Connect with us

LATEST NEWS

ಮನೆ ಮೇಲೆ ದಾಳಿ, ಹಲ್ಲೆ ಪ್ರಕರಣ; ಮಲಯಾಳಂ ಸೀರಿಯಲ್ ನಟಿ ಅಶ್ವತಿ ಬಾಬು, ಪತಿ ನೌಫಾಲ್ ಬಂಧನ..

Published

on

ಕೊಚ್ಚಿ : ಮನೆ ಮೇಲೆ ದಾಳಿ ಮತ್ತು ಹಲ್ಲೆ ಪ್ರಕರಣ ಒಂದರಲ್ಲಿ ಆರೋಪಿಗಳಾಗಿರುವ ಮಲಯಾಳಂ ಸೀರಿಯಲ್ ನಟಿ, ಪತಿಯನ್ನು ಕೇರಳದ ನಜರಕ್ಕಲ್ ಪೊಲೀಸರು ಬಂಧಿಸಿದ್ದಾರೆ.

ಧಾರವಾಹಿ ನಟಿ ಅಶ್ವತಿ ಬಾಬು ಮತ್ತು ಅವರ ಪತಿ ನೌಫಾಲ್ ಬಂಧಿತ ಆರೋಪಿಗಳಾಗಿದ್ದಾರೆ.

ಹಣಕಾಸಿನ ವ್ಯವಹಾರದ ವಿವಾದದ ನಂತರ ನಾಯರ್ಂಬಲಂ ನಿವಾಸಿ ಕಿಶೋರ್ ಮತ್ತು ಅವರ ತಾಯಿಯ ಮೇಲೆ ಹಲ್ಲೆ ನಡೆಸಿದ ಆರೋಪ ಅಶ್ವತಿ ಬಾಬು ಮತ್ತು ಅವರ ಪತಿ ನೌಫಾಲ್ ಮೇಲಿದ್ದು ಈ ಕಾರಣಕ್ಕಾಗಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ತಿಂಗಳ ಹಿಂದೆಯಷ್ಟೇ ಅಶ್ವತಿ ಬಾಬು ಮತ್ತು ಅವರ ಪತಿ ನೌಫಾಲ್ ವಿವಾಹವಾಗಿದ್ದರು.

DAKSHINA KANNADA

ಎರಡು ಲಾರಿಗಳ ಮಧ್ಯೆ ಅಪಘಾತ; ಚಾಲಕ ಗಂಭೀರ

Published

on

ಮಂಗಳೂರು: ಬೈಕಂಪಾಡಿ ಹೋಟೆಲ್ ಶ್ರೀ ದ್ವಾರದ ಬಳಿ ಲಾರಿಗಳೆರಡರ ನಡುವೆ ಅಪಘಾತ ಸಂಭವಿಸಿ ಲಾರಿ ಚಾಲಕ ಗಂಭಿರ ಗಾಯಗೊಂಡ ಘಟನೆ ನಡೆದಿದೆ. ಒಂದು ಲಾರಿಯೊಂದು ಗ್ರಾನೈಟ್ ಅಂಗಡಿಯೊಳಗೆ ನುಗ್ಗಿದ್ದು, ಅಪಾರ ಮೌಲ್ಯದ ಗ್ರಾನೈಟ್‌ ಹಾನಿಗೊಂಡಿದೆ.

ಮುಂದೆ ಓದಿ..; ಪುತ್ತೂರು : ಧರೆಗುರುಳಿದ ಬೃಹದಾಕಾರದ ಮರ; ಮಾವಿನಕಾಯಿಗಾಗಿ ಮುಗಿಬಿದ್ದ ಜನ!

accident

ಲಾರಿ ಸಾಗಾಟ ಮಾಡುತ್ತಿದ್ದ ಲಾರಿ ಅಪಘಾತದಿಂದ ನಜ್ಜುಗುಜ್ಜಾಗಿದೆ. ಇನ್ನು ಇದೇ ಭಾಗದಲ್ಲಿ ನಿತ್ಯವೂ ಮಹಿಳೆಯರು ಮೀನ ಮಾರಾಟ ಮಾಡುತ್ತಿದ್ದರು. ಅದೃಷ್ಟವಶಾತ್ ಇದೀಗ ಭಾರೀ ಅನಾಹುತ ತಪ್ಪಿದೆ.

 

Continue Reading

LATEST NEWS

60ನೇ ವಯಸ್ಸಿಗೆ “ಮಿಸ್ ಯುನಿವರ್ಸ್” ಕಿರೀಟ ಮುಡಿಗೇರಿಸಿಕೊಂಡ ಈಕೆ ಯಾರು ಗೊತ್ತಾ? ಈಕೆಯ ಸೌಂದರ್ಯಕ್ಕೆ ಬೆರಗಾದ್ರು ಜನ..!!

Published

on

ಹೆಚ್ಚಾಗಿ ಮಿಸ್​ ವರ್ಲ್ಡ್​​​, ಮಿಸ್​​ ಯುನಿವರ್ಸ್ ಇನ್ನೂ ಮುಂತಾದ ಸೌಂದರ್ಯ ಸ್ಪರ್ಧೆಯಲ್ಲಿ ಹದಿಹರೆಯದ ಸುಂದರಿಯರೇ ಭಾಗವಹಿಸುತ್ತಾರೆ. ಆದರೆ ಅಲೆಜಾಂಡ್ರಾ ಮಾರಿಸಾ ರೋಡ್ರಿಗಸ್ ಎಂಬ ಮಹಿಳೆ ತನ್ನ 60ನೇ ವಯಸ್ಸಿನಲ್ಲಿ ಮಿಸ್ ಯುನಿವರ್ಸ್ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾಳೆ.

ವೃತ್ತಿಯಲ್ಲಿ ವಕೀಲ ಮತ್ತು ಪತ್ರಕರ್ತೆಯಾಗಿರೋ ಅಲೆಜಾಂಡ್ರಾ ಅವರು 60ನೇ ವಯಸ್ಸಿನಲ್ಲಿ ಸೌಂದರ್ಯ ಸ್ಪರ್ಧೆಯಲ್ಲಿ ಗೆದ್ದ ಮೊದಲ ಮಹಿಳೆ ಎಂಬ ದಾಖಲೆ ಪಡೆದುಕೊಂಡಿದ್ದಾರೆ. ಅರ್ಜೆಂಟೀನಾದ ಬ್ಯೂನಸ್ ಐರಿಸ್​​ನ ರಾಜಧಾನಿ ಲಾ ಪ್ಲಾಟಾದಲ್ಲಿ ನಡೆದ 2024ರ ಮಿಸ್‌ ಯೂನಿವರ್ಸ್ ಬ್ಯೂನಸ್ ಐರಿಸ್ ಸ್ಪರ್ಧೆಯಲ್ಲಿ ಗೆದ್ದು ಇಡೀ ಜಗತ್ತೆ ತಿರುಗಿ ನೋಡುವಂತೆ ಮಾಡಿದ್ದಾಳೆ.

ಇನ್ನೂ 60ನೇ ವಯಸ್ಸಿನಲ್ಲಿಯೂ ಈಕೆಯ ಸೌಂದರ್ಯ ಕಂಡು ನೆಟ್ಟಿಗರು ಫುಲ್​ ಶಾಕ್​ ಆಗಿದ್ದಾರೆ. ಅನೇಕರು ಆಕೆ ಮಿಸ್​​ ಯುನಿವರ್ಸ್​​ ಕಿರೀಟ ಪಡೆದುಕೊಂಡಿರೋದಕ್ಕೆ ಶುಭಾಶಯ ತಿಳಿಸುತ್ತಿದ್ದು ಇನ್ನೂ ಕೆಲವರು ಕಮೆಂಟ್ಸ್‌ಗಳನ್ನು ಹಾಕುತ್ತಿದ್ದಾರೆ.

Continue Reading

LATEST NEWS

ಪುತ್ತೂರು : ಧರೆಗುರುಳಿದ ಬೃಹದಾಕಾರದ ಮರ; ಮಾವಿನಕಾಯಿಗಾಗಿ ಮುಗಿಬಿದ್ದ ಜನ!

Published

on

ಪುತ್ತೂರು :  ಬೊಳ್ವಾರ್ ಬಸ್ ತಂಗುದಾಣದ ಪಕ್ಕದಲ್ಲಿದ್ದ ಬೃಹದಾಕಾರದ ಮರವೊಂದು ಉರುಳಿ ಬಿದ್ದಿದೆ. ಪರಿಣಾಮ ಹಲವು ವಾಹನಗಳು ಜಖಂಗೊಂಡಿವೆ. ವಾಹನ ಮಾಲಕರು ವಾಹನಗಳನ್ನು ಹೊರತೆಗೆಯಲು ಹರಸಾಹಸ ಪಡುವಂತಾಯಿತು.

ಬಿದ್ದ ಮರದಲ್ಲಿದ್ದ ಮಾವಿನಕಾಯಿಗಳನ್ನು ಕೊಯ್ಯಲು ಜನ ಮುಗಿಬಿದ್ದ ಘಟನೆಯೂ ನಡೆಯಿತು. ಬಳಿಕ ಸ್ಥಳೀಯರು ಮರದ ಕೊಂಬೆಗಳನ್ನು ಕಡಿದು ತೆರವುಗೊಳಿಸಿದರು.

ಮರ ಬೀಳುವ ಸಂದರ್ಭ ಯಾರೂ ಇಲ್ಲದ ಪರಿಣಾಮ ಭಾರೀ ದುರಂತವೊಂದು ತಪ್ಪಿದೆ.

ಇದನ್ನೂ ಓದಿ : ಚಾಲಕನ ನಿಯಂತ್ರಣ ತಪ್ಪಿ ಇನೋವಾ ಕಾರು ಪಲ್ಟಿ; ಯುವತಿ ಸಾವು!

Continue Reading

LATEST NEWS

Trending