Connect with us

LATEST NEWS

‘ಸಕತ್ತಾಗಿದ್ದೀಯಾ ಡಾರ್ಲಿಂಗ್’ ಎಂದ ನಟನಿಗೆ ಖಡಕ್ ಎಚ್ಚರಿಕೆ ನೀಡಿದ ನಟಿ ನಭಾ ನಟೇಶ್

Published

on

ತೂಕತು ಗಡ ಬಡ ಬಾಯ್ ಬಾಯ್ ಬಡ್ಕಿ…ಎಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಜೊತೆ ಕುಣಿದು ಕುಪ್ಪಳಿಸಿದ್ದ ‘ಪಟಾಕ’ ನಭಾ ನಟೇಶ್. ‘ವಜ್ರಕಾಯ’ ಮೂಲಕ ಕನ್ನಡ ಸಿನಿಮಾರಂಗದಲ್ಲಿ ಮಿಂಚಿದ ಕಲಾವಿದೆ. ಬಳಿಕ ಲೀ, ಸಾಹೇಬ ಚಿತ್ರದಲ್ಲಿ ನಟಿಸಿದರು. ಬಳಿಕ ತೆಲುಗು ಚಿತ್ರರಂಗ ಅವರನ್ನು ಕೈ ಬೀಸಿ ಕರೆಯಿತು.

ತೆಲುಗು ಸಿನಿರಂಗದಲ್ಲಿ ಗುರುತಿಸಿಕೊಂಡಿರುವ ನಭಾ ತೆಲುಗು ನಟನ ಮೇಲೆ ಕೋಪಗೊಂಡಿದ್ದಾರೆ. ಅಷ್ಟೇ ಅಲ್ಲ, ಎಚ್ಚರಿಕೆಯನ್ನೂ ನೀಡಿದ್ದಾರೆ.

ಗರಂ ಆದ ನಟಿ :
ತೆಲುಗು ಸಿನಿ ರಂಗದಲ್ಲಿ ಡಾರ್ಲಿಂಗ್ ಅಂದ್ರೆ ಪ್ರಭಾಸ್ ಹೆಸರು ಕೇಳಿ ಬರುತ್ತೆ. ಅವರು ಅಭಿಮಾನಿಗಳನ್ನು, ಆಪ್ತರನ್ನು ಡಾರ್ಲಿಂಗ್ ಎಂದೇ ಸಂಬೋಧಿಸುತ್ತಾರೆ. ಸದ್ಯ ಪ್ರಭಾಸ್ ಹಲವು ಸಂದರ್ಭಗಳಲ್ಲಿ ಡಾರ್ಲಿಂಗ್ ಎಂದಿರುವ ಆಡಿಯೋ ಮಿಕ್ಸ್ ಅಪ್ ಮಾಡಿ ಆಡಿಯೋ ಕ್ರಿಯೆಟ್ ಮಾಡಲಾಗಿದೆ. ಈ ಆಡಿಯೋ ರೀಲ್ಸ್ ಆಗಿ ವೈರಲ್ ಆಗುತ್ತಿದೆ. ನಭಾ ನಟೇಶ್ ಕೂಡ ಡಬ್ ಸ್ಮ್ಯಾಶ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ.

‘ಹಾಯ್ ಡಾರ್ಲಿಂಗ್ಸ್…ಹೌ ಆರ್ ಯೂ’ ಎಂದು ಪೋಸ್ಟ್ ಮಾಡಿದ್ದಾರೆ. ಇದಕ್ಕೆ ನಭಾ ಅಭಿಮಾನಿಗಳು ಮಾತ್ರವಲ್ಲ, ಪ್ರಭಾಸ್ ಫ್ಯಾನ್ಸ್ ಲೈಕ್ಸ್, ಕಮೆಂಟ್ಸ್ ಮಾಡುತ್ತಿದ್ದಾರೆ. ಆದರೆ, ತೆಲುಗು ಹಾಸ್ಯ ನಟ ಪ್ರಿಯದರ್ಶಿ ಪುಲಿಕೊಂಡ ತಮ್ಮ ಎಕ್ಸ್ ಖಾತೆಯಲ್ಲಿ ರೀ-ಪೋಸ್ಟ್ ಮಾಡಿದ್ದಾರೆ. ಅಲ್ಲದೇ, ‘ವಾಹ್ ಸೂಪರ್ ಡಾರ್ಲಿಂಗ್, ಸಖತ್ತಾಗಿದ್ದೀಯಾ’ ಎಂದು ಬರೆದಿದ್ದಾರೆ. ಇದರಿಂದ ನಭಾ ಗರಂ ಆಗಿದ್ದಾರೆ.

ಇದನ್ನೂ ಓದಿ : ಅಂದು ಸುಮಲತಾ, ಇಂದು ಸ್ಟಾರ್ ಚಂದ್ರುಗೆ ಜೈ ಎಂದ ದರ್ಶನ್; ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕೆ ನಿಂತ ಡಿ ಬಾಸ್ ಏನಂದ್ರು?

ಎಚ್ಚರಿಕೆ ನೀಡಿದ ನಭಾ ನಟೇಶ್ :

ನಭಾ ನಟೇಶ್, ಪ್ರಿಯದರ್ಶಿ ಡಾರ್ಲಿಂಗ್ ಎಂದಿದ್ದಕ್ಕೆ ಸಿಟ್ಟಾಗಿದ್ದಾರೆ. ಇಬ್ಬರ ನಡುವೆ ಎಕ್ಸ್ ನಲ್ಲಿ ಟಾಕ್ ವಾರ್ ಶುರುವಾಗಿದೆ. ಪ್ರಿಯದರ್ಶಿ ಪೋಸ್ಟ್ ಗೆ ಪ್ರತಿಕ್ರಿಯೆ ನೀಡಿರುವ ನಭಾ, ಪರಿಚಯ ಇಲ್ಲದ ಮಹಿಳೆಯನ್ನು ಡಾರ್ಲಿಂಗ್ ಎಂದು ಕರೆಯುವುದು ಕೂಡ ಲೈಂಗಿಕ ದೌರ್ಜನ್ಯವಾಗುತ್ತದೆ ಎಂದು ಹಿಂದೆ ಕೊಲ್ಕತ್ತಾ ಹೈಕೋರ್ಟ್ ತೀರ್ಪು ನೀಡಿತ್ತು. ಅದಕ್ಕೆ ಸಂಬಂಧಿಸಿ ನ್ಯೂಸ್ ಕ್ಲಿಪ್‌ ಅನ್ನು ಶೇರ್ ಮಾಡಿ “ಮಿಸ್ಟರ್, ಮಾತನಾಡುವಾಗ ಎಚ್ಚರಿಕೆ ಇರಲಿ” ಎಂದು ನಭಾ ಪೋಸ್ಟ್ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ನಟ ಪ್ರಿಯದರ್ಶಿ, “ನೀವೇನೊ ಡಾರ್ಲಿಂಗ್ ಎಂದು ಕರೆಯಬಹುದು. ನಾವು ಕರೆದರೆ ಐಪಿಸಿ ಸೆಕ್ಷನ್ ಆಗುತ್ತಾ? ತಲೆ ಕೆಡಿಸಿಕೊಳ್ಳಬೇಡ ಡಾರ್ಲಿಂಗ್” ಎಂದು ಮತ್ತೆ ಕಮೆಂಟ್ ಮಾಡಿದ್ದಾರೆ. ಇದಕ್ಕೆ ನಭಾ, ”ಗೆರೆ ದಾಟಬೇಡ! ನೋಡಿಕೊಳ್ತೇನೆ” ಎಂದು ಎಚ್ಚರಿಕೆ ನೀಡಿದ್ದಾರೆ. ಇದಕ್ಕೆ ಮತ್ತೆ, ಓ…ಯಾಕೆ ಈ ಮಿತಿ ಮೀರಿದ ಕೋಪ?’ ಎಂದು ಪ್ರಿಯದರ್ಶಿ ಕಮೆಂಟ್ ಮಾಡಿದ್ದಾರೆ.

 

ಹೊಸ ಚಿತ್ರದ ಪ್ರಮೋಷನ್? :

ಅಂದಹಾಗೆ ಈ ಟಾಕ್ ವಾರ್ ಬಗ್ಗೆ ಹಲವು ಅನುಮಾನ ಹುಟ್ಟಿಕೊಂಡಿತ್ತು. ಇದು ತಮಾಷೆ ಇರಬಹುದು ಎಂಬ ಅನುಮಾನ ಹುಟ್ಟಿಕೊಂಡಿತ್ತು. ಸದ್ಯ ‘ ಡಾರ್ಲಿಂಗ್ ‘ ಅನ್ನೋದು ನಭಾ ನಟೇಶ್ ಅವರ ಮುಂದಿನ ತೆಲುಗು ಸಿನಿಮಾ ಎನ್ನಲಾಗಿದೆ. ಈ ಸಿನಿಮಾದಲ್ಲಿ ಪ್ರಿಯದರ್ಶಿ ಪುಲಿಕೊಂಡ ಜೊತೆಯಾಗುತ್ತಿದ್ದಾರೆ ಎನ್ನಲಾಗಿದೆ. ಅಬ್ಬಾ! ಹೀಗೂ ಪ್ರಮೋಷನ್ ಮಾಡ್ಬೋದಾ? ಅಂಥ ಮೂಗಿನ ಮೇಲೆ ಬೆರಳಿಟ್ಟುಕೊಳ್ಳುವ ಸರದಿ ನೆಟ್ಟಿಗರದ್ದು.


ಮೂಲತಃ ಶೃಂಗೇರಿಯವರಾದ ನಭಾ ನಟೇಶ್ ‘ನನ್ನು ದೋಚಕುಂಡುವಾಟೆ’ ಸಿನಿಮಾ ಮೂಲಕ ಟಾಲಿವುಡ್ ಗೆ ಪದಾರ್ಪಣೆ ಮಾಡಿದರು. ಬಳಿಕ ‘ಇಸ್ಮಾರ್ಟ್ ಶಂಕರ್’ ಭಾರೀ ಯಶಸ್ಸು ತಂದು ಕೊಟ್ಟಿತು. ಇತ್ತೀಚೆಗೆ ಕೈಗೆ ಪೆಟ್ಟಾದ ಹಿನ್ನೆಲೆ ಸಿನಿರಂಗದಿಂದ ದೂರ ಉಳಿದಿದ್ದರು.

LATEST NEWS

ಮುಂದಿನ 5 ದಿನ ರಾಜ್ಯದ 25 ಜಿಲ್ಲೆಗಳಲ್ಲಿ ಬಿಸಿ ಗಾಳಿ ಸಾಧ್ಯತೆ; ಎಲ್ಲೆಲ್ಲಿ?

Published

on

ಮಂಗಳೂರು : ರಾಜ್ಯದಲ್ಲಿ ತಾಪಮಾನವು ದಿನದಿಂದ ದಿನಕ್ಕೆ ಹೆಚ್ಚುತ್ತಲಿದ್ದು, ಬಿಸಿಲಾಘಾತದಿಂದ ಜನ, ಜಾನುವಾರು ಮತ್ತು ಪಕ್ಷಿ ಸಂಕುಲ ತತ್ತರಿಸಿದೆ. ನೀರಿಗೆ ತತ್ವಾರ ಎದುರಾಗಿದೆ. ಇಂತಹ ಪರಿಸ್ಥಿತಿಯಲ್ಲಿಯೇ ಇದೀಗ ಹವಾಮಾನ ಇಲಾಖೆಯು ರಾಜ್ಯದ 25 ಜಿಲ್ಲೆಗಳಿಗೆ ಶಾಖಾಘಾತದ ಮುನ್ಸೂಚನೆ ನೀಡಿದೆ. ಇಂದಿನಿಂದ 5 ದಿನಗಳ ಕಾಲ ಬಿಸಿ ಗಾಳಿ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ.

ಯಾವ ಜಿಲ್ಲೆಗಳಿಗೆ ಬಿಸಿಲಾಘಾತ?

ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಧಾರವಾಡ, ಹಾವೇರಿ, ಕೊಪ್ಪಳ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಮಂಡ್ಯ, ಬಳ್ಳಾರಿ, ಹಾಸನ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಚಿಕ್ಕಮಗಳೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ. ಮೇ 5 ರವರೆಗೂ ಇದೇ ಪರಿಸ್ಥಿತಿ ಇರಲಿದೆ ಎಂದು ಇಲಾಖೆ ತಿಳಿಸಿದೆ.

ಮೇ 4 ರ ವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ವಾತಾವರಣವಿರುವ ಸಂಭವವಿದೆ.

ಮಳೆಯಾಗುವ ಸಾಧ್ಯತೆ :

ಚಿಕ್ಕಮಗಳೂರು, ಕೊಡಗು, ಮೈಸೂರು, ಮಂಡ್ಯ, ರಾಮನಗರ ಹಾಗೂ ತುಮಕೂರು ಜಿಲ್ಲೆಯ ಕೆಲವೆಡೆ ಬುಧವಾರ ಹಗುರ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ನಾಲ್ಕುದಿನ ಒಣಹವೆ ಇರಲಿದೆ.
ಮೇ 6 ರಿಂದ ಕೊಡಗು, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಶಿವಮೊಗ್ಗ, ತುಮಕೂರು, ವಿಜಯನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಯ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ : ಮಂಗಳೂರು ವಿಮಾನ ನಿಲ್ದಾಣವಿನ್ನು ನಿಶ್ಶಬ್ದ ವಲಯ!

ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ :

ಇಂದಿನಿಂದ(ಮೇ 1 ರಿಂದ) ಮುಂದಿನ ಐದು ದಿನಗಳು ಬಾಗಲಕೋಟೆ, ಕಲಬುರಗಿ ಹಾಗೂ ಕೊಪ್ಪಳದಲ್ಲಿ ರಾತ್ರಿಯ ಅವಧಿಯೂ ಬಿಸಿ ವಾತಾವರಣದಿಂದ ಕೂಡಿರುವ ಸಾಧ್ಯತೆಯಿದೆ. ಮಂಗಳವಾರ ಬೆಳಿಗ್ಗೆ 8.30 ರಿಂದ ಬುಧವಾರ ಬೆಳಗ್ಗಿನ ತನಕದ 24 ಗಂಟೆಗಳ ಅವಧಿಯಲ್ಲಿ ರಾಜ್ಯದ ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 42.8 ಡಿಗ್ರಿ ಸೆಲ್ಸಿಯಸ್ ವರದಿಯಾಗಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 38.2 ಡಿಗ್ರಿ ಸೆಲ್ಸಿಯಸ್ ವರದಿಯಾಗಿದೆ. ಕಳೆದ ನಾಲ್ಕು ದಿನಗಳಲ್ಲಿ ಮೂರು ದಿನ 38 ಡಿಗ್ರಿ ಸೆಲ್ಸಿಯಸ್ ದಾಟಿದೆ.

Continue Reading

DAKSHINA KANNADA

ಯಕ್ಷಗಾನ ಕಲಿಯುವ ವಿದ್ಯಾರ್ಥಿಗಳಿಗೆ ಮುಂದಿನ ದಿನಗಳಲ್ಲಿ ಪರೀಕ್ಷೆ; ಪಟ್ಲ ಸತೀಶ್ ಶೆಟ್ಟಿ

Published

on

ಮಂಗಳೂರು: ಸಂಗೀತ, ಭರತನಾಟ್ಯದ ಮಾದರಿಯಲ್ಲಿ ಯಕ್ಷಗಾನಕ್ಕೂ ನಿರ್ದಿಷ್ಟ ಚೌಕಟ್ಟಿನಲ್ಲಿ ಪಠ್ಯ ರಚಿಸಿ ಪರೀಕ್ಷೆಗಳನ್ನು ನಡೆಸುವ ಪ್ರಯತ್ನಗಳು ನಡೆಯುತ್ತಿದೆ ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಹೇಳಿದರು.

ಮಂಗಳೂರಿನ ಪ್ರೆಸ್ ಕ್ಲಬ್‌ ವತಿಯಿಂದ ನಡೆದ ಪ್ರೆಸ್‌ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಯಕ್ಷಗಾನದಲ್ಲಿ ಪ್ರತಿಯೊಬ್ಬ ಗುರು ತಮ್ಮದೇ ಆದ ಶೈಲಿಯಲ್ಲಿ ನಾಟ್ಯವನ್ನು ಕಲಿಸುತ್ತಾರೆ. ಯಕ್ಷಗಾನ ಕಲಿಕೆಗೆ ಒಂದು ಚೌಕಟ್ಟು ರೂಪಿಸುವ ಮೂಲಕ ಏಕರೂಪತೆ ತರಬೇಕಾಗಿದೆ. ಯಕ್ಷಧ್ರುವ ಪಟ್ಲ ಫೌಂಡೇಶನ್‌ನ ಯಕ್ಷ ಶಿಕ್ಷಣ ಯೋಜನೆಯು ಪಠ್ಯ ರೂಪಿಸಿದ್ದು, ಫೌಂಡೇಶನ್‌ನ ಶಿಕ್ಷಕರು ಇದರ ಪ್ರಕಾರವೇ ನಾಟ್ಯ ಕಲಿಸುತ್ತಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಯಕ್ಷಗಾನಕ್ಕೆಂದೇ ಒಂದು ಸೀಲೆಬಸ್ ಮಾಡಿ ಅದರಲ್ಲಿ ಅದರ ಮುಕೇನ ಯಕ್ಷಗಾನ ನಾಟ್ಯ ಕಲಿಯುವ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗುವುದು ಎಂದು ಹೇಳಿದರು.

 

Continue Reading

LATEST NEWS

ಬೆಳಗ್ಗೆ ಏಳುವಾಗ ಬಲಗಡೆಯಿಂದ ಯಾಕೆ ಏಳಬೇಕು ಗೊತ್ತೇ..?

Published

on

ಮಂಗಳೂರು: ರಾತ್ರಿ ಮಲಗೋದು ಎಷ್ಟು ಮುಖ್ಯವೋ ಬೆಳಗ್ಗಿನ ಜಾವ ಏಳೋದು ಕೂಡ ಅಷ್ಟೇ ಮುಖ್ಯವಾಗುತ್ತದೆ. ಸನಾತನ ಹಿಂದೂ ಧರ್ಮದಲ್ಲಿ ಒಂದು ವಿಶೇಷ ಸಂಪ್ರದಾಯ ಇದೆ. ಬೆಳಿಗ್ಗೆ ಬಲಗಡೆಯಿಂದ ಎದ್ದು ಅಂಗೈ ಉಜ್ಜಿ ಕಣ್ಣು ಮುಚ್ಚಿ ಕರಾಗ್ರೆ ವಸತೆ ಲಕ್ಷ್ಮಿ ಎನ್ನುವ ಶ್ಲೋಕ ಹೇಳುವುದು. ಬಾಲ್ಯದಲ್ಲಿ ನಮ್ಮ ಹಿರಿಯರು ಹಾಗೂ ನಮ್ಮ ಅಮ್ಮಂದಿರು ಬಲಗಡೆಗೆ ಏಳು ಅಂತ ಹೇಳಿರುವುದನ್ನು ಕೇಳಿರುತ್ತೇವೆ. ಅಥವಾ ನಾವು ಎಡ ಬದಿಯಿಂದ ಎಳುವುದ್ದನ್ನು ನೋಡಿದಾಗ ನಮ್ಮನ್ನು ಬಲಗಡೆಯಿಂದ ಎಬ್ಬಿಸಲು ಟ್ರೈ ಮಾಡಿರಬಹುದು.

ಬಲ ಭಾಗದಿಂದ ಎದ್ದರೆ ಅದೃಷ್ಟ

ಬಲ ಭಾಗದಿಂದ ಎದ್ದರೆ ಒಳ್ಳೆಯದು ಅನ್ನೋದು ಹೇಳಿದ್ದನ್ನ ನಾವು ಕೇಳಿರಬಹುದು. ಬಲ ಭಾಗದಿಂದ ಎಚ್ಚರಗೊಂಡರೆ ದಿನವಿಡೀ ಅದೃಷ್ಟ ಇತ್ಯಾದಿ ಕಲ್ಪನೆಗಳು ನಮ್ಮಲ್ಲಿ ಇರುತ್ತದೆ. ಇನ್ನೊಂದು ವಿಚಾರ ಏನು ಅಂದ್ರೆ ನಮ್ಮ ದೇಹ ನಿದ್ದೆಗೆ ಜಾರಿದಾಗ ನಮ್ಮ ದೇಹದಲ್ಲಿ ಸ್ನಾಯುಗಳು ರೆಸ್ಟ್ ಅಲ್ಲಿ ಇರುತ್ತವೆ.

ವೈಜ್ಞಾನಿಕ ಕಾರಣ

ವೈಜ್ಞಾನಿಕವಾಗಿ ಹೇಳುವುದಾದರೆ ನಮ್ಮ ಹೃದಯ ದೇಹದ ಎಡ ಭಾಗದಲ್ಲಿ ಇದೆ. ಅದರ ಸುತ್ತಲೂ ಹಲವಾರು ಸ್ನಾಯುಗಳು ಇವೆ. ನಾವು ಎಡ ಭಾಗದಿಂದ ಧಿಡೀರ್ ಅಂತ ಇದ್ರೆ ನಮ್ಮ ಇಡೀ ದೇಹದ ಒತ್ತಡ ಆ ಸ್ನಾಯುಗಳ ಮೇಲೆ ಬೀಳುತ್ತೆ. ಆ ಸ್ನಾಯುಗಳಿಗೆ ಸ್ವಲ್ಪ ಪೆಟ್ಟು ಬಿದ್ರೆ ಕೂಡ ಅದು ನಮ್ಮ ಹೃದಯಕ್ಕೆ ತುಂಬಾ ಅಪಾಯಕಾರಿ. ಆದ್ದರಿಂದ ನಮ್ಮ ಹಿರಿಯರು ಬಲ ಭಾಗದಿಂದ ಏಳಬೇಕು ಅಂತ ಹೇಳುತ್ತಿದ್ದರು.

ಇನ್ನು ಎಡಭಾಗದಿಂದ ಎದ್ದರೆ ದಿನ ಒಳ್ಳೆಯದಿರುವುದಿಲ್ಲ, ಏನಾದರೂ ಕೆಟ್ಟದ್ದು ಆಗುವ ಸಾಧ್ಯತೆಗಳು ಇರುತ್ತದೆ ಎಂಬುದು ಜನರ ನಂಬಿಕೆಯಾಗಿರುತ್ತದೆ. ಹಾಗಾಗಿ ಈಗಲೂ ಹೆಚ್ಚಿನ ಜನರು ಬೆಳ್ಳಗ್ಗಿನ ಜಾವ ಎಡಭಾಗದಿಂದ ಏಳದೇ ಬಲಭಾಗದಿಂದ ಏಳುತ್ತಾರೆ. ಬೆಳಗ್ಗೆ ಬಲ ಬದಿಯಿಂದ ಏಳುವುದರಿಂದ ನಿಮ್ಮ ಅಂದಿನ ದಿನ ಶಾಂತಿಯುತವಾಗಿಯೂ ಹಾಗೂ ಒತ್ತಡವಿಲ್ಲದೇ ಕಳೆಯಬಹುದು.

Continue Reading

LATEST NEWS

Trending