LATEST NEWS
ಉಡುಪಿ ಕಿನ್ನಿಮೂಲ್ಕಿಯಲ್ಲಿ ಗುಜರಿ ದಾಸ್ತಾನು ಅಂಗಡಿಗಯಲ್ಲಿ ಬೆಂಕಿ ಆಕಸ್ಮಿಕ..!
ಗುಜರಿ ಅಂಗಡಿಯಲ್ಲಿ ದಾಸ್ತಾನು ಇರಿಸಿದ್ದ ಪ್ಲಾಸ್ಟಿಕ್ ಮತ್ತು ಇನ್ನಿತರ ಗುಜರಿ ವಸ್ತುಗಳಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ.
ಉಡುಪಿ : ಗುಜರಿ ಅಂಗಡಿಯಲ್ಲಿ ದಾಸ್ತಾನು ಇರಿಸಿದ್ದ ಪ್ಲಾಸ್ಟಿಕ್ ಮತ್ತು ಇನ್ನಿತರ ಗುಜರಿ ವಸ್ತುಗಳಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ.
ಇಲ್ಲಿನ ಕಿನ್ನಿ ಮುಲ್ಕಿ ಗೋಪುರ ಸಮೀಪದಲ್ಲಿರುವ ಗುಜರಿ ಅಂಗಡಿಯಲ್ಲಿ ತಡರಾತ್ರಿ ಈ ಬೆಂಕಿ ಅವಘಡ ಸಂಭವಿಸಿದೆ.
ಬೆಂಕಿಯ ಜ್ವಾಲೆ ನೋಡಿದ ಸ್ಥಳೀಯ ಮನೆಯವರು ಅಗ್ನಿಶಾಮದಳಕ್ಕೆ ಮಾಹಿತಿ ನೀಡಿದ್ದಾರೆ.ಕೂಡಲೇ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮದಳದ ಸಿಬ್ಬಂದಿಗಳು ಹರಸಾಹಸ ಪಟ್ಟು ಬೆಂಕಿ ನಂದಿಸಿದ್ದಾರೆ.
ಆಕಸ್ಮಿಕ ಅಗ್ನಿ ಅವಘಡದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ನಷ್ಟ ಸಂಭವಿಸಿದೆ ಎಂದು ತಿಳಿದು ಬಂದಿದೆ,
DAKSHINA KANNADA
ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ
ಬೆಂಗಳೂರು: ರಾಜ್ಯದ 14 ಲೋಕಸಭಾ ಕ್ಷೇತ್ರಗಳ ಮೊದಲನೇ ಹಂತದ ಮತದಾನ ಇಂದು ಬೆಳಗ್ಗೆ 7 ಗಂಟೆಯಿಂದಲೇ ಆರಂಭಗೊಂಡಿದೆ.
ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇದಾಗಿದ್ದು, ಕರ್ನಾಟಕದಲ್ಲಿ ಇಂದು ಮೊದಲ ಹಂತದ ಮತದಾನವಾಗಿದೆ. ಮತದಾರರು ತಮ್ಮ ತಮ್ಮ ಮತ ಕ್ಷೇತ್ರಗಳಲ್ಲಿ ಬೆಳಿಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಶಾಂತಿಯುತವಾಗಿ ಮತದಾನ ಮಾಡುತ್ತಿದ್ದಾರೆ.
ಅದರಂತೆ ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಸೆಂಟ್ರಲ್, ಬೆಂಗಳೂರು ಗ್ರಾಮಾಂತರ, ಮೈಸೂರು-ಕೊಡಗು, ಚಾಮರಾಜನಗರ, ಮಂಡ್ಯ, ತುಮಕೂರು, ಕೋಲಾರ, ಹಾಸನ, ಉಡುಪಿ-ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಚಿತ್ರದುರ್ಗ ಕ್ಷೇತ್ರಗಳಲ್ಲಿ ಬೆಳಿಗ್ಗೆಯಿಂದಲೇ ಮತದಾನ ಆರಂಭವಾಗಿದ್ದು ಸಂಜೆ 6 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ.
DAKSHINA KANNADA
ನರ್ಸ್ಗೆ ಶಾಕ್ ನೀಡಿದ ಅಂಬ್ಯುಲೆನ್ಸ್..! ಇದು ಮನಕಲಕುವ ಘಟನೆ..!
ನಿರಂಜಿನಿ… ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೆವಿಜಿ ಮೆಡಿಕಲ್ ಕಾಲೇಜಿನಲ್ಲಿರೋ ಆಸ್ಪತ್ರೆಯ ತುರ್ತು ಸೇವಾ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಯುವತಿ. ಮುಂಜಾನೆ ಆಸ್ಪತ್ರೆಗೆ ಬಂದ್ರೆ ಡ್ಯೂಟಿ ಮುಗಿಸಿ ಮತ್ತೆ ಮನೆಗೆ ವಾಪಾಸಾಗೋದು ಸಂಜೆಯ ವೇಳೆಗೆ. ಆಸ್ಪತ್ರೆಯಲ್ಲಿರೋ ಆಕೆಗೆ ಸಾವು ನೋವು ಎಲ್ಲವನ್ನೂ ನೋಡಿ ಅಭ್ಯಾಸ ಆಗಿದೆ. ಆದ್ರೆ ಇಂದು ಮಾತ್ರ ಅಂಬ್ಯುಲೆನ್ಸ್ನಲ್ಲಿ ಬಂದಿರೋ ಮೃತ ದೇಹ ನೋಡಿ ಆಕೆಯ ಆಕ್ರಂದನ ಮುಗಿಲು ಮುಟ್ಟಿದೆ. ಆಕೆಯ ಆಕ್ರಂದನ ನೋಡಿ ಶಾಕ್ ಆದ ಇತರ ಸಿಬ್ಬಂದಿ ವಿಚಾರ ತಿಳಿದ ಬಳಿಕ ತಾವೂ ಕಂಬನಿ ಮಿಡಿದಿದ್ದಾರೆ.
ಇಂದು ನಿರಂಜಿನಿ ಆಸ್ಪತ್ರೆಗೆ ಬಂದು ತುರ್ತು ಚಿಕಿತ್ಸಾ ವಿಭಾಗದಲ್ಲಿ ಡ್ಯೂಟಿಯಲ್ಲಿದ್ದ ವೇಳೆ ಅಂಬ್ಯುಲೆನ್ಸ್ ಒಂದು ವೇಗವಾಗಿ ಬಂದು ಗಂಭೀರವಾಗಿದ್ದ ಇಬ್ಬರನ್ನು ತುರ್ತು ಚಿಕಿತ್ಸಾ ವಿಭಾಗಕ್ಕೆ ಶಿಫ್ಟ್ ಮಾಡಿದೆ. ದೇಹ ಜರ್ಜರಿತವಾಗಿದ್ದ ಒಂದು ದೇಹವನ್ನು ಅಂಬ್ಯುಲೆನ್ಸ್ನಿಂದ ಇಳಿಸಿದಾಗ ಅದಾಗಲೇ ಆ ವ್ಯಕ್ತಿಯ ಪ್ರಾಣ ಪಕ್ಷಿ ಹಾರಿ ಹೋಗಿತ್ತು. ಮತ್ತೊಂದು ಮಹಿಳೆಯೂ ಗಂಭೀರವಾಗಿದ್ದು ತಕ್ಷಣ ಅವರನ್ನು ತುರ್ತು ಚಿಕಿತ್ಸೆಗೆ ದಾಖಲಿಸಲಾಗಿತ್ತು. ಈ ವೇಳೆ ಮೃತ ದೇಹವನ್ನು ನೋಡಿದ ನಿರಂಜನಿ ಇದ್ದಕ್ಕಿದ್ದಂತೆ ಜೋರಾಗಿ ಅಳಲು ಆರಂಭಿಸಿದ್ದಾಳೆ. ಆಕೆಯ ಅಳುವಿಗೆ ಕಾರಣವಾಗಿದ್ದು ಅಲ್ಲಿದ್ದ ಮೃತ ದೇಹ ಆಕೆಯ ತಂದೆಯದೇ ಆಗಿದ್ದು.
ಮುಂಜಾನೆ ತಂದೆ ತಾಯಿ ಇಬ್ಬರೂ ಅಜ್ಜಾವರ ಗ್ರಾಮದಲ್ಲಿನ ಕೆಎಫ್ಡಿಸಿಗೆ ಕೆಲಸಕ್ಕೆ ಹೋಗಿ ವಾಪಾಸಾಗುವಾಗ ಜೀಪ್ ಒಂದು ಇವರ ಬೈಕ್ಗೆ ಡಿಕ್ಕಿ ಹೊಡೆದಿದೆ. ಜೀಪ್ ಅಡಿಗೆ ಬಿದ್ದಿದ್ದ ತಂದೆ ವಿನಾಯಕ ಮೂರ್ತಿ ಮೃ*ತ ಪಟ್ಟಿದ್ದರೆ, ತಾಯಿ ಮಂಜುಳ ಕೂಡಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಆದ್ರೆ ಇದ್ಯಾವುದು ವಿಚಾರ ಗೊತ್ತಿಲ್ಲದ ನಿರಂಜಿನಿ ಎಂದಿನಂತೆ ಇದೂ ಒಂದು ಅಕ್ಸಿಡೆಂಟ್ ಕೇಸ್ ಅಂತ ಅಟೆಂಡ್ ಮಾಡಲು ಹೋಗಿದ್ದಾಳೆ. ಅಂಬ್ಯುಲೆನ್ಸ್ನಲ್ಲಿ ತಂದೆಯ ಮೃತ ದೇಹ ಹಾಗೂ ಪ್ರಜ್ಞಾ ಹೀನ ಸ್ಥಿತಿಯಲ್ಲಿ ತಾಯಿಯನ್ನ ನೋಡಿದ್ರೆ ಮಗಳ ಪರಿಸ್ಥಿತಿ ಹೇಗಿರಬಹುದು ಅನ್ನೋದು ಊಹಿಸಲೂ ಅಸಾದ್ಯ. ತಾಯಿ ಮಂಜುಳ ಪರಿಸ್ಥಿತಿ ಕೂಡಾ ಗಂಭೀರವಾಗಿದ್ದು, ಬೆನ್ನು ಮೂಳೆಗೆ ಗಾಯವಾದ ಮಾಹಿತಿ ಇದೆ. ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
LATEST NEWS
ಹೋಟೆಲ್ನಲ್ಲಿ ಅ*ಗ್ನಿ ದುರಂತ; 6 ಮಂದಿ ಸಜೀವ ದ*ಹನ
ಪಾಟ್ನಾ: ಹೋಟೆಲ್ವೊಂದರಲ್ಲಿ ಆಕಸ್ಮಿಕವಾಗಿ ಬೆಂ*ಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ 6 ಜನರು ಸಜೀವವಾಗಿ ದಹನಗೊಂಡು ಸಾ*ವನ್ನಪ್ಪಿದ್ದು ಹಲವು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಬಿಹಾರದ ಪಾಟ್ನಾದ ರೈಲ್ವೆ ನಿಲ್ದಾಣದ ಬಳಿ ನಡೆದಿದೆ.
ರೈಲು ನಿಲ್ದಾಣದ ಸಮೀಪದ ಹೋಟೆಲ್ನಲ್ಲಿ ಬೆಂ*ಕಿ ಹೊತ್ತಿಕೊಂಡ ಪರಿಣಾಮ ಸ್ಥಳದಲ್ಲೇ 6 ಜನರು ಮೃ*ತಪಟ್ಟಿದ್ದಾರೆ. ಅಗ್ನಿಶಾಮಕ ದಳದ ಅಧಿಕಾರಿಗಳು ಮತ್ತು ಪೊಲೀಸರು ತಕ್ಷಣ ಸ್ಥಳಕ್ಕೆ ಆಗಮಿಸಿ ಹೋಟೆಲ್ ಒಳಗಿದ್ದ ಹಲವರನ್ನು ರಕ್ಷಣೆ ಮಾಡಿದ್ದಾರೆ. ಇದರಲ್ಲಿ ಗಂಭೀರವಾಗಿ ಗಾಯಗೊಂಡ ಕೆಲವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿಸಿದ್ದಾರೆ. ಬೆಂ*ಕಿಯಿಂದಾಗಿ ಹೋಟೆಲ್ನಲ್ಲಿನ ಎಲ್ಲ ವಸ್ತುಗಳೆಲ್ಲ ಸಂಪೂರ್ಣವಾಗಿ ಸುಟ್ಟು ಹೋಗಿವೆ ಎಂದು ತಿಳಿದು ಬಂದಿದೆ.
ಇನ್ನು ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಅ*ಗ್ನಿ ಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಮಾಹಿತಿ ಪ್ರಕಾರ ಹೋಟೆಲ್ನಲ್ಲಿನ ಸುಮಾರು 45 ಜನರನ್ನು ಪೊಲೀಸರು ಹಾಗೂ ಅಗ್ನಿ ಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಬೆಂಕಿಯಿಂದಾಗಿ ಸುಟ್ಟಗಾಯಗಳಿಂದ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ಹೇಳಿದ್ದಾರೆ ಎನ್ನಲಾಗಿದೆ.
ಹೋಟೆಲ್ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಬೆಂ*ಕಿ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಆದ್ರೆ ಈ ಬಗ್ಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಅಲ್ಲದೇ ಹೋಟೆಲ್ನಲ್ಲಿ ಸುರಕ್ಷತಾ ಮಾನದಂಡಗಳನ್ನು ಸರಿಯಾಗಿ ಅನುಸರಿಸದ ಕಾರಣ 6 ಜನರ ಸಾ*ವಿಗೆ ಕಾರಣವಾಗಿದೆ. ಸದ್ಯ ಈ ಘಟನೆ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.