Connect with us

DAKSHINA KANNADA

ಕೆಂಜಾರಿನಲ್ಲಿ ಹೊತ್ತಿ ಉರಿದ ಏರ್ ಇಂಡಿಯಾ: ಮರೆಯಲಾಗದ ಕರಾಳ ದುರಂತಕ್ಕೆ 11ನೇ ವರ್ಷದ ಶೃದ್ಧಾಂಜಲಿ..!

Published

on

ಮಂಗಳೂರು:ಇಡೀ ಭಾರತವೇ ಮರೆಯಲಾಗದ ದುರಂತ 11ವರ್ಷಗಳ ಹಿಂದೆ ದಕ್ಷಿಣ ಕನ್ನಡದ ಮಂಗಳೂರಿನ ಬಜ್ಪೆ ಕೆಂಜಾರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿತ್ತು. ಮೇ 22ರ ಬೆಳ್ಳಂಬೆಳಗ್ಗೆ ಇನ್ನೇನು ಬೆಳಗ್ಗಿನ ಸೂರ್ಯೋದಯದ ಹೊತ್ತಿಗೆ ಮಂಗಳೂರಿನ ಜನತೆಗೆ ಶಾಕ್ ಕಾದಿತ್ತು. ದುಬೈನಿಂದ ಹೊರಟು ಮಂಗಳೂರು ಸೇರಬೇಕಿದ್ದ ವಿಮಾನವೊಂದು ಲ್ಯಾಂಡ್ ಆಗಬೇಕೆನ್ನುವಷ್ಟರಲ್ಲಿ ಕೆಂಜಾರಿನ ಪ್ರಪಾತಕ್ಕೆ ಬಿದ್ದು ಸ್ಪೋಟಗೊಂಡಿತ್ತು.ನೋಡನೋಡುತ್ತಿದ್ದಂತೆ  ಪೈಲಟ್ ಸಿಬ್ಬಂದಿ ಸೇರಿದಂತೆ 150ಕ್ಕೂ ಅಧಿಕ ಮಂದಿ ಸುಟ್ಟು ಕರಕಲಾಗಿದ್ದರು. ವಿಮಾನದಲ್ಲಿ 135 ಮಂದಿ ವಯಸ್ಕರು, 19 ಮಕ್ಕಳು ಮತ್ತು 4ಶಿಶುಗಳು ಮತ್ತು 6ವಿಮಾನ ಸಿಬ್ಬಂದಿ ಸೇರಿದಂತೆ ವಿಮಾನದಲ್ಲಿ ಒಟ್ಟು 166ಮಂದಿ ಪ್ರಯಾಣಿಕರಿದ್ದರು.ಅದರಲ್ಲಿ ಕೇವಲ 8 ಮಂದಿ ಅದೃಷ್ಟವಶಾತ್ ಬದುಕುಳಿದಿದ್ದರು. ತಣ್ಣೀರುಬಾವಿಯ ಪ್ರದೀಪ್‌ , ಹಂಪನಕಟ್ಟೆಯ ಮಹಮ್ಮದ್‌ ಉಸ್ಮಾನ್‌ , ವಾಮಂಜೂರಿನ ಜೋಯೆಲ್ ಡಿಸೋಜ, ಕೇರಳ ಕಣ್ಣೂರು ಕಂಬಿಲ್‌ನ ಮಾಹಿನ್‌ ಕುಟ್ಟಿ , ಕಾಸರಗೋಡು ಉದುಮ ಕುಲಿಕುನ್ನು ನಿವಾಸಿ ಕೃಷ್ಣನ್‌, ಉಳ್ಳಾಲದ ಉಮ್ಮರ್‌ ಫಾರೂಕ್‌, ಪುತ್ತೂರು ಸಾಮೆತ್ತಡ್ಕದ ಅಬ್ದುಲ್ಲಾ, ಮಂಗಳೂರು ಕೆಎಂಸಿ ವಿದ್ಯಾರ್ಥಿನಿ ಬಾಂಗ್ಲಾದ ಸಬ್ರಿನಾ ಬದುಕುಳಿದ ಅದೃಷ್ಟವಂತರು.ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೇರಳದವರು ಮೃತಪಟ್ಟವರ ಪಟ್ಟಿಗೆ ಸೇರಿದ್ದರು. ದುಬೈನಿಂದ ರಾತ್ರಿ 1.20ಕ್ಕೆ ಏರ್‌ ಇಂಡಿಯಾ ವಿಮಾನ ಹೊರಟಿತ್ತು.ಬೆಳಿಗ್ಗೆ ಮಂಗಳೂರಿನಲ್ಲಿ ಸುರಕ್ಷಿತವಾಗಿ ಇಳಿಯಬೇಕಿದ್ದ ವಿಮಾನ ದುರಂತಕ್ಕೀಡಾಯಿತು. ಆ ಸಂದರ್ಭದಲ್ಲಿ ಬದುಕುಳಿದಿದ್ದ 8 ಮಂದಿ ಈಗ ಯಾರ ಸಂಪರ್ಕದಲ್ಲೂ ಇಲ್ಲ.

ಕೂಳೂರು–ತಣ್ಣೀರುಬಾವಿ ರಸ್ತೆಯಲ್ಲಿರುವ ಸ್ಮಾರಕದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಇಂದು ಸ್ಮರಣೆ ಕಾರ್ಯ ನಡೆಯಿತು.

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳಿನ್‌ ಕುಮಾರ್ ಕಟೀಲು, ಮಂಗಳೂರು ಮೇಯರ್‌ ಪ್ರೇಮಾನಂದ ಶೆಟ್ಟಿ ಸೇರಿದಂತೆ ಏರ್ಪೋರ್ಟಿನ ಅಧಿಕಾರಿಗಳು, ಸಿಬ್ಬಂದಿ ವರ್ಗ ಸ್ಮಾರಕದ ಮುಂದೆ ಪುಷ್ಪವನ್ನಿಟ್ಟು ಶ್ರದ್ಧಾಂಜಲಿ ಅರ್ಪಿಸಿದರು.

Click to comment

Leave a Reply

Your email address will not be published. Required fields are marked *

DAKSHINA KANNADA

Sullia : ಕಂಠಪೂರ್ತಿ ಕುಡಿದು ಅಡ್ಡಾದಿಡ್ಡಿ ಕಾರು ಚಲಾಯಿಸಿದ ಸರ್ಕಾರಿ ಅಧಿಕಾರಿ

Published

on

ಸುಳ್ಯ : ಸರ್ಕಾರಿ ಅಧಿಕಾರಿಯೊಬ್ಬರು ಮದ್ಯದ ನಶೆಯಲ್ಲಿ ಅಡ್ಡಾದಿಡ್ಡಿ ವಾಹನ ಚಲಾಯಿಸಿ ಸಾರ್ವಜನಿಕರಿಂದ ಬೈಗುಳ ತಿಂದ ಸುಳ್ಯದ ಅರಂಬೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ನವೀನ್ ಕುಮಾರ್ ಎಂಬವರು ಕಂಠಪೂರ್ತಿ ಕುಡಿದ ಮದ್ಯದ ಮತ್ತಿನಲ್ಲಿ ಸುಳ್ಯ ಅರಂಬೂರು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ, ರಸ್ತೆಯಲ್ಲಿ ಅಡ್ಡಾದಿಡ್ಡಿ ವಾಹನ ಚಲಾಯಿಸಿ ಹಲವಾರು ವಾಹನಗಳಿಗೆ ಢಿಕ್ಕಿ ಆಗುವಂತಹ ಸಂಭಾವ್ಯ ದುರಂತವೊಂದು ಸಾರ್ವಜನಿಕರ ಸಮಯ ಪ್ರಜ್ಞೆಯಿಂದ ತಪ್ಪಿದೆ. ರಸ್ತೆಯುದ್ದಕ್ಕೂ ವಿರುದ್ಧ ದಿಕ್ಕಿನಲ್ಲಿ, ಅಡ್ಡಾದಿಡ್ಡಿ ವಾಹನ ಚಲಾಯಿಸಿ ಅಪಘಾತ ಸಂಭವಿಸುವ ಸಾಧ್ಯತೆಯನ್ನು ಮನಗಂಡ ಕೆಲವು ವಾಹನ ಸವಾರರು ಸಾರ್ವಜನಿಕರ ಸಹಕಾರದಿಂದ ಅಡ್ಡಗಟ್ಟಿದ್ದಾರೆ. ಸರ್ಕಾರಿ ಅಧಿಕಾರಿಯ ಈ ವರ್ತನೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

Continue Reading

DAKSHINA KANNADA

ಉಪ್ಪಿನಂಗಡಿ:12 ಅಡಿ ಉದ್ದದ‌ ಕಾಳಿಂಗ ಸರ್ಪ ಹಿಡಿಯೋಕು ಮೀಟ್ರು ಬೇಕು

Published

on

ಉಪ್ಪಿನಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿಯ ಸೈಂಟ್ ಜೋಸೆಫ್ ಮಲಂಕರ ಚರ್ಚ್ ಪರಿಸರದಲ್ಲಿ 12 ಅಡಿ ಉದ್ದದ‌ ಕಾಳಿಂಗ ಸರ್ಪ ಪ್ರತ್ಯಕ್ಷಗೊಂಡಿತು. ಇದನ್ನು ಸೆರೆ ಹಿಡಿದ ಉರಗ ತಜ್ಞ ಕೆ. ಝಕರಿಯ್ಯ ಎಂಬುವವರು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ.

ಎರಡು- ಮೂರು ದಿನಗಳಿಂದ ಸುಮಾರು 12 ಅಡಿ ಉದ್ದದ ಕಾಳಿಂಗ ಸರ್ಪವೊಂದು ನೆಲ್ಯಾಡಿಯ ಸೈಂಟ್ ಜೋಸೆಫ್ ಮಲಂಕರ ಚರ್ಚ್ ಪರಿಸರದಲ್ಲಿ ಸುತ್ತಾಡಿಕೊಂಡಿತ್ತು.

ಈ ಬಗ್ಗೆ ಮಾಹಿತಿ ಪಡೆದ ಉಪ್ಪಿನಂಗಡಿಯ ಕೆ. ಝಕರಿಯಾ ಅವರು ಅಲ್ಲಿಗೆ ತೆರಳಿ ಸುಮಾರು ಒಂದು ಗಂಟೆಯಷ್ಟು ಕಾರ್ಯಾಚರಣೆಯ ಬಳಿಕ ಕಾಳಿಂಗ ಸರ್ಪವನ್ನು ಹಿಡಿದು ಸುರಕ್ಷಿತವಾಗಿ ಗುಂಡ್ಯ ಬಳಿ ದಟ್ಟಾರಣ್ಯಕ್ಕೆ ಬಿಟ್ಟಿದ್ದಾರೆ.

Continue Reading

DAKSHINA KANNADA

ಅತ್ತಾವರ ಅಪಾರ್ಟ್‌ಮೆಂಟ್‌ನಲ್ಲಿ ಆಕಸ್ಮಿಕ ಬೆಂಕಿ – ವೃದ್ಧೆ ಸಾವು..!

Published

on

ಮಂಗಳೂರು: ಮಂಗಳೂರಿನ ಅತ್ತಾವರದ ಅಪಾರ್ಟ್‌ ಮೆಂಟ್‌ವೊಂದರಲ್ಲಿ ಇಂದು ಬೆಳಗ್ಗೆ ನಡೆದ ಆಕಸ್ಮಿಕ ಬೆಂಕಿ ಅನಾಹುತದಲ್ಲಿ ಗಂಭೀರ ಗಾಯಗೊಂಡಿದ್ದ ವೃದ್ಧೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ‌ಮಾಹಿತಿ ನೀಡಿದ್ದಾರೆ.

ಶಾಹಿನಾ ನುಸ್ಬಾ(58) ಸಾವನ್ನಪ್ಪಿದ ವೃದ್ಧೆ ಎಂದು ಗುರುತಿಸಲಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮುಂಜಾನೆ 4 ಗಂಟೆಯ ಹೊತ್ತಿಗೆ ಬೆಂಕಿ ಕಾಣಿಸಿಕೊಂಡಿದ್ದು, ಐವರು ಮಕ್ಕಳ ಸಹಿತ ಎಂಟು ಮಂದಿ ಅಪಾಯದಿಂದ ಪಾರಾಗಿದ್ದಾರೆ.

ಅನಾರೋಗ್ಯದಿಂದಾಗಿ ಬೆಡ್ ರೂಮ್ ನಲ್ಲೇ ಇದ್ದ ವೃದ್ಧ ಮಹಿಳೆ ದಟ್ಟ ಹೊಗೆಯಿಂದಾಗಿ ತಕ್ಷಣ ಹೊರಬರಲಾಗದೇ ಉಸಿರುಗಟ್ಟಿ ಚಿಂತಾಜನಕ ಸ್ಥಿತಿಯಲ್ಲಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

Continue Reading

LATEST NEWS

Trending