BANTWAL
ಕರಾಟೆಯಲ್ಲಿ ಬಂಟ್ವಾಳದ ಬಾಲಕನ ಸಾಧನೆ-ಕೊಡಗಿನಲ್ಲಿ ನಡೆದ ಸ್ಪರ್ಧೆಯಲ್ಲಿ ಗ್ರ್ಯಾಂಡ್ ಚಾಂಪಿಯನ್
ಬಂಟ್ವಾಳ: ಬಂಟ್ವಾಳದ ಯುವ ಪ್ರತಿಭಾವಂತ ಬಾಲಕನೊಬ್ಬ ಇದೀಗ ಕರಾಟೆ ಕ್ಷೇತ್ರದಲ್ಲಿ ಅತ್ಯದ್ಭುತ ಸಾಧನೆ ತೋರಿಸುತ್ತಿದ್ದು 2022 ನೇ ಸಾಲಿನಲ್ಲಿ ನಡೆದ ಕೊಡಗು ಸ್ಪೋರ್ಟ್ಸ್ ಲೆವೆಲ್ ಓಪನ್ ಕರಾಟೆ ಚಾಂಪಿಯನ್ಶಿಪ್ ನಲ್ಲಿ ನಡೆದ ಕರಾಟೆ ಪಂದ್ಯಾವಳಿಯಲ್ಲಿ ಗ್ರಾಂಡ್ ಚಾಂಪಿಯನ್ ಪಡೆದಿದ್ದಾರೆ.
ಈತನೇ ಕುಮಾರ್ ಚಿನ್ಮಯ್. ಕಲ್ಲಡ್ಕ ಏಳ್ತಿಮಾರ್ನ ಕೇಶವ ಪೂಜಾರಿ ಮತ್ತು ನಯನ ದಂಪತಿ ಪುತ್ರ. ವೈಯಕ್ತಿಕ ಕರಾಟೆ ವಿಭಾಗದಲ್ಲಿ ಪ್ರಥಮ ಹಾಗೂ ಕುಮಿಟೆಯಲ್ಲಿ ತೃತೀಯ ಬಹುಮಾನವನ್ನು ಪಡೆದಿರುತ್ತಾರೆ. ಅದೇ ರೀತಿ ಶಿವಮೊಗ್ಗ ಓಪನ್ ಮೂರನೇ ಅಂತರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ಕರಾಟೆ ಮತ್ತು ಕುಮಿಟೆ ವಿಭಾಗದಲ್ಲಿ ಕಂಚಿನ ಪದಕವನ್ನು ಗೆದ್ದಿದ್ದಾರೆ.
ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಕರ್ನಾಟಕ ಸರ್ಕಾರ ನಡೆಸಿದ, ಕಟೀಲು ಶ್ರೀ ದುರ್ಗಾಪರಮೇಶ್ವರಿ ಶಿಕ್ಷಣ ಸಂಸ್ಥೆಯಲ್ಲಿ ನಡೆದ ರಾಜ್ಯ ಮಟ್ಟದ 17 ರ ವಯೋಮಾನದ 45 ಕೆ.ಜಿ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಚಿನ್ನದ ಪದಕವನ್ನು ಗೆದ್ದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.
ಇವರು ಉರ್ವ ಮಣ್ಣಗುಡ್ಡೆ ಕೆನರಾ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಯಾಗಿದ್ದು, ನಾರಾಯಣ ಗುರು ಮಂದಿರ ಕುಲಾಯಿ, ನಾರಾಯಣ ಗುರು ಮಂದಿರ ಕೂಲೂರು, ಹಾಗೂ ಯುವವಾಹಿನಿ ಉರ್ವ ಮಂಗಳೂರು ಇಲ್ಲಿ ಶಿಹಾನ್ ಶರತ್ ಕುಮಾರ್ ಮತ್ತು ವಿಕಾಸ್ ಎಸ್ ಕುಮಾರ್ ಇವರ ತರಬೇತಿಯನ್ನು ಪಡೆಯುತ್ತಿದ್ದು , ಇವರು ಕರಾಟೆ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆಯನ್ನು ಮಾಡಲಿ ಎಂದು ನಮ್ಮೆಲ್ಲರ ಆಶಯ.
BANTWAL
Bantwala: ಕಾರುಗಳ ನಡುವೆ ಸರಣಿ ಅಪಘಾತ..!
ಪಾಣೆಮಂಗಳೂರು ಸೇತುವೆಯಲ್ಲಿ 2 ಕಾರುಗಳ ನಡುವೆ ಮುಖಾಮುಖಿ ಢಿಕ್ಕಿಯಾಗಿ ಸುಮಾರು ಒಂದು ತಾಸಿಗಿಂತಲೂ ಅಧಿಕವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರಕ್ಕೆ ತೊಂದರೆಯಾದ ಘಟನೆ ನಡೆದಿದೆ.
ಬಂಟ್ವಾಳ: ಪಾಣೆಮಂಗಳೂರು ಸೇತುವೆಯಲ್ಲಿ 2 ಕಾರುಗಳ ನಡುವೆ ಮುಖಾಮುಖಿ ಢಿಕ್ಕಿಯಾಗಿ ಸುಮಾರು ಒಂದು ತಾಸಿಗಿಂತಲೂ ಅಧಿಕವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರಕ್ಕೆ ತೊಂದರೆಯಾದ ಘಟನೆ ನಡೆದಿದೆ.
ಪಾಣೆಮಂಗಳೂರು ಸೇತುವೆಯಲ್ಲಿ ಎರಡು ಕಾರುಗಳು ಡಿಕ್ಕಿಯಾಗಿದ್ದು, ಇದರ ಹಿಂಬದಿಯಿಂದ ಬಂದ ಮತ್ತೆ ಎರಡು ವಾಹನಗಳು ಢಿಕ್ಕಿ ಯಾಗಿದೆ.
ಡಿಕ್ಕಿಯ ರಭಸಕ್ಕೆ ಎರಡು ಕಾರುಗಳು ಜಖಂಗೊಂಡಿದೆ.
ಆದರೆ ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಗಾಯವಾಗದೆ ಪಾರಾಗಿದ್ದಾರೆ.
ಇದರ ಜೊತೆಗೆ ಸೇತುವೆ ಸಮೀಪ ನೆಹರು ನಗರ ಎಂಬಲ್ಲಿ ಲಾರಿಯೊಂದರ ಟಯರ್ ಕೆಟ್ಟು ಹೋಗಿ ನಿಂತಿತ್ತು.
ಹೀಗಾಗಿ ತಾಸುಗಟ್ಟಲೆ ವಾಹನಗಳು ಸಾಲಾಗಿ ನಿಂತಿದ್ದವು.
ಸೇತುವೆಯಲ್ಲಿ ಅಪಘಾತ ಸಂಭವಿಸಿದ ಪರಿಣಾಮ ವಾಹನಗಳ ಸಂಚಾರಕ್ಕೆ ಅಡ್ಡಿಯಾಯಿತು.
ವಾಹನಗಳನ್ನು ಕ್ಲಿಯರ್ ಮಾಡಲು ಟ್ರಾಫಿಕ್ ಪೋಲೀಸರು ಹರಸಹಾಸ ಪಟ್ಟರು.
ಅಪಘಾತ ನಡೆದು ಕೆಲವೇ ಹೊತ್ತಿನಲ್ಲಿ ವಾಹನಗಳ ಸಾಲು ಸುಮಾರು ಉದ್ದಕ್ಕೆ ತಲುಪಿತ್ತು.
ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾದ ಹಿನ್ನೆಲೆಯಲ್ಲಿ ವಾಹನ ಸವಾರರು ಪಾಣೆಮಂಗಳೂರು ಪೇಟೆ ಮೂಲಕ ಹಳೆ ಸೇತುವೆ ಮೂಲಕ ಸಂಚಾರಕ್ಕೆ ಪ್ರಯತ್ನ ಮಾಡಿದರಾದರೂ ಅಲ್ಲಿಯೂ ಟ್ರಾಫಿಕ್ ಸಮಸ್ಯೆ ಉಂಟಾಯಿತು.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ವಾಹನಗಳು ಹೋಗಿ ಸಾಲು ಸಾಲಾಗಿ ನಿಂತಿರುವ ಪೋಟೋ ವೈರಲ್ ಆಗಿದೆ.
ರಾತ್ರಿ ಹೊತ್ತು ವಾಹನಗಳ ಲೈಟ್ ಮತ್ತು ನೇತ್ರಾವತಿ ನದಿಯ ನೀರು ಕಂಗೊಳಿಸುವ ಚಿತ್ರವನ್ನು ಪಾಣೆಮಂಗಳೂರು ಮಂಗಳೂರು ಹೊಸ ಸೇತುವೆಯಿಂದ ಕ್ಲಿಕ್ ಮಾಡಿದ್ದಾರೆ.
ಪೊಲೀಸ್ ಸಿಬ್ಬಂದಿ ಸಮಸ್ಯೆ ಪರಿಹಾರಕ್ಕೆ ಪ್ರಯತ್ನ ಮಾಡಿದರು.
BANTWAL
Bantwala: ಇಲೆಕ್ಟ್ರಾನಿಕ್ ಅಂಗಡಿಗೆ ಬೆಂಕಿ- ಕರಕಲಾದ ಲಕ್ಷಾಂತರ ರೂ. ವಸ್ತುಗಳು..!
ಆಕಸ್ಮಿಕವಾಗಿ ಬೆಂಕಿ ತಗುಲಿ ಇಲೆಕ್ಟ್ರಾನಿಕ್ ಅಂಗಡಿಯೊಂದು ಬಾಗಶ: ಬೆಂಕಿಗಾಹುತಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಮಂಗಳವಾರ ಮಧ್ಯಾಹ್ನದ ವೇಳೆ ನಡೆದಿದೆ.
ಬಂಟ್ವಾಳ: ಆಕಸ್ಮಿಕವಾಗಿ ಬೆಂಕಿ ತಗುಲಿ ಇಲೆಕ್ಟ್ರಾನಿಕ್ ಅಂಗಡಿಯೊಂದು ಬಾಗಶ: ಬೆಂಕಿಗಾಹುತಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಮಂಗಳವಾರ ಮಧ್ಯಾಹ್ನದ ವೇಳೆ ನಡೆದಿದೆ.
ಬಂಟ್ವಾಳ ಪೇಟೆಯ ಬಡ್ಡಕಟ್ಟೆಯಲ್ಲಿರುವ ಪುರಸಭಾ ವಾಣಿಜ್ಯ ಮಳಿಗೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಹಲವು ಸೊತ್ತುಗಳು ಸುಟ್ಟುಹೋಗಿವೆ.
ಬಳಿಕ ಅಗ್ನಿಶಾಮಕ ಸಿಬಂದಿ ಸ್ಥಳೀಯರೊಂದಿಗೆ ಸೇರಿ ಬೆಂಕಿ ನಂದಿಸುವಲ್ಲಿ ಸಫಲರಾದರು.
ಅಂಗಡಿಯಲ್ಲಿದ್ದ ಸುಮಾರು ಲಕ್ಷಾಂತರ ರೂಪಾಯಿ ಬೆಲೆಬಾಳುವ ಟಿ.ವಿ.ಸಹಿತ ಅನೇಕ ಗೃಹೋಪಯೋಗಿ ಉಪಕರಣಗಳನ್ನು ಸುಟ್ಟು ಹೋಗಿದೆ ಎಂದು ಹೇಳಲಾಗಿದೆ.
ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
BANTWAL
ಬಂಟ್ವಾಳದಲ್ಲಿ ಹಗಲಿನ ವೇಳೆ ಮನೆಗೆ ನುಗ್ಗಿ ಕಳವು ಪ್ರಕರಣ: ಲಕ್ಷಾಂತರ ಮೌಲ್ಯದ ಸೊತ್ತು ವಶ-ಇಬ್ಬರ ಬಂಧನ
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಠಾಣೆಯ ಪೊಲೀಸರು ನಿನ್ನೆ ಭರ್ಜರಿ ಬೇಟೆಯಾಡಿದ್ದಾರೆ.
ಇಲ್ಲಿನ ಠಾಣಾ ವ್ಯಾಪ್ತಿಯಲ್ಲಿ ಹಗಲಿನ ವೇಳೆ ಮನೆಗಳಿಗೆ ನುಗ್ಗಿ ಕಳವು ಮಾಡುತ್ತಿದ್ದ ಪ್ರಕರಣವನ್ನು ಬೇಧಿಸಿದ್ದು, ಲಕ್ಷಾಂತರ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ಮಂಗಳೂರು ಬೆಂಗ್ರೆ ಭದ್ರಪಳ್ಳಿ ನಿವಾಸಿ ಫರಾಜ್ (27) ಮತ್ತು ಸುರತ್ಕಲ್ ತಾಲೂಕು ಚೊಕ್ಕಬೆಟ್ಟು ಕೃಷ್ಣಾಪುರ 4ನೇ ಬ್ಲಾಕ್ ನ ನಿವಾಸಿಯಾಗಿರುವ ತೌಸಿಫ್ ಅಹಮ್ಮದ್ (34) ಬಂಧಿತ ಆರೋಪಿಗಳು.
ಬಂಧಿತರಿಂದ 12,23,000 ಮೌಲ್ಯದ 223ಗ್ರಾಂ ಚಿನ್ನಾಭರಣ ಮತ್ತು ರೂ 3,000 ಮೌಲ್ಯದ ಬೆಳ್ಳಿ ವಸ್ತುಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸುಮಾರು 3,30,000ಮೌಲ್ಯದ ಮಹೀಂದ್ರ ಕೈಲೋ ಕಾರು ಮತ್ತು ಮೋಟಾರ್ ಸೈಕಲ್ ಸೇರಿದಂತೆ ಒಟ್ಟು ರೂ 15,56,000 ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು,ತನಿಖೆ ಮುಂದುವರೆದಿದೆ.
- FILM6 days ago
‘ಜವಾನ್’ ಶಾಕಿಂಗ್ ಕಲೆಕ್ಷನ್ – ಕೇವಲ 7 ದಿನಗಳಲ್ಲಿ ವಿಶ್ವದಾದ್ಯಂತ 700 ಕೋಟಿ..!
- LATEST NEWS6 days ago
“ಕಚೇರಿ ವೇಳೆಯಲ್ಲಿ ಗಂಟೆ ಗಟ್ಟಲೆ ಕಾಫಿ, ಟೀಗೆ ಹೋಗುವ ಸರ್ಕಾರಿ ನೌಕರರ ವಿರುದ್ದ ಕಠಿಣ ಕ್ರಮ”
- FILM6 days ago
ಸೈಮಾ 2023-ಅತೀ ಹೆಚ್ಚು ಪ್ರಶಸ್ತಿ ಗೆದ್ದು ಬೀಗಿದ ಕನ್ನಡದ “ಕಾಂತಾರ”
- bangalore6 days ago
ಮುಂದಿನ ವಾರವೇ ‘ಸಪ್ತಸಾಗರದಾಚೆ ಎಲ್ಲೋ’ ತೆಲುಗು ವರ್ಷನ್- ರಿಲೀಸ್ ಡೇಟ್?