Connect with us

BELTHANGADY

“ಬೆಳ್ತಂಗಡಿಯಲ್ಲಿ ಪೂಂಜಾ ಬಂದ್ಮೇಲೆ ಮರ ಕಡಿಯಲು, ಮರಳು ತೆಗೆಯಲು ಲೈಸನ್ಸ್‌ ಬೇಡ್ವೇ ಬೇಡ”

Published

on

ಬೆಳ್ತಂಗಡಿ: ‘ನಮ್ಮ ತಾಲೂಕಿನಲ್ಲಿ ಹರೀಶ್ ಪೂಂಜಾನ 40 ಪರ್ಸೆಂಟ್ ವ್ಯವಹಾರ ನಡೆಯುತ್ತಿದೆ. ಬೆಳ್ತಂಗಡಿಯಲ್ಲಿ ಪೂಂಜಾ ಬಂದ ಮೇಲೆ ಮರ ಕಡಿಯಲು, ಮರಳು ತೆಗೆಯಲು ಲೈಸನ್ಸ್‌ ಬೇಡ್ವೇ ಬೇಡ. ದ.ಕ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ವೇಳೆ ಬಾರ್‌ಗಳು ಬಂದ್ ಇದ್ರೂ ಬೆಳ್ತಂಗಡಿಯಲ್ಲಿ ಮಾತ್ರ ರಾಜಾರೋಷವಾಗಿ ಮಾರಾಟ ಮಾಡುತ್ತಿದ್ದರು’ ಎಂದು ಬೆಳ್ತಂಗಡಿ ಹಾಲಿ ಶಾಸಕ ಹರೀಶ್‌ ಪೂಂಜಾ ವಿರುದ್ಧ ಮಾಜಿ ಶಾಸಕ ವಸಂತ ಬಂಗೇರ ತೀವ್ರ ವಾಗ್ದಾಳಿ ನಡೆಸಿದ್ದಾರೆ.


ಬೆಳ್ತಂಗಡಿಯ ಸಂಗಾತಿ ಗುಂಪು ಯೋಜನೆ ಆಶ್ರಯದಲ್ಲಿ ನಡೆದ ‘ಆಟಿಡೊಂಜಿ ದಿನ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಮಾಧ್ಯಮದವರು ಇಲ್ಲಿ ಇದ್ದೀರಿ. ನಿಮಗೆ ನಾನು ಹೇಳುವ ಪ್ರತೀ ಮಾತುಗಳು ಕೇಳುತ್ತೆ, ರೆಕಾರ್ಡ್ ಕೂಡಾ ಆಗುತ್ತೆ.

ಅದನ್ನು ಬರೆಯುವ ಧೈರ್ಯ ಇದ್ದರೆ ಮಾತ್ರ ರಿಪೋರ್ಟ್ ಮಾಡಿ, ಆಗುವುದಿಲ್ಲ ಆದ್ರೆ ಏನನ್ನೂ ಬರೀಬೇಡಿ.

ಪ್ರಸ್ತಾಪ ಮಾಡೋನು ನಾನು, ನನ್ನನ್ನು ಜೈಲಿಗೆ ಹಾಕೋದಾದ್ರೆ ಹಾಕ್ಲಿ, ಆದರೆ ನಿಮಗೆ ಯಾಕೆ ಭಯ ಬರಿಲಿಕ್ಕೆ? ಎಂದು ಹೇಳಿ ತುಳುವಿನಲ್ಲಿ ಮಾತು ಪ್ರಾರಂಭಿಸಿದ ಅವರು

‘ನಾಲ್ಕು ವರ್ಷದ ಮೊದಲು ಹರೀಶ್‌ ಪೂಂಜಾ ಎಂಬಾತ ಈ ತಾಲ್ಲೂಕಿಗೆ ಒಬ್ಬ ಹುಟ್ಟಿದ. ಅಂದಿನಿಂದ ತಾಲೂಕಿನಲ್ಲಿ 40 ಪರ್ಸೆಂಟ್ ವ್ಯವಹಾರ ನಡೆಯುತ್ತಿದೆ. ಸರ್ಕಾರದಿಂದ 100 ರೂ. ಬಂದ್ರೆ 40 ರೂ ಇವರ ಕಿಸೆಗೆ ಉಳಿದ 60 ರೂ. ಅಧಿಕಾರಿಗಳು, ಕಾಂಟ್ರಾಕ್ಟರ್‌ ನುಂಗಿ ಉಳಿದದ್ದರಲ್ಲಿ ಕೆಲಸ ಮಾಡಿಸ್ತಾರೆ.

ಇತ್ತೀಚೆಗೆ ತಾಲ್ಲೂಕಿನ ಕೆಲವೆಡೆ ಮಳೆಗಾಲ ವೇಳೆ ರಸ್ತೆಗಳಿಗೆ ಪ್ಯಾಚ್ ವರ್ಕ್ ಮಾಡಿದ್ರು. ಅದು ಎರಡು ದಿನದಲ್ಲೇ ಎದ್ದು ಹೋಗಿದೆ. ಈಗ ಅದೇ ರಸ್ತೆಯಲ್ಲಿ ಮತ್ತೆ ಗುಂಡಿಗಳು ಬಿದ್ದಿವೆ ಎಂದು ಆರೋಪಿಸಿದರು.

ತಾಲೂಕಿನಲ್ಲಿ ಪೂಂಜಾ ಶಾಸಕನಾದ ನಂತರ ಮರಳು, ಮಣ್ಣು, ಮರ ತೆಗೆಯಲು ಲೈಸೆನ್ಸೇ ಬೇಡ. ಪೊಲೀಸರು ಸುಮ್ಮನೆ ಕೂತು ನೋಡ್ತಾರೆ ಯಾಕಂದ್ರೆ ಈ ಪರ್ಸೆಂಟ್‌ನಲ್ಲಿ ಅವರಿಗೂ ಹೋಗುತ್ತಲ್ವಾ.

ಜೊತೆಗೆ ಕಂದಾಯ ಅಧಿಕಾರಿ, ತಹಶೀಲ್ದಾರ್ ಅವರು ಆಫೀಸ್‌ನಲ್ಲೇ ಹಾಯಾಗಿ ಕೂತು ಹೋಗೋದು ಹೋಗ್ಲಿ ಅಂತ ನೋಡ್ತಾ ಇರ್ತಾರೆ. ಬೆಳ್ತಂಗಡಿಯ ಕಾಡಿನಲ್ಲಿ ಈಗ ಮರ ಕೂಡಾ ಇಲ್ಲ. ಇಲ್ಲಿನ ಅರಣ್ಯಾಧಿಕಾರಿಗಳು ಕೂಡಾ ಕಳ್ಳರೇ. ಒಂದಿಬ್ಬರು ಒಳ್ಳೆಯವರಿದ್ದಾರೆ ಅಷ್ಟೆ. ಇದಕ್ಕೆಲ್ಲಾ ಯಾವುದೇ ಕೇಸ್‌ ಇಲ್ಲಾ ಅಷ್ಟೇ.

ಇತ್ತೀಚೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ ಸಂದರ್ಭದಲ್ಲಿ ಬೆಳ್ತಂಗಡಿಯ ಬಸ್‌ ನಿಲ್ದಾಣ, ಗುರುವಾಯನ ಕೆರೆಯಲ್ಲಿ ರಾಜಾರೋಷವಾಗಿ ಮದ್ಯ ಮಾರಾಟ ಮಾಡುತ್ತಿದ್ದಾರೆ.

ಇವತ್ತು ಹರೀಶ್‌ ಪೂಂಜಾ ಕಾನೂನು ಪ್ರಕಾರ ಏನು ಮಾಡಬಾರದೋ ಅದನ್ನೆಲ್ಲವನ್ನು ಇವತ್ತು ಇಲ್ಲಿ ಪೂಂಜಾರವರು ಮಾಡುತ್ತಿದ್ದಾರೆ. ಈ ರೀತಿ ಜನರನ್ನು ವಂಚಿಸಿ ಅವರ ನೆತ್ತರು ಹೀರುವ ಕೆಲಸ ನಮ್ಮ ಹರೀಶ್ ಪೂಂಜಾರವರಿಂದ ಆಗುತ್ತಿದೆ. ಇದನ್ನು ನಿಲ್ಲಿಸುವ ಕಾರ್ಯ ಆಗಬೇಕಿದೆ.

ಈ ರೀತಿ ಭ್ರಷ್ಟಾಚಾರ ಆದ್ರೆ ಹೇಗೆ ಬದುಕೋದು. ನಮ್ಮ ಮುಂದಿನ ಮಕ್ಕಳಿಗೆ ಏನು ಕಲಿಸೋದು, ಹೀಗೆ ತಲೆ ಒಡೆಯಿರಿ, ಹಣ ಮಾಡಿ ಅಂತಾನಾ?

ತುಳು ಸಂಸ್ಕೃತಿ, ಮಹತ್ವದ ಬಗ್ಗೆ ತಿಳಿ ಹೇಳ್ಬೇಕಾ? ಅಥವಾ ಕದ್ದು ಮಾರಿ , ದೇಶವನ್ನು, ರಾಜ್ಯ, ಜಿಲ್ಲೆ, ತಾಲ್ಲೂಕನ್ನು ಗುಂಡಾಂತರ ತೆಗೀರಿ ಅಂತ ಹೇಳ್ಬೇಕಾ ಎಂದು ಪ್ರಶ್ನಿಸಿದರು.

BELTHANGADY

ಶ್ವಾನ ಪ್ರಿಯರೇ ಎಚ್ಚರ..ಎಚ್ಚರ..! ಮಾಲಕಿಯ ತಲೆ ಸೀಳಿದೆ ಸಾಕು ನಾಯಿ..!

Published

on

ಬೆಳ್ತಂಗಡಿ : ಮನೆಯಲ್ಲಿ ಪ್ರಾಣಿಗಳನ್ನು ಸಾಕುವುದೆಂದರೆ ಹೆಚ್ಚಿನವರಿಗೆ ಇಷ್ಟ. ಅದರಲ್ಲೂ ನಾಯಿ ಪ್ರಿಯರು ಅನೇಕ ಮಂದಿ ಇದ್ದಾರೆ. ತಮ್ಮ ಮನೆಗಳಲ್ಲಿ ವಿವಿಧ ತಳಿಯ ನಾಯಿಗಳನ್ನು ಸಾಕುತ್ತಾರೆ. ಈ ನಾಯಿಗಳನ್ನು ಪ್ರೀತಿಸಿದಾಗ ಅವೂ ಅದಕ್ಕೆ ಪ್ರತಿಯಾಗಿ ಪ್ರೀತಿ ಕೊಡೋದು ಸಹಜ. ಆದರೆ, ಅದಕ್ಕೆ ವಿರುದ್ಧವಾದ ಘಟನೆಯೂ ನಡೆಯಬಹುದು ಎಂಬುದಕ್ಕೆ ಗುರುವಾರ(ಏ.18) ಬೆಳ್ತಂಗಡಿಯಲ್ಲಿ ನಡೆದ ಈ ಸುದ್ದಿ ನಿದರ್ಶನವಾಗಿದೆ.


ಮನೆ ಮಾಲಕಿ ತನ್ನ ಸಾಕು ನಾಯಿಯನ್ನು ಮುದ್ದಾಡುವಾಗ ಅದು ಏಕಾಏಕಿ ದಾ*ಳಿ ಮಾಡಿ, ತಲೆ ಭಾಗವನ್ನು ಸೀಳಿ ಹಾಕಿರುವ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. ಮುಂಡಾಜೆ ಗ್ರಾಮ ನಿಡಿಕಲ್ ಓಂಕಾರ್ ನಿವಾಸಿ ದಿವಂಗತ ರಾಮ್ ದಾಸ್ ಎಂಬವರ ಪತ್ನಿ 49 ವರ್ಷದ ಪೂರ್ಣಿಮಾ ಗಂಭೀ*ರ ಗಾ*ಯಗೊಂಡ ಮಹಿಳೆ.

ಇದನ್ನೂ ಓದಿ : Viral Video; ಸ್ಮೋಕ್ ಬಿಸ್ಕೆಟ್ ತಿನ್ನುತ್ತಿದ್ದಂತೆಯೇ ಬಾಲಕ ಅಸ್ವಸ್ಥ

ಪೂರ್ಣಿಮಾ ತನ್ನ ಮನೆಯ ಸಾಕು ನಾಯಿಯನ್ನು ಎಂದಿನಂತೆ ಮುದ್ದಾಡುತ್ತಿದ್ದರು. ಈ ವೇಳೆ ಅವರು ಕಾಲು ಜಾರಿ ನೆಲಕ್ಕೆ ಬಿದ್ದಿದ್ದಾರೆ. ಅದೇನಾಯ್ತೋ ಗೊತ್ತಿಲ್ಲ, ಸಾಕು ನಾಯಿ ಪೂರ್ಣಿಮಾ ಮೇಲೆ ದಾ*ಳಿ ನಡೆಸಿದೆ. ತಲೆ ಭಾಗ ಸೀ*ಳಿ ಹಾಕಿದೆ. ಕೈ ಕಚ್ಚಿ ಗಂಭೀ*ರ ಗಾ*ಯಗೊಳಿಸಿದೆ. ಸದ್ಯ, ಪೂರ್ಣಿಮಾ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Continue Reading

BELTHANGADY

ಸೌದೆ ಒಡೆಯಲೂ ಬಂತು ಯಂತ್ರ… ಹೇಗಿದೆ ನೋಡಿ..!

Published

on

ದಕ್ಷಿಣ ಕನ್ನಡ: ಇತ್ತೀಚಿನ ದಿನಗಳಲ್ಲಿ ಎಲ್ಲಾ ಕೆಲಸಗಳೂ ಯಂತ್ರದ ಮೂಲಕವೇ ನಡೆಯುತ್ತಿದೆ. ಮನೆಯಲ್ಲಿ ನೆಲ ಒರಸಲು ಮಿಷಿನ್, ಅಡುಗೆ ಮಾಡಲು ಮಿಷಿನ್ ಹಾಗೆಯೇ ವಾಷಿಂಗ್ ಮಿಷಿನ್‌ನಲ್ಲಿ ಬಟ್ಟೆ ಒಗೆದರೂ ಅದನ್ನು ಆರಿಸಲೂ ಒಂದು ಮಿಷಿನ್ ಬಂದಿದೆ. ಹೀಗೆ ಪ್ರತಿ ಕೆಲಸಕ್ಕೂ ಜನರು ಯಂತ್ರಗಳನ್ನು ಅವಲಂಭಿಸಿದ್ದಾರೆ. ಹಿಂದೆ ಮರ ಕಡಿಯಲೂ ಜನರೇ ಬೇಕಿತ್ತು. ಆದರೆ ಆ ಜಾಗಕ್ಕೂ ಮಿಷಿನ್ ಬಂತು. ಈಗ ಕಟ್ಟಿಗೆ ಒಡೆಯಲೂ ಮಿಷಿನ್ ಬಂದಿದೆ.

ಹೌದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಮಗೇ ಬೇಕಾದ ಸೈಝ್‌ಗೆ ಕಟ್ಟಿಗೆಯನ್ನು ಒಡೆಯಲು ವಿಶೇಷ ರೀತಿಯ ಯಂತ್ರವೊಂದು ಬಂದಿದೆ. ಈಗ ಬೇಸಿಗೆಯ ಬಿಸಿ ಏರಿದೆ. ಆದರೆ ನಾಳೆಯ ದಿನ ಮಳೆ ಬರಬಹುದು. ಆಗ ಸ್ನಾನ ಮಾಡಲು ನೀರು ಕಾಯಿಸಲು, ಅಡುಗೆಗೆ ಕಟ್ಟಿಗೆಯ ಉಪಯೋಗ ಆಗುತ್ತದೆ ಎಂದು ಜನರು ಈಗಲೇ ಅದನ್ನು ಸಂಗ್ರಹಿಸಿಡುತ್ತಾರೆ. ಇನ್ನು ಬೇಸಿಗೆಯಲ್ಲಿ ಸೋಲಾರ್ ಬಿಸಿ ಆದರೂ ಮಳೆಗಾಲದಲ್ಲಿ ಅದರ ಕೆಲಸ ಕಮ್ಮಿ. ಆಗ ಜನರು ಕಟ್ಟಿಗೆಗಾಗಿಯೇ ಅವಲಂಬಿತರಾಗುತ್ತಾರೆ. ಈಗ ಸೌದೆ ಒಡೆಯುವ ಕೆಲಸ ಯಂತ್ರಗಳೇ ಮಾಡುತ್ತಿದೆ. ಈ ಯಂತ್ರ ಜನರು ಪರಿಶ್ರಮಕ್ಕೆ ಬ್ರೇಕ್ ಹಾಕಿದ್ದು, ಕಷ್ಟದ ಕೆಲಸ ಸುಲಭ ಮಾಡುತ್ತಿದೆ.

ಈ ಮಿಷಿನ್‌ನ ಬೆಲೆ 2.5 ಲಕ್ಷ ರೂಪಾಯಿ. ಬೆಳ್ತಂಗಡಿ ತಾಲೂಕಿನ ಸವಣಾಲಿನ ಕೇಶವ ಗೌಡ ಎನ್ನುವವರು ಇದನ್ನು ತಮಿಳುನಾಡಿನಿಂದ ತರಿಸಿದ್ದಾರೆ. ಇದು ಪೆಟ್ರೋಲ್ ಚಾಲಿತ ಯಂತ್ರವಾಗಿದ್ದು, ಸಣ್ಣ ಕಟ್ಟಿಗೆಯಿಂದ ಹಿಡಿದು ದೊಡ್ಡ ಕಟ್ಟಿಗೆಯವರೆಗೆ ನಮಗೆ ಬೇಕಾದ ಗಾತ್ರಕ್ಕೆ ಈ ಯಂತ್ರದಲ್ಲಿ ತುಂಡು ಮಾಡಬಹುದು.

ಇದನ್ನೂ ಓದಿ : ಈಶ್ವರಪ್ಪ ನಾಮಪತ್ರ ಸಲ್ಲಿಕೆ ವೇಳೆ ಪ್ರಧಾನಿ ಮೋದಿ ಭಾಗಿ!?

ಯಂತ್ರ ಚಾಲನೆಗೊಂಡಂತೆ ಚೂಪಾದ ಕೊಡಲಿಯ ಮೊನೆಯೊಂದು ಮೇಲಿನಿಂದ ಕೆಳಗೆ ಬರುತ್ತದೆ. ಇದು ಕಟ್ಟಿಗೆಯನ್ನು ಕ್ಷಣ ಮಾತ್ರದಲ್ಲಿ ಸೀಳಿ ಹಾಕುತ್ತದೆ. ಈ ಕೆಲಸಕ್ಕೆ ಇಬ್ಬರು ಇದ್ದಾರೆ.

ಜನರ ಶ್ರಮದಿಂದ ದಿನಗಟ್ಟಲೇ ಆಗುವ ಕೆಲಸ ಈ ಯಂತ್ರದ ಸಹಾಯದಿಂದ ಒಂದೆರಡು ಗಂಟೆಗಳಲ್ಲಿ ಆಗುತ್ತದೆ. ಒಟ್ಟಾರೆಯಾಗಿ ಹೇಳುವುದಾದರೆ ಕಟ್ಟಿಗೆ ಒಡೆಯಲು ಈಗ ಕಾರ್ಮಿಕರು ಸಿಗುತ್ತಿಲ್ಲ. ಆದ್ದರಿಂದ, ಈ ಯಂತ್ರ ಜನರ ಸಹಕಾರಿಯಾಗಿ ಕಾರ್ಯ ನಿರ್ವಹಿಸಲಿದೆ ಎನ್ನುವುದು ಜನರ ಅಭಿಪ್ರಾಯ.

Continue Reading

BELTHANGADY

ಕಾಡಾನೆ ಮುಂದೆ ರೈಡಿಂಗ್..! ಸ್ವಲ್ಪದ್ರಲ್ಲಿ ಉಳಿಯಿತು ಜೀವ..!

Published

on

ಮಂಗಳೂರು : ಚಾರ್ಮಾಡಿ ಘಾಟ್‌ನಲ್ಲಿ ಒಂಟಿ ಸಲಗ ಓಡಾಡುತ್ತಿದ್ದು, ಎಪ್ರಿಲ್‌ 8 ಮದ್ಯಾಹ್ನ 12 ಸುಮಾರಿಗೆ ರಸ್ತೆಯಲ್ಲಿ ಕಾಣ ಸಿಕ್ಕಿದೆ. ಘಾಟ್‌ನ 9 ನೇ ತಿರುವಿನಲ್ಲಿ ರಸ್ತೆ ಬದಿಯಲ್ಲಿ ಆನೆಯನ್ನು ಕಂಡ ಪ್ರಯಾಣಿಕರು ವಾಹನವನ್ನು ನಿಲ್ಲಿಸಿದ್ದಾರೆ. ಇದೇ ವೇಳೆ ಬೈಕ್‌ ಸವಾರನೊಬ್ಬ ಆನೆಯನ್ನು ಗಮನಿಸದೆ ಆನೆಯ ಎದುರಿನಿಂದಲೇ ಪಾಸ್‌ ಆಗಿದ್ದಾರೆ. ಅದೃಷ್ಟವಶಾತ್‌ ಬೈಕ್‌ ಪಾಸ್‌ ಆದ ಮೇಲೆ ಆನೆ ರಸ್ತೆಯಲ್ಲಿ ನಡೆದುಕೊಂಡು ಹೋಗಿದೆ.

ಆನೆ ಬಾಂಜಾರು ಮಲೆ ಕಡೆಯಿಂದ ಇಳಿದು ಬಂದಿರುವ ಸಾಧ್ಯತೆ ಇದೆ. ಇತ್ತೀಚೆಗೆ ಇದೇ ಆನೆ ಹಲವೆಡೆ ಓಡಾಡಿದ್ದು, ಕೃಷಿ ಹಾನಿ ಮಾಡಿದ್ದಾಗಿ ಜನರು ಮಾಹಿತಿ ನೀಡಿದ್ದಾರೆ. ನೀರನ್ನು ಹುಡುಕಿಕೊಂಡು ಆನೆ ಅಲೆದಾಡುತ್ತಿದೆ ಅನ್ನೋದು ಇನ್ನೊಂದಷ್ಟು ಜನರ ಅಭಿಪ್ರಾಯ. ಆದ್ರೆ ಈ ಆನೆಯಂತೂ ಕೆಲ ದಿನಗಳಿಂದ ಅಡ್ಡಾಡುತ್ತಿರುವುದಂತೂ ನಿಜ.

ಸದ್ಯ ಚಾರ್ಮಾಡಿ ಘಾಟ್‌ನ ತಿರುವಿನ ರಸ್ತೆಯಲ್ಲಿ ಎದುರಿನಿಂದ ಬರೋ ವಾಹನಗಳನ್ನ ಗಮನಿಸೋದೇ ಕಷ್ಟ. ಅಂತಹದ್ರಲ್ಲಿ ಆನೆಯೊಂದು ರಸ್ತೆಯ ಸೈಡ್‌ನಲ್ಲಿ ನಿಂತುಕೊಂಡಿರೋದನ್ನ ಯಾರೂ ಗಮನಿಸಲು ಸಾದ್ಯವಿಲ್ಲ . ಆದರೆ ಮೊದಲು ಆನೆಯನ್ನು ಕಂಡವರು ತಕ್ಷಣ ವಾಹನಗಳನ್ನು ನಿಲ್ಲಿಸಿ ಆನೆ ರಸ್ತೆ ದಾಟುವ ತನಕ ಕಾದಿದ್ದಾರೆ. ಬೈಕ್‌ ಸವಾರನಿಗೂ ಕೂಗಿ ಹೇಳಿದ್ರೂ ಕೇಳಿಸಿಕೊಳ್ಳದೆ ಆನೆಯ ಮುಂದೆಯೇ ಪಾಸ್‌ ಆಗಿ ಅಪಾಯದಿಂದ ಪಾರಾಗಿದ್ದಾನೆ. ಈ ವಿಡಿಯೋ ಈಗ ಸಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಾಕಷ್ಟು ವೈರಲ್‌ ಆಗುತ್ತಿದೆ.

Continue Reading

LATEST NEWS

Trending