಗೆ ಎದ್ದು ನೋಡಿದಾಗ ನಾಪತ್ತೆಯಾಗಿದ್ದರು. ಸಿನಾನ್ ಕೆಲವು ವರ್ಷಗಳ ಕಾಲ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಬಳಿಕ ಊರಿಗೆ ಬಂದು ಕೂಲಿ ಕೆಲಸ ಮಾಡಿಕೊಂಡಿದ್ದರು. ಅವರು ನ. 23ರ ರಾತ್ರಿ ಊಟ ಮಾಡಿ ಮಲಗಿದವರು ಮರುದಿನ ಬೆಳಗಾಗುವಷ್ಟರಲ್ಲಿ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಪೊಲೀಸರು ಎರಡೂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
BANTWAL
Bantwala: ಅಕ್ರಮ ಮರ ಸಾಗಾಟ-ಇಬ್ಬರು ಆರೋಪಿಗಳು ವಶ..!
ಬಂಟ್ವಾಳ: ಅಕ್ರಮ ಮರ ಸಾಗಟ ಮಾಡುತ್ತಿದ ಸ್ಥಳಕ್ಕೆ ಖಚಿತ ಮಾಹಿತ ಪಡೆದ ಬಂಟ್ವಾಳ ಅರಣ್ಯ ಇಲಾಖೆಯವರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಸಜೀಪಮುನ್ನೂರು ಗ್ರಾಮದ ಮಾರ್ನಬೈಲು ಹಾಗೂ ಉಳ್ಳಾಲ ತಾಲೂಕಿನ ಸಜೀಪಪಡು ಗ್ರಾಮದ ಕೋಟೆಕಣಿಯಲ್ಲಿ ನಡೆದಿದೆ.
ಮರ ಹಾಗೂ ವಿವಿಧ ಜಾತಿಯ ದಿಮ್ಮಿಗಳನ್ನು ಪಿಕಪ್ ಮೂಲಕ ಆಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಹಾಗೂ 2 ಪಿಕಪ್ ವಾಹನ,6 ಲಕ್ಷ ರೂ ಮೌಲ್ಯದ ದಿಮ್ಮಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆಯಲ್ಲಿ ಉಪ ವಲಯ ಅರಣ್ಯಾಧಿಕಾರಿಗಲು ಪಾಲ್ಗೊಂಡಿದ್ದರು. ವಲಯ ಅರಣ್ಯ ಅಧಿಕಾರಿ ಪ್ರಪುಲ್ ಶೆಟ್ಟಿ ಪಿ.ಅವರು ತನಿಖೆ ನಡೆಯಲಿದೆ ಎಂದು ತಿಳಿಸಿದ್ದಾರೆ.