Connect with us

    LATEST NEWS

    ಭ್ರಷ್ಟಾಚಾರದ ಆರೋಪ: 9 ಅಧಿಕಾರಿಗಳ ನಿದ್ದೆಗೆಡಿಸಿದ ಎಸಿಬಿ

    Published

    on

    ಬೆಂಗಳೂರು: ಭ್ರಷ್ಟಾಚಾರದ ಆರೋಪ ಮೇಲೆ ರಾಜ್ಯದ ವಿವಿಧೆಡೆ ಎಸಿಬಿ ಅಧಿಕಾರಿಗಳು ಇಂದು ಬೆಳ್ಳಂ ಬೆಳಗ್ಗೆ ದಾಳಿ ನಡೆಸಿ ಅಧಿಕಾರಿಗಳ ಆಸ್ತಿಗಳ ಪೂರಕ ದಾಖಲೆ ಸಂಗ್ರಹದಲ್ಲಿ ತೊಡಗಿದ್ದಾರೆ.

    ಅಕ್ರಮ ಆಸ್ತಿ ಗಳಿಕೆ ಆರೋಪ ಸಂಬಂಧ 9 ಸರ್ಕಾರಿ ಅಧಿಕಾರಿಗಳ ನಿವಾಸದ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ದಾಳಿಗಾಗಿ ಸುಮಾರು 300 ಅಧಿಕಾರಿಗಳನ್ನು ನೇಮಕ ಮಾಡಿದ್ದು, ಏಕ ಕಾಲದಲ್ಲಿ ರಾಜ್ಯದ 40 ಕಡೆ ದಾಳಿ ನಡೆಸಿದ್ದಾರೆ.  ಅಕ್ರಮ ಆಸ್ತಿ ಗಳಿಕೆ ಸಂಬಂಧ ಮಾಹಿತಿ ಆಧರಿಸಿ ಬೆಳಗ್ಗೆ ವಿವಿಧ ಜಿಲ್ಲೆಗಳಲ್ಲಿ ದಾಳಿ ನಡೆಸಲಾಗಿದೆ. ಶೋಧ ಕಾರ್ಯದಲ್ಲಿ ಚಿನ್ನ ಮತ್ತು ಆಸ್ತಿಗೆ ಸಂಬಂಧಿಸಿದಂತೆ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    ದ.ಕ., ಉಡುಪಿ, ಮಂಡ್ಯ, ಬೆಂಗಳೂರು ಸೇರಿದಂತೆ 40ಕ್ಕೂ ಹೆಚ್ಚು ಕಡೆ ದಾಳಿ ನಡೆದಿದೆ. ಮಂಗಳೂರಿನ ನಗರ ಅಭಿವೃದ್ಧಿ ಘಟಕದ ಇಂಜಿನಿಯರ್ ಜಿ. ಶ್ರೀಧರ್, ಉಡುಪಿಯ ಕರ್ನಾಟಕ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಇಂಜಿನಿಯರ್ ಕೃಷ್ಣ, ಕೆಆರ್ ಡಿಎಲ್ ಅಧಿಕಾರಿ ಆರ್. ಪಿ ಕುಲಕರ್ಣಿ, ಕೋಲಾರದ ಮಾಲೂರು ನಗರಾಭಿವೃದ್ಧಿ ಪ್ರಾಧಿಕಾರ ಸಹಾಯಕ ನಿರ್ದೇಶಕ ಎಚ್‌.ಆರ್.ಕೃಷ್ಣಪ್ಪ, ಮಂಡ್ಯದ ಅರಣ್ಯ ಅಧಿಕಾರಿ ವೆಂಕಟೇಶ್, ವಿಜಯಪುರ ಹೆಸ್ಕಾಂ ಇಂಜಿನಿಯರ್ ಸಿದ್ಧರಾಮ ಮಲ್ಲಿಕಾರ್ಜುನ್, ಕೋರಮಂಗಲ ಆರ್‌ಟಿಓ ಅಧಿಕಾರಿ ಕೃಷ್ಣಮೂರ್ತಿ, ಬಳ್ಳಾರಿ ಎಲೆಕ್ರಿಕಲ್ ಇಂಜಿನಿಯರ್ ವಿಜಯ್ ಕುಮಾರ್ ಮನೆಗಳ ಮೇಲೆ ದಾಳಿ ನಡೆಸಲಾಗಿದೆ.

    ಗುರುವಾರ ದಾಳಿಗೆ ಒಳಗಾಗಿರುವ ಅಧಿಕಾರಿಗಳ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆ ಭ್ರಷ್ಟಾಚಾರ ನಿಯಂತ್ರಣ ಅಧಿಕಾರಿಗಳು ಸಂಗ್ರಹಿಸಿದ ವರದಿ ವೇಳೆಯೂ ಆರೋಪಕ್ಕೆ ಪೂರಕ ದಾಖಲೆಗಳು ಸಿಕ್ಕಿದ್ದವು. ಈ ಹಿನ್ನೆಲೆ ರಾಜ್ಯದೆಲ್ಲೆಡೆ ಏಕಕಾಲಕ್ಕೆ ದಾಳಿ ನಡೆಸುವ ಮೂಲಕ ಎಸಿಬಿ ಅಧಿಕಾರಿಗಳು ಭ್ರಷ್ಟರ ಎದೆಯಲ್ಲಿ ನಡುಕ ಹುಟ್ಟಿಸಿದ್ದಾರೆ.

    DAKSHINA KANNADA

    ಮನೆಯೊಳಗೆ ಈ ಪ್ರಾಣಿ ಪಕ್ಷಿಗಳು ಬರಬಾರದಂತೆ, ಯಾವುದು? ಯಾಕೆ ಗೊತ್ತಾ?

    Published

    on

    ಕಷ್ಟಗಳು ಮನುಷ್ಯನಿಗೆ ಬರದೇ ಮರಕ್ಕೆ ಬರುತ್ತಾ ಎನ್ನುವ ಮಾತಿದೆ. ಹುಟ್ಟಿದ ಪ್ರತಿಯೊಬ್ಬ ಮನುಷ್ಯನು ಕಷ್ಟ ಸುಖ ಎರಡನ್ನು ಸಮಭಾಗವಾಗಿ ಸ್ವೀಕರಿಸಬೇಕು. ಆದರೆ ಜ್ಯೋತಿಷ್ಯದ ಪ್ರಕಾರ ಈ ಪ್ರಾಣಿ ಪಕ್ಷಿಗಳು ಮನೆಯೊಳಗೆ ಬಂದರೆ ಸಂಕಷ್ಟ ಕಟ್ಟಿಟ್ಟ ಬುತ್ತಿ. ಹೀಗಾಗಿ ಈ ಕೆಲವು ಪ್ರಾಣಿ ಹಾಗೂ ಪಕ್ಷಿಗಳು ಮನೆಯನ್ನು ಪ್ರವೇಶಿಸಬಾರದು ಎಂದು ಹೇಳುತ್ತಾರೆ. ಆದರೆ ಇದರಿಂದ ಏನೆಲ್ಲಾ ಸಮಸ್ಯೆಗಳು ಉಂಟಾಗುತ್ತದೆ ಎನ್ನುವುದು ಅನೇಕರಿಗೆ ತಿಳಿದಿಲ್ಲ.

    ಏಡಿ : ಏಡಿಯು ಮನೆಯೊಳಗೆ ಪ್ರವೇಶಿಸಿದರೆ ಮನೆಗೆ ಮಾಟ ಮಾಡಿದ್ದಂತೆ ಎನ್ನಲಾಗುತ್ತದೆ. ಇದು ಪ್ರವೇಶಿಸಿದರೆ ಮನೆಯಲ್ಲಿ ಸಂಕಷ್ಟಗಳು ಎದುರಾಗಿ ಮನೆಯೇ ಸರ್ವನಾಶವಾಗುತ್ತದೆ ಎನ್ನಲಾಗುತ್ತದೆ.

    ಕಪ್ಪು ಬೆಕ್ಕು : ಕೆಲವೊಮ್ಮೆ ಬೇರೆಯವರ ಮನೆಯ ಬೆಕ್ಕು ಮನೆಗೆ ಬಂದು ಉಳಿಯುತ್ತವೆ. ಆದರೆ ಕಪ್ಪು ಬೆಕ್ಕು ಮನೆಯನ್ನು ಪ್ರವೇಶಿಸುವುದು ಒಳ್ಳೆಯದಲ್ಲ. ಈ ಬೆಕ್ಕು ಅಪಶಕುನವಂತೆ, ಮನೆಗೆ ಬಂದರೆ ಕೆಟ್ಟದಾಗುತ್ತದೆ ಎನ್ನಲಾಗುತ್ತದೆ.

    ಉಡ : ಅಪರೂಪವಾಗಿ ಕಾಣಸಿಗುವ ಉಡವನ್ನು ನೋಡುವುದೇ, ಅದರ ಬಗ್ಗೆ ಮಾತನಾದುವುದೇ ಕೆಟ್ಟದಂತೆ. ಈ ಪ್ರಾಣಿಯು ಅನಿಷ್ಟವಂತೆ, ಹೀಗಾಗಿ ಮನೆಗೆ ಬರುವುದು ಒಳ್ಳೆಯದಲ್ಲ. ಒಂದು ವೇಳೆ ಅಪ್ಪಿ ತಪ್ಪಿ ಮನೆಯನ್ನು ಪ್ರವೇಶಿಸಿದರೆ ಮನೆಗೆ ಮಾಟ ಮಾಡಿದ್ದಂತೆ. ಇದರಿಂದ ಮನೆಯೇ ನಾಶವಾಗುತ್ತದೆ ಎನ್ನಲಾಗುತ್ತದೆ.

    ಕಾಗೆ : ಕಾಗೆಯು ಮನೆಗೆ ಬಂದರೆ ಶನಿಯು ಮನೆಗೆ ಪ್ರವೇಶಿಸುತ್ತಿದ್ದಾನೆ ಎನ್ನುವುದರ ಸೂಚಕ. ಕಾಗೆಯೂ ಮನೆಯೊಳಗೆ ಬಂದರೆ ಸಂಕಷ್ಟಗಳು ಎದುರಾಗುತ್ತದೆ. ಆರ್ಥಿಕ ಧನನಷ್ಟ ಹಾಗೂ ಆರೋಗ್ಯ ಸಮಸ್ಯೆಯು ಕಾಣಿಸಿಕೊಳ್ಳುತ್ತದೆ ಎನ್ನಲಾಗಿದೆ.

    ಬಾವುಲಿ : ಬಾವಲಿಯು ಮನೆಗೆ ಪ್ರವೇಶಿಸುವುದರಿಂದ ಮನೆಯು ಹಾಳಾಗುತ್ತಿದೆ ಎಂದು ಸೂಚಿಸುತ್ತದೆ. ಇದರಿಂದ ನಕಾರಾತ್ಮಕ ಶಕ್ತಿಗಳು ಮನೆಯಲ್ಲಿ ಉಳಿಯುತ್ತವೆ. ಅಷ್ಟೇ ಅಲ್ಲದೇ, ಮನೆಯಲ್ಲಿ ವಾಸಿಸುವ ಜನರ ಜೀವನದಲ್ಲಿ ಸಮಸ್ಯೆಗಳು ಆರಂಭವಾಗುತ್ತದೆಯಂತೆ.

    ಜೇನುಗೂಡು ಅಥವಾ ಜೇನುಹುಳ: ಮನೆಯೊಳಗೆ ಜೇನುಹುಳಗಳು ಒಂದೆರಡು ಬಂದರೆ ಪರವಾಗಿಲ್ಲ. ಆದರೆ ಜೇನುಹುಳಗಳು ಮನೆಯೊಳಗೆ ಗೂಡು ಕಟ್ಟುವುದು ಒಳ್ಳೆಯದಲ್ಲ. ಇದರಿಂದ ಆ ಮನೆಯಲ್ಲಿ ವಾಸಿಸುತ್ತಿರುವವರಿಗೆ ಸಂಕಷ್ಟ ಎದುರಾಗುತ್ತದೆ.

    ಗೂಬೆ : ಗೂಬೆಯು ಅನಿಷ್ಟ ವಾಗಿದ್ದು ಇದರ ಆಗಮನವು ನಕಾರಾತ್ಮಕ ಶಕ್ತಿಯನ್ನು ಸೃಷ್ಟಿಸುತ್ತದೆ. ಮನೆಗೆ ಗೂಬೆ ಬಂದರೆ ಮನೆಯ ಪ್ರಗತಿಯು ಕುಂಠಿತವಾಗುತ್ತದೆ. ಮನೆಯಲ್ಲಿ ವಾಸಿಸುವ ಸದಸ್ಯರ ನಡುವೆ ವೈಮನಸ್ಸು ಉಂಟಾಗಿ ಮನೆಯೇ ನಾಶವಾಗುವ ಸಾಧ್ಯತೆ ಇರುತ್ತದೆ.

    ರಣಹದ್ದುಗಳು : ರಣ ಹದ್ದುಗಳು ಮನೆಯೊಳಗೆ ಪ್ರವೇಶಿಸಿದರೆ ಯಜಮಾನನಿಗೆ ಸಮಸ್ಯೆಯಾಗುತ್ತದೆ. ಅದಲ್ಲದೇ, ಮನೆಯಲ್ಲಿ ಭಿನ್ನಾಭಿಪ್ರಾಯಗಳು ಮೂಡುತ್ತದೆ ಎನ್ನಲಾಗಿದೆ.

    Continue Reading

    LATEST NEWS

    ರಾಜ್ಯದಲ್ಲಿ ಮೊದಲ ಬಿಎನ್ಎಸ್ ಪ್ರಕರಣ ದಾಖಲು; ಎಲ್ಲಿ ಗೊತ್ತಾ!?

    Published

    on

    ಮಂಗಳೂರು/ ಹಾಸನ : ಬ್ರಿಟಿಷ್​ ವಸಾಹತು ಕಾಲದ ಕ್ರಿಮಿನಲ್‌ ಕಾನೂನುಗಳಿಗೆ ಕೇಂದ್ರ ಸರ್ಕಾರ ತಿದ್ದುಪಡಿ ಮಾಡಿದ್ದು, ಇಂದಿನಿಂದ(ಜು.1) ದೇಶಾದ್ಯಂತ ನೂತನ ಅಪರಾಧ ಕಾಯಿದೆ ಭಾರತೀಯ ನ್ಯಾಯ ಸಂಹಿತೆ ಜಾರಿಗೆ ಬಂದಿದೆ. ಈ ಬೆನ್ನಲ್ಲೇ ಇಂದು ಕರ್ನಾಟಕದಲ್ಲಿ ಮೊದಲ ಬಿಎನ್ಎಸ್ ಪ್ರಕರಣ ದಾಖಲಾಗಿದೆ. ಹಾಸನ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಮೊದಲ ಬಿಎನ್ಎಸ್ ಪ್ರಕರಣ ದಾಖಲಾಗಿದೆ.

    ನೂರಕ್ಕೂ ಹೆಚ್ಚು ವರ್ಷಗಳಿಂದ ಜಾರಿಯಲ್ಲಿದ್ದ ಹಳೆಯ ಕ್ರಿಮಿನಲ್ ಕಾನೂನುಗಳಿಗೆ ಕೇಂದ್ರ ಸರ್ಕಾರ ಬ್ರೇಕ್ ಹಾಕಿದ್ದು, ಐಪಿಸಿ, ಸಿಆರ್​ಪಿಸಿ, ಎವಿಡೆನ್ಸ್ ಆ್ಯಕ್ಟ್ ಬದಲು ಭಾರತೀಯ ನ್ಯಾಯ ಸಂಹಿತೆ, ನಾಗರಿಕ ಸುರಕ್ಷಾ ಸಂಹಿತೆ. ಸಾಕ್ಷ್ಯ ಅಧಿನಿಯಮ ಇಂದಿನಿಂದ(ಜುಲೈ 1) ಜಾರಿಗೆ ಬಂದಿದೆ.

    ವೈದ್ಯ ಶಂಕರೇಗೌಡ ಎಂಬವರು ನೀಡಿದ ದೂರಿನ ಮೇಲೆ ಪೊಲೀಸರು, ಇದನ್ನು ಭಾರತೀಯ ನ್ಯಾಯ ಸಂಹಿತೆ (ಬಿಎನ್​ಎಸ್​) ಸೆಕ್ಷನ್ 281, 106 ಅಡಿ ದೂರು ದಾಖಲಿಸಿದ್ದಾರೆ.

    ಏನಿದು ಪ್ರಕರಣ?

    ಕಾಶಿ ಯಾತ್ರೆ ಮುಗಿಸಿ ವಾಪಾಸ್ ಆಗಿದ್ದ ದೂರುದಾರ ಶಂಕರೇಗೌಡ ಅವರ ಅತ್ತೆ ಇಂದುಮತಿ(67) ಮತ್ತು ಮಾವ ಯೋಗೇಶ್ ಅವರನ್ನು 01/07/2024 ರಂದು ಕಾರು ಚಾಲಕ ಸಾಗರ್ ಎಂಬಾತ ಬೆಂಗಳೂರು ಕೆಐಎಎಲ್ ಏರ್ಪೋರ್ಟ್ ನಿಂದ ಪಿಕಪ್ ಮಾಡಿದ್ದ. ಆದ್ರೆ, ಕಾರು ಹಾಸನದ ಹಳೆಬೀಡು ರಸ್ತೆ ಸೀಗೆಗೇಟ್ ಸಮೀಪದ ಸೇತುವೆಯಿಂದ ಪಲ್ಟಿಯಾಗಿತ್ತು. ಈ ಘಟನೆಯಲ್ಲಿ ಇಂದುಮತಿ ಇಹಲೋಕ ತ್ಯಜಿಸಿದ್ದರು. ಇನ್ನು ಇಂದುಮತಿ ಪತಿ ಯೋಗೇಶ್​ ಪಾರಾಗಿದ್ದರು.

    ಇದನ್ನೂ ಓದಿ : WATCH VIDEO : ಅಂ*ತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪತ್ತೆ!

    ಈ ಹಿನ್ನೆಲೆಯಲ್ಲಿ ಇದೀಗ ಇಂದು (ಜುಲೈ 1) ಮೃ*ತ ಇಂದುಮತಿ ಅವರ ಅಳಿಯ ಶಂಕರೇಗೌಡ ಅವರು ಕಾರು ಚಾಲಕ ಸಾಗರ್​ ವಿರುದ್ಧ ಅತಿ ವೇಗ ಹಾಗೂ ನಿರ್ಲಕ್ಷ್ಯತನದಿಂದ ವಾಹನ ಚಾಲನೆ ಮಾಡಿದ್ದಾನೆ ಎಂದು ದೂರು ದಾಖಲಿಸಿದ್ದಾರೆ. ಈ ದೂರಿ ಮೇರೆಗೆ ಹಾಸನ ಗ್ರಾಮೀಣ ಪೊಲೀಸರು, BNS 281,106 ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಮೂಲಕ ಕರ್ನಾಟಕದಲ್ಲಿ ಬಿಎನ್ಎಸ್ ಅಡಿ ಮೊದಲ ಪ್ರಕರಣ ಹಾಸನದಲ್ಲಿ ದಾಖಲಾದಂತಾಗಿದೆ.

    Continue Reading

    DAKSHINA KANNADA

    ಮಂಗಳೂರು: ವಿಮಾನ ನಿಲ್ದಾಣದ ರನ್ ವೇಯಿಂದ ಮನೆಗಳಿಗೆ ನುಗ್ಗುತ್ತಿದೆ ನೀರು…!

    Published

    on

    ವಿಮಾನ ನಿಲ್ದಾಣ ಮುಖ್ಯದ್ವಾರ ಬಂದ್ ಮಾಡಿ ಸ್ಥಳೀಯರ ಪ್ರತಿಭಟನೆ

    ಮಂಗಳೂರು: ಭಾರೀ ಮಳೆಯಿಂದಾಗಿ ವಿಮಾನ ನಿಲ್ದಾಣದ ರನ್ ವೇಯಿಂದ ಹರಿದು ಬಂದ ನೀರು ಏಳು ಮನೆಗಳಿಗೆ ಹಾನಿ ಉಂಟು ಮಾಡಿದ ಹಿನ್ನೆಲೆಯಲ್ಲಿ ಕರಂಬಾರ ಸ್ಥಳೀಯರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರವೇಶ ದ್ವಾರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

    ವಿಮಾನ ನಿಲ್ದಾಣದಿಂದ ಮಳೆ ನೀರು ಹರಿದು ಹೋಗಲು ಏರ್ಪೋರ್ಟ್ ಆಡಳಿತ ಸರಿಯಾದ ವ್ಯವಸ್ಥೆ ಕಲ್ಪಿಸಿಲ್ಲ. ಹೀಗಾಗಿ ಕೆಂಜಾರು ಹಾಗೂ ಏರ್ಪೋರ್ಟ್ ಸುತ್ತಮುತ್ತಲಿನ ಹಲವು ಮನೆಗಳಿಗೆ ನೆರೆ ಭೀತಿ ಸೃಷ್ಟಿಯಾಗಿದೆ. ಸೂಕ್ತ ವ್ಯವಸ್ಥೆ ಕಲ್ಪಿಸದೆ ಮಳೆ ನೀರನ್ನು ಅವೈಜ್ಞಾನಿಕವಾಗಿ ಹೊರ ಬಿಡಲಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

    ಟೇಬಲ್ ಟಾಪ್ ಏರ್ಪೋರ್ಟ್ ಆಗಿರುವ ಕಾರಣ ಕೆಲ ಭಾಗದ ಜನ ವಸತಿ ಪ್ರದೇಶಗಳಿಗೆ ನೀರು ನುಗ್ಗುವ ಭೀತಿ ಉಂಟಾಗಿದೆ. ಈ ಮಧ್ಯೆ, ರಸ್ತೆ ತಡೆ ನಡೆಸಿದ ಕಾರಣ ಬಜ್ಪೆ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಘಟನಾ ಸ್ಥಳದಲ್ಲಿ ಸಿಐಎಸ್ಎಫ್ ಸಿಬ್ಬಂದಿ ಮೊಕ್ಕಾಂ ಹೂಡಿದ್ದಾರೆ.

    ಸದ್ಯ ಗ್ರಾಮಸ್ಥರನ್ನು ಮನವೊಲಿಸಿ ರಸ್ತೆ ತೆರವು ಮಾಡಲಾಗಿದೆ. ಪ್ರತಿಭಟನಾನಿರತರು ಜಿಲ್ಲಾಧಿಕಾರಿ ಸ್ಥಳಕ್ಕೆ ಬರಲು ಒಂದು ಗಂಟೆಯ ಗಡುವು ನೀಡಿದ್ದಾರೆ. ಸ್ಥಳಕ್ಕೆ ಮಂಗಳೂರು ಉತ್ತರ ವಿಭಾಗದ ಎಸಿಪಿ ಮನೋಜ್ ನಾಯಕ್, ಮಂಗಳೂರು ತಹಶೀಲ್ದಾರ್ ಪ್ರಶಾಂತ್ ಪಾಟೀಲ್, ಮಂಗಳೂರು ಉತ್ತರ ಶಾಸಕ ಡಾ. ವೈ ಭರತ್ ಶೆಟ್ಟಿ ಭೇಟಿ ನೀಡಿದ್ದಾರೆ. ಏರ್ಪೋರ್ಟ್ ಆಡಳಿತ ಅಧಿಕಾರಿಗಳು, ಸ್ಥಳೀಯರ ಜೊತೆ ಶಾಸಕ ಭರತ್ ಶೆಟ್ಟಿ ಚರ್ಚೆ ನಡೆಸಿದ್ದಾರೆ.

    Continue Reading

    LATEST NEWS

    Trending