Connect with us

DAKSHINA KANNADA

‘ಕರಿ ಹೈದ ಕರಿಯಜ್ಜ’ ಚಿತ್ರ ಯಶಸ್ಸಿಗೆ ಕೊರಗಜ್ಜ- ಗುಳಿಗಜ್ಜ ಕ್ಷೇತ್ರಕ್ಕೆ ಹುಂಜ ಹರಕೆ ನೀಡಿದ ನಟಿ ಶೃತಿ, ಭವ್ಯ..!

Published

on

ಉಳ್ಳಾಲ :  ಕೊರಗಜ್ಜನ ಕುರಿತಾದ ಬಹು ಬಾಷಾ ಚಿತ್ರ “ಕರಿ ಹೈದ ಕರಿಯಜ್ಜ” ದ ಯಶಸ್ಸಿಗೆ ಕಲ್ಲಾಪು ಬುರ್ದುಗೋಳಿಯ ಕೊರಗಜ್ಜ-ಗುಳಿಗಜ್ಜ ಉದ್ಭವ ಶಿಲೆಯ ಆದಿಸ್ಥಳಕ್ಕೆ ಭೇಟಿ ನೀಡಿದ ನಟಿಯರಾದ ಭವ್ಯ ,ಶೃತಿ ಮತ್ತು ಚಿತ್ರ ತಂಡವು ಗುಳಿಗನಿಗೆ ಹರಕೆಯ ಹುಂಜವನ್ನ ಸಮರ್ಪಿಸಿದ್ದಾರೆ.  

ತ್ರಿವಿಕ್ರಮ ಸಪಲ್ಯ ಅವರು 5 ಕೋಟಿ ವೆಚ್ಚದಲ್ಲಿ ನಿರ್ಮಿಸುತ್ತಿರುವ ” ಕರಿ ಹೈದ ಕರಿಯಜ್ಜ” ಚಿತ್ರದ ಚಿತ್ರೀಕರಣದ ಆರಂಭದಲ್ಲೇ ನಿರ್ದೇಶಕರಾದ ಸುಧೀರ್ ರಾಜ್ ಉರ್ವ ಅವರ ಸಲಹೆಯಂತೆ ಬುರ್ದುಗೋಳಿ ಕ್ಷೇತ್ರದ ಗುಳಿಗಜ್ಜನಿಗೆ ಹುಂಜ ಮತ್ತು ಮಂಗಳೂರಿನ‌ ನಂದಿಗುಡ್ಡೆಯ ಕೊರಗಜ್ಜನ ಕ್ಷೇತ್ರದಲ್ಲಿ ಕೋಲ ಸೇವೆ ನೀಡುತ್ತೇನೆಂದು ಹರಕೆ ಹೊತ್ತಿದ್ದರಂತೆ.

ಅದರಂತೆ ಬುರ್ದುಗೋಳಿ ಕ್ಷೇತ್ರಕ್ಕೆ ಹುಂಜವನ್ನ ಹರಕೆ ನೀಡಿದ್ದು ಗುಳಿಗ-ಕೊರಗಜ್ಜನ ಉದ್ಭವ ಶಿಲೆ ಸಮ್ಮುಖದಲ್ಲಿ ಚಿತ್ರತಂಡದವರು ಪ್ರಾರ್ಥನೆ ಸಲ್ಲಿಸಿದ್ದಾರೆ.

ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿರುವ ತೊಂಭತ್ತರ ದಶಕದ ಜನಪ್ರಿಯ ನಾಯಕಿ ನಟಿಯರಾದ ಭವ್ಯ ಮತ್ತು ಶೃತಿ ಅವರು ಕೊರಗಜ್ಜ-ಗುಳಿಗಜ್ಜನಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ನಟಿ ಭವ್ಯ ಅವರ ಜನುಮ ದಿನ ಸಂದರ್ಭದಲ್ಲೆ ಕೊರಗಜ್ಜನ ಕ್ಚೇತ್ರಕ್ಕೆ ಮೊದಲ ಬಾರಿ ಭೇಟಿ ನೀಡಿದ್ದು ನಿಜಕ್ಕೂ ನನಗೆ ಸಿಕ್ಕಿದ ಭಾಗ್ಯ ಎಂದು ಅವರು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

ಕರಿ ಹೈದ ಕರಿಯಜ್ಜ ಚಿತ್ರದ 99 ಶೇಖಡ ಚಿತ್ರೀಕರಣ ಸಂಪೂರ್ಣಗೊಂಡಿದ್ದು ಎಪ್ರಿಲ್ ,ಮೇ ತಿಂಗಳಲ್ಲಿ ಬಿಡುಗಡೆಗೊಳಿಸಲಾಗುವುದು.

ತುಳು,ಕನ್ನಡ,ಮಳಯಾಳಂ ಬಾಷೆಗಳಲ್ಲಿ ಚಿತ್ರ ಮೂಡಿ ಬರಲಿದೆ.ದಕ್ಷಿಣ ಕನ್ನಡದ ,ಮಡಂತ್ಯಾರ್,ಸೋಮೇಶ್ವರ,ಉಳ್ಳಾಲ ಪ್ರದೇಶಗಳಲ್ಲಿ ಚಿತ್ರೀಕರಣ ನಡೆದಿದ್ದು ಕೊರಗಜ್ಜನ 800 ವರ್ಷಗಳ ಐತಿಹ್ಯದ ಕಥೆಯನ್ನೇ ಚಿತ್ರದಲ್ಲಿ ಅಳವಡಿಸಲಾಗಿದೆ ಎಂದು ನಿರ್ಮಾಪಕರಾದ ತ್ರಿವಿಕ್ರಮ ಸಫಲ್ಯ ಹೇಳಿದ್ದಾರೆ.

ನಟಿ ಶೃತಿಯವರ ಸುಪುತ್ರಿ ಗೌರಿ ಚಿತ್ರತಂಡದ ಜತೆಯಲ್ಲಿದ್ದರು.

ಬಳಿಕ ಚಿತ್ರತಂಡವು ನಂದಿಗುಡ್ಡೆ ಕೊರಗಜ್ಜನ ಕ್ಷೇತ್ರಕ್ಕೆ ಹರಕೆಯ ಕೋಲ ನೀಡಲು ತೆರಳಿತು.

ಬುರ್ದುಗೋಳಿ ಕ್ಷೇತ್ರದ ಅಧ್ಯಕ್ಷರಾದ ವಿಶ್ವನಾಥ್ ನಾಯ್ಕ್ ಕಲ್ಲಾಪು, ಭಂಡಾರ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್,ಪ್ರಮುಖರಾದ ಪ್ರಶಾಂತ್ ಗಟ್ಟಿ ಕಾಯಂಗಳ, ಪುರುಷೋತ್ತಮ ಕಲ್ಲಾಪು,ಪ್ರವೀಣ್ ಎಸ್.ಕುಂಪಲ ಮೊದಲಾದವರು ಉಪಸ್ಥಿತರಿದ್ದರು.

Ancient Mangaluru

ಕುಂದಾಪುರ: 15 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಅರಣ್ಯ ಇಲಾಖೆ ನೌಕರ

Published

on

ಕುಂದಾಪುರ: ಅರಣ್ಯ ಇಲಾಖೆ ವಶದಲ್ಲಿದ್ದ ವಾಹನ ಬಿಡುಗಡೆಗೆ ಲಂಚ ಸ್ವೀಕರಿಸುತ್ತಿದ್ದ  ಕುಂದಾಪುರ ಅರಣ್ಯ ಇಲಾಖೆಯ ನೌಕರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯ ಕ್ಷೇಮಾಭಿವೃದ್ಧಿ ನೌಕರ ಬಿ.ಮಂಜುನಾಥ್ ಪೂಜಾರಿ ಬಂಧಿತ ಆರೋಪಿ.

ಅರಣ್ಯ ಇಲಾಖೆ ವಶದಲ್ಲಿದ್ದ ಆಲೂರಿನ ಆದಿತ್ಯ ಎಂಬವರ ವಾಹನ ಬಿಡುಗಡೆಗಾಗಿ ಮಂಜುನಾಥ್ ಪೂಜಾರಿ 15 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದನು.  ಲಂಚ ನೀಡಲು ನಿರಾಕರಿಸಿದ ಆದಿತ್ಯ ಈ ಬಗ್ಗೆ ಉಡುಪಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ಆದಿತ್ಯ ಅವರಿಂದ 15 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ  ಸಂದರ್ಭ ಮಂಜುನಾಥ್ ಪೂಜಾರಿಯನ್ನು ಬಂಧಿಸಿದರು.  ಲೋಕಾಯುಕ್ತ ಎಸ್ಪಿ ಸೈಮನ್ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ  ಕೆ.ಸಿ. ಪ್ರಕಾಶ್ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಮಂಜುನಾಥ್ ಮತ್ತು ರಫೀಕ್ ಹಾಗೂ ಸಿಬಂದಿ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Continue Reading

DAKSHINA KANNADA

ಉಡುಪಿ : ಬೈಕ್ ಗೆ ಖಾಸಗಿ ಬಸ್‌ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಜೀವಾಂತ್ಯ

Published

on

ಉಡುಪಿ : ಉಡುಪಿಯ ಬ್ರಹ್ಮಾವರದ ಧರ್ಮಾವರಂ ಎಂಬಲ್ಲಿ ಬೈಕಿಗೆ ಬಸ್‌ ಢಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಉಪ್ಪಿನಕೋಟೆಯ 31 ವರ್ಷ ಪ್ರಾಯದ ಪ್ರೀತಮ್‌ ಡಿ’ ಸಿಲ್ವಾ ಸ್ಥಳದಲ್ಲೇ ಮೃತಪಟ್ಟ ಘಟನೆ ನಿನ್ನೆ ನಡೆದಿದೆ.

ಪ್ರೀತಮ್‌ ಅವರು ಬೈಕ್‌ ಚಲಾಯಿಸಿಕೊಂಡು ಬ್ರಹ್ಮಾವರ ಆಕಾಶವಾಣಿ ಪೆಟ್ರೋಲ್‌ ಪಂಪ್‌ ಕಡೆಯಿಂದ ಸರ್ವಿಸ್‌ ರೋಡ್‌ನ‌ಲ್ಲಿ ಆಗಮಿಸಿ ಉಪ್ಪಿನಕೋಟೆಗೆ ತೆರಳಲು ಡಿವೈಡರ್‌ ಬಳಿ ಸಾಗುತ್ತಿದ್ದಾಗ ಎದುರಿನಿಂದ ಬಂದ ಖಾಸಗಿ ಬಸ್‌ ಢಿಕ್ಕಿ ಹೊಡೆಯಿತು. ಅವಿವಾಹಿತರಾಗಿದ್ದ ಪ್ರೀತಮ್‌ ಕೆಟರಿಂಗ್‌ ಉದ್ಯಮ ನಡೆಸುತ್ತಿದ್ದರು. ಪ್ರೀತಮ್‌ ಅವರು ತಂದೆ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ. ಬ್ರಹ್ಮಾವರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Continue Reading

DAKSHINA KANNADA

ಮನೆ ಬಿಟ್ಟು ಓಡಿ ಹೋಗಿದ್ದ ಬಂಟ್ವಾಳದ ಪ್ರೇಮಿಗಳು ಕಾಸರಗೋಡಿನಲ್ಲಿ ಪತ್ತೆ

Published

on

ಬಂಟ್ವಾಳ : 4 ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಂಟ್ವಾಳ ತಾಲೂಕು ಸಜೀಪಮುನ್ನೂರು ಗ್ರಾಮದ ಉದ್ದೊಟ್ಟು ನಿವಾಸಿಗಳಾದ ಅಕ್ಕ ಪಕ್ಕದ ಮನೆಗಳ ಯುವಕ ಹಾಗೂ ಯುವತಿಯನ್ನು ಬಂಟ್ವಾಳ ಪೊಲೀಸರು ಕೇರಳದ ಕಾಸರಗೋಡು ಜಿಲ್ಲೆಯ ಕಾಂಞಂಗಾಡಿನಲ್ಲಿ ಪತ್ತೆ ಹಚ್ಚಿ ಊರಿಗೆ ಕರೆ ತಂದಿದ್ದಾರೆ.

ಉದ್ದೊಟ್ಟು ನಿವಾಸಿ ಅಬ್ದುಲ್‌ಹಮೀದ್‌ಅವರ ಪುತ್ರಿ ಆಯಿಸತ್‌ರಸ್ಮಾ(18) ಮತ್ತು ಹೈದರ್‌ಅವರ ಪುತ್ರ ಮಹಮ್ಮದ್‌ಸಿನಾನ್‌ (23) ಅವರು ನ. 23 ರಂದು ತಂತಮ್ಮ ಮನೆಗಳಲ್ಲಿ ಮಲಗಿದ್ದವರು ನ. 24ರಂದು ಬೆಳಗಾಗುವಷ್ಟರಲ್ಲಿ ಕಾಣೆಯಾಗಿದ್ದರು. ಮನೆಯವರ ದೂರಿನಂತೆ ಹುಡುಕಾಟ ನಡೆಸಿದ ಬಂಟ್ವಾಳ ಪೊಲೀಸರು ಅವರಿಬ್ಬರನ್ನೂ ಕಾಂಞಂಗಾಡಿನಲ್ಲಿ ಪತ್ತೆ ಹಚ್ಚಿದ್ದು, ಠಾಣೆಗೆ ತಂದು ವಿಚಾರಿಸಿದಾಗ ತಾವಿಬ್ಬರೂ ಪರಸ್ಪರ ಪ್ರೀತಿಸಿದ್ದು, ಮದುವೆಯಾಗುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.

Continue Reading

LATEST NEWS

Trending