Connect with us

FILM

ಜೈನ ಸ್ವಾಮೀಜಿಯ 180 ದಿನಗಳ ಉಪವಾಸ ಮುರಿದ ಅಕ್ಷಯ್ ಕುಮಾರ್..!

Published

on

ಮುಂಬೈ: ಗೌರವ ಮತ್ತು ಸಂಪ್ರದಾಯವನ್ನು ಎತ್ತಿಹಿಡಿಯುವ ಹೃದಯಸ್ಪರ್ಶಿ ಕಾರ್ಯಕ್ರಮಗಳಲ್ಲಿ ಬಾಲಿವುಡ್ ಸೂಪರ್ ಸ್ಟಾರ್ ಅಕ್ಷಯ್‌ ಕುಮಾರ್ ಅವರು ಯಾವಾಗಲೂ ಮುಂದು. ಇಂತಹ ಒಂದು ಕಾರ್ಯದಲ್ಲಿ ಇದೀಗ ಅಕ್ಷಯ್ ಕುಮಾರ್ ಭಾಗೀಯಾಗಿದ್ದು, 180 ದಿನ ಉಪವಾಸ ಮಾಡಿದ ಜೈನ ಮುನಿಯೊಬ್ಬರ ಉಪವಾಸವನ್ನು ಕೊನೆಗೊಳಿಸುವ ಅವಕಾಶ ಸಿಕ್ಕಿದೆ. ಶ್ರೀ ಹಂಸರತ್ನ ಸೂರೀಶ್ವರ್ಜಿಯವರು ಈ ಉಪವಾಸ ಕೈಗೊಂಡಿದ್ದರು. ಮಾ.31 ರಂದು ಮುಂಬೈನ NSCI ನಲ್ಲಿ ನಡೆದ ಈ ಉಪವಾಸ ಪೂರ್ಣಗೊಳಿಸಿದ ಅವರಿಗೆ ಅಕ್ಷಯ್ ಕುಮಾರ್ ಮೊದಲ ಆಹಾರವನ್ನು ಅರ್ಪಿಸುವ ಮೂಲಕ ಗೌರವವನ್ನು ಪಡೆದರು.

ಭಗವಾನ್ ಮಹಾವೀರರು ಅಹಿಂಸೆ ಮತ್ತು ಶಾಂತಿಯನ್ನು ಉತ್ತೇಜಿಸಲು ಎರಡು ಬಾರಿ 180 ದಿನಗಳ ಉಪವಾಸವನ್ನು ಮಾಡಿದ್ದಾರೆ. ಇದಾದ ಬಳಿಕ 12 ಜೈನ ಮುನಿಗಳು ಇಂತಹ ಕಠಿಣ ವೃತವನ್ನು ಆಚರಿಸಿದ್ದರು. ಆದರೆ ಶ್ರೀ ಹಂಸರತ್ನ ಸೂರೀಶ್ವರ್ಜಿ ಇವರು ಸತತ ಏಳು ಬಾರಿ ಈ ಉಪವಾಸ ಕೈಗೊಂಡಿದ್ದಾರೆ. ಇವರು ಏಳನೇ ಬಾರಿಗೆ ಈ ಕಠಿಣ ಉಪವಾಸವನ್ನು ಪೂರ್ಣಗೊಳಿಸಿದ ಏಕೈಕ ಸನ್ಯಾಸಿ ಆಗಿದ್ದಾರೆ. ಕೇವಲ ನೀರನ್ನು ಮಾತ್ರ ಸೇವಿಸುವ ಮೂಲಕ ಈ ಕಠಿಣ ವೃತವನ್ನು ಆಚರಿಸಲಾಗುತ್ತದೆ. ಉಪವಾಸದ ಅಂತ್ಯದಲ್ಲಿ ಅವರು ಸೇವಿಸುವ ಆಹಾರವನ್ನು ಅಕ್ಷಯ್ ಕುಮಾರ್ ಅವರು ನೀಡಿದ್ದಾರೆ.

ಈ ಕಾರ್ಯಕ್ರಮದಲ್ಲಿ ಸಂಪ್ರದಾಯಿಕ ಉಡುಗೆಯಲ್ಲಿ ಅಕ್ಷಯ್ ಕುಮಾರ್ ಕಾಣಿಸಿಕೊಂಡಿದ್ದಾರೆ. ವೈಟ್ ಕಲರ್ ಕುರ್ತಾ ಧರಿಸಿ ಕಾರ್ಯಕ್ರಮಕ್ಕೆ ಹಾಜರಾಗಿದ್ದಾರೆ. ಸ್ವಾಮೀಜಿಯವರಿಗೆ ತಮ್ಮ ಕೈಯಿಂದಲೇ ಭಕ್ತಿ ಪೂರ್ವಕವಾಗಿ ಮೊದಲ ಆಹಾರವನ್ನು ನೀಡಿದ್ದಾರೆ. ಇದು ಅಕ್ಷಯ್ ಕುಮಾರ್ ಅವರಿಗೆ ಧಾರ್ಮಿಕ ಮತ್ತು ಆಧ್ಯಾತ್ಮಿಕ ಕ್ಷೇತ್ರದಲ್ಲಿರುವ ಗೌರವವನ್ನು ಸೂಚಿಸುತ್ತದೆ. ಶ್ರೀ ಹಂಸರತ್ನ ಸೂರೀಶ್ವರ್ಜಿ ಮತ್ತು ಅಕ್ಷಯ್ ಕುಮಾರ್ ಇವರ ಮಾತುಕತೆ ವಿಡಿಯೋಗಳು ಈಗ ಸೋಷಿಯಾಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಸಾಗರ್ ಪನ್ವಾಲ ಎಂಬವರು ಈ ವಿಡಿಯೋವನ್ನು x ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

FILM

ಕ್ಲಿಕ್ ಆಯ್ತು ‘ಪುಷ್ಪ ಪುಷ್ಪ’…ಅಲ್ಲು ಅರ್ಜುನ್ ಮಾಸ್ ಲುಕ್; ಸಕತ್  ಸ್ಟೆಪ್ಸ್ ಗೆ ಫ್ಯಾನ್ಸ್ ಫಿದಾ

Published

on

ಟಾಲಿವುಡ್ : ಸದ್ಯ ಟಾಲಿವುಡ್ ಅಂಗಳದಲ್ಲಿ ‘ಪುಷ್ಪ 2 : ದಿ ರೂಲ್‌’ ಸೌಂಡ್ ಜೋರಾಗಿದೆ. ಅಲ್ಲು ಅರ್ಜುನ್ ಸಿನಿಮಾ ಅಂದ್ರೆ ಹೇಳ್ಬೇಕಾ..ಮೊದಲೇ ಕ್ರೇಜ್ ಹೆಚ್ಚಿಸಿರುತ್ತೆ. ಪುಷ್ಪ ಈಗಾಗಲೇ ಫಸ್ಟ್ ಲುಕ್, ಟೀಸರ್ ಎಲ್ಲದರ ಮೂಲಕಾನೂ ನಿರೀಕ್ಷೆ ಹೆಚ್ಚಿಸುತ್ತಿದೆ. ಇದೀಗ ಹಾಡಿನ ಸರದಿ.


ಅಲ್ಲು ಅರ್ಜುನ್ ಮಾಸ್ ಲುಕ್; ಸಕತ್  ಸ್ಟೆಪ್ಸ್ :

‘ಪುಷ್ಪ 2 : ದಿ ರೂಲ್‌’ ಸಿನಿಮಾದ ಕುರಿತು ಯಾವ ಅಪ್ಡೇಟ್ ಕೊಡುತ್ತದೆ ಎಂದು ಅಲ್ಲು ಅರ್ಜುನ್ ಅಭಿಮಾನಿಗಳು ಕಾಯುತ್ತಿರುತ್ತಾರೆ. ಇದೀಗ ಮೇ 1 ರಂದು ಸಿನೆಮಾದ ಹಾಡೊಂದನ್ನು ರಿಲೀಸ್ ಮಾಡಲಾಗಿದೆ. ಪುಷ್ಪ ಪುಷ್ಪ ಅನ್ನೋ ಈ ಹಾಡಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹಾಡಿನಲ್ಲಿ ಅಲ್ಲು ಲುಕ್ ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.

ಮಾಸ್ ಲುಕ್ ನಲ್ಲಿ ಅಲ್ಲು ಅರ್ಜುನ್ ಕಾಣಿಸಿಕೊಂಡಿದ್ದಾರೆ. ಈ ಲುಕ್ ಗೆ ಫ್ಯಾನ್ಸ್ ಫಿದಾ ಆಗಿರೋದಂತೂ ಸುಳ್ಳಲ್ಲ. ಎಂದಿನಂತೆ ಅಲ್ಲು ಡ್ಯಾನ್ಸ್ ಸಕತ್ತಾಗಿಯೇ ಇದೆ. ಟೀ ಗ್ಲಾಸ್ ಹಿಡಿದು ಅಲ್ಲು ಅರ್ಜುನ್ ವ್ಹಾವ್ ಎಂದೆನಿಸುವಂತೆ ಸ್ಟೆಪ್ ಹಾಕಿದ್ದಾರೆ.

ಬಿಡುಗಡೆಯಾದ ಕೆಲವೇ ಘಂಟೆಯಲ್ಲಿ ಲಕ್ಷಾಂತರ ಜನರು ವೀಕ್ಷಣೆ ಮಾಡಿದ್ದಾರೆ. ಸದ್ಯ 9.7 ಮಿಲಿಯನ್ ವೀಕ್ಷಣೆ ಪಡೆದಿದೆ. ಈ ಮೂಲಕ ಭಾರತದಲ್ಲಿನ ಸಂಗೀತ ಪಟ್ಟಿಯಲ್ಲಿ ಈ ಹಾಡು ಅಗ್ರಸ್ಥಾನ ಪಡೆದುಕೊಂಡಿದೆ.

ದೇವಿ ಶ್ರೀ ಪ್ರಸಾದ್ ಸಂಗೀತ ಸಂಯೋಜಿಸಿರುವ ಈ ಹಾಡನ್ನು ಅಲ್ಲು ಅರ್ಜುನ್ ಪಾತ್ರದ ಮೇಲೆ ಚಿತ್ರಿಸಲಾಗಿದೆ. ತೆಲುಗು ಹಾಡಿಗೆ ಚಂದ್ರಬೋಸ್ ಸಾಹಿತ್ಯ ಬರೆದಿದ್ದು ,ನಕಾಶ್ ಅಜೀಜ್, ದೀಪಕ್ ಬ್ಲೂ ದನಿಯಾಗಿದ್ದಾರೆ.  ‘ಪುಷ್ಪ ಪುಷ್ಪ’ ಹಾಡು ತೆಲುಗು, ಹಿಂದಿ, ತಮಿಳು, ಕನ್ನಡ, ಮಲಯಾಳಂ ಮತ್ತು ಬೆಂಗಾಲಿ ಎಂಬ ಆರು ಭಾಷೆಗಳಲ್ಲಿ ಬಿಡುಗಡೆಯಾಗಿದೆ.

ಇದನ್ನೂ ಓದಿ : 123 ವರ್ಷಗಳಲ್ಲಿ 2ನೇ ಬಾರಿಗೆ ಅತ್ಯಧಿಕ ತಾಪಮಾನ..! ಇನ್ನೂ 11 ದಿನ ಮುಂದುವರಿಯಲಿದೆ ಬಿಸಿ ಶಾಖ..!

ತೆರೆಗೆ ಯಾವಾಗ?

ಅಲ್ಲು ಅರ್ಜುನ್ ಜೊತೆ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಫಹಾದ್ ಫಾಸಿಲ್ , ಡಾಲಿ ಧನಂಜಯ್, ಜಗದೀಶ್ ಪ್ರತಾಪ್ ಭಂಡಾರಿ, ರಾವ್ ರಮೇಶ್, ಜಗಪತಿ ಬಾಬು, ಅಜಯ್, ಸುನಿಲ್, ಮೈಮ್ ಗೋಪಿ, ಅನಸೂಯಾ ಭಾರದ್ವಾಜ್, ಶ್ರೀತೇಜ್, ಬ್ರಹ್ಮಾಜಿ ಮೊದಲಾದವರು ಪಾತ್ರವಾಗಿದ್ದಾರೆ.

‘ಪುಷ್ಪ 2: ದಿ ರೂಲ್’ ಆಗಸ್ಟ್ 15, 2024 ರಂದು ವಿಶ್ವದಾದ್ಯಂತ ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ. ಪುಷ್ಪಾದಲ್ಲಿದ್ದ ಆಕ್ಷನ್‌ ಗಿಂತ ಹೆಚ್ಚಿನ ಆಕ್ಷನ್ ಪುಷ್ಪಾ 2 ನಲ್ಲಿ ಇರಲಿದೆಯಂತೆ. ಪುಷ್ಪಾದಲ್ಲಿ ಮರಗಳ್ಳತನದ ಕಥೆ ಇದ್ರೆ, ಪುಷ್ಪಾ2 ನಲ್ಲಿ ಕೆಂಪು ಮರಳು ಕಳ್ಳಸಾಗಾಟದ ಬಗ್ಗೆ ಹೇಳಲಾಗಿದೆ.

Continue Reading

DAKSHINA KANNADA

ತಮಿಳು ಚಿತ್ರರಂಗಕ್ಕೆ ಎಂಟ್ರಿಕೊಟ್ಟ ‘ಬಿಗ್‌ ಬಾಸ್’ ರೂಪೇಶ್ ಶೆಟ್ಟಿ

Published

on

ಮಂಗಳೂರು : ಬಿಗ್‌ಬಾಸ್ ಮುಖೇನ ರಾಜ್ಯದಲ್ಲಿ ಹೆಸರು ಪಡೆದಿರುವ ಕರಾವಳಿಯಲ್ಲಿ ಸ್ಟಾರ್ ರೂಪೇಶ್ ಶೆಟ್ಟಿ. ತುಳುನಾಡಿನ ಹುಲಿವೇಷ ಕುಣಿತವನ್ನು ಬಿಗ್‌ಬಾಸ್ ನಲ್ಲಿ ಪರಿಚಯಿಸಿದ್ದು ಅಲ್ಲದೆ ವೇಷದಾರಿಗಳ ಜೊತೆ ಹೆಜ್ಜೆ ಕೂಡಾ ಹಾಕಿದ್ದಾರೆ.  ಅಲ್ಲದೇ ರೂಪೇಶ್ ಶೆಟ್ಟಿ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 9’ರ ವಿನ್ನರ್ ಕೂಡ ಹೌದು. ತುಳು ಸಿನಿಮಾದಲ್ಲಿ ಮಿಂಚಿದ್ದ ರೂಪೇಶ್ ಶೆಟ್ಟಿಗೆ ಬಿಗ್ ಬಾಸ್ ಬಳಿಕ ಕನ್ನಡ ಚಿತ್ರರಂಗದಲ್ಲೂ ಅವಕಾಶ ಸಿಕ್ಕಿತ್ತು. ಇದೀಗ ತಮಿಳು ಚಿತ್ರರಂಗಕ್ಕೂ ರೂಪೇಶ್ ಶೆಟ್ಟಿ ಎಂಟ್ರಿ ಕೊಟ್ಟಿದ್ದಾರೆ.

ಅಮೃತ ಸಾರಥಿ ಎಂಬುವವರು ನಿರ್ದೇಶನ ಮಾಡುತ್ತಿರುವ ತಮಿಳು ಚಿತ್ರದಲ್ಲಿ ರೂಪೇಶ್ ಶೆಟ್ಟಿ ನಟಿಸುತ್ತಿದ್ದಾರೆ. ಯೋಗಿ ಬಾಬು ಈ ಚಿತ್ರದಲ್ಲಿ ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದಾರೆ. ಪ್ರಮೋದ್ ಶೆಟ್ಟಿ ಕೂಡ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ ಅನ್ನೋದು ವಿಶೇಷ. ‘ಸನ್ನಿಧಾನಂ PO’ ಎಂದು ಚಿತ್ರಕ್ಕೆ ಟೈಟಲ್ ಇಡಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿದ ರೂಪೇಶ್ ಶೆಟ್ಟಿ, “ನನ್ನ ಮೊದಲ ತಮಿಳು ಚಿತ್ರ ಸನ್ನಿಧಾನಮ್ PO ಇದರ ಶೂಟಿಂಗ್ ನಿಮ್ಮೆಲ್ಲರ ಆಶೀರ್ವಾದದಿಂದ ಭರದಿಂದ ಸಾಗುತ್ತಿದೆ. ಯೋಗಿ ಬಾಬು ಅವರ ಜತೆ ನಟಿಸುವುದೇ ನನ್ನ ಪಾಲಿನ ಅದೃಷ್ಟ. ನನ್ನ ಸಿನಿ ಪಯಣ ಈ ರೀತಿಯಾಗಿ ಸಾಗಲು ನೀವೇ ಮೊದಲ ಕಾರಣ. ನಿಮ್ಮ ಪ್ರೀತಿ ಪ್ರೋತ್ಸಾಹ ಎಂದೂ ಹೀಗೆ ಇರಲಿ. ದೇವರಿಗೆ ಧನ್ಯವಾದಗಳು” ಎಂದು ಅವರು ಬರೆದುಕೊಂಡಿದ್ದಾರೆ.

2023ರ ನವೆಂಬರ್ ತಿಂಗಳಲ್ಲಿ ಸಿನಿಮಾ ಘೋಷಿಸಲಾಗಿದೆ. ಈ ಚಿತ್ರದ ಮೂರನೇ ಹಂತದ ಶೂಟಿಂಗ್ ಈಗ ನಡೆಯುತ್ತಿದೆ. ಈ ಸಿನಿಮಾ ರಿಲೀಸ್ ದಿನಾಂಕವನ್ನು ರೂಪೇಶ್ ಶೆಟ್ಟಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

ರೂಪೇಶ್ ಶೆಟ್ಟಿ ಅವರು ತುಳು ಸಿನಿಮಾಗಳಿಂದ ಬಣ್ಣದ ಬದುಕು ಆರಂಭಿಸಿದರು. 2015ರಲ್ಲಿ ರಿಲೀಸ್ ಆದ ‘ಐಸ್​ ಕ್ರೀಮ್’ ಹೆಸರಿನ ತುಳು ಚಿತ್ರದ ಮೂಲಕ ಅವರು ಹೀರೋ ಆದರು. 2023ರಲ್ಲಿ ಅವರ ನಟನೆಯ ‘ಮಂಕು ಭಾಯ್ ಫಾಕ್ಸಿ ರಾಣಿ’ ಸಿನಿಮಾ ರಿಲೀಸ್ ಆಯಿತು. ಅವರು ಸಿನಿಮಾ ನಿರ್ಮಾಣ ಕೂಡ ಮಾಡಿದ್ದಾರೆ. ‘ಬಿಗ್ ಬಾಸ್ ಕನ್ನಡ ಒಟಿಟಿ’ ಹಾಗೂ ‘ಬಿಗ್ ಬಾಸ್ ಕನ್ನಡ ಸೀಸನ್ 9’ ವಿನ್ನರ್ ಆಗಿದ್ದಾರೆ.

Continue Reading

FILM

ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ‘ಸ್ಯಾಂಡಲ್ ವುಡ್ ಸಲಗ’

Published

on

ಬೈಂದೂರು : ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ರಾಜಕೀಯ ಮುಖಂಡರು, ನಟ ನಟಿಯರು ಭೇಟಿ ನೀಡುತ್ತಿರುತ್ತಾರೆ. ಇದೀಗ ದುನಿಯಾ ವಿಜಯ್ ಅವರು ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಶ್ರೀ ಮೂಕಾಂಬಿಕೆ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ತಮ್ಮ ಸ್ನೇಹಿತರೊಂದಿಗೆ ದುನಿಯಾ ವಿಜಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಈ ಸಂದರ್ಭ ಅವರ ಅಭಿಮಾನಿಗಳು ಅವರೊಂದಿಗೆ ಫೋಟೋ ತೆಗೆಸಿಕೊಂಡರು.

ಕಾಲ್ನಡಿಗೆಯಲ್ಲಿ ನಂಜನಗೂಡು ಕ್ಷೇತ್ರಕ್ಕೆ ಹೋಗಿದ್ದ ನಟ:

ದುನಿಯಾ ವಿಜಿ ಇತ್ತೀಚೆಗೆ ಬೆಂಗಳೂರಿನಿಂದ ಕಾಲ್ನಡಿಗೆಯಲ್ಲಿ ಹೊರಟು ನಂಜನಗೂಡಿನ ನಂಜುಂಡೇಶ್ವರ ದರ್ಶನ ಪಡೆದಿದ್ದರು. ಸತತ ಐದು ದಿನಗಳ ಕಾಲ ತಮ್ಮ ಸಂಗಡಿಗರ ಜೊತೆ ನಡೆದುಕೊಂಡೇ ನಂಜನಗೂಡು ತಲುಪಿದ್ದರು. ಹಗಲು ರಾತ್ರಿ ಲೆಕ್ಕಿಸದೇ ಪಾದಯಾತ್ರೆ ಮಾಡಿದ್ದರು.

ಸಿನಿಮಾಗಳಲ್ಲಿ ಬ್ಯುಸಿ :

ದುನಿಯಾ ವಿಜಯ್ ಸಾಲು ಸಾಲು ಸಿನಿಮಾಗಳಲ್ಲಿ ಬಿಝಿಯಾಗಿದ್ದಾರೆ. ನಟನೆಯ ಜೊತೆಗೆ ನಿರ್ದೇಶಕನ ಕ್ಯಾಪ್ ಕೂಡ ಅವರು ಹಾಕಿದ್ದಾರೆ.’ಸಲಗ’ ಚಿತ್ರದ ಮೂಲಕ ನಿರ್ದೇಶಕನಾಗಿ ಬಡ್ತಿ ಪಡೆದಿದ್ದ ಅವರು, ‘ಭೀಮ’ ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ. ನಿಖಿಲ್ ಕುಮಾರ್ ಸಿನಿಮಾದಲ್ಲೂ ದುನಿಯಾ ವಿಜಯ್ ನಟಿಸುತ್ತಿದ್ದಾರೆ.

ಇದನ್ನೂ ಓದಿ : ಬಿಗ್ ಬಾಸ್ ಬಗ್ಗೆ ಅಚ್ಚರಿ ಹೇಳಿಕೆ ಕೊಟ್ಟ ನಮ್ರತಾ ಗೌಡ!

ಚಿತ್ರರಂಗಕ್ಕೆ ವಿಜಿ ಮಗಳು ಎಂಟ್ರಿ :

ದುನಿಯಾ ವಿಜಯ್ ತಮ್ಮ ಮಗ ಸಾಮ್ರಾಟ್ ನನ್ನು ಈಗಾಗಲೇ ಭೀಮ ಚಿತ್ರದ ಮೂಲಕ ಪರಿಚಯಿಸುವ ತಯಾರಿಯಲ್ಲಿದ್ದಾರೆ. ಇದೀಗ ಮಗಳನ್ನೂ ಚಿತ್ರರಂಗಕ್ಕೆ ಕರೆತರುತ್ತಿದ್ದಾರೆ. ಕಾಟೇರ ಚಿತ್ರಕ್ಕೆ ಕಥೆ ಬರೆದಿದ್ದ ಜಡೇಶ್ ಹಂಪಿ ನಿರ್ದೇಶನದಲ್ಲಿ ಮೂಡಿ ಬರಲಿರುವ ಹೊಸ ಸಿನಿಮಾದಲ್ಲಿ ತಂದೆ – ಮಗಳು ಇಬ್ಬರೂ ಕಾಣಿಸಿಕೊಳ್ಳುತ್ತಿದ್ದಾರೆ.


‘ಜಾನಿ ಮೇರಾ ನಾಮ್ ಪ್ರೀತಿ ಮೇರಾ ಕಾಮ್’ ಚಿತ್ರದಲ್ಲಿ ಜೊತೆಯಾಗಿದ್ದ ದುನಿಯಾ ವಿಜಯ್ ಮತ್ತು ರಚಿತಾ ರಾಮ್ ಮತ್ತೆ ಈ ಚಿತ್ರದ ಮೂಲಕ ಒಂದಾಗುತ್ತಿದ್ದಾರೆ. ಇದರಲ್ಲಿ ವಿಜಿ ಮಗಳು ಮೋನಿಕಾ/ರಿತನ್ಯಾ ನಟಿಸುತ್ತಿದ್ದಾರೆ. ಇದು ದುನಿಯಾ ವಿಜಯ್ ಅವರ 29 ನೇ ಸಿನಿಮಾ.

Continue Reading

LATEST NEWS

Trending