Connect with us

    LATEST NEWS

    ಕಾಲೇಜುಗಳಿಗೆ ಬಾಂಬ್ ಬೆದರಿಕೆ ಕಳುಹಿಸುತ್ತಿದ್ದ ಆರೋಪಿ ಅರೆಸ್ಟ್

    Published

    on

    ಬೆಂಗಳೂರು: ಕೆಲವು ದಿನಗಳ ಹಿಂದೆ ಮೂರು ಇಂಜಿನಿಯರಿಂಗ್ ಕಾಲೇಜುಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಆರೋಪಿಯೊಬ್ಬನನ್ನು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ.

    ಆರೋಪಿಯನ್ನು ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಮೂಲದ ದೀಪಾಂಜನ್ ಮಿತ್ರಾ (48) ಎಂದು ಗುರ್ತಿಸಲಾಗಿದೆ. ಅ.4ರಂದು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಹೈಡ್ರೋಜನ್ ಆಧಾರಿತ ಸುಧಾರಿಕ ಸ್ಫೋಟಕ ಸಾಧನ (ಐಇಡಿ) ಇರಿಸಿರುವುದಾಗಿ ಬೆದರಿಕೆ ಇ-ಮೇಲ್ ಬಂದಿತ್ತು. ಈ ಸಂಬಂಧ ವಿಶ್ವೇಶ್ವರಪುರ ಮತ್ತು ಹನುಮಂತನಗರ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.

    ತಾಂತ್ರಿಕ ತನಿಖೆಗಳು ಮತ್ತು ಇ-ಮೇಲ್‌ಗಳ ಐಪಿ ವಿಳಾಸದ ಆಧಾರದ ಮೇಲೆ ಆರೋಪಿಯನ್ನು ಡಾರ್ಜಿಲಿಂಗ್‌ನಲ್ಲಿ ಪತ್ತೆ ಹಚ್ಚಲಾಗಿದ್ದು, ಈತನ ವಿರುದ್ಧ ಪಶ್ಚಿಮ ಬಂಗಾಳದಲ್ಲಿ ಇದೇ ರೀತಿಯ 10 ಪ್ರಕರಣಗಳು ದಾಖಲಾಗಿವೆ ಎಂದು ತಿಳಿದುಬಂದಿದೆ.

    ಆರೋಪಿ ಬಿಕಾಂ ಪದವೀಧರನಾಗಿದ್ದು, ಈಹಿಂದೆ ನಗರದ ವಿವಿಧ ಶಾಲಾ-ಕಾಲೇಜುಗಳಿಗೆ ಬಾಂಬ ಬೆದರಿಕೆ ಇ-ಮೇಲ್ ಸಂದೇಶ ಕಳುಹಿಸಿರುವ ಸಂಬಂಧ ವಿವಿಧ ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ. ಈ ಪ್ರಕರಣಗಳಲ್ಲಿ ಆರೋಪಿಯ ಪಾತ್ರವಿರುವ ಸಾಧ್ಯತೆಯಿದೆ. ಹೆಚ್ಚಿನ ವಿಚಾರಣೆ ಬಳಿಕ ಮತ್ತಷ್ಟು ಮಾಹಿತಿ ಲಭ್ಯವಾಗಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

    LATEST NEWS

    ಕುಟುಂಬಸ್ಥರ ಅನುಮತಿಯೊಂದಿಗೆ ಅದ್ದೂರಿ ವಿವಾಹ: ಮಂಗಳಮುಖಿಯೊಂದಿಗೆ ಯುವಕನ ನವ ದಾಂಪತ್ಯ

    Published

    on

    ಮಂಗಳೂರು/ತೆಲಂಗಾಣ: ಯುವಕನೊಬ್ಬ ಕುಟುಂಬಸ್ಥರ ಸಮ್ಮುಖದಲ್ಲಿ ತಾನು ಪ್ರೀತಿಸಿದ ತೃತೀಯಲಿಂಗಿಯೊಂದಿಗೆ ಅದ್ದೂರಿಯಾಗಿ ವಿವಾಹವಾಗಿದ್ದಾನೆ. ಈ ಕುರಿತ ಸುದ್ಧಿ ಸೋಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗುತ್ತಿದ್ದು, ನವ ಜೋಡಿಗೆ ನೆಟ್ಟಿಗರು ಶುಭ ಹಾರೈಸಿದ್ದಾರೆ.


    ಪ್ರೀತಿ ಯಾವಾಗ ಯಾರ ಮೇಲೆ ಹುಟ್ಟುತ್ತೆ ಅಂತ ಹೇಳೋಕೆ ಸಾಧ್ಯವಿಲ್ಲ. ಇದೇ ಕಾರಣಕ್ಕೆ ಪ್ರೀತಿ ಕುರುಡು ಅಂತ ಹೇಳ್ತಾರೆ. ಪ್ರೀತಿಸುವ ಜೀವಗಳೂ ಅಷ್ಟೇ ಜಾತಿ, ವಯಸ್ಸು, ಅಂತಸ್ತು ಇದ್ಯಾವುದನ್ನೂ ಲೆಕ್ಕಿಸದೆ, ಸಮಾಜದ ಕೊಂಕು ಮಾತುಗಳಿಗೆ ತಲೆ ಕೆಡಿಸಿಕೊಳ್ಳದೆ ತಾವು ಪ್ರೀತಿಸಿದ ಜೀವದ ಜೊತೆ ಜೀವನಪರ್ಯಂತ ಬಾಳಬೇಕು ಎಂದು ಬಯಸುತ್ತಾರೆ.

    ಅಂತರ್ಜಾತಿಯರನ್ನು ಪ್ರೀತಿಸಿದರೆ ಅಥವಾ ಮದುವೆಯಾದರೆ ಈ ಸಮಾಜ ನೂರೆಂಟು ಕೊಂಕು ಮಾತುಗಳನ್ನಾಡುತ್ತದೆ. ಅಂತದ್ರಲ್ಲಿ ಇಲ್ಲೊಬ್ಬ ಯುವಕ ಸಮಾಜದ ಕಟ್ಟುಪಾಡು, ಕೊಂಕು ಮಾತುಗಳಿಗೆ ತಲೆಕೆಡಿಸಿಕೊಳ್ಳದೆ, ಎಲ್ಲಾ ಅಡೆತಡೆಗಳನ್ನು ಮೆಟ್ಟಿನಿಂತು ಕುಟುಂಬಸ್ಥರ ಸಮ್ಮುಖದಲ್ಲಿಯೇ ಅದ್ಧೂರಿಯಾಗಿ ಮದುವೆಯಾಗಿದ್ದಾನೆ.

    ಈ ಘಟನೆ ತೆಲಂಗಾಣದ ಕರೀನಗರದಲ್ಲಿ ನಡೆದಿದ್ದು, ಜಗಿತ್ಯಾಲ ಜಿಲ್ಲೆಯ ಗೊಲ್ಲಪಲ್ಲಿ ಮಂಡಲದ ಲಕ್ಷೀಪುರ ಗ್ರಾಮದ 24 ವರ್ಷದ ಶ್ರೀನಿವಾಸ ಎಂಬ ಯುವಕ ತನ್ನ ಕುಟುಂಬಸ್ಥರ ಮನವೊಲಿಸಿ 23 ವರ್ಷದ ಕರುಣಾಂಜಲಿಯನ್ನು ಅದ್ದೂರಿಯಾಗಿ ಮದುವೆಯಾಗಿದ್ದಾನೆ. ಈ ಇಬ್ಬರೂ ಕಳೆದ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದು, ಇದೀಗ ಸಮಾಜದ ಎಲ್ಲಾ ಅಡೆತಡೆಗಳನ್ನು ಮುರಿದು ಕುಟುಂಬಸ್ಥರ ಸಮ್ಮುಖದಲ್ಲಿ ಶಾಸ್ತ್ರೋಕ್ತವಾಗಿ ಮದುವೆಯಾಗಿದ್ದಾರೆ.

    ಈ ವಿಚಾರವನ್ನು ChotaNewsTelugu ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, ನೆಟ್ಟಿಗರು ಈ ಜೋಡಿಯ ಸುಂದರ ದಾಂಪತ್ಯ ಜೀವನಕ್ಕೆ ಶುಭ ಕೋರಿದ್ದಾರೆ.

    Continue Reading

    BIG BOSS

    ಮತ್ತೆ ಜೈಲು ಸೇರಿದ ಚೈತ್ರಾ ಕುಂದಾಪುರ

    Published

    on

    ಕನ್ನಡದ ಬಿಗ್​ ರಿಯಾಲಿಟಿ ಶೋ ಬಿಗ್​ಬಾಸ್​ ಸೀಸನ್​ 11, ನಾಲ್ಕನೇ ವಾರಕ್ಕೆ ಕಾಲಿಡುತ್ತಿದೆ. ಇದೇ ಹೊತ್ತಲ್ಲಿ ಚೈತ್ರಾ ಕುಂದಾಪುರ ಬಿಗ್​ಬಾಸ್​ ಮನೆಯ ಜೈಲು ಪಾಲಾಗಿದ್ದಾರೆ. ಬಿಗ್​ಬಾಸ್​ ಮನೆಗೆ ಕಾಲಿಟ್ಟಿದ್ದ ಚೈತ್ರಾ ಕುಂದಾಪುರ ನೇರವಾಗಿ ನರಕಕ್ಕೆ ಎಂಟ್ರಿ ಕೊಟ್ಟಿದ್ದರು.

    ಬಿಗ್‌ ಬಾಸ್ ಸೀಸನ್ 11ರಲ್ಲಿ ಚೈತ್ರಾ ಕುಂದಾಪುರ ಅವರು ಮೊದಲ ಬಾರಿಗೆ ಜೈಲಿಗೆ ಹೋಗಿದ್ದಾರೆ. ಮೂರನೇ ವಾರದಲ್ಲಿ ಮನೆಯಲ್ಲಿದ್ದ 14 ಸ್ಪರ್ಧಿಗಳಿಗೆ ಬಿಗ್​ಬಾಸ್​ ಟಾಸ್ಕ್​ವೊಂದನ್ನು ನೀಡಿದ್ದರು. ಬಿಗ್​ಬಾಸ್​ ಮನೆಯಲ್ಲಿ ಅಪ್ರಾಮಾ ಣಿಕ ಯಾರು ಹಾಗೂ ಕುತಂತ್ರಿ ಯಾರು ಅಂತ ಹೇಳಿ ಎಂದಿದ್ದರು.

    ಬಿಗ್​ಬಾಸ್​ ಮನೆಯಲ್ಲಿರೋ ಸ್ಪರ್ಧಿಗಳು ಅತಿ ಹೆಚ್ಚಾಗಿ ಹಣೆ ಪಟ್ಟಿಯನ್ನು ಚೈತ್ರಾ ಕುಂದಾಪುರ ಅವರಿಗೆ ಕೊಟ್ಟಿದ್ದಾರೆ. ಹೀಗಾಗಿ ಪ್ರಕ್ರಿಯೆಯ ಅನುಸಾರ ಚೈತ್ರಾ ಕುಂದಾಪುರ ಬಿಗ್​ಬಾಸ್​ ಜೈಲಿಗೆ ಹೋಗಿದ್ದಾರೆ. ಬಿಗ್​ಬಾಸ್​ ಅವರ ಮುಂದಿನ ಆದೇಶದವರೆಗೂ ಚೈತ್ರಾ ಜೈಲಿನಲ್ಲೇ ಇರಬೇಕಾಗುತ್ತದೆ.

    Continue Reading

    BIG BOSS

    BBK11: ವಾರದ ಕತೆ ಕಿಚ್ಚನ ಜೊತೆ; ಕುತೂಹಲ ಮೂಡಿಸಿದ 5 ವಿಚಾರಗಳು..!

    Published

    on

    ಬಿಗ್​​ಬಾಸ್​ ಸೀಸನ್​-11 ಮೂರು ವಾರ ಪೂರೈಸಿದ್ದು, ಇಂದು ಕಿಚ್ಚ ಸುದೀಪ್ ಎಂಟ್ರಿ ಆಗಲಿದ್ದಾರೆ. ಕಳೆದ ಒಂದು ವಾರದಿಂದ ಬಿಗ್​ಬಾಸ್ ಮನೆಯಲ್ಲಿ, ನಡೆದ ಅನೇಕ ವಿಚಾರಗಳು ದೊಡ್ಡ ಮೊಟ್ಟದಲ್ಲಿ ಸದ್ದು ಮಾಡಿವೆ. ಹೀಗಾಗಿ ಇವತ್ತಿನ ಕಿಚ್ಚನ ಎಪಿಸೋಡ್​​ ತುಂಬಾನೇ ಕುತೂಹಲ ಮೂಡಿಸಿದೆ.

    ಭಾರೀ ಹೈಡ್ರಾಮಾ..!

    ದಸರಾ ಹಿನ್ನೆಲೆಯಲ್ಲಿ ಕಳೆದ ವಾರ ಎಲಿಮಿನೇಷನ್​ ಪ್ರಕ್ರಿಯೆ ನಡೆದಿರಲಿಲ್ಲ. ಈ ವಾರ ನಡೆದ ಕೆಲವು ಅಹಿತಕರ ಘಟನೆಗಳಿಂದಾಗಿ ಸ್ಪರ್ಧಿಗಳಾದ ಲಾಯರ್ ಜಗದೀಶ್ ಹಾಗೂ ರಂಜಿತ್ ಅವರನ್ನು ಮನೆಯಿಂದ ಆಚೆ ಹಾಕಲಾಗಿದೆ. ಅಂದರೆ ಇಬ್ಬರು ಸ್ಪರ್ಧಿಗಳು ಬ್ಯಾಗ್ ಹಿಡಿದು ಮನೆಗೆ ವಾಪಸ್ ಆಗಿದ್ದಾರೆ. ಈ ವಿಚಾರಗಳಿಗೆ ಸುದೀಪ್ ಪ್ರತಿಕ್ರಿಯೆ ಹೇಗಿರುತ್ತದೆ ಅನ್ನೋ ಕುತೂಹಲ ವೀಕ್ಷಕರಲ್ಲಿ ಹೆಚ್ಚಾಗಿದೆ.

    ಆಕ್ಷೇಪಾರ್ಹ ಪದ ಬಳಕೆ

    ಕೆಲವು ಸ್ಪರ್ಧಿಗಳು ಮನೆಯಲ್ಲಿ ಆಕ್ಷೇಪಾರ್ಹ ಪದಗಳನ್ನು ಬಳಕೆ ಮಾಡ್ತಿದ್ದಾರೆ. ಇದು ವೀಕ್ಷಕರ ಸಮಾಧಾನಕ್ಕೆ ಕಾರಣವಾಗಿದೆ. ಟಾಸ್ಕ್​ ವೇಳೆ, ವಾದ-ಪ್ರತಿವಾದ ವೇಳೆ ಅತಿರೇಕಕ್ಕೆ ಹೋಗುವ ಸ್ಪರ್ಧಿಗಳು ಮನಸೋ ಇಚ್ಛೆ ನಿಂದನೆ ಮಾಡಿಕೊಳ್ತಿದ್ದಾರೆ. ಇಂಥ ವಿಚಾರಗಳ ಬಗ್ಗೆ ಸ್ಪರ್ಧಿಗಳಿಗೆ ಸುದೀಪ್ ಹೇಗೆ ಕ್ಲಾಸ್ ತೆಗೆದುಕೊಳ್ತಾರೆ ಅನ್ನೋ ನಿರೀಕ್ಷೆಯಲ್ಲಿ ಅಭಿಮಾನಿಗಳಿದ್ದಾರೆ.

    ಎಲಿಮಿನೇಷನ್ ಇರುತ್ತಾ..?

    ಈಗಾಗಲೇ ಬಿಗ್​​ಬಾಸ್​ ಮನೆಯಿಂದ ಜಗದೀಶ್ ಹಾಗೂ ರಂಜಿತ್​ರನ್ನು ಹೊರಹಾಕಲಾಗಿದೆ. ಹೀಗಾಗಿ, ಈ ವಾರ ಎಲಿಮಿನೇಷನ್ ನಡೆಯೋದು ಡೌಟ್. ಆದರೂ ಸುದೀಪ್ ಯಾರನ್ನೆಲ್ಲಾ ಸೇವ್ ಮಾಡುತ್ತಾರೆ? ಮೊದಲು ಸೇವ್ ಆಗೋದು ಯಾರು ಅನ್ನೋದ್ರ ಬಗ್ಗೆ ವೀಕ್ಷಕರಲ್ಲಿ ಎಕ್ಸೈಟ್​ಮೆಂಟ್ ಹೆಚ್ಚಾಗಿದೆ.

    ಕನ್ನಡ ಮಾಯ

    ಸ್ಪರ್ಧಿಗಳು ಕನ್ನಡ ಪದ ಬಳಕೆಯನ್ನು ಕಡಿಮೆ ಮಾಡಿದ್ದಾರೆ ಅನ್ನೋ ಆರೋಪ ಇದೆ. ಪದೇ ಪದೇ ಇಂಗ್ಲಿಷ್​​ನಲ್ಲಿ ಮಾತನಾಡುತ್ತಿರುವ ಸಂಬಂಧ ಈಗಾಗಲೇ ಸ್ಪರ್ಧಿಗಳಿಗೆ ಬಿಗ್​ಬಾಸ್​ ಎಚ್ಚರಿಕೆಯನ್ನೂ ನೀಡಿದ್ದಾರೆ. ಹೀಗಿದ್ದೂ ಸ್ಪರ್ಧಿಗಳು ಇಂಗ್ಲಿಷ್​​ನಲ್ಲಿ ಮಾತನಾಡ್ತಿದ್ದಾರೆ.

    ಬಿಗ್​ಬಾಸ್​ಗೆ ಸುದೀಪ್ ಗುಡ್​ಬೈ

    ಕಳೆದ ಭಾನುವಾರ ಟ್ವೀಟ್ ಮಾಡುವ ಮೂಲಕ ಕಿಚ್ಚ ಸುದೀಪ್, ಬಿಗ್​ಬಾಸ್​ಗೆ ಗುಡ್​ಬೈ ಹೇಳಿದ್ದಾರೆ. ಮುಂದಿನ ವರ್ಷದಿಂದ ಸುದೀಪ್, ಬಿಗ್​​ಬಾಸ್ ಶೋನಲ್ಲಿ ಕಾಣಿಸಿಕೊಳ್ಳಲ್ಲ. ಇದು ಅಭಿಮಾನಿಗಳಿಗೆ ಭಾರೀ ಬೇಸರವುಂಟು ಮಾಡಿದೆ. ಸುದೀಪ್ ಈ ನಿರ್ಧಾರ ಪ್ರಕಟಿಸಿದ ಬಳಿಕ ಮೊದಲ ಬಾರಿಗೆ ಬಿಗ್​ಬಾಸ್​ ವೇದಿಕೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ.

    Continue Reading

    LATEST NEWS

    Trending