Connect with us

LATEST NEWS

ಬಾಂಡ್ ರಹಸ್ಯ ರಿವೀಲ್..! ಸುಪ್ರೀಂ ಕೋರ್ಟ್ ಆದೇಶ…! ಜನತಾ ನ್ಯಾಯಾಲಯದಲ್ಲಿ ವಿಚಾರಣೆ…!

Published

on

ನವದೆಹಲಿ : ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಎಲೆಕ್ಟ್ರೋರಲ್ ಬಾಂಡ್‌ ಈಗ ಎಲ್ಲಾ ರಾಜಕೀಯ ಪಕ್ಷಗಳ ಕುತ್ತಿಗೆಗೆ ಸುತ್ತಿಕೊಂಡಿದೆ. ರಾಜಕೀಯ ಪಕ್ಷಗಳಿಗೆ ದೇಣಿಗೆ ರೂಪದಲ್ಲಿ ಎಸ್‌ಬಿಐನಿಂದ ಬಾಂಡ್‌ ರೂಪದಲ್ಲಿ ಪಡೆದುಕೊಂಡಿದ್ದ ಕೋಟ್ಯಂತರ ರೂಪಾಯಿಗಳು ಎಲ್ಲಾ ರಾಜಕೀಯ ಪಕ್ಷಗಳ ಭ್ರಷ್ಟಾಚಾರದ ಇನ್ನೊಂದು ಮುಖವಾಗಿ ಕಾಣಿಸಿಕೊಳ್ಳುತ್ತಿದೆ. ಆರಂಭದಲ್ಲಿ ಬಾಂಡ್ ಬಿಡುಗಡೆಗೆ ಸಮಯಾವಕಾಶ ಕೋರಿದ್ದ ಎಸ್‌ಬಿಐಗೆ ಸುಪ್ರೀಂ ಕೋರ್ಟ್‌ ಚಾಟಿ ಬೀಸಿದ ಬಳಿಕ ಎಸ್‌ಬಿಐ ಎಲ್ಲಾ ದಾಖಲೆಗಳನ್ನು ಬಿಡುಗಡೆ ಮಾಡಿದೆ. ಚುನಾವಣಾ ಆಯೋಗ ಈ ಬಾಂಡ್ ವಿವರಗಳನ್ನು ತನ್ನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡುತ್ತಿದ್ದಂತೆ ಜನತಾ ನ್ಯಾಯಾಲಯದ ಕಟಕಟೆಯಲ್ಲಿ ರಾಜಕೀಯ ಪಕ್ಷಗಳ ವಿಚಾರಣೆ ಆರಂಭವಾಗಿದೆ.

ಭ್ರಷ್ಟಾಚಾರದ ಇನ್ನೊಂದು ಮುಖ ಚುನಾವಣಾ ಬಾಂಡ್‌ ಅನ್ನೋದು ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಬಾಂಡ್ ವಿವರದಲ್ಲೇ ಗೊತ್ತಾಗುತ್ತಿದೆ. ದೊಡ್ಡ ರಾಷ್ಟ್ರೀಯ ಪಕ್ಷಗಳಿಂದ ಹಿಡಿದು ಪ್ರಾದೇಶಿಕ ಪಕ್ಷಗಳೂ ಕೂಡಾ ಈ ಬಾಂಡ್‌ ಫಲಾನುಭವಿಗಳಾಗಿದ್ದಾರೆ. ಪ್ರಮುಖವಾಗಿ ಸ್ವಚ್ಚ ಪಕ್ಷವಾಗಿ ,ಭ್ರಷ್ಟಾಚಾರವನ್ನು ಮಟ್ಟ ಹಾಕುತ್ತೇವೆ ಅಂದಿದ್ದ ಭಾರತೀಯ ಜನತಾ ಪಾರ್ಟಿ ಈ ಬಾಂಡ್‌ಗಳ ಪಾಲಿನ ದೊಡ್ಡ ಫಲಾನುಭವಿಯಾಗಿದೆ. 6060 ಕೋಟಿಗಳ ಬಾಂಡ್ ಸ್ವೀಕರಿಸಿರುವ ಬಿಜೆಪಿ ಮೊದಲ ಸ್ಥಾನದಲ್ಲಿದ್ದರೆ , 1609 ಕೋಟಿ ಪಡೆದಿರುವ ತೃಣಮೂಲ ಕಾಂಗ್ರೆಸ್‌ ಎರಡನೇ ಸ್ಥಾನದಲ್ಲಿದೆ. ಕಾಂಗ್ರೆಸ್ 1421 ಕೋಟಿ ಬಾಂಡ್ ಪಡೆದಿದ್ದರೆ, ಬಿಆರ್‌ಎಸ್‌ 1214 ಕೋಟಿಯ ಬಾಂಡ್ ಪಡೆದು ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿದೆ. ಆದ್ರೆ ದೇಶದ ಹಲವು ರಾಜ್ಯಗಳಲ್ಲಿ ಆಡಳಿತ ನಡೆಸಿದ್ದ ಸದ್ಯ ಕೇರಳದಲ್ಲಿ ಆಡಳಿತದಲ್ಲಿರುವ ಸಿಪಿಐಎಂ ಪಕ್ಷ ಮಾತ್ರ ಈ ಬಾಂಡ್ ಪಟ್ಟಿಯಿಂದ ಹೊರಗುಳಿದಿದೆ.

 

ಚುನಾವಣಾ ಆಯೋಗ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿರುವ ಈ ಬಾಂಡ್‌ ವಿವರ ಸದ್ಯ ದೇಶದಲ್ಲಿ ಭಾರಿ ಸಂಚಲನ ಮೂಡಿಸಿದೆ.  ದೇಶದ ರಾಜಕೀಯ ಪಕ್ಷಗಳ ಭ್ರಷ್ಟಾಚಾರದ ಮತ್ತೊಂದು ಮುಖ ಇದು ಎಂದು ಜನರು ಚರ್ಚೆ ಆರಂಭಿಸಿದ್ದಾರೆ. ಶೇಕಡಾ 50 ರಷ್ಟು ಬಾಂಡ್‌ ಸ್ವೀಕರಿಸಿದ ಪ್ರಮುಖ ರಾಜಕೀಯ ಪಕ್ಷವಾಗಿರುವ ಭಾರತೀಯ ಜನತಾ ಪಾರ್ಟಿ ಸದ್ಯ ಜನರ ಟಾರ್ಗೆಟ್‌ ಆಗಿದೆ. ಚುನಾವಣಾ ಆಯೋಗ ಪ್ರಕಟ ಮಾಡಿರುವ ಬಾಂಡ್ ನೀಡಿದ ಬಹುತೇಕ ಕಂಪೆನಿಗಳು ಒಂದಾ ಇಡಿ ದಾಳಿಗೆ ಒಳಗಾಗಿದ್ದರೆ, ಕೆಲ ಕಂಪೆನಿಗಳ ಮೇಲೆ ಐಟಿ ದಾಳಿ ನಡೆದಿದ್ದ ಮಾಹಿತಿ ಹಂಚಿಕೊಳ್ಳುತ್ತಿದ್ದಾರೆ. ಇನ್ನು ಬಾಂಡ್‌ನ ಬಹುದೊಡ್ಡ ಪಾಲು 960 ಕೋಟಿ ಬಾಂಡ್ ನೀಡಿರುವ ಮೆಗಾ ಇಂಜಿನಿಯರಿಂಗ್ ಕಂಪೆನಿ ಸರ್ಕಾರದ ಬೃಹತ್ ಯೋಜನೆಗಳನ್ನ ಗುತ್ತಿಗೆ ಪಡೆದಿರುವ ಕಂಪೆನಿಯಾಗಿದೆ. ಕೇಂದ್ರ ಹಾಗೂ ರಾಜ್ಯಗಳಲ್ಲಿ ಲಕ್ಷ ಕೋಟಿಯ ಗುತ್ತಿಗೆ ವಹಿಸಿಕೊಂಡಿರುವ ಹೈದ್ರಾಬಾದ್ ಮೂಲದ ಕಂಪೆನಿ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ದೇಣಿಗೆ ನೀಡಿರುವುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಇನ್ನು ದೇಶದಲ್ಲಿ ಬ್ಯಾನ್ ಮಾಡಿ ಬಳಿಕ ಅವಕಾಶ ನೀಡಲಾಗಿದ್ದ,  ಕೋವಿಡ್ ಲಸಿಕೆ ತಯಾರಿಕಾ ಸಂಸ್ಥೆ ಕೂಡಾ 50 ಕೋಟಿಗಳ ದೇಣಿಗೆ ನೀಡಿದೆ.

ಎಲ್ಲಾ ಪಕ್ಷಗಳೂ ತಪ್ಪಿತಸ್ಥರ ಸ್ಥಾನದಲ್ಲಿ!

ಇನ್ನು ಬಾಂಡ್ ವಿಚಾರದಲ್ಲಿ ಎಲ್ಲಾ ರಾಜಕೀಯ ಪಕ್ಷಗಳೂ ಕೂಡಾ ಸದ್ಯಕ್ಕೆ ಜನತಾ ನ್ಯಾಯಾಲಯದಲ್ಲಿ ತಪ್ಪಿತಸ್ಥರ ಸ್ಥಾನದಲ್ಲೇ ಇದ್ದಾರೆ. ಕಾರ್ಪೋರೇಟರ್ ಕಂಪೆನಿಗಳಿಂದ ಸಾವಿರಾರು ಕೋಟಿ ಬಾಂಡ್‌ ಪಡೆದು ಅಧಿಕಾರದ ದುರುಪಯೋಗ ಪಡಿಸಿ ಕಂಪೆನಿಗಳಿಗೆ ಪರೋಕ್ಷವಾಗಿ ಏನಾದ್ರೂ ಸಹಾಯ ಮಾಡಿರಲೇ ಬೇಕು ಅನ್ನೋದು ಜನತಾ ನ್ಯಾಯಾಲಯದಲ್ಲಿ ಚರ್ಚೆ ಆಗುತ್ತಿರುವ ವಿಚಾರ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು,ಎಲ್ಲಾ ರಾಜಕೀಯ ಪಕ್ಷಗಳೂ ಕೂಡಾ ಲಂಚದ ರೂಪದಲ್ಲೇ ಈ ಬಾಂಡ್‌ಗಳನ್ನು ಪಡೆದುಕೊಂಡಿದೆ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬಡವರ ಮೇಲೆ ಬರೆ ಹಾಕುವ ರಾಜಕೀಯ ಪಕ್ಷಗಳು ಕಾರ್ಪೋರೇಟ್ ಕಂಪೆನಿಗಳ ಅಡಿಯಾಳಾಗಿ ಅವರಿಂದ ಲಾಭ ಪಡೆದು ಅವರಿಗೇ ಲಾಭ ಮಾಡಿಕೊಡುತ್ತಿದ್ದಾರೆ ಎಂದು ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

 

ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡುವುದು ಈ ಹಿಂದಿನಿಂದಲೂ ನಡೆದುಕೊಂಡು ಬಂದಿತ್ತಾದ್ರೂ ಅದು ಇಷ್ಟು ದೊಡ್ಡ ಪ್ರಮಾಣದಲ್ಲಿ ಇರಲಿಲ್ಲ . ಇನ್ನು ಚುನಾವಣೆಯ ಸಮಯದಲ್ಲಿ ಯಾರು ಎಷ್ಟು ದೇಣಿಗೆ ನೀಡಿದ್ದಾರೆ ಅನ್ನೋದನ್ನು ರಾಜಕೀಯ ಪಕ್ಷಗಳು ಚುನಾವಣಾ ಆಯೋಗಕ್ಕೆ ತಿಳಿಸಿಬೇಕಿತ್ತು. ಹೀಗಾಗಿ ಅಲ್ಲಿ ಗೌಪ್ಯತೆ ಕೂಡಾ ಇರಲಿಲ್ಲ.  ಆದ್ರೆ 2017 ರಲ್ಲಿ ಕೇಂದ್ರ ಸರ್ಕಾರ ಈ ಎಲೆಕ್ಟ್ರೋರಲ್ ಬಾಂಡ್ ಯೋಜನೆಯನ್ನು ಘೋಷಿಸಿ 2018 ರಲ್ಲಿ ಜಾರಿಗೆ ತಂದಿತ್ತು. ಪಾರದರ್ಶಕತೆ ಹೆಚ್ಚಿಸಲು ಇದು ಅನುಕೂಲ ಆಗಲಿದೆ ಎಂದು ಸರ್ಕಾರ ಹೇಳಿತ್ತು. ಆದ್ರೆ ಬಾಂಡ್ ಖರೀದಿ ಹಾಗೂ ಅದು ಯಾರಿಗೆ ಎಷ್ಟು ಸಲ್ಲಿಕೆ ಆಗಿದೆ ಅನ್ನೋದು ಇದುವರೆಗೂ ಗೌಪ್ಯವಾಗಿಯೇ ಇತ್ತು. ಇದೀಗ ಸುಪ್ರೀಂ ಕೋರ್ಟ್ ಬೀಸಿದ ಚಾಟಿ ಏಟಿನಿಂದ ಎಸ್‌ಬಿಐ ಈ ಬಾಂಡ್ ವಿವರ ಬಹಿರಂಗಗೊಳಿಸಿದೆ.

ಏನಿದು ಎಲೆಕ್ಟ್ರೋರಲ್ ಬಾಂಡ್‌?

ಎಸ್‌ಬಿಐನ 29 ಶಾಖೆಗಳಿಂದ  ಒಂದು ಸಾವಿರ ಕೋಟಿಯ ಎಲೆಕ್ಟ್ರೋರಲ್ ಬಾಂಡ್‌ಗಳನ್ನು ಯಾರು ಬೇಕಾದರೂ ಖರೀದಿಸಿ ತಮ್ಮ ಇಷ್ಟದ ಪಕ್ಷಗಳಿಗೆ ನೀಡಬಹುದಾದ ಸ್ಕೀಮ್ ಇದು. ವರ್ಷದಲ್ಲಿ ನಾಲ್ಕು ಬಾರಿ ಈ ಬಾಂಡ್‌ ನೀಡಲಾಗುತ್ತಿದ್ದು, ಲೋಕಸಭೆ ಹಾಗೂ ವಿಧಾನಸಭಾ ಚುನಾವಣೆಯಲ್ಲಿ ಶೇಕಡಾ ಒಂದು ಮತ ಪಡೆದ ಪಕ್ಷಕ್ಕೆ ಈ ದೇಣಿಗೆ ನೀಡಬಹುದು. ಬಾಂಡ್ ಪಡೆದ 15 ದಿನಗಳಲ್ಲಿ ರಾಜಕೀಯ ಪಕ್ಷಗಳು ತಮ್ಮ ಖಾತೆಗೆ ಜಮಾ ಮಾಡಿಕೊಳ್ಳಬೇಕು. ಆದರೆ ಯಾರು ಬಾಂಡ್ ಖರೀದಿ ಮಾಡಿದ್ದಾರೆ ಎಂಬ ವಿಚಾರ ಎಸ್‌ಬಿಐ ತಿಳಿಸಬೇಕಾಗಿಲ್ಲ ಎಂಬ ನಿಯಮವನ್ನು ಸರ್ಕಾರ ರೂಪಿಸಿತ್ತು. ಇನ್ನು ಎಲ್ಲಾ ಬಾಂಡ್‌ ವಿವರಗಳನ್ನು ಒಂದೆ ಬ್ರಾಂಚ್‌ನಲ್ಲಿ ಇರಿಸಿಕೊಂಡಿದ್ದ ಎಸ್‌ಬಿಐ ಸಮಯಾವಕಾಶ ಕೇಳಿ ಇದೀಗ ಸುಪ್ರೀಂ ಕೋರ್ಟ್ ಆದೇಶದ ಬಳಿಕ ಬಿಡುಗಡೆ ಮಾಡಿದೆ.

DAKSHINA KANNADA

ದೊಡ್ಡವರ ಜಗಳದಲ್ಲಿ ಇಹಲೋಕ ತಜ್ಯಿಸಿದ 3 ರ ಕಂದಮ್ಮ…

Published

on

ಮಂಗಳೂರು (ಬೆಳಗಾವಿ): ಅದು ಎರಡು ಕುಟುಂಬಗಳ ನಡುವೆ ನಡೆದಿರೋ ಜಗಳ . ಆದ್ರೆ ಆ ಜಗಳಕ್ಕೆ ಏನೂ ಅರಿಯದ ಮೂರು ವರ್ಷದ ಪುಟ್ಟ ಮಗು ಬಲಿಯಾಗಿದೆ. ಪಾಪಿಯೊಬ್ಬ ಮಗುವಿನ ಎದೆಗೆ ಕಾಲಿಟ್ಟು ಮಗುವಿನ ಉಸಿರು ನಿಲ್ಲಿಸಿದ್ದಾನೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಎಂಬ ಗ್ರಾಮದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ. ದೊಡ್ಡವರ ಜಗಳದಲ್ಲಿ ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ ಎಂಬ ಮೂರು ವರ್ಷದ ಮಗು ಹತವಾಗಿದೆ. ಜೋತಿಭಾ ತುಕಾರಾಮ ಬಾಬಬರ ಎಂಬಾತ ಮಗುವಿನ ಜೀವಕ್ಕೆ ಕುತ್ತು ತಂದ ಆರೋಪಿಯಾಗಿದ್ದಾನೆ.
ಹಣಕಾಸಿನ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದಿತ್ತು. ಈ ವೇಳೆ ಜಗಳ ತಾರಕ್ಕೇರಿದಾಗ ಸಿಟ್ಟಿನಲ್ಲಿ ಜೋತಿಬಾ ತುಕಾರಾಮ ಬಾಬಾಬರ ಮಗುವಿನ ಎದೆ ಮೇಲೆ ಕಾಲಿಟ್ಟು ನಿಂತಿದ್ದಾನೆ. ಈ ವೇಳೆ ಮಗುವನ್ನು ಆತನ ಕಾಲಿನ ಅಡಿಯಿಂದ ತೆಗೆಯಲು ಮಗುವಿನ ತಾಯಿ ಯತ್ನಿಸಿದ್ದಾಳೆ . ಆ ವೇಳಗೆ ಇನ್ನಷ್ಟು ಗಟ್ಟಿಯಾಗಿ ಕಾಲಿನಿಂದ ಮಗುವಿನ ಎದೆಗೆ ಕಾಲಿನಿಂದ ಒತ್ತಿದ ಕಾರಣ ಮಗು ಉಸಿರು ನಿಲ್ಲಿಸಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗುವಿನ ದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಆರೋಪಿ ಸ್ಥಳದಿಂದ ಎಸ್ಕೇಪ್ ಆಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ.

Continue Reading

DAKSHINA KANNADA

ಅಮೇರಿಕಾದಲ್ಲಿ ಕಾರು ಅಪಘಾತ…! ಮೂವರು ಭಾರತೀಯ ಮಹಿಳೆಯರ ಸಾ*ವು…!

Published

on

ನ್ಯೂಯಾರ್ಕ್‌ : ಅಮೇರಿಕಾದಲ್ಲಿ ನಡೆದ ಕಾರು ಅಪಘಾತದಲ್ಲಿ ಭಾರತೀಯ ಮೂಲದ ಮೂವರು ಮಹಿಳೆಯರು ಇಹಲೋಕ ತ್ಯಜಿಸಿದ್ದಾರೆ. ಕೌಂಟಿಯ ಹೆದ್ದಾರಿಯ ಸೇತುವೆಯೊಂದರ ಮೇಲೆ ವೇಗವಾಗಿ ಕಾರು ಚಲಾಯಿಸಿದ ಕಾರಣ ಈ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ಉತ್ತರದ ಕಡೆಗೆ ಕಾರು ಪ್ರಯಾಣಿಸುತ್ತಿದ್ದು, ಎಲ್ಲಾ ಲೇನ್‌ಗಳನ್ನು ದಾಟಿ, ಹಂಪ್‌ ಮೇಲೆ ವೇಗವಾಗಿ ಏರಿತ್ತು. ಈ ಕಾರಣದಿಂದ ಕನಿಷ್ಟ 20 ಅಡಿಗಳಷ್ಟು ಮೇಲಕ್ಕೆ ಹಾರಿ ಸೇತುವೆಯ ಮುಂದೆ ಇದ್ದ ಮರಗಳಿಗೆ ಕಾರು ಅಪ್ಪಳಿಸಿದೆ. ಗುಜಾರಾತ್ ಮೂಲದ ಮೂವರು ಮಹಿಳೆಯರು ಈ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಗುಜರಾತ್‌ನ ಆನಂದ್ ಜಿಲ್ಲೆಯ ರೇಖಾಬೆನ್‌ ಪಟೇಲ್ , ಸಂಗೀತಾಬೆನ್ ಪಟೇಲ್ ಹಾಗೂ ಮನೀಶಾಬೆನ್ ಪಟೇಲ್‌ ಅವರು ಇಹಲೋಕ ತ್ಯಜಿಸಿದವರಾಗಿದ್ದಾರೆ.

 

ಕಾರು ನಿಗದಿಪಡಿಸಿದ ವೇಗದ ಮಿತಿಗಿಂತ ಹೆಚ್ಚು ವೇಗದಲ್ಲಿತ್ತು ಎಂದು ಅಲ್ಲಿನ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಅಪಘಾತದ ಪ್ರಮಾಣ ಎಷ್ಟಿತ್ತು ಮತ್ತು ಕಾರು ಎಷ್ಟು ಎತ್ತರಕ್ಕೆ ಹಾರಿತ್ತು ಅನ್ನೋದಿಕ್ಕೆ ಮರದ ಮೇಲಿರುವ ಕಾರಿನ ಅವಶೇಷಗಳು ಸಾಕ್ಷಿ ಎಂದು ಅವರು ಹೇಳಿದ್ದಾರೆ. ಮರದ ಮೇಲೆ ಬಿದ್ದ ಕಾರು ಛಿದ್ರಗೊಂಡು ಕಾರಿನ ಅವಶೇಷಗಳು ಚೆಲ್ಲಾಪಿಲ್ಲಿಯಾಗಿತ್ತು.


ದಕ್ಷಿಣ ಕೆರೊಲಿನಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತಕ್ಷಣ ಸ್ಥಳಕ್ಕೆ ರಕ್ಷಣಾ ತಂಡಗಳು, ಪೊಲೀಸರು ಆಗಮಿಸಿದ್ದಾರೆ. ಅಪಘಾತದಲ್ಲಿ ಓರ್ವ ಬದುಕಿ ಉಳಿದಿದ್ದು, ಆತನ ಸ್ಥಿತಿ ಗಂಭೀರವಾಗಿದ್ದು ಈಗಲೇ ಏನೂ ಹೇಳಲು ಆಗದ ಪರಿಸ್ಥಿತಿಯಲ್ಲಿದ್ದಾನೆ. ವಾಹನ ಅಪಘಾತವಾದ ತಕ್ಷಣ ಅದರಲ್ಲಿದ್ದ ತಾಂತ್ರಿಕ ವ್ಯವಸ್ಥೆಯ ಕಾರಣ ತಕ್ಷಣ ಕುಟುಂಬ ಸದಸ್ಯರಿಗೆ ಅಲರ್ಟ್‌ ಮೆಸೆಜ್ ರವಾನೆಯಾಗಿತ್ತು. ಹೀಗಾಗಿ ತಕ್ಷಣ ಕುಟುಂಬಸ್ಥರು ಕೂಡಾ ತಕ್ಷಣ ಸ್ಥಳಕ್ಕೆ ಆಗಮಿಸಿದ್ದಾರೆ.

Continue Reading

FILM

PHOTOS : ಗೀತಾ ‘ವಿಜಯ್’ ಅದ್ದೂರಿ ಮದುವೆ; ಮೆಚ್ಚುಗೆ ಪಡೆದ ಧನುಷ್ ಮಾಡಿದ ಆ ಒಂದು ಕಾರ್ಯ!

Published

on

ಬೆಂಗಳೂರು : ಸಿಕ್ಕಾಪಟ್ಟೆ ಫೇಮಸ್ ಆಗಿದ್ದ ಧಾರಾವಾಹಿ ‘ಗೀತಾ’. ಈ ಧಾರಾವಾಹಿಯ ನಾಯಕ ‘ವಿಜಯ್’ ಅಂದ್ರೆ ಧನುಷ್ ಗೌಡ ದಾಂಪತ್ಯ ಜೀವನಕ್ಕೆ ಪದಾರ್ಪಣೆ ಮಾಡಿದ್ದಾರೆ. ಅವರ ವಿವಾಹ ಶುಕ್ರವಾರ ಅದ್ದೂರಿಯಾಗಿ ನೆರವೇರಿತು.


ಧನುಷ್ ಗೌಡ ಅವರು ಸಂಜನಾ ಎಂಬವರ ಜೊತೆಗೆ ಸಪ್ತಪದಿ ತುಳಿದಿದ್ದಾರೆ. ಸಂಜನಾ ಧನುಷ್ ಅತ್ತೆಯ ಮಗಳಾಗಿದ್ದು, ಇದು ಅರೆಂಜ್ಡ್ ಮ್ಯಾರೇಜ್ ಆಗಿದೆ.


ಇನ್ನು ಮದುವೆಯಲ್ಲಿ ಕುಟುಂಬದವರು, ಆಪ್ತರು, ಸ್ನೇಹಿತರು ಉಪಸ್ಥಿತರಿದ್ದರು.

ಧನುಷ್ ಅವರು ಆರತಕ್ಷತೆ ಕಾರ್ಯಕ್ರಮವೂ ಅದ್ದೂರಿಯಾಗಿ ನಡೆದಿದೆ.

ಧನುಷ್ ಅವರ ಮದುವೆ, ಆರತಕ್ಷತೆ ಕಾರ್ಯಕ್ರಮದಲ್ಲಿ ಅನೇಕ ಗಣ್ಯರು ಪಾಲ್ಗೊಂಡಿದ್ದರು. 

ಇದನ್ನೂ ಓದಿ : ಮೇಕಪ್ ರೂಂನಲ್ಲಿ ಕೂಡಿ ಹಾಕಿದ್ರು…ಆಮೇಲೆ…ನಿರ್ಮಾಪಕನಿಂದಾದ ಕರಾಳ ಅನುಭವ ಬಿಚ್ಚಿಟ್ಟ ಖ್ಯಾತ ಕಿರುತೆರೆ ನಟಿ!

ಭವ್ಯಾ ಗೌಡ, ಮೌನ ಗುಡ್ಡೇಮನೆ, ರಿತ್ವಿಕ್ ಕೃಪಾಕರ್, ಸೇರಿ ಅನೇಕ ಕಿರುತೆರೆ ಹಿರಿತೆರೆ ತಾರೆಯರು ಆಗಮಿಸಿದ್ದರು.

 

ಮದುವೆ ಸಂಭ್ರಮದ ನಡುವೆಯೂ ಧನುಷ್ ವೋಟ್ ಮಾಡುವ ಮೂಲಕ ಅಭಿಮಾನಿಗಳಿಗೆ ಮಾದರಿಯಾಗಿದ್ದಾರೆ. ಧನುಷ್ ನಡೆಗೆ ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ.

 

 

Continue Reading

LATEST NEWS

Trending