Connect with us

    LATEST NEWS

    500ರ ನೋಟಿನಲ್ಲಿ ಗಾಂಧಿ ಜಾಗದಲ್ಲಿ ನಟ ಅನುಪಮ್‌ ಖೇರ್‌..!?

    Published

    on

    ಮಂಗಳೂರು/ನವದೆಹಲಿ : 500 ರ ನೋಟಿನಲ್ಲಿ ಗಾಂಧೀಜಿಯ ಜಾಗದಲ್ಲಿ ನಟ ಅನುಪಮ್‌ ಖೇರ್ ಚಿತ್ರ ಮುದ್ರಿಸಿರುವ ಘಟನೆ ಗುಜರಾತ್‌ನಲ್ಲಿ ಬೆಳಕಿಗೆ ಬಂದಿದೆ. ಚಿನ್ನದ ವ್ಯಾಪಾರಿಯೊಬ್ಬ ಸುಮಾರು 1.60 ಕೋಟಿ ಮೌಲ್ಯದ ನೋಟುಗಳನ್ನು ಪ್ರಿಂಟ್‌ ಮಾಡಿಸಿದ್ದು, ನೋಟಿನಲ್ಲಿ ರಿಸರ್ವ್‌ ಬ್ಯಾಂಕ್ ಆಫ್‌ ಇಂಡಿಯಾ ಬದಲಾಗಿ, ರೆಸೋಲ್ ಬ್ಯಾಂಕ್ ಆಫ್‌ ಇಂಡಿಯಾ ಎಂದು ಬರೆಯಲಾಗಿದೆ.

    ಗುಜರಾತ್‌ನ ಅಹಮದಾಬಾದ್‌ನಲ್ಲಿ ಈ ನಕಲಿ ನೋಟು ಪತ್ತೆಯಾಗಿದ್ದು, ಪೊಲೀಸರು ಈ ನಕಲಿ ನೋಟುಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ನಟ ಅನುಪಮ್ ಖೇರ್‌ ಕೂಡ ಅಚ್ಚರಿ ವ್ಯಕ್ತಪಡಿಸಿ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. 500 ರ ನೋಟಿನಲ್ಲಿ ತನ್ನ ಫೋಟೋ ಮುದ್ರಣವಾಗಿರುವುದು ನೋಡಿದ್ರೆ ಏನು ಬೇಕಾದ್ರೂ ಆಗಬಹುದು ಎಂದಿದ್ದಾರೆ.

    ಎಲ್ಲಿಂದ ಬಂತು ನೋಟು?

    ಗುಜರಾತ್ ಉದ್ಯಮಿ ಮೆಹುಲ್ ಥಕ್ಕರ್ ಎಂಬಾತನಿಂದ ಈ ನಕಲಿ ನೋಟು ವಶಕ್ಕೆ ಪಡೆಯಲಾಗಿದ್ದು, ಆತ ಇದು ತನ್ಗ ವ್ಯಾಪಾರಿಯೊಬ್ಬ ನಗದಾಗಿ ನೀಡಿದ ಹಣ ಎಂದು ಹೇಳಿದ್ದಾನೆ. ಮೆಹುಲ್ ಥಕ್ಕರ್ ಎಂಬ ಈ ವ್ಯಾಪಾರಿಯ ಬ್ಯಾಗ್ ಪರಿಶೀಲಿಸಿದಾಗ ನೋಟುಗಳು ಪತ್ತೆಯಾಗಿತ್ತು. ನೋಟಿನಲ್ಲಿ ಅನುಪಮ್‌ ಖೇರ್ ಫೋಟೋ ಇರುವುದನ್ನು ಗಮನಿಸಿದ ಪೊಲೀಸರು ಇದು ನಕಲಿ ನೋಡು ಅನ್ನೋದು ಗೊತ್ತಾಗಿತ್ತು. ಹೀಗಾಗಿ ವಿಚಾರಣೆ ನಡೆಸಿದಾಗ ಮೆಹುಲ್ ಥಕ್ಕರ್ ಇದು ವ್ಯಾಪಾರಿಯೊಬ್ಬರು ನೀಡಿದ ಹಣ ಎಂದಿದ್ದಾನೆ.

    ಇದನ್ನೂ ಓದಿ : ಅಮಾನವೀಯ ಘಟನೆ : ಮಣ್ಣಿನಲ್ಲಿ ಜೀವಂತ ಹೂತಿದ್ದ ಗಂಡು ಮಗು ಪತ್ತೆ

    ಇದೀಗ ಆತ ನೀಡಿದ ದೂರಿನ ಮೇರೆಗೆ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಸಲಿಯಂತೆ ಕಾಣುವ 500 ನಕಲಿ ನೋಟಿನಲ್ಲಿ ಅನುಪಮ್‌ ಖೇರ್ ಚಿತ್ರ ಹಾಗೂ ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ ಅನ್ನೋದನ್ನ ತಪ್ಪಾಗಿ ಬರೆಯಲಾಗಿದೆ. ಈ ನಕಲಿ ನೋಟು ಎಲ್ಲಿಂದ ಮುದ್ರಿಸಲಾಗುತ್ತಿದೆ ಮತ್ತು ಎಷ್ಟು ನೋಟುಗಳು ಚಲಾವಣೆ ಆಗಿದೆ ಅನ್ನೋದು ತನಿಖೆಯಿಂದ ಗೊತ್ತಾಗಬೇಕಾಗಿದೆ.

    LATEST NEWS

    ದೇವರನ್ನು ರಾಜಕೀಯದಿಂದ ದೂರವಿಡಿ ; ಸುಪ್ರೀಂ ಕೋರ್ಟ್ ಸೂಚನೆ..!

    Published

    on

    ನವ ದೆಹಲಿ : ತಿರುಪತಿ ಲಡ್ಡು ವಿವಾದದಲ್ಲಿ ಆಂಧ್ರ ಸಿಎಂ ಚಂದ್ರಬಾಬು ನಾಯ್ಡುಗೆ ಸುಪ್ರೀಂ ಕೋರ್ಟ್‌ ಚಾಟಿ ಬೀಸಿದೆ. ದೇವರನ್ನು ರಾಜಕೀಯದಿಂದ ಹೊರಗೆ ಇಡಿ ಎಂದು ಕೋರ್ಟ್‌ ಹೇಳಿದೆ. ಕನಿಷ್ಟ ಪಕ್ಷ ದೇವರುಗಳನ್ನು ರಾಜಕೀಯದಿಂದ ದೂರ ಇಡಬೇಕು ಎಂದು ಹೇಳಿರುವ ಸುಪ್ರೀಂ ಕೋರ್ಟ್‌, ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬಳಸಲಾಗಿದೆ ಎಂದು ಸಿಎಂ ಚಂದ್ರಬಾಬು ನಾಯ್ಡು ಅವರ ಹೇಳಿಕೆಯನ್ನೇ ಪ್ರಶ್ನೆ ಮಾಡಿದೆ. ಸಿಎಂ ಮಾಡಿರುವ ಆರೋಪಕ್ಕೆ ಸಾಕ್ಷಿ ಒದಗಿಸುವಂತೆ ಕೋರ್ಟ್‌ ಸೂಚನೆ ನೀಡಿದೆ. ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಕೆ.ವಿ ವಿಶ್ವನಾಥನ್‌ ಅವರ ಪೀಠವು ಸಿಎಂ ಚಂದ್ರಬಾಬು ನಾಯ್ಡು ಅವರು ನೀಡಿದ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿದೆ.

    ಸಾಂವಿಧಾನಕವಾಗಿ ಉನ್ನತ ಹುದ್ದೆಯಲ್ಲಿ ಇರುವ ವ್ಯಕ್ತಿಯಾಗಿ ಈ ರೀತಿ ಕೋಟ್ಯಾಂತರ ಜನರ ಭಾವನೆ ಮೇಲೆ ಪರಿಣಾಮ ಬೀರುವ ಹೇಳಿಕೆ ನೀಡಬಾರದು ಎಂದು ಪೀಠ ಹೇಳಿದೆ. ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು ಬಳಸಲಾಗಿದೆ ಎಂಬ ವಿಚಾರವಾಗಿ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಲು ಕೋರಿ ಸಲ್ಲಿಸಿದ ಅರ್ಜಿಗಳನ್ನು ಪೀಠವು ವಿಚಾರಣೆ ನಡೆಸುತ್ತಿದೆ. ಈ ಸಂದರ್ಭದಲ್ಲಿ ದೇವರನ್ನು ರಾಜಕೀಯದಿಂದ ದೂರ ಇಡಬೇಕು ಎಂದು ನಿರೀಕ್ಷಿಸುವುದಾಗಿ ಪೀಠ ಆಂಧ್ರ ಸಿಎಂ ಚಂದ್ರಬಾಬು ನಾಯ್ಡುಗೆ ಚಾಟಿ ಬೀಸಿದೆ. ಮುಂದಿನ ವಿಚಾರಣೆಯನ್ನು ಅಕ್ಟೋಬರ್ 3 ಕ್ಕೆ ಮುಂದೂಡಲಾಗಿದೆ.

    Continue Reading

    LATEST NEWS

    ಬಾವಿಯ ಕಾಂಪೌಂಡ್‌ ಸ್ವಚ್ಛಗೊಳಿಸುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾ*ವು

    Published

    on

    ಮಂಗಳೂರು: ಬಾವಿಯ ಕಾಂಪೌಂಡ್‌ ಸ್ವಚ್ಛಗೊಳಿಸುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾ*ವನ್ನಪ್ಪಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕೋಟೆಕಾರುನಲ್ಲಿ ಸ್ಥಳ ಕಾಳಿಕಾಂಬ ದೇವಸ್ಥಾನದ ಬಳಿಯ ನೆತ್ತಿಲ ಎಂಬಲ್ಲಿ ನಡೆದಿದೆ.

    ನವೀನ್ ಬೆಳ್ಳಾಡ(48) ಮೃತ ವ್ಯಕ್ತಿ. ನವೀನ್ ಅವರು ಭಾನುವಾರ ಸಂಜೆ ಮನೆಯ ಹಿಂಭಾಗದ ಬಾವಿಯ ಕಾಂಪೌಂಡ್ ಸ್ವಚ್ಛಗೊಳಿಸುತ್ತಿದ್ದರು. ಈ ವೇಳೆ ಆಯ ತಪ್ಪಿ ಬಾವಿಗೆ ಬಿದ್ದು ಮೃ*ತಪಟ್ಟಿದ್ದಾರೆ. ಮನೆಯೊಳಗೆ ನವೀನ್ ಕಾಣದಾಗ ಪತ್ನಿ ಮತ್ತು ಮಕ್ಕಳು ಹುಡುಕಾಡಿ ಬಾವಿಯ ಬಳಿ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ.

    ಸ್ಥಳೀಯರು ಸೇರಿ ನವೀನ್ ರನ್ನು ಬಾವಿಯಿಂದ ಮೇಲಕ್ಕೆತ್ತಿದ್ದು ಅದಾಗಲೇ ಅವರು ಮೃ*ತಪಟ್ಟಿದ್ದರು ಎನ್ನಲಾಗಿದೆ. ಸೆಂಟ್ರಿಗ್ ಕೆಲಸ ಮಾಡುತ್ತಿದ್ದ ನವೀನ್ ಅವರಿಗೆ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ಪುತ್ರಿ ಮತ್ತು ನಾಲ್ಕನೇ ತರಗತಿ ಓದುತ್ತಿರುವ ಪುತ್ರನಿದ್ದಾನೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

    Continue Reading

    DAKSHINA KANNADA

    ಕಾರ್ಕಳದಲ್ಲಿ ಭೀಕರ ಅಪಘಾತ; ತಂದೆ ಸಹಿತ ಮೂರು ಮಕ್ಕಳ ದುರ್ಮರಣ

    Published

    on

    ಕಾರ್ಕಳ : ಕಾರ್ಕಳ – ಧರ್ಮಸ್ಥಳ ಹೆದ್ದಾರಿಯ ಹೊಸ್ಮಾರು ಪಾಜೆಗುಡ್ಡೆ ಬಳಿ ಇಂದು (ಸೆ.30) ಭೀಕರ ಅಪಘಾತ ಸಂಭವಿಸಿದೆ. ಮಿನಿ ಲಾರಿ ಮತ್ತು ಬೈಕ್ ಮುಖಾಮುಖಿಯಾಗಿ ಡಿಕ್ಕಿ ಹೊಡೆದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ.


    ವೇಣೂರಿನಿಂದ ನಲ್ಲೂರು ಕಡೆಗೆ ಬರುತ್ತಿದ್ದ ಬೈಕ್‌ಗೆ ಕಾರ್ಕಳದಿಂದ ಗುರುವಾಯನಕೆರೆಯತ್ತ ಸಾಗುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ.
    ಬೈಕ್ನಲ್ಲಿ ಪತಿ, ಪತ್ನಿ ಮತ್ತು ಮೂವರು ಮಕ್ಕಳಿದ್ದರು. ತಂದೆ ಸುರೇಶ್ ಆಚಾರ್ಯ (36), ಮಕ್ಕಳಾದ ಸಮಿಕ್ಷಾ (7) ಸುಶ್ಮಿತಾ (5) ಸುಶಾಂತ್ (2) ಮೃತಪಟ್ಟವರು. ತಾಯಿ ಮೀನಾಕ್ಷಿ (32) ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Continue Reading

    LATEST NEWS

    Trending