HomeLATEST NEWSಲಂಚ ಕೇಳಿದ ಅಧಿಕಾರಿಯನ್ನು ಉಟ್ಟ ಬಟ್ಟೆಯಲ್ಲೇ ಹೊತ್ತೋಯ್ದ ಎಸಿಬಿ

ಲಂಚ ಕೇಳಿದ ಅಧಿಕಾರಿಯನ್ನು ಉಟ್ಟ ಬಟ್ಟೆಯಲ್ಲೇ ಹೊತ್ತೋಯ್ದ ಎಸಿಬಿ

ಲಖನೌ: ಲಂಚ ಕೇಳಿದ ಅಧಿಕಾರಿಯೊಬ್ಬನನ್ನು ಉಟ್ಟ ಬಟ್ಟೆಯಲ್ಲೇ ಎಸಿಬಿ ಪೊಲೀಸರು ಠಾಣೆಗೆ ಕರೆದುಕೊಂಡು ಹೋದ ಘಟನೆ ಉತ್ತರ ಪ್ರದೇಶದ ಸಂತ ಕಬೀರ್ ನಗರದಲ್ಲಿ ನಡೆದಿದೆ.

ಬಂಧಿತ ಅಧಿಕಾರಿಯನ್ನು ರಾಮ್ ಮಿಲನ್ ಯಾದವ್ ಎಂದು ಗುರುತಿಸಲಾಗಿದೆ. ಜಮೀನು ವಿಷಯವಾಗಿ ವರದಿ ಸಿದ್ಧಪಡಿಸಲು ಅಬ್ದುಲ್‌ ಖಾನ್‌ ಎಂಬಾತನ ಬಳಿ 10 ಸಾವಿರ ರೂಪಾಯಿ ಲಂಚಕ್ಕಾಗಿ ಪದೇ ಪದೇ ಪೀಡಿಸುತ್ತಿದ್ದ. ಇದರಿಂದ ರೋಸಿಹೋದ ಅಬ್ದುಲ್‌ ಖಾನ್‌ ಭ್ರಷ್ಟಾಚರ ನಿಗ್ರಹ ದಳದ (ಎಸಿಬಿ) ಬಳಿ ದೂರು ನೀಡಿದ್ದರು. ಅಬ್ದುಲ್‌ ಖಾನ್‌ ಅವರನ್ನು ರಾಮ್ ಮಿಲನ್ ಯಾದವ್ ಹಣ ಪಡೆಯಲು ತನ್ನ ಮನೆಗೆ ಕರೆದಿದ್ದ. ಈ ಬಗ್ಗೆ ಎಸಿಬಿಗೆ ಮಾಹಿತಿ ನೀಡಿದ ಅಬ್ದುಲ್‌. ಆತನ ಮನೆಗೆ ತೆರಳಿ ಹಣ ನೀಡುವ ವೇಳೆ ಎಸಿಬಿ ಆತನನ್ನು ಟವೆಲ್, ಬನಿಯನ್‌ನಲ್ಲಿಯೇ ಪೊಲೀಸ್‌ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಎಸಿಬಿ ಅಧಿಕಾರಿ ರಾಮಧಾರಿ ಮಿಶ್ರಾ, ದೂರು ಸಲ್ಲಿಕೆಯಾಗಿದ್ದರಿಂದ ಲಂಚ ಪಡೆಯುವ ವೇಳೆ ನಮ್ಮ ತಂಡ ದಾಳಿ ನಡೆಸಿತ್ತು. ಸದ್ಯ ಆರೋಪಿಯನ್ನು ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ ಎಂದು ಹೇಳಿದ್ದಾರೆ.

Latest articles

ಕೆಲಸ ಇಲ್ಲದವನು ಎಂದು ಬೈಯುತ್ತಿದ್ದ ಅಜ್ಜಿಯನ್ನು ಕೊಂದು ಸುಟ್ಟು ಹಾಕಿದ ಕಿರಾತಕ ಮೊಮ್ಮಗ

ಮೈಸೂರು: ದುಡಿಯುವ ವಯಸ್ಸಿನಲ್ಲಿ ಪುಂಡ ಪೋಕರಿಯಂತೆ ಅಲೆಯುತ್ತಿದ್ದುದಕ್ಕೆ ಬೈಯುತ್ತಿದ್ದ ಅಜ್ಜಿಯನ್ನು ಸ್ವಂತ ಮೊಮ್ಮಗನೇ ಕೊಂದು ಸುಟ್ಟು ಹಾಕಿ ಶವವನ್ನು...

ಚಿತ್ರದುರ್ಗ : ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಯ್ತು ಅಕ್ರಮ ಗೋಸಾಗಾಟ- ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹ..!

ಚಿತ್ರದುರ್ಗದಲ್ಲಿ ರಾತ್ರಿ ವೇಳೆ ಕಳ್ಳರು ಬೀದಿ ಬದಿಯ ಗೋವುಗಳನ್ನು ಕಳ್ಳತನ ಮಾಡಿ ಟೆಂಪೋದಲ್ಲಿ ತುಂಬಿಸಿಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿ...

ಕೇರಳಕ್ಕೆಮುಂಗಾರು ಪ್ರವೇಶ- ಮಂಗಳೂರಿನಲ್ಲಿ ಸಂಜೆ ಬಿರುಸಿನ ಮಳೆ..!

ಕೇರಳದಲ್ಲಿ ಇಂದು ಮುಂಗಾರು ಪ್ರವೇಶಿಸಿದ್ದು ಈ ಹಿನ್ನೆಲೆಯಲ್ಲಿ ಕರಾವಳಿಯ ಬಂದರು ನಗರ ಮಂಗಳೂರಿನಲ್ಲಿ ಇಂದು ಸಂಜೆ ಬಿರುಸಿನ ಮಳೆಯಾಗಿದೆ.ಮಂಗಳೂರು...

ಬೆಂಗಳೂರು: ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ರನ್ನು ಭೇಟಿಯಾದ ಸ್ಪೀಕರ್ ಯು.ಟಿ.ಖಾದರ್

ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾಗಿ ಆಯ್ಕೆಯಾದ ಸ್ಪೀಕರ್ ಯು.ಟಿ.ಖಾದರ್ ಅವರು ಮೊದಲ ಬಾರಿಗೆ ದೆಹಲಿಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರನ್ನು...