BIG BOSS
ಇದೇ ಕಾರಣಕ್ಕೆ ಮೊದಲ ವಾರವೇ ಯಮುನಾ ಶ್ರೀ ನಿಧಿ ಬಿಗ್ಬಾಸ್ ಮನೆಯಿಂದ ಔಟ್ ಆದದ್ದು..!
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 11 ಗ್ರ್ಯಾಂಡ್ ಆಗಿ ಓಪನಿಂಗ್ ಪಡೆದುಕೊಂಡು ಒಂದು ವಾರ ಕಳೆದಿದೆ. ಪ್ರತಿ ಸೀಸನ್ನಂತೆ ಈ ಬಾರಿಯೂ ಕೂಡ ಬಿಗ್ಬಾಸ್ ಮನೆಯಿಂದ ಓರ್ವ ಸ್ಪರ್ಧಿ ಆಚೆ ಬಂದಿದ್ದಾರೆ. ಕನ್ನಡದ ಬಿಗ್ಬಾಸ್ ಸೀಸನ್ 11 ಶುರುವಾಗಿ ಒಂದೇ ವಾರಕ್ಕೆ ಕನ್ನಡದ ನಟಿ ಯಮುನಾ ಶ್ರೀನಿಧಿ ಆಚೆ ಬಂದಿದ್ದಾರೆ.
ಈ ವಾರದಲ್ಲಿ ಬಿಗ್ಬಾಸ್ ಮನೆಯಿಂದ ಆಚೆ ಹೋಗಲು ಒಟ್ಟು 9 ಮಂದಿ ನಾಮಿನೇಟ್ ಆಗಿದ್ದರು. ಲಾಯರ್ ಜಗದೀಶ್, ಗೌತಮಿ ಜಾಧವ್, ಹಂಸ, ಭವ್ಯಾ ಗೌಡ, ಯಮುನಾ, ಶಿಶಿರ್, ಮಾನಸಾ, ಮೋಕ್ಷಿತಾ ಪೈ ಹಾಗೂ ಚೈತ್ರಾ ಕುಂದಾಪುರ ಬಿಗ್ಬಾಸ್ ಮನೆಯಿಂದ ಆಚೆ ಹೋಗಲು ನಾಮಿನೇಟ್ ಆಗಿದ್ದಾರೆ. ಇವರ ಪೈಕಿ ಶನಿವಾರದ ಎಪಿಸೋಡ್ನಲ್ಲಿ ಭವ್ಯಾ ಗೌಡ, ಗೌತಮಿ ಜಾಧವ್ ಹಾಗೂ ಮಾನಸ ಅವರನ್ನು ಸೇಫ್ ಮಾಡಲಾಗಿತ್ತು. ಇನ್ನೂ ಉಳಿದಂತೆ ಉಗ್ರಂ ಮಂಜು, ಐಶ್ವರ್ಯ, ಧರ್ಮ ಕೀರ್ತಿರಾಜ್, ಧನರಾಜ್, ಅನುಷಾ ರೈ, ರಂಜಿತ್, ಗೋಲ್ಡ್ ಸುರೇಶ್, ತ್ರೀವಿಕ್ರಂ ಸೇಫ್ ಆಗಿದ್ದರು.
ಇವರ ಪೈಕಿ ಮೊದಲ ವಾರವೇ ಬಿಗ್ಬಾಸ್ ಮನೆಯಿಂದ ಯಮುನ ಶ್ರೀ ನಿಧಿ ಔಟ್ ಆಗಿದ್ದಾರೆ. ಇವರು ಸರಿಯಾಗಿ ಟಾಸ್ಕ್ ಗಳನ್ನು ಆಡದ ಕಾರಣ ಹಾಗೂ ಇವರ ಅಭಿಮಾನಿಗಳು ಸರಿಯಾಗಿ ಓಟ್ ಹಾಕದ ಕಾರಣ ಬಿಗ್ಬಾಸ್ ಮನೆಯಿಂದ ಔಟ್ ಆಗಿದ್ದಾರೆ ಎನ್ನುವ ಸಂಶಯ ಅಭಿಮಾನಿಗಳಲ್ಲಿ ಮೂಡಿದೆ. ಒಟ್ಟು 17 ಸ್ಪರ್ಧಿಗಳಿದ್ದ ದೊಡ್ಮನೆಯಲ್ಲಿ ಈಗ ಓರ್ವ ಸ್ಪರ್ಧಿಯನ್ನು ಆಚೆ ಕಳುಹಿಸಲಾಗಿದೆ. ಹೀಗೆ ಪ್ರತಿ ವಾರವು ಬಿಗ್ಬಾಸ್ ಮನೆಯಿಂದ ಒಬ್ಬರಾದ ಮೇಲೆ ಒಬ್ಬರು ಸ್ಪರ್ಧಿಗಳು ಬಿಗ್ಬಾಸ್ ಮನೆಯಿಂದ ಆಚೆ ಬರಲಿದ್ದಾರೆ.
BIG BOSS
BBK 11: ಜಗದೀಶ್ ಅಲ್ವಂತೆ! ಬಿಗ್ ಬಾಸ್ ಮನೆಯಲ್ಲಿ ಈ ವ್ಯಕ್ತಿ ತುಂಬಾ ಡೇಂಜರಸ್ ಎಂದ ನಟಿ ಯಮುನಾ!
ಬಿಗ್ ಬಾಸ್ ಕನ್ನಡ ಸೀಸನ್ 11 ಮೊದಲ ವಾರ ಪೂರ್ತಿಗೊಂಡು ಮುನ್ನುಗ್ಗುತ್ತಿದೆ. ಮೊದಲ ವಾರ ನಟಿ ಯಮುನಾ ಮನೆಯಿಂದ ಹೊರಬಂದಿದ್ದಾರೆ. ಹೊರ ಬಂದ ಬಳಿಕ ಬಿಗ್ಬಾಸ್ ಕುರಿತು ಮಾತನಾಡಿದ್ದಾರೆ. ಹಲವು ಸಂಗತಿಯನ್ನು ಬಿಚ್ಚಿಟ್ಟಿದ್ದಾರೆ.
ಬಿಗ್ ಬಾಸ್ ಮನೆಯಲ್ಲಿ ತುಂಬಾ ಡೇಂಜರಸ್ ವ್ಯಕ್ತಿಯ ಬಗ್ಗೆಯೂ ನಟಿ ಯಮುನಾ ಹೇಳಿದ್ದಾರೆ. ಲಾಯರ್ ಜಗದೀಶ್ಗಿಂತ ಉಗ್ರಂ ಮಂಜು ತುಂಬಾ ಡೇಂಜರಸ್ ಎಂದು ಹೇಳಿದ್ದಾರೆ. ಸಿಕ್ಕಪಟ್ಟೆ ಮ್ಯಾನಿಪುಲೇಟ್, ಎಲ್ಲರನ್ನು ತಮ್ಮತ್ತ ಸೆಳೆಯುವವರು. ಏನು ಹೇಳದೆ ಏನು ಮಾಡದೆ ಟ್ರಿಕ್ ಮಾಡುವವರು ಎಂದು ಹೇಳಿದ್ದಾರೆ.
ಸದ್ಯ ಮೊದಲ ವಾರವೇ ನಟಿ ಹೊರಬಂದಿದ್ದು, ಬಿಗ್ ಮನೆಯ ಆಟಗಾರರ ಬಗ್ಗೆ ಮನಬಿಚ್ಚಿ ಹೇಳಿದ್ದಾರೆ. ಅದರಲ್ಲೂ ಆಟವನ್ನು ಇನ್ನೂ ಪ್ರಾರಂಭಿಸದವರು ಮತ್ತು ಪ್ರಾರಂಭಿಸಿದವರ ಬಗ್ಗೆಯೂ ಹೇಳಿದ್ದಾರೆ. ಲಾಯರ್ ಜಗದೀಶ್ ಮೊದಲ ದಿನದಿಂದಲೇ ಆಟ ಶುರು ಮಾಡಿದ್ದಾರೆಂದು ಹೇಳಿದ್ದಾರೆ. ಒಟ್ಟಿನಲ್ಲಿ ಕಿಚ್ಚ ನಿರೂಪಣೆಗೆ ಬಿಗ್ ಬಾಸ್ ಮನೆಯಲ್ಲಿ ಒಂದು ವಾರ ಕಳೆದ ಅನುಭವವನ್ನು ನಟಿ ಯಮುನಾ ಬಿಚ್ಚಿಟ್ಟಿದ್ದಾರೆ.
BIG BOSS
ಬರಿಗಾಲಲ್ಲೇ ಶೋ ನಡೆಸಿದ ಕಿಚ್ಚ.. ಕಾರಣ ಏನು ಗೊತ್ತಾ..?
ಬಿಗ್ಬಾಸ್ ಸೀಸನ್ 11 ಶುರುವಾಗಿ ಮೊದಲ ವಾರದ ಕಿಚ್ಚನ ಪಂಚಾಯ್ತಿನೂ ನಡೆದಿದೆ. ಸ್ವರ್ಗ, ನರಕ ಅನ್ನೋ ಹೊಸ ಕಾನ್ಸೆಪ್ಟ್ ಕೂಡ ಜನರಿಗೆ ಇಷ್ಟವಾಗ್ತಿದೆ. ಆದರೆ, ಈ ಸಲದ ಬಿಗ್ಬಾಸ್ನ ಮೊದಲ ಕಿಚ್ಚನ ಪಂಚಾಯ್ತಿ ಫುಲ್ ಡಿಫರೆಂಟಾಗಿದೆ. ಎಷ್ಟೋ ಅಭಿಮಾನಿಗಳ ತಲೆಗೆ ಹುಳವನ್ನೂ ಬಿಟ್ಟಿದೆ. ಅಚ್ಚರಿಯೂ ಎದುರಾಗಿದೆ. ಕಾರಣ ಸ್ಟೈಲ್ಗೆ ಹೆಚ್ಚು ಪ್ರಾಮುಖ್ಯತೆ ಕೊಡೋ ಸುದೀಪ್ ಕಾಶಿ ಫ್ರಮ್ ವಿಲೇಜ್ ಸಿನಿಮಾ ಪಾತ್ರಧಾರಿಯಂತೆ ಹೋಮ್ಲಿಯಾಗಿ ಕಾಣಿಸಿಕೊಂಡಿದ್ದಾರೆ. ಇದಕ್ಕಿಂತಲೂ ಅಚ್ಚರಿ ಬರಿಗಾಲಿನಲ್ಲಿ ಕಾಣಿಸಿಕೊಂಡಿದ್ದು.
ಬೂದು ಬಣ್ಣದ ಡ್ರೆಸ್ಗೂ ಬರಿಗಾಲಿಗೂ ದಸರಾಗೂ ನಂಟಿದೆಯೇ?
ನವರಾತ್ರಿಯ ಮೂರನೇ ದಿನ ಅಂದ್ರೆ ಶನಿವಾರ ತಾಯಿ ದುರ್ಗೆಯನ್ನ ಚಂದ್ರಘಂಟಾ ಹೆಸರಿನಲ್ಲಿ ಪೂಜಿಸಲಾಗುತ್ತದೆ. ತದಿಗೆಯ ದಿನ ಬರುವ ಈ ತಾಯಿಗೆ ಬೂದು ಬಣ್ಣ ಅಂದ್ರೆ ಅಚ್ಚು ಮೆಚ್ಚು. ಅದೇ ರೀತಿ ಕಿಚ್ಚ ಸುದೀಪ್ ಸಹ ಬೂದು ಬಣ್ಣದ ಸಾಂಪ್ರದಾಯಿಕ ಡ್ರೆಸ್ನಲ್ಲಿ ಕಾಣಿಸಿಕೊಂಡ್ರು. ಇದಕ್ಕೆ ಪೂರಕ ಎನ್ನುವಂತೆ ಬರಿಗಾಲಿನಲ್ಲಿ ಬಿಗ್ಬಾಸ್ ಕಾರ್ಯಕ್ರಮ ನಿರೂಪಣೆ ಮಾಡಿದ್ದಾರೆ. ಹಾಗಾಗಿಯೇ ನವರಾತ್ರಿಯ ಸಂದರ್ಭದಲ್ಲಿ ಸುದೀಪ್ ಮಹತ್ವದ ಸಂದೇಶ ರವಾನಿಸಿದ್ದಾರೆ. ಅದೇನಂದ್ರೆ ಸುದೀಪ್ ಕಠಿಣ ವ್ರತಾಚರಣೆಯಲ್ಲಿದ್ದಾರೆ ಎಂಬ ಮಹತ್ವದ ಖಚಿತ ಮಾಹಿತಿ ಲಭ್ಯವಾಗಿದೆ.
ಸೂಪರ್ ಸಂಡೇ ಶೋನಲ್ಲೂ ಕೇಸರಿ ಬಣ್ಣದ ಡ್ರೆಸ್!
ನವರಾತ್ರಿಯ 4ನೇ ದಿನ ಕೂಷ್ಮಾಂಡ ದೇವಿಯ ರೂಪದಲ್ಲಿ ತಾಯಿ ದುರ್ಗೆಯನ್ನು ಆರಾಧಿಸಲಾಗುತ್ತದೆ. ಈ ತಾಯಿಯನ್ನು ಕೇಸರಿ/ಕಿತ್ತಳೆ ಬಣ್ಣದ ವಸ್ತು, ಪದಾರ್ಥಗಳಿಂದ ಪೂಜಿಸುತ್ತಾರೆ. ಕೂಷ್ಮಾಂಡ ದೇವಿಗೆ ಕೇಸರಿ ಬಣ್ಣ ಅಚ್ಚುಮೆಚ್ಚು. ಹಾಗಾಗಿಯೇ ಸುದೀಪ್ ಸೂಪರ್ ಸಂಡೇ ಶೋವನ್ನು ಕಿಚ್ಚ ಕಿತ್ತಳೆ ಬಣ್ಣದ ಬಟ್ಟೆಯನ್ನು ಧರಿಸಿ ಮಾಡಿದ್ದಾರೆ. ಅಲ್ಲದೇ ಕಠಿಣ ವ್ರತವನ್ನು ಆಚರಿಸುತ್ತಿದ್ದಾರೆ ಅನ್ನೋದಕ್ಕೆ ಸಾಕ್ಷಿಯಾಗಿದೆ.
ಸುದೀಪ್ ವ್ರತ ಹೇಗಿರಲಿದೆ? ಕಿಚ್ಚ ಎಷ್ಟು ಕಟ್ಟುನಿಟ್ಟು ಇರ್ತಾರೆ ಗೊತ್ತಾ?
ಕೋಪ ಮಾಡಿಕೊಳ್ಳುವಂತಿಲ್ಲ, ಜೋರಾಗಿ ಮಾತಾಡುವಂತಿಲ್ಲ!
ಸುದೀಪ್ ಆರೋಗ್ಯದ ಗುಟ್ಟು ಏನು ಅನ್ನೋದನ್ನ ಅಭಿಮಾನಿಗಳು ಪದೇ ಪದೇ ಕೇಳೋ ಪ್ರಶ್ನೆ. ಅಸಲಿಗೆ ನವರಾತ್ರಿ ವ್ರತಾಚರಣೆ ಕೂಡ ಕಿಚ್ಚನ ಆರೋಗ್ಯದ ಗುಟ್ಟಿನ ಒಂದು ಭಾಗವೆಂದೇ ಹೇಳಲಾಗುತ್ತಿದೆ. ಯಾಕಂದ್ರೆ, ಕಳದೆ ನಾಲ್ಕು ವರ್ಷಗಳಿಂದಲೂ ಸುದೀಪ್ ನವರಾತ್ರಿಗಳಲ್ಲಿ ಕಟ್ಟುನಿಟ್ಟಿನ ವ್ರತವನ್ನು ಆಚರಿಸುತ್ತಾ ಬಂದಿದ್ದಾರೆ. ಈ ವಿಷಯಕ್ಕೆ ಬಂದರೆ ಸುದೀಪ್ ಬರಿಗಾಲಿನಲ್ಲಿ ಬಂದಿದ್ದೂ ಸಹ ವ್ರತಾಚಾರಣೆಯ ಒಂದು ಭಾಗವೇ ಆಗಿದೆ. ವಾರದ ಕಥೆ ಕಿಚ್ಚನ ಜೊತೆ ಶೋನಲ್ಲಿ ಸುದೀಪ್ ಅತ್ಯಂತ ಸಂಯಮದಿಂದ ನಗುಮುಖದಲ್ಲೇ ಕಾರ್ಯಕ್ರಮ ನಡೆಸಿಕೊಟ್ಟಿದ್ದು ಸಹ ವ್ರತದ ಒಂದು ಬಹುಮುಖ್ಯ ನಿಯಮವಾಗಿದೆ. ನವರಾತ್ರಿ ಆಚರಣೆಯ ಸಂದರ್ಭದಲ್ಲಿ ಕೋಪ ಮಾಡಿಕೊಳ್ಳುವಂತಿಲ್ಲ. ಜೋರಾಗಿ ಮಾತಾಡುವಂತಿಲ್ಲ. ಗಟ್ಟಿಯಾಗಿ, ಕೆಟ್ಟದಾಗಿ ಶಬ್ಧಗಳನ್ನು ಬಳಸುವಂತೆಯೂ ಇಲ್ಲ. ಇದೆಲ್ಲಾ ಅಂಶಗಳು ಕಿಚ್ಚಿನ ಪಂಚಾಯ್ತಿ ಹಾಗೂ ಸೂಪರ್ ಸಂಡೇಯಲ್ಲಿ ಕಾಣಿಸಿತ್ತು.
ವ್ರತಾಚರಣೆಯ 9 ದಿನಗಳ ಕಾಲ ಚಾಪೆಯ ಮೇಲಷ್ಟೇ ನಿದ್ರೆ!
ನವರಾತ್ರಿ ವ್ರತಾಚರಣೆಯ ಬಹುಮುಖ್ಯ ನಿಯಮವಿದು. ಸಾಧ್ಯವಾದಷ್ಟು ನೆಲದ ಮೇಲೆ ಮಲಗಬೇಕು ಅನ್ನೋ ವಿಧಿ ಇದೆ. ಆದರೆ ವಯಸ್ಸು ಹಾಗೂ ಆರೋಗ್ಯ ಸಮಸ್ಯೆಗಳ ಕಾರಣಕ್ಕೆ ನೆಲದ ಬದಲಿಗೆ ಚಾಪೆಯ ಮೇಲೆ ಮಲಗಬಹುದು. ಹಾಗಾಗಿಯೇ ಕಿಚ್ಚ ನವರಾತ್ರಿ ವ್ರತಾಚರಣೆಯ ಸಂದರ್ಭ ಒಂಬತ್ತು ದಿನಗಳ ಕಾಲ ಚಾಪೆಯ ಮೇಲೆಯೇ ನಿದ್ದೆ ಮಾಡಲಿದ್ದಾರೆ.
ಈ ಸಲದ ಬಿಗ್ಬಾಸ್ನ ಮೊದಲ ವಾರದ ಕಥೆ ಕಿಚ್ಚನ ಜೊತೆ ಶೋನಲ್ಲೂ ಸುದೀಪ್ ಪಾನೀಯವನ್ನು ಸೇವಿಸಿದ್ದು ಕಾಣಬಹುದು. ಆದರೇ, ಸುದೀಪ್ ಎಷ್ಟರಮಟ್ಟಿಗೆ ಕಟ್ಟುನಿಟ್ಟಿನ ವ್ರತ ಆಚರಿಸುತ್ತಿದ್ದಾರೆ ಅನ್ನೋದಕ್ಕೆ ಬರೀಗಾಲಿನ ನಡಿಗೆ, ಬೂದು, ಕೇಸರಿ ಬಣ್ಣದ ಉಡುಗೆ ತೊಡುಗೆ, ಮಾತು, ರೀತಿ, ನೀತಿ, ಸೇವಿಸಿದ ಪಾನೀಯ ಎಲ್ಲವೂ ಸಹ ಸಾಕ್ಷಿ ನುಡಿಯುತ್ತಿವೆ. ಅಸಲಿಗೆ ಕಿಚ್ಚ ನವ ಶಕ್ತಿ ವ್ರತವನ್ನು ಆಚರಿಸುತ್ತಿರೋದೇಕೆ ಗೊತ್ತಾ? ಈ ವ್ರತಾಚರಣೆಯ ಹಿಂದಿನ ಹೆಬ್ಬಯಕೆ ಇದೀಗ ಅಭಿಮಾನಿಗಳಲ್ಲಿ ಹೊಸದೊಂದು ಕೌತುಕವನ್ನೇ ಹುಟ್ಟು ಹಾಕಿದೆ.
BIG BOSS
ಮಹಿಳೆಯರ ಒಳ ಉಡುಪಿನ ಬಗ್ಗೆ ಲಾಯರ್ ಜಗದೀಶ್ ಮಾತು.. ಏನಿದು ವಿವಾದ?
ಲಾಯರ್ ಜಗದೀಶ್ ಅವರು ಬಿಗ್ ಬಾಸ್ ಮನೆಯಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ಸದ್ಯ ಮಹಿಳೆಯರ ಒಳಉಡುಪಿನ ಬಗ್ಗೆ ಮಾತನಾಡಿ ವಿವಾದ ಸೃಷ್ಟಿ ಮಾಡಿದ್ದಾರೆ. ಈ ವಿಚಾರದ ಬಗ್ಗೆ ಸಖತ್ ಚರ್ಚೆ ಆಗುತ್ತಿದೆ.
ಬಿಗ್ ಬಾಸ್ ಮನೆಯಲ್ಲಿ ಕ್ಯಾಪ್ಟನ್ಸಿ ಟಾಸ್ಕೆ ಅವಕಾಶ ನೀಡಲಾಗಿತ್ತು. ಇದರಲ್ಲಿ ಸ್ವರ್ಗ ನಿವಾಸಿಗಳು ಮಾತ್ರ ಭಾಗಿ ಆಗಲು ಅವಕಾಶ ಇತ್ತು. 10 ಮಂದಿಯಲ್ಲಿ ಆರು ಜನರು ಮಾತ್ರ ಕ್ಯಾಪ್ಟನ್ಸಿ ಟಾಸ್ಕಲ್ಲಿ ಇರಬಹುದು ಎಂದು ಬಿಗ್ ಬಾಸ್ ಆದೇಶ ಕೊಟ್ಟರು. ಇಷ್ಟೇ ಅಲ್ಲ, ಆರು ಮಂದಿಯನ್ನು ಸ್ವರ್ಗ ನಿವಾಸಿಗಳ ಒಮ್ಮತದ ನಿರ್ಧಾರದಿಂದ ಆಯ್ಕೆ ಮಾಡಬೇಕು ಎಂದು ಬಿಗ್ ಬಾಸ್ ಆದೇಶ ನೀಡಿದರು.
ವೋಟಿಂಗ್ ಆಧಾರದ ಮೇಲೆ ಸ್ಪರ್ಧಿಗಳನ್ನು ಆಯ್ಕೆ ಮಾಡೋಣ ಎನ್ನುವ ನಿರ್ಧಾರಕ್ಕೆ ಎಲ್ಲರೂ ಬಂದರು. ಇದು ಜಗದೀಶ್ ಅವರ ಕೋಪಕ್ಕೆ ಕಾರಣ ಆಯಿತು. ಅವರು ನೇರವಾಗಿ ಸ್ಪರ್ಧಿಗಳ ವಿರುದ್ಧ ಹರಿಹಾಯ್ದರು. ಅದರಲ್ಲೂ ಈ ಐಡಿಯಾ ನೀಡಿದ ಉಗ್ರಂ ಮಂಜು ವಿರುದ್ಧ ಸಿಡಿದೆದ್ದರು. ಮಾತು ಮಿತಿ ಮೀರುತ್ತಿತ್ತು. ‘ನೀನು ಸಿನಿಮಾದಲ್ಲಿ ಮಾತ್ರ ಉಗ್ರಂ ನಿಜ ಜೀವನದಲ್ಲಿ ನಾನು ನಿನಗೆ ಉಗ್ರಂ ತೋರಿಸುತ್ತೇನೆ’ ಎಂದು ಜಗದೀಶ್ ಹೇಳಲು ಆರಂಭಿಸಿದರು.
ಇದಕ್ಕೆ ಮಂಜು ಹೆಚ್ಚಿನ ಉತ್ತರ ಕೊಡೋಕೆ ಹೋಗಿಲ್ಲ.’ಬೋ..’ `ಬೋ..’ ಎಂದಷ್ಟೇ ಹೇಳಿದರು.’ಬೋ ಪ್ಯಾಂಟೀಸ್ ಎಲ್ಲ ನೋಡಿದೀನಿ.ನನ್ನ ಹೆಂಡತಿ ಹಾಕೋದು ಇದನ್ನೇ’ ಎಂದು ಜಗದೀಶ್ ಹೇಳಿದ್ದಾರೆ. ಇದು ಮನೆಯವರ ಅಸಮಾಧಾನಕ್ಕೆ ಕಾರಣ ಆಗಿದೆ. ಈ ವೇಳೆ ನಿಜವಗಾಲೂ ಇನ್ಸ್ಕ್ಯೂರ್ ಫೀಲ್ ಆಗ್ತಿದೆ ಎಂದು ಭವ್ಯಾ ಗೌಡ ಹೇಳಿದ್ದಾರೆ.