LATEST NEWS
ತಮನ್ನಾಳ ಗುವಾಹಟಿ ವಿಚಾರಣೆ..! ಏನಿದು ಪ್ರಕರಣ ??
ಮಂಗಳೂರು: ‘HPZ ಟೋಕನ್’ ಮೊಬೈಲ್ ಅಪ್ಲಿಕೇಶನ್ಗೆ ಲಿಂಕ್ ಮಾಡಲಾದ ಮನಿ ಲಾಂಡರಿಂಗ್ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ನಟಿ ತಮನ್ನಾ ಭಾಟಿಯಾ ಅವರನ್ನು ಗುರುವಾರ ಇಡಿ ಗುವಾಹಟಿ ವಿಚಾರಣೆಗೆ ಒಳಪಡಿಸಲಾಗಿತ್ತು.
ಹಲವಾರು ಹೂಡಿಕೆದಾರರು ಬಿಟ್ಕಾಯಿನ್ ಮತ್ತು ಇತರ ಕೆಲವು ಕ್ರಿಪ್ಟೋಕರೆನ್ಸಿಗಳಿಂದ ವಂಚಿಸಿದ್ದಾರೆ ಎಂದು ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ ತಿಳಿಸಿದೆ. ಮೂಲಗಳನ್ನು ಉಲ್ಲೇಖಿಸಿ ಗಣಿಗಾರಿಕೆಯ ನೆಪದಲ್ಲಿ ವಂಚಿಸಲಾಗಿದೆ.
ಆ್ಯಪ್ ಕಂಪನಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ “ಸೆಲೆಬ್ರಿಟಿಯಾಗಿ ಕಾಣಿಸಿಕೊಂಡಿದ್ದಕ್ಕಾಗಿ ಭಾಟಿಯಾ ಸ್ವಲ್ಪ ಹಣವನ್ನು ಪಡೆದಿದ್ದಾರೆ ಮತ್ತು ಅವರ ವಿರುದ್ಧ ಯಾವುದೇ “ಕ್ರಿಮಿನಲ್” ಆರೋಪಗಳಿಲ್ಲ ಎಂದು ಪಿಟಿಐ ವರದಿ ಮಾಡಿದೆ.
ನಟಿ ತಮನ್ನಾ ಭಾಟಿಯಾ ಅವರ ಹೇಳಿಕೆಯನ್ನು ಪಿಎಂಎಲ್ಎ ಅಡಿಯಲ್ಲಿ ಇಡಿ ಪ್ರಾದೇಶಿಕ ಕಚೇರಿಯಲ್ಲಿ ದಾಖಲಿಸಲಾಗಿದೆ, ಇದು ಅಕ್ರಮ ಹಣ ವರ್ಗಾವಣೆಯನ್ನು ತಡೆಯುವ ಕಾನೂನನ್ನು ಮಾಡಿದೆ. ಆಪ್ ಕಂಪನಿಯ ಕಾರ್ಯಕ್ರಮದಲ್ಲಿ ತಮನ್ನಾ ಸೆಲೆಬ್ರಿಟಿಯಾಗಿ ಒಂದಷ್ಟು ಹಣ ಪಡೆದಿದ್ದರು.
ಈ ಹಿಂದೆಯೂ ಅವರಿಗೆ ಸಮನ್ಸ್ ನೀಡಲಾಗಿತ್ತು, ಆದರೆ ಅವರು ಕೆಲಸದ ಕಾರಣ ಸಮನ್ಸ್ ಅನ್ನು ಮುಂದೂಡಿದ್ದರು, ಮಾರ್ಚ್ನಲ್ಲಿ ಸಲ್ಲಿಸಿದ ಚಾರ್ಜ್ಶೀಟ್ನಲ್ಲಿ ಒಟ್ಟು 299 ಘಟಕಗಳನ್ನು ಆರೋಪಿಸಲಾಗಿದ್ದು, ಇದರಲ್ಲಿ 76 ಚೀನೀ ನಿಯಂತ್ರಿತ ಘಟಕಗಳು ಸೇರಿವೆ, ಅದರಲ್ಲಿ 10 ನಿರ್ದೇಶಕರು ಚೀನಾ ಮೂಲದವರಾಗಿದ್ದರೆ, ಎರಡು ಘಟಕಗಳು ಇತರ ವಿದೇಶಿ ಪ್ರಜೆಗಳಿಂದ ನಿಯಂತ್ರಿಸಲ್ಪಡುತ್ತವೆ ಎಂದು ವರದಿಯಾಗಿದೆ.
LATEST NEWS
ಕೊನೆಗೂ ಅನುರಾಧಳ ಕೈ ಸೇರಿದ ಆಸ್ತಿ; ಎಷ್ಟು ಗೊತ್ತಾ ?
ಮಂಗಳೂರು: ಮಾಜಿ ಡಾನ್ ಮುತ್ತಪ್ಪ ರೈ ಅವರ ನಿಧನದ ನಂತರ ಸಾವಿರಾರು ಕೋಟಿ ರೂ. ಮೌಲ್ಯದ ಒಡೆತನವಿದ್ದ ಆಸ್ತಿಯನ್ನು ತನ್ನಿಬ್ಬರು ಮಕ್ಕಳು, ಎರಡನೇ ಹೆಂಡತಿ, ಸಹೋದರನ ಪುತ್ರ, ಮನೆ ಕೆಲಸದವರು ಸೇರಿ ಯಾರ್ಯಾರಿಗೆ ಎಷ್ಟು ಆಸ್ತಿ ಸೇರಬೇಕು ಎಂದು ಬರೆದಿಟ್ಟದ್ದರೂ, ಮುತ್ತಪ್ಪ ರೈ ಮಕ್ಕಳು ತಮ್ಮ ತಂದೆಯ ಎರಡನೇ ಹೆಂಡತಿಗೆ ಆಸ್ತಿ ನೀಡದೇ ಮನೆಯಿಂದ ಹೊರಗೆ ಹಾಕಿದ್ದರು.
ಇದನ್ನು ಪ್ರಶ್ನೆ ಮಾಡಿ ಕೋರ್ಟ್ ಮೊರೆ ಹೋಗಿದ್ದ ಮುತ್ತಪ್ಪ ರೈ ಅವರ ಎರಡನೇ ಪತ್ನಿ ಅನುರಾಧಾ ರೈ ಅವರ ಕೈಗೆ ಇದೀಗ ನೂರಾರು ಕೋಟಿ ಆಸ್ತಿ ಕೈ ಸೇರಿದೆ.
ಮುತ್ತಪ್ಪ ರೈ ಅವರ ಮೊದಲ ಹೆಂಡತಿ ಸಾವಿಗೀಡಾದ ನಂತರ ಮಕ್ಕಳು ಚೆನ್ನಾಗಿ ನೋಡಿಕೊಳ್ಳದ ಕಾರಣ ತನಗೊಬ್ಬ ಹೆಂಡತಿಯ ಅಗತ್ಯವಿದೆ ಎಂದು ಅವರು ಅನುರಾಧ ರೈ ಅವರನ್ನು ಮದುವೆಯಾಗಿದ್ದರು. ಮುತ್ತಪ್ಪ ರೈ ಅನಾರೋಗ್ಯ ಕಾಣಿಸಿಕೊಳ್ಳುತ್ತಿದ್ದಂತೆ ಮಕ್ಕಳು ಎರಡನೇ ಹೆಂಡತಿಗೆ ಎಲ್ಲಿ ಆಸ್ತಿ ಕೊಡಬೇಕಾಗಬಹುದು ಎನ್ನುವ ಕಾರಣಕ್ಕೆ ಮನೆಯಿಂದ ಹೊರಗೆ ಹಾಕಿದ್ದರು.
ವಿಲ್ನಲ್ಲಿ ಮುತ್ತಪ್ಪ ರೈ ಅವರು ತಮ್ಮ ಪುತ್ರರಾದ ರಾಖಿ ರೈ, ರಿಕ್ಕಿ ರೈ, ಸಹೋದರನ ಪುತ್ರ ಅಶ್ವಿನ್ ರೈ, ಎರಡನೇ ಪತ್ನಿ ಅನುರಾಧ ರೈ, ಮನೆಕೆಲಸದವರಿಗೂ ವಿಲ್ನಲ್ಲಿ ಆಸ್ತಿ ಹಂಚಿಕೆ ಮಾಡಿದ್ದರು. ಒಟ್ಟು 41 ಪುಟಗಳ ವಿಲ್ ಬರೆಸಿದ್ದರು.
2020ರಲ್ಲಿ ಮುತ್ತಪ್ಪ ರೈ ಸಾವಿಗೀಡಾಗಿದ್ದು, ನಂತರ ಅವರು ಬರೆದಿಟ್ಟ ವಿಲ್ ಅನ್ನು ಮಕ್ಕಳು ಮರೆಮಾಚಿದ್ದಾರೆ. ಯಾರಿಗೂ ತುಂಡು ಆಸ್ತಿ ಕೊಡದೇ ರಾಖಿ ರೈ, ರಿಕ್ಕಿ ರೈ ತಾವೇ ಇಟ್ಟುಕೊಂಡಿದ್ದರು.
ಬಳಿಕ ಅನುರಾಧ ರೈ ಈ ವಿರುದ್ಧ ಕೋರ್ಟ್ ಮೊರೆ ಹೋಗಿದ್ದು, ಇದೀಗ ಬೆಂಗಳೂರಿನ 19 ನೇ ಸಿಟಿ ಸಿವಿಲ್ ಹಾಗೂ ಸೆಷನ್ಸ್ ಕೋರ್ಟ್ನಲ್ಲಿ ಆಸ್ತಿ ವಿವಾದ ಇತ್ಯರ್ಥಗೊಂಡಿದೆ. ಒಟ್ಟು 100 ಕೋಟಿ ಮೌಲ್ಯದ ಆಸ್ತಿ ಹಂಚಿಕೆ ಮಾಡಲಾಗಿದೆ ಎನ್ನಲಾಗಿದೆ.
ಅನುರಾಧಾ ರೈ ಗೆ ಸಿಕ್ಕ ಆಸ್ತಿ ಎಷ್ಟು ಗೊತ್ತಾ ?
ಅನುರಾಧ ರೈಗೆ 7 ಕೋಟಿ ನಗದು ಹಣ, ಮಂಡ್ಯದ ಪಾಂಡವಪುರದ ಬಳಿ 22 ಎಕರೆ ಜಮೀನು, ಮೈಸೂರಿನಲ್ಲಿ 4,800 ಚದರಡಿ ನಿವೇಶನ ಹಾಗೂ ಅದೇ ನಿವೇಶನದಲ್ಲಿನ ಮನೆ, ನಂದಿಬೆಟ್ಟ ಬಳಿಯ ಕೆಂಪತಿಮ್ಮನಹಳ್ಳಿಯಲ್ಲಿ 5.5 ಎಕರೆ ಜಮೀನು. ಅನುರಾಧ ರೈ ಅವರಿಗೆ ನೀಡಲಾದ ಆಸ್ತಿ 100 ಕೋಟಿ ರೂ. ಎಂದು ಹೇಳಲಾಗಿದೆ.
BIG BOSS
ನನ್ನ ಹೀರೋ ಸುದೀಪ್, ನನ್ನ ಕ್ಷಮೆಯನ್ನು ದಯವಿಟ್ಟು ಸ್ವೀಕರಿಸಿ: ಬಿಗ್ ಬಾಸ್ ನಿಂದ ಹೊರಬಂದ ಜಗದೀಶ್ ಫಸ್ಟ್ ರಿಯಾಕ್ಷನ್!
ಬೆಂಗಳೂರು: ಬಿಗ್ಬಾಸ್ ಕನ್ನಡ ಸೀಸನ್ 11ರಿಂದ ಲಾಯರ್ ಜಗದೀಶ್ ಹೊರ ಹಾಕಲ್ಪಟ್ಟಿದ್ದಾರೆ. ಮನೆಯಲ್ಲಿ ಅಶಿಸ್ತು ತೋರಿ, ಮಹಿಳೆಯರ ಬಗ್ಗೆ ಹಗುರವಾಗಿ ಮಾತನಾಡಿದ ಕಾರಣ ಜಗದೀಶ್ ಅನ್ನು ಹೊರಗೆ ಹಾಕಲಾಗಿದೆ. ಹೊರಗಡೆ ಬಂದ ಬಳಿಕ ಅವರು, ಸಾಮಾಜಿಕ ಜಾಲತಾಣದ ಮೂಲಕ ನನ್ನ ಹೀರೋ ಸುದೀಪ್, ನನ್ನ ಕ್ಷಮೆಯನ್ನು ದಯವಿಟ್ಟು ಸ್ವೀಕರಿಸಿ ಎಂದು ಅವರು ತಿಳಿಸಿದ್ದಾರೆ.
ನಿಮ್ಮ ಪ್ರತಿ ಒಂದು ಚಪ್ಪಾಳೆ, ಸಂದೇಶ, ನಿಮ್ಮ ಆಶೀರ್ವಾದ ನನ್ನ ಈ ಬಿಗ್ಬಾಸ್ ಪಯಣ ಯಶಸ್ಸು, ಅದು ನೀವು ಇಟ್ಟ ಈ ನಂಬಿಕೆ. ಮತ್ತೊಮ್ಮೆ ಕೋಟಿ ಕೋಟಿ ನಮನ. ಸಾರ್ಥಕ ಆಯಿತು, ನನ್ನ ಈ ಹುಟ್ಟು, ಈ ಪ್ರೀತಿ, ನನ್ನ ಗೆಲುವಿಗೆ ನೀವು ಕೊಟ್ಟ ಆ ಒಡನಾಟ, ವಿಶ್ಲೇಷಣೆ ಮಾಡಲು ನನ್ನ ಬಳಿ ಪದಗಳು ಕಡಿಮೆ ಎಂದು ತಿಳಿಸಿದ್ದಾರೆ. ನೂರಾರು ಕ್ಯಾಮೆರಾ, ಸಾವಿರಾರು ಬಿಗ್ಬಾಸ್ ಸಿಬ್ಬಂದಿ, ಆ ನಿರ್ದೇಶಕ, ಆ ಮಾಂತ್ರಿಕ ತಂತ್ರಜ್ಞರು, ಅವರ 24/7 ಡೆಡಿಕೇಷನ್ ಹಾಗೂ 20 ಕೋಟಿಗೂ ಹೆಚ್ಚಿನ ಬಿಗ್ಬಾಸ್ ಅಭಿಮಾನಿ ದೇವರುಗಳ ಆಶೀರ್ವಾದ ಈ ಹೊಸ ಕರ್ನಾಟಕ ಕ್ರಶ್ ಲಾಯರ್ ಜಗದೀಶ್ ಆಗಿದ್ದಾನೆ ಎಂದು ಹೇಳಿದ್ದಾರೆ.
ನನ್ನ ಹೀರೋ ಸುದೀಪ್, ನನ್ನ ಕ್ಷಮೆಯನ್ನು ದಯವಿಟ್ಟು ಸ್ವೀಕರಿಸಿ. ರಂಜಿತ್, ಮಾನಸ ಮತ್ತು ಎಲ್ಲರೂ ನನ್ನನ್ನು ಕ್ಷಮಿಸಿ, ನೀವೆಲ್ಲ ತುಂಬಾ ಚಿಕ್ಕ ವಯಸ್ಸಿನಲ್ಲೇ ಅಧ್ಭುತ ಕಲಾವಿದರು, ನಾನು ನಿಮ್ಮ ಜೊತೆಯಲ್ಲಿ ಒಬ್ಬನಾಗಿ ನಗಲು ಪ್ರಯತ್ನ ಪಟ್ಟೆ ಅಷ್ಟೆ, ಈ ನಿಟ್ಟಿನಲ್ಲಿ ಕೆಲವು ತಪ್ಪುಗಳು ನನ್ನಿಂದ ಆಗಿದೆ. ಅದು ನಟನೆ ಅಥವಾ ಮನರಂಜನೆಯ ಒಂದು ಭಾಗವಷ್ಟೆ. ವೈಯಕ್ತಿಕ ದ್ವೇಷ ಯಾವುದೂ ಇಲ್ಲ’ ಎಂದಿದ್ದಾರೆ ಜಗದೀಶ್. ಮಾಧ್ಯಮಗಳನ್ನು ಭೇಟಿ ಆಗಲು ಕಾಯುತ್ತಿದ್ದೇನೆ ಎಂದಿರುವ ಜಗದೀಶ್, ಭಾನುವಾರದಂದು ಜಕ್ಕೂರು ಏರೋಸ್ಪೇಸ್ ಬಳಿ ಸುದ್ದಿಗೋಷ್ಠಿ ನಡೆಸಲಿದ್ದೇನೆ ಎಂದು ತಿಳಿಸಿದರು.
LATEST NEWS
ಮಂಗಳೂರು: ಗಾಂಜಾ ಮಾರಾಟಕ್ಕೆ ಯತ್ನ -1.50ಕೆಜಿ ಗಾಂಜಾ ಸಹಿತ ಆರೋಪಿ ಅರೆಸ್ಟ್
ಮಂಗಳೂರು: ನಗರದ ಹೊಸಬೆಟ್ಟು ಬೀಚ್ ರಸ್ತೆಯಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಬಿಹಾರ ಮೂಲದ ಅಸಾಮಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.
ಬಿಹಾರ್ ರಾಜ್ಯದ ನಿವಾಸಿ ಸೋನಿ ಕುಮಾರ್(27) ಬಂಧಿತ ಆರೋಪಿ. ಸುರತ್ಕಲ್ ಠಾಣಾ ಪೊಲೀಸರು ಹೊಸಬೆಟ್ಟು ಬಳಿ ಬೀಚ್ ರಸ್ತೆಯಲ್ಲಿ ಗಸ್ತು ತಿರುಗಾಡುತ್ತಿದ್ದರು. ಈ ವೇಳೆ ಹೆಗಲಿನಲ್ಲಿ ಬ್ಯಾಗ್ ಹಾಕಿಕೊಂಡು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವಕನೋರ್ವನು ಪೊಲಿಸ್ ಜೀಪ್ ಅನ್ನು ಕಂಡ ತಕ್ಷಣ ಓಡಲು ಯತ್ನಿಸಿದ್ದಾನೆ. ಆತನನ್ನು ಪೊಲೀಸರು ಹಿಡಿದು ವಿಚಾರಿಸಿದರೆ, ಆತನು ಹಿಂದಿ ಭಾಷೆಯಲ್ಲಿ ಮಾತನಾಡಿದ್ದಾನೆ.
ಓಡಿ ಹೋಗಲು ಕಾರಣವೇನು ಕೇಳಿದಾಗ ಮಾಹಿತಿ ನೀಡಲು ತಡವರಿಸಿದ್ದಾನೆ. ತಕ್ಷಣ ಕೂಲಂಕುಶವಾಗಿ ವಿಚಾರಿಸಿದಾಗ ತನ್ನ ಬ್ಯಾಗ್ನಲ್ಲಿ ಗಾಂಜಾ ಇರುವುದಾಗಿ ತಿಳಿಸಿದ್ದಾನೆ. ತಾನು ಬಿಹಾರ ರಾಜ್ಯದಿಂದ ಗಾಂಜಾವನ್ನು ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮಾರಾಟ ಮಾಡಲು ತಂದಿರುವುದಾಗಿ ತಿಳಿಸಿದ್ದಾನೆ. ತಕ್ಷಣ ಆತನನ್ನು ವಶಕ್ಕೆ ತೆಗೆದುಕೊಂಡ ಸುರತ್ಕಲ್ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಆರೋಪಿಯಿಂದ ಕೃತ್ಯಕ್ಕೆ ಉಪಯೋಗಿಸಿದ 30,000 ರೂ. ಮೌಲ್ಯದ ಸುಮಾರು 1.5 ಕೆಜಿ ಗಾಂಜಾ, 15,000 ರೂ. ಮೌಲ್ಯದ ಮೊಬೈಲ್ ಫೋನನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.
- FILM6 days ago
ಮಾಲ್ಡೀವ್ಸ್ ದ್ವೀಪದಲ್ಲಿ ಹನಿಮೂನ್..! ಜಾಲಿ ಮೂಡ್ನಲ್ಲಿ ತರುಣ್ ಸುಧೀರ್ ದಂಪತಿ
- LATEST NEWS5 days ago
‘ಸೆಕ್ಸ್’ ಗೆ ಅಡ್ಡಿಯಾದ ಇಬ್ಬರು ಮಕ್ಕಳನ್ನೇ ಹತ್ಯೆ ಮಾಡಿದ ಪಾಪಿ ತಾಯಿ.!
- BIG BOSS5 days ago
ಯಾರೂ ಊಹಿಸದ ವ್ಯಕ್ತಿಗೆ ಈ ವಾರ ಕಿಚ್ಚನ ಚಪ್ಪಾಳೆ, ಬಿಗ್ಬಾಸ್ ಮನೆಯಲ್ಲಿ ಇದೇ ಮೊದಲು
- LATEST NEWS5 days ago
ಹಿರಿಯಡ್ಕ: ಉದ್ಯಮಿ ಪ್ರಸನ್ನ ಶೆಟ್ಟಿ ತೀರ್ಥಹಳ್ಳಿಯ ವಸತಿ ಗೃಹದಲ್ಲಿ ಆತ್ಮಹ*ತ್ಯೆ