Connect with us

    BANTWAL

    ಬಂಟ್ವಾಳ ಕಲ್ಲಡ್ಕದಲ್ಲಿ ಬೈಕ್ – ಬಿಜೆಪಿ ರ‍್ಯಾಲಿಯ ಪ್ರಚಾರದ ವಾಹನದ ನಡುವೆ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು..!!

    Published

    on

    ಬಂಟ್ವಾಳ ಶಾಸಕರ ನೇತ್ರತ್ವದ ಬಿಜೆಪಿ ಪ್ರಚಾರದ ವಾಹನ ಮತ್ತು ಬೈಕ್ ನಡುವೆ ಭೀಕರ ಅಪಘಾತ ಕಲ್ಲಡ್ಕದ ನರಹರಿ ಸಮೀಪ ನಡೆದಿದೆ.

    ಬಂಟ್ವಾಳ: ಬಂಟ್ವಾಳ ಶಾಸಕರ ನೇತ್ರತ್ವದ ಬಿಜೆಪಿ ಪ್ರಚಾರದ ವಾಹನ ಮತ್ತು ಬೈಕ್ ನಡುವೆ ಭೀಕರ ಅಪಘಾತ ಕಲ್ಲಡ್ಕದ ನರಹರಿ ಸಮೀಪ ನಡೆದಿದೆ.

    ಬೈಕ್ ಮತ್ತು ಬಿಜೆಪಿ ರ‍್ಯಾಲಿಯ ಪ್ರಚಾರದ ವಾಹನದ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ.

    ಮೃತ ಬೈಕ್ ಸವಾರನನ್ನು ಗುರುವಾಯನಕೆರೆ ಮೂಲದ ತರಕಾರಿ ನಾರಾಯಣ ಎಂಬವರ ಪುತ್ರ ವಿಜಿತ್ (35) ಎಂದು ಗುರುತಿಸಲಾಗಿದೆ.

    ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಹಲವಾರು ಮಂದಿ ಸ್ಥಳದಲ್ಲಿ ಜಮಾಯಿಸಿದ್ದು, ಕೆಲಕಾಲ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಪೋಲಿಸರು ಸ್ಥಳಕ್ಕೆ ತೆರಳಿ ಪರಿಸ್ಥಿತಿಯನ್ನು ನಿಭಾಯಿದ್ದಾರೆ.

    BANTWAL

    ಬಂಟ್ವಾಳ: ತಂಡದಿಂದ ಇಬ್ಬರು ಯುವಕರಿಗೆ ಮಾರಕಾಸ್ತ್ರಗಳಿಂದ ಹಲ್ಲೆ

    Published

    on

    ಬಂಟ್ವಾಳ: ತಂಡವೊಂದು ಇಬ್ಬರು ಯುವಕರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಗಾಯಗೊಳಿಸಿದ ಘಟನೆ ಪುದು ಗ್ರಾಮದ ಅಮ್ಮೆಮಾರ್ ಎಂಬಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.

    ಪ್ರಕರಣದಲ್ಲಿ ತಸ್ಲೀಮ್ ಹಾಗೂ ಮಹಮ್ಮದ್ ಶಾಕಿರ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಪೂರ್ವ ದ್ಚೇಷದ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿದೆ ಎನ್ನಲಾಗಿದ್ದು, ಸ್ಥಳೀಯ ನಿವಾಸಿಗಳಾದ ಮನ್ಸೂರ್, ಪಲ್ಟಿ ಇಮ್ರಾನ್, ಮುಸ್ತಾಕ್ ಯಾನೆ ಮಿಚ್ಚ, ಶರ್ಫುದ್ದೀನ್, ಅಶ್ರಫ್, ರಿಝ್ವಾನ್, ಸಫ್ವಾನ್, ಅದ್ನಾನ್, ನಿಸಾಕ್, ಯಾಸಿರ್, ಸುಹೈಲ್, ಜಾಹೀದ್, ಸಾದಿಕ್, ಲತೀಫ್ ಎಂಬವರು ಹಲ್ಲೆ ಆರೋಪಿಗಳೆಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.

    ಆರೋಪಿಗಳು ತಸ್ಲೀಮ್ ಗೆ ಫೋನ್ ಕರೆ ಮಾಡಿ ಅವಾಚ್ಯವಾಗಿ ನಿಂದಿಸಿ ಅಮ್ಮೆಮಾರ್ ಶಾಲೆ ಬಳಿ ಬರುವಂತೆ ಸವಾಲು ಹಾಕಿದ್ದರೆನ್ನಲಾಗಿದೆ. ಅದರಂತೆ ತಸ್ಲೀಮ್ ಅಲ್ಲಿಗೆ ಶಾಕಿರ್ ಜೊತೆ ತೆರಳಿದಾಗ ದುಷ್ಕರ್ಮಿಗಳು ಮಾರಕಾಯುಧಗಳಿಂದ ದಾಳಿ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Continue Reading

    BANTWAL

    ಬಂಟ್ವಾಳ: ಕಾಮಗಾರಿ ಯಂತ್ರ ಡಿ*ಕ್ಕಿ;ಪಾದಚಾರಿಗೆ ಗಾ*ಯ

    Published

    on

    ಬಂಟ್ವಾಳ: ಬಿ.ಸಿ.ರೋಡು – ಅಡ್ಡಹೊಳೆ ಹೆದ್ದಾರಿ ಕಾಮಗಾರಿ ನಿರ್ವಹಿಸುವ ಗುತ್ತಿಗೆ ಸಂಸ್ಥೆಯ ಯಂತ್ರವೊಂದು ಡಿ*ಕ್ಕಿಯಾಗಿ ಪಾದಚಾರಿ ಗಾಯಗೊಂಡ ಘಟನೆ ಅ. 21ರಂದು ಮೆಲ್ಕಾರಿನ ಬೋಳಂಗಡಿಯಲ್ಲಿ ನಡೆದಿದೆ.

    ಬೋಳಂಗಡಿ ನಿವಾಸಿ ಪದ್ಮನಾಭ ಶೆಣೈ ಗಾ*ಯಾಳು ಎಂದು ಗುರುತಿಸಲಾಗಿದೆ.

    ಕಾಲಿಗೆ ಗಂ*ಭೀರ ಸ್ವರೂಪದ ಗಾ*ಯವಾಗಿರುವ ಗಾ*ಯಾಳನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

     

    ಇದನ್ನೂ ಓದಿ: ಬಂಟ್ವಾಳ : ರೈಲ್ವೇ ಹಳಿ ಬದಿ ರುಂ*ಡ – ಮುಂ*ಡ ಬೇರ್ಪಟ್ಟ ಸ್ಥಿತಿಯಲ್ಲಿ ಮೃ*ತದೇಹ ಪ*ತ್ತೆ

     

    ಚಾಲಕ ರಾಜಕುಮಾರ ಯಾದವ್‌ ಯಂತ್ರವನ್ನು ಏಕಾಏಕಿ ಹಿಮ್ಮುಖವಾಗಿ ಚಲಾಯಿಸಿದ ಪರಿಣಾಮ ಪದ್ಮನಾಭರಿಗೆ ಡಿ*ಕ್ಕಿ ಹೊಡೆದಿದೆ.

    ಘಟನೆ ಕುರಿತು ಗಾಯಾಳಿನ ಸಂಬಂಧಿ ಗುರುಪ್ರಸಾದ್‌ ನೀಡಿದ ದೂರಿನಂತೆ ಬಂಟ್ವಾಳ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Continue Reading

    BANTWAL

    ಬಂಟ್ವಾಳ: ಜಯರಾಮ ಆಚಾರ್ಯರ ಅಂತಿಮ ದರ್ಶನ

    Published

    on

    ಬಂಟ್ವಾಳ:  ಹೃದಯಾಘಾತದಿಂದ ಇಹಲೋಕ ತ್ಯಜಿಸಿದ ಯಕ್ಷಗಾನದ ಖ್ಯಾತ ಹಿರಿಯ ಹಾಸ್ಯ ಕಲಾವಿದ ಜಯರಾಮ ಆಚಾರ್ಯ ಅವರ ಪಾರ್ಥಿವ ಶರೀರ ಬಂಟ್ವಾಳದ ನಿವಾಸಕ್ಕೆ ತರಲಾಗಿದೆ.

    ಅಕ್ಟೋಬರ್ 21 ರಿಂದ ಬೆಂಗಳೂರಿನಲ್ಲಿ ನಡೆಯಲಿದ್ದ ಯಕ್ಷಗಾನ ಕಾರ್ಯಕ್ರಮಕ್ಕೆ ಬೆಂಗಳೂರಿಗೆ ತೆರಳಿದ್ದ ಅವರಿಗೆ ಹೃದಯಾಘಾತವಾಗಿತ್ತು.

    67 ವರ್ಷದ ಜಯರಾಮ ಆಚಾರ್ಯ ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದರಾಗಿ ವಿವಿಧ ಮೇಳಗಳಲ್ಲೂ ಸೇವೆ ಸಲ್ಲಿಸಿದ್ದರು. ಅವರ ಪಾರ್ಥಿವ ಶರೀರ ಬಂಟ್ವಾಳ ನಿವಾಸಕ್ಕೆ ಆಗಮಿಸಿದ ವೇಳೆ ನೂರಾರು ಅಭಿಮಾನಿಗಳು ಆಗಮಿಸಿ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ.

    ಯಕ್ಷಗಾನ ಕಲಾವಿದರು, ಯಕ್ಷಗಾನ ಅಭಿಮಾನಿಗಳು ಹಾಗೂ ಊರ ಗಣ್ಯರು ಆಗಮಿಸಿ ಮೃತರಿಗೆ ಸಂತಾಪ ಸೂಚಿಸಿ ಕುಟುಂಬಸ್ಥರಿಗೆ ಸಾಂತ್ವಾನ ತಿಳಿಸಿದ್ದಾರೆ. ನಮ್ಮಕುಡ್ಲ ವಾಹಿನಿ ಯಕ್ಷ ತೆಲಿಕೆ ತಂಡದ ದಿನೇಶ್ ಕೊಡಪದವು ತಂಡ ಕೂಡಾ ಜಯರಾಮ ಆಚಾರ್ಯ ಅವರ ನಿವಾಸಕ್ಕೆ ತೆರಳಿ ಅಂತಿಮ ದರ್ಶನ ಪಡದುಕೊಂಡಿದ್ದಾರೆ. ಒಬ್ಬ ಮೇರು ಮಟ್ಟದ ಯಕ್ಷಗಾನದ ಕಲಾವಿದನನ್ನು ಕಳೆದುಕೊಂಡಿರುವುದಕ್ಕೆ ದಿನೇಶ್ ಕೊಡಪದವು ಅವರು ಸಂತಾಪ ಸೂಚಿಸಿದ್ದಾರೆ

    Continue Reading

    LATEST NEWS

    Trending