ವಿಶಾಖಪಟ್ಟಣದಲ್ಲಿ ಭೀಕರ ಅಗ್ನಿ ದುರಂತ :ಬೆಂಕಿಗಾಹುತಿಯಾದ ಔಷಧಿ ತಯಾರಿಕಾ ಘಟಕ..!
ವಿಶಾಖಪಟ್ಟಣದಲ್ಲಿ ಭೀಕರ ಅಗ್ನಿ ದುರಂತ :ಬೆಂಕಿಗಾಹುತಿಯಾದ ಔಷಧಿ ತಯಾರಿಕಾ ಘಟಕ..!
ವಿಶಾಖಪಟ್ಟಣ: ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಇಲ್ಲಿನ ಪರವಾಡ ಬಳಿ ಇರುವ ಜೆ.ಎನ್ ಫಾರ್ಮಾ ಸಿಟಿಯಲ್ಲಿರುವ ಔಷಧ ತಯಾರಕ ಘಟಕದಲ್ಲಿ ನಿನ್ನೆ ತಡರಾತ್ರಿ ಬೃಹತ್ ಸ್ಫೋಟ ಸಂಭವಿಸಿದೆ.
ಸ್ಫೋಟ ಸಂಭವಿಸಿದಾಗ ಘಟಕದಲ್ಲಿ ಒಟ್ಟು ಆರು ಕಾರ್ಮಿಕರಿದ್ದು ಉಳಿದ ಐವರು ಆಶ್ಚರ್ಯಕರ ರೀತಿಯಲ್ಲಿ ಪಾರಾಗಿದ್ದಾರೆ. ಸುಮಾರು 15 ಬಾರಿ ಸ್ಫೋಟದ ಸದ್ದು ಕೇಳಿಸಿದೆ. ಸಾಗರ ತ್ಯಾಜ್ಯ ನಿರ್ವಹಣೆ ಮಾಡಲಾಗುವ ರಾಮ್ಕಿ ದ್ರಾವಕಗಳ ಘಟಕದಲ್ಲಿ ಸ್ಫೋಟ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ. ಭಾರಿ ಪ್ರಮಾಣದ ಬೆಂಕಿಯನ್ನು ನಂದಿಸಲು ಮತ್ತು ಸುತ್ತಮುತ್ತಲಿನ ಇತರ ಔಷಧ ಕಾರ್ಖಾನೆಗಳಿಗೆ ಬೆಂಕಿ ಹರಡದಂತೆ ತಡೆಯಲು 10 ಅಗ್ನಿಶಾಮಕ ವಾಹನಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ ಎಂದು ವಿಶಾಖಪಟ್ಟಣಂ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ. ಯಾವುದೇ ಪ್ರಾಣಹಾನಿ ಸಂಭವಿಸದಂತೆ ನೋಡಿಕೊಳ್ಳುವಂತೆ ಪೊಲೀಸರು, ಅಗ್ನಿಶಾಮಕ ಸೇವೆಗಳು ಮತ್ತು ಆರೋಗ್ಯ ಅಧಿಕಾರಿಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದೆ. ಕೆಲ ತಿಂಗಳ ಹಿಂದೆ ಎಲ್ಜಿ ಪಾಲಿಮರ್ಸ್ ಕೈಗಾರಿಕೆಯಿಂದ ವಿಷಾನಿಲ ಸೋರಿಕೆಯಾಗಿ ಹಲವರು ಮೃತಪಟ್ಟ ಘಟನೆ ಹಸಿರಾಗಿರುವಾಗಲೇ ನಡದಿರುವ ಘಟನೆಯು ಪರವಾಡಾ ಪ್ರದೇಶದ ನಿವಾಸಿಗಳಲ್ಲಿ ಆತಂಕ ಉಂಟುಮಾಡಿದೆ.
https://twitter.com/hashtag/Pharmacity?src=hashtag_click&f=video
LATEST NEWS
WATCH : ಭೂಮಿ ಕುಸಿದು ಗುಂಡಿಯೊಳಗೆ ಬಿದ್ದ ಟ್ರಕ್; ಭಯಾನಕ ವೀಡಿಯೋ ವೈರಲ್
ಮಂಗಳೂರು/ ಮಹಾರಾಷ್ಟ್ರ: ಪೋಸ್ಟ್ ಆಫೀಸ್ ಕಾಂಪ್ಲೆಕ್ಸ್ನ ನೆಲ ಏಕಾ ಏಕಿ ಕುಸಿದು ಬಿದ್ದ ಕಾರಣ ಮುನ್ಸಿಪಲ್ ಕಾರ್ಪೋರೇಷನ್ಗೆ ಸೇರಿದ್ದ ಟ್ರಕ್ ಒಂದು ಗುಂಡಿಗೆ ಬಿದ್ದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರದ ಪುಣೆ ನಗರದ ಅಂಚೆ ಕಚೇರಿ ಆವರಣದಲ್ಲಿ ಈ ಘಟನೆ ನಡೆದಿದೆ.
ಟ್ರಕ್ ಪುಣೆ ಮುನ್ಸಿಪಲ್ ಕಾರ್ಪೋರೆಷನ್ಗೆ ಸೇರಿದ್ದಾಗಿದ್ದು, ಚರಂಡಿ ಸ್ವಚ್ಚಗೊಳಿಸುವ ಕೆಲಸಕ್ಕೆ ಪೋಸ್ಟ್ ಆಫೀಸ್ ಬಳಿ ಬಂದಿತ್ತು. ಈ ವೇಳೆ ಟ್ರಕ್ ನಿಲ್ಲಿಸಿದ್ದ ಜಾಗದಲ್ಲೇ ಭೂಮಿ ಕುಸಿದು ಟ್ರಕ್ ಭೂಮಿಯ ಒಡಲಿಗೆ ಜಾರಿದೆ. ಈ ವೇಳೆ ಟ್ರಕ್ನಲ್ಲಿದ್ದ ಚಾಲಕ ಹಾರಿ ತಪ್ಪಿಸಿಕೊಂಡ ಕಾರಣ ಪ್ರಾ*ಣಾಪಾಯದಿಂದ ಪಾರಾಗಿದ್ದಾನೆ. ಭೂಮಿ ಕುಸಿದ ಕಾರಣ ಸುಮಾರು 40ರಿಂದ50 ಅಡಿ ಆಳದ ಗುಂಡಿ ನಿರ್ಮಾಣವಾಗಿದ್ದು, ಟ್ರಕ್ ಇದರಲ್ಲಿ ಸಿಲುಕಿಕೊಂಡಿದೆ.
ಇದನ್ನೂ ಓದಿ : ವ್ಯಾಟ್ಸಾಪ್ ಸ್ಟೇಟಸ್ ಹಾಕಿ ಆತ್ಮಹ*ತ್ಯೆ ಮಾಡಿಕೊಂಡ ವ್ಯಕ್ತಿ
ಅನಿರೀಕ್ಷಿತವಾಗಿ ಸಂಭವಿಸಿದ ಈ ಘಟನೆಯ ಬಗ್ಗೆ ಜನರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಪೋಸ್ಟ್ ಆಫೀಸ್ ಮುಂಬಾಗದಲ್ಲಿ ಈ ರೀತಿ ಕುಸಿತ ಆಗಲು ಕಾರಣ ಏನು ಅನ್ನೋ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಕ್ರೇನ್ ಹಾಗೂ ಜೆಸಿಬಿ ಸಹಾಯದಿಂದ ಟ್ರಕ್ ಮೇಲೆತ್ತಲಾಗಿದೆ.
DAKSHINA KANNADA
ಕನ್ನಡದಲ್ಲಿ ಔಷಧ ಚೀಟಿ ಬರೆದು ಗಮನ ಸೆಳೆದ ಕಾಸರಗೋಡು ಜಿಲ್ಲೆಯ ದಂತ ವೈದ್ಯ..!
ಮಂಜೇಶ್ವರ/ಮಂಗಳೂರು: ಈ ಹಿಂದೆ ವೈದ್ಯರೊಬ್ಬರು ಕನ್ನಡದಲ್ಲಿ ಔಷಧ ಚೀಟಿಯನ್ನು ಬರೆಯುವ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಬಳಿಕ ಕರ್ನಾಟಕದಲ್ಲಿ ವೈದ್ಯರು ಕನ್ನಡದಲ್ಲೇ ಔಷಧ ಚೀಟಿಯನ್ನು ಬರೆಯುವಂತೆ ಕನ್ನಡ ಪ್ರಾಧಿಕಾರ ಸೂಚನೆ ಕೂಡಾ ನೀಡಿತ್ತು. ಆದರೆ ಕರ್ನಾಟಕದಲ್ಲಿ ಈ ಸೂಚನೆ ಕಟ್ಟುನಿಟ್ಟಾಗಿ ಜಾರಿಯಾಗುವ ಮೊದಲೇ ಕೇರಳದ ಕಾಸರಗೋಡಿನಲ್ಲಿ ವೈದ್ಯರೊಬ್ಬರು ಕನ್ನಡದಲ್ಲಿ ಔಷಧ ಚೀಟಿ ಬರೆದು ಎಲ್ಲರ ಗಮನ ಸೆಳೆದಿದ್ದಾರೆ.
ಹೌದು, ಕಾಸರಗೋಡಿನ ಮಂಜೇಶ್ವರದಲ್ಲಿರುವ ಸುರಕ್ಷಾ ದಂತ ಚಿಕಿತ್ಸಾಲಯದ ಡಾ.ಮುರಳೀ ಮೋಹನ ಚೂಂತೂರು ರವರು ಕನ್ನಡ ಪ್ರೇಮ ಮೆರೆದಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಪುರುಷೋತ್ತಮ ಬಿಳಿನೆಲೆ ಅವರು ಇತ್ತೀಚೆಗೆ ಮಂಗಳೂರು ಭೇಟಿ ನೀಡಿದ ವೇಳೆ ವೈದ್ಯರು ಕೂಡಾ ಕನ್ನಡದಲ್ಲಿ ಔಷಧ ಚೀಟಿಯನ್ನು ಜನರಿಗೆ ಅರ್ಥವಾಗುವಂತೆ ಬರೆಯಬೇಕು ಎಂದು ಸೂಚನೆ ನೀಡಲಾಗಿದೆ ಎಂದು ಹೇಳಿದ್ದರು.
ಹಾಗಾಗಿ ರಾಜ್ಯದಲ್ಲಿ ಒಬ್ಬ ವೈದ್ಯರು ಕನ್ನಡದಲ್ಲಿ ಔಷಧ ಚೀಟಿ ಬರೆಯುವ ಮೂಲಕ ಮೊದಲ ಸ್ಪಂದನ ನೀಡಿದ್ದರು. ಇದೀಗ ಕೇರಳ ರಾಜ್ಯದಲ್ಲಿ ವೈದ್ಯರೊಬ್ಬರು ಕನ್ನಡದಲ್ಲಿ ಔಷಧ ಚೀಟಿ ಬರೆಯುವ ಮೂಲಕ ತನ್ನ ಕನ್ನಡ ಪ್ರೇಮವನ್ನು ತೋರಿಸಿದ್ದಾರೆ.
ಸರ್ಕಾರಿ ವೈದ್ಯರು ಕನ್ನಡದಲ್ಲೇ ಔಷಧ ಚೀಟಿ ಬರೆಯಲು ಆದೇಶಿಸುವಂತೆ ಸಚಿವರಿಗೆ ಪ್ರಾಧಿಕಾರ ಪತ್ರ
ಅದಾದ ಬಳಿಕ ಆರೋಗ್ಯ ಸಚಿವರು ಪತ್ರಿಕಾ ಹೇಳಿಕೆ ಹೊರಡಿಸಿ, ಈ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಿ, ಮುಖ್ಯಮಂತ್ರಿಗಳೊಂದಿಗೂ ಚರ್ಚೆ ನಡೆಸಿ ಬಳಿಕ ಸಾಧಕ ಬಾಧಕ ನೋಡಿಕೊಂಡು ಅನುಷ್ಠಾನಕ್ಕೆ ತರವಲಾಗುವುದು ಎಂದಿದ್ದರು. ಈಗ ಗಡಿನಾಡಿನ ಕನ್ನಡಿಗ ವೈದ್ಯರು ಔಷಧ ಚೀಟಿಯನ್ನು ಕನ್ನಡದಲ್ಲಿ ಬರೆಯುವ ಮೂಲಕ ಇತರರಿಗೆ ಮಾರ್ಗದರ್ಶಿಯಾಗಿರುವುದನ್ನು ಪ್ರಾಧಿಕಾರ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಸಂತಸ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.
LATEST NEWS
ಲೋ ಬಿಪಿಯಿಂದ ಕುಸಿದು ಬಿದ್ದು 5ನೇ ತರಗತಿ ವಿದ್ಯಾರ್ಥಿ ಸಾ*ವು
ಬೆಂಗಳೂರು : ತರಗತಿಯಲ್ಲೇ ಏಕಾಏಕಿ ಲೋ ಬಿಪಿಯಿಂದ ಕುಸಿದು ಬಿದ್ದು ವಿದ್ಯಾರ್ಥಿ ಸಾ*ವನಪ್ಪಿದ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ಗಬ್ಯೂರು ಗ್ರಾಮದಲ್ಲಿ ನಡೆದಿದೆ.
5ನೇ ತರಗತಿ ವಿದ್ಯಾರ್ಥಿ ಶಿವಪ್ರಸಾದ್ ಮೃ*ತ ಬಾಲಕ. ಗಬ್ಯೂರ್ನಲ್ಲಿ ಸೈನಿಕ, ನವೋದಯ ಕೋಚಿಂಗ್ ಪಡೆಯುತ್ತಿದ್ದ. ಇನ್ನು ಕೋಚಿಂಗ್ ಸೆಂಟರ್ನಲ್ಲೇ ಏಕಾಏಕಿ ಲೋ ಬಿಪಿಯಾಗಿ ಬಾಲಕ ಶಿವಪ್ರಸಾದ್ ಸಾವನಪ್ಪಿದ್ದು, ಗಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.