Connect with us

LATEST NEWS

ಉಡುಪಿ ಸೇರಿ ರಾಜ್ಯದ 21 ಅಧಿಕಾರಿಗಳ ಮೇಲೆ ಎಸಿಬಿ ದಾಳಿ

Published

on

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದಲ್ಲಿ ರಾಜ್ಯದ 21 ಅಧಿಕಾರಿಗಳ ಮೇಲೆ ಏಕಕಾಲದಲ್ಲಿ ಎಸಿಬಿ ದಾಳಿ ನಡೆಸಿದೆ.


ಇಂದು ಬೆಳಗ್ಗೆ ದಾಳಿ ಮಾಡಿರುವ ಭ್ರಷ್ಟಾಚಾರ ನಿಗ್ರಹ ದಳ ಎಸಿಬಿ ಶೋಧ ನಡೆಸುತ್ತಿದೆ. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಅಡಿಯಲ್ಲಿ 21 ಅಧಿಕಾರಿಗಳ ವಿರುದ್ಧ ಮೊಕದ್ದಮೆ ದಾಖಲಿಸಿದ್ದು,

ಆರೋಪಿತರ ಮನೆ, ಕಚೇರಿಗಳು, ಸಂಬಂಧಿಕರು ಮತ್ತು ನಿಕಟವರ್ತಿಗಳ ಮನೆಗಳ ಮೇಲೆ ಎಸಿಬಿ ದಾಳಿ ನಡೆಸಿದೆ.

ಎಸಿಬಿ ಸಂಸ್ಥೆಯ 300ಕ್ಕೂ ಹೆಚ್ಚು ಅಧಿಕಾರಿಗಳು ಹಾಗೂ ಸಿಬ್ಬಂದಿ ಶೋಧ ಕಾರ್ಯದಲ್ಲಿ ನಿರತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಇನ್ನು ಉಡುಪಿ ಜಿಲ್ಲೆಯ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಉಪ ವಿಭಾಗದ ಇಲಾಖೆ ಸಹಾಯಕ ಅಭಿಯಂತರರು, ಹರೀಶ್ ಇವರ ಮನೆ ಹಾಗೂ ಕಚೇರಿ ಮೇಲೆ ಇಂದು ಬೆಳಗ್ಗೆ ಉಡುಪಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಉಡುಪಿಯ ಕೊರಂಗ್ರಪಾಡಿಯಲ್ಲಿರವ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಉಪ ವಿಭಾಗದ ಇಲಾಖೆ ಸಹಾಯಕ ಅಭಿಯಂತರರು, ಹರೀಶ್ ಅವರ ಮನೆಯ ಮೇಲೆ ಎಸಿಬಿ ಡಿವೈಎಸ್ಪಿ ಮಂಜುನಾಥ ಕವರಿ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.


1. ಭೀಮ ರಾವ್ ವೈ ಪವಾರ್, ಸೂಪರಿಡಿಟೆಂಟ್ ಇಂಜಿನಿಯರ್ ಬೆಳಗಾವಿ
2. ಹರೀಶ್, ಸಹಾಯಕ ಅಭಿಯಂತರರು, , ಸಣ್ಣ ನೀರಾವರಿ , ಉಡುಪಿ
3. ರಾಮಕೃಷ್ಣ ಎಚ್. ವಿ , ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು, ಹಾಸನ
4. ರಾಜೀವ್ ಪುರಸಯ್ಯ ನಾಯಕ್, ಸಹಾಯಕ ಅಭಿಯಂತರರು, ಲೋಕೋಪಯೋಗಿ ಇಲಾಖೆ, ಕಾರವಾರ
5. ಬಿ. ಆರ್. ಬೋಪಯ್ಯ, ಕಿರಿಯ ಅಭಿಯಂತರರು, ಪೊನ್ನಂ ಪೇಟೆ ಜಿಲ್ಲಾ ಪಂಚಾಯತ್,
6. ಮಧುಸೂದನ್, ಜಿಲ್ಲಾ ರಿಜಸ್ಟರ್, ಐಜಿಆರ್ ಕಚೇರಿ, ಬೆಳಗಾವಿ
7. ಪರಮೇಶ್ವರಪ್ಪ, ಸಹಾಯಕ ಅಭಿಯಂತರರು, ಸಣ್ಣ ನೀರಾವರಿ, ಹೂವಿನಡಗಲಿ
8. ಯಲ್ಲಪ್ಪ ಎನ್ ಪದಸಾಲಿ, ಆರ್‌ಟಿಒ, ಬಾಗಲಕೋಟೆ
9. ಶಂಕರಪ್ಪ ನಾಗಪ್ಪ ಗೋಗಿ, ಯೋಜನ ನಿರ್ದೇಶಕರು, ನಿರ್ಮಿತಿ ಕೇಂದ್ರ, ಬಾಗಲಕೋಟೆ
10. ಪ್ರದೀಪ್ ಎಸ್ ಆಲೂರು, ಪಂಚಾಯಿತಿ ಗ್ರೇಡ್ ಕಾರ್ಯದರ್ಶಿ, ಆರ್‌ಡಿಪಿಆರ್, ಗದಗ
11. ಸಿದ್ದಪ್ಪ ಟಿ, ಉಪ ಮುಖ್ಯ ಎಲೆಕ್ಟ್ರಿಕಲ್ ಅಧಿಕಾರಿ, ಬೆಂಗಳೂರು
12. ತಿಪ್ಪಣ್ಣ ಪಿ ಸಿರಸಂಗಿ, ಜಿಲ್ಲಾ ಕಾರ್ಯಕ್ರಮ ಅಧಿಕಾರಿ, ಬೀದರ್
13.ಮೃತ್ಯುಂಜಯ ಚನ್ನಬಸಯ್ಯ ತಿರಣಿ, ಸಹಾಯಕ ಕಂಟ್ರೋಲರ್, ಕರ್ನಾಟಕ ವೆಟೆರ್ನಿಟಿ, ಅನಿಮಲ್ ಮತ್ತು ಫಿಷರಿ ಸೈನ್ಸ್ ಯೂನಿವರ್ಸಿಟಿ, ಬೀದರ್
14. ಮೋಹನ್ ಕುಮಾರ್, ಕಾರ್ಯನಿರ್ವಾಹಕ ಅಭಿಯಂತರರು, ನೀರಾವರಿ ಇಲಾಖೆ, ಚಿಕ್ಕಬಳ್ಳಾಪುರ ಜಿಲ್ಲೆ.
15.ಶ್ರೀಧರ್, ಜಿಲ್ಲಾ ರಿಜಿಸ್ಟರ್, ಕಾರವಾರ
16. ಮಂಜುನಾಥ್ ಜಿ, ನಿರ್ವೃತ್ತ ಕಾರ್ಯನಿರ್ವಾಹಕ ಅಭಿಯಂತರರು, ಲೋಕೋಪಯೋಗಿ ಇಲಾಖೆ
17. ಶಿವಲಿಂಗಯ್ಯ, ಗ್ರೂಪ್ ಸಿ ನೌಕರ, ಬಿಡಿಎ
18. ಉದಯ ರವಿ, ಪೊಲೀಸ್ ಇನ್ಸ್ಪೆಕ್ಟರ್, ಕೊಪ್ಪಳ
19.ಬಿ.ಜಿ. ತಿಪ್ಪಯ್ಯ, ಕೇಸ್ ವರ್ಕರ್, ಕುದೂರು ಪುರಸಭೆ.
20. ಚಂದ್ರಪ್ಪ ಸಿ. ಹೊಳೆಕಾರ್, ಯುಟಿಪಿ, ಅಧಿಕಾರಿ, ರಾಣಿಬೆನ್ನೂರು.
21.ಜನಾರ್ಧನ್, ನಿವೃತ್ತ, ರಿಜಿಸ್ಟರ್ ಭೂ ಮೌಲ್ಯಮಾಪಕರು, ಬೆಂಗಳೂರು.
ಎಸಿಬಿ ಅಧಿಕಾರಿಗಳು ಈ 21 ಅಧಿಕಾರಿಗಳಿಗೆ ಸೇರಿದ 80 ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿಯನ್ನು ನಡೆಸಿದ್ದು ಪರಿಶೀಲನೆಯಲ್ಲಿ ತೊಡಗಿದ್ದಾರೆ. ಎಸಿಬಿ ದಾಳಿ ಮುಗಿದ ಬಳಿಕವಷ್ಟೇ ಯಾವ ಅಧಿಕಾರಿ ಎಷ್ಟು ಅಕ್ರಮ ಆಸ್ತಿಯನ್ನು ಸಂಪಾದಿಸಿದ್ದಾರೆ ಎಂಬುದು ತಿಳಿದುಬರಲಿದೆ.

DAKSHINA KANNADA

ದಂತ ವೈದ್ಯೆಯಾಗಿ ಸೇವೆ ಆರಂಭದ ದಿನವೇ ವಿಧಿಯಾಟ..! ಯುವ ವೈದ್ಯೆ ಸಾ*ವು..!

Published

on

ಮಂಗಳೂರು : ಆಕೆ ಆರೋಗ್ಯವಾಗಿದ್ದು, ಇನ್ನೊಬ್ಬರ ಆರೋಗ್ಯ ವಿಚಾರಿಸುವ ವೈದ್ಯೆಯಾಗಿದ್ದವರು. ದಂತ ವೈದ್ಯಕೀಯ ಪದವಿ ಮುಗಿಸಿ ಇನ್ನೇನು ಕೆಲಸಕ್ಕೆ ಸೇರಬೇಕು ಅಂತ ಒಂದು ಕ್ಲಿನಿಕ್‌ಗೆ ಜಾಯಿನ್ ಆಗಿದ್ದಾರೆ. ಆದ್ರೆ ದುರಾದೃಷ್ಟ ಅಂದ್ರೆ ಕೆಲಸಕ್ಕೆ ಜಾಯಿನ್ ಆಗುವ ದಿನವೇ ಆಕೆ ಇಹಲೋಕ ತ್ಯಜಿಸಿದ್ದಾರೆ. ಉಳ್ಳಾಲ ತಾಲೂಕಿನ ನರಿಂಘಾನ ಗ್ರಾಮದ ಆಳ್ವರಬೆಟ್ಟು ನಿವಾಸಿ 24 ವರ್ಷದ ಸ್ವಾತಿ ಶೆಟ್ಟಿ ಇಹಲೋಕ ತ್ಯಜಿಸಿದ ವೈದ್ಯೆಯಾಗಿದ್ದಾರೆ. ಉಳ್ಳಾಲ ತಾಲೂಕಿನ ನರಿಂಗಾನ‌ ಗ್ರಾಮದ ಆಳ್ವರಬೆಟ್ಟು ನಿವಾಸಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಮುಖಂಡ, ಶಾಂತಿಪಳಿಕೆ ಶ್ರೀ ಮಹಾಮ್ಮಾಯ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರಾಮಣ್ಣ ಶೆಟ್ಟಿ ಆಳ್ವರಬೆಟ್ಟು ಹಾಗೂ ಜ್ಯೋತಿ ಶೆಟ್ಟಿ ದಂಪತಿ ಪುತ್ರಿ ಇವರು.

ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ದಂತ ವೈದ್ಯಕೀಯ ಪದವಿ ಮುಗಿಸಿ ಮಂಗಳವಾರದಿಂದ(16-04-2024) ಪಾಂಡೇಶ್ವರದ ಕ್ಲಿನಿಕ್ ಒಂದರಲ್ಲಿ ಕೆಲಸಕ್ಕೆ ಜಾಯಿನ್ ಆಗುವವರಿದ್ದರು. ಹೀಗಾಗಿ ಸೋಮವಾರ (15-04-2024) ಸಂಜೆ ಪಾಂಡೇಶ್ವರದ ಪಿಜಿ ಬಂದು ಜಾಯಿನ್ ಆಗಿದ್ದರು. ಮರುದಿನ ಹೊಸ ಕೆಲಸಕ್ಕೆ ಹೋಗುವ ಕಾರಣ ಸಾಕಷ್ಟು ಎಕ್ಸೈಟ್ ಆಗಿದ್ದ ಸ್ವಾತಿ ತಂದೆ ತಾಯಿ ಜೊತೆ ಫೋನ್ ಮೂಲಕ ಮಾತನಾಡಿದ್ದರು. ಈ ವೇಳೆ ವಿಪರೀತ ತಲೆನೋವು ಕಾಣಿಸಿಕೊಂಡ ಕಾರಣ ಬೇಗನೆ ಮಲಗುವುದಾಗಿ ಹೇಳಿ ಸ್ವಾತಿ ನಿದ್ರೆಗೆ ಜಾರಿದ್ದರು. ಈ ವೇಳೆ ರೂಮ್ ಮೇಟ್ ಕೂಡಾ ಜೊತೆಯಲ್ಲಿ ಇದ್ದರಾದ್ರೂ ತಲೆನೋವಿನ ಕಾರಣ ತೊಂದರೆ ಕೊಡದೆ ಅವರೂ ಕೂಡಾ ಮಲಗಿದ್ದರು. ಮುಂಜಾನೆ ಸ್ವಾತಿ ಎದ್ದಿಲ್ಲ ಅನ್ನೋ ಕಾರಣಕ್ಕೆ ಅವರನ್ನು ಅಲುಗಾಡಿಸಲು ಹೋದಾಗ ಮೈ ತಣ್ಣಗಾಗಿರುವುದು ಗೊತ್ತಾಗಿದೆ.  ತಕ್ಷಣ ಅಂಬ್ಯುಲೆನ್ಸ್ ಮೂಲಕ ನಗರದ ವೆನ್‌ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದ್ರೆ ಅಷ್ಟರಲ್ಲಾಗಲೇ ಅವರು ಮೃತ ಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸ್ವಾತಿ ಅವರಿಗೆ ಅಪರೂಪಕ್ಕೆ ತಲೆ ನೋವು ಕಾಣಿಸಿಕೊಳ್ಳುತ್ತಿತ್ತು. ಆದ್ರೆ ಅವರ ಈ ಧಿಡೀರ್ ಸಾವಿಗೆ ಕಾರಣ ಏನು ಅನ್ನೋದು ಇನ್ನಷ್ಟೇ ಗೊತ್ತಾಗಬೇಕಾಗಿದೆ.

 

 

Continue Reading

LATEST NEWS

ಈ ಬೀಚ್‌ಗಳಿಗೆ ಬಟ್ಟೆ ಧರಿಸಿ ಹೋಗುವಂತಿಲ್ಲ…!

Published

on

ಮಂಗಳೂರು : ಸುಂದರವಾದ ಹಾಗೂ ಪ್ರವಾಸಿಗರನ್ನು ಸೆಳೆಯುವ ಬೀಚ್‌ಗಳು ಯಾವುದು ಅಂತ ಕೇಳಿದ್ರೆ ನಮ್ಮಲ್ಲಿ ನೆನಪಾಗೋದು ಗೋವಾದ ಬೀಚ್‌ಗಳು. ವಿದೇಶಿಯರು ಹೆಚ್ಚಾಗಿ ಬರೋ ಗೋವಾ , ಗೋಕರ್ಣ ಮೊದಲಾ ಬೀಚ್‌ ಹೋದವರಿಗೆ ಅಲ್ಲಿ ಬಿಕಿನಿಯಲ್ಲಿ ಕಾಣಿಸೋ ವಿದೇಶಿ ಮಹಿಳೆಯರು ಗಮನಸೆಳೆಯುತ್ತಾರೆ. ಆದ್ರೆ ಅಂತಹ ಬೀಚ್‌ಗಳ ಸಾಲಿನಲ್ಲಿ ಬರೋ ಕೆಲ ಬೀಚ್‌ಗಳಲ್ಲಿ ಮಹಿಳೆಯರು ಹಾಗೂ ಪುರುಷರು ಬಟ್ಟೆನೇ ಹಾಕದೆ ತಿರುಗಾಡ್ತಾರೆ. ಇಂತಹ ಬೀಚ್‌ಗಳು ಬತ್ತಲೆ ಬೀಚ್ ಅಂತಾನೇ ಫೇಮಸ್‌. ಅಂತಹ ಬೀಚ್‌ಗಳು ಯಾವುದು ಅನ್ನೋ ಡಿಟೈಲ್ ಇಲ್ಲಿದೆ.

ಸಂಪೂರ್ಣ ಬೆತ್ತಲಾಗಿ ಜನರು  ಸೆಲೆಬ್ರೇಟ್ ಮಾಡೋ ಸಾಕಷ್ಟು ಉತ್ಸವಗಳ ವಿದೇಶಗಳಲ್ಲಿ ಹಲವೆಡೆ ನಡೆಯುತ್ತದೆ. ಅದೇ ರೀತಿ ಬೀಚ್‌ಗಳಲ್ಲೂ ಬೆತ್ತಲಾಗಿ ತಿರುಗಾಡೋ ಸಂಸ್ಕೃತಿಯನ್ನು ವಿದೇಶದ ಹಲವು ದೇಶಗಳಲ್ಲಿ ನಾವು ಕಾಣಬಹುದಾಗಿದೆ. ಅಂತಹ ಬೀಚ್‌ಗಳ ಲಿಸ್ಟ್ ಇಲ್ಲಿದೆ.

1. ಲುಕಾಟ್ ಬೀಚ್:

ಇಲ್ಲಿ ಬಟ್ಟೆ ಧರಿಸದೇ ಪೂರ್ಣವಾಗಿ ಬೆತ್ತಲೆ ದೇಹದಿಂದ ಅಲ್ಲಿಯ ಪ್ರಕೃತಿಯನ್ನು ಜನರು ಆನಂದಿಸುತ್ತಾರೆ. ಈ  ಬೀಚ್ ಫ್ರಾನ್ಸ್‌ ದೇಶದಲ್ಲಿದ್ದು ಈ ಬೀಚ್‌ ಹೆಸರು ಲುಕಾಟ್ ಬೀಚ್. ಮೆಡಿಟರೇನಿಯನ್ ಸಮುದ್ರದ ಪಕ್ಕದಲ್ಲಿರುವ ಈ ಕಡಲತೀರದಲ್ಲಿ ನಗ್ನತೆಗೆ ಯಾವುದೇ ಮಿತಿ ಇಲ್ಲ. ಇಲ್ಲಿ ಯಾರು ಬೇಕಾದರೂ ಬೆತ್ತಲೆಯಾಗಿ ತಿರುಗಾಡಬಹುದು ಮತ್ತು ಯಾರೂ ಯಾರನ್ನೂ ಗಮನಿಸೋದಿಲ್ಲ ಅನ್ನೋದೇ ವಿಶೇಷ.

2. ವಲಾಲ್ಟಾ ಬೀಚ್:

ಕ್ರೊಯೇಷಿಯಾದ ವಲಾಲ್ಟಾ ತುಂಬಾ ಸ್ವಚ್ಛವಾದ ಕಡಲತೀರವಾಗಿದ್ದು,ಈ ಬೀಚ್​ಗೆ ಹೆಚ್ಚಿನ ಸಂಖ್ಯೆಯಲ್ಲಿ ಯುರೋಪಿನ ಪ್ರವಾಸಿಗರು ಭೇಟಿ ನೀಡುತ್ತಾರೆ. ಯುರೋಪ್ ಅಲ್ಲದೆ ಜಗತ್ತಿನ ವಿವಿಧ ದೇಶಗಳ ಪ್ರವಾಸಿಗರು ಇಲ್ಲಿಗೆ ಬಂದು ಬಟ್ಟೆ ಇಲ್ಲದೆ ಸಮುದ್ರದಲ್ಲಿ ಮೋಜು ಮಸ್ತಿ ಮಾಡುತ್ತಾರೆ.

3. ಬೆಲ್ಲೆವ್ಯೂ ಬೀಚ್:

ಡೆನ್ಮಾರ್ಕ್‌ನ ಬೆಲ್ಲೆವ್ಯೂ ಬೀಚ್ ಪ್ರಪಂಚದ ಪ್ರಸಿದ್ಧ ಬೆತ್ತಲೆ ಬೀಚ್‌ಗಳಲ್ಲಿ ಒಂದಾಗಿದೆ. ಇಲ್ಲಿ ಯಾರೂ ಹೇಗೆ ಬೇಕಾದ್ರೂ ಇರಬಹುದು. ಆದರೆ ಅನ್ಯರಿಗೆ ಯಾವುದೇ ತೊಂದರೆ ಮಾಡುವಂತಿಲ್ಲ. ಇಲ್ಲಿಯ ಕಾನೂನುಗಳನ್ನು ಉಲ್ಲಂಘನೆ ಮಾಡಿದ್ರೆ ಕಠಿಣ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ.

4. ಕಾರ್ನಿಗ್ಲಿಯಾ ಬೀಚ್:

ಇಟಲಿಯು ಕಾರ್ನಿಗ್ಲಿಯಾ ಬೀಚ್ ಕಡಲತೀರಗಳಿಗೆ ಪ್ರಸಿದ್ಧಿಯಾಗಿದೆ. ಈ ಕಡಲತೀರವನ್ನು ತಲುಪಲು ಸುರಂಗದ ಮೂಲಕ ಹೋಗಬೇಕು. ಇಲ್ಲಿ ಅನೇಕ ಮಹಿಳೆಯರು ಟಾಪ್ ಲೆಸ್ ಆಗಿ ಸ್ನಾನ ಮಾಡುವುದನ್ನು ಕಾಣಬಹುದು.

5. ಕೇಪ್ ಡಿ ಎಗ್ಡೆ ಬೀಚ್:

ಫ್ರಾನ್ಸ್‌ನ ಕ್ಯಾಪ್ ಡಿ’ಆಗ್ಡೆ ಬೀಚ್‌ಗೆ ಬಟ್ಟೆ ಇಲ್ಲದೆ ಹೋಗಬೇಕು. ಬೆತ್ತಲೆಯಾಗಿ ಹೋಗಿ ಅಲ್ಲಿ ಸ್ನಾನ ಮಾಡಬಹುದು. ಸ್ನಾನ ಮಾಡುವಾಗ ನಿಮ್ಮ ಮೈಮೇಲೆ ಬಟ್ಟೆ ಇದ್ದರೆ ಬೀಚ್ ಗಾರ್ಡ್ ಗಳು ನಿಮ್ಮನ್ನು ತಡೆಯಬಹುದು. ಆದ್ದರಿಂದ ನೀವು ವಿವಸ್ತ್ರಗೊಳ್ಳಬೇಕು.

Continue Reading

LATEST NEWS

ಈ ಶ್ರೀನಿವಾಸನ ವಿಗ್ರಹಕ್ಕೆ ಸೂರ್ಯನ ಕಿರಣಗಳು ಬೀಳುವ ಹಾಗಿಲ್ಲ..!

Published

on

ಆಂಧ್ರಪ್ರದೇಶ: ತಿರುಪತಿ ತಿಮ್ಮಪ್ಪನಿಗೆ ಇರೋವಷ್ಟು ಭಕ್ತರು ಬಹುಶಃ ಯಾವ ದೇವರಿಗೂ ಇಲ್ಲ ಅಂತಾನೇ ಹೇಳಬಹುದು . ಇದೇ ಕಾರಣದಿಂದ ದೇಶದ ಅತ್ಯಂತ ಶ್ರೀಮಂತ ದೇವಸ್ಥಾನವಾಗಿ ಜಗತ್ಪ್ರಸಿದ್ದಿಯನ್ನು ಪಡೆದುಕೊಂಡಿದೆ. ಆದ್ರೆ ಈ ದೇವಸ್ಥಾನದಲ್ಲಿರೋ ಅದೊಂದು ರಹಸ್ಯ ಮಾತ್ರ ದೇವಸ್ಥಾನಕ್ಕೆ ಬೇಟಿ ನೀಡೋ ಬಹುತೇಕ ಭಕ್ತರಿಗೆ ಗೊತ್ತಿಲ್ಲ. ಸಾಮಾನ್ಯವಾಗಿ ಭಕ್ತರು ಕಾಣುವ ಶ್ರೀನಿವಾಸ ಮಂದಸ್ಮಿತನಾಗಿದ್ದರೆ, ಗರ್ಭಗುಡಿಯಲ್ಲಿರೋ ಶ್ರೀನಿವಾಸ ಕೋಪಿಷ್ಠನಾಗಿದ್ದು, ಹುಬ್ಬುಗಳನ್ನು ಗಂಟು ಹಾಕಿಕೊಂಡಿದ್ದಾನೆ. ವರ್ಷಕ್ಕೊಂದು ಬಾರಿ ಮಾತ್ರ ಹೊರ ಬರುವ ಈತನ ಮೇಲೆ ಸೂರ್ಯ ರಶ್ಮಿ ಬಿದ್ರೆ ಜಗತ್ತಿಗೆ ಅಪಾಯ ಇದೆ ಅಂತಾರೆ.

ತಿರುಪತಿ ದೇವಸ್ಥಾನದ ಗರ್ಭಗುಡಿಯಲ್ಲಿರುವ ಈ ಉತ್ಸವ ಮೂರ್ತಿಯನ್ನು ವರ್ಷಕ್ಕೊಂದು ಬಾರಿ ಮಾತ್ರ ಆಚೆ ತರಲಾಗುತ್ತದೆ. ಸೂರ್ಯೋದಯಕ್ಕೂ ಮೊದಲೇ ಆಚೆ ತಂದು ಹಲವು ದೃವ್ಯಗಳಿಂದ ಶುದ್ದೀಕರಣ ಮಾಡಲಾಗುತ್ತದೆ. ಹಾಲು ಮೊಸರು ತುಪ್ಪ ಅರಶಿನ ಮೊದಲಾದವುಗಳಿಂದ ದೇವರ ವಿಗ್ರಹವನ್ನು ಶುದ್ಧೀಕರಣ ಮಾಡಲಾಗುತ್ತದೆ. ಕೈಕಿಷ ದ್ವಾದಶಿ ದಿನದಂದು ಈ ಪ್ರಕ್ರಿಯೆ ನಡೆಯುವುದು ವಾಡಿಕೆಯಾಗಿದ್ದು, ಸೂರ್ಯನ ಕಿರಣ ಭೂಮಿಯನ್ನು ತಲುಪುವ ಮೊದಲು ಎಲ್ಲಾ ವಿದಿವಿಧಾನಗಳು ಪೂರ್ಣಗೊಂಡು ಮೂರ್ತಿಗಳು ಮತ್ತೆ ಗರ್ಭಗುಡಿ ಸೇರುತ್ತದೆ. ವಿಶೇಷ ಅಂದ್ರೆ ಕೇವಲ ಶ್ರೀನಿವಾಸ ಮಾತ್ರವಲ್ಲದೆ ಆತನ ಅಕ್ಕಪಕ್ಕದಲ್ಲಿರುವ ಶ್ರೀದೇವಿ ಹಾಗೂ ಭೂ ದೇವಿಯ ಮುಖಭಾವ ಕೂಡಾ ಶ್ರೀನಿವಾಸನಂತೆ ಮುಖಭಾವದಂತೆ ಕೋಪದಲ್ಲಿದೆ.

ತಿರುಪತಿ ತಿಮ್ಮಪ್ಪನ ಗರ್ಭಗುಡಿಯಲ್ಲಿ ಇರುವ ಶ್ರೀನಿವಾಸನ ಈ ಉತ್ಸವ ಮೂರ್ತಿಯ ಹೆಸರು ವೆಂಟತುರೈವಾರ್. ತಿರುಪತಿಯಲ್ಲಿ ಭಕ್ತರು ಕಾಣವು ಶ್ರೀನಿವಾಸ ವಿಗ್ರಹ ಹೊರತು ಪಡಿಸಿದ್ರೆ ಇಲ್ಲಿರೋ ಅತ್ಯಂತ ಪುರಾತನ ವಿಗ್ರಹ ಇದಾಗಿದೆ. ಸರಿ ಸುಮಾರು 14 ನೇ ಶತಮಾನದ ವರೆಗೂ ಬ್ರಹ್ಮೋತ್ಸವದಲ್ಲಿ ಇದೇ ಮೂರ್ತಿಯನ್ನು ಹೊತ್ತೊಯ್ಯಲಾಗುತ್ತಿತ್ತು. ಆದ್ರೆ ಆ ಕಾಲದಲ್ಲಿ ನಡೆದಿದ್ದ ಒಂದು ಘಟನೆಯಿಂದ ಈ ವಿಗ್ರಹವನ್ನು ಬ್ರಹ್ಮೋತ್ಸವದಲ್ಲಿ ತರುವುದನ್ನು ನಿಲ್ಲಿಸಲಾಯಿತು.

14 ನೇ ಶತಮಾನದಲ್ಲಿ ನಡೆದಿದ್ದ ಬ್ರಹ್ಮೋತ್ಸವದಲ್ಲಿ ಬೆಂಕಿ ಆಕಸ್ಮಿಕ ನಡೆದಿದ್ದು, ಹಲವಾರು ಮನೆಗಳು ಸುಟ್ಟು ಬಸ್ಮವಾಗಿತ್ತಂತೆ. ಈ ವೇಳೆ ಭಕ್ತನೊಬ್ಬನಿಗೆ ಅಶರೀರವಾಣಿಯೊಂದು ಕೇಳಿಸಿದ್ದು, ಅದು ಶ್ರೀನಿವಾಸ ದೇವರದ್ದೇ ಎನ್ನಲಾಗಿದೆ. ಆ ಅಶರೀರವಾಣಿಯಲ್ಲಿ ಕೋಪದಲ್ಲಿ  ಉಗ್ರ ಸ್ವರೂಪಿಯಾಗಿ ಕಾಣಿಸುವ ಈ ಶ್ರೀನಿವಾಸ ವಿಗ್ರಹವನ್ನು ಬೆಳಕಿನ ಆಚೆಗೆ ತರದಂತೆ ಎಚ್ಚರಿಕೆ ನೀಡಲಾಗಿತ್ತಂತೆ. ಇನ್ನು ಮುಂದೆ ಸೂರ್ಯನ ಬೆಳಕು ಈ ವಿಗ್ರಹದ ಮೇಲೆ ಬಿದ್ದರೆ ಇಡೀ ಪ್ರಪಂಚಕ್ಕೆ ಬೆಂಕಿ ಹತ್ತಿಕೊಳ್ಳಬಹುದು ಎಂದು ಎಚ್ಚರಿಕೆ ನೀಡಲಾಗಿತ್ತಂತೆ. ಅಂದಿನಿಂದ ಈ ಉಗ್ರ ಸ್ವರೂಪಿ ಶ್ರೀನಿವಾಸನನ್ನು ಸೂರ್ಯನ ಬೆಳಕಿಗೆ ಆಚೆ ತರೋದು ನಿಲ್ಲಿಸಲಾಗಿದೆ. ವರ್ಷಕ್ಕೊಂದು ಬಾರಿ ಶುಚಿ ಮಾಡಲು ಹೊರತಂದ್ರೂ ಸೂರ್ಯೋದಯದ ಮೊದಲೇ ಶುಚಿಗೊಳಿಸಿ ಗರ್ಭಗುಡಿ ಸೇರಿಸಲಾಗುತ್ತದೆ.

Continue Reading

LATEST NEWS

Trending