Connect with us

    FILM

    ಮದುವೆಯಾಗಿ ಮೊದಲ ಬಾರಿಗೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟಿ ಪೂಜಾ ಗಾಂಧಿ ದಂಪತಿ

    Published

    on

    ಉಡುಪಿ: ಸ್ಯಾಡಲ್ ವುಡ ನ್ ನಟಿ ಪೂಜ ಗಾಂಧಿ ಅವರು ದಂಪತಿ ಸಮೇತ ಉಡುಪಿಗೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು.

    ಪತಿ ವಿಜಯ್ ಘೋರ್ಪಡೆ ಹಾಗೂ ನಟಿ ಪೂಜಾ ಗಾಂಧಿ ಅವರು ಶ್ರೀಕೃಷ್ಣನ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಮದುವೆ ಆದ ನಂತರ ಮೊದಲ ಬಾರಿಗೆ ಉಡುಪಿಗೆ ಆಗಮಿಸಿದ ಪೂಜಾ ಗಾಂಧಿ ದಂಪತಿ, ಕನಕ ನವಗ್ರಹ ಕಿಂಡಿಯ ಮೂಲಕ ದೇವರ ದರ್ಶನ ಮಾಡಿದ್ದಾರೆ.

    ರಥಬೀದಿಯಲ್ಲಿರುವ ಕಾಣಿಯೂರು ಮಠಕ್ಕೆ ತೆರಳಿ ಶ್ರೀವಿದ್ಯಾವಲ್ಲಭ ತೀರ್ಥ ಸ್ವಾಮೀಜಿಯವರನ್ನು ಭೇಟಿಯಾಗಿದ್ದು, ಸ್ವಾಮೀಜಿಯವರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕಾರ ಮಾಡಿದ್ದಾರೆ. ಶ್ರೀಕೃಷ್ಣಮಠ ಮತ್ತು ಕಾಣಿಯೂರು ಮಠ ನವ ದಂಪತಿಯನ್ನು ಗೌರವಿಸಿದರು. ನ. 29ರಂದು ಉದ್ಯಮಿ ವಿಜಯ್ ಘೋರ್ಪಡೆ ಜೊತೆ ಪೂಜಾ ಗಾಂಧಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಂತ್ರ- ಮಾಂಗಲ್ಯ ಪದ್ಧತಿಯಲ್ಲಿ ಸರಳವಾಗಿ ಪೂಜಾ ಮದುವೆಯಾಗಿದ್ದರು.

    Click to comment

    Leave a Reply

    Your email address will not be published. Required fields are marked *

    FILM

    ಖ್ಯಾತ ನಟ ಜಯಂ ರವಿ – ಆರತಿ ದಾಂಪತ್ಯ ಜೀವನದಲ್ಲಿ ಬಿರುಕು!?

    Published

    on

    ಸಿನಿಮಾ ಲೋಕದಲ್ಲಿ ವಿಚ್ಛೇದನ ಎಂಬುದು ಸಾಮಾನ್ಯ ಸಂಗತಿಯಾಗಿ ಹೋಗಿದೆ. ಹಿಂದಿ, ತಮಿಳು, ತೆಲುಗು, ಚಂದನವನ ಎಲ್ಲೆಡೆಯೂ ವಿಚ್ಛೇದನದ್ದೇ ಸುದ್ದಿ.

    ಕಾಲಿವುಡ್‌ನಲ್ಲಿ ನಟ ಧನುಷ್ ಹಾಗೂ ಐಶ್ವರ್ಯ ವಿಚ್ಛೇದನದ ಸುದ್ದಿ ಈಗಾಗಲೇ ಸುದ್ದಿಯಾಗಿತ್ತು. ಇತ್ತೀಚೆಗೆ ಸಂಗೀತ ನಿರ್ದೇಶಕ, ನಟ ಜಿ. ವಿ ಪ್ರಕಾಶ್ ವಿಚ್ಛೇದನ ಪಡೆಯುವ ಬಗ್ಗೆ ಘೋಷಿಸಿದ್ದರು. ಇದೀಗ ಮತ್ತೊಬ್ಬ ನಟನ ಬಗ್ಗೆ ವಿಚ್ಛೇದನದ ಗಾಸಿಪ್ ಹರಿದಾಡಿದೆ.

    ಹೌದು, ನಟ ಜಯಂ ರವಿ – ಆರತಿ ದಾಂಪತ್ಯದಲ್ಲಿ ಬಿರುಕು ಮೂಡಿದೆ ಎಂಬುದಾಗಿ ಗುಸುಗುಸು ಶುರುವಾಗಿದೆ.

    ಇಬ್ಬರ ನಡುವೆ ಭಿನ್ನಾಭಿಪ್ರಾಯ?

    ತಮಿಳು ಸಿನಿಮಾ ಸಂಕಲನಕಾರ ಮೋಹನ್ ಪುತ್ರ ರವಿ ಬಾಲನಟನಾಗಿ ಚಿತ್ರರಂಗಕ್ಕೆ ಪಾದರ್ಪಣೆ ಮಾಡಿದರು. ಬಳಿಕ ಅವರು 2003ರಲ್ಲಿ ‘ಜಯಂ’ ಚಿತ್ರದ ಮೂಲಕ ನಾಯಕ ನಟನಾಗಿ ಪಾದರ್ಪಣೆ ಮಾಡಿದ್ದರು. ಅಲ್ಲಿಂದ ‘ಜಯಂ ರವಿ’ ಎಂದೇ ಜನಪ್ರಿಯರಾದರು. ಬಳಿಕ ಹಲವು ಹಿಟ್ ಸಿನಿಮಾಗಳನ್ನು ನೀಡಿದ್ದಾರೆ. ಇತ್ತೀಚೆಗೆ ಬಂದ ಪೊನ್ನಿಯಿನ್ ಸೆಲ್ವನ್ ಚಿತ್ರದ ಟೈಟಲ್‌ ರೋಲ್‌ನಲ್ಲಿ ಮಿಂಚಿ ಮೆಚ್ಚುಗೆ ಗಳಿಸಿದ್ದರು.

    ಇದನ್ನೂ ಓದಿ : ಮಕ್ಕಳಿಗೆ ಯಾವ ವಯಸ್ಸಿನಿಂದ ಚಹಾ, ಕಾಫಿ ಕೊಡಬಹುದು?

    2009 ರಲ್ಲಿ ಕಿರುತೆರೆ ನಿರ್ಮಾಪಕ ಸುಜಾತಾ ವಿಜಯಕುಮಾರ್ ಮಗಳು ಆರತಿ ಎಂಬುವವರ ಜೊತೆ ಜಯಂ ರವಿ ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಇದೀಗ ರವಿ – ಆರತಿ ವಿಚ್ಛೇದನಕ್ಕೆ ಮುಂದಾಗಿದ್ದಾರೆ. ಇಬ್ಬರ ನಡುವೆ ಭಿನ್ನಾಭಿಪ್ರಾಯಗಳಿವೆ ಎಂಬ ಗಾಸಿಪ್ ಹರಿದಾಡುತ್ತಿದೆ. ಇದೇ ವೇಳರ ಆರತಿ ಇನ್‌ಸ್ಟಾಗ್ರಾಮ್‌ನಿಂದ ಪತಿ ಜೊತೆಗಿನ ಫೋಟೊಗಳನ್ನು ಡಿಲೀಟ್ ಮಾಡಿದ್ದು, ಅನುಮಾನ ಇನ್ನಷ್ಟು ಬಲವಾಗಿದೆ.

    Continue Reading

    FILM

    ಬೆಂಗಳೂರಿನಲ್ಲಿ ದರ್ಶನ್ ಅಭಿಮಾನಿಯ ಬಂಧನ

    Published

    on

    ಬೆಂಗಳೂರು : ರೇಣುಕಾಸ್ವಾಮಿ ಕೊ*ಲೆ ಪ್ರಕರಣ ಆರೋಪ ಹೊತ್ತಿರುವ ದರ್ಶನ್ ಜೈಲು ಪಾಲಾಗಿದ್ದಾರೆ. ಇತ್ತ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಬಂಧನದಿಂದ ಆಘಾ*ತಕ್ಕೊಳಗಾಗಿದ್ದಾರೆ. ಅಲ್ಲದೇ, ಕೆಲವರು ಟೀಕಾಪ್ರಹಾರಗಳನ್ನು ಮಾಡುತ್ತಿದ್ದಾರೆ. ಈ ಸಂಬಂಧ ಈಗಾಗಲೇ ಬೆಂಗಳೂರಿನಲ್ಲಿ ಓರ್ವ ದರ್ಶನ್ ಅಭಿಮಾನಿಯನ್ನು ಬಂಧಿಸಲಾಗಿದೆ.


    ಚೇತನ್ ಬಂಧಿತ ಆರೋಪಿ. ಕನ್ನಡ ಚಿತ್ರರಂಗದ ನಿರ್ಮಾಪಕ ಉಮಾಪತಿ ಗೌಡ ವಿರುದ್ಧ ದರ್ಶನ್ ಅಭಿಮಾನಿಗಳಿಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ.

    ಚೇತನ್ ಬಹಿರಂಗವಾಗಿ ಉಮಾಪತಿ ಗೌಡಗೆ ಬೆದರಿಕೆ ಹಾಕಿದ್ದಾನೆ. ಅಲ್ಲದೇ ಉಮಾಪತಿ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವ ವಿಡಿಯೋ ವೈರಲ್‌ ಆಗಿತ್ತು. ಈ ವಿಡಿಯೋಗಳನ್ನು ನೋಡಿದ ನಿರ್ಮಾಪಕ ಉಮಾಪತಿ ಗೌಡ ಬೆದರಿಕೆ ಹಾಕಿದ್ದ ಯುವಕನ ಬಗ್ಗೆ ದೂರು ನೀಡಿದ್ದರು.

    ಇದನ್ನೂ ಓದಿ : ದರ್ಶನ್ ಹಾಕಿ ಚಿತ್ರ ಮಾಡೋರು ಇನ್ಮೇಲೆ ಇದನ್ನ ಗಮನಿಸಲೇಬೇಕು

    ಈ ಹಿನ್ನೆಲೆಯಲ್ಲಿ ನಟ ದರ್ಶನ್‌ ಅಭಿಮಾನಿ ಚೇತನ್ ವಿರುದ್ಧ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಐಪಿಸಿ ಸೆಕ್ಷನ್ 504,506 ಅಡಿಯಲ್ಲಿ ಎಫ್ಐಆರ್ ಕೂಡ ದಾಖಲಾಗಿತ್ತು.

    Continue Reading

    FILM

    WATCH : ಅಭಿಮಾನಿಯನ್ನು ತಳ್ಳಿ ಬೀಳಿಸಿದ ನಾಗಾರ್ಜುನ ಬಾಡಿಗಾರ್ಡ್; ವೀಡಿಯೋ ವೈರಲ್ ಆಗುತ್ತಿದ್ದಂತೆ ಏನಂದ್ರು ನಟ?

    Published

    on

    ಮಂಗಳೂರು : ಸಿನಿಮಾ ನಟರು ಅಂದಾಕ್ಷಣ ಅಭಿಮಾನಿಗಳು ಮುಗಿಬೀಳೋದು ಸಹಜ. ಅವರ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಬೇಕು, ಸೆಲ್ಫಿ ಗಿಟ್ಟಿಸಿಕೋಬೇಕು ಅನ್ನೋ ಹೆಬ್ಬಯಕೆ ಸಹಜ. ಆದ್ರೆ, ಈ ರೀತಿ ಹೋದ ಅಭಿಮಾನಿಯೊಬ್ಬನನ್ನು ತಳ್ಳಿರೋ ಘಟನೆ ನಡೆದಿದೆ. ಘಟನೆಯ ವೀಡಿಯೋ ಸದ್ಯ ವೈರಲ್ ಆಗಿದೆ.


    ವೈರಲ್ ಆಗಿರೋ ವೀಡಿಯೋ ನಟ ನಾಗಾರ್ಜುನ ಅವರದು. ವಿಮಾನ ನಿಲ್ದಾಣದಿಂದ ಹೊರಬರುತ್ತಿರುವ ಅವರ ಜೊತೆ ಫೋಟೋ ತೆಗೆಸಿಕೊಳ್ಳಲು ಅಭಿಮಾನಿಯೊಬ್ಬರು ಓಡೋಡಿ ಬಂದಿದ್ದಾರೆ. ಆದರೆ ಅವರನ್ನು ನಾಗಾರ್ಜುನ ಬಾಡಿಗಾರ್ಡ್​ ತಳ್ಳಿ ಬೀಳಿಸಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಈ ವಿಡಿಯೋ ವೈರಲ್​ ಆಗಿದ್ದು, ನೆಟ್ಟಿಗರು ಗರಂ ಆಗಿದ್ದಾರೆ.

    ‘ನಿಮ್ಮ ಮಾನವೀಯತೆ ಎಲ್ಲಿ ಹೋಯಿತು ನಾಗಾರ್ಜುನ ಅವರೇ?’ ಎಂಬ ಕ್ಯಾಪ್ಷನ್​ನೊಂದಿಗೆ ಸೋಶಿಯಲ್​ ಮೀಡಿಯಾದಲ್ಲಿ ಈ ವಿಡಿಯೋವನ್ನು ಶೇರ್​ ಮಾಡಿಕೊಳ್ಳಲಾಗಿದೆ.

    ಇನ್ನು ವೀಡಿಯೋ ವೈರಲ್​ ಆಗುತ್ತಿದ್ದಂತೆ ಸ್ವತಃ ನಾಗಾರ್ಜುನ ಅವರು ಕ್ಷಮೆ ಕೇಳಿದ್ದಾರೆ. ‘ಇದು ಈಗ ತಾನೇ ನನ್ನ ಗಮನಕ್ಕೆ ಬಂತು. ಈ ರೀತಿ ಆಗಬಾರದಿತ್ತು. ಆ ವ್ಯಕ್ತಿಯಲ್ಲಿ ನಾನು ಕ್ಷಮೆ ಕೇಳುತ್ತೇನೆ. ಇನ್ಮುಂದೆ ಎಚ್ಚರಿಕೆ ವಹಿಸುತ್ತೇನೆ. ಈ ರೀತಿ ಇನ್ನೆಂದೂ ಆಗುವುದಿಲ್ಲ’ ಎಂದಿದ್ದಾರೆ.

    ಇದನ್ನೂ ಓದಿ: ದರ್ಶನ್ ಹಾಕಿ ಚಿತ್ರ ಮಾಡೋರು ಇನ್ಮೇಲೆ ಇದನ್ನ ಗಮನಿಸಲೇಬೇಕು

    ಅಂದಹಾಗೆ ಈ ಘಟನೆ ನಡೆದಾಗ ನಾಗಾರ್ಜುನ ಜೊತೆ ಕಾಲಿವುಡ್​ ನಟ ಧನುಷ್​ ಕೂಡ ಇದ್ದರು. ಸಿನಿಮಾ ನಟರನ್ನು ಕಂಡಾಗ ಸಿನಿಪ್ರಿಯರು ಹತ್ತಿರ ಬರೋದು ಸಹಜ. ಈ ವೇಳೆ ಬಾಡಿಗಾರ್ಡ್ ಗಳು ನಟರ ಬಳಿ ಬರಲು ಬಿಡುವುದಿಲ್ಲ. ಇಲ್ಲೂ ಹಾಗೇ ಆಗಿದೆ.

    Continue Reading

    LATEST NEWS

    Trending