ಕಟೀಲು ಶ್ರೀ ದೇವಿಯ ಸನ್ನಿಧಿಯಲ್ಲಿ ನಟ ವಿಜಯರಾಘವೇಂದ್ರ ಕುಟುಂಬ..!
ಮಂಗಳೂರು : ಇತಿಹಾಸ ಪ್ರಸಿದ್ದ ಕಟೀಲು ಶ್ರೀದುರ್ಗಾಪರಮೇಶ್ವರೀ ದೇಗುಲಕ್ಕೆ ಖ್ಯಾತ ನಟ ವಿಜಯರಾಘವೇಂದ್ರ ಕುಟುಂಬ ಸಹಿತ ಇಂದು ಶನಿವಾರ ಭೇಟಿ ನೀಡಿದ್ದಾರೆ.
ಶ್ರೀ ದೇವಿಯ ದರ್ಶನ ಮಾಡಿ ಪ್ರಾರ್ಥನೆ ಸಲ್ಲಿಸಿ ಸೀರೆಕಾಣಿಕೆ ಸಮರ್ಪಿಸಿದರು.
ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ ಪ್ರಸಾದ ನೀಡಿದರು. ಈ ಸಂದರ್ಭ ದೇಗುಲಕ್ಕೆ ಬಂದಿದ್ದ ಭಕ್ತರು, ಶಾಲಾ ವಿದ್ಯಾರ್ಥಿಗಳು ವಿಜಯರಾಘವೇಂದ್ರ ಜೊತೆಗೆ ಸೆಲ್ಫಿ ಪೋಟೊ ತೆಗೆದುಕೊಂಡು ಸಂಭ್ರಮಿಸಿದರು.
ಬಳಿಕ ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.
ಅರ್ಚಕ ರಾಮದಾಸ ಆಚಾರ್ಯ ಅನಂತಕೃಷ್ಣ ಆಚಾರ್ಯ, ವ್ಯವಸ್ಥಾಪನಾ ಸಮಿತಿಯ ರವೀಂದ್ರ ಎಚ್ ಶೆಟ್ಟಿ, ರಘುವೀರ ಶೆಣೈ, ರವಿಶಂಕರ ಪೈ ಮತ್ತಿತರರಿದ್ದರು.
ಜಾರಿಗೆ ಕಟ್ಟೆ ಕೊರಗಜ್ಜ ಕ್ಷೇತ್ರಕ್ಕೂ ವಿಜಯರಾಘವೇಂದ್ರ ಕುಟುಂಬ ಭೇಟಿ ನೀಡಿ ಪ್ರಸಾದ ಸ್ವೀಕರಿಸಿತು.