Connect with us

    FILM

    ನಟ ದರ್ಶನ್ ಬಂಧನ; ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ

    Published

    on

    ಬೆಂಗಳೂರು: ರೇಣುಕಾಸ್ವಾಮಿ ಕೊ*ಲೆ ಕೇಸ್‌ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್‌ ಬಂಧನವಾಗಿದೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ತಿಳಿಸಿದ್ದಾರೆ.


    ರೇಣುಕಾಸ್ವಾಮಿ ಕೊ*ಲೆ ಕೇಸ್ ದರ್ಶನ್‌ರನ್ನು ಬಂಧಿಸಲಾಗಿದೆ. ಬಂಧಿಸಿರುವ ಆರೋಪಿಗಳ ವಿಚಾರಣೆ ಮಾಡುವಾಗ ದರ್ಶನ್ ಹೆಸರು ಬಂದಿದೆ ಎಂಬ ಮಾಹಿತಿ ಇದೆ. ಇದರ ಮೇಲೆ ಇನ್ನಷ್ಟು ತನಿಖೆ ನಡೆಯಬೇಕಿದೆ. ಅಲ್ಲಿಯವರೆಗೂ ಇದರ ಬಗ್ಗೆ ಏನು ಹೇಳೋಕೆ ಆಗಲ್ಲ ಎಂದು ಪರಮೇಶ್ವರ್ ಅವರು ಮಾತನಾಡಿದ್ದಾರೆ.

    ಈ ಕೇಸ್‌ನಲ್ಲಿ ಅವರು ನೇರವಾಗಿ ಭಾಗಿಯಾಗಿದ್ದಾರಾ ಇಲ್ವಾ? ಯಾವ ಕಾರಣ ಕೊ*ಲೆ ನಡೆದಿದೆ ಎಂದು ಇನ್ನೂ ತನಿಖೆ ಬಳಿಕ ತಿಳಿಯಬೇಕಿದೆ. ಈ ಸಂದರ್ಭದಲ್ಲಿ ಹೆಚ್ಚೇನು ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ. ಸೋಶಿಯಲ್ ಮೀಡಿಯಾ ಕಾಮೆಂಟ್ ಬಗ್ಗೆ ಗೊತ್ತಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಮಾತನಾಡಿದ್ದಾರೆ.

    ಇದನ್ನೂ ಓದಿ : ದರ್ಶನ್ ಅರೆಸ್ಟ್‌ ಬೆನ್ನಲ್ಲೇ ಪವಿತ್ರಾ ಗೌಡ ಪೊಲೀಸ್ ವಶ..!!

    ಚಿತ್ರದುರ್ಗದ ರೇಣುಕಾಸ್ವಾಮಿ, ಪವಿತ್ರಾ ಗೌಡ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಪೋಸ್ಟ್ ಮಾಡಿದ್ದರು. ಈ ಪೋಸ್ಟ್ ಮಾಡಿದ ನಂತರ ರೇಣುಕಾಸ್ವಾಮಿರನ್ನು ಜೂನ್ 9ರಂದು ಹ*ತ್ಯೆ ಮಾಡಲಾಗಿತ್ತು. ಕೊ*ಲೆ ಮಾಡಿದ ಇಬ್ಬರು ಅರೋಪಿಗಳ ಜೊತೆ ದರ್ಶನ್ ನಿರಂತರ ಸಂಪರ್ಕದಲ್ಲಿದ್ದರು ಎಂಬ ಆರೋಪ ಕೇಳಿ ಬಂದಿದೆ. ಕೊ*ಲೆಗೆ ದರ್ಶನ್ ಸುಪಾರಿ ನೀಡಿದ್ದಾರೆ ಎಂಬ ಆರೋಪದಲ್ಲಿ ದರ್ಶನ್ ಅವರನ್ನು ಬಂಧಿಸಲಾಗಿದೆ.

    FILM

    ಕನ್ನಡತಿ ರಂಜನಿ ರಾಘವನ್‌ಗೆ ‘ಯುವ ಸಾಹಿತ್ಯ ರತ್ನ’ ಪ್ರಶಸ್ತಿಯ ಗರಿ..!! ಈ ಬಗ್ಗೆ ರಂಜನಿ ಹೇಳಿದ್ದೇನು?

    Published

    on

    ಬೆಂಗಳೂರು: ಪುಟ್ಟಗೌರಿ ಧಾರಾವಾಹಿ ಮೂಲಕ ಮನೆಮಾತಾಗಿದ್ದ ರಂಜನಿ ರಾಘವನ್ ಕನ್ನಡತಿ ಸೀರಿಯಲ್ ಮೂಲಕ ಅತೀ ಹೆಚ್ಚು ಮೆಚ್ಚುಗೆಯನ್ನು ಪಡೆದಿದ್ದಾರೆ. ಈ ಧಾರಾವಾಹಿ ಮೂಲಕ ಕನ್ನಡಿಗರ ಮನಸ್ಸನ್ನು ಗೆದ್ದಿದ್ದಾರೆ. ತನ್ನ ಸ್ವಚ್ಛಂದವಾದ ಕನ್ನಡದಿಂದಾಗಿ ಕನ್ನಡಿಗರ ಹೃದಯ ಕದ್ದ ನಟಿ. ನಟನೆಯಲ್ಲಿ ಮಾತ್ರವಲ್ಲದೇ ಬರಹದಲ್ಲೂ ಸೈ ಎನಿಸಿಕೊಂಡಿದ್ದಾರೆ ರಂಜನಿ.

    ಒಳ್ಳೆಯ ಬರಹಗಾರ್ತಿಯೂ ಆಗಿರುವ ರಂಜನಿ ರಾಘವನ್ ಇತ್ತೀಚೆಗೆ ‘ಕಥೆ ಡಬ್ಬಿ’ ಎಂಬ ಕಥಾಸಂಕಲನ ಹಾಗೂ ‘ಸ್ವೈಪ್‌ರೈಟ್’ ಎಂಬ ಕಾದಂಬರಿಯನ್ನು ಬರೆದಿದ್ದು ಸಾಹಿತ್ಯ ಲೋಕದಲ್ಲಿ ಮಿಂಚುತ್ತಿದ್ದಾರೆ. ಧಾರಾವಾಹಿ, ಸಿನೆಮಾ ಶೂಟಿಂಗ್‌ಗಳಲ್ಲಿ ಬ್ಯುಸಿ ಇದ್ದರೂ ಬಿಡುವ ಮಾಡಿಕೊಂಡು ಕಥೆ ಬರೆಯುತ್ತಾರೆ. ಇನ್ನು ನಟನೆಯಲ್ಲಿ ಸದಾ ಬ್ಯುಸಿ ಇರುವವರು ಬಿಡುವು ಮಾಡಿಕೊಳ್ಳುವುದೇ ಕಷ್ಟ. ಈ ಮಧ್ಯೆ ರಂಜನಿ ತಮ್ಮ ಸಾಹಿತ್ಯ ಆಸಕ್ತಿಗಾಗಿ ಬಿಡುವು ಮಾಡಿಕೊಂಡು ಕಥೆಗಳನ್ನು ಬರೆಯುತ್ತಾರೆ.

    ಕುಡಿದ ಅಮಲಿನಲ್ಲಿ ತೇಲಾಡಿದ ಉರ್ಫಿ ಜಾವೇದ್..!

    ಇದೀಗ ಇವರ ಸಾಹಿತ್ಯಾಭಿರುಚಿಗಾಗಿ ಹೆಮ್ಮೆಯ ಗರಿಯೊಂದು ಮುಡಿಗೇರಿದೆ. ಇವರ ಸಾಹಿತ್ಯ ಪ್ರೇಮವನ್ನು ಗುರುತಿಸಿ ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕ ಸಂಘದ ವತಿಯಿಂದ “ಯುವ ಸಾಹಿತ್ಯ ರತ್ನ ಬಿರುದು” ನೀಡಿ ಗೌರವಿಸಲಾಗಿದೆ. ಪ್ರಶಸ್ತಿ ಜೊತೆ ವೀಡಿಯೋ ಮಾಡಿ ರಂಜನಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಜೊತೆಗೆ ಅವರ ಕಥೆ ಡಬ್ಬಿ ಸಾಹಿತ್ಯಕ್ಕೆ ಪ್ರೋತ್ಸಾಹ ನೀಡಿದ ಸಾಹಿತ್ಯಾಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ. “ಈ ಹಿಂದೆ ನಾನು ಬರೆದ ಕಥೆ ಡಬ್ಬಿ ಪುಸ್ತಕಕ್ಕೆ ಬಹಳಷ್ಟು ಜನ ಬೆಂಬಲ ವ್ಯಕ್ತಪಡಿಸಿದ್ದೀರಿ. ಹಾಗೆ ತುಂಬಾ ಜನ ನನ್ನ ಫ್ಯಾನ್ ಪೇಜ್ ಮೂಲಕ ಪ್ರಮೋಷನ್ ಗಳನ್ನು ನೀಡಿದ್ದೀರಿ ನಿಮಗೆಲ್ಲರಿಗೂ ಧನ್ಯವಾದ ಎಂದು ಹೇಳಿದ್ದಾರೆ.

    ಈ ಪ್ರಶಸ್ತಿಯನ್ನು ಪಡೆದುಕೊಳ್ಳಲು ಮುಜುಗರ ಎನಿಸುತ್ತಿದೆ. ಈ ಪ್ರಶಸ್ತಿಯನ್ನು ಎಲ್ಲಾ ಸಾಹಿತಿಗಳಿಗೆ, ಓದುಗಾರರಿಗೆ ಮತ್ತು ಅಭಿಮಾನಿಗಳಿಗೆ ನಾನು ಅರ್ಪಣೆ ಮಾಡುತ್ತೇನೆ ಎಂದು ಹೇಳಿದರು.

    Continue Reading

    FILM

    ಕುಡಿದ ಅಮಲಿನಲ್ಲಿ ತೇಲಾಡಿದ ಉರ್ಫಿ ಜಾವೇದ್..!

    Published

    on

    ಮುಂಬೈ/ಮಂಗಳೂರು: ಬಾಲಿವುಡ್  ಉರ್ಫಿ ಜಾವೇದ್ ಸದಾ ಒಂದಲ್ಲ ಒಂದು ಸುದ್ದಿಯಲ್ಲಿರುತ್ತಾರೆ. ಫ್ಯಾಷನ್ ಐಕಾನ್ ಆಗಿರುವ ಈಕೆ ಹೆಚ್ಚಾಗಿ ತಾವು ಉಡುವ ಉಡುಗೆಗಳಿಂದ ಸದಾ ಸುದ್ದಿಯಲ್ಲಿರುತ್ತಾರೆ. ಡಿಫೆರೆಂಟ್ ಲುಕ್‌ ಗೆ ಮಾರು ಹೋಗಿರುವ ಈಕೆ ವಿಭಿನ್ನ ರೀತಿಯಲ್ಲಿ ಜನರ ಮುಂದೆ ಕಾಣಿಸಿಕೊಳ್ಳುತ್ತಾರೆ.

    ಇದೀಗ ಮತ್ತೊಮ್ಮೆ ಉರ್ಫಿ ಜಾವೇದ್ ಸುದ್ದಿಯಲ್ಲಿದ್ದಾರೆ. ಈ ಬಾರಿ ಬಟ್ಟೆಯಿಂದಾಗಿ ಸುದ್ದಿಯಾಗಿಲ್ಲ. ಕುಡಿದ ಅಮಲಿನಲ್ಲಿ ತೇಲಾಡಿರುವ ವೀಡಿಯೋದಿಂದಾಗ ಹೋಟೆಲ್ ವೊಂದರಿಂದ ಹೊರ ಬರಲು ಸಾಧ್ಯವಾಗದೆ ಪೇಚಾಡುತ್ತಿರುವುದು ಕಂಡು ಬಂದಿದೆ. ಇದೀಗ ಈ ವೀಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    ಸಲ್ಮಾನ್ ಖಾನ್ ಜೊತೆ ಹುಟ್ಟುಹಬ್ಬ ಆಚರಿಸಿದ ಧೋನಿ..! ಪತಿಯ ಆಶೀರ್ವಾದ ಪಡೆದ ಸಾಕ್ಷಿ ಧೋನಿ

    ಬಾಂದ್ರಾದಲ್ಲಿರುವ ಐಷಾರಾಮಿ ಹೋಟೆಲ್‌ನಿಂದ ಪಿಂಕ್ ಮಿನಿ ಡ್ರೆಸ್ ಹಾಗೂ ಹೈ ಹೀಲ್ಸ್ ಹಾಕಿದ್ದ ಉರ್ಫಿ ನಡೆಯಲೂ ಸಾಧ್ಯವಾಗದೆ ಸ್ನೇಹಿತೆಯ ಸಹಾಯದಿಂದ ಕಾರಿನತ್ತ ತೆರಳುತ್ತಿದ್ದರು. ಇನ್ನೂ ಸ್ನೇಹಿತೆ ಉರ್ಫಿಯನ್ನು ಸಂಭಾಲಿಸಲು ಹರಸಾಹಸ ಪಟ್ಟಿದ್ದಾರೆ. ಸ್ವತಃ ಉರ್ಫಿ “ ನನ್ನ ಕಾರು ಎಲ್ಲಿದೆ..? ನಾನು ಕುಡಿದಿದ್ದೇನೆ” ಎಂದು ಹೇಳಿದ್ದಾರೆ. ಇದೀಗ ಈ ವೀಡಿಯೋಗೆ ನೆಟ್ಟಿಗರು ಬೇರೆ ಬೇರೆ ರೀತಿಯಲ್ಲಿ ಕಮೆಂಟ್‌ಗಳನ್ನು ಹಾಕುತ್ತಿದ್ದಾರೆ.

    Continue Reading

    FILM

    ನಟ ದರ್ಶನ್, ಪವಿತ್ರಾ ಗೌಡ ಸೇರಿ ಎಲ್ಲ ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

    Published

    on

    ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊ*ಲೆ ಪ್ರಕರಣದ ಆರೋಪದಡಿ ಬಂಧಿತರಾಗಿರುವ ನಟ ದರ್ಶನ್ ತೂಗುದೀಪ್, ಪವಿತ್ರಾ ಗೌಡ ಸೇರಿ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಜುಲೈ 18 ರವರೆಗೆ ವಿಸ್ತರಿಸಿ 24ನೇ ಎಸಿಎಂಎಂ ಕೋರ್ಟ್ ಗುರುವಾರ(ಜು.4) ಆದೇಶ ಹೊರಡಿಸಿದೆ.


    ರೇಣುಕಾಸ್ವಾಮಿ ಕೊ*ಲೆ ಪ್ರಕರಣದ ಎರಡನೇ ಆರೋಪಿ ದರ್ಶನ್ ಹಾಗೂ ಇತರ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಇಂದು(ಜು.4) ಅಂತ್ಯವಾದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್​ ಮೂಲಕ ಜಡ್ಜ್​ ಮುಂದೆ ಆರೋಪಿಗಳನ್ನು ಹಾಜರುಪಡಿಸಲಾಗಿತ್ತು.

    ಇದನ್ನೂ ಓದಿ : WATCH : ಕೂದಲು ಕತ್ತರಿಸಿಕೊಂಡ ಹೀನಾ ಖಾನ್; ಗೆಲ್ಲಬೇಕು ಅಂದ್ರೆ ಕಠಿಣ ನಿರ್ಧಾರ ತೆಗೆದುಕೊಳ್ಳಲೇ ಬೇಕು ಎಂದ ನಟಿ

    ಎಲ್ಲ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸುವಂತೆ ಎಸ್​ಪಿಪಿ ರಿಮ್ಯಾಂಡ್ ಅರ್ಜಿ ಸಲ್ಲಿಸಿದ ಹಿನ್ನೆಲೆಯಲ್ಲಿ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನವನ್ನು ಜುಲೈ 18ರ ವರೆಗೆ ವಿಸ್ತರಿಸಿ ಕೋರ್ಟ್ ಆದೇಶಿಸಿದೆ.

    Continue Reading

    LATEST NEWS

    Trending