FILM
ಚಿತ್ರಹಿಂತೆ ನೀಡಿ ರೇಣುಕಾಸ್ವಾಮಿ ಹತ್ಯೆಗೈದ ಆರೋಪಿಗಳು..!! ವಿಚಾರಣೆ ವೇಳೆ ದರ್ಶನ್ ಹೇಳಿದ್ದೇನು?
ಬೆಂಗಳೂರು: ಪವಿತ್ರಾ ಗೌಡಳಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳಿಸಿದ್ದಾನೆ ಎಂದು ಚಿತ್ರದುರ್ಗದ ರೇಣುಕಾಸ್ವಾಮಿ ಎಂಬಾತನನ್ನು ಕೊಲೆಗೈದಿರುವ ಕುರಿತಾಗಿ ದರ್ಶನ್ ಸೇರಿದಂತೆ 10 ಜನರ ಬಂಧನವಾಗಿದೆ.
ಇದೀಗ ಪ್ರಾಥಮಿಕ ವಿಚಾರಣೆ ವೇಳೆ ಒಂದಷ್ಟು ಮಾಹಿತಿ ಹೊರಬಿದ್ದಿದೆ. ಚಿತ್ರದುರ್ಗದಿಂದ ಪಟ್ಟಣಗೆರೆಗೆ ರೇಣುಕಾಸ್ವಾಮಿ ಅವರನ್ನು ಕರೆತಂದು ಗೋದಾಮಿನಲ್ಲಿ ಕೂಡಿಹಾಕಿ ಮನಬಂದಂತೆ ಚಿತ್ರಹಿಂಸೆ ನೀಡಿ ಕೊಲೆ ಮಾಡಿರುವುದು ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃದೇಹದ ಮೇಲೆ ಸಿಗರೇಟಿನಿಂದ ಸುಟ್ಟಗಾಯವಾಗಿದೆ. ಮರ್ಮಾಂಗಕ್ಕೆ ಗಾಯವಾಗಿದೆ. ತಲೆಗೆ ರಾಡ್ನಿಂದ ಬಲವಾಗಿ ಹೊಡೆಯಲಾಗಿದೆ. ಇನ್ನು ಆರೋಪಿಗಳು ಮದ್ಯದ ಅಮಲಿನಲ್ಲಿ ರೇಣುಕಾಸ್ವಾಮಿಗೆ ಮನಬಂದಂತೆ ಥಳಿಸಿರುವುದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. ಇನ್ನು ವಿಚಾರಣೆ ನಡೆಯುತ್ತಿದ್ದು, ವಿಚಾರಣೆ ಮುಗಿದ ಬಳಿಕ ಅರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
Read More..; ನಟ ದರ್ಶನ್ ಬಂಧನ; ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ
ವಿಚಾರಣೆ ವೇಳೆ ದರ್ಶನ್ ಹೇಳಿದ್ದೇನು..?
ರೇಣುಕಾ ಸ್ವಾಮಿ ಕೊಲೆಯಾದಾಗ ಆ ಜಾಗದಲ್ಲಿ ನಾನು ಇರಲಿಲ್ಲ ಎಂದು ಹೆಳಿದ್ದ ದರ್ಶನ್ ಬಳಿಕ ನಾನು ಹುಡುಗರಿಗೆ ಬುದ್ಧಿವಾದ ಹೇಳಿ ಹೋಗಿದ್ದೆ ಎಂದು ಪೊಲೀಸರ ವಿಚಾರಣೆ ವೇಳೆ ವಿಚಾರ ಬಹಿರಂಗಪಡಿಸಿದ್ದಾರೆ.
ಇದೀಗ ಉಳಿದ ಆರೋಪಿಗಳನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸುತ್ತಿದ್ದಾರೆ. ದರ್ಶನ್ ಶೆಡ್ಗೆ ಬಂದು ಹೋದ ಬಗ್ಗೆ, ಸಿಕ್ಕ ವಸ್ತುಗಳ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ದರ್ಶನ್ಗೆ ಸಂಬಂಧಿಸಿದ ವಸ್ತುಗಳನ್ನು ಪರಿಶೀಲಿಸುತ್ತಿದ್ದಾರೆ. ಸ್ಥಳದಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.
ಕೊಲೆ ಕೇಸ್ನಲ್ಲಿ ಬಂಧಿತ ಆರೋಪಿಗಳ ಹೇಳಿಕೆಯನ್ನು ಪೊಲೀಸರು ಪಡೆದುಕೊಂಡಿದ್ದಾರೆ. ಇದರಿಂದ, ಘಟನೆ ವೇಳೆ ನಟ ದರ್ಶನ್ ಇದ್ದುದು ಗೊತ್ತಾಗಿತ್ತು. ಸದ್ಯ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿತರ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಹೇಳಿಕೆಗಳ ಫೈಲ್ಗಳನ್ನು ಅನ್ನಪೂರ್ಣೇಶ್ವರಿನಗರ ಠಾಣೆಗೆ ತೆಗೆದುಕೊಂಡು ಹೋಗಿದ್ದಾರೆ.
FILM
ಎರಡು ವರ್ಷಗಳ ಬಳಿಕ ಬೆಳ್ಳಿಪರದೆಗೆ ಮರಳಿದ ಸಾಯಿ ಪಲ್ಲವಿ
ನಟನೆ, ಡ್ಯಾನ್ಸಿಂಗ್ ಅಪಾರ ಅಭಿಮಾನಿಗಳ ಮನಗೆದ್ದಿರುವ ಸಾಯಿ ಪಲ್ಲವಿ ಇದೀಗ ಎರಡು ವರ್ಷಗಳ ನಂತರ ಬೆಳ್ಳಿಪರದೆಗೆ ಮರಳಿದ್ದಾರೆ. ‘ಅಮರನ್’ ಚಿತ್ರದ ಮೂಲಕ ಮತ್ತೆ ನಟಿ ಸದ್ದು ಮಾಡುತ್ತಿದ್ದಾರೆ. ನಟಿಯ ಕ್ಯಾರೆಕ್ಟರ್ ಟೀಸರ್ ರಿವೀಲ್ ಚಿತ್ರತಂಡ ಸರ್ಪ್ರೈಸ್ ನೀಡಿದೆ.
ಶಿವಕಾರ್ತಿಕೇಯನ್ ನಟನೆಯ ‘ಅಮರನ್’ ಚಿತ್ರದಲ್ಲಿ ಸಾಯಿ ಪಲ್ಲವಿ ಹೀರೋಯಿನ್ ಆಗಿ ನಟಿಸಿದ್ದಾರೆ. ವೀರಯೋಧ ಮೇಜರ್ ಮುಕುಂದ ವರದರಾಜನ್ ಬಯೋಪಿಕ್ ಆಗಿದೆ. ಇದರಲ್ಲಿ ವೀರಯೋಧನಾಗಿ ಶಿವಕಾರ್ತಿಕೇಯನ್ ನಟಿಸಿದ್ರೆ, ಅವರ ಪತ್ನಿ ರೆಬೆಕಾ ವರ್ಗೀಸ್ ಪಾತ್ರದಲ್ಲಿ ಸಾಯಿ ಪಲ್ಲವಿ ಜೀವ ತುಂಬಿದ್ದಾರೆ.
ಇನ್ನೂ ಚಿತ್ರದಲ್ಲಿ ನಟಿಯ ಕ್ಯಾರೆಕ್ಟರ್ ಟೀಸರ್ 1.22 ನಿಮಿಷವಿದ್ದು, ಸಾಯಿ ಪಲ್ಲವಿ ಗುಂಗುರು ಕೂದಲು ಬಿಟ್ಟು ನಯಾ ಲುಕ್ನಲ್ಲಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಇನ್ನೂ ‘ಅಮರನ್’ ಚಿತ್ರವನ್ನು ರಾಜಕುಮಾರ ಪೆರಿಯಸ್ವಾಮಿ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಇದೇ ಅ.11ಕ್ಕೆ ರಿಲೀಸ್ ಆಗಲಿದೆ.
FILM
ಮುದ್ದಾದ ಮಗಳ ಮುಖ ರಿವೀಲ್ ಮಾಡಿದ ಮಿಲನಾ ದಂಪತಿ
ಬೆಂಗಳೂರು: ಸ್ಯಾಂಡಲ್ವುಡ್ ನಟಿ ಮಿಲನಾ ಇತ್ತೀಚೆಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಇದೀಗ ಮುದ್ದು ಮಗಳನ್ನು ಮನೆ ತುಂಬಿಸಿಕೊಂಡಿದ್ದಾರೆ. ಇನ್ನೂ ಮಗಳನ್ನು ಬರಮಾಡಿಕೊಳ್ಳುತ್ತಿರುವ ವಿಶೇಷ ವಿಡಿಯೋವನ್ನು ಮಿಲನಾ ದಂಪತಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ಮಗಳ ಮುಖವನ್ನು ಮೊದಲ ಬಾರಿಗೆ ರಿವೀಲ್ ಮಾಡಿದ್ದಾರೆ.
ನಮ್ಮ ಪುಟ್ಟ ಪ್ರಪಂಚಕ್ಕೆ ಸ್ವಾಗತ ‘ಪರಿ’ ಎಂದು ಅಡಿಬರಹ ನೀಡಿ ಮಗಳ ಸ್ಪೆಷಲ್ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಡಾರ್ಲಿಂಗ್ ಕೃಷ್ಣ ಮಗುವನ್ನು ತಮ್ಮ ಕೈಯಲ್ಲಿ ಎತ್ತಿಕೊಂಡು ಪತ್ನಿ ಮಿಲನಾ ಜೊತೆಗೆ ಮನೆಯೊಳಗೆ ಕಾಲಿಟ್ಟಿದ್ದಾರೆ. ಈ ವೇಳೆ, ಮನೆಯ ತುಂಬಾ ಬಲೂನ್ಗಳಿಂದ ಅಲಂಕಾರ ಮಾಡಲಾಗಿದೆ. ಬಳಿಕ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ.
ಡಾರ್ಲಿಂಗ್ ಕೃಷ್ಣ ಅವರು ಮಗುವಿನ ಮುಖವನ್ನು ರಿವೀಲ್ ಮಾಡಿದ್ದಾರೆ. ಜೊತೆಗೆ ‘ಪರಿ’ ಎಂದು ಮಗಳಿಗೆ ಚೆಂದದ ಹೆಸರನ್ನು ಇಟ್ಟಿದ್ದಾರೆ. ಇನ್ನೂ ಹಿಂದಿ ಭಾಷೆಯಲ್ಲಿ ‘ಪರಿ’ ಅಂದರೆ ಅಪ್ಸರೆ ಎಂದರ್ಥವಾಗಿದೆ. ಒಟ್ನಲ್ಲಿ ಮಗುವಿನ ಮುಖ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಮಗುವಿನ ಆಗಮನದ ಖುಷಿಯಲ್ಲಿರುವ ಜೋಡಿಗೆ ಅಭಿಮಾನಿಗಳು ಶುಭಕೋರಿದ್ದಾರೆ.
ಅಂದಹಾಗೆ, ಕೃಷ್ಣ ಮತ್ತು ಮಿಲನಾ ಜೋಡಿ ಹಲವು ವರ್ಷಗಳ ಪ್ರೀತಿಗೆ 2021ರಲ್ಲಿ ಮದುವೆಯ ಮುದ್ರೆ ಒತ್ತಿದ್ದರು.
FILM
ಒಂದೇ ಹಾಡಿನಲ್ಲಿ 700 ಮಂದಿ ಬ್ಯಾಕ್ ಡ್ಯಾನ್ಸರ್ಸ್; ಯಾವ ಚಿತ್ರದಲ್ಲಿ ಗೊತ್ತಾ!?
ಮಂಗಳೂರು/ಮುಂಬೈ : ಲಕ್ಷ್ಮಣ್ ಉಟೇಕರ್ ನಿರ್ದೇಶನದ ‘ಛವ್ವಾ’ ಸಿನಿಮಾ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಈ ಚಿತ್ರದಲ್ಲಿ ವಿಕ್ಕಿ ಕೌಶಲ್, ರಶ್ಮಿಕಾ ಮಂದಣ್ಣ ಮೊದಲಾದವರು ನಟಿಸಿದ್ದು, ಛತ್ರಪತಿ ಸಾಂಬಾಜಿ ಪಾತ್ರದಲ್ಲಿ ವಿಕ್ಕಿ ನಟಿಸಿದರೆ, ಅವರ ಪತ್ನಿ ಯೇಸುಬಾಯಿ ಪಾತ್ರದಲ್ಲಿ ರಶ್ಮಿಕಾ ಕಾಣಿಸಿಕೊಂಡಿದ್ದಾರೆ.
ಡ್ಯಾನ್ಸ್ ಮಾಡುವಾಗ ಸಾಮಾನ್ಯವಾಗಿ 50 – 100 ಮಂದಿ ಕಾಣಿಸಿಕೊಳ್ಳೋದು ಸಾಮಾನ್ಯ. ಆದರೆ, ಬರೋಬ್ಬರಿ 700 ಮಂದಿ ಕಾಣಿಸಿಕೊಂಡರೆ? ಹೀಗೊಂದು ಅಪರೂಪದ ದೃಶ್ಯ ‘ಛವ್ವಾ’ಸಿನಿಮಾದಲ್ಲಿ ಮೂಡಿ ಬಂದಿದೆ. ಎ.ಆರ್. ರೆಹಮಾನ್ ಕಂಪೋಸ್ನಲ್ಲಿ ಈ ಹಾಡು ಮೂಡಿದ್ದು, ಇದರ ಶೂಟ್ಗೆ ಸಿದ್ಧತೆ ನಡೆದಿದೆ.
ಮರಾಠಿ ಜಾನಪದ ಮ್ಯೂಸಿಕ್ನಲ್ಲಿ ಈ ಹಾಡು ಮೂಡಿ ಬರುತ್ತಿದೆ. ರಾಜರ ಕಾಲವನ್ನು ರೀ ಕ್ರಿಯೇಟ್ ಮಾಡಬೇಕಾಗಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಬ್ಯಾಕ್ ಡ್ಯಾನ್ಸರ್ಗಳು ಇರಲಿದ್ದಾರೆ. ವಿಜಯ್ ಗಂಗೂಲಿ ಅವರು ಈ ಹಾಡಿಗೆ ಕೊರಿಯೋಗ್ರಾಫಿ ಮಾಡುತ್ತಿದ್ದಾರೆ.
ಈ ಸಿನಿಮಾದ ಕಥೆ 1681ರ ಕಾಲಘಟ್ಟದ್ದಾಗಿದೆ. ಇದಕ್ಕಾಗಿಯೇ ಬೃಹತ್ ಸೆಟ್ಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಈ ಚಿತ್ರ ಡಿಸೆಂಬರ್ 6 ರಂದು ರಿಲೀಸ್ ಆಗಲಿದ್ದು, ಅದೇ ದಿನ ರಶ್ಮಿಕಾ ಮಂದಣ್ಣ ನಟನೆಯ ‘ಪುಷ್ಪ 2’ ಕೂಡ ರಿಲೀಸ್ ಆಗುತ್ತಿರೋದು ವಿಶೇಷ.
- LATEST NEWS7 days ago
ವೃಶ್ಚಿಕದಲ್ಲಿ ಬುಧ-ಶುಕ್ರ ಯುತಿ; ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ
- LATEST NEWS5 days ago
ಸೆಪ್ಟಂಬರ್ 29 ರಿಂದ ಆಕಾಶದಲ್ಲಿ ಎರಡು ಚಂದ್ರ ಗೋಚರ..! ಏನಿದು ವಿಸ್ಮಯ..?
- LATEST NEWS5 days ago
ಮಂಗಳೂರು: ಕಾಸ್ಮೆಟಿಕ್ ಸರ್ಜರಿ ವೇಳೆ ಯುವಕ ಮೃ*ತ್ಯು
- LATEST NEWS4 days ago
ಲಕ್ಷ್ಮೀ ಹೆಬ್ಬಾಳ್ಕರ್ಗೆ 1 ಕೆಜಿ ಬಂಗಾರದ ಆಫರ್ ನೀಡಿದ ಮಾಜಿ ಸಚಿವ