BELTHANGADY
ಕಾಂತಾರ’ ಯಶಸ್ಸಿನ ಬೆಳ್ಳಿತೆರೆಗೆ ಬರಲಿದೆ ತುಳುನಾಡ ಆರಾಧ್ಯ ದೈವ ‘ಕೊರಗಜ್ಜನ’ ಸಿನಿಮಾ..!
ತುಳುನಾಡಿನ ಕಾರ್ಣಿಕ ದೈವ ಕೊರಗಜ್ಜ ಆಧಾರಿತ ಸಿನಿಮಾ ತೆರೆಗೆ ಬರಲು ಸಿದ್ದತೆಗಳು ಆರಂಭವಾಗಿದೆ.ಖ್ಯಾತ ಹಾಲಿವುಡ್- ಬಾಲಿವುಡ್ ನಟ ಕಬೀರ್ ಬೇಡಿ ವಿಶೇಷ ಪಾತ್ರದಲ್ಲಿ ನಟಿಸುತ್ತಿರುವ ಈ ಚಿತ್ರದಲ್ಲಿ ಖ್ಯಾತ ನಾಟಿಯರಾದ ಭವ್ಯ ಮತ್ತು ಶ್ರುತಿ ಕೂಡಾ ಅಭಿನಯಿಸುತ್ತಿದ್ದಾರೆ.
ಮಂಗಳೂರು : ತುಳುನಾಡಿನ ದೈವಾಧಾರಿತ ಚಲನ ಚಿತ್ರ ಕಾಂತಾರ ಸೂಪರ್ ಹಿಟ್ ಆಗಿ ದೇಶ ವಿದೇಶಗಳಲ್ಲಿ ಸದ್ದು ಮಾಡಿದ ಬಳಿಕ ದೈವಾಧಾರಿತ ಸಿನಿಮಾ ನಿರ್ಮಾಣಗಳತ್ತ ಒಲವು ಹೆಚ್ಚಿದೆ.
ಇದಕ್ಕೆ ಪೂರಕವಾಗಿ ಇದೀಗ ತುಳುನಾಡಿನ ಕಾರ್ಣಿಕ ದೈವ ಕೊರಗಜ್ಜ ಆಧಾರಿತ ಸಿನಿಮಾ ತೆರೆಗೆ ಬರಲು ಸಿದ್ದತೆಗಳು ಆರಂಭವಾಗಿದೆ.
ತ್ರಿವಿಕ್ರಮ್ ಸಪಲ್ಯ ನಿರ್ಮಿಸುತ್ತಿರುವ , ಸುಧೀರ್ ಅತ್ತಾವರ್ ನಿರ್ದೇಶನದಲ್ಲಿ ಈ “ಕರಿ ಹೈದ….ಕರಿ ಅಜ್ಜ …”ಹೆಸರಿನ ಸಿನಿಮಾ ತಯಾರಾಗುತ್ತಿದೆ.
ಬೆಳ್ತಂಗಡಿ ತಾಲೂಕಿನ ಬಳ್ಳಮಂಜದ ಇತಿಹಾಸ ಪ್ರಸಿದ್ಧ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಸ್ಥಳಿಯ ಶಾಸಕ ಹರೀಶ್ ಪೂಂಜ ರವರು ಕ್ಯಾಮೆರ ಚಾಲನೆ ಮಾಡುವುದರ ಮೂಲಕ ಅದ್ದೂರಿ ಚಾಲನೆ ನೀಡಿದರು.
ಮಾತ್ರಶ್ರೀ ಕಮಲ ಕೆ ಸಪಲ್ಯ ಆರಂಭ ಫಲಕ ತೋರಿಸಿದರು. ಇತ್ತೀಚಿನ ಹಲವಾರು ವರ್ಷಗಳಿಂದ ಕೊರಗಜ್ಜನ ಮಹಿಮೆ ಮತ್ತು ಕಾರ್ಣಿಕವನ್ನು ತೆರೆಯ ಮೇಲೆ ತರಬೇಕೆಂದು ಹಲವಾರು ನಿರ್ಮಾಪಕರು ಯತ್ನಿಸುತ್ತಿದ್ದರು.
ಇದೀಗ ಸುಧೀರ್ ಅತ್ತಾವರ್ ಕೊರಗಜ್ಜ ನ ಜೀವನದ ಬಗ್ಗೆ ಸಾಕಷ್ಟು ಮಾಹಿತಿಗಳನ್ನು ಕಲೆ ಹಾಕಿ, ಕೊರಗಜ್ಜನ ಜನಾಂಗದ ಮಹನೀಯರೊಂದಿಗೆ ಚರ್ಚಿಸಿ, ಸುಮಾರು 12ನೇ ಶತಮಾನದಲ್ಲಿದ್ದ ಕೊರಗಜ್ಜನ ನಿಜ ಬದುಕಿನ ಯಾರಿಗೂ ತಿಳಿದಿರದಂತಹ ಸಾಕಷ್ಟು ವಿಷಯಗಳನ್ನು ಈ ಸಿನಿಮಾದ ಮೂಲಕ ಜಗತ್ತಿಗೆ ತೋರಿಸುವ ಪ್ರಯತ್ನ ಮಾಡುತ್ತಿದ್ದಾರೆ.
ಮುಹೂರ್ತ ನಡೆಸುವ ಮೊದಲು ಕೊರಗಜ್ಜನ ಸಮುದಾಯದ ಪ್ರಮುಖ ವ್ಯಕ್ತಿಗಳು ಡೊಳ್ಳು -ತಮಟೆಗಳ ಸ ವಿಶೇಷ ಪೂಜೆಯನ್ನು ಶ್ರೀ ಸುಂದರ ಬೆಳುವಾಯಿ, ಶ್ರೀ ಬಾಬು ಪಾಂಗಳ, ಶ್ರೀ ಬಲ್ ರಾಜ್, ಶ್ರೀ ರಮೇಶ್ ಮೊದಲಾದ ಮಹನೀಯರು ಮತ್ತು ಗುರಿಕಾರರು ಹಳೆಯ ಶೈಲಿಯ ಪೂಜಾ ಕಾರ್ಯಕ್ರಮವನ್ನು ನಡೆಸಿಕೊಟ್ಟು ಸಿನೆಮಾಕ್ಕೆ ಶುಭ ಹಾರೈಸಿದರು. ಚಿತ್ರದಲ್ಲಿ ಖ್ಯಾತ ನಾಟಿಯರಾದ ಭವ್ಯ ಮತ್ತು ಶ್ರುತಿ ಕೂಡಾ ಅಭಿನಯಿಸುತ್ತಿದ್ದಾರೆ.
ಭರತ್ ಸೂರ್ಯ ಎನ್ನುವ ಹೊಸ ಕಲಾವಿದನನ್ನು ಈ ಚಿತ್ರದ ಮೂಲಕ ಪರಿಚಯಿಸುತ್ತಿದ್ದಾರೆ.
ವಿದ್ಯಾಧರ್ ಶೆಟ್ಟಿ ಸಂಕಲನದ ಜೊತೆಗೆ ಎಂಟುನೂರು ವರ್ಷಗಳ ಇತಿಹಾಸದ ದಾಖಲೆ ಮತ್ತು ಪುರಾವೆಗಳನ್ನು ಕಲೆ ಹಾಕುವ ನಿಟ್ಟಿನಲ್ಲಿ ಶ್ರಮಿಸುತ್ತಿದ್ದಾರೆ
BELTHANGADY
ಚಾರ್ಮಾಡಿ ಘಾಟ್ ನಲ್ಲಿ ನೂರು ಅಡಿ ಪ್ರಪಾತಕ್ಕೆ ಉರುಳಿದ ಲಾರಿ..!
ನೀರಿನ ಬಾಟಲ್ ಸಾಗಾಟ ಮಾಡುತ್ತಿದ್ದ ಲಾರಿಯೊಂದು ಚಾರ್ಮಾಡಿ ಘಾಟಿಯ ಸೋಮನಕಾಡು ಬಳಿ ನೂರು ಅಡಿ ಪ್ರಪಾತಕ್ಕೆ ಉರುಳಿದ ಘಟನೆ ಸೆ.15ರಂದು ನಡೆದಿದ್ದು, ಅದೃಷ್ಟವಶಾತ್ ಲಾರಿ ಚಾಲಕ ಮತ್ತು ಕ್ಲೀನರ್ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
ಚಾರ್ಮಾಡಿ: ನೀರಿನ ಬಾಟಲ್ ಸಾಗಾಟ ಮಾಡುತ್ತಿದ್ದ ಲಾರಿಯೊಂದು ಚಾರ್ಮಾಡಿ ಘಾಟಿಯ ಸೋಮನಕಾಡು ಬಳಿ ನೂರು ಅಡಿ ಪ್ರಪಾತಕ್ಕೆ ಉರುಳಿದ ಘಟನೆ ಸೆ.15ರಂದು ನಡೆದಿದ್ದು, ಅದೃಷ್ಟವಶಾತ್ ಲಾರಿ ಚಾಲಕ ಮತ್ತು ಕ್ಲೀನರ್ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
ಶುಕ್ರವಾರ ರಾತ್ರಿ ಪುತ್ತೂರಿನಿಂದ ಚಿತ್ರದುರ್ಗಕ್ಕೆ ನೀರಿನ ಬಾಟಲ್ ತುಂಬಿದ ಲಾರಿ ಚಾರ್ಮಾಡಿ ಘಾಟಿಯಲ್ಲಿ ಆವರಿಸಿದ ದಟ್ಟ ಮಂಜಿನಿಂದಾಗಿ ಚಾಲಕನಿಗೆ ದಾರಿ ಕಾಣದೆ ಪ್ರಪಾತಕ್ಕೆ ಬಿದ್ದಿದೆ.
ಲಾರಿ ಮೊದಲು ತಡೆಗೋಡೆಗೆ ಢಿಕ್ಕಿ ಹೊಡೆದು ಬಳಿಕ ನೂರು ಅಡಿ ಪ್ರಪಾತಕ್ಕೆ ಉರುಳಿದೆ.
ಈ ಸಂದರ್ಭದಲ್ಲಿ ಅಲ್ಲಿ ಇದ್ದ ಮರವೊಂದಕ್ಕೆ ಲಾರಿ ಸಿಲುಕಿಕೊಂಡ ಪರಿಣಾಮ ಸಂಭವನೀಯ ಅವಘಡ ತಪ್ಪಿದೆ ಹಾಗೂ ಈ ಮರ ಇಬ್ಬರ ಪ್ರಾಣ ಉಳಿಸಿದೆ.
ಒಂದು ವೇಳೆ ಲಾರಿ ಮರಕ್ಕೆ ಸಿಕ್ಕಿಕೊಳ್ಳದಿದ್ದಲ್ಲಿ ಸಾವಿರ ಅಡಿ ಪ್ರಪಾತಕ್ಕೆ ಹೋಗಿ ಬೀಳುವ ಸಾಧ್ಯತೆ ಇತ್ತು ಎನ್ನಲಾಗಿದೆ.
ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BELTHANGADY
ಭಾಸ್ಕರ ನಾಯ್ಕ ಹಲ್ಲೆ ಪ್ರಕರಣ:ತಿಮರೋಡಿ ಮತ್ತವರ ಸಂಗಡಿರನ್ನು ಬಂಧಿಸಲು ಆಗ್ರಹ
ಮಂಗಳೂರು : ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಪಾಣಿಯಾಲ್ ಎಂಬಲ್ಲಿ ದಲಿತ ಸಮುದಾಯದ ನಿವಾಸಿ ಭಾಸ್ಕರ ನಾಯ್ಕ ಅವರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಸಂಗಡಿಗರನ್ನು ಕೂಡಲೇ ಬಂಧಿಸ ಬೇಕೆಂದು ಭಾಸ್ಕರ ನಾಯ್ಕ ಅವರ ಪತ್ನಿ ಮಮತಾ, ಮಕ್ಕಳಾದ ವೈಷ್ಣವಿ, ವೈಭವಿ ಅವರು ಒತ್ತಾಯಿಸಿದ್ದಾರೆ.
ಮಮತಾ ಅವರು ಮಾಧ್ಯಮಗಳಿಗೆ ಹೇಳಿಕೆ ನೀಡಿ, ನನ್ನ ಗಂಡ ಭಾಸ್ಕರ ನಾಯ್ಕ ಅವರು ಸೆ. 2 ರಂದು ಖಾಸಗಿ ಮಾಧ್ಯಮವೊಂದರಲ್ಲಿ ವಿವರಣೆ ನೀಡಿ ಮರಳಿ ಹೋಗುತ್ತಿದ್ದಾಗ ಪಾಣಿಯಾಲ್ ಬಳಿ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಸಂಗಡಿಗರು ಕಾರನ್ನು ತಡೆದು ಹೊರಕ್ಕೆಳೆದು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ವಿಷಯ ತಿಳಿದು ನಾನು ಮಕ್ಕಳ ಜತೆ ಸ್ಥಳಕ್ಕೆ ತೆರಳಿ ಬಿಡಿಸಲು ಯತ್ನಿಸಿದಾಗ ನನ್ನ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಬಳಿಕ ನನ್ನ ಗಂಡನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದೇನೆ ಹಾಗೂ ಮಹೇಶ್ ತಿಮರೋಡಿ ಮತ್ತು ತಂಡದ ವಿರುದ್ಧ ದಲಿತ ದೌರ್ಜನ್ಯ ಕಾಯ್ದೆಯಡಿ ದೂರು ದಾಖಲಿಸಿದ್ದೇನೆ. ಈ ಸಂದರ್ಭದಲ್ಲಿ ಆರೋಪಿಗಳನ್ನು ಬಂಧಿಸುವ ಭರವಸೆ ನೀಡಲಾಗಿತ್ತು. ಆದರೆ ಬಂಧಿಸಿರಲಿಲ್ಲ್ಲ. ಬಳಿಕ ಪೆರ್ಮುದೆ ಬಳಿ ಬಹಿರಂಗ ಸಭೆಯಲ್ಲಿ ತಿಮರೋಡಿ ಭಾಗವಹಿಸುತ್ತಿದ್ದಾರೆ ಎಂಬ ಮಾಹಿತಿ ಲಭಿಸಿದಾಗ ನಾನು ಕೂಡಲೇ ಎಸ್.ಪಿ. ಅವರಿಗೆ ಫೋನ್ ಮಾಡಿ ಮಾಹಿತಿ ನೀಡಿದ್ದೇನೆ ಎಂದರು.
ಎಸ್.ಪಿ. ಅವರು ಆರೋಪಿಗಳನ್ನು ಬಂಧಿಸುವ ಭರವಸೆ ನೀಡಿದ್ದರು. ಆದರೆ ಬಂಧಿಸಿಲ್ಲ. ಮತ್ತೊಮ್ಮೆ ಎಸ್.ಪಿ. ಆವರಿಗೆ ಮನವಿ ಮಾಡಿದ್ದೇನೆ. ಇದುವರೆಗೆ ಏನೂ ಕ್ರಮ ಆಗಿಲ್ಲ. ಇದೀಗ ನಮಗೆ ಜೀವ ಬೆದರಿಕೆ ಇದ್ದು, ರಕ್ಷಣೆ ಒದಗಿಸ ಬೇಕು. ಗಂಡ ಆಸ್ಪತ್ರೆಯಲ್ಲಿ ಚಿಂತಾಜನಕ ಸ್ಥಿತಿಯಲ್ಲಿದ್ದು, ಅವರ ಆರೋಗ್ಯವನ್ನು ನಾನು ನೋಡಿಕೊಳ್ಳುತ್ತಿದ್ದೇನೆ. ಮಕ್ಕಳು ಕೂಡಾ ಶಾಲೆಗೆ ಹೋಗದೆ ನನ್ನ ಜತೆ ಇದ್ದಾರೆ. ಆದ್ದರಿಂದ ಆರೋಪಿಗಳನ್ನು ಕೂಡಲೇ ಬಂಧಿಸ ಬೇಕು ಎಂದು ಒತ್ತಾಯಿಸಿದ್ದಾರೆ.
BELTHANGADY
Belthangady: 27 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬ೦ಧನ..!
ಪ್ರಕರಣವೊ೦ದಕ್ಕೆ ಸಂಬಂಧಿಸಿದಂತೆ ಕಳೆದ 27 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬ೦ಧಿಸಿದ್ದಾರೆ.
ಬೆಳ್ತಂಗಡಿ: ಪ್ರಕರಣವೊ೦ದಕ್ಕೆ ಸಂಬಂಧಿಸಿದಂತೆ ಕಳೆದ 27 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬ೦ಧಿಸಿದ್ದಾರೆ.
ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ವರ್ಕಾಡಿ ನಿವಾಸಿ ಎಸ್. ಎ. ಅಶ್ರಫ್ ಬ೦ಧಿತ ಆರೋಪಿ.
ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ 1996ರಲ್ಲಿ ದಾಖಲಾಗಿದ್ದ ಶ್ರೀಗಂಧ ಕಳವು ಪ್ರಕರಣದ ಆರೋಪಿಯಾಗಿದ್ದ ಎಸ್. ಎ. ಅಶ್ರಫ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 27 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ಮುಂಬಯಿ ನಗರ ಹಾಗೂ ಸೌದಿ ಅರೇಬಿಯಾದಲ್ಲಿ ತಲೆಮರೆಸಿಕೊಂಡಿದ್ದ.
ಬೆಳ್ತಂಗಡಿ ಠಾಣಾ ಪೊಲೀಸರು ಆ.24 ರಂದು ಕೇರಳ ಪೊಲೀಸರ ಸಹಕಾರದೊಂದಿಗೆ ಆತನನ್ನು ಕೇರಳದಿಂದ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಈತನ ವಿರುದ್ಧ ಕಾಸರಗೋಡು ಪೊಲೀಸ್ ಠಾಣೆಯಲ್ಲಿ ಕರ್ನಾಟಕದ ಉಪ್ಪಿನಂಗಡಿ ಮತ್ತು ಕೋಣಾಜೆ ಪೊಲೀಸ್ ಠಾಣೆಗಳಲ್ಲಿ ಅರಣ್ಯ ಕಾಯಿದೆಯಡಿ ದಾಖಲಾಗಿರುವ ಪ್ರಕರಣ ವಿಚಾರಣೆಗೆ ಬಾಕಿ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.
- DAKSHINA KANNADA6 days ago
Ullala: 25 ಕೋಟಿ ರೂ. ಲಾಟರಿ ಒಲಿದಿದೆ ಎಂಬ ಲಿಂಕ್ ಕಳುಹಿಸಿ ಮೋಜಿನಾಟ..!
- FILM5 days ago
ಕುರೂಪಿಯಾದ ಹಾಲಿವುಡ್ ನಟಿ ಆ್ಯಮಿ ಜಾಕ್ಸನ್..!
- DAKSHINA KANNADA6 days ago
ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ರಾಂಬೋ ಸರ್ಕಸ್- ಜನರನ್ನು ಬೆರಗುಗೊಳಿಸುವ ವಿಸ್ಮಯ ಪ್ರದರ್ಶನ..!
- FILM5 days ago
Film: ಹಂದಿ ಮಾಂಸ ಸೇವಿಸಿದ ಟಿಕ್ಟಾಕ್ ಸ್ಟಾರ್ಗೆ 2 ವರ್ಷ ಜೈಲು ಶಿಕ್ಷೆ..!