bengaluru
ನಟ ಉಪೇಂದ್ರ ವಿರುದ್ಧ FIR : ಸ್ವಿಚ್ ಆಫ್ ಮಾಡಿದ ಉಪೇಂದ್ರಗಾಗಿ ಪೊಲೀಸರಿಂದ ತೀವ್ರ ಶೋಧ..!
ಆಕ್ಷೇಪಾರ್ಹ ಪದ ಬಳಕೆ ಮಾಡಿ ದಲಿತರ ನಿಂದನೆ ಮಾಡಿರುವ ಕನ್ನಡ ಚಿತ್ರರಂಗದ ನಟ, ನಿರ್ದೇಶಕ ಉಪೇಂದ್ರ ಅವರಿಗೆ ಬೆಂಗಳೂರಿನ ಸಿ.ಕೆ. ಅಚ್ಚುಕಟ್ಟು ಪೊಲೀಸ್ ನೋಟಿಸ್ ಜಾರಿ ಮಾಡಿದ್ದರ ಬೆನ್ನಲ್ಲೇ ಉಪೇಂದ್ರ ಮೊಬೈಲ್ ಸ್ವಿಚ್ ಆಫ್ ಆಗಿದ್ದು ಪೊಲೀಸರಿಂದ ಶೋಧ ಕಾರ್ಯ ಆರಂಭವಾಗಿದೆ.
ಬೆಂಗಳೂರು : ಆಕ್ಷೇಪಾರ್ಹ ಪದ ಬಳಕೆ ಮಾಡಿ ದಲಿತರ ನಿಂದನೆ ಮಾಡಿರುವ ಕನ್ನಡ ಚಿತ್ರರಂಗದ ನಟ, ನಿರ್ದೇಶಕ ಉಪೇಂದ್ರ ಅವರಿಗೆ ಬೆಂಗಳೂರಿನ ಸಿ.ಕೆ. ಅಚ್ಚುಕಟ್ಟು ಪೊಲೀಸ್ ನೋಟಿಸ್ ಜಾರಿ ಮಾಡಿದ್ದರ ಬೆನ್ನಲ್ಲೇ ಉಪೇಂದ್ರ ಮೊಬೈಲ್ ಸ್ವಿಚ್ ಆಫ್ ಆಗಿದ್ದು ಪೊಲೀಸರಿಂದ ಶೋಧ ಕಾರ್ಯ ಆರಂಭವಾಗಿದೆ.
ಬೆಂಗಳೂರಿನ ಚೆನ್ನಮ್ಮನ ಅಚ್ಚುಕಟ್ಟು ಪ್ರದೇಶ ಪೊಲೀಸರು (Police) ನಟ ಉಪೇಂದ್ರ (Upendra) ಅವರಿಗೆ ನೋಟಿಸ್ ಕೊಡುತ್ತಿದ್ದಂತೆ ಫೋನ್ ಸ್ವಿಚ್ ಆಫ್ ಮಾಡಿಕೊಂಡು ಉಪೇಂದ್ರ ಎಸ್ಕೇಪ್ ಆಗಿದ್ದಾರೆ ಎಂದು ಹೇಳಲಾಗುತ್ತಿದೆ.
ಹೀಗಾಗಿ ಬೇರೆಯವರ ಕಡೆಯಿಂದ ಉಪೇಂದ್ರ ಅವರನ್ನು ಪೊಲೀಸರು ಸಂಪರ್ಕ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಲಾಗಿದೆ.
ಉಪೇಂದ್ರ ಅವರಿಗೆ ಸೇರಿದ ಎರಡು ಮನೆ ಹಾಗೂ ಅವರ ವಾಟ್ಸಪ್ ಗೆ ನೋಟಿಸ್ (Notice) ಕಳಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಮತ್ತೊಂದು ಕಡೆ ಉಪೇಂದ್ರ ಅವರ ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ನಟನ ಹೇಳಿಕೆಯ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಮತ್ತು ಸಂಶೋಧನ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ ಹಮ್ಮಿಕೊಂಡಿದ್ದು, ಉಪೇಂದ್ರ ಅವರ ಪ್ರತಿಕೃತಿ ದಹಿಸಿ ಪ್ರತಿಭಟನೆಗೆ ಮಾಡಲು ತೀರ್ಮಾನ ತೆಗೆದುಕೊಳ್ಳಲಾಗಿದೆ.
ಈ ಪ್ರತಿಭಟನೆಯಲ್ಲಿ ನೂರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಸೇರುವ ನಿರೀಕ್ಷೆಯಿದ್ದು, ಒಂದು ಕಡೆ ಪೊಲೀಸರಿಂದ ಕಡೆಯಿಂದ ಉಪೇಂದ್ರ ಗೆ ನೋಟಿಸ್ ಮತ್ತೊಂದು ಕಡೆ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಯಲಿದೆ.
ವಿವಾದಾತ್ಮಕ ಹೇಳಿಕೆಯಿಂದ ನಟ ಉಪೇಂದ್ರ ಇಕ್ಕಟ್ಟಿಗೆ ಸಿಲುಕಿದ್ದಾರೆ.
ಆಕ್ಷೇಪಾರ್ಹ ಪದ ಬಳಕೆ ಮಾಡಿದ ನಟ ಉಪೇಂದ್ರ ಅವರಿಗೆ ಬೆಂಗಳೂರಿನ ಸಿ.ಕೆ. ಅಚ್ಚುಕಟ್ಟು ಪೊಲೀಸ್ ನೋಟಿಸ್ ಜಾರಿ ಮಾಡಿದ್ದಾರೆ.
ತಕ್ಷಣ ವಿಚಾರಣೆಗೆ ಹಾಜರಾಗುಂತೆ ಉಪೇಂದ್ರ ಅವರಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ.
ಆಕ್ಷೇಪಾರ್ಹ ಪದ ಬಳಕೆ ಮಾಡಿ ಮಾತನಾಡಿದ್ದ ಆರೋಪದ ಮೇಲೆ ಉಪೇಂದ್ರ ವಿರುದ್ಧ. ಸಿ.ಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲು ಆಗಿತ್ತು.
ದೂರುದಾರ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಧುಸೂದನ್ ಸಮ್ಮುಖದಲ್ಲಿ ಕತ್ರಿಗುಪ್ಪೆ ಮನೆಯಲ್ಲಿ ಕೂತು ವಿಡಿಯೋ ಮಾಡಿರೋ ಹಿನ್ನಲೆ ಕತ್ರಿಗುಪ್ಪೆ ಮನೆ ಮಹಜರ್ ನಡೆಸಿದ್ದಾರೆ.
ಹೈಕೋರ್ಟ್ ಮೊರೆ ಹೋದ ಉಪೇಂದ್ರ :
ತಮ್ಮ ಮೇಲೆ ಎರಡು ಕಡೆ ದಾಖಲಾಗಿರುವ ಎಫ್.ಐ.ಆರ್ ಅನ್ನು ರದ್ದುಗೊಳಿಸುವಂತೆ ನಟ ಉಪೇಂದ್ರ (Upendra) ಹೈಕೋರ್ಟ್ (High Court) ಮೆಟ್ಟಿಲು ಏರಿದ್ದಾರೆ.
ಈಗಾಗಲೇ ತಾವು ಆಡಿದ ಮಾತಿನ ಬಗ್ಗೆ ಕ್ಷಮೆ ಕೇಳಿದ್ದೇನೆ.
ಜೊತೆಗೆ ಆ ವಿಡಿಯೋವನ್ನು ಸೋಷಿಯಲ್ ಮೀಡಿಯಾದಿಂದಲೇ ಡಿಲಿಟ್ ಮಾಡಿದ್ದೇನೆ.
ಯಾರ ಮನಸ್ಸಿಗೂ ನೋವು ಮಾಡುವ ಉದ್ದೇಶದಿಂದ ಆಡಿದ ಮಾತು ಅದಾಗಿರಲಿಲ್ಲವೆಂದು ಅವರು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.
bengaluru
ಬೆಂಗಳೂರಿನ ಗೋವರ್ಧನಗಿರಿ ಕ್ಷೇತ್ರದಲ್ಲಿ ಪುತ್ತಿಗೆ ಶ್ರೀಗಳ 50 ನೇ ಚಾತುರ್ಮಾಸ್ಯ ಸಂಭ್ರಮ
ಬೆಂಗಳೂರು: ಬೆಂಗಳೂರಿನ ಗೋವರ್ಧನಗಿರಿ ಕ್ಷೇತ್ರದಲ್ಲಿ 78 ದಿನಗಳ ಉಡುಪಿ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥರ 50ನೇ ಚಾತುರ್ಮಾಸ್ಯ ವೈಭವದಿಂದ ಸಮಾಪನಗೊಂಡಿತು.
ಪೂಜ್ಯ ಶ್ರೀಗಳ ಚಾತುರ್ಮಾಸ್ಯ ಕಾರ್ಯದ ನಡುವೆಯೂ ಕೋಟಿ ಕೋಟಿ ಗೀತಾ ಲೇಖನ ಯಜ್ಞದ ಕುರಿತಾಗಿ ವಿಶೇಷ ಕಾರ್ಯಕ್ರಮಗಳು ಬೆಂಗಳೂರಿನ ವಿವಿಧ ಕಡೆಗಳಲ್ಲಿ ಯಶಸ್ವಿಯಾಗಿ ನಡೆಯುತ್ತಿದ್ದು, ಪೂಜ್ಯ ಶ್ರೀಗಳ ದಿವ್ಯ ಉಪಸ್ಥಿತಿಯಲ್ಲಿ ಈ ಚಾತುರ್ಮಾಸ್ಯದ ಸಮಾರೋಪ, ಸನ್ಯಾಸ ಸ್ವೀಕಾರ ಮಾಡಿದ 50 ವರ್ಷದ ಸುವರ್ಣ ಮಹೋತ್ಸವ ಸಂಭ್ರಮದಿಂದ ಜರುಗಿತು.
ವೇದಮಂತ್ರಗಳ ಘೋಷಗಳೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಭಾವೀ ಪರ್ಯಾಯ ಮಠದ ಪುತ್ತಿಗೆ ಮಠದ ಸುಗುಣೇಂದ್ರ ಶ್ರೀಗಳು ಆಶೀರ್ವಚನವನ್ನು ನೀಡಿದರು. ವಿದ್ವಾನ್ ಮಾಲಗಿ ರಾಮಾಚಾರ್ಯರು, ವಿದ್ವಾನ್ ಕೇಶವ ಬಾಯಿರಿ ಅವರು ಶ್ರೀಗಳನ್ನು ಮಾಲಾರ್ಪಣೆ ಮಾಡಿದರು.
ರಾಜ್ಯದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸರಕಾರದ ಪರವಾಗಿ ಶುಭ ಹಾರೈಸಿದರು.
ಅಂತಾರಾಷ್ಟ್ರೀಯ ಮಟ್ಟದಲ್ಲೂ ಸುಗುಣೇಂದ್ರ ಶ್ರೀಗಳು ಅವರು ಪ್ರಸಿದ್ಧಿಯನ್ನು ಮಾಡಿದ್ದಾರೆ. ಧರ್ಮದ ಕೈಂಕರ್ಯವನ್ನು ಮಾಡಿದ್ದಾರೆ. ಇಷ್ಟೊಂದು ದೊಡ್ಡ ಮಟ್ಟದಲ್ಲಿ ಅವರು ಕಾರ್ಯಕ್ರಮ ಮಾಡಿದ್ದಾರೆ ಎಂದು ಅಭಿನಂದಿಸಿದರು.
ನಿಮಿಷದ ಬಳಿಕ ಖ್ಯಾತ ಚಲನಚಚಿತ್ರ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರು ಮಾತನಾಡಿ, ಇದೊಂದು ಎಲ್ಲರೂ ಸಂಭ್ರಮ ಪಡಬೇಕಾದ ವಿಚಾರವಾಗಿದೆ. ನಮ್ಮ ತಾಯಿ ಉಡುಪಿಯವಾಗಿದ್ದು, ಕೃಷ್ಣ ಮಠ ತುಂಬಾ ಹತ್ತಿರ. ಕೃಷ್ಣನ ಪರವಾಗಿ ಒಂದು ಚಿತ್ರ ಮಾಡಬೇಕೆಂಬ ಆಸೆಯನ್ನು ಶ್ರೀಗಳಲ್ಲಿ ಅರಿಕೆ ಮಾಡಿದ್ದೇನೆ ಎಂದರು.
ಇದೇ ಸಂದರ್ಭ ಶ್ರೀಗಳು ಭಕ್ತರಿಂದ ವಿಶೇಷ ಪೂಜೆಯನ್ನು ನೆರವೇರಿಸಿಕೊಂಡರು.
ಎಲ್ಲಾ ಭಕ್ತರೂ ಸೇರಿ ನನ್ನನ್ನು ಹರಸಿದ್ದೀರಿ. ಶ್ರೀ ಕೃಷ್ಣನ ಪೂಜಾ ಕಾರ್ಯ ಮಾಡಲು ಸಿಕ್ಕಿರುವುದು ಪುಣ್ಯಫಲ. ಭಕ್ತರು ನನಗೆ ಅರ್ಪಣೆ ಮಾಡಿದ ಎಲ್ಲವನ್ನೂ ನಾವು ಶ್ರೀಕೃಷ್ಣನಿಗೆ ಸಮರ್ಪಣೆ ಮಾಡಿದ್ದೇವೆ.
ನೀವು ಕೊಟ್ಟ ಸುವರ್ಣ ಅಭಿಷೇಕ ಸಂಕಲ್ಪ ಮಾಡಿದ ಸುವರ್ಣ ರಥಕ್ಕೆ ಅರ್ಪಣೆ ಮಾಡುತ್ತೇವೆ ಎಂದರು. ಎಲ್ಲಾ ಸಮಿತಿಯ ಭಕ್ತರಿಗೂ ಕೃಷ್ಣ ಭಗವದ್ಗನುಗ್ರಹ ಮಾಡಲಿ ಎಂದು ಹರಸಿದರು.
ಬಳಿಕ ಶ್ರೀಗಳು ಎಲ್ಲರಿಗೂ ಫಲಮಂತ್ರಾಕ್ಷತೆ ನೀಡಿದರು. ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಉಪಕುಲಪತಿ ಡಾ ಎಸ್ ಅಹಲ್ಯ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರದ ಭಕ್ತರಾದ ಮಂಜುನಾಥ ಹೆಗಡೆ, ಹಯಗ್ರೀವ ಆಚಾರ್ಯರು, ಸಮಿತಿ ಸದಸ್ಯ ಯು ಬಿ ವೆಂಕಟೇಶ್, ನಮ್ಮ ಕುಡ್ಲ ವಾಹಿನಿ ನಿರ್ದೇಶಕ ಲೀಲಾಕ್ಷ ಕರ್ಕೇರ, ಸಿಒಒ ಕದ್ರಿ ನವನೀತ್ ಶೆಟ್ಟಿ ಸಹಿತ ಗಣ್ಯಾತಿಗಣ್ಯರು ಈ ಸಂದರ್ಭ ಉಪಸ್ಥಿತರಿದ್ದರು.
ಜನವರಿ 18ರಿಂದ ಶ್ರೀಗಳ ಪರ್ಯಾಯ ಮಹೋತ್ಸವ ಆರಂಭವಾಗಲಿದೆ.
bengaluru
ಉಡುಪಿಯ ಬೆಡಗಿ ಶರೀನಾಗೆ ‘ಕರ್ನಾಟಕ ನೆಕ್ಸ್ಟ್ ಟಾಪ್ ಮಾಡೆಲ್’ ಟೈಟಲ್ ಪ್ರಶಸ್ತಿ
ಉಡುಪಿ: ಪ್ರತಿಷ್ಠಿತ ಎಂಬಿ ಗ್ರೂಪ್ ಇವರು ಬೆಂಗಳೂರಿನ ಹೋಟೆಲ್ ಫೊಕ್ಸ್ ಗ್ಲೋವ್ ಇಂಟರ್ನ್ಯಾಷನಲ್ ವೈಟ್ ಫೀಲ್ಡ್ ನಲ್ಲಿ ಸೆ.24 ರಂದು ಆಯೋಜಿಸಿದ್ದ ‘ಮಿಸ್ಟರ್ & ಮಿಸ್ ಟೀನ್ ಕರ್ನಾಟಕ’ ಇದರ ಸೀಸನ್ 4 ಸೌಂದರ್ಯ ಸ್ಪರ್ಧೆಯಲ್ಲಿ ಉಡುಪಿಯ ಪೆರಂಪಳ್ಳಿಯ ಶರೀನಾ ಮತಾಯಸ್ ರವರಿಗೆ ‘ಕರ್ನಾಟಕ ನೆಕ್ಸ್ಟ್ ಟಾಪ್ ಮಾಡೆಲ್’ ಟೈಟಲ್ ಪ್ರಶಸ್ತಿ ದೊರಕಿದೆ.
ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ 14 ಸ್ಪರ್ಧಿಗಳಲ್ಲಿ, ಪೆರಂಪಳ್ಳಿಯ ಶರೀನಾರವರಿಗೆ ಪ್ರತಿಷ್ಠಿತ ಟೈಟಲ್ ಪ್ರಶಸ್ತಿ ದೊರಕಿದ್ದು, ಫ್ಯಾಶನ್ ಮಾಡೆಲಿಂಗ್ ನ ಪ್ರಥಮ ಹೆಜ್ಜೆಯಲ್ಲಿಯೇ ಯಶಸ್ವಿಯ ಮೈಲುಗಲ್ಲು ಇಟ್ಟಿದ್ದಾರೆ.
ಪೆರಂಪಳ್ಳಿಯ ಸುನಿಲ್ ಮತ್ತು ಅನಿತಾ ಮತಾಯಸ್ ದಂಪತಿಗಳ ಮಗಳಾಗಿರುವ ಶರೀನಾ ಮತಾಯಸ್ ಪ್ರತಿಭಾವಂತೆಯಾಗಿದ್ದು, ಪ್ರಸ್ತುತ ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿದ್ದಾರೆ.
ಪೆರಂಪಳ್ಳಿಯ ಫಾತಿಮಾ ಮಾತೆ ದೇವಾಲಯದ ಐಸಿವೈಎಂ ಯುವ ಸಂಘಟನೆಯ ಸದಸ್ಯರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.
bengaluru
ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ನಟ ವಿಜಯ ರಾಘವೇಂದ್ರ ಭೇಟಿ..!
ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಕನ್ನಡ ಖ್ಯಾತ ನಟ ವಿಜಯ ರಾಘವೇಂದ್ರ ಸೆ.24ರಂದು ಭೇಟಿ ನೀಡಿದರು.
ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಸ್ಯಾಂಡಲ್ ವುಡ್ ನ ಖ್ಯಾತ ನಟ ವಿಜಯ ರಾಘವೇಂದ್ರ ಅವರು ಭೇಟಿ ನೀಡಿದರು.
ಬಳಿಕ ತಾಯಿ ದುರ್ಗಾಪರಮೇಶ್ವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಿ ಪ್ರಾರ್ಥಿಸಿದರು.
ಈ ಸಂದರ್ಭ ದೇವಳದ ವತಿಯಿಂದ ವಿಜಯ ರಾಘವೇಂದ್ರ ಅವರನ್ನು ಗೌರವಿಸಲಾಯಿತು.
ಈ ಹಿಂದೆ ಯಾವತ್ತೂ ನಟ ರಾಘು ಕಟೀಲು ಕ್ಷೇತ್ರಕ್ಕೆ ಪತ್ನಿ ಸ್ಪಂದನ ಜೊತೆ ಭೇಟಿ ನೀಡುತ್ತಿದ್ದರು.
ಆದರೆ ಈ ಬಾರಿ ಪತ್ನಿಯ ಅಗಲಿಕೆಯ ಬಳಿಕ ಇದೇ ಮೊದಲ ಬಾರಿಗೆ ಕ್ಷೇತ್ರಕ್ಕೆ ನಟ ಭೇಟಿ ನೀಡಿದ್ದು, ಮುಖದಲ್ಲಿ ಪತ್ನಿಯ ಅಗಲಿಕೆಯ ನೋವು ಕಂಡು ಬರ್ತಾ ಇತ್ತು.
- DAKSHINA KANNADA7 days ago
Ullala: 25 ಕೋಟಿ ರೂ. ಲಾಟರಿ ಒಲಿದಿದೆ ಎಂಬ ಲಿಂಕ್ ಕಳುಹಿಸಿ ಮೋಜಿನಾಟ..!
- FILM6 days ago
ಕುರೂಪಿಯಾದ ಹಾಲಿವುಡ್ ನಟಿ ಆ್ಯಮಿ ಜಾಕ್ಸನ್..!
- FILM6 days ago
Film: ಹಂದಿ ಮಾಂಸ ಸೇವಿಸಿದ ಟಿಕ್ಟಾಕ್ ಸ್ಟಾರ್ಗೆ 2 ವರ್ಷ ಜೈಲು ಶಿಕ್ಷೆ..!
- DAKSHINA KANNADA6 days ago
ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ರಾಂಬೋ ಸರ್ಕಸ್- ಜನರನ್ನು ಬೆರಗುಗೊಳಿಸುವ ವಿಸ್ಮಯ ಪ್ರದರ್ಶನ..!