Connect with us

    DAKSHINA KANNADA

    ಬ್ಯಾರಿ ಅಕಾಡೆಮಿಯಿಂದ ಅಹ್ಮದ್ ನೂರಿ ಜನ್ಮ ಶತಮಾನೋತ್ಸವ ಆಚರಣೆ :ಟಿ.ಎ. ಆಲಿಯಬ್ಬ ಜೋಕಟ್ಟೆಗೆ ಅಹ್ಮದ್ ನೂರಿ ಪ್ರಶಸ್ತಿ ಪ್ರದಾನ

    Published

    on

    ಮಂಗಳೂರು: ಬ್ಯಾರಿ ಭಾಷಿಕರ ಕುರಿತು “ಮೈಕಾಲ” ಎಂಬ ಕೃತಿಯನ್ನು ರಚನೆ ಮಾಡುವ ಮೂಲಕ ಪ್ರಸಿದ್ಧಿ ಪಡೆದ ದಿವಂಗತ ಅಹ್ಮದ್ ನೂರಿಯವರ ಜನ್ಮ ಶತಮಾನೋತ್ಸವ ಕಾರ್ಯಕ್ರಮವು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ವತಿಯಿಂದ ಮಂಗಳೂರು ನಗರದ ಪುರಭವನದ ಅಹ್ಮದ್ ನೂರಿ ವೇದಿಕೆಯಲ್ಲಿ ಶುಕ್ರವಾರ ಸಂಜೆ ನಡೆಯಿತು.

    ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಕಾಡಮಿಯ ಅಧ್ಯಕ್ಷ ರಹೀಂ ಉಚ್ಚಿಲ್, ದೇಶಕ್ಕೆ ಅಪಾರ ಕೊಡುಗೆ ನೀಡಿದ ಮಹನೀಯರ ಬಗ್ಗೆ ಬ್ಯಾರಿ ಲೇಖಕ, ಲೇಖಕಿಯರು ಬ್ಯಾರಿ ಭಾಷೆಯಲ್ಲಿ ಬರೆದ 10 ಕೃತಿಗಳನ್ನು ಅಕಾಡಮಿಯು ಪ್ರಕಟಿಸಿ ಇಂದು ಬಿಡುಗಡೆಗೊಳಿಸಲಾಗಿದೆ‌.

    ಮುಂದೆಯೂ ಇನ್ನಷ್ಟು ಒಳ್ಳೆಯ ಕೃತಿಗಳನ್ನು ಪ್ರಕಟಿಸಲಾಗುವುದು‌. ಆ ಮೂಲಕ ಬ್ಯಾರಿ ಭಾಷೆಯ ಸಾಹಿತ್ಯ ವೃದ್ಧಿಗೆ ಪ್ರಯತ್ನಿಸಲಾಗುವುದು ಎಂದರು. ಬ್ಯಾರಿ ಭಾಷೆ, ಸಾಹಿತ್ಯ, ಸಂಸ್ಖತಿ, ಆಂದೋಲನದಲ್ಲಿ ತೊಡಗಿಸಿಕೊಂಡು ಗತಿಸಿದ ಮಹನೀಯರನ್ನು ನೆನಪಿಸುವ ಮೂಲಕ ಮುಂದಿನ ಪೀಳಿಗೆಗೆ ಪರಿಚಯಿಸುವ ಕಾರ್ಯವನ್ನು ಮುಂದುವರಿಸಲಾಗುವುದು ಎಂದು ರಹೀಂ ಉಚ್ಚಿಲ್ ನುಡಿದರು‌.

    ಈ ಕಾರ್ಯಕ್ರಮದಲ್ಲಿ ಅಕಾಡಮಿಯ ಮಾಜಿ ಸದಸ್ಯ, ಹಿರಿಯ ಸಾಹಿತಿ ಟಿ.ಎ.ಆಲಿಯಬ್ಬ ಜೋಕಟ್ಟೆಗೆ ದಿ. ಅಹ್ಮದ್ ನೂರಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.


    ಇನ್ನು ಅಹ್ಮದ್ ನೂರಿ ಅವರ ಬದುಕು ಮತ್ತು ಬರಹದ ಕುರಿತು ಪತ್ರಕರ್ತ ಹಂಝ ಮಲಾರ್‌ರ ಅಧ್ಯಕ್ಷತೆಯಲ್ಲಿ ನಡೆದ ವಿಚಾರಗೋಷ್ಠಿಯಲ್ಲಿ ಸಾಹಿತಿ ಅಬ್ದುಲ್ ರಹ್ಮಾನ್ ಕುತ್ತೆತ್ತೂರು, ಬ್ಯಾರಿ ಅಧ್ಯಯನ ಪೀಠದ ಸದಸ್ಯ ಅಹ್ಮದ್ ಬಾವಾ ಪಡೀಲ್, ಮುಸ್ಲಿಂ ಲೇಖಕರ ಸಂಘದ ಮಾಜಿ ಅಧ್ಯಕ್ಷ ಸಈದ್ ಇಸ್ಮಾಯಿಲ್ ವಿಷಯ ಮಂಡಿಸಿದರು.

    ಪತ್ರಕರ್ತ ಎ.ಕೆ. ಕುಕ್ಕಿಲ ಮಹಾತ್ಮಾ ಗಾಂಧೀಜಿ ಕುರಿತು ಬರೆದ “ಜಂಡ್ ಕಂಡ ತುನಿರೊ ಪಕೀರ” ಎಂಬ ಕೃತಿಯನ್ನು ಅಕ್ಷರಸಂತ ಪದ್ಮಶ್ರೀ ಹರೇಕಳ ಹಾಜಬ್ಬ, ಹಫ್ಸಾ ಬಾನು ಬೆಂಗಳೂರು ಬರೆದ ಡಾ. ಬಿ.ಆರ್. ಅಂಬೇಡ್ಕರ್‌ ಕೃತಿಯನ್ನು ಪತ್ರಕರ್ತ ಪೆರೂರ್ ಜಾರು, ಎಂ. ಅಶೀರುದ್ದೀನ್ ಆಲಿಯಾ ಬರೆದ ಸ್ವಾಮಿ ವಿವೇಕಾನಂದ ಕೃತಿಯನ್ನು ಕೊಂಕಣಿ ಸಾಹಿತ್ಯ ಅಕಾಡಮಿಯ ಸದಸ್ಯ ಗೋಪಾಲಕೃಷ್ಣ ಭಟ್, ಅಬ್ದುಲ್ ರಝಾಕ್ ಅನಂತಾಡಿ ಬರೆದ ಸರ್ದಾರ್ ವಲ್ಲಭಬಾಯಿ ಪಟೇಲ್ ಕೃತಿಯನ್ನು ದ.ಕ.ಜಿಲ್ಲಾ ಕಸಾಪ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್, ರಹೀನಾ ತೊಕ್ಕೊಟ್ಟು ಬರೆದ ಹವಾಲ್ದಾರ್ ಅಬ್ದುಲ್ ಹಮೀದ್ ಕೃತಿಯನ್ನು ಸಿಆರ್‌ಪಿಎಫ್ ಯೋಧ ಝುಬೈರ್ ಹಳೆನೇರೆಂಕಿಯ ಪತ್ನಿ ಮೆಹರಾಝ್, ಅಬ್ದುಲ್ ರಹ್ಮಾನ್ ಕುತ್ತೆತ್ತೂರು ಬರೆದ ಸರ್ ಎಂ. ವಿಶ್ವೇಶ್ವರಯ್ಯ ಹಾಗೂ ಝುಲೇಖಾ ಮುಮ್ತಾಝ್ ಬರೆದ ಡಾ.ಎಪಿಜೆ ಅಬ್ದುಲ್ ಕಲಾಂ ಕೃತಿಯನ್ನು ಶಾರದಾ ವಿದ್ಯಾಲಯದ ಪ್ರೊ.ಎಂ.ಬಿ. ಪುರಾಣಿಕ್, ಮರಿಯಮ್ ಇಸ್ಮಾಯಿಲ್ ಬರೆದ ವೀರ ರಾಣಿ ಅಬ್ಬಕ್ಕ ಕೃತಿಯನ್ನು ರಂಗಭೂಮಿ ಕಲಾವಿದೆ ಸರೋಜಿನಿ ಶೆಟ್ಟಿ, ಮುಹಮ್ಮದ್ ಅಶ್ರಫ್ ಬಾವಾ ಬರೆದ ಮೌಲಾನಾ ಅಝಾದ್ ಕೃತಿಯನ್ನು ಡಾ. ಎಂಎಸ್‌ಎಂ ಅಬ್ದುಲ್ ರಶೀದ್ ಝೈನಿ ಸಖಾಫಿ ಕಾಮಿಲ್, ಬಶೀರ್ ಅಹ್ಮದ್ ಕಿನ್ಯಾ ಬರೆದ ಅಟಲ್ ನಬಿಹಾರಿ ವಾಜಪೇಯಿ ಕೃತಿಯನ್ನು ಮುಸ್ತಫಾ ತಂಙಳ್ ಕೋಲ್ಪೆ ಬಿಡುಗಡೆಗೊಳಿಸಿದರು.

    ಬ್ಯಾರಿ ಅಕಾಡಮಿಯ ಸದಸ್ಯರಾದ ಕಮರುದ್ದೀನ್ ಸಾಲ್ಮರ, ಶಂಶೀರ್ ಬುಡೋಳಿ, ಸುರೇಖಾ, ಚಂಚಲಾಕ್ಷಿ ಉಪಸ್ಥಿತರಿದ್ದರು.
    ಮೇಲ್ತೆನೆಯ ಗೌರವಾಧ್ಯಕ್ಷ ಆಲಿಕುಂಞಿ ಪಾರೆಯವರ ಅಧ್ಯಕ್ಷತೆಯಲ್ಲಿ ನಡೆದ ಕವಿಗೋಷ್ಠಿಯಲ್ಲಿ ಬಶೀರ್ ಅಹ್ಮದ್ ಕಿನ್ಯ, ಎಂ. ಅಶೀರುದ್ದೀನ್ ಆಲಿಯಾ, ಸಾರಾ ಅಲಿ ಪರ್ಲಡ್ಕ, ರಶೀದಾ ಉಚ್ಚಿಲ್ ಕವನ ವಾಚಿಸಿದರು.

    ಬಾತಿಷ್ ಪುತ್ತೂರು ಮತ್ತು ಬಳಗದಿಂದ ಬ್ಯಾರಿ ಸಂಗೀತ ಹಾಗೂ ಹುಸೈನ್ ಕಾಟಿಪಳ್ಳ ಮತ್ತು ತಂಡದಿಂದ ಬ್ಯಾರಿ ಕವ್ವಾಲಿ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.
    ಅಕಾಡಮಿಯ ರಿಜಿಸ್ಟ್ರಾರ್ ಪೂರ್ಣಿಮಾ ಸ್ವಾಗತಿಸಿದರು. ಮಾಜಿ ಸದಸ್ಯ ಹುಸೈನ್ ಕಾಟಿಪಳ್ಳ ಕಾರ್ಯಕ್ರಮ ನಿರೂಪಿಸಿದರು.

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    DAKSHINA KANNADA

    ವಿದೇಶಿ ಹಡಗಿನಲ್ಲಿ ಬೆಂಕಿ ಅವಘಡ; ಕರ್ನಾಟಕ ಕರಾವಳಿಯಲ್ಲಿ ಲಂಗರು ಹಾಕಿದ ಕಾರ್ಗೋ ಹಡಗು

    Published

    on

    ಮಂಗಳೂರು: ಗುಜರಾತ್‌ನಿಂದ ಕೊಲಂಬೋಕ್ಕೆ ವಿವಿಧ ಸರಕುಗಳನ್ನು ಸಾಗಾಟ ಮಾಡುತ್ತಿದ್ದ ವಿದೇಶಿ ಮೂಲದ ಸರಕು ಸಾಗಾಟ ಹಡಗಿನಲ್ಲಿ ಅಗ್ನಿ ಆಕಸ್ಮಿಕ ನಡೆದ ಘಟನೆ ಬೆಳಕಿಗೆ ಬಂದಿದೆ.

     

     

    ಜುಲೈ 19 ರಂದು ಕರ್ನಾಟಕ ಕರಾವಳಿಯ ಸಮುದ್ರದಲ್ಲಿ ಈ ದುರ್ಘಟನೆ ನಡೆದಿದ್ದು, ಕೋಸ್ಟ್‌ ಗಾರ್ಡ್‌ ತಂಡ ಹೆಲಿಕಾಪ್ಟರ್‌ ಹಾಗೂ ರಕ್ಷಣಾ ಹಡಗಿನ ಮೂಲಕ ಸತತ ನಲುವತ್ತು ಘಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಹಡಗಿನಲ್ಲಿ ಒಟ್ಟು 21 ಸಿಬ್ಬಂದಿ ಇದ್ದು ಒಬ್ಬ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

    ಹಡಗಿನ ಬೆಂಕಿ ನಂದಿಸಿ ಸಿಬ್ಬಂದಿಗಳ ರಕ್ಷಣೆ ಮಾಡಿದ ಬಳಿಕ ಹಡಗನ್ನು ಕರ್ನಾಟಕ ಕರಾವಳಿ ಭಾಗಕ್ಕೆ ತೆಗೆದುಕೊಂಡು ಬರಲಾಗಿದೆ. ಸದ್ಯ ಸುರತ್ಕಲ್ ಕಡಲ ಕಿನಾರೆಯಿಂದ ಸುಮಾರು 33 ನಾಟಿಕಲ್ ಮೈಲ್‌ ದೂರದಲ್ಲಿ ಹಡಗು ಲಂಗರು ಹಾಕಲಾಗಿದೆ. ಗುಜಾರಾತ್‌ನ ಮುಂದ್ರಾ ಬಂದರಿನಿಂದ ಹೊರಟಿದ್ದ ಈ ಹಡಗು ಪನಾಮ ದೇಶಕ್ಕೆ ಸೇರಿದ್ದಾಗಿ ಮಾಹಿತಿ ಲಭ್ಯವಾಗಿದೆ.

    ಬೆಂಕಿ ಅವಘಡದಿಂದ ಸಂಪೂರ್ಣ ಹಾನಿಯಾಗಿರುವ ಹಡಗು ಅಪಾಯಕಾರಿ ಪರಿಸ್ಥಿತಿಯಲ್ಲಿದ್ದು, ಕೋಸ್ಟ್‌ ಗಾರ್ಡ್‌ ಸಿಬ್ಬಂದಿ ಹಡಗಿನ ಮೇಲೆ ನಿಗಾ ಇರಿಸಿದ್ದಾರೆ. ಹಡಗು ಮುಳುಗಡೆಯಾಗುವ ಸಾದ್ಯತೆಯ ಜೊತೆಗೆ ಹಡಗಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಳ್ಳುವ ಸಂಭವ ಕೂಡಾ ಇದೆ. ಹೀಗಾಗಿ ಹಡಗು ಮುಳುಗಡೆಯಾದಲ್ಲಿ ಸಮುದ್ರಕ್ಕೆ ತೈಲ ಸೋರಿಕೆಯ ಆತಂಕ ಕೂಡಾ ಎದುರಾಗಿದೆ. ಹೀಗಾಗಿ ಹಡಗಿನ ಮೇಲೆ ನಿಗಾ ವಹಿಸಿರುವ ಕೋಸ್ಟ್‌ ಗಾರ್ಡ್‌ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.

    Continue Reading

    DAKSHINA KANNADA

    ದಕ್ಷಿಣ ಕನ್ನಡ ಜಿಲ್ಲೆಯ ಮಹಾಪ್ರವಾಹಕ್ಕೆ 50 ವರ್ಷ; ಮರುಕಳಿಸದಿರಲಿ ‘ಆ ಶುಕ್ರವಾರ’ ಎನ್ನುತ್ತಿದ್ದಾರೆ ಕರಾವಳಿಗರು!

    Published

    on

    ಮಂಗಳೂರು: 1974 ಜುಲೈ 26ರ ಶುಕ್ರವಾರ ರಾತ್ರಿ ಇಡೀ ಸುರಿದ ಭಾರೀ ಮಳೆ ಮುಂಜಾನೆಯ ವೇಳೆಗೆ ನೆರೆ ರೌದ್ರಾವತಾರ ತಾಳಿತ್ತು.

    ಹಿಂದೆ ಎಂದೂ ಕಾಣದ ರೀತಿ ನೇತ್ರಾವತಿ ನದಿ ಉಕ್ಕಿ ಹರಿದಿತ್ತು. ನಸುಕಿನ ಜಾವ ನೇತ್ರಾವತಿ ನದಿ ಮನೆಯೊಳಗೆಯೇ ಪ್ರವೇಶಿಸಿತ್ತು.

    ಬಂಟ್ವಾಳ ಪೇಟೆ, ಪಕ್ಕದೂರುಗಳಿಗೆ ಸಂಪರ್ಕಿಸುವ ರಸ್ತೆಗಳೆಲ್ಲವೂ ಕ್ಷಣಮಾತ್ರದಲ್ಲೆ ಜಲಮಯ. ಎಲ್ಲಿಗೆ ಹೋಗೋದು? ಏನು ಮಾಡೋದು ಅನ್ನೋದನ್ನು ಯೋಚಿಸುವಷ್ಟರಲ್ಲೇ ಊರಿಗೆ ಊರೇ ಮುಳುಗಿತ್ತು. ಬಂಟ್ವಾಳ ಮತ್ತು ಉಪ್ಪಿನಂಗಡಿ ಪೇಟೆಯಲ್ಲಿ ವಾಹನಗಳ ಬದಲು ದೋಣಿಗಳು ಸಂಚರಿಸಿದ್ದವು. ಆ ಕಾಲದಲ್ಲಿಯೇ ಐವತ್ತು ಲಕ್ಷ ರೂಪಾಯಿ ನಷ್ಟ ಉಂಟಾಗಿತ್ತು.

    ಆ ಸಮಯದಲ್ಲಿ ಜಿಲ್ಲೆಯ ಬಹುತೇಕ ಪ್ರದೇಶಗಳು ನೆರೆ ನೀರಿನಿಂದ ಆವರಿಸಿದ್ದವು, ಆವತ್ತಿನ ಕಾಲದಲ್ಲಿ ಮಣ್ಣಿನಿಂದ ನಿರ್ಮಿಸಿದ್ದ ನೂರಾರು ಮನೆ ಅಂಗಡಿ ನೆರೆ ನೀರಿಗೆ ಕೊಚ್ಚಿಕೊಂಡು ಹೋಗಿದ್ದವು. ಈಗಲೂ ಕೂಡಾ ಆ ಭೀಕರ ನೆರೆಯು ನಮ್ಮ ಹಿರಿಯರ ಬಾಯಲ್ಲಿ (ಎಲ್ಪತ್ತ ನಾಲೆತ್ತ ಬೊಲ್ಲ) ಎಂದು ಪ್ರಖ್ಯಾತಿ ಹೊಂದಿದೆ.

    ಕಾಕತಾಳೀಯ ಎಂಬಂತೇ ಪ್ರವಾಹದ ಆ ದಿನ, ವಾರ ಎಲ್ಲವೂ ಸೇಮ್ ಆಗಿದ್ದು, ಮತ್ತೆ ಅದೇ ರೀತಿಯ ಪ್ರವಾಹ ಪರಿಸ್ಥಿತಿಯೂ ನೇತ್ರಾವತಿ ತಟದಲ್ಲಿದೆ. ಈಗಾಗಲೇ ನೇತ್ರಾವತಿ ಅಪಾಯ ಮಟ್ಟ ಮೀರಿದ್ದು, ಈ ಆತಂಕಕ್ಕೆ ಕಾರಣವೂ ಆಗಿದೆ.

    Continue Reading

    LATEST NEWS

    Trending