Thursday, March 23, 2023

ಬಾಲಿವುಡ್ ಹಿರಿಯ ನಟ ಸತೀಶ್ ಕೌಶಿಕ್ ಹೃದಯಾಘಾತದಿಂದ ನಿಧನ..!

ಬಾಲಿವುಡ್ ಹಿರಿಯ ನಟ ಸತೀಶ್ ಕೌಶಿಕ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 66 ವರ್ಷ ವಯಸ್ಸಾಗಿತ್ತು.

ಮುಂಬಯಿ :ಬಾಲಿವುಡ್ ಹಿರಿಯ ನಟ ಸತೀಶ್ ಕೌಶಿಕ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 66 ವರ್ಷ ವಯಸ್ಸಾಗಿತ್ತು.

ಬಾಲಿವುಡ್ ನಲ್ಲಿ ಅನೇಕ ಹಾಸ್ಯ ಪಾತ್ರಗಳಲ್ಲಿ ಮಿಂಚಿ, ನಿರ್ದೇಶಕ, ನಿರ್ಮಾಪಕರಾಗಿಯೂ ಖ್ಯಾತಿಗಳಿಸಿದ್ದ ಸತೀಶ್ ಕೌಶಿಕ್ ಗುರುಗ್ರಾಮ್‌ ನಲ್ಲಿ ಆಪ್ತರೊಬ್ಬರನ್ನು ಭೇಟಿಯಾಗಲು ತೆರಳುತ್ತಿದ್ದಾಗ ಅವರ ಆರೋಗ್ಯದಲ್ಲಿ ಏರುಪೇರಾಗಿ ಹೃದಯಾಘಾತವಾಗಿದೆ ಎಂದು ತಿಳಿದು ಬಂದಿದೆ.

ಏಪ್ರಿಲ್‌, 13, 1956 ರಲ್ಲಿ ಹರ್ಯಾಣದಲ್ಲಿ ಜನಿಸಿದ, ಸತೀಶ್‌ ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾ ಮತ್ತು ಫಿಲ್ಮ್ ಅಂಡ್ ಟೆಲಿವಿಷನ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಹಳೆಯ ವಿದ್ಯಾರ್ಥಿ ಮತ್ತು ರಂಗಭೂಮಿಯ ಮೂಲಕ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು.
ʼಮಿಸ್ಟರ್‌ ಇಂಡಿಯಾʼ, ʼದೀವಾನಾ ಮಸ್ತಾನಾʼ, ʼಬ್ರೀಕ್ ಲೇನ್‌ʼ‌,ʼಸಾಜನ್ ಚಲೇ ಸಸುರಲ್ʼ ಮುಂತಾದ ಜನಪ್ರಿಯ ಸಿನಿಮಾಗಳಲ್ಲಿ ನಟಿಸಿದ್ದಾರೆ.
ಇದಲ್ಲದೇ ಅವರು ನಿರ್ದೇಶನ ಮಾಡಿದ ಜನಪ್ರಿಯ ಸಿನಿಮಾಗಳತ್ತ ಗಮನ ಹರಿಸಿದರೆ, ʼರೂಪ್ ಕಿ ರಾಣಿ ಚೋರೋನ್ ಕಾ ರಾಜಾʼ, ʼಪ್ರೇಮ್ʼ, ʼಹಮ್ ಆಪ್ಕೆ ದಿಲ್ ಮೇ ರೆಹತೇ ಹೈʼ ,ʼತೇರೆ ನಾಮ್ʼ ಮುಂತಾದ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ.

ಇದೇ ಮಾ.7 ರಂದು ಸತೀಶ್‌ ಜಾವೇದ್ ಅಖ್ತರ್ ಅವರ ಹೋಳಿ ಪಾರ್ಟಿಯಲ್ಲಿ ಕೂಡ ಉತ್ಸಾಹದಿಂದ ಭಾಗಿಯಾಗಿದ್ದರು. ಸತೀಶ್‌ ಪತ್ನಿ ಹಾಗೂ ಮಗಳನ್ನು ಅಗಲಿದ್ದಾರೆ.

ನಟನ ನಿಧನಕ್ಕೆ ಬಾಲಿವುಡ್‌ ಸಿನಿರಂಗ ಕಂಬನಿ ಮಿಡಿದಿದೆ. “ಜೀವನದ ಅಂತಿಮ ಸತ್ಯ ಸಾವು ಎಂಬುದು ನನಗೆ ಗೊತ್ತು.

ನಾನು ನನ್ನ ಸ್ನೇಹಿತನ ಸಾವಿನ ವಿಷಯವನ್ನು ಬರೆಯುತ್ತೇನೆಂದು ಯಾವತ್ತೂ ಊಹಿಸಿಯೂ ಇರಲಿಲ್ಲ.

45 ವರ್ಷದ ಈ ಸ್ನೇಹತಕ್ಕೆ ಇಂಥ ಹಠಾತ್‌ ಪೂರ್ಣ ವಿರಾಮ ಬಿದ್ದಿದೆ. ನೀವು ಇಲ್ಲದೆ ಜೀವನ ಮೊದಲಿನಂತೆ ಇರುವುದಿಲ್ಲ ಸತೀಶ್‌ ಓಂ ಶಾಂತಿ” ಎಂದು ಸ್ನೇಹಿತ ಅನುಪಮ್‌ ಖೇರ್‌ ಬರೆದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದಿದ್ದ ಕುಮಟಾದ ಯುವತಿ ಡಿಡೀರ್ ನಾಪತ್ತೆ..! 

ಕುಟುಂಬಸ್ಥರ ಜೊತೆ ಉತ್ತರ ಕನ್ನಡದಿಂದ ದಕ್ಷಿಣ ಕನ್ನಡದ ಶ್ರೀ ಕ್ಷೇತ್ರಗಳನ್ನು ಸಂದರ್ಶಿಸಲು ಬಂದಿದ್ದ ಹದಿ ಹರೆಯದ ಯುವತಿ ನಾಪತ್ತೆಯಾಗಿದ್ದಾಳೆ.ಬೆಳ್ತಂಗಡಿ : ಕುಟುಂಬಸ್ಥರ ಜೊತೆ ಉತ್ತರ ಕನ್ನಡದಿಂದ ದಕ್ಷಿಣ ಕನ್ನಡದ ಶ್ರೀ ಕ್ಷೇತ್ರಗಳನ್ನು...

ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಜಿನೈಕ್ಯ..!

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಜೈನ ಮಠದ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಆವರು ಜಿನೈಕ್ಯರಾಗಿದ್ದಾರೆ.ಹಾಸನ : ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಜೈನ ಮಠದ ಸ್ವಸ್ತಿ ಶ್ರೀ...

40 ವರ್ಷಗಳಿಂದ ಅದೇ ಪೊಳ್ಳು ಭರವಸೆ : ಚುನಾವಣಾ ಬಹಿಷ್ಕಾರಕ್ಕೆ ಮುಂದಾದ ಸುಳ್ಯ ಅರಮನೆಗಾಯದ ಜನತೆ..!

ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಈ ಗ್ರಾಮದ ಜನ ಕಳೆದ 40 ವರ್ಷಗಳಿಂದ ಬಿದಿರಿನ ತೂಗು ಸೇತುವೆಯ ಮುಖಾಂತರ ಜೀವ ಭಯದಲ್ಲಿ ಜೀವನ ನಡೆಸುತಿದ್ದಾರೆ.ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ...