Connect with us

LATEST NEWS

‘ವಿಡುದಲೈ’ ಶೂಟಿಂಗ್ ವೇಳೆ ದುರಂತ: ಸಾಹಸ ಕಲಾವಿದ ಸುರೇಶ್ ಸಾವು

Published

on

ಚೆನ್ನೈ: ಖ್ಯಾತ ತಮಿಳು ನಿರ್ದೇಶಕ ವೆಟ್ರಿಮಾರನ್ ಅವರ ನೂತನ ಚಿತ್ರ ‘ವಿಡುದಲೈ’ ಚಿತ್ರೀಕರಣದಲ್ಲಿ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಸಾಹಸ ಕಲಾವಿದ ಎಸ್. ಸುರೇಶ್ ನಿಧನರಾಗಿದ್ದಾರೆ. ಡಿಸೆಂಬರ್ 3 ರಂದು ಶನಿವಾರ ನಡೆಯುತ್ತಿದ್ದ ‘ವಿಡುದಲೈ’ ಚಿತ್ರೀಕರಣದ ಸಂದರ್ಭದಲ್ಲಿ ಸುರಕ್ಷತಾ ಕ್ರಮಗಳಿದ್ದೂ ಅಪಘಾತಕ್ಕೀಡಾಗಿದ್ದ ಸಾಹಸ ಕಲಾವಿದ ಎಸ್. ಸುರೇಶ್ ಭಾನುವಾರ ಮುಂಜಾನೆ ಚಿಕಿತ್ಸೆ ಸ್ಪಂದಿಸದೆ ನಿಧನರಾಗಿದ್ದಾರೆ.


ಸುರೇಶ್ ತಮ್ಮ ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ. “ಅವರು ಜಿಗಿಯುವ ಸಾಹಸವನ್ನು ಮಾಡುವಾಗ ಅಪಘಾತ ಸಂಭವಿಸಿದೆ. ಎಲ್ಲ ಸುರಕ್ಷತಾ ಕ್ರಮಗಳನ್ನು ಕೈಗೊಂಡಿದ್ದರೂ ಅಪಘಾತ ಸಂಭವಿಸಿರುವುದು ದುರದೃಷ್ಟಕರವಾಗಿದೆ.

ನಾವು ಕೂಡಲೇ ಅವರನ್ನು ಆಸ್ಪತ್ರೆಗೆ ಕೊಂಡೊಯ್ದರೂ ಕೊನೆಯುಸಿರೆಳೆದರು. ಚಿತ್ರದ ನಿರ್ಮಾಪಕ ಹಾಗೂ ನಿರ್ದೇಶಕರು ನಾವು ಈ ಕುರಿತು ತಮ್ಮ ಕೈಲಾದಷ್ಟು ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.

ನಮ್ಮ ಒಕ್ಕೂಟದಿಂದಲೂ ಕೈಲಾದಷ್ಟು ನೆರವು ನೀಡಲು ಪ್ರಯತ್ನಿಸುತ್ತೇವೆ” ಎಂದು ತವಸಿ ರಾಜ್ ತಿಳಿಸಿದ್ದಾರೆ.

ತಮ್ಮ ‘ವಡಾ ಚೆನ್ನೈ’ ಹಾಗೂ ‘ಅಸುರನ್’ ಚಿತ್ರಗಳಿಂದ ಖ್ಯಾತರಾಗಿರುವ ನಿರ್ದೇಶಕ ವೆಟ್ರಿಮಾರನ್, ಸುರೇಶ್ ಸಾವಿನ ಕುರಿತು ಇನ್ನು ಅಧಿಕೃತ ಹೇಳಿಕೆ ನೀಡಬೇಕಿದೆ.

ಹಾಸ್ಯ ಪಾತ್ರಗಳ ಮೂಲಕ ಮನೆಮಾತಾಗಿರುವ ಸೂರಿ ‘ವಿಡುದಲೈ’ ಚಿತ್ರದ ನಾಯಕ ನಟರಾಗಿ ನಟಿಸುತ್ತಿದ್ದಾರೆ. ಈ ಚಿತ್ರ ಪೊಲೀಸ್ ವ್ಯವಸ್ಥೆ ಕುರಿತಂತೆ ಇದೆ. ಈ ಚಿತ್ರದಲ್ಲಿ ಸಾಮಾಜಿಕ-ರಾಜಕೀಯದ ಹಲವಾರು ಒಳಸುಳಿಗಳನ್ನು ಅನಾವರಣಗೊಳಿಸಲಾಗಿದೆ ಎಂದು ಹೇಳಲಾಗಿದೆ.

ಚಿತ್ರದಲ್ಲಿ ವಿಜಯ್ ಸೇತುಪತಿ ಹಾಗೂ ಗೌತಮ್ ವಾಸುದೇವ್ ಮೆನನ್ ಅತಿಥಿ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಚಿತ್ರಕ್ಕೆ ಸಂಗೀತ ಒದಗಿಸಿದ್ದು, ಉದಯನಿಧಿ ಸ್ಟಾಲಿನ್ ಅವರ ರೆಡ್ ಜೇಂಟ್ ಪಿಕ್ಚರ್ಸ್ ಚಿತ್ರವನ್ನು ನಿರ್ಮಿಸಿದೆ. ಈ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಕಳೆದ ವರ್ಷದ ಏಪ್ರಿಲ್ ನಲ್ಲಿ ಬಿಡುಗಡೆಯಾಗಿತ್ತು.

DAKSHINA KANNADA

ದ.ಕ.ಜಿಲ್ಲೆಯ 9 ಗ್ರಾಮಗಳು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ

Published

on

ಮಂಗಳೂರು: ದ.ಕ.ಜಿಲ್ಲೆಯ 9 ತಾಲೂಕಿನ 9 ಗ್ರಾಮಗಳು 2022-23ನೆ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ ಯಾಗಿದೆ.

ಅಕ್ಟೋಬರ್ 2ರ ಗಾಂಧಿಜಯಂತಿ ದಿನದಂದು ರಾಜ್ಯ ವಿಧಾನಸೌಧದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಯನ್ನು ಪ್ರದಾನ ಮಾಡಲಾಗುತ್ತದೆ ಎಂದು ಪ್ರಕಟನೆ ತಿಳಿಸಿದೆ.

ಮಂಗಳೂರು ತಾಲೂಕಿನ ಉಳಾಯಿಬೆಟ್ಟು, ಉಳ್ಳಾಲ ತಾಲೂಕಿನ ಬೆಳ್ಮ, ಮುಲ್ಕಿ ತಾಲೂಕಿನ ಕೆಮ್ರಾಲ್, ಮೂಡುಬಿದಿರೆ ತಾಲೂಕಿನ ಪುತ್ತಿಗೆ, ಬಂಟ್ವಾಳ ತಾಲೂಕಿನ ಅಮ್ಮುಂಜೆ, ಪುತ್ತೂರು ತಾಲೂಕಿನ ಉಪ್ಪಿನಂಗಡಿ, ಕಡಬ ತಾಲೂಕಿನ ಸವಣೂರು, ಬೆಳ್ತಂಗಡಿ ತಾಲೂಕಿನ ಬಳಂಜ, ಸುಳ್ಯ ತಾಲೂಕಿನ ಮರ್ಕಂಜ ಗ್ರಾಮಗಳು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿವೆ.

Continue Reading

LATEST NEWS

Baindoor: ರೈಲ್ವೆ ಸುರಂಗ ಮಾರ್ಗದಲ್ಲಿ ಕೋಮಾ ಸ್ಥಿತಿಯಲ್ಲಿದ್ದ ವ್ಯಕ್ತಿಯ ರಕ್ಷಣೆ..!

Published

on

ಬೈಂದೂರು: ಬೈಂದೂರು- ಶಿರೂರು ನೆರೆಗುದ್ದೆ ರೈಲ್ವೆ ಸುರಂಗ ಮಾರ್ಗದಲ್ಲಿ ಕೋಮಾ ಸ್ಥಿತಿಯಲ್ಲಿ ಬಿದ್ದುಕೊಂಡಿದ್ದ ಯುವಕನೊಬ್ಬನನ್ನು ಆರೋಗ್ಯ ಕವಚ 108 ಆ್ಯಂಬುಲೆನ್ಸ್ ಸಿಬಂದಿ ರಕ್ಷಿಸಿ ಪ್ರಾಣ ಉಳಿಸಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.

ಗಾಯಾಳು ವ್ಯಕ್ತಿಯನ್ನು ರಾಜೇಶ್  (25)ಎಂದು ಗುರುತಿಸಲಾಗಿದೆ.

ಮಂಗಳವಾರ ರಾತ್ರಿ 10 ಗಂಟೆಗೆ ರೈಲ್ವೆ ಇಲಾಖೆ ನೀಡಿದ ಮಾಹಿತಿಯ ಮೇರೆಗೆ ಆರೋಗ್ಯ ಕವಚ 108 ಸಿಬಂದಿ ಕಾರ್ಯಚರಣೆ ನಡೆಸಿದರು.

ರೈಲ್ವೇ ಸುರಂಗ ಮಾರ್ಗದೊಳಗೆ ಸುಮಾರು 3 ಕಿ.ಮೀ ನಡೆದು ಕೊಂಡು ಹೋಗಿ ಹಳಿಯ ಪಕ್ಕದಲ್ಲಿ ಮುಗುಚಿ ಬಿದ್ದಿದ್ದ ವ್ಯಕ್ತಿಯನ್ನು ಸ್ಟ್ರೆಚರ್ ನಲ್ಲಿ ಹಾಕಿ ಹೊತ್ತು ಹೊರತಂದು ಬೈಂದೂರು ಆಸ್ಪತ್ರೆಗೆ ದಾಖಲಿಸಿದರು.

ಅಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಅಲ್ಲಿಂದ ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ‌.

ಆ್ಯಂಬುಲೆನ್ಸ್‌ನ ಪೈಲೆಟ್ ಶರಣ ಬಸವ ಮತ್ತು ಇ ಎಂ ಟಿ ಪ್ರತಿಭಾ ಅವರು ಅಸ್ವಸ್ಥ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲು ಮಾಡಿ ಕರ್ತವ್ಯ ನಿಷ್ಠೆ ಮೆರೆದಿದ್ದಾರೆ.

Continue Reading

LATEST NEWS

ಕೊರಗಜ್ಜನ ಪವಾಡ- ವಾರವಿಡೀ ಕಾಡಿನಲ್ಲಿ ಸಿಲುಕಿದ ಯುವಕನ ರಕ್ಷಣೆ ಮಾಡಿದ ನಾಯಿಯ ಅದ್ದೂರಿ ಮೆರವಣಿಗೆ

Published

on

ಕುಂದಾಪುರ: ತುಳುನಾಡಿನಲ್ಲಿ ಕೊರಗಜ್ಜನ ದೈವದ ಕಾರ್ಣಿಕದ ಶಕ್ತಿ ಅಪಾರವಾದದ್ದು. ಹಾಗಾಗಿ ನಂಬುವ ಜನರಿಗೆ ಕೊರಗಜ್ಜ ಯಾವತ್ತೂ ಕೈ ಬಿಡುದಿಲ್ಲ ಎಂಬ ನಂಬಿಕೆ ಇದೆ.

ಆ ನಂಬಿಕೆಯಂತೆ ಉಡುಪಿ ಜಿಲ್ಲೆಯಲ್ಲೊಂದು ಅಚ್ಚರಿ ಘಟನೆ ನಡೆದಿದೆ.

ಕುಂದಾಪುರದ ಯುವಕನೋರ್ವ ಕಾಣೆಯಾಗಿದ್ದಾನೆ ಎಂದು ತಿಳಿದ ಮನೆಯವರು ದೈವದ ಮೊರೆ ಹೋದ ಬೆನ್ನಲೇ ಆತ ನಾಯಿಯೊಂದಿಗೆ ವಾಪಸು ಮನೆಗೆ ಮರಳಿದ್ದಾನೆ.

ಇದು ನಂಬಿದ ದೈವವೇ ಯುವಕನನ್ನು ಮರಳಿ ಮನೆಗೆ ಕರೆಸಿದೆ ಎಂದು ಗ್ರಾಮಸ್ಥರು ನಂಬಬಿದ್ದಾರೆ.

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಮಚ್ಚೆಟ್ಟು ವ್ಯಾಪ್ತಿಯ ವಿವೇಕಾನಂದ ಎಂಬ ಯುವಕನು ಕಾಡಿಗೆ ಕಟ್ಟಿಗೆ ತರಲು ಎಂದು ಹೋದವನು 8 ದಿನವಾದರೂ ಮನೆಗೆ ವಾಪಸು ಬಂದಿರಲಿಲ್ಲ.

ಹಾಗಾಗಿ ಮನೆಯವರು ದೈವದ ಮೊರೆ ಹೋಗಿದ್ದಾರೆ.

ಈ ವೇಳೆ ಆತ ಜೀವಂತವಾಗಿರುವುದು ತಿಳಿದು ಬಂದ ಕೂಡಲೇ ದೈವದ ಭರವಸೆಯಂತೆ ಪೊಲೀಸರು, ಎಎನ್‌ಎಫ್‌ ಪಡೆಯೊಂದಿಗೆ ಗ್ರಾಮಸ್ಥರು ಹಗಲು ರಾತ್ರಿ ಇಡೀ ಆತನ ಪತ್ತೆಗೆ ಹುಡುಕಾಡಿದ್ದಾರೆ.

ಆದರೆ ಆತನ ಸುಳಿವು ಸಿಕ್ಕಿರದ ಕಾರಣ ಮನೆಯವರು ಮುಳ್ಳುಗುಡ್ಡೆ ಕೊರಗಜ್ಜ ಸನ್ನಿಧಾನಕ್ಕೆ ಬಂದು ಪ್ರಾರ್ಥನೆ ಸಲ್ಲಿಸಿದರು.

“ಆತ ಹಂದಿಯೊಂದನ್ನು ಓಡಿಸಿಕೊಂಡು ಹೋಗುವಾಗ ದಾರಿ ತಪ್ಪಿದ್ದಾನೆ.  ಹಕ್ಕಿಯೊಂದು ದಾರಿ ತೋರಿಸಿದೆ.

ಹಳದಿ ಬಣ್ಣದ ಅಂಗಿ ಹಾಕಿ ಕಾಡಿನಲ್ಲಿ ಅಡಗಿ ಕುಳಿತ್ತಿದ್ದಾನೆ.

5 ಜನ ಸೇರಿ ಅಲ್ಲಿ ಹೋಗಿ ಹುಡುಕಿ. ಆಗಲಿಲ್ಲವಾದರೆ ಇನ್ನು ಎರಡು ದಿನದ ಒಳಗೆ ಆತ ಮನೆಗೆ ಬರುತ್ತಾನೆ” ಎಂದು ಕ್ಷೇತ್ರದ ಧಮ೯ದಶಿ೯ ಪುನೀತ್ ಅವರು ಹೇಳಿದ್ದರು.

ಅದರಂತೆ ಮಗನ ಬರುವಿಕೆಗೆ ಮನೆಯವರು ಕಾಯುತ್ತಿದ್ದರು.

ಇದೀಗ ಮನೆಯವರಿಗೆ ಹಾಗೂ ಗ್ರಾಮಸ್ಥರಿಗೆ ಕೊರಗಜ್ಜನ ದೈವದ ಶಕ್ತಿ ಅಚ್ಚರಿಯನ್ನುಂಟು ಮಾಡಿದೆ.

ಕೊರಗಜ್ಜ ಕ್ಷೇತ್ರದ ಧರ್ಮದರ್ಶಿ ಪುನೀತ್ ಅವರ ನುಡಿಯಂತೆ ಎಂಟು ದಿನಗಳ ಬಳಿಕ ಆತ ನಾಯಿಯೊಂದಿಗೆ ಮರಳಿ ಬರುತ್ತಾನೆ.

ಆದರೆ ಆತನಿಗೆ ತಾನೂ ಎಲ್ಲಿ ಹೋಗಿದ್ದೆ ಎಂದು ಗೊತ್ತಿಲ್ಲ. ಕಾಡಿನಲ್ಲಿ ಸಿಲುಕಿದ ಕಾರಣ ಆಹಾರವಿಲ್ಲದೆ ವಿವೇಕಾನಂದನು ನಿತ್ರಾಣಗೊಂಡಿದ್ದ.

ಆತನ ಜೊತೆಗಿದ್ದದ್ದು ಮಾತ್ರ  ಮನೆಯ ಸಾಕು ನಾಯಿ, ಆತನ ಮರಳಿ ಬರುವಂತೆ ದಾರಿ ತೋರಿಸಿ ರಕ್ಷಿಸಿದೆ.

ಹಾಗಾಗಿ ಆತನ ಜೀವ ಉಳಿಸಿದ ನಾಯಿಯನ್ನು ಗ್ರಾಮಸ್ಥರು ಸೇರಿ ಅದ್ದೂರಿಯಾಗಿ  ತೆರೆದ ಪಿಕಪ್ ವಾಹನದಲ್ಲಿ ಕುಳ್ಳಿರಿಸಿ ಮೆರವಣಿಗೆ ನಡೆಸಿದರು.

50ಕ್ಕಿಂತ ಹೆಚ್ಚು ಬೈಕ್ ಟೆಂಪೋ ಆಟೋರಿಕ್ಷಾಗಳ ಜೊತೆಗೆ ತೆರೆದ ವಾಹನದಲ್ಲಿ ಚಿಂಟು ಮತ್ತು ವಿವೇಕಾನಂದ ಕುಟುಂಬಸ್ಥರು ಆಪ್ತರನ್ನು ಗೆಳೆಯರ ಬಳಗ ಮೆರವಣಿಗೆ ಮಾಡಿದೆ.

ನಂತರ ಮನೆಯಲ್ಲಿ ಕೇಕ್ ಕತ್ತರಿಸಿ ಹುಟ್ಟು ಹಬ್ಬದ ರೀತಿಯಲ್ಲೇ ವಿವೇಕಾನಂದ ವಾಪಾಸ್ ಬಂದ ಖುಷಿಯನ್ನು ಆಚರಿಸಿದರು.

ಸುತ್ತಮುತ್ತಲ ಮನೆಯವರಿಗೆ ಗೆಳೆಯರ ಬಳಗಕ್ಕೆ ಹುಡುಕಾಡಲು ಸಹಾಯ ಮಾಡಿದ ಎಲ್ಲರಿಗೆ ಶೀನಾ ನಾಯ್ಕ ಕುಟುಂಬ ಸಿಹಿಯೂಟ ಹಾಕಿಸಿದೆ.

Continue Reading

LATEST NEWS

Trending