FILM
ನಟಿಗೆ ಲೈಂಗಿಕ ಕಿರುಕುಳ ಆರೋಪ; ಮಲಯಾಳಂ ನಿರ್ದೇಶಕ ರಂಜಿತ್ ವಿರುದ್ದ ಎಫ್ಐಆರ್..!
ಈಗಾಗಲೇ ಕನ್ನಡ ಚಿತ್ರರಂಗದ ಮಾದರಿಯಲ್ಲೇ ಮಲಯಾಳಂ ಚಿತ್ರರಂಗದಲ್ಲೂ ಮೀಟೂ ಭಾರೀ ಸದ್ದು ಮಾಡುತ್ತಿದ್ದೆ. ಮಲಯಾಳಂ ಚಿತ್ರರಂಗದಲ್ಲಿ ಮಹಿಳೆಯರ ಸ್ಥಿತಿ-ಗತಿ ಅರಿಯಲು ರಚಿಸಲಾಗಿದ್ದ ಹೇಮಾ ಸಮಿತಿಯ ವರದಿಯನ್ನು ಕೊನೆಗೂ ಕೇರಳ ಸರ್ಕಾರ ಪ್ರಕಟಿಸಿದ್ದು, ಕೆಲವು ಆಘಾತಕಾರಿ ಅಂಶಗಳು ಹೊರಬಂದಿವೆ.
ಮಲಯಾಳಂ ಚಿತ್ರರಂಗದಲ್ಲಿ ಹಲವಾರು ನಟರ ವಿರುದ್ಧ ಲೈಂಗಿಕ ಕಿರುಕುಳ ಆರೋಪಗಳು ಕೇಳಿ ಬಂದಿದ್ದು ಸೋಮವಾರ ಕೇರಳ ಪೊಲೀಸರು ಚಲನಚಿತ್ರ ನಿರ್ಮಾಪಕ ರಂಜಿತ್ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಬಂಗಾಳಿ ನಟಿ ಶ್ರೀಲೇಖಾ ಮಿತ್ರಾ ಅವರು ಕೊಚ್ಚಿ ನಗರ ಪೊಲೀಸ್ ಕಮಿಷನರ್ಗೆ ಚಲನಚಿತ್ರ ನಿರ್ಮಾಪಕರ ವಿರುದ್ಧ ದೂರು ನೀಡಿದ ನಂತರ ಪ್ರಕರಣ ದಾಖಲಿಸಲಾಗಿದೆ. 2009ರಲ್ಲಿ ‘ಪಾಲೇರಿ ಮಾಣಿಕ್ಯಂ’ ಸಿನಿಮಾದಲ್ಲಿ ನಟಿಸುವಂತೆ ನಟಿಯನ್ನು ಆಹ್ವಾನಿಸಿದ ನಂತರ ರಂಜಿತ್ ಅವರು ಲೈಂಗಿಕ ಉದ್ದೇಶದಿಂದ ನಟಿಯನ್ನು ಅನುಚಿತವಾಗಿ ಸ್ಪರ್ಶಿಸಿದ್ದಾರೆ ಎಂದು ಪೊಲೀಸರಿಗೆ ಇಮೇಲ್ ಮೂಲಕ ಕಳುಹಿಸಿರುವ ದೂರಿನಲ್ಲಿ ಆರೋಪಿಸಲಾಗಿದೆ.
ಕೊಚ್ಚಿ ಪೊಲೀಸ್ ಕಮಿಷನರ್ ಎಸ್ ಶ್ಯಾಮಸುಂದರ್ ಪ್ರಕಾರ, ಐಪಿಸಿ ಸೆಕ್ಷನ್ 354 (ಮಹಿಳೆಯರ ಮೇಲೆ ದೌರ್ಜನ್ಯ ಅಥವಾ ಕ್ರಿಮಿನಲ್ ಬಲದಿಂದ ಆಕೆಯ ಘನತೆಗೆ ಹಾನಿಗೊಳಿಸುವ ಉದ್ದೇಶದಿಂದ) ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.
ಕನ್ನಡದ ಹಿರಿಯ ನಟಿ ಪದ್ಮಜಾ ರಾವ್ಗೆ ಮೂರು ತಿಂಗಳು ಜೈಲು ಶಿಕ್ಷೆ, 40 ಲಕ್ಷ ರೂ. ದಂಡ ..!!
ನಿರ್ದೇಶಕ ರಂಜಿತ್ ವಿರುದ್ಧ ಆರೋಪ
ರಂಜಿತ್ ಅವರು ವರ್ಷಗಳ ಹಿಂದೆ ಸ್ಕ್ರಿಪ್ಟ್ ಕುರಿತು ಚರ್ಚಿಸುವಾಗ ತಮ್ಮೊಂದಿಗೆ ಅನುಚಿತವಾಗಿ ವರ್ತಿಸಿದರು ಎಂದು ಶ್ರೀಲೇಖಾ ಮಿತ್ರ ಆರೋಪಿಸಿದ್ದಾರೆ. “ರಂಜಿತ್ ಮಲಯಾಳಂ ಚಿತ್ರರಂಗದಲ್ಲಿ ಖ್ಯಾತನಾಮರು ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ. ಮುಂಬರುವ ಚಲನಚಿತ್ರ ಯೋಜನೆ ಕುರಿತು ಚರ್ಚಿಸಲು ನಾನು ಅವರ ಮನೆಗೆ ಹೋಗಿದ್ದೆ. ಅಲ್ಲಿ ಅವರ ನಡವಳಿಕೆ ನನಗೆ ಇಷ್ಟವಾಗಲಿಲ್ಲ. ನಾವು ಸ್ಕ್ರಿಪ್ಟ್ ಬಗ್ಗೆ ಚರ್ಚಿಸುತ್ತಿರುವಾಗ ಅವರು ಅನುಚಿತವಾಗಿ ವರ್ತಿಸಿದರು” ಎಂದು ಶ್ರೀಲೇಖಾ ದೂರಿರುವುದಾಗಿ ಪಿಟಿಐ ವರದಿ ಮಾಡಿದೆ. ಈ ಘಟನೆ ನಂತರ “ನಾನು ಆ ಪ್ರಾಜೆಕ್ಟ್ ನಲ್ಲಿ ಭಾಗಿಯಾಗಲು ನಿರಾಕರಿಸಿ ಕೋಲ್ಕತ್ತಾಗೆ ಮರಳಿದೆ” ಎಂದು ನಟಿ ಹೇಳಿದ್ದಾರೆ.
ಅವರು ಚಿತ್ರರಂಗದ ಇತರ ನಟಿಯರೊಂದಿಗೆ ಅದೇ ರೀತಿ ನಡೆಸಿಕೊಂಡಿದ್ದಾರೆಯೇ ಎಂದು ನನಗೆ ಗೊತ್ತಿಲ್ಲ. ಅಂತಹ ಪರಿಸ್ಥಿತಿ ಎದುರಾದರೆ ಅದನ್ನು ಬಹಿರಂಗಪಡಿಸುವುದು ಅವರಿಗೆ ಬಿಟ್ಟದ್ದು. ಬಹುಶಃ ನಿರ್ದೇಶಕರ ಶಕ್ತಿ ಮತ್ತು ಪ್ರಭಾವವು ಇತರರು ಮಾತನಾಡದಿರುವಂತೆ ತಡೆಯುತ್ತಿದೆ ಎಂದು ಶ್ರೀಲೇಖಾ ಹೇಳಿದ್ದಾರೆ. ಆದಾಗ್ಯೂ, ನಟಿಯ ಆರೋಪಗಳನ್ನು ತಿರಸ್ಕರಿಸಿದ ರಂಜಿತ್, ಪ್ರಕರಣದಲ್ಲಿ ನಾನೇ “ನಿಜವಾದ ಸಂತ್ರಸ್ತ” ಎಂದು ಹೇಳಿದ್ದಾರೆ.
FILM
ಸೀಮಂತ ಸಂಭ್ರಮದಲ್ಲಿ ‘ಬಿಗ್ ಬಾಸ್’ ಖ್ಯಾತಿಯ ಕವಿತಾ ಗೌಡ
ಬೆಂಗಳೂರು: ‘ಬಿಗ್ ಬಾಸ್’, ‘ಲಕ್ಷ್ಮಿ ಬಾರಮ್ಮ’ ಖ್ಯಾತಿಯ ಚಿನ್ನು ಅಲಿಯಾಸ್ ನಟಿ ಕವಿತಾ ಗೌಡ ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಚೊಚ್ಚಲ ಮಗುವಿನ ಆಗಮನಕ್ಕಾಗಿ ಎದುರು ನೋಡುತ್ತಿರುವ ನಟಿ ಕವಿತಾ ಸೀಮಂತ ಶಾಸ್ತ್ರ ಜರುಗಿದೆ. ಕಿರುತೆರೆಯ ನಟ, ನಟಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿ ಅಮ್ಮನಾಗ್ತಿರೋ ಕವಿತಾಗೆ ಶುಭಕೋರಿದ್ದಾರೆ.
ಕವಿತಾ ಮತ್ತು ನಟ ಚಂದನ್ ಕುಮಾರ್ ಮನೆಗೆ ಸದ್ಯದಲ್ಲೇ ಪುಟ್ಟ ಕಂದಮ್ಮನ ಆಗಮನವಾಗಲಿದೆ. ಇದೇ ಖುಷಿಯಲ್ಲಿ ತುಂಬು ಗರ್ಭಿಣಿ ಕವಿತಾಗೆ ಸರಳವಾಗಿ ಸೀಮಂತ ಶಾಸ್ತ್ರ ಮಾಡಿದ್ದಾರೆ. ಈ ಸಮಾರಂಭಕ್ಕೆ ನಟಿ ನಮ್ರತಾ ಗೌಡ, ತನಿಷಾ ಕುಪ್ಪಂಡ, ಹಿರಿಯ ನಟಿ ಶ್ರುತಿ, ನಿಮಿಕಾ ರತ್ನಾಕರ್, ನೇಹಾ ಗೌಡ, ಅನುಪಮಾ ಗೌಡ ಸೇರಿದಂತೆ ಅನೇಕರು ಭಾಗಿಯಾಗಿದ್ದರು.
ಅಂದಹಾಗೆ, ಲಾಕ್ಡೌನ್ ವೇಳೆ 2021ರ ಮೇ 14ರಂದು ಚಂದನ್ ಕುಮಾರ್ ಮತ್ತು ಕವಿತಾ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಇಬ್ಬರೂ ‘ಲಕ್ಷ್ಮಿ ಬಾರಮ್ಮ’ ಸೀರಿಯಲ್ನಲ್ಲಿ ಹೀರೋ, ಹೀರೋಯಿನ್ ಆಗಿ ನಟಿಸಿದ್ದರು.
FILM
ಹೇಮಾ ಸಮಿತಿಯಂತೆ ಸ್ಯಾಂಡಲ್ವುಡ್ನಲ್ಲಿ ನಟಿಯರ ರಕ್ಷಣೆಗೆ ಬರುತ್ತಿದೆ ಸಮಿತಿ
ಮಂಗಳೂರು/ಬೆಂಗಳೂರು : ಮಲಯಾಳಂ ಚಿತ್ರರಂಗದಲ್ಲಿ ಹೇಮಾ ಸಮಿತಿ ವರದಿ ಭಾರೀ ಚರ್ಚೆ ಹುಟ್ಟು ಹಾಕಿತ್ತು. ಮಾಲಿವುಡ್ ನಲ್ಲಿ ನಟಿಯರ ಮೇಲೆ ನಡೆಯುತ್ತಿರುವ ಕಿರುಕು*ಳದ ಬಗ್ಗೆ ವರದಿ ಬಹಿರಂಗ ಪಡಿಸಿತ್ತು. ಈ ವrದಿಯಿಂದಾಗಿ ಹಲವು ಬೆಳವಣಿಗೆಗಳು ನಡೆದ ಬೆನ್ನಲ್ಲೇ ಚಂದನವನ(Sandalwood)ದಲ್ಲೂ ಹೇಮಾ ಸಮಿತಿ ಮಾದರಿಯಲ್ಲೇ ಸಮಿತಿ ರಚಿಸಬೇಕು ಎಂಬ ಆಗ್ರಹ ಕೇಳಿ ಬಂದಿತ್ತು. ಈ ಬಗ್ಗೆ ನಟಿಯರು ಮನವಿಯನ್ನೂ ಸಲ್ಲಿಸಿದ್ದರು.
ಈ ಹಿನ್ನೆಲೆಯಲ್ಲಿ ಇಂದು(ಸೆ.16) ಸಭೆ ನಡೆದಿದೆ. ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ನೇತೃತ್ವದಲ್ಲಿ ಸಭೆ ನಡೆದಿದ್ದು, ಬಳಿಕ ಸುದ್ದಿಗೋಷ್ಠಿ ನಡೆಯಿತು.
ಪಾಶ್ ಕಮಿಟಿ ರಚನೆ :
ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಚಿತ್ರರಂಗಕ್ಕೆ ಹೆಣ್ಣು ಮಕ್ಕಳು ಬರ್ತಾರೆ ಅಂದ್ರೆ ತಂದೆ-ತಾಯಿ ಸುಲಭದಲ್ಲಿ ಕಳುಹಿಸಬೇಕು. ಆ ರೀತಿ ಚಿತ್ರರಂಗ ಆಗಬೇಕು. ಎಲ್ಲರೂ ಡಾಕ್ಟರ್ ಆಗಿ, ಇಂಜಿನಿಯರ್ ಆಗಿ ಎನ್ನುತ್ತಾರೆ. ಆದರೆ, ಕೆಲವೇ ಕೆಲವರು ಮಾತ್ರ ನಟನೆಗೆ ಹೋಗಿ ಎಂದು ಹೇಳುತ್ತಾರೆ. ಚಿತ್ರರಂಗದಲ್ಲಿ ಹೆಣ್ಣುಮಕ್ಕಳು ಸುರಕ್ಷಿತವಾಗಿ ಇರ್ತಾರಾ ಎಂಬ ಪ್ರಶ್ನೆ ಮೂಡುವಂತೆ ಆಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಕನ್ನಡ ಚಿತ್ರರಂಗದಲ್ಲಿ ಪಾಶ್ ಕಮಿಟಿ ಮಾಡಲಾಗುತ್ತಿದೆ. ವಾಣಿಜ್ಯ ಚಿತ್ರರಂಗಕ್ಕೆ ಪತ್ರ ಬರೆದಿದ್ದೇವೆ. ಇವತ್ತು ಮೀಟಿಂಗ್ಗೆ ಬಹಳ ಕಡಿಮೆ ನಟಿಯರು ಬಂದಿದ್ದಾರೆ. ಹೊರದೇಶದಲ್ಲಿ ಕಾರ್ಯಕ್ರಮ (ಸೈಮಾ) ಇತ್ತು. ಹೀಗಾಗಿ, ಅಲ್ಲಿಗೆ ಹೋಗಿದ್ದಾರೆ ಎಂದರು.
ನನಗೆ ಅನಾರೋಗ್ಯ ಆಗಿದೆ. ಆದರೂ ಬಂದಿದ್ದೇನೆ. ಮುಂದಿನ ಸಭೆಯಲ್ಲಿ ಎಲ್ಲರೂ ಬರುವಂತೆ ಆಗಬೇಕು. ಕಮಿಟಿ ಹೇಗೆ ಇರಬೇಕು ಎನ್ನುವ ಕುರಿತು ಕಾನೂನು ಇದೆ. ಅದೇ ರೀತಿಯಲ್ಲಿ ಸಮಿತಿ ರಚನೆ ಆಗಲಿದೆ. ಇದು ನಟಿಯರಿಗೆ ಫ್ಯಾಮಿಲಿ. ನಟಿಯರು ಸಿನಿಮಾದಲ್ಲಿ ನಟಿಸಬೇಕು ಎಂದಾಗ 17 ಪಾಯಿಂಟ್ಸ್ ಇದೆ. ಯಾವ ಯಾವ ಫೆಸಿಲಿಟಿ ನೀಡಬೇಕು ಎಂಬುದರ ಉಲ್ಲೇಖ ಇದೆ. ಪಾಶ್ ಕಮಿಟಿ ಇರುತ್ತದೆ. ಸರ್ಕಾರದ ಗೆಜೆಟ್ನಲ್ಲಿ ಈ ಸಮಿತಿ ಬರುತ್ತದೆ. ದೂರು ಬಂದರೆ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಇದನ್ನೂ ಓದಿ : ಸದ್ದಿಲ್ಲದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಿದ್ಧಾರ್ಥ್, ಅದಿತಿ ರಾವ್
ಸಮಿತಿ ಮಾಡಲೇಬೇಕು. ಅದನ್ನು ಯಾರೂ ಮಾಡಲ್ಲ ಎಂದು ಹೇಳೋಕೆ ಆಗಲ್ಲ. ಮಹಿಳೆಯರಿಗೆ ರಕ್ಷಣೆ ನೀಡಲು ಇದನ್ನು ಮಾಡಲೇಬೇಕು. ಇದನ್ನು ಮಾಡೇ ಮಾಡುತ್ತೇವೆ. ಈ ಸಮಿತಿಗೆ ಹಿರಿಯ ನಟಿ ಅಧ್ಯಕ್ಷರಾಗಿರಬೇಕು. ಅರ್ಧದಷ್ಟು ಸದಸ್ಯರು ಮಹಿಳೆಯರಾಗಬೇಕು. ಮಹಿಳೆಯರ ಪರ ಹೋರಾಡುವ ಒಬ್ಬರು ಈ ಸಮಿತಿಯಲ್ಲಿ ಇರಬೇಕು ಎಂದು ವಿವರಿಸಿದ್ದಾರೆ.
FILM
ತೆಲುಗು ಬಿಗ್ ಬಾಸ್ ಗೆ ಎಂಟ್ರಿ ಕೊಟ್ಟ ಮಂಗಳೂರಿನ ಯುವಕ
ಮಂಗಳೂರು : ರಿಯಾಲಿಟಿ ಶೋಗಳಲ್ಲಿ ಅತ್ಯಂತ ಹೆಚ್ಚು ಜನಮೆಚ್ಚಿದ, ಪ್ರಶಂಸೆಗೆ ಪಾತ್ರವಾಗಿರುವ ಬಿಗ್ ಬಾಸ್ ಗೆ ಎಂಟ್ರಿ ಕೊಡೋದು ಸುಲಭದ ಮಾತಲ್ಲ. ಚಿತ್ರರಂಗ ಮತ್ತು ಸೀರಿಯಲ್ ಕ್ಷೇತ್ರದ ಘಟಾನುಘಟಿಗಳು ಈ ಶೋ ನಲ್ಲಿ ಪಾಲ್ಗೊಳ್ಳಲು ತುದಿಗಾಲಲ್ಲಿ ನಿಂತಿದ್ದಾರೆ ಅನ್ನೋದು ಸುಳ್ಳಲ್ಲ. ಇಂಥ ಫೇಮಸ್ ರಿಯಾಲಿಟಿ ಶೋನಲ್ಲಿ ಮಂಗಳೂರಿನ ಯುವಕನೊಬ್ಬ ಎಂಟ್ರಿ ಕೊಟ್ಟಿದ್ದಾನೆ.
ತೆಲುಗು ಬಿಗ್ ಬಾಸ್ ನ 8 ನೇ ಆವೃತ್ತಿ ಆಯ್ಕೆಯಾಗಿರುವ ಈ ಯುವಕ ಮಂಗಳೂರಿನ ಪೃಥ್ವಿ ಶೆಟ್ಟಿ. ಮೂಲತಃ ಮಂಗಳೂರಿನವರಾದ ಇವರು ಇದೀಗ ಬಿಗ್ ಬಾಸ್ ಶೋ ಒಳಗೆ ಎಂಟ್ರಿ ಕೊಟ್ಟು ತಮ್ಮ ಪ್ರದರ್ಶನ ನೀಡುತ್ತಿದ್ದಾರೆ.
ಧಾರಾವಾಹಿಗಳ ಮೂಲಕ ಗಮನ ಸೆಳೆದ ನಟ :
ಕುಡ್ಲದ ಪ್ರತಿಭೆಗಳು ಕಿರುತೆರೆ, ಹಿರಿತೆರೆಯಲ್ಲಿ ಮಿನುಗುತ್ತಿದ್ದಾರೆ. ಅವರಲ್ಲಿ ಪೃಥ್ವಿ ಶೆಟ್ಟಿ ಕೂಡ ಒಬ್ಬರು. ತಮ್ಮ ಪ್ರಾಥಮಿಕ ಶಿಕ್ಷಣ ಮತ್ತು ಕಾಲೇಜು ಶಿಕ್ಷಣವನ್ನು ಮಂಗಳೂರು, ಕಾಸರಗೋಡು ಮತ್ತು ಉಡುಪಿ ಜಿಲ್ಲೆಯಲ್ಲಿ ಮುಗಿಸಿರುವ ಪೃಥ್ವಿ ವಿದ್ಯಾಭ್ಯಾಸದ ಬಳಿಕ ಫ್ಯಾಷನ್ ಫೀಲ್ಡ್ ಗೆ ವಾಲಿದ್ದರು. ಕಾಲೇಜು ದಿನಗಳಲ್ಲಿಯೇ ಫ್ಯಾಷನ್ ಶೋಗಳಲ್ಲಿ ಪಾಲ್ಗೊಂಡು ಯಶಸ್ಸು ಕಂಡಿದ್ದ ಪೃಥ್ವಿ, ಬಳಿಕದ ದಿನಗಳಲ್ಲಿ ಚಿತ್ರರಂಗ ಮತ್ತು ಟಿವಿ ಶೋಗಳಲ್ಲಿ ಅಭಿನಯಿಸುವ ಇಚ್ಛೆಯಿಂದ ಬೆಂಗಳೂರು ಮಹಾನಗರಕ್ಕೆ ಪ್ರಯಾಣ ಬೆಳೆಸಿದ್ದರು.
ಹಲವು ಸಣ್ಣ-ಪುಟ್ಟ ಧಾರಾವಾಹಿಗಳಲ್ಲಿ ನಟಿಸಿರುವ ಪೃಥ್ವಿ ಶೆಟ್ಟಿಗೆ ಉತ್ತಮ ಬ್ರೇಕ್ ದೊರೆತಿದ್ದು ಪ್ರೀತಿಯ ಅರಸ ಮತ್ತು ಅರ್ಧಾಂಗಿ ಎನ್ನುವ ಟಿವಿ ಸೀರಿಯಲ್ ನಲ್ಲಿ. ಎರಡೂ ಧಾರಾವಾಹಿಗಳಲ್ಲಿ ತಮ್ಮ ಸಾಧನೆ ತೋರಿರುವ ಪೃಥ್ವಿ ಗೆ ಬಳಿಕದ ದಿನಗಳಲ್ಲಿ ತೆಲುಗು ಭಾಷೆಯ ಮೆಗಾ ಧಾರಾವಾಹಿಗಳಲ್ಲೂ ಅವಕಾಶ ದೊರೆತಿದೆ. ತೆಲುಗಿನ ಸೂಪರ್ ಹಿಟ್ ಧಾರಾವಾಹಿಯಾದ ನಾಗಪಂಚಮಿಯಲ್ಲಿನ ನಟನೆಗೆ ಪೃಥ್ವಿ ಶೆಟ್ಟಿ ಮನೆ ಮಾತಾಗಿದ್ದಾರೆ.
ಇದನ್ನೂ ಓದಿ : ಚಿನ್ನದ ಅಂಗಡಿಗೆ ಬಂದು ಬೆಲೆಬಾಳುವ ಮಾಂಗಲ್ಯ ಸರದೊಂದಿಗೆ ಎಸ್ಕೇಪ್ ಆದ ಕಳ್ಳ
ಈಗಾಗಲೇ ಎರಡು ತೆಲುಗು ಚಿತ್ರಗಳಲ್ಲಿ ನಟಿಸಿರುವ ಪೃಥ್ವಿ ಆ ಚಿತ್ರಗಳಲ್ಲೂ ಯಶಸ್ಸು ಕಾಣುವ ವಿಶ್ವಾಸದಲ್ಲಿದ್ದಾರೆ. ತೆಲುಗು ಟಿವಿ ಶೋಗಳಲ್ಲಿ ಮಿಂಚಿರುವ ಪೃಥ್ವಿಯವರನ್ನು ಅವರ ಸಾಧನೆ ಹಾಗು ಯಶಸ್ಸನ್ನು ಪರಿಗಣಿಸಿ ಬಿಗ್ ಬಾಸ್ ನ 8 ನೇ ಆವೃತ್ತಿಗೆ ಆಯ್ಕೆ ಮಾಡಲಾಗಿದೆ. ಓಟಿಂಗ್ ನಲ್ಲೂ ಮೂರನೇ ಸ್ಥಾನವನ್ನು ಕಾಯ್ದುಕೊಂಡಿರುವ ಪೃಥ್ವಿ ಬಿಗ್ ಬಾಸ್ ಆಗಿ ಹೊರಬರಲಿ ಎನ್ನುವ ಹಾರೈಕೆಗಳೂ ಕೇಳಿ ಬರಲಾರಂಭಿಸಿದೆ.
- FILM6 days ago
ಕನ್ನಡ ಬಿಗ್ ಬಾಸ್ ಸೀಸನ್ 11ಕ್ಕೆ ಮುಹೂರ್ತ ಫಿಕ್ಸ್! ಹೋಸ್ಟ್ ಕೂಡ ಕನ್ಫರ್ಮ್!
- LATEST NEWS6 days ago
ನೃತ್ಯ ಮಾಡಲು ನಿರಾಕರಿಸಿದ ನೃತ್ಯಗಾರ್ತಿಯರ ಮೇಲೆ ಸಾಮೂಹಿಕ ಅತ್ಯಾಚಾ*ರ
- FILM7 days ago
ರೇಣುಕಾಸ್ವಾಮಿ ಚಾರ್ಜ್ಶೀಟ್ನಲ್ಲಿ ಇಬ್ಬರು ನಟಿಯರ ಹೆಸರು ಉಲ್ಲೇಖ..!
- FILM5 days ago
ಶಾಂಕಿಂಗ್ ನ್ಯೂಸ್ : ಕಟ್ಟಡದಿಂದ ಹಾರಿ ನಟಿ ಮಲೈಕಾ ಅರೋರಾ ತಂದೆ ಆತ್ಮಹ*ತ್ಯೆ
Pingback: ಗನ್ ಒರೆಸುತ್ತಿದ್ದ ವೇಳೆ ಮಿಸ್ ಫಯರ್; ವ್ಯಕ್ತಿ ಸಾ*ವು - NAMMAKUDLA NEWS - ನಮ್ಮಕುಡ್ಲ ನ್ಯೂಸ್