LATEST NEWS
ಪೋಡಿ ಸೇರಿ ಎಲ್ಲವೂ ಈಗ ಆನ್ಲೈನ್ನಲ್ಲೇ ಲಭ್ಯ..!
ಬೆಂಗಳೂರು: ಸಾರ್ವಜನಿಕರು ತಮ್ಮ ಜಮೀನಿಗೆ ಸಂಬಧಿಸಿದ 11ಇ, ಪೋಡಿ, ಭೂ ಪರಿವರ್ತನೆ ಸೈಜ್, ಹದ್ದುಬಸ್ತು ಮತ್ತು ಇತರೆ ನಕ್ಷೆಗಳನ್ನು ಇನ್ನು ಮುಂದೆ ಆನ್ಲೈನ್ನಲ್ಲೇ ಪಡೆದುಕೊಳ್ಳ ಬಹುದು. ಅರ್ಜಿ ಸಲ್ಲಿಸಿದ ನಾಗರಿಕರು
http://103.138.196.154/service19/Report/ApplicationDetails ಸರ್ವೆ ಸಿಬ್ಬ ಮಾಪನ ಕಾರ್ಯ ಮುಗಿಸಿ ನ ಅನುಮೋದಿಸಿದ ತಕ್ಷಣ ಇದೇ ವೆಬ್ಸೈಟ್ನಲ್ಲಿ ನಕ್ಷೆ ಪಡೆಯಬಹುದು.
ಆನ್ಲೈನ್ನಲ್ಲೇ ನಕ್ಷೆಗಳ ಪ್ರಿಂಟ್ ಪಡೆಯಬಹುದು ಮತ್ತು ಅರ್ಜಿಗಳ ಸ್ಟೇಟಸ್ ಚೆಕ್ ಮಾಡಬಹುದು.
ನಾಗರಿಕರು ಅರ್ಜಿ ಸಲ್ಲಿಸುವ ಸಮಯದಲ್ಲಿ ಅರ್ಜಿಗಳಿಗೆ ಹಣ ಪಾವತಿಸುತ್ತಾರೆ. ಹಾಗಾಗಿ ಅವರ ನಕ್ಷೆಯನ್ನು ಅನುಮೋದಿಸಿದ ತಕ್ಷಣ,
ಅಧಿಕೃತ ವೆಬ್ಸೈಟ್ನಲ್ಲಿ ಅದನ್ನು ಪ್ರಿಂಟ್ ಪಡೆಯಲು ಲಭ್ಯವಿರುತ್ತದೆ. ಅದೇ ವೆಬ್ಸೈಟ್ ಲಿಂಕ್ನಲ್ಲಿ ಯಾವುದೇ ಸಮಯದಲ್ಲಿ ಅರ್ಜಿದಾರರು ತಮ್ಮ ಅರ್ಜಿಯ ಸ್ಥಿತಿಯನ್ನು (ಸ್ಟೇಟಸ್ ಚೆಕ್) ಕೂಡ ತಿಳಿದುಕೊಳ್ಳಬಹುದು ಎಂದು ಸರ್ವೇ ಸೆಟ್ಲಮೆಂಟ್ ಮತ್ತು ಭೂ ಪರಿವರ್ತನೆ ಆಯುಕ್ತ ಮುನೀಶ್ ಮೌದ್ಗಿಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಪರೀಕ್ಷಿಸಿ.
http://103.138.196.154/service19/Report/ApplicationDetails
DAKSHINA KANNADA
MANGALURU : ಪೆಟ್ರೋಲ್ ಬಂಕ್ ಸಿಬ್ಬಂದಿ ಎಡವಟ್ಟು; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿ ಅನಾಹುತ
ಮಂಗಳೂರು : ಪೆಟ್ರೋಲ್ ಬಂಕ್ ಸಿಬ್ಬಂದಿ ಎಡವಟ್ಟಿನಿಂದ ಕಾರಿಗೆ ಪೆಟ್ರೋಲ್ ತುಂಬಿಸುವ ಬದಲು ಡೀಸೆಲ್ ತುಂಬಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪರಿಣಾಮ ಕಾರು ಇಂಜಿನ್ ಸಂಪೂರ್ಣ ಹಾಳಾಗಿ ಲಕ್ಷಾಂತರ ರೂ.ನಷ್ಟವಾಗಿದೆ ಎಂದು ಕಾರು ಮಾಲಕ ಆರೋಪಿಸಿದ್ದಾರೆ.
ಹೊಟೇಲ್ ಉದ್ಯಮಿ ಜೀವನ್ ಶೆಟ್ಟಿ ಎಂಬವರು ತಮ್ಮ ಹುಂಡೈ ಐ 10 ಗ್ರ್ಯಾಂಡ್ ಕಾರ್ ಗೆ ಪೆಟ್ರೋಲ್ ತುಂಬಿಸುವ ಸಲುವಾಗಿ, ಎಪ್ರಿಲ್ 5 ರಂದು ಮಧ್ಯಾಹ್ನ 12 ರ ಸುಮಾರಿಗೆ ಬಲ್ಮಠದ ಜ್ಯೂಸ್ ಜಂಕ್ಷನ್ ಮುಂಭಾಗದ ಹೆಚ್ ಪಿ ಪೆಟ್ರೋಲ್ ಬಂಕ್ ಗೆ ಬಂದಿದ್ದರು. ಕ್ಯಾಪ್ ಮೇಲೆ ಪೆಟ್ರೋಲ್ ಎಂದು ಬರೆದಿದ್ದರೂ, ಸಿಬ್ಬಂದಿ ಮಾತ್ರ ಕಾರಿಗೆ ಡೀಸೆಲ್ ತುಂಬಿಸಿದ್ದಾರೆ.
ಪರಿಣಾಮ ಕಾರು ಕೆಲವೇ ಕಿಲೋ ಮೀಟರ್ ಸಂಚರಿಸಿ ಮುಂದಕ್ಕೆ ಹೋಗದೆ ನಿಂತಿದೆ. ಪರಿಶೀಲಿಸಿದಾಗ ಬಂಕ್ ಸಿಬ್ಬಂದಿ ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ತುಂಬಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಪ್ರಶ್ನಿಸಿದಾಗ ಪೆಟ್ರೋಲ್ ಬಂಕ್ ಮ್ಯಾನೇಜರ್ ತಮಗೂ ಇದಕ್ಕೂ ಸಂಬಂಧವೇ ಇಲ್ಲ ಎಂದು ವರ್ತಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಕಾರು ಇಂಜಿನ್ ದುರಸ್ಥಿಗೆ 2 ಲಕ್ಷಕ್ಕೂ ಅಧಿಕ ಖರ್ಚು ಆಗಲಿದೆ. ಆದರೆ, ಪೆಟ್ರೋಲ್ ಬಂಕ್ ಮಾಲಕ ಬರೀ 30 ಸಾವಿರ ಕೊಟ್ಟು ಸುಮ್ಮನಾಗಿದ್ದಾರೆ ಎಂದು ಜೀವನ್ ಶೆಟ್ಟಿ ದೂರಿದ್ದಾರೆ. ಕಡಿಮೆ ಸಂಬಳಕ್ಕೆ ಅನುಭವವಿಲ್ಲದ ಕಾರ್ಮಿಕರನ್ನು ನೇಮಿಸುತ್ತಾರೆ. ಇಂತಹ ಸಮಸ್ಯೆಯಾದಾಗ ತಮ್ಮ ಇನ್ಶೂರೆನ್ಸ್ ನಲ್ಲಿ ಪರಿಹಾರ ನೀಡುವ ಅವಕಾಶವಿದ್ದರೂ ಬಂಕ್ ಮಾಲಕರು ಮಾತ್ರ ಹಿಂದೇಟು ಹಾಕುತ್ತಿದ್ದಾರೆ. ಆದ್ದರಿಂದ ತಾನು ಪರಿಹಾರಕ್ಕಾಗಿ ಗ್ರಾಹಕ ನ್ಯಾಯಾಲಯದ ಮೊರೆ ಹೋಗುವುದಾಗಿ ಜೀವನ್ ಶೆಟ್ಟಿ ಹೇಳಿದ್ದಾರೆ.
DAKSHINA KANNADA
ಹೊತ್ತಿ ಉರಿದು ಭಸ್ಮ*ವಾದ ಸ್ವೀಟ್ ಕಾರ್ನ್ ಸ್ಟಾಲ್..!! ಓಡಿ ಜೀವ ಉಳಿಸಿಕೊಂಡ ಸ್ಟಾಲ್ ಮಾಲೀಕ, ಗ್ರಾಹಕರು
ಉಳ್ಳಾಲ: ರಸ್ತೆಯ ಬದಿಯಲ್ಲಿ ಇರಿಸಲಾಗಿದ್ದ ಸ್ವೀಟ್ ಕಾರ್ನ್ ಸ್ಟಾಲ್ ಒಂದರಲ್ಲಿ ಆಕಸ್ಮಿ*ಕ ಬೆಂಕಿಯಿಂದಾಗಿ ಸ್ಟಾಲ್ ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಉಳ್ಳಾಲದ ದೇರಳಕಟ್ಟೆಯಲ್ಲಿ ನಡೆದಿದೆ.
ಗ್ಯಾಸ್ ಸೋರಿಕೆಯಿಂದ ಬೆಂಕಿ ಕಾಣಿಸಿಕೊಂಡಿದೆ. ರಸ್ತೆಯ ಬದಿಯಲ್ಲೇ ಇರಿಸಲಾಗಿದ್ದ ಸ್ವೀಟ್ ಕಾರ್ನ್ ಅಂಗಡಿ ಮಾಲೀಕ ಕಾರ್ನ್ ತಯಾರಿಸುವಾಗ ಈ ಅವಘಡ ಸಂಭವಿಸಿದೆ. ತಕ್ಷಣ ಅಂಗಡಿ ಮಾಲೀಕ ಹಾಗೂ ಸ್ವೀಟ್ ಕಾರ್ನ ತಿನ್ನಲು ಬಂದಿದ್ದ ಗ್ರಾಹಕರು ಓಡಿ ತಪ್ಪಿಸಿಕೊಂಡಿದ್ದಾರೆ. ಸ್ಥಳೀಯರು ತಕ್ಷಣ ಮರಳು ಹಾಗೂ ನೀರನ್ನ ಹಾಕಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಆದ್ರೆ ಅಷ್ಟರಲ್ಲಾಗಲೇ ಸ್ಟಾಲ್ ಉರಿದು ಭಸ್ಮವಾಗಿ ಹೋಗಿದೆ.
Read More..; ಬೆಂಕಿ ಹಚ್ಚಿ ಯುವತಿಯ ಬರ್ಬ*ರ ಹ*ತ್ಯೆ..!! ಕತ್ತು ಕೊಯ್ದು ಸು*ಟ್ಟು ಹಾಕಿರುವ ಶಂಕೆ
LATEST NEWS
ಬೆಂಕಿ ಹಚ್ಚಿ ಯುವತಿಯ ಬರ್ಬ*ರ ಹ*ತ್ಯೆ..!! ಕತ್ತು ಕೊಯ್ದು ಸು*ಟ್ಟು ಹಾಕಿರುವ ಶಂಕೆ
ಬೆಳಗಾವಿ: 25 ರಿಂದ 30 ವರ್ಷದ ಯುವತಿಯೊಬ್ಬಳನ್ನು ಬರ್ಬರವಾಗಿ ಹ*ತ್ಯೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕದಲ್ಲಿ ನಡೆದಿದೆ. ಇಲ್ಲಿನ ಗ್ರಾಮೀಣ ಪೊಲೀಸ್ ಠಾಣ ವ್ಯಾಪ್ತಿಯ ಮಮದಾಪುರ ಗ್ರಾಮದಲ್ಲಿ ಈ ಕೃತ್ಯ ನಡೆದಿದ್ದು ಕೊ*ಲೆ ಮಾಡಿದವರಾರು? ಹ*ತ್ಯೆ ಆದವಳು ಯಾರು? ಎಂಬುದಾಗಲಿ ಗೊತ್ತಾಗಿಲ್ಲ. ನಿನ್ನೆ(ಎ.18) ಮಧ್ಯಾಹ್ನ 2 ಗಂಟೆ ಸುಮಾರಿಗೆ ಕಾಲುವೆ ಪಕ್ಕದಲ್ಲಿ ಹೊಗೆಯಾಡುತ್ತಿರುವುದನ್ನು ಜನರು ಗಮನಿಸಿದ್ದಾರೆ. ಬಿಸಿಲಿನ ತಾಪಕ್ಕೆ ಹುಲ್ಲು ಇರುವ ಜಾಗಕ್ಕೆ ಬೆಂಕಿ ಬಿದ್ದಿರಬಹುದು ಎಂದು ಕೆಲವರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದಾಗ ಯುವತಿಯ ಮೃತದೇಹ ಕಂಡು ಬಂದಿದೆ.
ಯುವತಿಯ ಕತ್ತು ಕೊಯ್ದು ಬಳಿಕ ಆಕೆಯ ಗುರುತು ಪತ್ತೆಯಾಗದಂತೆ ಸುಟ್ಟು ಹಾಕಿರಬೇಕು ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ವಿಧಿ ವಿಜ್ಞಾನ ತಂಡ ಹಾಗೂ ಪೊಲೀಸರು ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ. ಯುವತಿಯನ್ನು ಬೇರೆಡೆ ಕೊಲೆ ಮಾಡಿ ಇಲ್ಲಿ ತಂದು ಸುಟ್ಟು ಹಾಕುವ ಪ್ರಯತ್ನ ನಡೆದಿರಬಹುದು ಎಂದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ಆದರೆ ಈ ಯುವತಿ ಯಾರು ಹಾಗೂ ಯಾರು ಕೊಲೆ ಮಾಡಿದ್ದಾರೆ ಅನ್ನೋದು ತನಿಖೆಯಿಂದ ಗೊತ್ತಾಗಬೇಕಾಗಿದೆ.
Read More..: ಉಡುಪಿಯಲ್ಲಿ ಭೀಕರ ಅಪಘಾ*ತ; ಲಾರಿಯಡಿ ಸಿಲುಕಿ ಬೈಕ್ ಸವಾರ ಸಾ*ವು