BANTWAL
ಅಜಿಲಮೊಗರು: ನೀರು ಪಾಲಾ*ದ ವ್ಯಕ್ತಿಯ ಮೃ*ತದೇಹ ಪತ್ತೆ
ಬಂಟ್ವಾಳ: ಅಜಿಲಮೊಗರು ಬಳಿ ನೇತ್ರಾವತಿ ನದಿಯಲ್ಲಿ ಗಾಳ ಹಾಕಿ ಮೀನು ಹಿಡಿಯಲು ಹೋಗಿದ್ದ ಸುರತ್ಕಲ್ ಕಾನ ನಿವಾಸಿ ಮೈಕಲ್ (57) ಅವರ ಮೃ*ತದೇಹ ಜುಲೈ 5ರಂದು ಶುಕ್ರವಾರ ಬೆಳಗ್ಗೆ ನದಿಯಲ್ಲಿ ಪತ್ತೆಯಾಗಿದೆ.
ಮೈಕಲ್ ಗುರುವಾರ ಸಂಜೆ ಅಜಿಲಮೊಗರು ಕೂಟೇಲು ಸೇತುವೆ ಬಳಿ ಕಂಡಿ ಅಣೆಕಟ್ಟಿನಲ್ಲಿ ಕುಳಿತು ಮೀನು ಹಿಡಿಯುತ್ತಿದ್ದ ವೇಳೆ ಆಯತಪ್ಪಿ ಬಿ*ದ್ದು ನೀರು ಪಾ*ಲಾಗಿದ್ದರು.
ಸುದ್ದಿ ತಿಳಿಯುತ್ತಿದ್ದಂತೆ ರಾತ್ರಿ ಸ್ಥಳೀಯರು ಹಾಗೂ ಅಗ್ನಿಶಾಮಕ ದಳ ನದಿಯಲ್ಲಿ ಹುಡುಕುವ ಪ್ರಯತ್ನ ನಡೆಸಿದರಾದರೂ ಸುಳಿವು ಸಿಕ್ಕಿರಲಿಲ್ಲ. ಬೆಳಿಗ್ಗೆ ನೇತ್ರಾವತಿ ನದಿಯಲ್ಲಿ ನೀರು ಇಳಿಕೆಯಾಗಿದ್ದು, ಸ್ಥಳೀಯರು ಹುಡುಕಾಟ ನಡೆಸಿದಾಗ ಮೃ*ತದೇಹ ಪತ್ತೆಯಾಗಿದೆ.
ಬಂಟ್ವಾಳ ಗ್ರಾಮಾಂತರ ಠಾಣೆಯ ಎಸ್ ಐ ಹರೀಶ್ ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಮೈಕಲ್ ಅವರ ಮನೆ ಮಂದಿ ಸ್ಥಳಕ್ಕೆ ಆಗಮಿಸಿದ್ದರು.
BANTWAL
ಕಳ್ಳತನಕ್ಕೆ ವೃದ್ಧೆಯ ಕತ್ತು ಹಿಸುಕಿದ ಕಿರಾತಕರು..!
ಮಂಗಳೂರು : ಕಿಟಕಿಯ ಸರಳು ತುಂಡರಿಸಿ ಒಳನುಗ್ಗಿದ ಕಳ್ಳರು ವೃದ್ಧೆಯ ಕತ್ತು ಹಿಸುಕಿ ಚಿನ್ನಾಭರಣ ಕದ್ದು ಪರಾರಿಯಾದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ವಿಟ್ಲ ಪಡೂರು ಗ್ರಾಮದ ಬಲಿಪಗುಳಿ ಎಂಬಲ್ಲಿ ನಡೆದಿದೆ.
ವಿದೇಶದಲ್ಲಿರುವ ಸುಲೈಮಾನ್ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದೆ. ಮಹಡಿಯ ಕಿಟಕಿ ಸರಳು ತುಂಡರಿಸಿ ಬಾಗಿಲಿನ ಮೂಲಕ ಒಳನುಗ್ಗಿದ ಕಳ್ಳರು ಅಜ್ಜಿಯನ್ನು ಘಾಸಿಗೊಳಿಸಿ ಚಿನ್ನಾಭರಣ ಲೂಟಿದ್ದಾರೆ. ಮನೆಯ ಕೋಣೆಯೊಳಗೆ ನಿದ್ರಿಸಿದ್ದ ವೃದ್ಧೆ ಐಸಮ್ಮಾ(72)ಅವರ ಕತ್ತು ಹಿಸುಕಿ ಪ್ರಜ್ಞಾಹೀನರಾದ ಬಳಿಕ ಕಿವಿಯಲ್ಲಿದ್ದ ಚಿನ್ನ ಕಸಿದು ಪರಾರಿಯಾಗಿದ್ದಾರೆ.
ಇನ್ನೊಂದು ಕೋಣೆಯಲ್ಲಿ ಮಕ್ಕಳೊಂದಿಗೆ ಮಲಗಿದ್ದ ಸೊಸೆ ಐಸಮ್ಮಾ ಅವರಿಗೆ ಈ ವಿಚಾರ ಬೆಳಗ್ಗೆ ಅರಿವಿಗೆ ಬಂದಿದೆ. ಬೆಳಗ್ಗೆ ಎದ್ದು ಅತ್ತೆಯನ್ನು ಎಚ್ಚರಿಸಲು ಬಂದಾಗ ಅತ್ತೆ ಐಸಮ್ಮಾ ಪ್ರಜ್ಞಾಹೀನರಾಗಿ ಬಿದ್ದುಕೊಂಡಿದ್ದರು. ಏನೋ ತೀವೃ ಅಸೌಖ್ಯ ಎಂದು ಶಂಕಿಸಿ ಮನೆಯವರು, ನೆರೆಯ ಸಂಬಂದಿಕರಿಗೆ ಮಾಹಿತಿ ನೀಡಿದ್ದಾರೆ. ಸಂಬಂದಿಗಳು ಬಂದು ನೋಡಿದಾಗ ಕಿಟಕಿಯ ಸರಳು ತುಂಡರಿಸಿರುವುದು ಮತ್ತು ಮಹಡಿಯ ಬಾಗಿಲು ತೆರೆದಿರುವುದು ಕಂಡುಬಂದಿತ್ತು. ಇದಾದ ಬಳಿಕ ಮನೆಯವರು ಮತ್ತಷ್ಟು ಪರಿಶೀಲಿಸಿದಾಗ ಅಜ್ಜಿಯ ಕಿವಿಯೋಲೆಗಳು ಕಳ್ಳತನ ಆಗಿರುವುದು ಗೊತ್ತಾಗಿದೆ. ಬಳಿಕ ಈ ಬಗ್ಗೆ ವಿಟ್ಲ ಪೊಲೀಸರಿಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ಮೂಲಕ ಪರಿಶೀಲನೆ ನಡೆಸಲಾಗಿದೆ. ಗಾಯಗೊಂಡ ವೃದ್ಧೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಲೈಮಾನ್ ಸಹೋದರ ಇಬ್ರಾಹಿಂ ನೀಡಿದ ದೂರಿನಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BANTWAL
ನಾಪತ್ತೆಯಾಗಿದ್ದ ಎಣ್ಮೂರು ಬೈದರ್ಕಳ ಗರಡಿಯ ಪಾತ್ರಿ ಶ*ವವಾಗಿ ಪತ್ತೆ!
ಬಂಟ್ವಾಳ : ನಾಪತ್ತೆಯಾಗಿದ್ದ ಎಣ್ಮೂರು ಬೈದರ್ಕಳ ಗರಡಿಯ ಕೋಟಿ ದರ್ಶನ ಪಾತ್ರಿ ಗಿರೀಶ್ ಮೃ*ತದೇಹ ಪತ್ತೆಯಾಗಿದೆ. ಪಾತ್ರಿಯಾಗಿದ್ದ ಗಿರೀಶ್, ದೈವ ಚಾಕಿರಿಯ ಜೊತೆಗೆ ಜೀವನೋಪಾಯಕ್ಕಾಗಿ ಆಟೋ ಚಾಲನೆಯ ಕೆಲಸ ಮಾಡುತ್ತಿದ್ದರು. ಬಜಪೆ ವಿಮಾನ ನಿಲ್ದಾಣಕ್ಕೆ ಬಾಡಿಗೆ ಇದೆ ಎಂದು ಹೇಳಿ ಬುಧವಾರ ತಡರಾತ್ರಿ ಎರಡು ಗಂಟೆಗೆ ರಿಕ್ಷಾದಲ್ಲಿ ಹೊರಟವರು ಬಳಿಕ ನಾಪತ್ತೆಯಾಗಿದ್ದರು.
ಈ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಗುರುವಾರ ಅವರ ರಿಕ್ಷಾವು ಅಡ್ಡರು-ಪೊಳಲಿ ಸೇತುವೆಯಲ್ಲಿ ಚಾಲನೆ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಇದೇ ವೇಳೆ ರಾತ್ರಿ ಗಸ್ತಿನಲ್ಲಿದ್ದ ಬಜಪೆ ಪೊಲೀಸರು ಅನುಮಾನಾಸ್ಪದ ವಾಗಿ ಚಾಲನೆಯಲ್ಲೇ ನಿಂತಿದ್ದ ರಿಕ್ಷಾವನ್ನು ಪರಿಶೀಲಿಸಿದರು.
ಇದನ್ನೂ ಓದಿ : ಹೋಂ ವರ್ಕ್ ಮಾಡುತ್ತಿದ್ದಾಗ ತಲೆಗೆ ಪೆನ್ ಚುಚ್ಚಿ ಯುಕೆಜಿ ಮಗು ಸಾ*ವು!
ಪರಿಸರದಲ್ಲಿ ಹುಡುಕಿದರೂ ಚಾಲಕನ ಪತ್ತೆಯಾಗಲಿಲ್ಲ, ಬಳಿಕ ರಿಕ್ಷಾದಲ್ಲಿ ದೊರೆತ ದಾಖಲೆ ಪತ್ರದ ಆಧಾರದಲ್ಲಿ ಅವರ ಮನೆಗೆ ಮಾಹಿತಿ ನೀಡಿದ್ದರು. ತೀವ್ರ ಹುಡುಕಾಟದ ಬಳಿಕ ಅವರು ಶ*ವವಾಗಿ ಪತ್ತೆಯಾಗಿದ್ದಾರೆ.
BANTWAL
ಉಳಾಯಿಬೆಟ್ಟು ದರೋಡೆ ಪ್ರಕರಣ : 10 ಜನರ ಬಂಧನ
ಜೂನ್ 21 ರಂದು ಉಳಾಯಿಬೆಟ್ಟಿನ ಪೆರ್ಮಂಕಿಯ ಪದ್ಮನಾಭ ಕೋಟ್ಯಾನ್ ಮನೆ ದರೋಡೆ ಪ್ರಕರಣದ 10 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರಾತ್ರಿ 7.45 ರ ಸುಮಾರಿಗೆ ಮುಸುಕುಧಾರಿ ವ್ಯಕ್ತಿಗಳು ಪದ್ಮನಾಭ ಕೋಟ್ಯಾನ್ ಅವರಿಗೆ ಚೂರಿಯಿಂದ ಹಲ್ಲೆ ಮಾಡಿ ಮನೆಯವರನ್ನು ಕಟ್ಟಿ ಹಾಕಿ ದರೋಡೆ ನಡೆಸಿದ್ದರು. ಈ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೆತ್ತಿಕೊಳ್ಳಲಾಗಿತ್ತು.
ಗುತ್ತಿಗೆದಾರ ಉದ್ಯಮಿ ಪದ್ಮನಾಭ ಕೋಟ್ಯಾನ್ ಅವರ ಮನೆಗೆ ನುಗ್ಗಿದ್ದ ದರೋಡೆಕೋರರು ಇಲ್ಲಿ ಅಪಾರ ಪ್ರಮಾಣದ ಹಣ ಹಾಗೂ ನಗದು ಅಡಗಿಸಿ ಇಡಲಾಗಿದೆ ಎಂಬ ಹಿನ್ನೆಲೆಯಲ್ಲಿ ದರೋಡೆ ನಡೆಸಿದ್ದಾರೆ. ದರೋಡೆ ನಡೆದ ಬಳಿಕ ಮನೆಯ ಸಿಸಿ ಟಿವಿ ಪರಿಶೀಲಿಸಿದ ಪೊಲೀಸರಿಗೆ ಇದು ಉದ್ಯಮಿಯ ಪರಿಚಯದವರದೇ ಕೃತ್ಯ ಎಂಬುವುದು ಕೂಡಾ ಅರ್ಥವಾಗಿದೆ. ಹೀಗಾಗಿ ಮೊದಲಿಗೆ ಉದ್ಯಮಿಯ ಜೊತೆಯಲ್ಲಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ನೀರುಮಾರ್ಗದ ವಸಂತ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸತ್ಯ ಹೊರಗೆ ಬಂದಿದೆ. ಅರೋಪಿ ವಸಂತ ಜೊತೆಯಲ್ಲಿ ನೀರುಮಾರ್ಗದ ಇನ್ನೋರ್ವ ಆರೋಪಿ ರಮೇಶ್ ಪೂಜಾರಿ ಹಾಗೂ ಅಡ್ಯನಡ್ಕದ ರೇಮಂಡ್ ಡಿಸೋಜಾ ಎಂಬವರು ಮಾಹಿತಿದಾರರಾಗಿ ಕೆಲಸ ಮಾಡಿದ್ದಾರೆ. ಇವರ ಜೊತೆ ಕಾಸರಗೋಡು ಜಿಲ್ಲೆಯ ಉಪ್ಪಳದ ಬಾಲಕೃಷ್ಣ ಶೆಟ್ಟಿ ಕೂಡಾ ಕೈ ಜೋಡಿಸಿ ಕೇರಳದ ದರೋಡೆ ತಂಡಕ್ಕೆ ಮಾಹಿತಿ ರವಾನಿಸಿದ್ದಾನೆ.
ಈ ನಾಲ್ಕು ಆರೋಪಿಗಳು ನೀಡಿದ ಮಾಹಿತಿ ಪ್ರಕಾರ, ಕೇರಳದ ಬಿಜು ಹಾಗೂ ಸತೀಶ್ ಬಾಬು ಎಂಬ ಕ್ರಿಮಿನಲ್ ಗಳು ತಮ್ಮ ಎರಡು ತಂಡದ ಸದಸ್ಯರನ್ನು ದರೋಡೆ ನಡೆಸಲು ಮಂಗಳೂರಿಗೆ ಕಳುಹಿಸಿದ್ದಾರೆ. ಈ ದರೋಡೆಯ ಸಂಚಿನಲ್ಲಿ ಒಟ್ಟು ಹದಿನೈದು ಜನರು ಭಾಗಿಯಾಗಿದ್ದು, ಸದ್ಯ ಹತ್ತು ಜನರನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ಜಾಕಿರ್, ವಿನೋಜ್ ಪಿಕೆ, ಸಜೀಶ್, ಶಿಜೋ ದೇವಸ್ಸಿ, ಸತೀಶ್ ಬಾಬು, ಬಿಜು ಕೇರಳದವರಾಗಿದ್ದರೆ, ಉಳಿದ ನಾಲ್ವರೂ ಕರ್ನಾಟಕದವರಾಗಿದ್ದಾರೆ.
ಉದ್ಯಮಿ ಮನೆಯಲ್ಲಿ ಕೋಟ್ಯಂತರ ರೂಪಾಯಿಯ ಚಿನ್ನ ಹಾಗೂ ನಗದು ಇದೆ ಎಂದು ಈ ದರೋಡೆಗೆ ಸಂಚು ರೂಪಿಸಲಾಗಿತ್ತು. ದರೋಡೆ ನಡೆಸಿದ ಆರೋಪಿಗಳು ಬಚ್ಚಿಟ್ಟ ಚಿನ್ನಾಭರಣ ನೀಡುವಂತೆ ಉದ್ಯಮಿ ಪದ್ಮನಾಭ ಕೋಟ್ಯಾನ್ ಅವರಿಗೆ ಚಾಕುವಿನಿಂದ ಹಲ್ಲೆ ಕೂಡಾ ಮಾಡಿದ್ದರು. ಬಳಿಕ ಮನೆಯಲ್ಲಿದ್ದ ಬೆಲೆ ಬಾಳುವ ವಸ್ತುಗಳು ಹಾಗೂ ಚಿನ್ನಾಭರಣ ದರೋಡೆ ಮಾಡಿ ಪರಾರಿಯಾಗಿದ್ದರು
- FILM5 days ago
‘ಪೆಂಡ್ರೈವ್’ನಲ್ಲಿ ಬಿಗ್ಬಾಸ್ ತನಿಷಾ ಕುಪ್ಪಂಡ..!
- DAKSHINA KANNADA6 days ago
ಉಳ್ಳಾಲ : ಟಿಪ್ಪರ್ – ಸ್ಕೂಟರ್ ಅಪಘಾ*ತ; ಚಿಕಿತ್ಸೆ ಫಲಕಾರಿಯಾಗದೆ ಸವಾರ ಸಾ*ವು
- DAKSHINA KANNADA7 days ago
ಮನೆಯೊಳಗೆ ಈ ಪ್ರಾಣಿ ಪಕ್ಷಿಗಳು ಬರಬಾರದಂತೆ, ಯಾವುದು? ಯಾಕೆ ಗೊತ್ತಾ?
- LATEST NEWS3 days ago
ಉಡುಪಿ : ಪ್ರೇಯಸಿಯೊಂದಿಗೆ ಜಗಳ; ಅರ್ಧ ದಾರಿಯಲ್ಲೇ ಬಸ್ ನಿಲ್ಲಿಸಿ ಹೋದ ಡ್ರೈವರ್!