Connect with us

FILM

‘ಇಂದಿನ ನಟಿಯರು ಹೆಚ್ಚು ಹಣ ಸಂಪಾದಿಸುತ್ತಾರೆ, ನಾವು ಗೌರವ ಸಂಪಾದಿಸಿದ್ವಿ’ – ನಟಿ ಸುಹಾಸಿನಿ

Published

on

ಬೆಂಗಳೂರು : ದಕ್ಷಿಣ ಭಾರತದ ಖ್ಯಾತ ನಟಿ ಸುಹಾಸಿನಿ ಇಂದಿನ ಕಾಲದ ನಾಯಕ ನಟಿಯರ ಬಗ್ಗೆ ಮಾತನಾಡಿದ್ದಾರೆ.ಇಂದಿನ ತಲೆಮಾರಿನ ನಟಿಯರು ನಮಗಿಂತ ಹೆಚ್ಚು ಹಣ ದುಡಿಯುತ್ತಾರೆ. ಆದರೆ, ನಮಗೆ ಅವರಿಗಿಂತ ಹೆಚ್ಚು ಗೌರವ ಸಿಗುತ್ತಿತ್ತು ಎಂಬ ಹೇಳಿಕೆಯನ್ನು ನಟಿ ಸುಹಾಸಿನಿ ನೀಡಿದ್ದಾರೆ.


ಅವರ ಪಾತ್ರದಲ್ಲಿ ಹೆಣ್ಣಿನ ಮನಸ್ಸನ್ನು ಬಹಳ ಅರ್ಥಗರ್ಭಿತವಾಗಿ, ಆಳವಾಗಿ ಚಿತ್ರಿಸಲಾಗುತ್ತಿತ್ತು. ಹೀರೋಯಿನ್ ಎಂದರೆ ಆಕೆಯಲ್ಲಿ ಒಬ್ಬ ತಾಯಿಯಿರುತ್ತಿದ್ದಳು, ತಾಳ್ಮೆಯ ಪ್ರತಿರೂಪವಾಗಿರುತ್ತಿದ್ದಳು, ಮತ್ತೊಬ್ಬರನ್ನು ನೋಯಿಸದ ಸ್ವಭಾವ ತೋರಿಸಲಾಗುತ್ತಿತ್ತು.ಈಗ ಬಹುತೇಕ ಸಿನಿಮಾಗಳಲ್ಲಿ ಹೀರೋಯಿನ್‌ಗೆ ಇಂಥ ಯಾವ ಗುಣವೂ ಬೇಕಿಲ್ಲ. ಆಕೆ ಚೆನ್ನಾಗಿ ಕಾಣಿಸಿಕೊಂಡು, ಕುಣಿದು, ಒಂದೆರಡು ಡೈಲಾಗ್ ಹೇಳಿದರೆ ಸಾಕು. ಕ್ರೈಮೇ ಸಿನಿಮಾ ಜೀವಾಳ ಆಗಿರುವ ಕತೆಗಳಲ್ಲಂತೂ ಹೆಸರಿಗಷ್ಟೇ ಹೀರೋಯಿನ್.


ಅವಳ ಮನೋಭಾವ ನೋಡುಗರನ್ನು ಬಹುವಾಗಿ ಪ್ರಭಾವಿಸುವಂತಿರುತ್ತಿತ್ತು, ಅವಳ ಸಹೃದಯಕ್ಕೆ ಸರಿಸಾಟಿ ಇರಲಿಲ್ಲ. ನೋಡಿದ ಹೆಣ್ಣುಮಕ್ಕಳು ತಾವೂ ಹೀಗಿರಬೇಕೆಂದುಕೊಳ್ಳುವಂಥ ಆದರ್ಶ ಮಹಿಳೆ ಅವರಾಗಿರುತ್ತಿದ್ದರು, ಪುರುಷರು ತಮಗಿಂತ ಪತ್ನಿ ದೊರೆಯಲೆಂದು ಪ್ರಾರ್ಥಿಸುವಂತೆ ಹೀರೋಯಿನ್‌ಗಳನ್ನು ಚಿತ್ರಿಸಲಾಗುತ್ತಿತ್ತು ಎಂದಿದ್ದಾರೆ.

 

FILM

PHOTOS : ಗೀತಾ ‘ವಿಜಯ್’ ಅದ್ದೂರಿ ಮದುವೆ; ಮೆಚ್ಚುಗೆ ಪಡೆದ ಧನುಷ್ ಮಾಡಿದ ಆ ಒಂದು ಕಾರ್ಯ!

Published

on

ಬೆಂಗಳೂರು : ಸಿಕ್ಕಾಪಟ್ಟೆ ಫೇಮಸ್ ಆಗಿದ್ದ ಧಾರಾವಾಹಿ ‘ಗೀತಾ’. ಈ ಧಾರಾವಾಹಿಯ ನಾಯಕ ‘ವಿಜಯ್’ ಅಂದ್ರೆ ಧನುಷ್ ಗೌಡ ದಾಂಪತ್ಯ ಜೀವನಕ್ಕೆ ಪದಾರ್ಪಣೆ ಮಾಡಿದ್ದಾರೆ. ಅವರ ವಿವಾಹ ಶುಕ್ರವಾರ ಅದ್ದೂರಿಯಾಗಿ ನೆರವೇರಿತು.


ಧನುಷ್ ಗೌಡ ಅವರು ಸಂಜನಾ ಎಂಬವರ ಜೊತೆಗೆ ಸಪ್ತಪದಿ ತುಳಿದಿದ್ದಾರೆ. ಸಂಜನಾ ಧನುಷ್ ಅತ್ತೆಯ ಮಗಳಾಗಿದ್ದು, ಇದು ಅರೆಂಜ್ಡ್ ಮ್ಯಾರೇಜ್ ಆಗಿದೆ.


ಇನ್ನು ಮದುವೆಯಲ್ಲಿ ಕುಟುಂಬದವರು, ಆಪ್ತರು, ಸ್ನೇಹಿತರು ಉಪಸ್ಥಿತರಿದ್ದರು.

ಧನುಷ್ ಅವರು ಆರತಕ್ಷತೆ ಕಾರ್ಯಕ್ರಮವೂ ಅದ್ದೂರಿಯಾಗಿ ನಡೆದಿದೆ.

ಧನುಷ್ ಅವರ ಮದುವೆ, ಆರತಕ್ಷತೆ ಕಾರ್ಯಕ್ರಮದಲ್ಲಿ ಅನೇಕ ಗಣ್ಯರು ಪಾಲ್ಗೊಂಡಿದ್ದರು. 

ಇದನ್ನೂ ಓದಿ : ಮೇಕಪ್ ರೂಂನಲ್ಲಿ ಕೂಡಿ ಹಾಕಿದ್ರು…ಆಮೇಲೆ…ನಿರ್ಮಾಪಕನಿಂದಾದ ಕರಾಳ ಅನುಭವ ಬಿಚ್ಚಿಟ್ಟ ಖ್ಯಾತ ಕಿರುತೆರೆ ನಟಿ!

ಭವ್ಯಾ ಗೌಡ, ಮೌನ ಗುಡ್ಡೇಮನೆ, ರಿತ್ವಿಕ್ ಕೃಪಾಕರ್, ಸೇರಿ ಅನೇಕ ಕಿರುತೆರೆ ಹಿರಿತೆರೆ ತಾರೆಯರು ಆಗಮಿಸಿದ್ದರು.

 

ಮದುವೆ ಸಂಭ್ರಮದ ನಡುವೆಯೂ ಧನುಷ್ ವೋಟ್ ಮಾಡುವ ಮೂಲಕ ಅಭಿಮಾನಿಗಳಿಗೆ ಮಾದರಿಯಾಗಿದ್ದಾರೆ. ಧನುಷ್ ನಡೆಗೆ ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ.

 

 

Continue Reading

FILM

WATCH VIDEO : ಕಾಸರಗೋಡಿನಲ್ಲಿ ಕಾಣಿಸಿಕೊಂಡ ಸನ್ನಿ ಲಿಯೋನ್

Published

on

ಕಾಸರಗೋಡು : ಸನ್ನಿಲಿಯೋನ್ ಯಾರಿಗೆ ತಾನೆ ಗೊತ್ತಿಲ್ಲ. ತನ್ನ ಮಾದಕ ನೋಟದಿಂದ, ನಟನೆಯಿಂದ ಸಿಕ್ಕಾಪಟ್ಟೆ ಫೇಮಸ್ ಆಗಿರುವ ಮೋಹಕ ತಾರೆ. ಸದ್ಯ ಅವರು ಸಿನಿಮಾಗಳಲ್ಲಿ ಬಿಝಿಯಾಗಿದ್ದಾರೆ. ಚಿತ್ರವೊಂದರ ಶೂಟಿಂಗ್ ಗಾಗಿ ಕಾಸರಗೋಡಿನಲ್ಲಿ ಕಾಣಿಸಿಕೊಂಡಿದ್ದಾರೆ.

ಸೀತಂಗೋಳಿ ಸಮೀಪದ ಶೇಣಿಯಲ್ಲಿ ಹಿಂದಿ ಚಿತ್ರವೊಂದರ ಶೂಟಿಂಗ್ ನಲ್ಲಿ ಅವರು ಭಾಗಿಯಾಗಿದ್ದಾರೆ. ಹೇಳಿ ಕೇಳಿ ಕಾಸರಗೋಡಿನಲ್ಲಿ ಚಿತ್ರೀಕರಣಕ್ಕೆ ಹೆಸರುವಾಸಿಯಾದ ಸುಂದರ ಪ್ರದೇಶ ಶೇಣಿ. ಇಲ್ಲಿ ಹಲವಾರು ಪರಭಾಷಾ ಚಲನಚಿತ್ರಗಳ ಚಿತ್ರೀಕರಣ ನಡೆದಿದೆ. ಇದೀಗ ಸನ್ನಿ ಲಿಯೋನ್ ಚಿತ್ರದ ಚಿತ್ರೀಕರಣವೂ ನಡೆಯುತ್ತಿದೆ.

ಇದನ್ನೂ ಓದಿ : ಖ್ಯಾತ ಕಿರುತೆರೆ ನಟ ಗುರುಚರಣ್ ಸಿಂಗ್ ನಾಪತ್ತೆ!

ಶೇಣಿಯ ಶಾಲೆ ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಶೂಟಿಂಗ್ ನಡೆಯುತ್ತಿದೆ. ಸನ್ನಿಯ ಮಾದಕ ನೋಟವನ್ನ ನೋಡಲು ರಸ್ತೆ ಬದಿ ಅಭಿಮಾನಿಗಳು ಕಿಕ್ಕಿರಿದು ಸೇರಿದ್ದಾರೆ.

 

Continue Reading

FILM

ಮೇಕಪ್ ರೂಂನಲ್ಲಿ ಕೂಡಿ ಹಾಕಿದ್ರು…ಆಮೇಲೆ…ನಿರ್ಮಾಪಕನಿಂದಾದ ಕರಾಳ ಅನುಭವ ಬಿಚ್ಚಿಟ್ಟ ಖ್ಯಾತ ಕಿರುತೆರೆ ನಟಿ!

Published

on

ಸಿನಿಮಾ ರಂಗದಲ್ಲಿ ತಮಗಾದ ಕೆಟ್ಟ ಅನುಭವಗಳ ಬಗ್ಗೆ ನಟಿಯರು ಹೇಳಿಕೊಳ್ಳುತ್ತಲೇ ಇರುತ್ತಾರೆ. ಕಾಸ್ಟಿಂಗ್ ಕೌಚ್ ವಿಚಾರ ಇತ್ತೀಚೆಗೆ ಭಾರೀ ಚರ್ಚೆಗೆ ಗ್ರಾಸವಾಗುತ್ತಿದೆ. ಈ ನಡುವೆ ಮತ್ತೊಬ್ಬ ನಟಿ ಕಿರುತೆರೆಯಲ್ಲಿ ತನಗಾದ ಕೆಟ್ಟ ಅನುಭವವನ್ನು ಹಂಚಿಕೊಂಡಿದ್ದಾರೆ. ಹೌದು, ಕಿರುತೆರೆ ಖ್ಯಾತ ನಟಿ ಕೃಷ್ಣಾ ಮುಖರ್ಜಿ ಈ ಬಗ್ಗೆ ನೋವು ಹಂಚಿಕೊಂಡಿದ್ದಾರೆ.


ಧಾರಾವಾಹಿಯಿಂದ ಹೊರಬರಲು ಕಾರಣ ತಿಳಿಸಿದ ನಟಿ:

ಕೃಷ್ಣಾ ‘ಯೇ ಹೇ ಮೊಹಾಬತೇ’ ಧಾರಾವಾಹಿ ಮೂಲಕ ಫೇಮಸ್ ಆಗಿದ್ದರು. ನಾಗಿನ್ 2 ಕೂಡ ಅವರಿಗೆ ಹೆಸರು ತಂದು ಕೊಟ್ಟಿದೆ. ಇದೀಗ ಅವರು ತಮಗಾದ ಕಿರುಕುಳದ ವಿಚಾರವನ್ನು ಹಂಚಿಕೊಂಡಿದ್ದಾರೆ. ಕೃಷ್ಣಾ ‘ಶುಭ ಶಗುನ್’ ಹೆಸರಿನ ಧಾರಾವಾಹಿಯಲ್ಲಿ ನಟಿಸುತ್ತಿದ್ದರು. ಇದರಿಂದ ಅವರು ಹೊರ ಬಂದಿದ್ದಾರೆ. ಇದಕ್ಕೆ ಕಾರಣ ಧಾರಾವಾಹಿ ನಿರ್ಮಾಪಕ ಕುಂದನ್ ಸಿಂಗ್ ಅವರು ನೀಡಿದ ಕಿರುಕುಳ ಎಂದು ನಟಿ ಆರೋಪಿಸಿದ್ದಾರೆ.


ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ವಿವರವಾಗಿ ಹೇಳಿದ್ದಾರೆ. ‘ಇದನ್ನು ಬರೆಯುವಾಗ ನನ್ನ ಕೈಗಳು ನಡುಗುತ್ತಿವೆ. ಆದರೂ ನಾನು ಬರೆಯಲೇಬೇಕು. ನಾನು ಇವರಿಂದ ಖಿನ್ನತೆಗೆ ಒಳಗಾಗಿದ್ದೇನೆ. ನಾವು ನಮ್ಮ ಭಾವನೆಗಳನ್ನು ಹಿಡಿದಿಟ್ಟು, ನಮ್ಮ ಒಳ್ಳೆಯ ಜೀವನವನ್ನು ಮಾತ್ರ ಸೋಶಿಯಲ್ ಮೀಡಿಯಾದಲ್ಲಿ ತೋರಿಸುತ್ತೇವೆ. ಆದರೆ, ಇದು ರಿಯಾಲಿಟಿ’ ಎಂದು ಬರೆದುಕೊಂಡಿದ್ದಾರೆ.
‘ನನಗೆ ಇನ್ನಷ್ಟು ಹಾನಿ ಆಗಬಹುದು ಎನ್ನುವ ಕಾರಣಕ್ಕೆ ಕುಟುಂಬದವರು ಈ ಬಗ್ಗೆ ಪೋಸ್ಟ್ ಮಾಡೋದು ಬೇಡ ಎಂದರು. ನಾನೇಕೆ ಹೆದರಬೇಕು? ನ್ಯಾಯ ಪಡೆಯೋದು ನನ್ನ ಹಕ್ಕು’ ಎಂದು ಬರೆದಿದ್ದಾರೆ. ಅಲ್ಲದೇ, ಕುಂದನ್ ಸಿಂಗ್ ಅವರನ್ನು ಟ್ಯಾಗ್ ಕೂಡಾ ಮಾಡಿದ್ದಾರೆ.

ಮೇಕಪ್ ರೂಂ ಲಾಕ್ ಮಾಡಿದ್ದರು :

ಕಳೆದ ಒಂದೂವರೆ ವರ್ಷ ನನಗೆ ಸುಲಭದ್ದಾಗಿರಲಿಲ್ಲ. ನಾನು ಖಿನ್ನತೆಗೆ ಒಳಗಾಗಿದ್ದೇನೆ. ನಾನು ಒಂಟಿಯಾಗಿದ್ದಾಗ ಅಳುತ್ತಿದ್ದೇನೆ. ದಂಗಲ್ ಟಿವಿಗಾಗಿ ಶುಭ್ ಶಗುನ್ ಧಾರಾವಾಹಿ ಒಪ್ಪಿಕೊಂಡಾಗಿನಿಂದ ಈ ಸಮಸ್ಯೆ ಆಗುತ್ತಿದೆ. ನನ್ನ ಜೀವನದಲ್ಲಿ ಮಾಡಿದ ಅತಿ ಕೆಟ್ಟ ನಿರ್ಧಾರ. ನನಗೆ ಅದನ್ನು ಮಾಡಬೇಕು ಎಂದಿರಲಿಲ್ಲ. ಬೇರೆಯವರ ಮಾತನ್ನು ಕೇಳಿ ಕಾಂಟ್ರ್ಯಾಕ್ಟ್ ಸಹಿ ಮಾಡಿದೆ’ ಎಂದಿದ್ದಾರೆ ಕೃಷ್ಣಾ.

‘ಪ್ರೊಡಕ್ಷನ್ ಹೌಸ್ ಹಾಗೂ ನಿರ್ಮಾಪಕ ಕುಂದನ್ ಸಿಂಗ್ ಅವರು ನನಗೆ ಕಿರುಕುಳ ನೀಡಿದ್ದಾರೆ. ನನಗೆ ಅಂದು ಅನಾರೋಗ್ಯವಾಗಿತ್ತು. ಜೊತೆಗೆ ಅವರು ಸಂಭಾವನೆಯನ್ನೂ ಕೊಡುತ್ತಿರಲಿಲ್ಲ. ಹೀಗಾಗಿ ನಾನು ಶೂಟ್ ಮಾಡಲ್ಲ ಎಂದೆ. ಇದಕ್ಕಾಗಿ ಅವರು ಮೇಕಪ್​ ರೂಂನಲ್ಲಿ ನನ್ನನ್ನು ಲಾಕ್ ಮಾಡಿದ್ದರು. ನಾನು ಬಟ್ಟೆ ಬದಲಿಸುವಾಗ ಬಾಗಿಲು ಮುರಿಯುವ ರೀತಿಯಲ್ಲಿ ಬಾಗಿಲು ಬಡಿಯುತ್ತಿದ್ದರು ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ : ಖ್ಯಾತ ಕಿರುತೆರೆ ನಟ ಗುರುಚರಣ್ ಸಿಂಗ್ ನಾಪತ್ತೆ!


ಕೃಷ್ಣಾ ಪೋಸ್ಟ್ ಗೆ ಹಲವು ಮಂದಿ ಕಮೆಂಟ್ ಮಾಡಿದ್ದು, ನಿಮಗೆ ನ್ಯಾಯ ಸಿಗಲೇಬೇಕು ಎಂದು ಕೆಲವರು ಹೇಳಿದ್ದು, ನಿಮ್ಮ ಜೊತೆ ನಾವಿದ್ದೇವೆ ಎಂದು ಕೆಲವರು ಹೇಳಿದ್ದಾರೆ. ಇದು ಮನಸ್ಸು ಮುರಿಯುವ ವಿಚಾರ ಎಂದು ಕಮೆಂಟ್ ಮಾಡಲಾಗಿದೆ. ಅವರ ಅಭಿಮಾನಿಗಳು ಮಾತ್ರವಲ್ಲದೇ, ಕಲಾವಿದರೂ ಕಮೆಂಟ್ ಗಳನ್ನು ಮಾಡಿ ನಿಮ್ಮ ಜೊತೆಗೆ ನಾವಿದ್ದೇವೆ ಎನ್ನುತ್ತಿದ್ದಾರೆ. ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸುತ್ತಿದ್ದಾರೆ.

 

Continue Reading

LATEST NEWS

Trending