Connect with us

LATEST NEWS

ಪುತ್ತೂರು: 36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

Published

on

ಪುತ್ತೂರು : ಕಳವು ಪ್ರಕರಣಕ್ಕೆ ಸಂಬಂಧಿಸಿ 36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬರನ್ನು ಪುತ್ತೂರು ನಗರ ಪೊಲೀಸ್ ಠಾಣೆ ಪೊಲೀಸರು ಶುಕ್ರವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.


ಪುತ್ತೂರು ತಾಲೂಕಿನ ಚಾರ್ವಾಕ ಗ್ರಾಮದ ಕುಂಬ್ಲಾಡಿ ನಿವಾಸಿ ಬಾಬು ಪೂಜಾರಿ ಲಿಂಗಪ್ಪ(46) ಯಾನೆ ರೆಹಮತ್‌ ಖಾನ್‌ ಬಂಧಿತ ಆರೋಪಿ. 1985ನೇ ಇಸವಿಯಲ್ಲಿ ಕಳವು ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣ ದಾಖಲಾದ ಸಮಯ ಆರೋಪಿ ಲಿಂಗಪ್ಪ (ರೆಹಮತ್‌ ಖಾನ್‌) ತಲೆಮರೆಸಿಕೊಂಡಿದ್ದ. ಶಿವಮೊಗ್ಗದಲ್ಲಿ 5 ವರ್ಷಗಳಿಂದ ಅಟೋ ಚಾಲಕನಾಗಿದ್ದು, ನಂತರ ಮಂಗಳೂರಿನ ತಣ್ಣೀರು ಬಾವಿ ಎಂಬಲ್ಲಿಗೆ ಬಂದು ಅನ್ಯಕೋಮಿನ ಹುಡುಗಿಯನ್ನು ಮದುವೆಯಾಗಿ ತನ್ನ ಹೆಸರನ್ನು ರೆಹಮತ್‌ ಖಾನ್‌ ಬದಲಾಯಿಸಿಕೊಂಡು ತಣ್ಣೀರು ಬಾವಿಯಲ್ಲಿ ವಾಸವಾಗಿದ್ದು ವಾರಂಟ್‌ ದಸ್ತಗಿರಿಗೆ ತಪ್ಪಿಸಿಕೊಂಡಿದ್ದನು. ಸುಮಾರು ಒಂದು ವಾರದಿಂದ ಮಂಗಳೂರಿನ ತಿರುವೈಲ್‌ ಗ್ರಾಮದ, ವಾಮಂಜೂರು ಹಾಲಿ ವಿಳಾಸಕ್ಕೆ ಬಂದಿದ್ದವನನ್ನು ಮಾಹಿತಿ ಸಂಗ್ರಹಿಸಿ  ಇದೀಗ ಆರೋಪಿಯನ್ನು ಬಂಧಿಸಲಾಗಿದೆ.
ಪುತ್ತೂರು ಡಿವೈಎಸ್ ಪಿ ಗಾನ ಕೆ ಕುಮಾರ್ ಅವರ ಮಾರ್ಗದರ್ಶನದಂತೆ ಪುತ್ತೂರು ನಗರ ಠಾಣೆಯ ಪೊಲೀಸ್ ನಿರೀಕ್ಷಕರಾದ ಗೋಪಾಲ ನಾಯ್ಕ್ ಮತ್ತು ಪೊಲೀಸ್ ಉಪ ನಿರೀಕ್ಷಕರಾದ ಸುತೇಶ್ ಮತ್ತು ನಸ್ರಿನ್ ತಾಜ್ ಚಟ್ಟರಕಿ ಇವರ ಸೂಚನೆಯಂತೆ ಪುತ್ತೂರು ನಗರ ಠಾಣೆಯ ಹೆಡ್ ಕಾನ್ಸ್ಟೇಬಲ್ ಗಳಾದ ಪರಮೇಶ್ವರ್ ಮತ್ತು ಕೃಷ್ಣಪ್ಪ ಅವರು ಆರೋಪಿಯನ್ನು ದಸ್ತಗಿರಿ ಮಾಡಿದ್ದಾರೆ.

LATEST NEWS

ಸಾಕು ಪ್ರಾಣಿಗಳ ಕೃತ್ಯಕ್ಕೆ ಮಾಲೀಕರೇ ಜವಾಬ್ದಾರಿ : ಕರ್ನಾಟಕ ಹೈಕೋರ್ಟ್

Published

on

ಬೆಂಗಳೂರು : ಅಪಾಯಕಾರಿ ತಳಿಯ ಶ್ವಾನಗಳು ಮಾತ್ರ ಜನರಿಗೆ ಗಾಯವನ್ನುಂಟು ಮಾಡಲ್ಲ. ಯಾವ ನಾಯಿಯೂ ಉಗ್ರವಾಗಬಹುದು ಎಂದು ಪರಿಗಣಿಸಿರುವ ಕರ್ನಾಟಕ ಹೈಕೋರ್ಟ್ ಸಾಕುಪ್ರಾಣಿಗಳ ಮಾಲೀಕರ ಜವಾಬ್ದಾರಿಯನ್ನು ನಿಗದಿಪಡಿಸಲು ಸಂಬಂಧಿತ ನಿಯಮಗಳ ಅಡಿಯಲ್ಲಿ ಕೆಲವು ಮಾರ್ಗಸೂಚಿಗಳನ್ನು ಹೊರಡಿಸುವುದು ಅಗತ್ಯ ಎಂದು ಹೇಳಿದೆ.


ಕೇಂದ್ರ ಸರ್ಕಾರದ ಮೂರು ನಿಯಮಗಳಾದ ಪ್ರಾಣಿಗಳ ಜನನ ನಿಯಂತ್ರಣ (ನಾಯಿಗಳು) ನಿಯಮಗಳು, 2001, ಪ್ರಾಣಿಗಳ ಮೇಲಿನ ಕ್ರೌರ್ಯ ತಡೆಗಟ್ಟುವಿಕೆ (ನಾಯಿ ಸಂತಾನೋತ್ಪತ್ತಿ ಮತ್ತು ಮಾರುಕಟ್ಟೆ) ನಿಯಮಗಳು, 2017 ಮತ್ತು ಪ್ರಾಣಿಗಳ ಮೇಲಿನ ಕ್ರೌರ್ಯ (ಪೆಟ್ ಶಾಪ್) ನಿಯಮಗಳು, 2018 ಅಡಿಯಲ್ಲಿ ಅಂತಹ ಮಾರ್ಗಸೂಚಿಗಳನ್ನು ನೀಡಲು ಪರಿಗಣಿಸಬಹುದು ಎಂದು ಕೋರ್ಟ್ ಹೇಳಿದೆ.

ಸಾಕು ಪ್ರಾಣಿ ಮಾಲೀಕರ ಹೊಣೆ :

ನಾಯಿ ಕಚ್ಚಿದರೆ ಅದು ಯಾವುದೇ ನಾಯಿಯಾಗಿದ್ದರೂ ಅದು ನಾಯಿ ಕಚ್ಚಿದ್ದೇ ಆಗಿರುತ್ತದೆ. ಅದು ಬ್ರಾಂಡೆಡ್ ಅಪಾಯಕಾರಿ ನಾಯಿ ಅಥವಾ ಇತರ ಯಾವುದೇ ಸಾಮಾನ್ಯ ನಾಯಿಯಾಗಿರಬಹುದು. ಸಾಕು ಪ್ರಾಣಿ ಮಾಲೀಕರು ತಮ್ಮ ನಾಯಿಗಳ ಕೃತ್ಯಕ್ಕೆ ಸಂಪೂರ್ಣವಾಗಿ ಜವಾಬ್ದಾರರಾಗುತ್ತಾರೆ. ಸಾಕು ಪ್ರಾಣಿಗಳ ಮಾಲೀಕರು ಜವಾಬ್ದಾರಿಯುತವಾಗಿ ವರ್ತಿಸಬೇಕು. ಸೂಕ್ತವಾಗಿ ರಚಿಸಲಾದ ಸಮಿತಿಯು ಜವಾಬ್ದಾರಿಯುತ ಸಾಕುಪ್ರಾಣಿಗಳ ಮಾಲೀಕತ್ವದ ಪರಿಕಲ್ಪನೆಯನ್ನು ರಕ್ಷಿಸಬೇಕು ಮತ್ತು ಬೇಜವಾಬ್ದಾರಿಯುತ ಸಾಕುಪ್ರಾಣಿ ಮಾಲೀಕತ್ವವನ್ನು ದಂಡನೆಗೆ ಒಳಪಡಿಸಬೇಕು ಎಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯ ಅಪಾಯಕಾರಿ ಶ್ವಾನಗಳ ಸಾಕಣೆ ನಿಷೇಧಿಸಿ ಮಾರ್ಚ್ 12, 2024 ರಂದು ಹೊರಡಿಸಿದ್ದ ವಿವಾದಾತ್ಮಕ ಸುತ್ತೋಲೆಯನ್ನು ಕರ್ನಾಟಕ ಹೈಕೋರ್ಟ್ ಬುಧವಾರ (ಏ.10) ರದ್ದುಗೊಳಿಸಿದೆ. ಇಂತಹ ಆಲೋಚನಾ ಪ್ರಕ್ರಿಯೆಯು ಸಮಸ್ಯೆಯನ್ನು ಪರಿಹರಿಸುವುದಿಲ್ಲ ಮತ್ತು ನಾಯಿ ಮಾಲೀಕರು ಅಥವಾ ಯಾವುದೇ ಸಾಕುಪ್ರಾಣಿಗಳು ಮಾಲೀಕರು ಯಾವುದೇ ನಾಗರಿಕರಿಗೆ / ಇತರ ಜೀವಿಗಳಿಗೆ ಹಾನಿಯಾಗದಂತೆ ಜವಾಬ್ದಾರಿಯುತವಾಗಿ ವರ್ತಿಸಬೇಕು ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ : ಶ್ವಾನ ಪ್ರಿಯರೇ ಎಚ್ಚರ..ಎಚ್ಚರ..! ಮಾಲಕಿಯ ತಲೆ ಸೀಳಿದೆ ಸಾಕು ನಾಯಿ..!
ಆಯಾ ಪ್ರದೇಶದ ಸುತ್ತಮುತ್ತಲಿನ ನಾಗರಿಕರು ಮತ್ತು ಇತರ ಪ್ರಾಣಿಗಳ ಸಂರಕ್ಷಣೆಗೆ ಸಾಕುಪ್ರಾಣಿ ಮಾಲೀಕರು ಜವಾಬ್ದಾರರಾಗಿರುತ್ತಾರೆ. ಸಾಕುಪ್ರಾಣಿಗಳಿಂದಾಗುವ ಯಾವುದೇ ರೀತಿಯ ಬೇಜವಾಬ್ದಾರಿಯುತ ನಡವಳಿಕೆಗೆ ಸಾಕುಪ್ರಾಣಿ ಮಾಲೀಕರೇ ಜವಾಬ್ದಾರರಾಗಿರುತ್ತಾರೆ ಎಂದು ಕೋರ್ಟ್ ತಿಳಿಸಿದೆ.

Continue Reading

BELTHANGADY

ಶ್ವಾನ ಪ್ರಿಯರೇ ಎಚ್ಚರ..ಎಚ್ಚರ..! ಮಾಲಕಿಯ ತಲೆ ಸೀಳಿದೆ ಸಾಕು ನಾಯಿ..!

Published

on

ಬೆಳ್ತಂಗಡಿ : ಮನೆಯಲ್ಲಿ ಪ್ರಾಣಿಗಳನ್ನು ಸಾಕುವುದೆಂದರೆ ಹೆಚ್ಚಿನವರಿಗೆ ಇಷ್ಟ. ಅದರಲ್ಲೂ ನಾಯಿ ಪ್ರಿಯರು ಅನೇಕ ಮಂದಿ ಇದ್ದಾರೆ. ತಮ್ಮ ಮನೆಗಳಲ್ಲಿ ವಿವಿಧ ತಳಿಯ ನಾಯಿಗಳನ್ನು ಸಾಕುತ್ತಾರೆ. ಈ ನಾಯಿಗಳನ್ನು ಪ್ರೀತಿಸಿದಾಗ ಅವೂ ಅದಕ್ಕೆ ಪ್ರತಿಯಾಗಿ ಪ್ರೀತಿ ಕೊಡೋದು ಸಹಜ. ಆದರೆ, ಅದಕ್ಕೆ ವಿರುದ್ಧವಾದ ಘಟನೆಯೂ ನಡೆಯಬಹುದು ಎಂಬುದಕ್ಕೆ ಗುರುವಾರ(ಏ.18) ಬೆಳ್ತಂಗಡಿಯಲ್ಲಿ ನಡೆದ ಈ ಸುದ್ದಿ ನಿದರ್ಶನವಾಗಿದೆ.


ಮನೆ ಮಾಲಕಿ ತನ್ನ ಸಾಕು ನಾಯಿಯನ್ನು ಮುದ್ದಾಡುವಾಗ ಅದು ಏಕಾಏಕಿ ದಾ*ಳಿ ಮಾಡಿ, ತಲೆ ಭಾಗವನ್ನು ಸೀಳಿ ಹಾಕಿರುವ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. ಮುಂಡಾಜೆ ಗ್ರಾಮ ನಿಡಿಕಲ್ ಓಂಕಾರ್ ನಿವಾಸಿ ದಿವಂಗತ ರಾಮ್ ದಾಸ್ ಎಂಬವರ ಪತ್ನಿ 49 ವರ್ಷದ ಪೂರ್ಣಿಮಾ ಗಂಭೀ*ರ ಗಾ*ಯಗೊಂಡ ಮಹಿಳೆ.

ಇದನ್ನೂ ಓದಿ : Viral Video; ಸ್ಮೋಕ್ ಬಿಸ್ಕೆಟ್ ತಿನ್ನುತ್ತಿದ್ದಂತೆಯೇ ಬಾಲಕ ಅಸ್ವಸ್ಥ

ಪೂರ್ಣಿಮಾ ತನ್ನ ಮನೆಯ ಸಾಕು ನಾಯಿಯನ್ನು ಎಂದಿನಂತೆ ಮುದ್ದಾಡುತ್ತಿದ್ದರು. ಈ ವೇಳೆ ಅವರು ಕಾಲು ಜಾರಿ ನೆಲಕ್ಕೆ ಬಿದ್ದಿದ್ದಾರೆ. ಅದೇನಾಯ್ತೋ ಗೊತ್ತಿಲ್ಲ, ಸಾಕು ನಾಯಿ ಪೂರ್ಣಿಮಾ ಮೇಲೆ ದಾ*ಳಿ ನಡೆಸಿದೆ. ತಲೆ ಭಾಗ ಸೀ*ಳಿ ಹಾಕಿದೆ. ಕೈ ಕಚ್ಚಿ ಗಂಭೀ*ರ ಗಾ*ಯಗೊಳಿಸಿದೆ. ಸದ್ಯ, ಪೂರ್ಣಿಮಾ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Continue Reading

LATEST NEWS

ಬಿಕಿನಿ ತೊಟ್ಟು ಬಸ್ಸಿನಲ್ಲಿ ಅಡ್ಡಾಡಿದ ಯುವತಿ

Published

on

ಇತ್ತೀಚಿನ ದಿನಗಳಲ್ಲಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಾ ವಿಡೀಯೋಗಳು ಒಂದಾ.. ಎರಡಾ.. ಪ್ರತಿದಿನವೂ ಹಲವಾರು ವಿಡಿಯೋಗಳು ಹರಿದಾಡುತ್ತಿರುತ್ತವೆ. ಕೆಲವರಗೆ ವಿಡಿಯೋಗಳನ್ನು ಟ್ರೋಲ್ ಮಾಡೋದೆ ಒಂದು ಕೆಲಸವಾಗಿರುತ್ತದೆ. ಸದ್ಯ ಅದೇ ರೀತಿಯ ಘಟನೆಯೊಂದು ದೆಹಲಿಯಲ್ಲಿ ವೈರಲ್ ಆಗ್ತಾ ಇದೆ.

ಬೇಸಿಲ ಬೇಗೆಗೆ ಸೆಖೆ ಜಾಸ್ತಿ ಆಗಿ ಹೋಗಿದೆ. ಹಾಗಾಗಿ ಇಲ್ಲೊಬ್ಬಳು ಕೇವಲ ಒಳ ಉಡುಪನ್ನು ಧರಿಸಿ ಅರೆಬೆತ್ತಲೆಯಾಗಿ ಬಸ್ಸಿನಲ್ಲಿ ಅಡ್ಡಾಡ್ಡಿದ್ದಾಳೆ. ಈ ಕುರಿತ ವಿಡಿಯೋವೊಂದು ಇದೀಗ ವೈರಲ್ ಆಗಿದ್ದು, ಮಹಿಳೆಯ ಈ ವರ್ತನೆಯನ್ನು ಕಂಡು ಜನರು ಗರಂ ಆಗಿದ್ದಾರೆ.

ಸೆಲೆಬ್ರಿಟಿಗಳು, ಇನ್ಫ್ಲುಯೆನ್ಸರ್ ಗಳು ಫೋಟೋಶೂಟ್ ಗಳಿಗಾಗಿ ಬಿಕಿನಿ ಧರಿಸುವುದು ಹೊಸದೇನಲ್ಲ. ಆದರೆ ಇಲ್ಲೊಬ್ಬಳು ಯುವತಿ ಮಾತ್ರ ಸಾರ್ವಜನಿಕ ಸ್ಥಳದಲ್ಲಿ ಬಿಕಿನಿ ತೊಟ್ಟು ಓಡಾಡುವ ದುಸ್ಸಾಹಸಕ್ಕೆ ಕೈ ಹಾಕಿದ್ದಾಳೆ. ಹೌದು ದೆಹಲಿಯಲ್ಲಿ ಯುವತಿಯೊಬ್ಬಳು ಕೇವಲ ಒಳ ಉಡುಪು ಧರಿಸಿ ಸಾರ್ವಜನಿಕವಾಗಿ DTC ಬಸ್ಸಿನಲ್ಲಿ ಅರೆಬೆತ್ತಲೆಯಾಗಿ ಪ್ರಯಾಣಿಸಿದ್ದಾಳೆ.

ಈಕೆ ಬಸ್ಸಿನಲ್ಲಿ ಅರೆಬೆತ್ತಲೆಯಾಗಿ ನಿಂತಿರುವ ದೃಶ್ಯಗಳು ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಾ ಇದೆ. ಆಕೆಯ ಈ ಅವತಾರವನ್ನು ನೋಡಲಾರದೆ ಆಕೆಯ ಹತ್ತಿರ ಇದ್ದಂತಹ ಸಹ ಪ್ರಯಾಣಿಕರ ಅಲ್ಲಿಂದ ಎದ್ದು ಹೋಗಿದ್ದಾರೆ.

Continue Reading

LATEST NEWS

Trending