FILM
ಅಪ್ಪು ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಸಂತಾಪ
ನಟ ಪುನೀತ್ ರಾಜ್ಕುಮಾರ್ ಅವರ ನಿಧನಕ್ಕೆ ನಳಿನ್ಕುಮಾರ್ ಕಟೀಲ್ ಸಂತಾಪ
ಬೆಂಗಳೂರು: ‘ಪವರ್ ಸ್ಟಾರ್’ ಎಂದೇ ಖ್ಯಾತಿ ಪಡೆದಿದ್ದ ಕನ್ನಡ ಚಿತ್ರರಂಗದ ಯುವ ನಟರಾದ ಪುನೀತ್ ರಾಜ್ಕುಮಾರ್ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್ಕುಮಾರ್ ಕಟೀಲ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಕನ್ನಡ ಚಿತ್ರರಂಗದ ಪ್ರತಿಭಾವಂತ ಮತ್ತು ಪ್ರಖ್ಯಾತ ನಟರಾದ ಡಾ. ರಾಜ್ಕುಮಾರ್ ಅವರ ಪುತ್ರರಾದ ಪುನೀತ್ ಅವರು “ಅಪ್ಪು’ ಎಂದೇ ಖ್ಯಾತಿ ಪಡೆದಿದ್ದು ಕನ್ನಡಿಗರ ಕಣ್ಮಣಿ ಎನಿಸಿದ್ದರು. ಬಾಲ್ಯದಲ್ಲೇ ಚಿತ್ರರಂಗ ಪ್ರವೇಶಿಸಿದ್ದ ಅವರ ನಿಧನ ನಿಜಕ್ಕೂ ಆಘಾತಕರ ಸುದ್ದಿ.
ನಾಡಿನ ಸಮಸ್ತ ಕನ್ನಡಿಗರಿಗೆ ಈ ವಿಷಯ ಆಘಾತವನ್ನು ತಂದಿದೆ ಎಂದು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಜನರು ಶಾಂತಿ- ಸಂಯಮದಿಂದ ವರ್ತಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಮೃತರ ಕುಟುಂಬ, ಬಂಧುಮಿತ್ರರಿಗೆ ಹಾಗೂ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ನಳಿನ್ಕುಮಾರ್ ಕಟೀಲ್ ಅವರು ಪ್ರಾರ್ಥಿಸಿದ್ದಾರೆ.
FILM
ಶಿಲ್ಪಾ ಶೆಟ್ಟಿಗೆ ಶಾಕ್ ನೀಡಿದ ED; ಜಪ್ತಿ ಮಾಡಿದ ಆಸ್ತಿ ಎಷ್ಟು ಗೊತ್ತಾ!?
ಮುಂಬೈ : ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹಾಗೂ ಉದ್ಯಮಿ ರಾಜ್ ಕುಂದ್ರಾ ದಂಪತಿಗೆ ಜಾರಿ ನಿರ್ದೇಶನಾಲಯ ಅತಿದೊಡ್ಡ ಶಾಕ್ ನೀಡಿದೆ. ಜಾರಿ ನಿರ್ದೇಶನಾಲಯ ಅಧಿಕಾರಿಗಳು ಶಿಲ್ಪಾ ಶೆಟ್ಟಿ ದಂಪತಿಗೆ ಸೇರಿದ ಬರೋಬ್ಬರಿ 98 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹಾಗೂ ಫ್ಲಾಟ್ ಅನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.
ಉದ್ಯಮಿ ರಾಜ್ ಕುಂದ್ರಾ ಅವರನ್ನು ಬಿಟ್ಕಾಯಿನ್ ಸೇರಿದಂತೆ ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆ ನಡೆಸಲಾಗಿತ್ತು. ಈ ಹಿನ್ನೆಲೆಯಲ್ಲಿ ರಾಜ್ ಕುಂದ್ರಾ ಅವರಿಗೆ ಸಂಬಂಧಪಟ್ಟ ಸ್ಥಿರ ಮತ್ತು ಚರ ಆಸ್ತಿಯ ಜೊತೆಗೆ ಪುಣೆಯಲ್ಲಿರುವ ಬಂಗ್ಲೆ ಮತ್ತು ಷೇರುಗಳನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
2017ರಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ರಾಜ್ ಕುಂದ್ರಾ ಅವರನ್ನು 6,600 ಕೋಟಿ ರೂಪಾಯಿ ಹಣ ವರ್ಗಾವಣೆ ಮಾಡಿದ ಆರೋಪದಲ್ಲಿ ತನಿಖೆ ನಡೆಸಿತ್ತು. ಈ ಪ್ರಕರಣದಲ್ಲಿ ಬಿಟ್ಕಾಯಿನ್ ಮೂಲಕ ಹಲವರಿಗೆ ಶೇಕಡಾ 10 ರಷ್ಟು ಹಣ ರಿಟರ್ನ್ ಮಾಡುವ ಭರವಸೆ ನೀಡಿ ಮೋಸ ಮಾಡಿದ ಆರೋಪ ಕೂಡ ಕೇಳಿ ಬಂದಿತ್ತು. ಇದೇ ಹಗರಣದಲ್ಲಿ ತನಿಖೆ ನಡೆಸಿದ ಜಾರಿ ನಿರ್ದೇಶನಾಲಯ ಇದೀಗ ಆಸ್ತಿಯನ್ನು ವಶಕ್ಕೆ ಪಡೆದುಕೊಂಡಿದೆ ಎನ್ನಲಾಗಿದೆ. ಒಟ್ಟಾರೆ ಶಿಲ್ಪಾ ಶೆಟ್ಟಿ ಹಾಗೂ ಉದ್ಯಮಿ ರಾಜ್ ಕುಂದ್ರಾ ದಂಪತಿಯ 98 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಸದ್ಯ ಜಾರಿ ನಿರ್ದೇಶನಾಲಯದ ವಶದಲ್ಲಿದೆ.
FILM
ಅಂದು ಸುಮಲತಾ, ಇಂದು ಸ್ಟಾರ್ ಚಂದ್ರುಗೆ ಜೈ ಎಂದ ದರ್ಶನ್; ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕೆ ನಿಂತ ಡಿ ಬಾಸ್ ಏನಂದ್ರು?
ಮಂಡ್ಯ : ಲೋಕಸಭಾ ಚುನಾವಣೆಯ ಕಾವು ಹೆಚ್ಚಾಗುತ್ತಿದೆ. ಅಭ್ಯರ್ಥಿಗಳು ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಎಂದಿನಂತೆ ಮಂಡ್ಯ ಹೈ ವೋಲ್ಟೇಜ್ ಕ್ಷೇತ್ರ. ಹೇಗಾದರೂ ಈ ಕ್ಷೇತ್ರ ತಮ್ಮದಾಗಿಸಿಕೊಳ್ಳಬೇಕು ಎಂದು ಅತ್ತ ಬಿಜೆಪಿ+ ಜೆಡಿಎಸ್ , ಇತ್ತ ಕಾಂಗ್ರೆಸ್ ಶ್ರಮಿಸುತ್ತಿದೆ.
ಕಳೆದ ಬಾರಿ ಸ್ವತಂತ್ರ ಅಭ್ಯರ್ಥಿಯಾಗಿ ನಿಂತಿದ್ದ ಸುಮಲತಾಗೆ ಮಂಡ್ಯ ಜನತೆ ಜೈ ಎಂದಿದ್ದರು. ಸುಮಲತಾ ಗೆಲುವಿಗಾಗಿ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ – ರಾಕಿಂಗ್ ಸ್ಟಾರ್ ಯಶ್ ಜೋಡೆತ್ತುಗಳಾಗಿ ಅಬ್ಬರಿಸಿದ್ದರು. ಆದರೆ, ಈ ಬಾರಿ ಎಲ್ಲವೂ ಉಲ್ಟಾ ಆಗಿದೆ. ಸುಮಲತಾ ‘ಕಮಲ’ ಹಿಡಿದು ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ. ಅಚ್ಚರಿಯ ಬೆಳವಣಿಗೆ ಎಂಬಂತೆ ದರ್ಶನ್ ಕಾಂಗ್ರೆಸ್ ಪರ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ.
ಸ್ಟಾರ್ ಚಂದ್ರು ಪರ ದರ್ಶನ್ :
ಸುಮಲತಾ ಜೊತೆ ಇರುತ್ತೇನೆ ಎಂದಿದ್ದ ಡಿ ಬಾಸ್ ಈ ಬಾರಿ ಕಾಂಗ್ರೆಸ್ ಪರ ಪ್ರಚಾರದಲ್ಲಿ ತೊಡಗಿದ್ದಾರೆ. ಬಿಜೆಪಿ – ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಶತಾಯಗತಾಯ ಸೋಲಿಸಲೇಬೇಕು ಎಂದು ಕಾಂಗ್ರೆಸ್ ಪಣತೊಟ್ಟಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ವೆಂಕಟರಮಣೇಗೌಡ(ಸ್ಟಾರ್ ಚಂದ್ರು) ಕಣದಲ್ಲಿದ್ದು, ಅವರ ಪರ ದರ್ಶನ್ ಪ್ರಚಾರದ ಅಖಾಡಕ್ಕೆ ಧುಮುಕಿದ್ದಾರೆ.
ವ್ಯಕ್ತಿ ಪರ ಅಂದ ದರ್ಶನ್ :
ದರ್ಶನ್ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಮತಯಾಚನೆಗೆ ಇಳಿದಿರುವುದರಿಂದ ಹಲವು ಅನುಮಾನ ಹುಟ್ಟಿಸಿದ್ದವು. ಸುಮಲತಾ ಅವರೊಂದಿಗೆ ಸದಾ ಕಾಣಿಸಿಕೊಳ್ಳುವ ಡಿ ಬಾಸ್ ಬಿಜೆಪಿ ಪರವಾಗಿ ನಿಲ್ಲಲಿದ್ದಾರೆ ಎಂದೇ ಭಾವಿಸಲಾಗಿತ್ತು. ಆದರೆ, ಅವರು ಕಾಂಗ್ರೆಸ್ ಪರ ಬ್ಯಾಟ್ ಬೀಸಿ ಪ್ರಶ್ನೆ ಹುಟ್ಟು ಹಾಕಿದ್ದರು. ಇದಕ್ಕೆ ಇದೀಗ ಅವರೇ ಉತ್ತರ ನೀಡಿದ್ದಾರೆ.
ನಾನು ಯಾವುದೇ ಪಕ್ಷದ ಪರವಾಗಿ ಬರಲ್ಲ. ನಾನು ಬರೋದು ವ್ಯಕ್ತಿ ಪರವಾಗಿ. ಐದು ವರ್ಷದ ಹಿಂದೆ ನರೇಂದ್ರಸ್ವಾಮಿ ಸಹಾಯ ಮರೆಯಲ್ಲ. ಮೊದಲೇ ಶಾಸಕ ಉದಯ್ ಹೇಳಿದ್ರು ಸುಮಮ್ಮನಿಗೆ ಟಿಕೆಟ್ ಆಗಲಿಲ್ಲ. ಆದ್ರೆ ನಮಗೆ ಮಾಡಿ ಅಂದಿದ್ರು. ಮೊದಲು ಅವರು ಕೇಳಿದ ಕಾರಣ ನಾನು ಪ್ರಚಾರಕ್ಕೆ ಬಂದಿದ್ದೇನೆ. ಸ್ಟಾರ್ ಚಂದ್ರು ಅವರಿಗೆ ಎಲ್ಲರೂ ಮತ ಹಾಕಿ ಎಂದಿದ್ದಾರೆ.
ಇದನ್ನೂ ಓದಿ : ಕರಡಿಗೂ ಕ್ಯಾಪ್ಟನ್ ಗೂ ಫೈಟ್; ಮನೆಯಂಗಳದಲ್ಲೇ ಕಾದಾಟ! ವೀಡಿಯೋ ವೈರಲ್
ಎಲ್ಲೆಲ್ಲಿ ಪ್ರಚಾರ :
ಹಲಗೂರಿನಿಂದ ಸ್ಟಾರ್ ಚಂದ್ರು ಹಾಗೂ ಶಾಸಕ ಪಿ.ಎಂ. ನರೇಂದ್ರ ಸ್ವಾಮಿ ಅವರ ಜೊತೆಗೂಡಿ ದರ್ಶನ್ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ನಂತರ ಹುಸ್ಕೂರು, ಹಾಡ್ಲಿ ಸರ್ಕಲ್, ಮಳವಳ್ಳಿ, ಬೆಳಕವಾಡಿ, ಬೊಪ್ಪೇಗೌಡನಪುರ, ಸರಗೂರು ಹ್ಯಾಂಡ್ ಪೋಸ್ಟ್, ಪೂರಿಗಾಲಿ, ಟಿ. ಕಾಗೇಪುರ (ತಳಗವಾದಿ) ಬಂಡೂರು, ಹಿಟ್ಟನಹಳ್ಳಿ ಕೊಪ್ಪಲು, ಮಿಕ್ಕೆರೆ, ಕಿರುಗಾವಲು ಸಂತೆಮಾಳ, ಚನ್ನಪಿಳ್ಳೆಕೊಪ್ಪಲು ಗ್ರಾಮಗಳಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ.
FILM
ಚಿತ್ರೋದ್ಯಮಕ್ಕೆ ದ್ವಾರಕೀಶ್ ಕೊಡುಗೆ ಅಪಾರ ಎಂದ ಪ್ರಧಾನಿ ಮೋದಿ
ಬೆಂಗಳೂರು : ಹೃದಯಾ*ಘಾತದಿಂದ ಮಂಗಳವಾರ(ಏ.16) ಹಿರಿಯ ನಟ ದ್ವಾರಕೀಶ್ ಇಹಲೋಕ ತ್ಯಜಿಸಿದ್ದಾರೆ. ಅವರ ಅಗಲಿಕೆಗೆ ಚಿತ್ರರಂಗವೇ ಮರುಗಿದೆ. ಅನೇಕರು ಕಂಬನಿ ಮಿಡಿದಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ದ್ವಾರಕೀಶ್ ಅವರ ನಿ*ಧನಕ್ಕೆ ಸಂತಾಪ ಸೂಚಿಸಿದ್ದಾರೆ.
ದ್ವಾರಕೀಶ್ ಕೊಡುಗೆ ಅಪಾರ :
ದ್ವಾರಕೀಶ್ ಅವರ ಬಗ್ಗೆ ಪ್ರಧಾನಿ ಮೋದಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಚಲನಚಿತ್ರೋದ್ಯಮಕ್ಕೆ ದ್ವಾರಕೀಶ್ ಅವರ ಕೊಡುಗೆ ಅಪಾರವಾಗಿದೆ. ದಶಕಗಳ ಕಾಲ ಸದಾ ನೆನಪಿನಲ್ಲಿ ಉಳಿಯುವ ನಟನೆ ಹಾಗೂ ಸಿನಿಮಾಗಳನ್ನು ನೀಡಿದ್ದಾರೆ.
ಪ್ರೇಕ್ಷಕರನ್ನು ಸೆಳೆದಿಟ್ಟುಕೊಳ್ಳುವ ಹಾಗೂ ಹೊಸಬರನ್ನು ಬೆಂಬಲಿಸುವ ಮೂಲಕ ಕನ್ನಡ ಚಿತ್ರರಂಗವನ್ನು ರೂಪಿಸುವಲ್ಲಿ ಅವರ ಪಾತ್ರ ದೊಡ್ಡದು. ಅವರ ನಿಧನದಿಂದ ದುಃಖವಾಗಿದೆ. ಅವರ ಅದ್ಭುತ ಜರ್ನಿಯನ್ನು ನಾವು ಸ್ಮರಿಸುತ್ತೇವೆ. ಅವರ ಕುಟುಂಬಕ್ಕೆ ಮತ್ತು ಆತ್ಮೀಯರಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ. ಓಂ ಶಾಂತಿ ಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ : ಬ್ರಹ್ಮಾವರ : ಮನೆಯಲ್ಲಿ ಮತದಾನ ಮಾಡಿ ಕೆಲವೇ ಕ್ಷಣಗಳಲ್ಲಿ ಇಹಲೋಕ ತ್ಯಜಿಸಿದ ವೃದ್ಧೆ
ಅಂತಿಮ ದರ್ಶನ ಪಡೆದ ಗಣ್ಯರು :
ದ್ವಾರಕೀಶ್ ಅವರ ಪಾರ್ಥೀ*ವ ಶರೀರವನ್ನು ರವೀಂದ್ರ ಕಲಾಕ್ಷೇತ್ರದಲ್ಲಿ ಬೆಳಗ್ಗೆ 11.30ರವರೆಗೂ ಸಾರ್ವಜನಿಕ ದರ್ಶನಕ್ಕೆ ಇಡಲಾಗಿತ್ತು. ಕಿಚ್ಚ ಸುದೀಪ್, ಕೆ.ಮಂಜು, ಮಾಳವಿಕಾ ಅವಿನಾಶ್, ಸುಧಾರಾಣಿ, ರಾಘವೇಂದ್ರ ರಾಜ್ ಕುಮಾರ್, ಶ್ರೀ ಮುರಳಿ ಸೇರಿದಂತೆ ಚಿತ್ರರಂಗದ ಹಲವರು ಅಂತಿಮ ನಮನ ಸಲ್ಲಿಸಿದರು.
- chikkamagaluru7 days ago
ರಾಜ್ಯದ ಹಲವೆಡೆ ಮಳೆಯ ಸಿಂಚನ.. ಸಿಡಿಲಿನ ಅಬ್ಬರಕ್ಕೆ ಇಬ್ಬರ ಬ*ಲಿ..!!
- DAKSHINA KANNADA6 days ago
ಮೂಡುಬಿದಿರೆ : ಜೂನ್ 14 ರಿಂದ ಮೂರು ದಿನಗಳ ಕಾಲ ಹಲಸು – ವೈವಿಧ್ಯಮಯ ಹಣ್ಣುಗಳ ಮಹಾಮೇಳ
- DAKSHINA KANNADA4 days ago
ಮಂಗಳೂರಿನ ಮೊದಲ ಬಸ್ ಇದೇ ನೋಡಿ…!
- LATEST NEWS7 days ago
ನಿದ್ದೆ ಮಾಡುತ್ತಿರುವಂತೆ ನಟನೆ…ಆದರೆ ಮಾಡಿದ್ದು ಕಳ್ಳತನ…!